ಲೇಖಕ: admin

ಮಡಿಕೇರಿ ಜು.13 NEWS DESK : 2026-2027ನೇ ಸಾಲಿನ ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಹಾಗೂ  ತರಗತಿ ಪ್ರತಿನಿಧಿಗಳ ಚುನಾವಣೆ ನಡೆಯಿತು. ಪ್ರತಿ ತರಗತಿಯಿಂದ ತಲಾ ಇಬ್ಬರು ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು.  ಪ್ರಥಮ ಕಲಾ ವಿಭಾಗದಿಂದ ಅಭಿಜಿತ್ ಹೆಚ್.ಎನ್. ಮತ್ತು ನವ್ಯ ಹೆಚ್. ಜಿ.,ದ್ವಿತೀಯ ಕಲಾ ವಿಭಾಗದಿಂದ ವೇದಾಂತ್ ಪೂವಯ್ಯ ಎಂ. ಟಿ ಮತ್ತು ಪ್ರಜ್ಞಾ. ಪಿ.ಸಿ., ಪ್ರಥಮ ವಾಣಿಜ್ಯ ವಿಭಾಗದಿಂದ ದ್ವಿತೀಯ ವಾಣಿಜ್ಯ ವಿಭಾಗದಿಂದ  ಸಂಜು ಪಿ.ಟಿ ಮತ್ತು ಕಾವ್ಯ ವೈ.ಎಸ್. ಪ್ರಥಮ ವಿಜ್ಞಾನ ವಿಭಾಗದಿಂದ ಮೊಹಮ್ಮದ್ ಹಿಷನ್ ಕೆ.ಎಸ್ ಮತ್ತು ಫ್ಲೆವಿಯ ಅಗ್ನಿಸ್ ಸಿ.ಫ್. ದ್ವಿತೀಯ ವಿಜ್ಞಾನ ವಿಭಾಗದಿಂದ ರಕ್ಷಿತಾ ಎಂ.ಎ ನಂತರ ನಡೆದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾವ್ಯ ವೈ.ಎಸ್.ದ್ವಿತೀಯ ವಾಣಿಜ್ಯ ವಿಭಾಗ, ಜಂಟಿ ಕಾರ್ಯದರ್ಶಿಗಳಾಗಿ ಸಂಜು ಪಿ. ಟಿ. ದ್ವಿತೀಯ ವಾಣಿಜ್ಯ ವಿಭಾಗ ಮತ್ತು ರಕ್ಷಿತಾ ಎಂ.ಎ.ದ್ವಿತೀಯ ವಿಜ್ಞಾನ ವಿಭಾಗ ಇವರು ಅವಿರೋಧವಾಗಿ ಆಯ್ಕೆಯಾದರು.…

Read More

ಮಡಿಕೇರಿ NEWS DESK ಜು.13 : ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ 02/2027ರ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಇಲ್ಲವೇ ಎರಡು ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50 ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ವಯೋಮಿತಿ : ಅಭ್ಯರ್ಥಿಯು 2005 ಜುಲೈ, 01 ರಿಂದ 2010 ರ ಜನವರಿ, 01 ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ ರೂ.550 ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‍ಸೈಟ್ https://iafrecruitment.edcil.co.in ನ ಮುಖಾಂತರ ಮಾಹಿತಿ ಪಡೆಯಬಹುದು.…

Read More

ಮಡಿಕೇರಿ NEWS DESK ಜು.13 : ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅಲ್ಪಸಂಖ್ಯಾತರ ಅಭಿವೃದ್ಧಿಗೆ ನಿಗದಿಯಾಗಿರುವ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಅವರ 15 ಅಂಶದ ಕಾರ್ಯಕ್ರಮಗಳ ಕುರಿತು ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಕ್ಷಣ, ಆರೋಗ್ಯ, ಮೂಲ ಸೌಲಭ್ಯ ಸೇರಿದಂತೆ ವಿವಿಧ ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಸಕಾಲದಲ್ಲಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಅಲ್ಪಸಂಖ್ಯಾತರಿಗಾಗಿ ಅಂಗನವಾಡಿ, ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿ ಜೊತೆಗೆ ಮೂಲ ಸೌಲಭ್ಯ ಕಲ್ಪಿಸಬೇಕು. ಜೊತೆಗೆ ನಿವೇಶನ ಇಲ್ಲದಿದ್ದಲ್ಲಿ ಕೂಡಲೇ ಮಾಹಿತಿಯ ಪ್ರಸ್ತಾವನೆ ಸಲ್ಲಿಸುವಂತೆ ಸೋಮಶೇಖರ್ ಅವರು ಸಂಬoಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. *ಎಮ್ಮೆಮಾಡು ಶಾಲೆಯಲ್ಲಿ ಸಮಸ್ಯೆ* ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಹನೀಫ್ ಅವರು ಅಲ್ಪಸಂಖ್ಯಾತರ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ…

Read More

ಹಾರಂಗಿ NEWS DESK ಜು.13 : ಕೊಡಗು ಜಿಲ್ಲೆಯ ಕುಶಾಲನಗರ ಹುದುಗೂರು ಬಳಿ ಹಾರಂಗಿ ಅಣೆಕಟ್ಟೆ ಆವರಣಕ್ಕೆ ಕಾಡಾನೆ ಲಗ್ಗೆ ಮಾಡಿ ಅಲ್ಲಿನ ಗೇಟ್ ಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ. ಮೀಸಲು ಅರಣ್ಯದಿಂದ ಹಾರಂಗಿ ಅಣೆಕಟ್ಟು ಉತ್ತರ ದಿಕ್ಕಿನ ದ್ವಾರದ  ಗೇಟ್ ಮೂಲಕ ಬಂದಿರುವ ಕಾಡಾನೆ ಅಲ್ಲಿರುವ ಆವರಣ ಗೋಡೆಯ ಪಿಲ್ಲರ್, ಕಬ್ಬಿಣದ ಗೇಟ್ಗಳನ್ನು ಹಾನಿ ಮಾಡಿದ ದೃಶ್ಯ ಆ ಭಾಗದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಗಳಲ್ಲಿ ದಾಖಲಾಗಿದೆ. ಸೋಮವಾರ ಮುಂಜಾನೆ 4 ಗಂಟೆಗೆ ಈ ಘಟನೆ ನಡೆದಿದ್ದು ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಆನೆಯನ್ನು ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಣೆಕಟ್ಟು ವಿಭಾಗದ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜು.13 : ಕೊಡಗಿನ ಕೂಡಿಗೆಯ ಸೈನಿಕ ಶಾಲೆ ದೇಶದಲ್ಲೇ ಅತ್ಯಂತ ವೇಗವಾಗಿ ಪ್ರಗತಿಯನ್ನು ಕಾಣುತ್ತಿರುವ ಸೈನಿಕ ಶಾಲೆಗಳಲ್ಲಿ ಒಂದಾಗಿದೆ ಎಂದು ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ತಿಳಿಸಿದ್ದಾರೆ. ಸೈನಿಕ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ 7ನೇ ಹಳೇ ವಿದ್ಯಾರ್ಥಿಗಳ ಸಮಾವೇಶ “ಕೋಡಾಕ್”ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಾಲೆಯು ಚಾರಿತ್ರ್ಯ ನಿರ್ಮಾಣ, ಶೈಕ್ಷಣಿಕ ಶ್ರೇಷ್ಠತೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದೆ. ಭಾರತೀಯ ನೌಕಾಪಡೆಯ ಸ್ಕ್ವಾಡ್ರನ್ ಲೀಡರ್ ದೀಪಕ್ ನಾಯಕ್ ಅವರು ಪ್ರಸಕ್ತ ಸಾಲಿನ ಸೆಪ್ಟೆಂಬರ್‌ನಲ್ಲಿ ಆಡಳಿತಾಧಿಕಾರಿಯಾಗಿ ಶಾಲೆಗೆ ಸೇರ್ಪಡೆಯಾಗುವ ವಿಚಾರವನ್ನು ಹಂಚಿಕೊoಡರಲ್ಲದೆ, ಶಾಲೆಯೊಂದಿಗಿನ ಹಳೇ ವಿದ್ಯಾರ್ಥಿಗಳ ಸಂಬoಧವನ್ನು ಶ್ಲಾಘಿಸಿದರು. ಕೋಡಾಕ್ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಶಫೀವುಲ್ಲಾರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯೊoದಿಗಿನ ಬಾಂಧವ್ಯವನ್ನು ಬಲಪಡಿಸಲು ಮತ್ತು ಶಾಲೆಯ ಬೆಳವಣಿಗೆಗೆ ಹಳೆ ವಿದ್ಯಾರ್ಥಿಗಳ ಸಂಘ ಕೈಗೊಂಡಿರುವ ವಿವಿಧ ಕಾರ್ಯಗಳ ಕುರಿತು ವಿವರಿಸಿದರು. *ಬಹುಮಾನ ವಿತರಣೆ* ಈ ಸಂದರ್ಭ ಕರ್ನಲ್ ಅಮರ್ ಜೀತ್ ಸಿಂಗ್…

Read More

ಮಡಿಕೇರಿ NEWS DESK ಜು.13 : ದೇಶ ಸೇವೆ ಮಾಡಿ ತವರಿಗೆ ಮರಳಿದ ಅರೆಸೇನಾ ಪಡೆಯ ನಿವೃತ್ತ ಯೋಧರನ್ನು ಕಡೆಗಣಿಸುವುದು ಸರಿಯಲ್ಲ ಎಂದು ಕೊಡಗು ಜಿಲ್ಲಾ ಅರೆಸೇನಾ ಪಡೆ ನಿವೃತ್ತ ಯೋಧರ ಒಕ್ಕೂಟ ಬೇಸರ ವ್ಯಕ್ತಪಡಿಸಿದೆ. ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಅರೆಸೇನಾ ಪಡೆ ನಿವೃತ್ತ ಯೋಧರ ಒಕ್ಕೂಟದ 14ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಜಿ.ಯತೀಶ್ ಅವರು ಅರೆಸೇನಾ ಪಡೆಯ ನಿವೃತ್ತ ಯೋಧರಿಗೆ ನಿವೇಶನ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಲು ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ದೇಶ ಸೇವೆ ಮಾಡಿದ ನಿವೃತ್ತ ಯೋಧರಿಗೆ ನ್ಯಾಯಯುತವಾಗಿ ಸಿಗಬೇಕಾದ ಭೂಮಿಯನ್ನು ಹಂಚಿಕೆ ಮಾಡದೆ ತೊಂದರೆ ನೀಡುತ್ತಿರುವುದು ವಿಪರ್ಯಾಸ. ಅರೆಸೇನಾಪಡೆಯ ಯೋಧರ ಸ್ಮಾರಕ ಭವನ, ಕ್ಯಾಂಟೀನ್ ವ್ಯವಸ್ಥೆ ಮತ್ತು ಕಚೇರಿಗಾಗಿ ಸ್ವಂತ ನಿವೇಶನದ ಅಗತ್ಯವಿದ್ದು, ಸರಕಾರ ಯಾವುದೇ ತಕರಾರಿಲ್ಲದೆ ಜಾಗ ಮಂಜೂರಾತಿ ಮಾಡಬೇಕೆಂದು ಮನವಿ ಮಾಡಿದರು. ನಿವೃತ್ತ ಯೋಧರಿಗೆ ಕೇಂದ್ರ ಸರಕಾರದ…

Read More

ಮಡಿಕೇರಿ NEWS DESK ಜು.12 : ನಮ್ಮ ದೇಶ ನಮ್ಮ ಹೆಮ್ಮೆ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಸಮರ್ಥ ಕನ್ನಡಿಗರು ( ನೋಂ ), ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಮರ್ಥ ಕನ್ನಡಿಗರು (ನೋಂ) ಕೊಡಗು ಜಿಲ್ಲಾ ಘಟಕದ ವತಿಯಿಂದ  ವಿವಿಧ ಸ್ಪರ್ಧೆಗಳು. ಆಗಸ್ಟ್ ಒಂಭತ್ತರಂದು  ಮಡಿಕೇರಿಯ ಲಯನ್ಸ್ ಹಾಲ್ ನಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆ, ಪಿ ಯು ಸಿ ವಿಭಾಗದ ಮಕ್ಕಳಿಗೆ ‘ನಮ್ಮ ದೇಶ ನಮ್ಮ ಹೆಮ್ಮೆ ‘ಎನ್ನುವ ವಿಷಯದ ಬಗ್ಗೆ ಐದು ನಿಮಿಷ ಕಾಲಾವಕಾಶದಲ್ಲಿ ಭಾಷಣ ಮಾಡುವ ಸ್ಪರ್ಧೆ ಮತ್ತು ಮಹಿಳೆಯರಿಗೆ  ವೈಯಕ್ತಿಕ ಗಾಯನ  (ಎಸ್ .ಜಾನಕಿ ಯವರು ಹಾಡಿರುವ ಕನ್ನಡ ಗೀತೆಯನ್ನು ಕರೋಕೆ ಬಳಸಿ ಅಥವಾ ಬಳಸದೆ ಮೂರು ನಿಮಿಷಗಳಲ್ಲಿ ಹಾಡುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಮರ್ಥ ಕನ್ನಡಿಗರು ಸಂಸ್ಥೆಯ ಪ್ರಕಟಣೆ  ತಿಳಿಸಿದೆ. ಒಂದರಿಂದ ನಾಲ್ಕನೇ ತರಗತಿ(1-4) ಐದರಿಂದ ಏಳನೇ ತರಗತಿ ( 5-7) ಎಂಟರಿಂದ ಹತ್ತು ( 8-10)…

Read More

​ಬೆಂಗಳೂರು ಜು.11 NEWS DESK : ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹೆಮ್ಮೆಯ ಗಾಯಕಿ, ಗಾನ ಕೋಗಿಲೆ ಎಂದೇ ಪ್ರಸಿದ್ಧರಾಗಿದ್ದ ಶ್ರೀಮತಿ ಎಸ್. ಜಾನಕಿ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಎಸ್. ಜಾನಕಿ ಅವರು ಭಾರತೀಯ ಚಿತ್ರರಂಗದ ಅಪರೂಪದ ಗಾನ ಕೋಗಿಲೆ. ದಶಕಗಳ ಕಾಲ ತಮ್ಮ ಸುಮಧುರ ಧ್ವನಿಯ ಮೂಲಕ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯ ಗೆದ್ದಿದ್ದಾರೆ. ಕೇವಲ ಹಾಡುಗಾರಿಕೆಯಷ್ಟೇ ಅಲ್ಲದೆ, ಪ್ರಾಣಿ-ಪಕ್ಷಿಗಳ ಧ್ವನಿ, ಮಕ್ಕಳ ಧ್ವನಿಯನ್ನು ಲೀಲಾಜಾಲವಾಗಿ ಅನುಕರಿಸುತ್ತಿದ್ದ ಅವರ ಕಂಠಸಿರಿ ಅದ್ಭುತವಾಗಿತ್ತು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿರುವ ಕೊಡುಗೆ ಅನನ್ಯ ಹಾಗೂ ಎಂದಿಗೂ ಮರೆಯಲಾಗದ್ದು,” ಎಂದು ಸ್ಮರಿಸಿದ್ದಾರೆ. ​ಅವರ ನಿಧನದಿಂದ ಸಂಗೀತ ಲೋಕದ ಸುವರ್ಣ ಯುಗವೊಂದು ಅಂತ್ಯಗೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಹಾಗೂ ಅವರ ಕುಟುಂಬದವರು, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಆಯುಕ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಕುಶಾಲನಗರ ಜು.11 NEWS DESK : ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಸ್ವಾಗತ ಸಮಾರಂಭ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಹಂಡಂಗಿ ನಾಗರಾಜ್, ವಿದ್ಯಾರ್ಥಿಗಳು ಇಷ್ಟಪಟ್ಟು ಕಠಿಣ ಪರಿಶ್ರಮ ಹಾಗೂ ಸತತ ಅಧ್ಯಯನದಿಂದ ಓದಿದರೆ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ತಮ್ಮ ತಂದೆ ತಾಯಿ/ ಪೋಷಕರು ತಮಗಾಗಿ ಬಹಳಷ್ಟು ಶ್ರಮ ಪಡುತ್ತಿರುತ್ತಾರೆ ಅವರಿಗೆ ತಾವೇನಾದರೂ ಪ್ರತಿಫಲ ನೀಡುವುದಾದರೆ ಅದು ನಿಮ್ಮ ವ್ಯಕ್ತಿತ್ವ ಹಾಗೂ ನಿಮ್ಮ ಫಲಿತಾಂಶ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸ್ವಾಗತ ಕಾರ್ಯಕ್ರಮ ಕುರಿತು ಮಾತನಾಡಿದ ಹಿರಿಯ ಉಪನ್ಯಾಸಕರಾದ ಎಂ.ಟಿ.ರಮೇಶ್ , ಪ್ರಥಮ ಬಾರಿಗೆ ನಮ್ಮ ಕಾಲೇಜಿಗೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಾರ್ಗದರ್ಶನದಲ್ಲಿ ತಮ್ಮ ವ್ಯಾಸಂಗವನ್ನು ಮುಂದುವರಿಸಬೇಕು. ತಂದೆ ತಾಯಿ, ಪೋಷಕರು ತಮ್ಮನ್ನು ಕಷ್ಟಪಟ್ಟು ಕಾಲೇಜಿಗೆ ಕಳಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪೋಷಕರಿಗೆ ಗೌರವವನ್ನು ಕೊಡುವುದರ ಜತೆಗೆ…

Read More

ಮಡಿಕೇರಿ ಜು.11 NEWS DESK : 2027 ನೇ ಸಾಲಿನಲ್ಲಿ ನಡೆಯುವ ವಿಶ್ವವಿಖ್ಯಾತ ಅಜ್ಜಿಕುಟ್ಟಿರ ಕೊಡುವ ಹಾಕಿ ನಮ್ಮೆಯ ಆತಿಥ್ಯ ಹಕ್ಕು ಪತ್ರವನ್ನು ಕೊಡವ ಹಾಕಿ ಅಕಾಡಮಿ ವತಿಯಿಂದ ಅಜ್ಜಿಕುಟ್ಟಿರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಶ್ರೀ ಪಾಡಿ ಇಗ್ಗುತಪ್ಪ ಸನ್ನಿಧಿಯಲ್ಲಿ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರಾದ ಪಾಂಡಂಡ ಬೋಪಣ್ಣ ಅವರು ಅಜ್ಜಿಕುಟ್ಟಿರ ಹಾಕಿ ನಮ್ಮೆಯ ಅಧ್ಯಕ್ಷರಾದ ನರೇನ್ ಕಾರ್ಯಪ್ಪ ಹಾಗೂ ಶಾಸಕರು, ಗೌರವಾಧ್ಯಕ್ಷರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಮತ್ತು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಶಾಸಕರ  ಪತ್ನಿ ಕಾಂಚನ್ ಪೊನ್ನಣ್ಣ ಹಾಜರಿದ್ದರು.

Read More