ಲೇಖಕ: admin

ಮಡಿಕೇರಿ NEWS DESK ಆ.28 : ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಪೂರ್ವಭಾವಿ ತಯಾರಿಗಳನ್ನು ಮಾಡಿಕೊಳ್ಳುವ ಕುರಿತು ಚರ್ಚಿಸಲು ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಆ.29 ರಂದು ದಸರಾ ಸಭೆ ನಡೆಯಲಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ದಸರಾ ಸಮಿತಿ, ದಶಮಂಟಪ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ NEWS DESK ಆ.28 : ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊಂದರಿಂದ 32 ಹೊಸ ಮೊಬೈಲ್ ಫೋನ್ ಗಳು ಮತ್ತು ರೂ.3 ಸಾವಿರ ನಗದು ಕಳ್ಳತನ ಮಾಡಿದ ಅಸ್ಸಾಂ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದ ನಿವಾಸಿ ಜೋಹುರ್ ಆಲಿ (28) ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ 32 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಇದೇ ಆ.24 ರಂದು ಗೋಣಿಕೊಪ್ಪ ಪಟ್ಟಣದ ಅಂಗಡಿಯೊಂದರ ರೋಲಿಂಗ್ ಶೆಟ್ರಸ್ ಮುರಿದು ವಿವಿಧ ಕಂಪನಿಯ 32 ಹೊಸ ಮೊಬೈಲ್ ಫೋನ್ ಗಳು ಮತ್ತು ರೂ.3 ಸಾವಿರ ನಗದು ಕಳ್ಳತನವಾಗಿರುವ ಕುರಿತು ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೇವಲ ಮೂರು ದಿನಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್ ಎಸ್. ಗೋಣಿಕೊಪ್ಪ ಸಿಪಿಐ ಶಿವರಾಜ ಆರ್.ಮುಧೋಳ್, ಪಿಎಸ್‌ಐ ಪ್ರದೀಪ್ ಕುಮಾರ್ ಬಿ.ಕೆ. ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ…

Read More

ಕುಶಾಲನಗರ ಆ.28 NEWS DESK :  ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಸಿ.ಕೆ.ಮಲ್ಲಪ್ಪ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ ಆಡಳಿತ ಮಂಡಳಿಯೊಂದಿಗೆ ಸಂವಾದ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಭೌತಿಕವಾಗಿ ಕಾಮಗಾರಿಗಳನ್ನು ಪರಿಶೀಲಿಸಿ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅಧಿಕಾರಿಗಳ ತಂಡ ವೈಯಕ್ತಿಕ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಆರ್.ಸುಮೇಶ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.  ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಧಿಕಾರಿಗಳಾದ ಪರಮೇಶ್ ಕುಮಾರ್ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾರಾಯಣ ಮೂರ್ತಿ ಅವರು ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

Read More

ವಿರಾಜಪೇಟೆ ಆ.28 NEWS DESK : ಬೆಂಗಳೂರು ಮೂಲದ ಸಿಸ್ಕೋ ಸಂಸ್ಥೆಯ 85 ಮಂದಿ ಸ್ವಯಂ ಸೇವಕರು ಜಾಗೃತಿ ಟ್ರಸ್ಟ್ ನೊಂದಿಗೆ ಕೈಜೋಡಿಸಿ, ವಿರಾಜಪೇಟೆಯ ಆಯ್ದ ಸರಕಾರಿ ಶಾಲೆಗಳ ಮಕ್ಕಳಿಗೆ ಕಲಿಕೆಯ ಅನುಭವ ನೀಡಿದರು. ಸರಕಾರಿ ಮಾದರಿ ಪ್ರಾಥಮಿಕ ಅಮ್ಮತ್ತಿ, ಹೊಸೂರು, ಸಿದ್ದಾಪುರ, ಬಿಳುಗುಂದ, ನಲ್ವತೋಕ್ಲು ಈ 5 ಸರಕಾರಿ ಶಾಲೆಗಳ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನರಂಜನೆಯ ಕ್ರೀಡೆಗಳನ್ನು ನಡೆಸಿ ಭಾಗವಹಿಸಿದ ಮತ್ತು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. ಹೈಜೀನ್ ಕಿಟ್‍ಗಳ ವಿತರಣೆಯೊಂದಿಗೆ ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ಕಲಿಕೋಪಕರಣ ಸಾಮಾಗ್ರಿ, ಬ್ಯಾಂಡ್ ಸೆಟ್ ಕೊಡುಗೆ ನೀಡಲಾಯಿತು. ಪರಿಸರ ಸಂರಕ್ಷಣೆಯ ಅರಿವು ಮೂಡಿಸಲು ಕಾಂಪೋಸ್ಟ್ ಗುಂಡಿ ನಿರ್ಮಿಸಲಾಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಾದ ಸಿದ್ದಾಪುರ, ಹೊಸೂರು ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಹೆಗ್ಗಳ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಿ, ವಿಜ್ಞಾನ ಕಲಿಕೋಪಕರಣ ತಯಾರಿಸಿ, ಕ್ರೀಡಾ ಉಪಕರಣ ನೀಡುವುದರ ಮೂಲಕ ಮಕ್ಕಳಲ್ಲಿ ಕ್ರೀಡಾ ಉತ್ಸಾಹ…

Read More

ಮಡಿಕೇರಿ ಆ.28 NEWS DESK : ಉಡೋತ್ ಮೊಟ್ಟೆ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿ ಮತ್ತು ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 37ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆ ಅರ್ಚಕರಾದ  ಜಗದೀಶ್ ಅವರ ನೇತೃತ್ವದಲ್ಲಿ ಗೌರಿ ಗಣೇಶನ ಪ್ರತಿಷ್ಠಾಪನೆ ನೆರವೇರಿತು. ಬಳಿಕ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಇದೇ ಸಂದರ್ಭ ಗ್ರಾಮದ ಮಕ್ಕಳ ಸಾಂಪ್ರದಾಯಿಕ ಕುಣಿತ, ಭಜನೆ ಗಮನ ಸೆಳೆಯಿತು. ಮಧ್ಯಾಹ್ನ ಮಹಾಪೂಜೆಯನ್ನು ನೆರವೇರಿಸಿ ಉಪಸ್ಥಿತ ಎಲ್ಲರಿಗೂ ಅನ್ನ ಸಂತರ್ಪಣೆಯನ್ನು ಮಾಡಲಾಯಿತು. ಸಾಮಾಜಿಕ ಕಾರ್ಯಕರ್ತರಾದ ಚಿ.ನಾ.ಸೋಮೇಶ್ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ದೇವಸ್ಥಾನ, ಮಠ-ಮಂದಿರಗಳು ಹಿಂದೂ ಸಮಾಜದ ಶ್ರದ್ಧಾ ಕೇಂದ್ರಗಳಾಗಿದೆ. ನಮ್ಮ ಆಚಾರ ವಿಚಾರ ಸಂಸ್ಕೃತಿಯನ್ನು ಉಳಿಸುವಲ್ಲಿ ಧಾರ್ಮಿಕ ಆಚರಣೆಗಳು ಮಹತ್ವದ ಸ್ಥಾನವನ್ನು ಪಡೆದಿದೆ. ಇಂದು ನಮ್ಮ ಶ್ರದ್ಧಾ ಕೇಂದ್ರಗಳ ವಿರುದ್ಧ ಅಪನಂಬಿಕೆಗಳನ್ನು ಹೆಚ್ಚಿಸುವಂತಹ ಷಡ್ಯಂತ್ರಗಳು ಎಲ್ಲೆಡೆ ನಡೆಯುತ್ತಿದೆ. ಇದರ ಬಗ್ಗೆ ಹಿಂದೂ ಸಮಾಜ ಜಾತಿ ಭಾಷೆ ಎಲ್ಲೆಯನ್ನು…

Read More

ಮಡಿಕೇರಿ ಆ.28 NEWS DESK : ಕರ್ನಾಟಕ ಲೋಕಾಯುಕ್ತ ಕೊಡಗು ಉಪ ಅಧೀಕ್ಷರಾದ ದಿನಕರ ಶೆಟ್ಟಿ ಮತ್ತು ಪೊಲೀಸ್ ನಿರೀಕ್ಷಕರಾದ ವೀಣಾ ನಾಯ್ಕ್ ಅವರು ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ  ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರ ಗೈರು, ಗುಣಮಟ್ಟದ ಆಹಾರ ಪೂರೈಸುವುದು, ಶುಚಿತ್ವಕ್ಕೆ ಒತ್ತು ನೀಡುವುದು, ಶುದ್ಧ ಕುಡಿಯುವ ನೀರು ಪೂರೈಸುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಮುಂದಿನ‌ ದಿನಗಳಲ್ಲಿ ವಸತಿ ಶಾಲೆಯಲ್ಲಿ ಯಾವುದೇ ರೀತಿಯ ದೂರು ಬರದಂತೆ ಗಮನಹರಿಸಬೇಕು ಎಂದು ದಿನಕರ ಶೆಟ್ಟಿ ಅವರು ಸೂಚಿಸಿದರು. ವಸತಿ ಶಾಲೆಯ ಪ್ರಾಂಶುಪಾಲರು, ಸಿಬ್ಬಂದಿಗಳು ಇದ್ದರು.

Read More

ಮಡಿಕೇರಿ ಆ.28 NEWS DESK : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲ, 33/11 ಕೆವಿ ಮೂರ್ನಾಡು ಹಾಗೂ 33/11ಕೆವಿ ಸಿದ್ದಾಪುರ ವಿದ್ಯುತ್ ಉಪ ಕೆಂದ್ರದಲ್ಲಿ ನಿರ್ವಾಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಆಗಸ್ಟ್, 30 ರಂದು ಬೆಳಗ್ಗೆ 09.30 ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟ, ಆರ್ಜಿ, ಬೇಟೋಳಿ, ಕದನೂರು, ಕಾಕೋಟುಪರಂಬು, ಕೆದಮುಳ್ಳೂರು, ಬಿಟ್ಟಂಗಾಲ, ಬಿ.ಶೆಟ್ಟಗೇರಿ, ಅಮ್ಮತ್ತಿ, ಚೆಂಬೆಬೆಳ್ಳೂರು, ಕಣ್ಣಂಗಾಲ, ಹಾಲುಗುಂದ, ಕೊಂಡಂಗೇರಿ, ಅಮ್ಮತ್ತಿ, ಬಿಳುಗುಂದ, ಮಾಲ್ದಾರೆ, ಕರಡಿಗೋಡು, ಗುಹ್ಯಾ, ಚೆನ್ನಯ್ಯನಕೋಟೆ, ಅಬ್ಬೂರು ತಾರಿಕಟ್ಟೆ, ಚೆನ್ನಂಗಿ, ಇಂಜಲಗೇರಿ, ಪುಲಿಯೇರಿ, ಮೂರ್ನಾಡು, ಪಾರಾಣೆ, ನಾಪೋಕ್ಲು, ಹೊದ್ದೂರು, ಮರಗೋಡು, ಹಾಕತ್ತೂರು, ಹೊಸ್ಕೇರಿ, ನರಿಯಂದಡ, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ…

Read More

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲಾ ಸೆಷನ್ ನ್ಯಾಯಾಲಯ ಮತ್ತು ತಾಲ್ಲೂಕು ಸೆಷನ್ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಪಾರ್ಟ್ ಟೈಮ್ ಕೆಲಸಕ್ಕೆ ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಕೋರ್ಟ್, ಮಡಿಕೇರಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಮಡಿಕೇರಿ ಇಲ್ಲಿಗೆ ತಲಾ ಒಬ್ಬರು ಬೇಕಾಗಿದ್ದಾರೆ. ಹಾಗೆಯೇ ವಿರಾಜಪೇಟೆ ಮತ್ತು ಪೊನ್ನಂಪೇಟೆ ನ್ಯಾಯಾಲಯದಲ್ಲೂ ಸಹ ಮೂರು ವಿಭಾಗಕ್ಕೆ ತಲಾ ಒಬ್ಬರು, ಹಾಗೂ ಸೋಮವಾರಪೇಟೆ ಮತ್ತು ಕುಶಾಲನಗರದಲ್ಲಿ ತಲಾ ಒಬ್ಬರು ಹೊರಗುತ್ತಿಗೆಯಡಿ ಕರ್ತವ್ಯ ನಿರ್ವಹಿಸಲು ಬೇಕಾಗಿದ್ದಾರೆ. ಅರ್ಜಿ ಸಲ್ಲಿಸಲು ಸೆ.4 ಕೊನೆಯ ದಿನವಾಗಿದೆ. ನಿಬಂಧನೆ ಹಾಗೂ ಷರತ್ತುಗಳಿಗೆ ಹತ್ತಿರದ ನ್ಯಾಯಾಲಯದಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಆ.28 NEWS DESK : ಕುಂಜಿಲ ಕಕ್ಕಬೆ ಗ್ರಾಮದಲ್ಲಿ ಡೆಂಗ್ಯೂ, ಇಲಿ ಜ್ವರ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಸುತ್ತಮುತ್ತಲಿನ ಪರಿಸರ ಸ್ವಚ್ಚವಾಗಿ ಇಟ್ಟುಕೊಂಡರೆ ಡೆಂಗ್ಯೂ, ಇಲಿ ಜ್ವರ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ ಎಂದು ಜಿಲ್ಲಾ ಎಂಟಮಾಲಿಜಿಸ್ಟ್ ಮಂಜುನಾಥ್ ಅವರು ಸಾರ್ವಜನಿಕರಿಗೆ ಆರೋಗ್ಯ ಮಾಹಿತಿ ನೀಡಿದರು. ಯಾವುದೇ ಜ್ವರವಿರಲಿ ಹತ್ತಿರದ ಆಸ್ಪತ್ರೆ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು. ಪ್ರತಿ ಮನೆಯ ಮುಂದಿನ ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮನೆಯ ಒಳಗೆ ಮತ್ತು ಹೊರಗೆ ನೀರು ತುಂಬಿಸುವ ತಾಣಗಳು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಮುಚ್ಚಳದಿಂದ ಮುಚ್ಚಬೇಕು. ಸೊಳ್ಳೆಗಳ ನಿಯಂತ್ರಣಕ್ಕಾಗಿ ಸೊಳ್ಳೆ ನಾಶಕ ಮತ್ತು ಸೊಳ್ಳೆ ಪರದೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜನರಿಗೆ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಅವರು ಡೆಂಗ್ಯೂ ಮತ್ತು ಇಲಿ ಜ್ವರ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿ, ಮನೆಯ ಸುತ್ತಮುತ್ತ ಸ್ವಚ್ಛ…

Read More

ಬೆಂಗಳೂರು ಆ.28 NEWS DESK : ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಉದ್ಯಮಿ ರೋಷನ್ ಜೊತೆ ಸಪ್ತಪದಿ ತುಳಿದಿದ್ದಾರೆ. ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. ನಿರೂಪಕಿ ಅನುಶ್ರೀ ಹಾಗೂ ರೋಷನ್​ ಅದ್ಧೂರಿ ಮದುವೆಗೆ  ಶಿವರಾಜ್ ಕುಮಾರ್, ರಾಜ್​ ಬಿ ಶೆಟ್ಟಿ, ಶರಣ್, ನೆನಪಿರಲಿ ಪ್ರೇಮ್, ಕಾವ್ಯ ಶಾ, ಸೋನಲ್ ಮೊಂಥೆರೋ, ನಟ ನಾಗಭೂಷಣ್, ಚೈತ್ರಾ ಜೆ ಆಚಾರ್, ಸೇರಿದಂತೆ ಸಾಕಷ್ಟು ಸ್ಟಾರ್ ಸೆಲೆಬ್ರಿಟಿಗಳು ಬಂದು ಶುಭ ಹಾರೈಸಿದ್ದಾರೆ.

Read More