ನಾಪೋಕ್ಲು ನ.6 NEWS DESK : ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ 171ನೇ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಓಣಂ ಆಚರಣೆಯನ್ನು ನ.23 ರಂದು ನಾಪೋಕ್ಲುವಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆಚರಣೆ ಸಮಿತಿ ಅಧ್ಯಕ್ಷ ಶ್ರೀಧರ್ ಹೇಳಿದರು. ನಾಪೋಕ್ಲುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಜಯಂತಿ ಹಾಗೂ ಓಣಂ ಆಚರಣೆಯ ಪ್ರಯುಕ್ತ ಕ್ರಿಕೆಟ್, ಹಗ್ಗಜಗ್ಗಾಟ ಹಾಗೂ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ನ.23 ರಂದು ಮಾರುಕಟ್ಟೆ ಆವರಣದಿಂದ ಬೆಳಿಗ್ಗೆ 10 ಗಂಟೆಗೆ ಗುರುವಿನ ಅಲಂಕೃತ ಮಂಟಪವನ್ನು ಚಂಡೆಮೇಳಗಳೊಂದಿಗೆ ಮೆರವಣಿಗೆ ಸಾಗಿ ಶಾಲಾ ಮೈದಾನಕ್ಕೆ ಬರಲಿದೆ ಎಂದರು. ನ.19 ರಂದು ಬೆಳಿಗ್ಗೆ 9.30 ಗಂಟೆಗೆ ಕ್ರೀಡಾಕೂಟವನ್ನು ಎಸ್ಎನ್ಡಿಪಿ ಕೊಡಗು ಯೂನಿಯನ್ ಸಿದ್ದಾಪುರ ಘಟಕದ ಅಧ್ಯಕ್ಷ ವಿ.ಕೆ.ಲೋಕೇಶ್ ಉದ್ಘಾಟಿಸುವರು. ನ.23 ರಂದು ಬೆಳಿಗ್ಗೆ 10 ಗಂಟೆಗೆ ಮೆರವಣಿಗೆಯನ್ನು ಸಂಘಟನಾ ಕಾರ್ಯದರ್ಶಿ ಹಿತೇಶ್ (ಚಿನ್ನ) ಉದ್ಘಾಟಿಸಲಿದ್ದಾರೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ…
ಲೇಖಕ: admin
ನಾಪೋಕ್ಲು ನ.6 NEWS DESK : ಪಿಪಿ ಫೌಂಡೇಶನ್ ನೇತೃತ್ವದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್, ಹಿಂದೂ ಮಲೆಯಾಳಿ ಸಂಘ, ಆಟೋ ಚಾಲಕರ ಸಂಘ, ಎಸ್ಎನ್ಡಿಪಿ, ಟೌನ್ ಮುಸ್ಲಿಂ ಜಮಾತ್ ಸಹಯೋಗದೊಂದಿಗೆ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಪಿಪಿ ಫೌಂಡೇಶನ್ ಅಧ್ಯಕ್ಷರಾದ ಎಮ್ ಎಚ್ ಅಬ್ದುಲ್ಲ ಅವರು ಅಧ್ಯಕ್ಷತೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ತ ನಿಧಿ ವೈದ್ಯಾಧಿಕಾರಿ ಡಾ.ಕರುಂಬಯ್ಯ ಮಾತನಾಡಿ, ರಕ್ತದಾನ ಶ್ರೇಷ್ಠದಾನ ಇದರಿಂದ ಹಲವರ ಜೀವ ಉಳಿಸಬಹುದು. ಆರೋಗ್ಯವಂತ ವ್ಯಕ್ತಿಯು ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ರಕ್ತದಾನ ಮಾಡಬಹುದಾಗಿದೆ ಎಂದರು. ರಕ್ತದಾನದ ಬಗ್ಗೆ ಕೆಲವು ತಪ್ಪು ಅಭಿಪ್ರಾಯಗಳಿದ್ದು, ಇದು ಸರಿಯಲ್ಲ. ಒಂದು ಬಾರಿ ಶಿಬಿರಗಳನ್ನು ಏರ್ಪಡಿಸಿ ಹೆಚ್ಚು ರಕ್ತ ಸಂಗ್ರಹಿಸುವ ಬದಲು ರಕ್ತದ ಬೇಡಿಕೆಗೆ ಅನುಗುಣವಾಗಿ ತಿಂಗಳಿಗೆ ಒಂದು ಸಾರಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಒಳ್ಳೆಯದು ಎಂದರು. ರಕ್ತದಾನ ಶಿಬಿರಕ್ಕೆ ಸಂಘ ಸಂಸ್ಥೆಗಳು ನೆರವು ನೀಡಿವೆ. ಇಂತಹ ಸಂಘ ಸಂಸ್ಥೆಗಳಿಂದ ಪ್ರೇರಣೆಯಾಗಿ ಮತ್ತಷ್ಟು ಸಂಘ ಸಂಸ್ಥೆಗಳಿಂದ…
ಬೆಂಗಳೂರು ನ.6 NEWS DESK : ಸ್ಯಾಂಡಲ್ವುಡ್ನಲ್ಲಿ ಪೋಷಕ ನಟ ಹಾಗೂ ಖಳನಟರಾಗಿ ಖ್ಯಾತಿ ಪಡೆದಿದ್ದ ಹರೀಶ್ ರಾಯ್ ಇಂದು (ಗುರುವಾರ) ನಿಧನರಾಗಿದ್ದಾರೆ. ಅವರು ಬಹು ಕಾಲದಿಂದ ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್ನಲ್ಲಿ ಥೈರಾಯಡ್ ಕ್ಯಾನ್ಸರ್ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಹೆಂಡತಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ತಮಿಳಿನಲ್ಲೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂಡರ್ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್ವುಡ್ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್-1 ಹಾಗೂ ಕೆಜಿಎಫ್ ಚಾಪ್ಟರ್-2 ರಲ್ಲಿ ಅಭಿನಯಿಸಿದ್ದಾರೆ.
ಮಡಿಕೇರಿ ನ.6 NEWS DESK : ವಿರಾಜಪೇಟೆ ಕ್ಷೇತ್ರದ ಸಾರಿಗೆ ಸಮಸ್ಯೆಗಳು ಹಾಗೂ ಕೊಡಗು ಜಿಲ್ಲಾ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಾರಿಗೆ ಸಚಿವರ ಗಮನ ಸೆಳೆದರು. ಕೊಡಗಿನಲ್ಲಿ ಚಲಿಸುವ ಎಲ್ಲಾ ಆಟೋರಿಕ್ಷಾ ಗಳಿಗೆ ಜಿಲ್ಲಾ ಪರವಾನಿಗೆ ಅನುಮತಿ ನೀಡಬೇಕು. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಹಾಗೂ ಪೊನ್ನಂಪೇಟೆ ವಾಹನ ತಪಾಸಣೆ ಕ್ಯಾಂಪ್ ತೆರೆಯಲು ಹಾಗೂ ವಿರಾಜಪೇಟೆಯಲ್ಲಿ ಡಿಪೋ ಆರಂಭಿಸಲು ಮನವಿ ಸಲ್ಲಿಸಿದರು. ಈ ಬಗ್ಗೆ ಸಚಿವರು ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಆಟೋ ಮಾಲೀಕರ ಮತ್ತು ಚಾಲಕರ ಸಂಘ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ನ.6 NEWS DESK : ತಿತಿಮತಿ ಸಮುದಾಯ ಭವನದಲ್ಲಿ ನಡೆದ ದೇವರಪುರ ಹಾಗೂ ತಿತಿಮತಿ ಶಕ್ತಿಕೇಂದ್ರಗಳ ಕಾರ್ಯಕರ್ತರ ಸಭೆಯಲ್ಲಿ ಸಂಸದ ಯದುವೀರ್ ಒಡೆಯರ್ ಅವರು ಪಾಲ್ಗೊಂಡರು. ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಉಪಾಧ್ಯಕ್ಷ ಅರುಣ್ ಭೀಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್, ನೆಲ್ಲೀರ ಚಲನ್, ವಿರಾಜಪೇಟೆ ಮಂಡಲ ಪ್ರ.ಕಾರ್ಯದರ್ಶಿಗಳಾದ ಅಜಿತ್ ಕರುಂಬಯ್ಯ, ಮುದ್ದಿಯಡ ಮಂಜು, ತಿತಿಮತಿ ಶಕ್ತಿ ಕೇಂದ್ರ ಅಧ್ಯಕ್ಷ ಅಪ್ಪಿ, ದೇವರಪುರ ಶಕ್ತಿ ಕೇಂದ್ರ ಅಧ್ಯಕ್ಷ ಮಂಜು ಭಾಗವಹಿಸಿದರು. ಈ ಸಂದರ್ಭ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಮಡಿಕೇರಿ NEWS DESK ನ.5 : ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಸಂದೇಶಗಳನ್ನು ರವಾನಿಸಿರುವ ವ್ಯಕ್ತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಗೌಡ ಸಮಾಜಗಳ ಒಕ್ಕೂಟ ದೂರು ದಾಖಲಿಸಿದೆ. ಕಳೆದ ಅ.31 ರಂದು ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಫೇಸ್ಬುಕ್ ಖಾತೆಯಲ್ಲಿ ‘ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಸ್ಮರಿಸುವ’ ಎಂಬ ಪೋಸ್ಟ್ನಲ್ಲಿ ಹಲವಾರು ಪರ ವಿರೋಧ ಚರ್ಚೆ ನಡೆದಿದೆ. ಈ ಪೋಸ್ಟ್ನಲ್ಲಿ ಅರೆಯಡ ರಾಜ ಎಂಬ ವ್ಯಕ್ತಿ ಕೊಡಗಿನ ಇತಿಹಾಸವನ್ನು ತಿರುಚಿ ಹಾಲೇರಿ ರಾಜ ವಂಶಸ್ಥರನ್ನು ಹೀನಾಯವಾಗಿ ನಿಂದಿಸಿ, ಅಪ್ಪಯ್ಯಗೌಡರ ವಿರುದ್ಧ ಅವಹೇಳನಕಾರಿಯಾಗಿ ಸಂದೇಶಗಳನ್ನು ಹಾಕಿದ್ದಲ್ಲದೆ ಗೌಡ ಜನಾಂಗದವರನ್ನು ನಿಂದಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ. ಈ ರೀತಿಯ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟಿರುವ ರಾಜ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹಾಗೂ…
ಮಡಿಕೇರಿ ನ.5 NEWS DESK : ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು 2026-27 ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ ‘ಕೊಡವ’ ಎಂದು ಹೆಮ್ಮೆಯಿಂದ ಗುರುತಿಸಿಕೊಂಡಾಗ ಮಾತ್ರ ಸಂವಿಧಾನಬದ್ಧ ಹಕ್ಕನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಸಿಎನ್ಸಿ ವತಿಯಿಂದ ಬಿಟ್ಟಂಗಾಲದಲ್ಲಿ ನಡೆದ 18ನೇ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು 16ನೇ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಅಳವಡಿಸಬೇಕು. ಮುಂದೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕ್ಷೇತ್ರ ಪುನರ್ ವಿಂಗಡಣೆಗೆ ಮಾನದಂಡವಾಗಲಿರುವ ಈ ಜನಗಣತಿಯು ಕೊಡವರ ರಾಜಕೀಯ ಸಬಲೀಕರಣ, ಸ್ವಯಂ ನಿರ್ಧಾರದ ಹಕ್ಕು ಸ್ಥಾಪಿಸಲು ಮೆಟ್ಟಿಲಾಗಲಿದೆ. ಅಲ್ಲದೆ ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರಿಯಲು ಪೂರಕವಾಗಲಿದೆ ಎಂದು ತಿಳಿಸಿದರು. ಕೊಡವಲ್ಯಾಂಡ್ ಭೂ ರಾಜಕೀಯ…
ಮಡಿಕೇರಿ ನ.5 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮವನ್ನು ತ್ವರಿತವಾಗಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಇಂಧನ, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪ್ರವಾಸೋದ್ಯಮ, ಬೃಹತ್ ಮತ್ತು ಸಣ್ಣ ನೀರಾವರಿ, ಶಾಲಾ ಶಿಕ್ಷಣ, ಕಾರ್ಮಿಕ, ಲೋಕೋಪಯೋಗಿ, ಕೈಮಗ್ಗ ಮತ್ತು ಜವಳಿ, ಅರಣ್ಯ, ನಗರಾಭಿವೃದ್ಧಿ, ಯುವ ಸಬಲೀಕರಣ ಮತ್ತು ಕ್ರೀಡೆ, ಆಯುಷ್, ಕೌಶಲ್ಯಾಭಿವೃದ್ಧಿ, ಪಂಚಾಯತ್ ರಾಜ್, ಕೈಗಾರಿಕೆ, ನಗರಾಭಿವೃದ್ಧಿ, ಪದವಿ ಪೂರ್ವ ಶಿಕ್ಷಣ, ಹೀಗೆ ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕಾಗಿ ಇಂತಿಷ್ಟು ಹಣ ಮೀಸಲಿರಿಸಿದ್ದು, ಆದಷ್ಟು…
ಮಡಿಕೇರಿ ನ.5 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾ ಸಮಿತಿಯ ಸಭೆಯು ನಗರದ ವ್ಯಾಲಿವ್ಯೂ ಹೊಟೇಲಿನ ಸಭಾಂಗಣದಲ್ಲಿ ನಡೆಯಿತು. ಅಸೋಸಿಯೇಷನ್ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಆಶ್ರಯದಲ್ಲಿ ನಡೆಯಲಿರುವ ಕ್ರಿಸ್ಮಸ್ ಗಾಯನ ಸ್ಪರ್ಧೆ ಬಗ್ಗೆ ಚರ್ಚಿಸಲಾಯಿತು. ವೈಯುಕ್ತಿಕ ಕಾರಣದಿಂದ ತೆರವಾಗಿದ್ದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸೋಮವಾರಪೇಟೆಯ ಒ.ಎಲ್.ವಿ ದೇವಾಲಯಕ್ಕೆ ಸೇರಿದ ಅಂತೋಣಿ ಡಿಸೋಜ ಅವರನ್ನು ಸಭೆಯಲ್ಲಿ ಸರ್ವನು ಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಅಸೋಸಿಯೇಷನ್ ಸದಸ್ಯರಾದ ಜೋಸೆಫ್, ರೋಡ್ರಿಗಸ್, ಜೂಡಿ ಡೇವಿಡ್ ವಾಜ್, ಜೇಮ್ಸ್ ಡಿಸೋಜ, ವಿ.ಎ.ಲಾರೆನ್ಸ್ ಹಾಜರಿದ್ದರು.
ಮಡಿಕೇರಿ ನ.5 NEWS DESK : ಮಹಿಷಾಸುರ ಮರ್ದಿನಿ ದೇವಾಲಯದ ಜೀರ್ಣೋದ್ಧಾರಕ್ಕೆ ಅನುದಾನ ಒದಗಿಸುವಂತೆ ದೇವಾಲಯದ ಸಮಿತಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ದೇವಾಲಯ ಸಮಿತಿ ಪ್ರಮುಖರು ಮಹಿಷಾಸುರ ಮರ್ದಿನಿ ದೇವಸ್ಥಾನ ತಾವೂರು ಭಾಗಮಂಡಲ ಕೊಡಗು ಜಿಲ್ಲೆಯಲ್ಲಿರುವ ದೇವಸ್ಥಾನವು ಅತ್ಯಂತ ಪುರಾತನ ದೇವಸ್ಥಾನ ವಾಗಿದ್ದು, ಇದೀಗ ಶೀತಲಗೊಂಡಿದೆ. ಜೀರ್ಣೋದ್ಧಾರ ಮಾಡಲು ಅಗತ್ಯವಿರುವುದರಿಂದ 50 ಲಕ್ಷ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಅನುದಾನ ಬಿಡುಗಡೆ ಮಾಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು. ನಿಯೋಗದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಕೋಳಿ ಬೈಲು ಸಿ ವೆಂಕಟೇಶ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕುದುಕುಳಿ ಸಿ.ಅಶ್ವಥ್ ಹಾಗೂ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.






