ಲೇಖಕ: admin

ವಿರಾಜಪೇಟೆ ನ.5 NEWS DESK : ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ ಹೇಳಿದರು. ವಿರಾಜಪೇಟೆಯ ಕರ್ನಾಟಕ ಸಂಘದ ವತಿಯಿಂದ ಮಹಿಳಾ ಸಮಾಜ ಸಭಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಸೋಮವಾರ ನಡೆದ ರಾಜ್ಯೋತ್ಸವ ಆಚರಣೆ ಹಾಗೂ ವಿವಿಧ ತಾಲೂಕು ಮಟ್ಟದ ಸ್ವರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ ಅವರು, ನಾವು ಕನ್ನಡ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ವಿಸ್ತರಿಸಬೇಕು. ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟಿಬದ್ಧರಾಗಿರುತ್ತೇವೆ ಎಂದು ನಿಶ್ಚಯಿಸಬೇಕು ಎಂದರಲ್ಲದೆ ಗಡಿ ಭಾಗವಾದ ವಿರಾಜಪೇಟೆ ವ್ಯಾಪ್ತಿಯಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡದ ನಾಮಫಲಕ ಕಡ್ಡಾಯವಾಗಿ ಎಲ್ಲ ಅಂಗಡಿಗಳಲ್ಲಿ ಅಳವಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದರು.…

Read More

ನಾಪೋಕ್ಲು ನ.5 NEWS DESK : ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ಯುವ ಘಟಕದ ಆಶ್ರಯದಲ್ಲಿ ನಡೆದ ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಚಾಂಪಿಯನ್ಸ್ ಟ್ರೋಫಿ-2025 ಸೀಸನ್ 1 ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಡಿಕೆಬೀಡುವಿನ ಕುಲಾಲ ಕುಂಬಾರ ಬಳಗ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ವಿಜೇತ ತಂಡಕ್ಕೆ ರೂ 20,000 ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ದ್ವಿತೀಯ ಸ್ಥಾನವನ್ನು ಕುಂಬಾರ ರಾಕರ್ಸ್ ತಂಡ ಪಡೆದುಕೊಂಡಿತು. ಈ ತಂಡಕ್ಕೆ 15000 ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ಮಡಿಕೇರಿಯ ಕುಲಾಲ ಬ್ರದರ್ಸ್ 11 ತಂಡ ತೃತೀಯ ಸ್ಥಾನ ಪಡೆದು 5000 ನಗದು ಹಾಗೂ ಟ್ರೊಫಿಯನ್ನು , ಮೂರ್ನಾಡಿನ ಟೀಮ್ ಶ್ರೀದೇವಿ ತಂಡ ನಾಲ್ಕನೇ ಸ್ಥಾನ ತನ್ನದಾಗಿಸಿಕೊಂಡಿತು.. :: ವೈಯಕ್ತಿಕ ಪ್ರಶಸ್ತಿಗಳು :: ಮ್ಯಾನ್ ಆಫ್ ದಿ ಸೀರೀಸ್- ದುರ್ಗಾ ಪ್ರಸಾದ್, ಎಮರ್ಜಿಂಗ್ ಪ್ಲೇಯರ್- ಹೇಮಂತ್, ಬೆಸ್ಟ್ ಬೌಲರ್-ದಿಲೀಪ್ ಕುಲಾಲ್, ಮ್ಯಾನ್ ಆಫ್ ದಿ ಮ್ಯಾಚ್ -ಯಶಸ್, ಅತಿ ಹೆಚ್ಚು…

Read More

ಮಡಿಕೇರಿ ನ.5 NEWS DESK : ಬೆಂಗಳೂರಿನ ವಿಧಾನಸೌಧ  ಕಚೇರಿಯಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಸಮಾವೇಶ ನಡೆಸುವ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರೊಂದಿಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾ ಒ ಬಿ ಸಿ ಘಟಕದ ಅಧ್ಯಕ್ಷ  ಬಾನಂಡ ಪ್ರತ್ಯು, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಕೇಚಮಾಡ ಸಿದ್ದು ನಾಚಪ್ಪ  ಉಪಸ್ಥಿತರಿದ್ದರು.

Read More

ಮಡಿಕೇರಿ ನ.5 NEWS DESK : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ  ಕರ್ನಾಟಕ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ ಮತ್ತು ಪದವೀಧರರ ಸಂಘದ ಮುಷ್ಕರ ಸ್ಥಳಕ್ಕೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ನೀಡಿದರು. ಅರಣ್ಯ ಮಹಾವಿದ್ಯಾಲಯ ಶಿರಿಸಿ, ಅರಣ್ಯ ಮಹಾವಿದ್ಯಾಲಯ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ  ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಸಂರಕ್ಷಣಾಧಿಕಾರಿ ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತ್ರ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವ ಕುರಿತು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಹಾಗೂಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ಬೇಡಿಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದರು. ನಿಮ್ಮ ಬೇಡಿಕೆ ಬಗ್ಗೆ ಚರ್ಚಿಸಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ನಿಮಗೆಲ್ಲ ಉಜ್ವಲ ಭವಿಷ್ಯವಿದೆ ನಿಮ್ಮ…

Read More

ಮಡಿಕೇರಿ ನ.5 NEWS DESK : ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪಿ.ವಿ.ಜಾನ್ಸನ್ ಹಾಗೂ ಸದಸ್ಯರುಗಳು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ವಿರಾಜಪೇಟೆ ತಾಲೂಕಿನಲ್ಲಿ ನಮ್ಮ ಸರಕಾರದ ಪಂಚ ಭಾಗ್ಯಗಳ ಫಲಾನುಭವಿಗಳ ಪಟ್ಟಿ ಹಾಗೂ ವಿವರಗಳನ್ನು  ಶಾಸಕರಿಗೆ ನೀಡಿ, ಮುಂದಿನ ದಿನಗಳಲ್ಲಿ ವಿರಾಜಪೇಟೆ ತಾಲೂಕು ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ನಡೆಸಲು ಅನುಮತಿ ಕೋರಿ ಮನವಿ ಸಲ್ಲಿಸಿದರು. ಮನವಿಯನ್ನು ಪರಿಶೀಲಿಸಿದ ಶಾಸಕರು ಇದೆ ತಿಂಗಳಲ್ಲಿ ತಾಲೂಕು ಮಟ್ಟದ ಸಮಾವೇಶ ಮಾಡಲು ದಿನಾಂಕ ಹಾಗೂ ಸಮಯ ನೀಡುವ ಭರವಸೆ ನೀಡಿದರು.

Read More

ಮಡಿಕೇರಿ NEWS DESK ನ.4 : ಸಮಾಜ ಸೇವಕರು, ರಾಜಕೀಯ ಮುಖಂಡರು ಮತ್ತು ಉದ್ಯಮಿಗಳಾದ ನಾಪಂಡ ಮುತ್ತಪ್ಪ ಹಾಗೂ ಮುದ್ದಪ್ಪ ಸಹೋದರರ ಜನ್ಮ ದಿನವನ್ನು ನಾಪಂಡ ಮುತ್ತಪ್ಪ, ಮುದ್ದಪ್ಪ ಅಭಿಮಾನಿ ಬಳಗ ಅರ್ಥಪೂರ್ಣವಾಗಿ ಆಚರಿಸಿತು. ಜನ್ಮ ದಿನದ ಪ್ರಯುಕ್ತ ಬಳಗದ ಪ್ರಮುಖರು ಇಂದು ಮಡಿಕೇರಿಯ ಜಿಲ್ಲಾಸ್ಪತ್ರೆಯ 400 ಕ್ಕೂ ಹೆಚ್ಚು ಒಳ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿ ಆರೋಗ್ಯ ವಿಚಾರಿಸಿದರು. ಅಭಿಮಾನಿ ಬಳಗದ ತೆಕ್ಕಡ ಸಂತೋಷ್ ಕಾರ್ಯಪ್ಪ, ಕುಟ್ಟಪ್ಪ, ಬೆಳ್ಯಪ್ಪ, ತಂಬುಕುತ್ತಿರ ಭೀಮಯ್ಯ, ಪೂಣಚ್ಚ, ಅನಿಲ್, ಜೀವನ್, ರಮೇಶ್ ಹಾಗೂ ಮಡಿಕೇರಿ ವಿಭಾಗದ ಯುವ ಮುಖಂಡ ನಾಪಂಡ ರವಿ ಮತ್ತಿತರರು ಈ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ನ.5 NEWS DESK : ಮಿಷನ್ ವಾತ್ಸಲ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ಜಿಲ್ಲಾ ಮಟ್ಟದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಾದ ವಿಶೇಷ ಪಾಲನಾ ಯೋಜನೆ, ಪ್ರಾಯೋಜಕತ್ವ ಕಾರ್ಯಕ್ರಮ, ದತ್ತು ಕಾರ್ಯಕ್ರಮ, ಉಪಕಾರ ಯೋಜನೆ, ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಮತ್ತಿತರ ಯೋಜನೆಗಳ ಪ್ರಗತಿಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟಲು ಎಲ್ಲಾ ಇಲಾಖೆಗಳು ಆಧ್ಯತೆಯ ಮೇರೆಗೆ ಕ್ರಮವಹಿಸಿ ಕಳೆದ ಐದು ವರ್ಷಗಳ ಪ್ರಕರಣಗಳ ಅವಲೋಕನ ನಡೆಸಿ ಅತೀ ಹೆಚ್ಚು ಪ್ರಕರಣಗಳು ನಡೆಯುವ ಪ್ರದೇಶಗಳನ್ನು ಗುರುತಿಸಿ ಅಂತಹ ಪ್ರದೇಶದಲ್ಲಿ ಹೆಚ್ಚಿನ ಅರಿವು ಹಾಗೂ ಕಾನೂನುಗಳ ಕುರಿತು ಪ್ರಚಾರ ನಡೆಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಇವರು…

Read More

ಮಡಿಕೇರಿ ನ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಡೆದ ಕಲಾ ಪ್ರತಿಭೋತ್ಸವದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಒಂದು ಕಡೆ ಶಾಸ್ತ್ರೀಯ ನೃತ್ಯ, ಮತ್ತೊಂದು ಕಡೆ ಜನಪದ ಗೀತೆ, ಇನ್ನೊಂದು ಕಡೆ ಚಿತ್ರಕಲೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಹೀಗೆ ಕಲಾ ಪ್ರತಿಭೋತ್ಸವದಲ್ಲಿ ನೂರಾರು ವಿದ್ಯಾರ್ಥಿಗಳು ಲವಲವಿಕೆಯಿಂದ ಪಾಲ್ಗೊಂಡಿದ್ದು ಕಂಡುಬಂದಿತು.  ನಗರದ ಗಾಂಧಿ ಭವನದಲ್ಲಿ ನಡೆದ ಕಲಾ ಪ್ರತಿಭೋತ್ಸವದಲ್ಲಿ ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆ ಹೀಗೆ ಸಮೂಹ ಸ್ಪರ್ಧೆಗಳು ನಡೆದಿದ್ದು ವಿಶೇಷವಾಗಿತ್ತು. :: ಬಾಲ ಪ್ರತಿಭೆ ::  ಶಾಸ್ತ್ರೀಯ ನೃತ್ಯ, ಜನಪದ ಗೀತೆ, ಚಿತ್ರಕಲೆ, ಕರ್ನಾಟಕ/ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ/ಹಿಂದೂಸ್ತಾನಿ ವಾದ್ಯ ಸಂಗೀತ, ಸುಗಮ ಸಂಗೀತ. :: ಕಿಶೋರ ಪ್ರತಿಭೆ :: ಚಿತ್ರಕಲೆ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ, ಶಾಸ್ತ್ರೀಯ ನೃತ್ಯ, ಜನಪದ ಗೀತೆ, ಕರ್ನಾಟಕ/ ಹಿಂದೂಸ್ತಾನಿ ವಾದ್ಯ ಸಂಗೀತ  ಮತ್ತು ಸುಗಮ ಸಂಗೀತ ::…

Read More

ಮಡಿಕೇರಿ ನ.4 NEWS DESK : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ 49ನೇ ವರ್ಷದ ದಸರಾ ಮಹೋತ್ಸವದ ಶೋಭಾಯಾತ್ರೆಯಲ್ಲಿದ್ದ ಮೂರ್ತಿಗಳ ಶಾಂತಿಪೂಜೆ ನ.5 ರಂದು ನಡೆಯಲಿದೆ. ಬುಧವಾರ ಸಂಜೆ 6.30 ಗಂಟೆಗೆ ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಆವರಣದಲ್ಲಿ ಶಾಂತಿಪೂಜೆ, ರಂಗಪೂಜೆ ಮತ್ತು ದೀಪಾರಾಧನೆ ಜರುಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿಯ ಅಧ್ಯಕ್ಷ ವಿಘ್ನೇಶ್ ಸಿ.ಯು ಮನವಿ ಮಾಡಿದ್ದಾರೆ. ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯು ಮುಂದಿನ ವರ್ಷ 50ನೇ ವರ್ಷದ ದಸರಾ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಸುವರ್ಣ ಮಹೋತ್ಸವ ಅತಿ ವಿಜೃಂಭಣೆ ಮತ್ತು ಸಂಭ್ರಮದಿಂದ ನಡೆಯಲಿದ್ದು, ಸರ್ವರು ಸಹಕಾರ ನೀಡಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿರಾಜಪೇಟೆ ನ.4 NEWS DESK : ಗೋಣಿಕೊಪ್ಪ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಾವೇರಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನೆಯಪಂಡ ಶಿಪ್ರಾ ಕಾಳಪ್ಪ ಚಿನ್ನದ ಪದಕದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅಲ್ಲದೆ, ಮೈಸೂರಿನಲ್ಲಿ ನಡೆದ 5ನೇ ಮುಕ್ತ ಕರಾಟೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಇವರು ವಿರಾಜಪೇಟೆಯ ಮನೆಯಪಂಡ ಎನ್.ಕಾಳಪ್ಪ, ಪುರಸಭೆ ಅಧ್ಯಕ್ಷೆ ದೇಚಮ್ಮ ದಂಪತಿ ಪುತ್ರಿ.

Read More