ಸುಂಟಿಕೊಪ್ಪ ಆ.29 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ 61ನೇ ಸ್ವರ್ಣ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವಿವಿಧ ಪೂಜೆ ಹಾಗೂ ಧಾರ್ಮಿಕ ಕೈಂಕರ್ಯಗಳೊಂದಿಗೆ ಶ್ರೀ ರಾಮ ಮಂದಿರದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಲಾಯಿತು. ದಿನದ ವಿಶೇಷ ಪೂಜಾ ಕೈಂಕರ್ಯಗಳನ್ನು ಹಿರಿಯ ಹಾ.ಮ.ಗಣೇಶ್ ಶರ್ಮಾ, ಮಂಜುನಾಥ್ ಶರ್ಮಾ ನೆರವೇರಿಸಿದರು. ಮದ್ಯಾಹ್ನ ಮಹಾಪೂಜೆ, ಮಂಗಳಾರತಿ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಶ್ರೀರಾಮ ಸೇವಾ ಸಮಿತಿ ಟ್ರಸ್ಟಿ ಕಾರ್ಯದರ್ಶಿ ಅಶೋಕ್ ಶೇಟ್, ಟ್ರಸ್ಟಿ ಎ.ಲೋಕೇಶ್ಕುಮಾರ್, ಶಾಂತರಾಂ ಕಾಮತ್, ಬಿ.ಎಂ.ಸುರೇಶ್, ಧನು ಕಾವೇರಪ್ಪ, ಎಂ.ಎಸ್.ಸುನಿಲ್, ಪಟ್ಟೆಮನೆ ಉದಯಕುಮಾರ್, ಪಟ್ಟೆಮನೆ ಸದಾಶಿವ, ಪಟ್ಟೆಮನೆ ಅನಿಲ್ಕುಮಾರ್, ಬಿ.ಕೆ.ಮೋಹನ್, ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಎಸ್.ವಿಘ್ನೇಶ್,ಉಪಾಧ್ಯಕ್ಷರುಗಳಾದ ಬಿ.ಕೆ.ಪ್ರಶಾಂತ್, ಸಿ.ಸಿ.ಸುನಿಲ್ಕುಮಾರ್, ಎಂ.ಗಣೇಶ್, ಪ್ರಧಾನ ಕಾರ್ಯದರ್ಶಿ ಹೆಚ್.ಎಂ.ನಿಖಿಲ್, ಖಜಾಂಚಿ ಪದ್ಮನಾಭ, ಪದಾಧಿಕಾರಿ ಎಂ.ಪಾಂಡ್ಯನ್, ಹೆಚ್.ನವೀನ್, ಜಿ.ಹೃತಿಕ್, ಆರ್.ಮಣಿ, ಕೆ.ಎಂ.ಅಜಿತ್, ಆರ್.ಪ್ರಶಾಂತ್, ಎಸ್.ರಾಜೇಶ್, ಬಿ.ಡಿ.ಅಶ್ವಥ್,…
ಲೇಖಕ: admin
ಮಡಿಕೇರಿ ಆ.29 NEWS DESK : ಕೊಡಗು ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಯುವ ಸಮೂಹವನ್ನು ನಿರುದ್ಯೋಗ ಸಮಸ್ಯೆಯಿಂದ ಮುಕ್ತಿ ಕಾಣಿಸುವಂತೆ ಒತ್ತಾಯಿಸಿ ಭಾರತ ಪ್ರಜಾಸತಾತ್ಮಕ ಯುವ ಫೆಡರೇಷನ್ ನ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಸದಸ್ಯರು ಉದ್ಯೋಗ ಬೇಕೆಂದು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಸಮಿತಿಯ ಜಿಲ್ಲಾಧ್ಯಕ್ಷ ಹೆಚ್.ಆರ್.ರಾಚಪ್ಪಾಜಿ ಮಾತನಾಡಿ, ಸುಮಾರು ಆರೂವರೆ ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಕೊಡಗು ಜಿಲ್ಲೆಯ ಕಾರ್ಮಿಕ ವರ್ಗ, ಸಣ್ಣ ರೈತರು, ಮಧ್ಯಮ ವರ್ಗದ ಜನತೆ ಹಾಗೂ ವಿದ್ಯಾರ್ಥಿಗಳು ತಮ್ಮ ಕೆಲಸ ಕಾರ್ಯಗಳಿಗಾಗಿ ನಿತ್ಯ ಸರಕಾರಿ ಕಚೇರಿಗಳಿಗೆ ಭೇಟಿ ನೀಡುತ್ತಾರೆ. ಆದರೆ ಸಿಬ್ಬಂದಿಗಳ ಕೊರತೆಯಿಂದಾಗಿ ಅರ್ಜಿಗಳು ವಿಲೇವಾರಿಯಾಗದೆ ಮತ್ತು ಅಗತ್ಯ ಕೆಲಸಗಳನ್ನು ಮಾಡಿಸಿಕೊಳ್ಳಲಾಗದೆ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶಿಕ್ಷಣ ಮುಗಿಸಿರುವ ಯುವ ಸಮೂಹ ಉದ್ಯೋಗಕ್ಕಾಗಿ…
ನಾಪೋಕ್ಲು ಆ.29 NEWS DESK : ಹಳೆ ತಾಲೂಕು ಅಂಕುರ್ ಪಬ್ಲಿಕ್ ಶಾಲೆಯ ಸೈನ್ಸ್ ಕ್ಲಬ್ ವತಿಯಿಂದ ಭತ್ತದ ನಾಟಿ (ನೇಡುವ) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಂಕುರ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಕೊಳಕೇರಿ ಗ್ರಾಮದ ಕೆಟೋಳಿರ ರಾಜಾ ಚರ್ಮಣ ಅವರ ಗದ್ದೆಯಲ್ಲಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಕೆಸರು ಗದ್ದೆಯಲ್ಲಿ ಇಳಿದು ನಾಟಿ ನೇಡುವುದರ ಮೂಲಕ ಭತ್ತದ ಬೇಸಾಯದ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ತಮ್ಮ ಹೊಸ ಅನುಭವವನ್ನು ಹಂಚಿಕೊಂಡರು ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ರತ್ನಾ ಚರ್ಮಣ ಮಕ್ಕಳ ಜೊತೆಗೆ ಪಾಲ್ಗೊಂಡು ಹೇಗೆ ಭತ್ತದ ಸಸಿ (ಅಗೆ) ತೆಗೆಯುವುದು ನಾಟಿ ಮಾಡುವುದು, ಕಳೆ ಕೀಳುವುದು, ಭತ್ತ ಬೆಳೆಯುವುದು ಎಂಬುದರ ಬಗ್ಗೆ ಗದ್ದೆಯಲ್ಲಿ ಪ್ರಾತ್ಯಕ್ಷತೆಯನ್ನು ಮಾಡಿ ವಿದ್ಯಾರ್ಥಿಗಳಲ್ಲಿ ಭತ್ತದ ಬೇಸಾಯದ ಬಗ್ಗೆ ಆಸಕ್ತಿ ಮೂಡಿಸಿದರು. ಭೂಮಿಯನ್ನು ಬೇಸಾಯ ಮಾಡದೆ ಬಂಜರು ಬಿಡಬಾರದು ಎಂದು ಮನಮುಟ್ಟುವಂತೆ ಸಮಗ್ರ ಮಾಹಿತಿಯನ್ನು ನೀಡಿದರು. ಶಿಕ್ಷಕಿಯರಾದ ಶೈಲಾ ನರೇಶ್ ಮತ್ತು ಶೃತಿ ಭತ್ತದ ನಾಟಿಯ ಬಗ್ಗೆ ಮಾರ್ಗದರ್ಶನ…
ಸಿದ್ದಾಪುರ ಆ.29 NEWS DESK : ಸಿದ್ದಾಪುರದ ಶ್ರೀ ರಾಮ ಮಂದಿರದಲ್ಲಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನ ಪ್ರತಿಷ್ಠಾಪನೆ ಮಾಡಲಾಯಿತು. ಕಳೆದ 86 ವರ್ಷಗಳಿಂದ ದಿ.ಶಿವನಂಜಪ್ಪ ಅವರ ಕುಟುಂಬಸ್ಥರು ಗೌರಿ ಗಣೇಶ ಉತ್ಸವವನ್ನ ಎಲ್ಲಾ ಬಾಂಧವರನ್ನ ಒಗ್ಗೂಡಿಸಿ ಸೌಹಾರ್ದತವಾಗಿ ಆಚರಿಸಿಕೊಂಡು ಬರುತ್ತಿರುವುದು ಇಲ್ಲಿನ ವಿಶೇಷ. ವಿಶೇಷ ಪೂಜಾ ಕಾರ್ಯಗಳೊಂದಿಗೆ ಅಲಂಕೃತ ಬೆಳ್ಳಿರಥದ ಮಂಟಪದಲ್ಲಿ ಮೂರ್ತಿಗಳನ್ನು ಕುಳ್ಳಿರಿಸಿ ಮೈಸೂರಿನ ಪ್ರಖ್ಯಾತ ಬ್ಯಾಂಡ್ ಸೆಟ್ ವಾದ್ಯಗೋಷ್ಠಿಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಮೆರವಣಿಗೆಯ ಉದ್ದಕ್ಕೂ ಭಕ್ತರು ಕುಣಿದು ಕುಪ್ಪಳಿಸಿ ಸಂಭ್ರಮಿಸಿ ಗೌರಿ ಗಣೇಶ ಉತ್ಸವಕ್ಕೆ ಜೈಕಾರ ಕೂಗಿದರು. ಈ ಸಂದರ್ಭ ಶ್ರೀರಾಮ ಮಂದಿರ ಸಮಿತಿಯ ಪ್ರಮುಖರು, ಸ್ಥಳೀಯರು, ಕಾರ್ಯಕರ್ತರು, ಭಕ್ತಾದಿಗಳು ಹಾಜರಿದ್ದರು.
ಕುಶಾಲನಗರ ಆ.29 NEWS DESK : ವಿದ್ಯುತ್ ಅವಘಡದಿಂದ ಹಸುವೊಂದು ಸಾವನ್ನಪ್ಪಿದ ಘಟನೆ ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರದ ವೃಂದಾ ಬಡಾವಣೆಯಲ್ಲಿ ನಡೆದಿದೆ. ವೃಂದಾ ಬಡಾವಣೆಯ ನಿವಾಸಿಗಳಾದ ಸುಮಿತ್ರಾ ಸುದಿಕುಮಾರ್ ಅವರ ಹಸು ಸಾವನ್ನಪ್ಪಿದೆ. ವೃಂದಾ ಬಡಾವಣೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಟಿ.ಸಿಯಿಂದ ವಿದ್ಯುತ್ ಪ್ರವಹಿಸಿ ಹಸು ಸಾವಿಗೀಡಾಗಿದೆ. ಸ್ಥಳಕ್ಕೆ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧಿಸಿದ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್, ಟಿ.ಸಿ ಶಿಥಿಲಾವಸ್ಥೆಯಲ್ಲಿದೆ. ವಿದ್ಯುತ್ ತಂತಿಗಳ ಮೇಲ್ಪದರ ಸುಟ್ಟು ತಂತಿಗಳು ಕಾಣುತ್ತಿದೆ. ಈ ಬಗ್ಗೆ ಚೆಸ್ಕಾಂ ಗೆ ದೂರು ನೀಡಲಾಗಿತ್ತು. ಚೆಸ್ಕಾಂ ನ ನಿರ್ಲಕ್ಷ್ಯದಿಂದ ಮೂಖಪ್ರಾಣಿ ಸಾವನ್ನಪ್ಪಿದೆ. ಪಕ್ಕದಲ್ಲಿಯೇ ಗಣೇಶನ ಪೂಜೆ ನಡೆಯುತ್ತಿದೆ. ನೂರಾರು ಜನ ಆಗಮಿಸುತ್ತಿರುತ್ತಾರೆ. ಸಾರ್ವಜನಿಕರಿಗೆ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನಿಸಿದ ಅವರು, ಕೂಡಲೇ ಚೆಸ್ಕಾಂ ನವರು ಟಿ.ಸಿ ದುರಸ್ತಿಗೊಳಿಸಬೇಕು. ಟಿ.ಸಿ ಬಳಿ ಸಾರ್ವಜನಿಕರು ನುಸುಳದಂತೆ ಬೇಲಿ ಅಳವಡಿಸಬೇಕು. ಹಾಗೆಯೇ 4 ತಿಂಗಳ…
ಮಡಿಕೇರಿ ಆ.29 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್.ಶಿವಪ್ರಸಾದ್ ಮತ್ತು ಚಂಪಕ ದಂಪತಿಯು ತಮ್ಮ ಮಕ್ಕಳಾದ ಕೃತಿಕಾ ಮತ್ತು ಭರತೇಶ್ ಜತೆಗೂಡಿ ತಮ್ಮ ಮನೆಯಲ್ಲಿ ಜೇಡಿಮಣ್ಣಿನಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸುವ ಮೂಲಕ ಗ್ರಾಮಸ್ಥರ ಗಮನ ಸೆಳೆದಿದ್ದಾರೆ. ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಪರಿಸರ ಸ್ನೇಹಿ ಗಣೇಶೋತ್ಸವದ ಆಂದೋಲನಕ್ಕೆ ಕೈಜೋಡಿಸಿರುವ ರೈತರಾದ ಎಸ್.ಆರ್.ಶಿವಪ್ರಸಾದ್ ಮತ್ತು ಚಂಪಕ ದಂಪತಿಯು ತಮ್ಮ ಮಕ್ಕಳಾದ ಕೃತಿಕಾ ಮತ್ತು ಭರತೇಶ್ ಅವರಿಗೆ ಜೇಡಿಮಣ್ಣಿನಿಂದ ಹೇಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಬೇಕು ಎಂಬ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿರುತ್ತಾರೆ. ತಮ್ಮ ಪೋಷಕರ ಮಾರ್ಗದರ್ಶನ ಹಾಗೂ ಸಹಕಾರದಿಂದ ಇಬ್ಬರು ಮಕ್ಕಳು ಮನೆಯಲ್ಲಿ ಜೇಡಿಮಣ್ಣಿನಿಂದ ತಯಾರಿಸಿರುವ ಪರಿಸರ ಸ್ನೇಹಿ ಗಣೇಶ ಮೂರ್ತಿಯು ನೆರೆಹೊರೆಯವರನ್ನು ಮತ್ತು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ. ನಾವು ಪರಿಸರಕ್ಕೆ ಹಾನಿಕಾರಕವಾದ ಪಿಓಪಿ ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಯನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು. ಆದ್ದರಿಂದ ಪ್ರತಿವರ್ಷ…
ನಾಪೋಕ್ಲು ಆ.29 NEWS DESK : ಚೆನ್ನೈನಲ್ಲಿ ನಡೆದ ಬ್ರೈನೋಬ್ರೈನ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಡ್ಲೇರ ಲಿಖಿತ್ ಸೋಮಣ್ಣ ಚಾಂಪಿಯನ್ ಟ್ರೋಫಿ ತನ್ನದಾಗಿಸಿಕೊಂಡಿದ್ದಾನೆ. ಬ್ರೈನೋಬ್ರೈನ್ ನಲ್ಲಿ ಒಟ್ಟು ಹತ್ತು ಹಂತಗಳಿದ್ದು, ಎಂಟು ಹಂತಗಳಲ್ಲಿ ಭಾಗವಹಿಸಿ, ರಾಜ್ಯಮಟ್ಟದಲ್ಲಿ 3 ಬಾರಿ, ರಾಷ್ಟ್ರಮಟ್ಟದಲ್ಲಿ 2 ಬಾರಿ ಅಂತಾರಾಷ್ಟ್ರಮಟ್ಟದಲ್ಲಿ 2 ಬಾರಿ ಭಾಗವಹಿಸಿ 4 ಚಾಂಪಿಯನ್ ಟ್ರೋಫಿ, ಮೂರು ಚಿನ್ನದ ಪದಕ ಪಡೆದುಕೊಂಡಿರುವ ಲಿಖಿತ್ ಸೋಮಣ್ಣ ಬ್ರೈನೋಬ್ರೈನ್ ಸ್ಪರ್ಧೆಗಳಲ್ಲಿ ಭಾಗವಹಿಸಿ 25 ರಿಂದ 40 ಸಮಸ್ಯೆಗಳನ್ನು ಆಫ್ ಲೈನ್ ನಲ್ಲಿ ಮೂರು ನಿಮಿಷ ಹಾಗೂ ಆನ್ಲೈನ್ ನಲ್ಲಿ ನಾಲ್ಕು ನಿಮಿಷಗಳಲ್ಲಿ ಮುಗಿಸುವ ನೈಪುಣ್ಯತೆ ಹೊಂದಿದ್ದಾನೆ. ಲಿಖಿತ್ ಸೋಮಣ್ಣ ಬೆಟ್ಟಗೇರಿ ಗ್ರಾಮದ ಕಡ್ಲೇರ ಲೋಕೇಶ್ ಕುಮಾರ್ ಮತ್ತು ವೃಂದಾ ದಂಪತಿಯ ಪುತ್ರ. ಕೊಟ್ಟೂರು ಚೇರಂಬಾಣಿ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ. ಇವನು ಮಡಿಕೇರಿಯ ಮಾಪಂಗಡ ಕವಿತಾ ಕರುಂಬಯ್ಯ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ವರದಿ : ದುಗ್ಗಳ ಸದಾನಂದ.
ಬೆಂಗಳೂರು ಆ.29 NEWS DESK : ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದ ಕ್ರೀಡಾ ಪಟುಗಳಿಗೆ ನೇರ ನಗದು ಪುರಸ್ಕಾರ ನೀಡಿ, ಸನ್ಮಾನಿಸಿ ಅವರು ಮಾತನಾಡಿದರು. ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಜ್ಯಕ್ಕೆ ಐದನೇ ಸ್ಥಾನವನ್ನು ದೊರಕಿಸಿಕೊಟ್ಟಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಮುಂದಿನ ಕ್ರೀಡಾಕೂಟದಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ ದೊರಕಲೆಂದು…
ಬೆಂಗಳೂರು ಆ.29 NEWS DESK : ಬೆಂಗಳೂರು ವಕೀಲರ ಸಂಘ ಹಾಗೂ ರವಿವರ್ಮ ಕುಮಾರ್ ಅಸೋಸಿಯೇಟ್ಸ್ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಪ್ರೊಫೆಸರ್ ರವಿವರ್ಮ ಕುಮಾರ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಆಹ್ವಾನಿತ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು ಆ.29 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿಂದು ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬೋಳಂಡಂಡ ಕಾವೇರಿ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.






