ವಿರಾಜಪೇಟೆ ಅ.17 NEWS DESK : ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ವಿರಾಜಪೇಟೆ ಪುರಸಭೆಯ ಅಧ್ಯಕ್ಷರಾದ ಎಂ.ಕೆ.ದೇಚಮ್ಮ ಕಾಳಪ್ಪ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಹೋಟೆಲ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ಸ್ವಚ್ಛ ಕೊಡಗು ಸುಂದರ ಕೊಡಗು ಎಂಬ ಪರಿಕಲ್ಪನೆಯಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕ, ವಿರಾಜಪೇಟೆ ಪುರಸಭೆ ಹಾಗೂ ವಿರಾಜಪೇಟೆ ತಾಲೋಕು, ನಗರ ವರ್ತಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ವಚ್ಛತೆ ಎಂಬುದು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಬೇಕು. ಈಗಾಗಲೇ ವಿರಾಜಪೇಟೆ ಪುರಸಭೆ ವತಿಯಿಂದ ಸ್ವಚ್ಛ ನಗರಕ್ಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಆ ನಿಟ್ಟಿನಲ್ಲಿ ಸರ್ವರ ಸಹಕಾರ ಅಗತ್ಯ ಎಂದರು. ಸ್ವಚ್ಛತಾ ಜಾಗೃತಿಯಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳ ಪಾತ್ರ ಅಪಾರವಾಗಿದೆ ಎಂದರು. ವಿರಾಜಪೇಟೆ ನಗರ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಎ.ಮಂಜುನಾಥ್ ಮಾತನಾಡಿ, ಸ್ವಚ್ಛ ಪರಿಸರ ಸುಂದರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರು ಪಣ ತೊಡಬೇಕು. ನಮ್ಮ ಮನೆಗಳಿಂದಲೇ ಸ್ವಚ್ಛತೆಯು…
ಲೇಖಕ: admin
ಮಡಿಕೇರಿ ಅ.17 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು (ಅ.17) ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು. ಭಕ್ತರ ಜಯಘೋಷ, ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಪ್ರಧಾನ ಅರ್ಚಕರಾದ ಗುರುರಾಜ್ ಆಚಾರ್ ತಂಡ ಪೂಜಾ ವಿಧಿವಿಧಾನವನ್ನು ನಡೆಸಿದರು. ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಕೋಡಿ.ಯು.ಮೋಟಯ್ಯ ಮಠಾಧೀಶರು ಮತ್ತಿತರ ಗಣ್ಯರು ತೀರ್ಥೋದ್ಭವದ ಪವಿತ್ರ ಕ್ಷಣಕ್ಕೆ ಸಾಕ್ಷಿಯಾದರು. ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಭಾಗಮಂಡಲ ಕ್ಷೇತ್ರಕ್ಕೆ ಆಗಮಿಸಿ ಶ್ರೀಭಗಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ನಂತರ ಕಾಲ್ನಡಿಗೆಯ ಮೂಲಕ ಕಾವೇರಿ ಮಾತೆಯ ಸ್ಮರಣೆಯೊಂದಿಗೆ ತಲಕಾವೇರಿಗೆ…
ಸಿದ್ದಾಪುರ ಅ.17 NEWS DESK : ಗುಹ್ಯ ಗ್ರಾಮದ ಅಗಸ್ತ್ಯೇಶ್ವರ ದೇವಾಲಯದಲ್ಲಿ ಇಂದಿನಿಂದ (ಅ.17) ಐದು ದಿನಗಳ ಜಾತ್ರೆಯು ಶ್ರದ್ಧಾಭಕ್ತಿಯಿಂದ ನಡೆಯಲಿದೆ. ತುಲಾಮಾಸ ದಿವಸ ಏಕಾದಶಿ ಸಮಯದಲ್ಲಿ ಶ್ರೀ ಅಗಸ್ತ್ಯೇಶ್ವರ ಮಹಾದೇವರ ಪ್ರಾರ್ಥನೆಯೊಂದಿಗೆ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಸಂಜೆ 6 ಗಂಟೆಗೆ ತಂತ್ರಿಗಳು, ತಕ್ಕರು, ಆಡಳಿತ ಮಂಡಳಿಯವರು ಹಾಗೂ ಗ್ರಾಮಸ್ಥರು ದೇವರ ಕೊಡಿ ಮರ ನಿಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಸತ್ಯನಾರಾಯಣ ಪೂಜೆ, ರಂಗಪೂಜೆ, ಮಹಾಪೂಜೆ, ರುದ್ರಾಭಿಷೇಕ, ಕುಂಕುಮಾರ್ಚನೆ, ಕ್ಷೀರಾಭಿಷೇಕ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಜಾತ್ರೆಯ ಅಂಗವಾಗಿ ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ. ಗುಹ್ಯ ಅಗಸ್ತ್ಯೇಶ್ವರ ದೇವಸ್ಥಾನವು ಕೊಡಗಿನಲ್ಲಿ ಮೊದಲು ಪ್ರತಿಷ್ಠಾಪಿಸಲ್ಪಟ್ಟ ದೇವಸ್ಥಾನವಾಗಿದೆ. ಕೊಡಗಿನಲ್ಲಿ ಕಾವೇರಿ ನದಿ ಪಾತ್ರದಲ್ಲಿರುವ ಮೂರನೆಯ ದೇವಸ್ಥಾನವಾಗಿದೆ. ಮಹಾವಿಷ್ಣುಗೆ ದರ್ಶನ ನೀಡಿ ಈ ಕ್ಷೇತ್ರದಲ್ಲಿ ನೆಲೆನಿಂತ ಮಹಾದೇವರ ಅಗಸ್ತ ಮುನಿಯಿಂದ ಸ್ಥಾಪಿಸಲ್ಪಟ ಈಶ್ವರ ದೇವಾಲ ಮುಂದೆ ಅಗಸ್ತ್ಯೇಶ್ವರ ಎಂದೇ…
ಮಡಿಕೇರಿ ಅ.17 NEWS DESK : ಕಾವೇರಿ ಪವಿತ್ರ ತೀರ್ಥೋದ್ಭವದ ಅಂಗವಾಗಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಭಾಗಮಂಡಲದಿಂದ ತಲಕಾವೇರಿಗೆ ಪಾದಯಾತ್ರೆ ನಡೆಸಿದರು. ಈ ಸಂದರ್ಭ ಸಹಸ್ರಾರು ಭಕ್ತರು ಸಂಪ್ರದಾಯಿಕ ಉಡುಗೆ ಧರಿಸಿ ಕಾವೇರಿ ಮಾತೆಯ ಸ್ತುತಿ ಗೀತೆಗಳನ್ನು ಹಾಡುತ್ತ ಬೆಟ್ಟ ಹತ್ತಿದರು.
ಮಡಿಕೇರಿ ಅ.17 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 16ನೇ ಆಡಳಿತ ಮಂಡಳಿ ಸಭೆ ವಿಕಾಸಸೌಧದಲ್ಲಿ ನಡೆಯಿತು. ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರು ಪಾಲ್ಗೊಂಡು ಸಂಸ್ಥೆಯ ಅಭಿವೃದ್ಧಿ ಬಗ್ಗೆ ಚರ್ಚಿಸಿದರು. ನಂತರ ಕೊಡಗು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಆರ್ಥೋಪೆಡಿಕ್ಸ್ ವಿಭಾಗದಲ್ಲಿ ರೋಬೊಟಿಕ್ ಸರ್ಜರಿ ಪ್ರಾರಂಭಿಸಲು ಉಪಕರಣ ಖರೀದಿ, ಸ್ತನ ಕ್ಯಾನ್ಸರ್ ತಡೆಯುವ ನಿಟ್ಟಿನಲ್ಲಿ ಪರೀಕ್ಷೆ ನಡೆಸಲು ಮ್ಯಾಮೋಗ್ರಾಪಿ ಖರೀದಿ ಖಾಲಿ ಇರುವ ವೈದ್ಯರ ಹುದ್ದೆಯನ್ನು ನೇರ ನೇಮಕಾತಿ ಮುಖೇನ ಭರ್ತಿ ಮಾಡಿಕೊಳ್ಳಲು ತೀರ್ಮಾನ ಕೈಗೊಳ್ಳಲಾಯಿತು. ಸಂಸ್ಥೆಯ ಅಭಿವೃದ್ಧಿ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಇದೇ ಸಂದರ್ಭ ಸೂಚನೆ ನೀಡಲಾಯಿತು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಮೊಹಮ್ಮದ್ ಮೊಹಿಸಿನ್, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ. ವಿಶಾಲ್ ಆರ್.,…
ಕುಶಾಲನಗರ ಅ.17 NEWS DESK : ಕುಶಾಲನಗರ ಬಾಡಿಗೆ ಕಾರು ಮಾಲೀಕರು ಮತ್ತು ಚಾಲಕರ ಸಂಘದ 2025-28 ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಕೆ.ಎ.ಉದಯಕುಮಾರ್ ಪುನರ್ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಗೌರವಾಧ್ಯಕ್ಷರಾಗಿ ಸೋಮೆಯಂಡ ವಿಜು, ಉಪಾಧ್ಯಕ್ಷರಾಗಿ ಡಿ.ಆರ್.ಸೋಮೇಶ್,ಪ್ರಧಾನ ಕಾರ್ಯದರ್ಶಿಯಾಗಿ ಮಾನ್ವಲ್ ಬಿ.ಫರ್ನಾಂಡೀಸ್, ಸಹ ಕಾರ್ಯದರ್ಶಿ ಅಜಯ್, ಖಜಾಂಚಿಯಾಗಿ ಇ.ಪಿ.ಪ್ರೇಮ್ ಪ್ರಕಾಶ್ ,ಸಲಹೆಗಾರರಾಗಿ ಮನುನಂಜುಂಡ,ಕೆ.ಎನ್.ಅಶೋಕ್ ಹಾಗೂ ನಿದೇಶಕರಾಗಿ ಭಾಸ್ಕರ್, ಕೆ.ರಾಜು,ಸುರೇಶ್, ಉಮ್ಮರ್,ರವಿ,ಮನುಕುಮಾರ್,ರಿಯಾಜ್,ಶ್ರೀನಿವಾಸ್ ಆಯ್ಕೆಗೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಪೋಕ್ಲು ಅ.17 NEWS DESK : ಗುಜರಾತಿನ ಸೂರತ್ನಲ್ಲಿ ಜರುಗಿದ ನಾಲ್ಕನೇ ರಾಷ್ಟ್ರೀಯ ವೆಂಟ್ರನ್ಸ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಚಾಂಪಿಯನ್ಶಿಪ್- 2025 ಕ್ರೀಡಾಕೂಟದಲ್ಲಿ ಕೊಡಗಿನ ಮೂರು ಕ್ರೀಡಾಪಟುಗಳು ಭಾಗವಹಿಸಿ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ನಾಂಗಾಲ ಬಿಟ್ಟಂಗಾಲ ಗ್ರಾಮದ ಚೇಮೀರ ಸೀತಮ್ಮ ಪ್ರೇಮ ಬಾರದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ, ಜಾವಲಿನ್ ಎಸೆತದಲ್ಲಿ ಎರಡನೇ ಸ್ಥಾನ ಗಳಿಸಿದ್ದಾರೆ. ಬಾಲೆಳೆಯ ಕೊಟ್ಟಗೇರಿ ಗ್ರಾಮದ ಅರಮನೆಮಾಡ ಮಮತಾ ಮನು ಭಾರದ ಗುಂಡು ಎಸೆತದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ ಹಾಗೂ ಜಾವಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಚೇಲಾವರ ಗ್ರಾಮದ ಪಟ್ಟಚೆರುವಂಡ ಗಗನ ಮೇದಪ್ಪ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, 200 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. 110 ಹರಡಲ್ಸ್ ರನ್ನಿಂಗ್ ನಲ್ಲಿ ಪ್ರಥಮ ಸ್ಥಾನ, 400 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ…
ನಾಪೋಕ್ಲು ಅ.17 NEWS DESK : ನರಿಯಂದಡ ಗ್ರಾಮದ ತೋಟಗಳಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ನರಿಯಂದಡ ಗ್ರಾಮ ಪಂಚಾಯಿತಿಗೆ ಒಳಪಟ್ಟ ನರಿಯಂದಡ ಗ್ರಾಮದ ಪೊಕ್ಕೋಳಂಡ್ರ ಮಕ್ಕಿಮನೆ, ಮಂಞಪುರ ಕುಟುಂಬಸ್ಥರ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಚಲನ ವಲನ ಕಂಡುಬಂದಲ್ಲಿ ತಕ್ಷಣವೆ ಅರಣ್ಯ ಇಲಾಖೆಯನ್ನು 8277124444 ಸಂಪರ್ಕಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಅ.17 NEWS DESK : ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 30ನೇ ವರ್ಷದ ಕಾವೇರಿ ರಥಯಾತ್ರೆ ನಾಪೋಕ್ಲು ನಿಂದ ತಲಕಾವೇರಿಗೆ ಪ್ರಯಾಣ ಪ್ರಾರಂಭಗೊಂಡಿತ್ತು. ಸಂಜೆ ಭಕ್ತಾಧಿಗಳಿಗೆ ತೀರ್ಥ ವಿತರಣಿಸುವುದರ ಮೂಲಕ ಭಾಗಮಂಡಲದಿಂದ ಅಯ್ಯಂಗೇರಿ, ಬಲ್ಲಮಾವಟ್ಟಿ ಮಾರ್ಗವಾಗಿ ನಾಪೋಕ್ಲುವಿಗೆ ಹಿಂತಿರುಗಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿನ್ನಪ್ಪ ತಿಳಿಸಿದ್ದಾರೆ. . ವರದಿ : ದುಗ್ಗಳ ಸದಾನಂದ.
ಮಡಿಕೇರಿ ಅ.17 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಸಂದರ್ಭದಲ್ಲೆ ದೇಶ ಭಕ್ತ ಸಂಘಟನೆಯ ವಿರುದ್ಧ ತುಚ್ಛವಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಪ್ರಿಯಾಂಕ ಖರ್ಗೆಯ ಧೋರಣೆಗಳನ್ನು ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ ತೀವ್ರವಾಗಿ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ ಶತಮಾನೋತ್ಸವದ ಸಂದರ್ಭ ನಡೆದ ಪಥ ಸಂಚಲನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಹಲವು ಮಂದಿ ಗಣವೇಷ ಧರಿಸಿ ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ಆರ್ಎಸ್ಎಸ್ ವಿರುದ್ಧವಾದ ಹೇಳಿಕೆಗಳಿಗೆ ಕಾಂಗ್ರೆಸ್ನ ಎಲ್ಲರನ್ನು ದೂಷಿಸುವುದಿಲ್ಲ. ಆದರೆ, ತಂದೆ ಮಲ್ಲಿಕಾರ್ಜುನ ಖರ್ಗೆ ಅವರ ಆಶೀರ್ವಾದದಿಂದಷ್ಟೆ ಸಚಿವರಾಗಿರುವ ಪ್ರಿಯಾಂಕ ಖರ್ಗೆಯವರ ನಿಲುವುಗಳನ್ನು ತೀವ್ರವಾಗಿ ವಿರೋಧಿಸುವುದಾಗಿ ತೀಕ್ಷ್ಣವಾಗಿ ನುಡಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭಗಳಲ್ಲೆಲ್ಲ ಮುಸಲ್ಮಾನರನ್ನು ಎತ್ತಿ ಕಟ್ಟುವ, ಹಿಂದೂಗಳನ್ನು ಟೀಕಿಸುವ ಪ್ರವೃತ್ತಿಯನ್ನು ಕಾಣುತ್ತಿರುವುದಲ್ಲದೆ, ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಕಾರ್ಯವೂ ನಡೆಯುತ್ತದೆ. ಜಿಲ್ಲೆಯಲ್ಲಿ ದಶಕಗಳ ಹಿಂದೆ ನಡೆದ ಪಾಲೂರು ಘಟನೆಯ ಹಂತದಲ್ಲಿ ನೂರಾರು ಹಿಂದೂಗಳ…






