ಮಡಿಕೇರಿ ಜೂ.18 NEWS DESK : ಕರ್ನಾಟಕ ವಿಧಾನಸಭೆಯಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಸದಸ್ಯರ ಆಯ್ಕೆಗಾಗಿ ನಡೆಯುತ್ತಿರುವ ಚುನಾವಣೆಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿ ತಮ್ಮ ಮತವನ್ನು ಚಲಾಯಿಸಿದರು. ನಂತರ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾದದು ಎಂದು ಶಾಸಕರು ಹೇಳಿದರು.
ಲೇಖಕ: admin
ಮಡಿಕೇರಿ ಜೂ.18 NEWS DESK : ಸ್ಟಾಫ್ ಸೆಲೆಕ್ಷನ್ ಕಮಿಷನ್ ಭಾರತ ಸರ್ಕಾರ ಇವರು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಗ್ರೂಪ್ `ಬಿ` ನಾನ್ ಗೆಜೆಟೆಡ್ ಮತ್ತು ಗ್ರೂಪ್ `ಸಿ’ ಹುದ್ದೆಗಳನ್ನು ಭರ್ತಿ ಮಾಡಲು Combined Graduate Level Examination- 2026 ರ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 22 ಕೊನೆಯ ದಿನವಾಗಿದೆ. ವಿದ್ಯಾರ್ಹತೆ: ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ: 18 ರಿಂದ 32 ವರ್ಷಗಳು. ಅರ್ಜಿ ಸಲ್ಲಿಸಲು ಜೂನ್, 22 ಕೊನೆಯ ದಿನವಾಗಿದೆ. ಖಾಲಿ ಹುದ್ದೆಗಳು 12,256, ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ -2ಎ, 2ಬಿ, 3ಎ, 3ಬಿ, ಗೆ ಸೇರಿದ ಪುರುಷ ಅಭ್ಯರ್ಥಿಗಳಿಗೆ ರೂ.100. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿ.ಡಬ್ಯ್ಲೂ.ಡಿ, ಇ.ಎಸ್.ಎಮ್, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್ಸೈಟ್: https://ssc.gov.in…
ಮಡಿಕೇರಿ ಜೂ.18 NEWS DESK : ತಾಲ್ಲೂಕಿನ ಅಬ್ಬಿ ಜಲಪಾತ ಮತ್ತು ಮಾಂದಲ್ ಪಟ್ಟಿಗೆ ತೆರಳುವ ಮಾರ್ಗದ ಜಂಕ್ಷನ್ ಬಳಿ ಮತ್ತು ಉಡೋತ್ಮೊಟ್ಟೆ ಬಳಿಯ ಗಾಜಿನ ಸೇತುವೆ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಮೊದಲಿಗೆ ಅಬ್ಬಿ ಜಲಪಾತ ಮತ್ತು ಮಾಂದಲ್ ಪಟ್ಟಿಗೆ ತೆರಳುವ ಮಾರ್ಗದ ಜಂಕ್ಷನ್ ಬಳಿಯ ಗಾಜಿನ ಸೇತುವೆ ವೀಕ್ಷಿಸಿದ ಜಿಲ್ಲಾಧಿಕಾರಿ ಅವರು ಗಾಜಿನ ಸೇತುವೆ ನಿರ್ಮಾಣ ಮಾಡಿರುವ ಜಾಗ, ಗಾಜಿನ ಸೇತುವೆ ನಿರ್ಮಾಣ ಮಾಡಲು ಅನುಮತಿ ಪಡೆಯಲಾಗಿದೆಯೇ, ನಿರ್ಮಾಣ ಸಂದರ್ಭದಲ್ಲಿ ಎಂಜಿನಿಯರ್ಗಳ ದೃಢೀಕರಣ ಪತ್ರ, ಹಾಗೆಯೇ ಪ್ರವಾಸಿಗರ ಅನುಕೂಲಕ್ಕಾಗಿ ವಾಹನ ನಿಲುಗಡೆಗೆ ಸ್ಥಳಾವಕಾಶ, ಪ್ರವಾಸಿಗರ ವೀಕ್ಷಣೆಗೆ ಎಷ್ಟು ಕಾಲಾವಕಾಶ ಮತ್ತು ಪ್ರವಾಸಿಗರಿಗೆ ನಿಗದಿ ಮಾಡಿರುವ ಶುಲ್ಕ ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಪ್ರವಾಸೋದ್ಯಮ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು. ಬಳಿಕ ಉಡೋತ್ಮೊಟ್ಟೆ ಬಳಿಯ ಗಾಜಿನ ಸೇತುವೆ ವೀಕ್ಷಿಸಿದ ಜಿಲ್ಲಾಧಿಕಾರಿ ಅವರು ಪ್ರವಾಸಿಗರ ಸುರಕ್ಷತೆಗೆ ಒತ್ತು ನೀಡಬೇಕು. ವಾಹನ ನಿಲುಗಡೆಗೆ ಜಾಗ ಇಲ್ಲದಿರುವುದರಿಂದ…
ಬೆಂಗಳೂರು, ಜೂ.18 NEWS DESK : “ಕರ್ತವ್ಯ ಆಪ್ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ” ಎಂಬ ಕೆಲವು ಮಾಧ್ಯಮಗಳ ವರದಿಗಳಿಗೆ ಸರ್ಕಾರವು ಅಧಿಕೃತ ಸ್ಪಷ್ಟೀಕರಣವನ್ನು ನೀಡಿದೆ. ಪ್ರಸ್ತುತ ‘ಕರ್ತವ್ಯ’ (KAAMS) ಯೋಜನೆಯಡಿ ಉದ್ಯೋಗಿಗಳ ನೋಂದಣಿ ಪ್ರಕ್ರಿಯೆಯು ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಶೇಕಡಾ 70.6 ಕ್ಕಿಂತ ಹೆಚ್ಚು ನೌಕರರು ಯಶಸ್ವಿಯಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ವೇಗದ ಪ್ರಗತಿ : ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ 2,13,925 ನೌಕರರ ಅಪೂರ್ಣ ನೋಂದಣಿಯ ಅಂಕಿ-ಅಂಶಗಳು ಜೂನ್ 12, 2026 ರವರೆಗಿನ ಮಾಹಿತಿಯಾಗಿದ್ದವು. ಆದರೆ ಕಳೆದ 4-5 ದಿನಗಳಲ್ಲಿ ನಡೆಸಲಾದ ವಿಶೇಷ ಆಂದೋಲನದಿಂದಾಗಿ ಈ ಸಂಖ್ಯೆ 2026 ನೇ ಜೂನ್ 18 ರ ವೇಳೆಗೆ 1,40,433 ಕ್ಕೆ ಕುಸಿದಿದೆ. ಅಂದರೆ ಕೇವಲ ಒಂದು ವಾರದಲ್ಲಿ ನೋಂದಣಿಯಾಗದ ನೌಕರರ ಸಂಖ್ಯೆಯಲ್ಲಿ ಶೇ. 34.4 ರಷ್ಟು ಭಾರಿ ಇಳಿಕೆಯಾಗಿದೆ. :: ನೋಂದಣಿ ಸ್ಥಿತಿಗತಿ :: ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ದತ್ತಾಂಶದ ಪ್ರಕಾರ, ಒಟ್ಟು 43 ಪ್ರಮುಖ ಇಲಾಖೆಗಳು…
ಮಡಿಕೇರಿ NEWS DESK ಜೂ.18 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಜೂ.26ರಂದು ವಿಚಾರಗೋಷ್ಠಿ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಬೆಳಿಗ್ಗೆ 10.30 ಗಂಟೆಗೆ ವಿಚಾರಗೋಷ್ಠಿ ನಡೆಯಲಿದ್ದು, ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ವಿಕ್ರಮ್ ಹೆಗಡೆ ಅವರು “ಕೊಡವ ಧಾರ್ಮಿಕ ಆಚರಣೆ, ‘ಕೋವಿ-ತೋಕ್” ವಿಧಿ 25 ಮತ್ತು 26ರ ಅಡಿಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆ” ಕುರಿತು ವಿಷಯ ಮಂಡಿಸಲಿದ್ದಾರೆ. ಸುಪ್ರೀo ಕೋರ್ಟ್ ಹಾಗೂ ನ್ಯೂಯಾರ್ಕ್ನ ವಕೀಲರಾದ ಹಿಮಾ ಲಾರೆನ್ಸ್ ವಿಕ್ರಮ್ ಹೆಗಡೆ ಅವರು “ಅಂತರರಾಷ್ಟ್ರೀಯ ವಿಶ್ವಸಂಸ್ಥೆಯ ಕಾನೂನಿನಡಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ಸ್ವಯಂ-ಆಡಳಿತ ಮತ್ತು ಅದಿಮ ಸಂಜಾತ ಕೊಡವ ಜನಾಂಗೀಯ ಗುರುತು” ವಿಷಯದ ಕುರಿತು ಮಾತನಾಡಲಿದ್ದಾರೆ. ಈ ವಿಚಾರಗೋಷ್ಠಿಯು ಕೊಡವರ ವಿಶೇಷ ಸ್ಥಾನಮಾನಕ್ಕಾಗಿ ನಮ್ಮ ದೀರ್ಘಕಾಲದ ಆಕಾಂಕ್ಷೆಗಳ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಪ್ರಸ್ತುತ ಸಂದರ್ಭದಲ್ಲಿ…
ಮಡಿಕೇರಿ NEWS DESK ಜೂ 18 : ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲದ ಯೋಗವು , ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಸಮತೋಲನಕ್ಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಇಂಥ ಯೋಗ ವಿದ್ಯೆಯನ್ನು ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು ಎಂದು ಹಿರಿಯ ಪತ್ರಕರ್ತ ಜಿ.ಚಿದ್ವಿಲಾಸ್ ಅಭಿಪ್ರಾಯಪಟ್ಟರು . ನಗರದ ರೆಡ್ ಬಿಕ್ಸ್ ನ ಸತ್ಕಾರ ಸಭಾಂಗಣದಲ್ಲಿ ನಡೆದ ಯೋಗ ಭಾರತಿ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಯೋಗಾಭ್ಯಾಸದಿಂದ ಒಬ್ಬ ವ್ಯಕ್ತಿ ಶಾರೀರಿಕ ದೃಢತೆ ಮತ್ತು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತಾನೆ, ನಿರಂತರ ಯೋಗ ಪ್ರಕ್ರಿಯೆಯಿಂದ ವ್ಯಕ್ತಿಯಲ್ಲಿ ತಾಳ್ಮೆ ಸಹನೆ ಸಹಾನುಭೂತಿ, ಪ್ರೀತಿ ವಾತ್ಸಲ್ಯ ಸಹಜವಾಗಿಯೇ ಮೈಗೂಡಿಕೊಳ್ಳುವುದರಿಂದ ಸಮಾಜದ ಆರೋಗ್ಯವೂ ಬಲಗೊಳ್ಳುತ್ತದೆ ಎಂದು ಅವರು ವಿಶ್ಲೇಷಿಸಿದರು. ಭಾರತೀಯ ಪ್ರಾಚೀನ ಶಿಕ್ಷಣದಲ್ಲಿ ಒಂದಾದ ಯೋಗ, ಪ್ರಾಣಾಯಾಮ ಮತ್ತು ಧ್ಯಾನ ಇವುಗಳು ಒಂದು ಹಂತದಲ್ಲಿ ಮಡಿವಂತಿಕೆಯಿಂದ ಕೂಡಿದ್ದು ಇತ್ತೀಚಿನ ವರ್ಷಗಳಲ್ಲಿ ಇಡೀ ವಿಶ್ವವೇ ಅದನ್ನು ಸ್ವೀಕರಿಸಿ ಜೂನ್ 21 ಅನ್ನು ವಿಶ್ವ ಯೋಗ ದಿನ ಎಂದು…
ಮಡಿಕೇರಿ NEWS DESK ಜೂ.17 : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಇದೇ ಮೊದಲ ಬಾರಿಗೆ ಜೂ.23 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಜಿಲ್ಲಾ ಮಟ್ಟದ ಪ್ರಥಮ ಶರಣ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ಅವರು ಶರಣರ ಚಿಂತನೆಗಳ ಬೆಳಕಿನಿಂದ ಸಮಾನತೆಯ ಸಮಾಜ ಕಟ್ಟುವ ಸಂದೇಶಗಳೊoದಿಗೆ 12ನೇ ಶತಮಾನದ ವಚನಕಾರರ ಸಂದೇಶಗಳನ್ನು ಸಮಾಜದಲ್ಲಿ ಬಿತ್ತುವ ಮಹತ್ತರವಾದ ಕಾಯಕ ಕಳೆದ 40 ವರ್ಷಗಳಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯುತ್ತಾ ಬಂದಿದೆ. ಸುತ್ತೂರು ಮಠದ 24ನೇ ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರು ಗೌರವ ಅಧ್ಯಕ್ಷರಾಗಿದ್ದಾರೆ. ಇವರ ಸಾನಿಧ್ಯದಲ್ಲಿ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು. ಸಮ್ಮೇಳನಾಧ್ಯಕ್ಷರಾಗಿರುವ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರಗೌಡ ಸೇರಿದಂತೆ ನಾಡಿನ ಅನೇಕ ಶರಣ ಸಾಹಿತ್ಯದ ಚಿಂತಕರು,…
ಮಡಿಕೇರಿ NEWS DESK ಜೂ.18 : ದೇಶ ರಕ್ಷಣೆಗಾಗಿ ರಾತ್ರಿ ಹಗಲೆನ್ನದೆ ದುಡಿದ ಮಾಜಿ ಸೈನಿಕರ ಸಮಸ್ಯೆಗಳಿಗೆ ಪ್ರಸ್ತುತ ಇರುವ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಸುಮಾರು ಎರಡು ದಶಕಗಳ ಅವಧಿಯಲ್ಲಿ ಮಾಜಿ ಸೈನಿಕರು ಸಲ್ಲಿಸಿರುವ ಜಾಗ ಮಂಜೂರಾತಿಯ 1500ಕ್ಕೂ ಹೆಚ್ಚಿನ ಅರ್ಜಿಗಳು ಶೀಘ್ರ ವಿಲೇವಾರಿಯಾಗಲಿದೆ ಎಂದು ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಪ್ರಮುಖರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮೇಜರ್ ಜನರಲ್ ಬಿ.ಎ.ಕಾರ್ಯಪ್ಪ(ನಿವೃತ್ತ) ಅವರು, ಮಾಜಿ ಸೈನಿಕರು ಸಲ್ಲಿಸಿರುವ 1500ಕ್ಕೂ ಅರ್ಜಿಗಳು ಇಂದಿಗೂ ವಿಲೇವಾರಿಯಾಗದೆ ಹಾಗೆಯೇ ಬಾಕಿ ಉಳಿದಿವೆ. ಕಳೆದ ಐದು ವರ್ಷಗಳಿಂದ ಮಾಜಿ ಸೈನಿಕರ ಸಂಕಷ್ಟಗಳನ್ನು ಕೇಳುವ ಮತ್ತು ಅವುಗಳನ್ನು ಪರಿಹರಿಸುವ ಕುಂದುಕೊರತೆ ಸಭೆೆಗಳೇ ನಡೆದಿರಲಿಲ್ಲ. ಈಗ ಇರುವ ಜಿಲ್ಲಾಧಿಕಾರಿಗಳು ಸುದೀರ್ಘ ಅವಧಿಯ ಬಳಿಕ ಕುಂದುಕೊರತೆ ಸಭೆ ನಡೆಸಿ ನಮ್ಮ ಅಳಲು ಆಲಿಸಿದ್ದಾರೆ ಎಂದರು. ಸಭೆಯಲ್ಲಿ ಮಾಜಿ ಯೋಧರ ಜಾಗ ಮಂಜೂರಾತಿ, ನಿವೇಶನ ಮಂಜೂರಾತಿ, ಸಮುದಾಯ ಭವನ ಮೊದಲಾದವುಗಳ ಬಗ್ಗೆ…
ಸುಂಟಿಕೊಪ್ಪ NEWS DESK ಜೂ.18: ಪ್ರಸ್ತುತ ಕಾಲಘಟ್ಟದಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚಾಗಿದ್ದು ಸುಸಂಸ್ಕೃತರ ಸಂಖ್ಯೆ ಕ್ಷೀಣವಾಗುತ್ತಿರುವುದು ವಿಷಾದನೀಯ ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು. ಅವರು ಬುಧವಾರದಂದು ಕಂಬಿಬಾಣೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊoಡ ಎಲ್ಕೆಜಿ ಮತ್ತು ಯುಕೆಜಿ ಆಂಗ್ಲ ಮಾದ್ಯಮ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು, ಪ್ರತಿಯೊಬ್ಬರಿಗೂ ನನ್ನ ಶಾಲೆ ನಮ್ಮೂರ ಶಾಲೆ ಎಂಬ ಅಭಿಮಾನವಿರಬೇಕು. ಹಳೆಯ ವಿದ್ಯಾರ್ಥಿಗಳ ಸಂಘ ಅತ್ಯಂತ ಸಂಘಟಿತವಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದ ಅವರು ಭಾರತದ ಮೊದಲ ಪ್ರಧಾನಿ ನೆಹರು ಹೇಳಿದ ಉತ್ತಮ ಜ್ಞಾನವಂತರಾಗಿ ಹೊರಹೊಮ್ಮಲು ಶಿಕ್ಷಣದಿಂದ ಮಾತ್ರ ಸಾಧ್ಯ ಭಾರತ ಜ್ಞಾನವಂತರ ನಾಡಗಿದ್ದು ಪ್ರಪಂಚ ನಮ್ಮಿಂದ ಜ್ಞಾನ ಪಡೆಯಲು ಮುಂದಾಗಿದೆ. ಆದರೆ ನಮ್ಮ ಯುವಜನಾಂಗ ಮಾದಕ ವ್ಯಸನಿಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ ಈ ಹಿನ್ನಲೆಯಲ್ಲಿ ಸುಶಿಕ್ಷಿತರೆನ್ನಿಸಿಕೊಂಡರೇ ಸಾಲದು ಸುಸಂಸ್ಕೃತರಾಗಿ ನಾವು ನಮ್ಮ ಯುವಜನಾಂಗವನ್ನು ತರಬೇತುಗೊಳಿಸಬೇಕಾಗಿದೆ ಎಂದು ಅವರು ಕರೆ ನೀಡಿದರು. ಆಂಗ್ಲ ಮಾದ್ಯಮದಲ್ಲಿ ಶಿಕ್ಷಣ ನಮ್ಮ ಬದುಕಿನ ಭಾಗ ಮತ್ತು…
ಮಡಿಕೇರಿ ಜೂ.17 NEWS DESK : ಪ್ರವಾಸೋದ್ಯಮ ಇಲಾಖೆ ಹಾಗೂ ಸರ್ಕಾರದ ವತಿಯಿಂದ ಹೋಂಸ್ಟೇ ಅಸೋಸಿಯೇಷನ್ ನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮಾಲೀಕರ ಸಭೆ ನಡೆಯಿತು. ನಗರದ ಕ್ರಿಸ್ಟಲ್ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಹೋಂ ಸ್ಟೇ ನಡೆಸಲು ಸೂಚಿಸಿರುವ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಿರುವ ಹಾಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸೂಚಿಸಲಾಯಿತು.






