ಲೇಖಕ: admin

ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರು ನಗರದ ಅತಿ ಶ್ರೇಷ್ಠ ಹಾಗೂ ಪವಿತ್ರವಾದ ಸ್ಥಳ. ಇದು ಬೆಂಗಳೂರಿನ ಹಳೆಯ ದೇವಸ್ಥಾನಗಳಲ್ಲಿ ಒಂದು. ಈ ದೇವಾಲಯವನ್ನು ಮೊದಲು ದಿಗಂಬರ ದೇವಸ್ಥಾನ ಎಂದು ಕರೆಯಲಾಗುತ್ತಿತ್ತು. ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದ ಬಳಿ ಇದೆ. ಈ ದೇವಾಲಯದ ದೇವರು ತುಂಬಾ ಶಕ್ತಿಶಾಲಿಯಾಗಿರುವುದರಿಂದ ತಮ್ಮ ಎಲ್ಲಾ ಕೋರಿಕೆಗಳು ಈಡೇರುತ್ತವೆ ಎಂದು ಅನೇಕ ಭಕ್ತರು ನಂಬುತ್ತಾರೆ. ಇಡೀ ವರ್ಷ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ ಹಾಗೂ ಧಾರ್ಮಿಕ ಹಬ್ಬಗಳನ್ನು ಆಚರಿಸಲಾಗುತ್ತದೆ. ಗಾಳಿ ಆಂಜನೇಯ ದೇವರ ಆಶೀರ್ವಾದ ಪಡೆಯಲು ಮತ್ತು ತಮ್ಮ ಜೀವನದ ತೊಂದರೆಗಳನ್ನು ನಿವಾರಿಸಿಕೊಳ್ಳಲು ಜನರು ಇಲ್ಲಿಗೆ ಭೇಟಿ ನೀಡುತ್ತಾರೆ. ಆಂಜನೇಯನ ಆಶೀರ್ವಾದ ಪಡೆಯಲು ಭಕ್ತರು ಬೇರೆ ಬೇರೆ ಊರುಗಳು ಹಾಗೂ ರಾಷ್ಟ್ರಗಳಿಂದೆಲ್ಲಾ ಬರುತ್ತಾರೆ. ಇತಿಹಾಸ ::  ಈ ದೇವಾಲಯವನ್ನು 1425ರಲ್ಲಿ ನಿರ್ಮಿಸಲಾಗಿದ್ದು ಇದು ಸುಮಾರು 600 ವರ್ಷಗಳ ಇತಿಹಾಸವನ್ನು ಹೊಂದಿದೆ. ವೃಷಭಾವತಿ ಮತ್ತು ಪಶ್ಚಿಮಾವತಿ ನದಿಗಳ ಸಂಗಮವಾದದ್ದರಿಂದ ವ್ಯಾಸರಾಜನು ಇಲ್ಲಿ ಪ್ರತಿಮೆಯನ್ನು ಸ್ಥಾಪಿಸಿದನೆಂದು ಪುರಾಣ…

Read More

ಬೇಕಾಗುವ ಪದಾರ್ಥಗಳು ::  ಮಶ್ರೂಮ್- 1 ಬಟ್ಟಲು, ಬೆಣ್ಣೆ- 1 ಚಮಚ, ಬೆಳ್ಳುಳ್ಳಿ- ಸ್ವಲ್ಪ (ಸಣ್ಣಗೆ ಕತ್ತರಿಸಿದ್ದು),  ಕಾಳುಮೆಣಸು- 1 ಚಮಚ (ತರಿತರಿಯಾಗಿ ಪುಡಿ ಮಾಡಿದ್ದು),  ಉಪ್ಪು-ರುಚಿಗೆ ತಕ್ಕಷ್ಟು, ಕೊತ್ತಂಬರಿಸೊಪ್ಪು-ಸ್ವಲ್ಪ, ಮಿಕ್ಸಡ್ ಹರ್ಬ್ಸ್- 1 ಚಮಚ ಮಾಡುವ ವಿಧಾನ ::  ಮಶ್ರೂಮ್ ಅನ್ನು ಚೆನ್ನಾಗಿ ತೊಳೆದು ಚಿಕ್ಕದ್ದಾಗಿ ಕತ್ತರಿಸಿಕೊಳ್ಳಿ. ನಂತರ ಗ್ಯಾಸ್ ಮೇಲೆ ಪ್ಯಾನ್ ಇಟ್ಟು ಅದಕ್ಕೆ ಬೆಣ್ಣೆ ಹಾಕಿ ಅದು ಕರಗುತ್ತಿದ್ದಂತೆ ಬೆಳ್ಳುಳ್ಳಿ ಸೇರಿಸಿ 2 ನಿಮಿಷಗಳ ಕಾಲ ಫ್ರೈ ಮಾಡಿ. ನಂತರ ಅದಕ್ಕೆ ಮಶ್ರೂಮ್ ಸೇರಿಸಿ ಮಿಶ್ರಣ ಮಾಡಿ. ಸ್ವಲ್ಪ ಹೊತ್ತಿನ ನಂತರ ಮಶ್ರೂಮ್ ನೀರು ಬಿಡುತ್ತದೆ. ನೀರು ಆವಿಯಾಗುವವರೆಗೆ ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಇದಕ್ಕೆ ಕಾಳುಮೆಣಸಿನ ಪುಡಿ, ಮಿಕ್ಸಡ್ ಹರ್ಬ್ಸ್ ಸೇರಿಸಿ ಮಿಕ್ಸ್ ಮಾಡಿ. ಬಳಿಕ ಉಪ್ಪು, ಕೊತ್ತಂಬರಿಸೊಪ್ಪು ಸೇರಿಸಿದರೆ ರುಚಿಕರವಾದ ಗಾರ್ಲಿಕ್ ಮಶ್ರೂಮ್ ಸವಿಯಲು ಸಿದ್ಧ.

Read More

ಬೆಳಗಾವಿ ಆ.28 NEWS DESK : ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕನ ಅಜಾಗರೂಕ ಚಾಲನೆ ಈ ಅಪಘಾತಕ್ಕೆ ಪ್ರಮುಖ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ. ಬಸ್ ಘಾಟ್ ಪ್ರದೇಶದಲ್ಲಿ ತೀವ್ರ ತಿರುವು ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಮೈಸೂರು ಆ.28 NEWS DESK : ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ‌ ಉದ್ಘಾಟಿಸಿ ಮಾತನಾಡಿದರು. ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ. (ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರ ಹಾಕುವ insertion) ಎಂದರು. ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು…

Read More

ಬೆಂಗಳೂರು ಆ.28 NEWS DESK : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್‌ಸಿಂಗ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಮತ್ತು ಎನ್.ಸಿ.ಸಿ. ಸಹಯೋಗದೊಂದಿಗೆ ಜಾಥಾ ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಂದ ಆಯ್ಕೆಯಾದ 20 ಬೈಕ್ ಸವಾರರು ಭಾಗವಹಿಸಲಿದ್ದಾರೆ. ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ…

Read More

ಕುಶಾಲನಗರ ಆ.28 NEWS DESK : ಕೂಡುಮಂಗಳೂರು ಗ್ರಾ.ಪಂ ಸುಂದರನಗರದಲ್ಲಿ ವಿನಾಯಕ ಯುವಕರ ಸಂಘದ ವತಿಯಿಂದ 31ನೇ ವರ್ಷದ ಅದ್ದೂರಿ ಗಣೇಶೋತ್ಸವವನ್ನು ಆಚರಿಸಲಾಯಿತು. ಮುಂಜಾನೆಯಿಂದಲೇ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಗಣೇಶನ‌ನ್ನು ಪ್ರತಿಷ್ಠಾಪಿಸಲಾಯಿತು. ಗಣಪತಿ ಮಂಟಪವನ್ನು ವಿದ್ಯುತ್ ಅಲಂಕೃತಗಳಿಂದ ಸಿಂಗರಿಸಲಾಯಿತು. ಮೂರು ದಿನಗಳ ಕಾಲ ವಿನಾಯಕನಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದು, ನಂತರ ಅದ್ದೂರಿ ಮೆರವಣಿಗೆ ಸಾಗಿ ಗಣೇಶನನ್ನು‌ ವಿಸರ್ಜಿಸಲಾಗುವುದು. ಭಕ್ತಾಧಿಕಾರಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿದೆ ಎಂದು ವಿನಾಯಕ ಯುವಕರ ಸಂಘದವರು‌ ತಿಳಿಸಿದ್ದಾರೆ‌. ಪ್ರತಿ ವರ್ಷ ಶಾಮಿಯಾನ ಹಾಕಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿತ್ತು. ಈ ಬಾರಿ ಗಣಪತಿ ಪ್ರತಿಷ್ಠಾಪನೆಗೆ ಶಾಶ್ವತವಾದ ಕಟ್ಟಡ ನಿರ್ಮಿಸಬೇಕು ಎಂಬ ಉದ್ದೇಶದಿಂದ ಶೆಡ್ ನಿರ್ಮಿಸಲಾಗಿದೆ.‌ ಎಲ್ಲರ ಸಹಕಾರದೊಂದಿಗೆ ಮುಂದಿನ‌ ದಿನಗಳಲ್ಲಿ ಕಟ್ಟಡವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಕೆಲಸಕ್ಕೆ ಸಂಘ ಮುಂದಾಗಲಿದೆ. ಇದಕ್ಕೆ ಸಹಕರಿಸಿದ ಗಣಪತಿ ಸೇವಾ ಸಮಿತಿ, ಬಣ್ಣಾರಮ್ಮಾ ಸೇವಾ ಸಮಿತಿ, ಹನುಮ ಸೇವಾ ಸಮಿತಿ, ಅಯ್ಯಪ್ಪಸ್ವಾಮಿ ಸೇವಾ ಸಮಿತಿ ಗ್ರಾ.ಪಂ ಸದಸ್ಯರಾದ ಆಶಾ ವೆಂಕಟೇಶ್, ದೀಪಾ ಹಾಗೂ ಕೆ.ಬಿ.ಶಂಶುದ್ಧೀನ್, ಗ್ರಾಮಸ್ಥರು ಹಾಗೂ ಸರ್ವ…

Read More

ಮಡಿಕೇರಿ ಆ.28 NEWS DESK :  ಕರಿಕೆ ಚೆತ್ತುಕಾಯದಲ್ಲಿ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಗಣಪತಿ ಹೋಮ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ನಂತರ ಭಜನೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಸಂಜೆ ಮಕ್ಕಳ ದೀಪದ ಮೆರವಣಿಗೆ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More

ಕುಶಾಲನಗರ ಆ.28 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಸಭೆಯು ಸೆ.14 ರಂದು ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ  ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಬಸವ ಭವನದಲ್ಲಿ  ಸಭೆ ನಡೆಯಲಿದೆ. ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರಿಗೆ ಈಗಾಗಲೇ ಕೇಂದ್ರ ಕಛೇರಿಯಿಂದ ಸಭೆಯ ಆಹ್ವಾನವನ್ನು ಅಂಚೆಯಲ್ಲಿ ಕಳಿಸಲಾಗಿದೆ. ಸಭೆಯಲ್ಲಿ ಪಾಲ್ಗೊಳ್ಳುವವರಿಗೆ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಹಮ್ಮಿಕೊಳ್ಳಲಾಗಿದ್ದು, ಆಗಮಿಸುವವರು ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಮೊಬೈಲ್ ಸಂಖ್ಯೆ 94821 92798 ಗೆ ಸೆ.5 ರ ಒಳಗಾಗಿ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಮಡಿಕೇರಿ ಆ.28 NEWS DESK : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ 43ನೇ ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀ ಗಣೇಶೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಅರ್ಚಕರು ಗಣಪತಿ ಹೋಮ ನೆರವೇರಿಸಿ,  ಶ್ರೀ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ನಂತರ ಪ್ರಾರ್ಥನೆ, ವಿವಿಧ ಅಭಿಷೇಕ, ಕುಂಕುಮಾರ್ಚನೆ, ಪಂಚಕಜ್ಜಾಯ ಪ್ರಸಾದ ಅರ್ಪಣೆ, ನೈವೇದ್ಯ ಪ್ರಸಾದವನ್ನು ಅರ್ಪಿಸಿ ಮಹಾಪೂಜೆಯನ್ನು ನೆರವೇರಿಸಿದರು. ಭಕ್ತಾದಿಗಳು ಸಂಕಲ್ಪವನ್ನು ಮಾಡಿಸಿ ಮಹಾಗಣಪತಿ ಪೂಜಾ ಸೇವೆಯನ್ನು ನಡೆಸಿ ಕೊಟ್ಟರು. ನಂತರ ಪ್ರಸಾದ ವಿತರಣೆ ಹಾಗೂ ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣಾ ಸೇವೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ರುದ್ರಮ್ ಚಂಡೆ ಬಳಗದವರಿಂದ ಚಂಡೆ ಸೇವೆ ಹಾಗೂ ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆದವು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು,…

Read More

ವಿರಾಜಪೇಟೆ ಆ.28 NEWS DESK : ಜಿಲ್ಲೆಯಲ್ಲಿನ 14 ತುಳು ಭಾಷಿಕ ಸಮುದಾಯಗಳನ್ನು ಒಂದುಗೂಡಿಸಿ, ಪರಸ್ಪರ ಸಹಕಾರದಿಂದ, ಒಗ್ಗಟ್ಟಾಗಿ ತುಳುವೆರೆ ಜನಪದ ಕೂಟವನ್ನು ಬಲಿಷ್ಠ ಸಂಘಟನೆಯನ್ನಾಗಿ ರೂಪಿಸಲಾಗುವುದು ಎಂದು ತುಳುವೆರೆ ಜನಪದ ಕೂಟದ ಜಿಲ್ಲಾ ಘಟಕದ ಉಪಾಧ್ಯಕ್ಷ ಆನಂದ ರಘು ಪೂಜಾರಿ ಹೇಳಿದರು. ಪಟ್ಟಣದ ಪುರಭವನದಲ್ಲಿ ನಡೆದ ತುಳುವೆರೆ ಜನಪದ ಕೂಟದ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ತುಳುವೆರೆ ಜನಪದ ಕೂಟದ ತಾಲ್ಲೂಕು ಘಟಕದ ಅಧ್ಯಕ್ಷ ಶಬರೀಶ್ ಶೆಟ್ಟಿ ಮಾತನಾಡಿ, ಮುಂದಿನ ದಿನಗಳಲ್ಲಿ ಭಾಷಿಕ ಸಮುದಾಯದ ಎಲ್ಲರನ್ನು ಒಟ್ಟಾಗಿ ಸೇರಿಸಿಕೊಂಡು ಕೂಟದ ವತಿಯಿಂದ ಹಲವು ಸಮುದಾಯ ಹಾಗೂ ಜನಪರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ತುಳುವರೆ ಜನಪದ ಕೂಟದಿಂದ ಸ್ಥಾಪನೆಯಾದ ಸಹಕಾರ ಸಂಘವನ್ನು ಅಭಿವೃದ್ಧಿಪಡಿಸುವ ಕಾರ್ಯ ಮುಂದಿನ ದಿನಗಳಲ್ಲಿ ಆಗಲಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿ ಸಹಕಾರ ಸಂಘದ ಆರ್ಥಿಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು. ಕೂಟದ ನಿರ್ದೆಶಕ ಮದನ್ ಶೆಟ್ಟಿ ಮಾತನಾಡಿ ಕೂಟದ ಸದಸ್ಯರಿಗೆ ಅವರ ಅವಲಂಬಿತರಿಗೆ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಂದುವರಿಯಲು…

Read More