ಲೇಖಕ: admin

ಸುಂಟಿಕೊಪ್ಪ ಅ.17 NEWS DESK : ಕಾನ್‍ಬೈಲ್ ಒಕ್ಕೂಟ ಕಾರ್ಯಕ್ಷೇತ್ರದಲ್ಲಿ ಲೆಕ್ಕ ಪರಿಶೋಧನೆಗೆ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಸದಸ್ಯೆ ರಾಧಮಣಿ, ಶ್ರೀ.ಕ್ಷೇ.ಧ.ಗ್ರಾ.ಯೋ.ವಲಯ ಮೇಲ್ವಿಚಾರಕ ಸಂತೋಷ್ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟದ ಕಾರ್ಯಕ್ಷೇತ್ರದ ಲೆಕ್ಕ ಪರಿಶೋಧನೆಯನ್ನು ಆರಂಭಗೊಳಿಸಲಾಗಿದೆ. ಈ ಸಂದರ್ಭ ಲೆಕ್ಕ ಪರಿಶೋಧಕರಾದ ಜಗನ್ನಾಥ್, ಒಕ್ಕೂಟದ ಸೇವಾ ಪ್ರತಿನಿಧಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಇದ್ದರು.

Read More

ಮಡಿಕೇರಿ ಅ.17 NEWS DESK : ಟಿ.ಎ.ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ತೊರೆನೂರು ಗ್ರಾಮದ ಸಾಗರ್ ತೊರೆನೂರು ಅವರನ್ನು ವೇದಿಕೆಯ ರಾಜ್ಯ ಸಂಚಾಲಕಿ ದೀಪಾ ಪೂಜಾರಿ ನೇಮಕ ಮಾಡಿದ್ದಾರೆ. ವೇದಿಕೆ ವತಿಯಿಂದ ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದೇಶ ಪ್ರತಿ ನೀಡಿ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪುತ್ತೂರು ಅ.17 NEWS DESK : ವಿವಿಧ ಕಾರಣಗಳಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ರಕ್ತದ ಅಗತ್ಯವಿರುತ್ತದೆ. ಅಪಘಾತ, ಶಸ್ತ್ರಚಿಕಿತ್ಸೆ, ರಕ್ತಹೀನತೆ, ಲುಕೇಮಿಯಾ ಮುಂತಾದ ಸಂದರ್ಭದಲ್ಲಿ ರಕ್ತ ಅತೀ ಅವಶ್ಯವಾಗಿರುತ್ತದೆ. ಕೆಲವರಂತೂ ರಕ್ತ ಸಿಗದೇ ಪ್ರಾಣವನ್ನು ಕಳೆದುಕೊಳ್ಳುವ ಸಾಧ್ಯತೆಗಳೂ ಇರುತ್ತವೆ. ಈ ಕಾರಣದಿಂದ ರಕ್ತದಾನದ ಮಹತ್ವವನ್ನು ಅರಿತು ಅರ್ಹರೆಲ್ಲರೂ ರಕ್ತದಾನ ಮಾಡುವುದಕ್ಕೆ ಹಿಂಜರಿಯಬಾರದು ಎಂದು ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೃಂದ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್‍ಕ್ರಾಸ್ ಮತ್ತು ಎನ್‍ಎಸ್‍ಎಸ್ ಘಟಕ ಹಾಗೂ ಕೆಎಂಸಿ ರಕ್ತಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತಾಡಿದರು. ರಕ್ತ ನೀಡುವುದಕ್ಕೆ ಇರುವ ಮಾನದಂಡಗಳು ಮತ್ತು ರಕ್ತದಾನದ ನಂತರ ರೋಗಿಗೆ ಅದನ್ನು ನೀಡುವ ಮೊದಲು ಯಾವೆಲ್ಲಾ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎನ್ನುವುದನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ರಕ್ತದಾನವು ಅನೇಕ ಜೀವಗಳನ್ನು ಉಳಿಸಬಲ್ಲದು. ಮನುಷ್ಯನ ಜೀವ…

Read More

ಮಡಿಕೇರಿ ಅ.17 NEWS DESK : ಹಿಂದೂ ಮಲಯಾಳಿ ಸಂಘದ ವತಿಯಿಂದ ಅ.19 ರಂದು ನಗರದಲ್ಲಿ ಮಲಯಾಳಿ ಬಾಂಧವರ ‘ಓಣಾ ಘೋಷಂ-ಓಣಂ ಸಧ್ಯ’ ಹಬ್ಬ ಆಚರಿಸಲಾಗುವುದೆಂದು ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಓಣಂ ಹಬ್ಬವನ್ನು ನಮ್ಮ ಸಂಸ್ಕೃತಿ ಆಚಾರ, ವಿಚಾರಗಳ ಸಂರಕ್ಷಣೆಯೊಂದಿಗೆ, ಅದನ್ನು ಯುವ ಸಮೂಹಕ್ಕೆ ತಿಳಿಯಪಡಿಸುವ ಉದ್ದೇಶದಿಂದ ಆಚರಿಸಿಕೊಮಡು ಬರಲಾಗುತ್ತಿದೆ. ಈ ಬಾರಿಯ ಹಬ್ಬಾಚರಣೆ ನಗರದ ಕಾವೇರಿ ಹಾಲ್‍ನಲ್ಲಿ ನಡೆಯಲಿದೆಯೆಂದು ಹೇಳಿದರು. ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ಮಾತನಾಡಿ, ಅ.19ರ ಭಾನುವಾರ ಬೆಳಿಗ್ಗೆ ಪೂಕಳಂ ಸ್ಪರ್ಧೆ, ಛದ್ಮವೇಷ ಹಾಗೂ ಮಾವೇಲಿ ಮತ್ತು ಚಂಡೆ ವಾದ್ಯದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದರು. ಬೆಳಿಗ್ಗೆ 10.30 ಗಂಟೆಗೆ ಸಾಂಪ್ರದಾಯಿಕ ತಿರುವಾದಿ ನೃತ್ಯದ ನಂತರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ವಹಿಸಲಿದ್ದಾರೆಂದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮೈಸೂರು-ಕೊಡಗು…

Read More

ಮೈಸೂರು, ಅ.17 NEWS DESK : ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ಇದಕ್ಕೆ ಕ್ರಮ ಕೈಗೊಂಡಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಹಾಗೂ ಮೈಸೂರಿನಿಂದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ತಾತ್ಕಾಲಿಕವಾಗಿ ಹೊಸ ರೈಲು ಪರಿಚಯಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು ಈ ಕುರಿತು ಮಾಹಿತಿ ನೀಡಿದ್ದಾರೆ. ಮೈಸೂರಿನಿಂದ ರಾಜಸ್ಥಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಜನದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಂಸದರು ಹೇಳಿದ್ದಾರೆ. ರಾಜಸ್ಥಾನದ ಜನರು ಹಾಗೂ ಇತರರು ಈ…

Read More

ಮಡಿಕೇರಿ NEWS DESK ಅ.16 : ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಸಿದ್ಧತೆಯನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಗುರುವಾರ ಪರಿಶೀಲಿಸಿದರು. ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ  ಪೂಜೆ ಸಲ್ಲಿಸಿ, ತ್ರಿವೇಣಿ ಸಂಗಮ ಭೇಟಿ ನೀಡಿ ವೀಕ್ಷಿಸಿದರು, ಬಳಿಕ ತಲಕಾವೇರಿಯಲ್ಲಿನ ಸಿದ್ಧತೆ ಪರಿಶೀಲಿಸಿದರು. ಭಕ್ತಾದಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಎಚ್ಚರವಹಿಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್,  ತಕ್ಕ ಮುಖ್ಯಸ್ಥರು, ಇತರರು ಇದ್ದರು.

Read More

ವಿರಾಜಪೇಟೆ NEWS DESK  ಅ.16 : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರೆಜಿತ್ ಕುಮಾರ್ ಗುಹ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎ.ಎಸ್ ಮುಸ್ತಫ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2025-28 ನೇ ಸಾಲಿನ ಆಡಳಿತ ಮಂಡಳಿಗೆ ವಿರಾಜಪೇಟೆ ಪ್ರೆಸ್ ಕ್ಲಬ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಪುತ್ತಂ ಪ್ರದೀಪ್, ಖಜಾಂಚಿಯಾಗಿ ಹೇಮಂತ್ ಕುಮಾರ್ ಎಂ.ಎನ್, ನಿರ್ದೇಶಕರಾಗಿ ಕಿಶೋರ್ ಕುಮಾರ್ ಶೆಟ್ಟಿ, ಕೋಲತಂಡ ರಘು‌ ಮಾಚಯ್ಯ ಆಯ್ಕೆಯಾದರು. ಈ ಸಂದರ್ಭ ಮಾತನಾಡಿದ ರೆಜಿತ್,  ಎಲ್ಲರ ಸಹಕಾರದಿಂದ ಸಂಘವನ್ನು ಮುನ್ನಡೆಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಜಿಮ್ಮಿ ಸಿಕ್ವೇರಾ, ಜಿಲ್ಲಾ ವೀಕ್ಷಕರಾದ ಎಂ.ಎನ್ ಚಂದ್ರಮೋಹನ್, ಪ್ರಮುಖರಾದ ನಾಗರಾಜ್ ಶೆಟ್ಟಿ, ಪಾರ್ಥ ಚಿಣ್ಣಪ್ಪ, ಡಿ. ಮಂಜುನಾಥ್, ಕಾಂಗಿರ ಬೋಪಣ್ಣ, ತೇಜಸ್ ಪಾಪಯ್ಯ, ಇಸ್ಮಾಯಿಲ್ ಕಂಡಕ್ಕರೆ, ಎ.ಎನ್ ವಾಸು, ನೌಫಲ್ ಕಡಂಗ, ಕೃಷ್ಣ, ಅಂತೋಣಿ ಹಾಜರಿದ್ದರು.

Read More

ಮಡಿಕೇರಿ NEWS DESK ಅ.16 : ಮಡಿಕೇರಿ ನಗರಸಭಾ ವ್ಯಾಪ್ತಿಯ ವಿವಿಧ ಬಡಾವಣೆಗಳಿಗೆ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಅವರು ಭೇಟಿ ನೀಡಿದರು. ಮಲ್ಲಿಕಾರ್ಜುನ ನಗರ ಮತ್ತು ತ್ಯಾಗರಾಜ ನಗರ ಕಾಲೋನಿಗಳಿಗೆ ಭೇಟಿ ನೀಡಿದ ಅವರು ಮೂಲಭೂತ ಸಮಸ್ಯೆಗಳ ಕುರಿತು ನಗರಸಭಾ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳಿಂದ ಮಾಹಿತಿ ಪಡೆದರು. ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಸ್ಥಳೀಯರು ಮನವಿ ಮಾಡಿದರು. ನಗರಸಭಾ ಅಧ್ಯಕ್ಷರು ಹಾಗೂ ಮಲ್ಲಿಕಾರ್ಜುನ ನಗರ ವಾರ್ಡ್ ನ ಸದಸ್ಯರೂ ಆಗಿರುವ ಪಿ.ಕಲಾವತಿ, ತ್ಯಾಗರಾಜ ನಗರದ ಸದಸ್ಯೆ ಮೇರಿವೇಗಸ್, ಮೈಸೂರು ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯಪಾಲಕ ಅಭಿಯಂತರ ಕುಮಾರ್ ಈಶ್ವರ, ಕಿರಿಯ ಅಭಿಯಂತಕರು ಲಕ್ಷ್ಮೀಶ್ ಗೌಡ, ಮಡಿಕೇರಿ ನಗರಸಭೆಯ ಹಿರಿಯ ಅಭಿಯಂತರ ಸತೀಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವೂಫ್ ಎಂ.ಎನ್, ಡಿಸಿಸಿ ಸದಸ್ಯ ಕಲೀಲ್ ಬಾಷಾ, ವಿನೋದ್, ಬೂತ್ ಸದಸ್ಯರಾದ ಗಣೇಶ್, ಮಲ್ಲೇಶ್, ಕೋದಂಡ ರಾಮ ಸೇವಾ ಸಮಿತಿಯ ಅಧ್ಯಕ್ಷ ನಂಜುಂಡ,…

Read More

ಮಡಿಕೇರಿ ಅ.16 NEWS DESK : ಅಭಿವೃದ್ಧಿ ಹೊಂದುತ್ತಿರುವ ದೇಶವಾದ ಭಾರತದಲ್ಲಿಂದು, ಅತ್ಯಂತ ಸಂಪದ್ಭರಿತವಾದ ಜಾನಪದ ಕಲಾ ಸಂಸ್ಕೃತಿಯತ್ತ ಯುವ ಪೀಳಿಗೆಯ ಆಸಕ್ತಿ ಕ್ಷೀಣಿಸುತ್ತಿರುವುದು ಕಂಡು ಬರುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಕಳವಳ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿತ ‘ಜಿಲ್ಲಾ ಮಟ್ಟದ ಯುವ ಜನೋತ್ಸವ’ವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಇಂದಿನ ಯುವ ಶಕ್ತಿ ಪ್ರಸ್ತುತ ತಂತ್ರಜ್ಞಾನ ಕ್ಷೇತ್ರದತ್ತ ಹೆಚ್ಚಿನ ಆಸಕ್ತಿಯನ್ನು ತೋರಿ ಅದರತ್ತ ಮಾರುಹೋಗುತ್ತಿದೆ. ಮೊದಲು ನಾವು ನಾಡಿನೆಲ್ಲೆಡೆ ಇರುವ ವೈವಿಧ್ಯಮಯವಾದ ಜಾನಪದ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಸಕ್ತರಾಗಬೇಕು. ಇಂದಿನ ಯುವ ಸಮೂಹ ತಮ್ಮ ಬದುಕಿಗೆ ಒಳಿತಾಗುವಂತಹ ವಿದ್ಯಾಭ್ಯಾಸ ಪಡೆಯುವಂತಾಗಬೇಕೇ…

Read More

ಮಡಿಕೇರಿ ಅ.16 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಅ.21 ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ‘ದೀಪೋತ್ಸವ’ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿ ಹೆಚ್.ಎಸ್.ಗೋವಿಂದ ಸ್ವಾಮಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರಾತ್ರಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ದೀಪೋತ್ಸವ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ದೇವಾಲಯದ ಟ್ರಸ್ಟಿ ಕಿರಣ್ ಕುಮಾರ್ ಮಾತನಾಡಿ, ರಾತ್ರಿ 7 ಗಂಟೆಗೆ ಕಳಸ ಪೂಜೆ, 8 ಗಂಟೆಗೆ ಅನ್ನದಾನ, ಪ್ರಸಾದ ವಿನಿಯೋಗ ನಡೆಯಲಿದ್ದು, ರಾತ್ರಿ 9 ಗಂಟೆಗೆ ತಾಯಿಯ ದರ್ಶನ ಹಾಗೂ 9.30 ಗಂಟೆಗೆ ದೀಪೋತ್ಸವ ಪ್ರಾರಂಭವಾಗಲಿದೆ. ನಂತರ ಭಕ್ತಾದಿಗಳು ಎಳ್ಳು ಬತ್ತಿಯನ್ನು ಹಚ್ಚಬಹುದು ಎಂದು ತಿಳಿಸಿದರು. ಮತ್ತೋರ್ವ ಟ್ರಸ್ಟಿ ವಿ.ಸಚಿನ್ ವಾಸುದೇವ್ ಮಾತನಾಡಿ, 108 ಎಳ್ಳು ಬತ್ತಿಯನ್ನು ದೇವಾಲಯದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರ ಆಗಲಿದೆ ಎಂಬ ನಂಬಿಕೆ ಇದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ದೇವಾಲಯದ ಭಕ್ತರಾದ ಎ.ಸಿ.ಚುಮ್ಮಿ…

Read More