ಮಡಿಕೇರಿ ಆ.29 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಾರ್ಷಿಕ ಎನ್.ಎಸ್.ಎಸ್.ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಆ.30 ರಂದು ನಡೆಯಲಿದೆ. ಕಾಲೇಜಿನ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ವರದಿಗಾರರು ಹಾಗೂ ನಿರೂಪಕರಾದ ಕಿಶೋರ್ ರೈ ಕತ್ತಲೆಕಾಡು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ.
ಲೇಖಕ: admin
ಮಡಿಕೇರಿ ಆ.29 NEWS DESK : ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳ ರಾಜ್ಯ ವಯನಾಡು ಜಿಲ್ಲೆಗೆ ಸಂಪರ್ಕಿಸುವ ರಸ್ತೆಯ ತಮರಶೆರಿ ಘಾಟ್ ಬಳಿ ಭೂಕುಸಿತ ಉಂಟಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿರುತ್ತದೆ. ಈ ಸಂಬಂಧ ಕೊಡಗು ಜಿಲ್ಲೆಯ ಗಡಿಭಾಗವಾದ ಕುಟ್ಟ ಮೂಲಕ ವಯನಾಡು ಜಿಲ್ಲೆಗೆ ಗುಡಲೂರು ಮಾರ್ಗವಾಗಿ ಸಂಚರಿಸುವ ವಾಹನಗಳನ್ನು ಬದಲೀ ಮಾರ್ಗವಾದ ಗೋಣಿಕೊಪ್ಪ -ಕೂಟುಪುಳ ಇರಿಟ್ಟಿ (ಕಣ್ಣೂರು ಜಿಲ್ಲೆ) ಮಾರ್ಗದ ಮೂಲಕ ಸಂಚರಿಸಲು ಅಗತ್ಯ ಕ್ರಮ ಕೈಗೊಳ್ಳಲು ಉಲ್ಲೇಖದ ಪತ್ರದಲ್ಲಿ ಕೇರಳ ವಯನಾಡು ಜಿಲ್ಲಾಧಿಕಾರಿಗಳು ಕೋರಿರುತ್ತಾರೆ. ಆದ್ದರಿಂದ, ಗುಡಲೂರು ರಸ್ತೆಯಲ್ಲಿ ವಾಹನ ಸಂಚಾರ ಸುಗಮವಾಗುವ ವರೆಗೆ ಜಿಲ್ಲೆಯ ಕುಟ್ಟ ಮೂಲಕ ತಮರಶೆರಿ ಘಾಟ್, ಗುಡಲೂರು ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು ಬದಲೀ ಮಾರ್ಗವನ್ನು ಬಳಸಲು ಸಲಹೆ ನೀಡಿದೆ. ಸಾರ್ವಜನಿಕರು ಬದಲೀ ಮಾರ್ಗವಾದ ಮಾಕುಟ್ಟ ಮುಖಾಂತರ ಕೇರಳ ರಾಜ್ಯಕ್ಕೆ ತೆರಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜು ತಿಳಿಸಿದ್ದಾರೆ.
ಮಡಿಕೇರಿ ಆ.29 NEWS DESK : ಭಾರತ್ ಕೆರಿಯರ್ ನೆಕ್ಟ್ ಸೊಲ್ಯೂಶಶನ್ಸ್ ಸಹಯೋಗದಲ್ಲಿ ಅಶೀರ್ವಾದ್ ಪ್ಲಂಬಿಂಗ್ ಸ್ಕೂಲ್ ಸಂಸ್ಥೆ ಬೆಂಗಳೂರಿನಲ್ಲಿ 75 ದಿನಗಳ ಪ್ಲಂಬಿಂಗ್ ತರಬೇತಿಯನ್ನು 18-45 ವರ್ಷದ ಅರ್ಹ ಪುರುಷ ಅಭ್ಯರ್ಥಿಗಳಿಗೆ ಅಂತಾರಾಷ್ಟೀಯ ಮಟ್ಟದ ಉಚಿತ ತರಬೇತಿ ,ಉಚಿತ ವಸತಿ, ಆಹಾರದೊಂದಿಗೆ ನೀಡುತ್ತಿದೆ. ಕನಿಷ್ಠ 8 ನೇ ತರಗತಿ ಪಾಸ್ ಆಗಿರಬೇಕು ಹಾಗೂ 2000 ಮೌಲ್ಯಮಾಪನ ಶುಲ್ಕವಿದ್ದು. ತರಬೇತಿ ನಂತರ (ಡಬ್ಲ್ಯುಎಂಎಸ್ಪಿಸಿ) ಪ್ರಮಾಣಪತ್ರ ಮತ್ತು ಉದ್ಯೋಗ ಸಹಾಯ ಲಭ್ಯವಿರುತ್ತದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9535602888/6362902311/ 6362902834 ನ್ನು ಸಂಪರ್ಕಿಸಬಹುದು.
ಮಡಿಕೇರಿ ಆ.29 NEWS DESK : ಭಾರತ್ ಕೆರಿಯರ್ ನೆಕ್ಟ್ ಸೊಲ್ಯೂಶನ್ಸ್ ಸಹಯೋಗದಲ್ಲಿ ಅಪೋಲೊ ಮೆಡ್ ಸ್ಕಿಲ್ಸ್ ಸಂಸ್ಥೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಜನರಲ್ ಡ್ಯೂಟಿ ಅಸಿಸ್ಟೆಂಟ್ (ಜಿಡಿಎ) ತರಬೇತಿ ಬೆಂಗಳೂರಿನಲ್ಲಿ ನೀಡಲಾಗುತ್ತಿದೆ. 18-30 ವರ್ಷ ವಯಸ್ಸಿನ ಕನಿಷ್ಠ 10 ನೇ ತರಗತಿ ಉತ್ತೀರ್ಣರು ಅರ್ಹರಾಗಿದ್ದು ಆಸ್ಪತ್ರೆ ಹಾಗೂ ಆರೈಕೆ ಕ್ಷೇತ್ರಗಳಿಗೆ ಸಂಬಂಧಿಸಿದ ಕೆಲಸ ಒಳಗೊಂಡ ತರಬೇತಿಯ ಬಳಿಕ ಖಾಸಗಿ ಆಸ್ಪತ್ರೆ ವೃದ್ದಾಶ್ರಮ ಹಾಗೂ ಹಿರಿಯರ ಆರೈಕೆ ಕೇಂದ್ರಗಳಲ್ಲಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ 9535602888/ 6362902311/ 6332902335 ಸಂಪರ್ಕಿಸಬಹುದು ಎಂದು ಸಿ.ಇ.ಒ ಭಾರತ್ ಕೆರಿಯರ್ ಕನೆಕ್ಟ್ ಸೊಲ್ಯೂಶನ್ಸ್ ಎಲ್.ಎಲ್.ಪಿ. ವಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
ನಾಪೋಕ್ಲು ಆ.29 NEWS DESK : ಶ್ರೀ ಗೌರಿ ಗಣೇಶೋತ್ಸವದ ಅಂಗವಾಗಿ ನಾಪೋಕ್ಲುವಿನ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಶ್ರೀ ಗೌರಿ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲು 4 ಗಣೇಶ ಸೇವಾ ಸಮಿತಿಗಳ ವತಿಯಿಂದ ಸಂತೆ ಮೈದಾನದಿಂದ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿಸಿ ವಾದ್ಯ ಮೇಳಗಳೊಂದಿಗೆ ಕೊಂಡೊಯ್ಯಲಾಯಿತು. ಮಳೆಯ ನಡುವೆಯೇ ಪಟ್ಟಣದ ಮುಖ್ಯ ರಸ್ತೆಯಲ್ಲಿ ಭವ್ಯ ಮೆರವಣಿಗೆಯಲ್ಲಿ ಸಾಗಿ ನಂತರ ವಿವಿಧ ಕಡೆಯ ದೇವಾಲಯ ಆವರಣ ಹಾಗೂ ಪೆಂಡಾಳುಗಳಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಗಣೇಶೋತ್ಸವ ಸಮಿತಿಗಳ ಪ್ರಮುಖ ಕಲಿಯಂಡ ವಿಠಲ ಅವರು ಸಂತೆ ಮೈದಾನದಲ್ಲಿ ಗಣೇಶ ಮೂರ್ತಿಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಎಲ್ಲರೂ ಸೇರಿ ವಿಘ್ನೇಶನನ್ನು ಭಕ್ತಿ ಭಾವದಿಂದ ಪೂಜಿಸಿ ವಿಸರ್ಜಿಸುವುದು ಸಂಸ್ಕೃತಿ ನಮ್ಮದಾಗಿದ್ದು ಇದಕ್ಕೆ ಎಲ್ಲರೂ ಭಾಗವಹಿಸಿ ಸಹಕಾರ ನೀಡಬೇಕು ಎಂದರು. ಆ.31 ರಂದು ಎಲ್ಲ ಗಣಪತಿ ಸೇವಾ ಸಮಿತಿಗಳು ಒಟ್ಟು ಸೇರಿ ವಿವಿಧ ಅಲಂಕೃತ ಮಂಟಪ, ಸಂಸ್ಕೃತಿಕ ಕಾರ್ಯಕ್ರಮ, ವಾದ್ಯಗೋಷ್ಠಿಗಳೊಂದಿಗೆ ಅದ್ದೂರಿ…
ಮಡಿಕೇರಿ ಆ.29 NEWS DESK : ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮಂದ್ರೀರ ಎನ್.ತೇಜಸ್ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 2024-25ನೇ ಸಾಲಿನಲ್ಲಿ ಹಾಕತ್ತೂರು ಕೃಷಿ ಪತ್ತಿನ ಸಹಕಾರ ಸಂಘವು 43.94 ಲಕ್ಷ ನಿವ್ವಳ ಲಾಭವನ್ನು ಸರ್ವ ಸದಸ್ಯರ ಸಹಕಾರದಿಂದ ಪಡೆದುಕೊಂಡಿದೆ. ಲಭಾಂಶದಲ್ಲಿ ಸದಸ್ಯರಿಗೆ ಶೇ.11.50 ಡಿವಿಡೆಂಡನ್ನು ನೀಡಲು ನಿರ್ಧರಿಸಲಾಗಿದೆಯೆಂದು ತಿಳಿಸಿದರು. ಸಂಘÀವು ಒಟ್ಟು 1,333 ಸದಸ್ಯರನ್ನು ಹೊಂದಿದ್ದು, 181.32 ಲಕ್ಷ ಪಾಲು ಬಂಡವಾಳವನ್ನು ಹೊಂದಿದೆ. 2024-25ನೇ ಸಾಲಿನಲ್ಲಿ ಒಟ್ಟು 306.75 ಲಕ್ಷ ವ್ಯಾಪಾರ ವಹಿವಾಟು ನಡೆಸಿ, 17.61 ಲಕ್ಷ ವ್ಯಾಪಾರ ಲಾಭವನ್ನು ಗಳಿಸಿದೆಯೆಂದು ತಿಳಿಸಿದರು. :: ಶೇ.99 ಸಾಲ ವಸೂಲಾತಿ :: ಸಂಘದ ಒಟ್ಟಾರೆ ಸಾಲ ಮರುಪಾವತಿ ಕಳೆದ ಮಾರ್ಚ್ ಅಂತ್ಯಕ್ಕೆ ಶೇ.99 ರಷ್ಟಿದೆ. ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪಡೆದ ಕೃಷಿ ಸಾಲದ ಮರುಪಾವತಿ…
ಕುಶಾಲನಗರ ಆ.29 NEWS DESK : ಗಣೇಶೋತ್ಸವ ಅಂಗವಾಗಿ ಕುಶಾಲನಗರ ರಥ ಬೀದಿಯ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ 101 ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಲಾಯಿತು. ಕುಶಾಲನಗರ ವಾಸವಿ ಯುವಕ ಸಂಘ ವತಿಯಿಂದ ಆರ್ಯವೈಶ್ಯ ಮಂಡಳಿ ಸಹಯೋಗದೊಂದಿಗೆ ದೇವಾಲಯದಲ್ಲಿ ಗಣಪತಿ ಮೂರ್ತಿಗಳಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್, ವಾಸವಿ ಯುವಕ ಸಂಘದ ಅಧ್ಯಕ್ಷರಾದ ಪ್ರವೀಣ್ ಮತ್ತು ಪದಾಧಿಕಾರಿಗಳು ಇದ್ದರು.
ಸುಂಟಿಕೊಪ್ಪ ಆ.29 NEWS DESK : 7ನೇ ಹೊಸಕೋಟೆ ಗಳೆಯರ ಬಳಗದ ವತಿಯಿಂದ 40ನೇ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಎಮ್ಮಗುಂಡಿ ಶ್ರೀ ಬಾಲಗಣಪತಿ ಮಿತ್ರ ಮಂಡಳಿ ವತಿಯಿಂದ ಪ್ರಥಮ ವರ್ಷದ ಗೌರಿ ಗಣೇಶೋತ್ಸವದ ಪ್ರಯುಕ್ತ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಸುಂಟಿಕೊಪ್ಪದ ಅಯ್ಯಪ್ಪ ಸ್ವಾಮಿ ದೇವಾಲಯದ ಆರ್ಚಕ ಗಣೇಶ್ ಭಟ್ ನೇತೃತ್ವದಲ್ಲಿ ಗಣಹೋಮ ಮತ್ತು ವಿಶೇಷ ಪೂಜಾ ವಿಧಿವಿಧಾನಗಳನ್ನು ನೇರವೇರಿಸಿದರು. ಇದೇ ವೇಳೆ ಮಹಿಳೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆಯೊಂದಿಗೆ ತೀರ್ಥ ಪ್ರಸಾದದೊಂದಿಗೆ ಭಕ್ತಾಧಿಗಳಿಗೆ ಲಘುಉಪಹಾರ ನೀಡಲಾಯಿತು. ಸಮಿತಿಯ ಗೌರವಧ್ಯಕ್ಷ ಸಂಜೀವ, ಅಧ್ಯಕ್ಷ ಸಜಿತ್, ಕಾರ್ಯದರ್ಶಿ ಪ್ರವೀಣ ಹಾಗೂ ಗ್ರಾಮಸ್ಥರು ಇದ್ದರು.
ಸುಂಟಿಕೊಪ್ಪ ಆ.29 NEWS DESK : ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ 7ನೇ ಗೌರಿ ಗಣೇಶೋತ್ಸವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವಿವಿಧ ಧಾರ್ಮಿಕ ವಿಧಿ ವಿಧಾನದೊಂದಿಗೆ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು. ಸಂಜೆ ಗಂಟೆಯಿಂದ ಕೊಡಗರಹಳ್ಳಿ ಬೈತೂರಪ್ಪ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಸುಂಟಿಕೊಪ್ಪ ಆ.29 NEWS DESK : ಶ್ರೀದೇವಿ ನಾರ್ಗಾಣೆ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿ 12ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಮುಂಜಾನೆ ಗಿರಿಯಪ್ಪ ಅವರ ಮನೆಯ ಗೌರಮ್ಮ ಬಾವಿಯಿಂದ ಗಂಗಾ ಜಲದೊಂದಿಗೆ ನಾದಸ್ವರ ಚಂಡೆ ವಾದನಗಳೊಂದಿಗೆ ಮೆರವಣಿಗೆ ಮೂಲಕ ದೇವಾಲಯದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಗಣಹೋಮದೊಂದಿಗೆ ಆರಂಭಗೊಂಡು ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿತು. ದಿನದ ವಿಶೇಷ ಪೂಜಾ ಕೈಂಕರ್ಯಗಳನ್ನು ಕೆದಕಲ್ ಈಶ್ವರ ಮಹದೇವ ದೇವಾಲಯದ ಹಿರಿಯ ಅರ್ಚಕರಾದ ಲೋಕೇಶ್ ಆರಾಧ್ಯ ಹಾಗೂ ಅವಿನಾಸ್ ಆರಾಧ್ಯ ನೆರವೇರಿಸಿದರು. ಮಹಾಮಂಗಳಾರತಿಯೊಂದಿಗೆ ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಸಲಾಯಿತು. ಅಧ್ಯಕ್ಷ ಎಂ.ಜೆ.ಆಕಾಶ್, ಕಿರಣ್, ಕಾರ್ತಿಕ್ಸುಧಿ, ಮೋಹನ್, ಬಿ.ಕೆ.ರಾಜೇಶ್, ಬಿ.ಡಿ.ರಾಜುರೈ, ಶರತ್, ವಿವೇಕ್ರೈ, ಕುಶಾಲಪ್ಪ ಪಿ.ಆರ್.ಸುನಿಲ್ಕುಮಾರ್ ಮತ್ತಿತರರು ಇದ್ದರು.






