ಲೇಖಕ: admin

ಮಡಿಕೇರಿ NEWS DESK ಆ.29 : ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ *ವೋಟರ್ ಅಧಿಕಾರ ಯಾತ್ರೆ* ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕರ್ನಾಟಕದ ಪ್ರಮುಖರು ಭಾಗವಹಿಸಿದರು. ‘ಓರ್ವ ವ್ಯಕ್ತಿಗೆ, ಒಂದು ಮತ’ ಸಿದ್ಧಾಂತಕ್ಕಾಗಿ ಹೋರಾಡುತ್ತಿರುವ ಕಾಂಗ್ರೆಸ್ ನೇತೃತ್ವದ ಮೈತ್ರಿ ಪಕ್ಷಗಳು, ಚುನಾವಣಾ ಆಯೋಗದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ರಾಹುಲ್‌ ಗಾಂಧಿ ಅವರ ಮುಂದಾಳತ್ವದಲ್ಲಿ, ಬಿಹಾರದಾದ್ಯಂತ ಸುಮಾರು 1300 ಕಿ.ಮೀ ಪಾದಯಾತ್ರೆ ಹಮ್ಮಿಕೊಂಡಿದೆ.  ಈ ತಂಡದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರುಗಳಾದ ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಖಾನ್, ಡಾ. ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಶಾಸಕ ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿಷತ್ ಸದಸ್ಯರುಗಳಾದ ಸಲೀಂ ಅಹಮದ್, ಬಿ.ಕೆ.ಹರಿಪ್ರಸಾದ್, ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮೆಹರೋಜ್ ಖಾನ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಆ.29 : ತಮ್ಮ ಸರಳತೆಯ ಮೂಲಕವೇ ಯುವ ಮನಸ್ಸುಗಳನ್ನು ಗೆದ್ದಿರುವ ಶಾಸಕ ಡಾ.ಮಂತರ್ ಗೌಡ ಅವರು ಇಂದು ಮಡಿಕೇರಿಯ ವಿವಿಧ ಬಡಾವಣೆಗಳ ಗಣೇಶೋತ್ಸವ ಸಮಿತಿಗಳನ್ನು ಭೇಟಿಯಾದರು. ಪ್ರತಿಷ್ಠಾಪಿಸಲ್ಪಟ್ಟಿರುವ ಗಣೇಶ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಪುಟಾಣಿ ನಗರದ ಉದ್ಭವ ಶ್ರೀ ವಿನಾಯಕ ಸೇವಾ ಸಮಿತಿಗೆ ಆಗಮಿಸಿ ಸದಸ್ಯರ ಉಪಸ್ಥಿತಿಯಲ್ಲಿ ಪೂಜೆಯಲ್ಲಿ ಭಾಗಿಯಾದರು. ಗಣೇಶನ ಮೂರ್ತಿಯ ವಿಸರ್ಜನೋತ್ಸವವನ್ನು ಅತ್ಯಂತ ಸಂಭ್ರಮ ಮತ್ತು ಸಂಯಮದಿಂದ ಆಚರಿಸುವಂತೆ ಮನವಿ ಮಾಡಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಬಿ.ವೈ.ರಾಜೇಶ್, ಶ್ರೀಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಸದಸ್ಯ ಪ್ರಕಾಶ್ ಆಚಾರ್ಯ ಮತ್ತಿತರ ಪ್ರಮುಖರು ಹಾಗೂ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ NEWS DESK ಆ.29 : 2025-26ನೇ ಸಾಲಿನ ಯುವಜನೋತ್ಸವ ಎಚ್.ಐ.ವಿ ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ (ರೆಡ್ ರಿಬ್ಬನ್ ಓಟ, ಎಚ್.ಐ.ವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಜನತೆ) ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಾಥಾನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯ ಮುಖ್ಯ ಉದ್ದೇಶ ಎಚ್‌ಐವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಚ್.ಐ.ವಿ/ಎಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯಿದೆ 2017 ಇತ್ಯಾದಿ ಕುರಿತು ಅರಿವು ಮೂಡಿಸುವುದು. ಅದರಂತೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಎಚ್‌ಐವಿ/ ಏಡ್ಸ್ ಅರಿವು ಆಂದೋಲನ 2025-26ರ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಕೊಡಗು ಶಾಖೆ ಇವರ ಸಹಯೋಗದೊಂದಿಗೆ ಮ್ಯಾರಾಥಾನ್ ಸ್ಪರ್ಧೆ (5ಕಿ.ಮೀ) ನಡೆಯಿತು. ಮ್ಯಾರಾಥಾನ್ ಸ್ಪರ್ಧೆಯಲ್ಲಿ ಜಿಲ್ಲೆಯ…

Read More

ಮಡಿಕೇರಿ NEWS DESK ಆ.29 : ಕೊಡಗು ಜಿಲ್ಲೆಯಲ್ಲಿ ಮಳೆ ಗಾಳಿಯ ವಾತಾವರಣವಿದ್ದರೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಉತ್ತಮವಾಗಿದೆ. ಈ ಬಾರಿ ಪದವಿ ಪೂರ್ವ ಶಿಕ್ಷಣದಲ್ಲಿ ಕೊಡಗು 4ನೇ ಸ್ಥಾನ ಪಡೆದಿದ್ದು, ಮುಂದಿನ ಸಾಲಿನಲ್ಲಿ ಮೊದಲ ಸ್ಥಾನಕ್ಕೇರಬೇಕೆಂದು ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಲ್.ಚಿದಾನAದ ಕುಮಾರ್ ಕರೆ ನೀಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರುಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು 2025-26 ನೇ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಉತ್ತಮ ಫಲಿತಾಂಶಕ್ಕಾಗಿ ಪ್ರತಿಯೊಬ್ಬ ಪ್ರಾಧ್ಯಾಪಕರು ಶ್ರಮಿಸುತ್ತಿದ್ದಾರೆ. ವಿದ್ಯಾರ್ಥಿಗಳ ಜೀವನದಲ್ಲಿ ಪ್ರಾಧ್ಯಾಪಕರುಗಳಲ್ಲದೆ ಪೋಷಕರ ಪ್ರಯತ್ನವು ಮುಖ್ಯ ಪಾತ್ರ ವಹಿಸಿದೆ. ಕೊಡಗಿನಲ್ಲಿ ಮಳೆಯಿಂದಾಗಿ ರಜೆ ಇದ್ದರೂ ಫಲಿತಾಂಶದಲ್ಲಿ ವ್ಯತ್ಯಾಸವಾಗಲಿಲ್ಲ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ…

Read More

ಕುಶಾಲನಗರ NEWS DESK ಆ.29 : ಗಣೇಶೋತ್ಸವದ ಅಂಗವಾಗಿ ಕುಶಾಲನಗರದ ರಥ ಬೀದಿಯ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿರುವ 101 ಗಣಪತಿ ಮೂರ್ತಿಗಳಿಗೆ ಇಂದು ಶ್ರದ್ಧಾಭಕ್ತಿಯಿಂದ ರಂಗಪೂಜೆ ನಡೆಯಿತು. ಕುಶಾಲನಗರ ವಾಸವಿ ಯುವಕ ಸಂಘದ ವತಿಯಿಂದ ಆರ್ಯವೈಶ್ಯ ಮಂಡಳಿಯ ಸಹಯೋಗದೊಂದಿಗೆ 101 ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಭಕ್ತರ ಗಮನ ಸೆಳೆಯುತ್ತಿದೆ. ಪ್ರತಿದಿನ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆ.31 ರಂದು 101 ಗಣಪತಿ ಮೂರ್ತಿಗಳನ್ನು ಭವ್ಯ ಮೆರವಣಿಗೆಯ ಮೂಲಕ ಕೊಂಡೊಯ್ದು ವಿಸರ್ಜಿಸಲಾಗುವುದು ಎಂದು ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ತಿಳಿಸಿದರು. ಈ ಸಂದರ್ಭ ವಾಸವಿ ಯುವಕ ಸಂಘದ ಅಧ್ಯಕ್ಷ ಪ್ರವೀಣ್ ಹಾಗೂ ಪದಾಧಿಕಾರಿಗಳು ಇದ್ದರು.

Read More

ಮಡಿಕೇರಿ ಆ.29 NEWS DESK : ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘವು 2024-25ನೇ ಸಾಲಿಗೆ ರೂ.28,96,676 ರಷ್ಟು ಲಾಭಗಳಿಸಿದ್ದು, ಸದಸ್ಯರಿಗೆ ಶೇ.10 ರಂತೆ ಡಿವಿಡೆಂಟ್ ಪಾವತಿಸಲಾಗುವುದೆಂದು ಸಂಘದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2005ರಲ್ಲಿ ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ ಅವರ ಸಲಹೆ, ಮಾರ್ಗದರ್ಶನದಂತೆ ಅಂದಿನ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾಗಿದ್ದ ಮಾತಂಡ ಎಂ.ಸುರೇಶ್ ಚಂಗಪ್ಪ ಮತ್ತು ಆಡಳಿಮಂಡಳಿಯವರು ಈ ಸೌಹಾರ್ದ ಸಹಕಾರಿ ಹುಟ್ಟಿಗೆ ಕಾರಣಕರ್ತರಾದರು. 472 ಸದಸ್ಯರ ರೂ.5.96 ಲಕ್ಷ ಪಾಲು ಬಂಡವಾಳದಿಂದ ಪ್ರಾರಂಭಗೊಂಡು ಇದೀಗ 2025ರ ಮಾರ್ಚ್ ಅಂತ್ಯಕ್ಕೆ 2143 ಸದಸ್ಯರೊಂದಿಗೆ ರೂ.98.61 ಲಕ್ಷ ಪಾಲುಬಂಡವಾಳ ಇರುತ್ತದೆ. ಈ ಸಹಕಾರಿಯಿಂದ ತನ್ನ ಸದಸ್ಯರಿಗೆ ಜಾಮೀನು ಸಾಲ, ಆಭರಣ ಸಾಲ ನೀಡುತ್ತಾ ಬರುತ್ತಿದ್ದು, ಅಂದಿನಿಂದ ಇಂದಿನವರೆಗೆ ಪ್ರತಿ ವರ್ಷ ಲಾಭದೊಂದಿಗೆ ಮುಂದುವರಿದೆ ಎಂದರು. ವಯಸ್ಸಿಗನುಗುಣವಾಗಿ ಮರಣ ನಿಧಿ ಸೌಲಭ್ಯವನ್ನು ಅಳವಡಿಸಕೊಂಡಿರುತ್ತದೆ. ಇದಲ್ಲದೆ ಹೆಚ್ಚಿನ ಬಡ್ಡಿದರದಲ್ಲಿ ಮಿತವ್ಯಯ ಠೇವಣಿ, ನಿರಖು ಠೇವಣಿಯನ್ನು ಸ್ವೀಕರಿಸುತ್ತಿದ್ದೇವೆ. ಉಳಿತಾಯ…

Read More

ಮಡಿಕೇರಿ ಆ.29 NEWS DESK : ಮಡಿಕೇರಿ ದಸರಾ ಜನೋತ್ಸವವನ್ನು ಸಂಭ್ರಮ, ಸುರಕ್ಷತೆ ಮತ್ತು ಸ್ವಚ್ಛತೆಯಿಂದ ಆಚರಿಸಲು ಎಲ್ಲರೂ ಕೈಜೋಡಿಸಬೇಕು. ದಸರಾ ಆಚರಣೆಗೆ ಅಗತ್ಯವಿರುವ ಅನುದಾನವನ್ನು ಕೋರಲು ಸೆಪ್ಟಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಡಿಕೇರಿ ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು ಹಣ ಬಿಡುಗಡೆ ಸಂಬAಧ ಮುಖ್ಯಮಂತ್ರಿಯವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಿಯೋಗದ ಮೂಲಕ ಭೇಟಿ ಮಾಡಲಾಗುವುದು ಎಂದರು. ಸಂಪ್ರದಾಯದಂತೆ ನಡೆದುಕೊಂಡು ಬಂದಿರುವ ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸುವಂತಾಗಬೇಕು. ಸುರಕ್ಷತೆಗೆ ಒತ್ತು ನೀಡಬೇಕು. ಪ್ರತೀ ಮಂಟಪದಲ್ಲಿ ಪೊಲೀಸರನ್ನು ನಿಯೋಜಿಸಬೇಕು. ಕರಗ ಹಾಗೂ ದಶಮಂಟಪಗಳು ಸಾಗುವ ಮಾರ್ಗದ ಗುಂಡಿ ಮುಚ್ಚುವ ಕಾರ್ಯವಾಗಬೇಕು. ವಿದ್ಯುತ್ ಮಾರ್ಗ ಸರಿಪಡಿಸುವುದು ಹಾಗೂ ಬೀಳುವ ಮರಗಳಿದ್ದಲ್ಲಿ ತೆರವುಗೊಳಿಸುವ ಕಾರ್ಯ ಕೈಗೊಳ್ಳಬೇಕು. ಮಡಿಕೇರಿ…

Read More

ಮಡಿಕೇರಿ ಆ.29 NEWS DESK : ಸೋಮವಾರಪೇಟೆ ತಾಲ್ಲೂಕಿನ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದರು. ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು. ರಸ್ತೆ ಕಾಮಗಾರಿಯ ಸಂದರ್ಭ ಕಳಪೆ ಕಾಮಗಾರಿ ನಡೆಯದಂತೆ ಎಚ್ಚರ ವಹಿಸಬೇಕು. ಕಾಮಗಾರಿಯನ್ನು ಗ್ರಾಮಸ್ಥರು ಖುದ್ದು ಪರಿಶೀಲಿಸಿ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಹೀಗೆ ಮಾಡುವುದರಿಂದ ಅಭಿವೃದ್ಧಿ ಹೊಂದಿದ ರಸ್ತೆಗಳು ಸುದೀರ್ಘ ಕಾಲ ಹದಗೆಡದೆ ಉಳಿದುಕೊಳ್ಳಲಿವೆ ಎಂದು ತಿಳಿಸಿದರು. *ವಿವಿಧೆಡೆ ಕಾಮಗಾರಿ* ರೂ.1 ಕೋಟಿ ವೆಚ್ಚದಲ್ಲಿ ಐಗೂರು-ಕಿರಗಂದೂರು-ಕೂಡೆಗದ್ದೆ ರಸ್ತೆ ಕಾಂಕ್ರಿಟೀಕರಣ, ರೂ.50 ಲಕ್ಷ ವೆಚ್ಚದಲ್ಲಿ ತಾಕೇರಿ-ಹರಗ ರಸ್ತೆ ಮರು ಡಾಂಬರೀಕರಣ, ರೂ.15 ಲಕ್ಷ ವೆಚ್ಚದಲ್ಲಿ ಕಿರಗಂದೂರು-ಡಿಬಿಡಿ ರಸ್ತೆ ಅಡ್ಡಲಾಗಿ ನಿರ್ಮಿಸಿದ ಸೇತುವೆ ರಸ್ತೆ ನಿರ್ಮಾಣ, ರೂ.25 ಲಕ್ಷ ವೆಚ್ಚದಲ್ಲಿ ಕಿರಗಂದೂರು ದುರ್ಗಾ ಕಾಲೋನಿ ರಸ್ತೆ ಕಾಂಕ್ರಿಟೀಕರಣ ಹಾಗೂ ರೂ.50 ಲಕ್ಷ ವೆಚ್ಚದಲ್ಲಿ ಕಿರಗಂದೂರು…

Read More

ಕುಶಾಲನಗರ, ಆ.29 NEWS DESK : ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಘಟಕ ಹಾಗೂ ಶಾಲೆಯ ಪ್ರಕೃತಿ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಗಣೇಶೋತ್ಸವದ ಅಂಗವಾಗಿ ಪರಿಸರ ಜಾಗೃತಿ ಅಭಿಯಾನ: 2025 ವನ್ನು ನಡೆಸಲಾಯಿತು. ಶಾಲೆಯಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾವು ಸ್ವತಃ ತಯಾರಿಸಿದ ವಿವಿಧ ನಮೂನೆಯಲ್ಲಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಪ್ರದರ್ಶನ ಗಮನ ಸೆಳೆಯಿತು. ಪರಿಸರ ಸ್ನೇಹಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಎಂ.ಎಂ.ಭಾರತಿ, ಪಿ.ಓ.ಪಿ ಮತ್ತು ರಾಸಾಯನಿಕ ಬಣ್ಣದ ಮೂರ್ತಿಗಳನ್ನು ತ್ಯಜಿಸಿ ಜೇಡಿಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಕುರಿತು ಮಾಹಿತಿ ನೀಡಿದರು. ಶಾಲೆಯಲ್ಲಿ ಮಕ್ಕಳು ಜೇಡಿಮಣ್ಣಿನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿರುವ ಕುರಿತು ಮಕ್ಕಳ ಪರಿಸರ ಕಾಳಜಿಯನ್ನು ಅವರು ಶ್ಲಾಘಿಸಿದರು.…

Read More

ವಿರಾಜಪೇಟೆ ಆ.29 NEWS DESK : ಕುಶಾಲನಗರ ವಿವೇಕ ಜಾಗೃತ ಬಳಗದ ವತಿಯಿಂದ ವನಿತಾ ಸಂಗಮ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿವೈನ್ ಪಾರ್ಕ್‍ನ ದಕ್ಷಸೇವಕಿ ದಿವ್ಯ ತೇಜ್‍ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಹಿಳೆಯರ ಕುರಿತಾದ ಡಿವೈಸ್ ಪಾರ್ಕ್‍ನ ವಿಚಾರಗಳನ್ನು ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ ನಡೆಯಿತು. ಸುಮಾರು 180 ಜನ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಬಳಗದ ಅಧ್ಯಕ್ಷರಾದ ಲತಾ ಅಪ್ಪಣ್ಣ ಅಧ್ಯಕ್ಷತೆ ವಹಿಸಿದ್ದರು. ಬಳಗದ ಸದಸ್ಯರುಗಳಾದ ಗಣೇಶ, ಲೋಕಮ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಅಡುಗೆ ಸ್ಪರ್ಧೆಯ ಬಹುಮಾನ ವಿತರಿಸಿ ತೀರ್ಪುಗಾರರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

Read More