ಕುಶಾಲನಗರ NEWS DESK ಜ.30 : ಕೊಡಗು ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಹೇಳಿದರು. ಕುಶಾಲನಗರದಲ್ಲಿ ನಡೆದ ಸೋಮವಾರಪೇಟೆ ಉಪವಿಭಾಗದ ಮಟ್ಟದ ಜನಸಂಪರ್ಕ ಸಭೆಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಯಾವುದೇ ರೀತಿಯ ಅಪರಾಧಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತಾಗಬೇಕು. ಅಪರಾಧ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಕುಶಾಲನಗರದ ಆಯ್ದ ಜಾಗಗಳಲ್ಲಿ ಸಿಸಿ ಕ್ಯಾಮರಗಳನ್ನು ಅಳವಡಿಸುವ ಮೂಲಕ ಸಮರ್ಪಕ ಸಂಚಾರಿ ವ್ಯವಸ್ಥೆಗೆ ಕಾರ್ಯ ಯೋಜನೆ ರೂಪಿಸಲಾಗುವುದು. ಗ್ರಾಮ ಪಂಚಾಯಿತಿ ಪುರಸಭೆ ಸಹಯೋಗದೊಂದಿಗೆ ಈ ಸಂಬಂಧ ಚರ್ಚಿಸಿ ಕ್ರಿಯಾಯೋಜನೆ ರೂಪಿಸಲಾಗುವುದು ಎಂದರು. ಸೈಬರ್ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು. ಪೊಲೀಸ್ ಇಲಾಖೆ ಮೂಲಕ ಭದ್ರತೆ ಕಲ್ಪಿಸಬಹುದೇ ಹೊರತು ನಾಗರಿಕರ ಸಿವಿಲ್ ವ್ಯಾಜ್ಯಗಳಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಹೆದ್ದಾರಿ ರಸ್ತೆಯಲ್ಲಿ…
ಲೇಖಕ: admin
ನಾಪೋಕ್ಲು ಜ.30 NEWS DESK : ಆಪ್ತಮಿತ್ರ ಬಳಗದ ಸೇವಾರ್ಥವಾಗಿ ಫೆ.1 ರಂದು ಮೂರ್ನಾಡಿನಲ್ಲಿ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಮೂರ್ನಾಡು ಆಪ್ತಮಿತ್ರ ಬಳಗದ ಆಯೋಜಕ ಚಂದ್ರಶೇಖರ್ ಕುಲಾಲ್ ಮೂರ್ನಾಡು ಅವರು ಹೇಳಿದರು. ಮೂರ್ನಾಡು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ತೆಂಕುತಿಟ್ಟಿನ ಗಜಮೇಳವೆಂದೇ ಪ್ರಸಿದ್ಧಿ ಪಡೆದ ಇವರಿಂದ ಫೆ.1 ರಂದು ಮೂರ್ನಾಡಿನ ಪಾಂಡಾಣೆ ನಾಡ್ ಮಂದ್ ಶಾಲಾ ಮೈದಾನದಲ್ಲಿ ಸೇವಾರ್ಥವಾಗಿ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ತಿಳಿಸಿದರು. ಮೂರನೇ ವರ್ಷ ಆಪ್ತಮಿತ್ರ ಬಳಗದ ಸೇವಾರ್ಥವಾಗಿ (ಉಚಿತ) ನಡೆಯುತ್ತಿರುವ ಮೂರ್ನಾಡು ಯಕ್ಷೋತ್ಸವದಲ್ಲಿ ಈ ವರ್ಷ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ಹಲವು ವಿಶೇಷ ಆಕರ್ಷಣೆಗಳೊಂದಿಗೆ ಅದ್ದೂರಿ ಯಕ್ಷಗಾನ ಆಯೋಜಿಸಲಾಗಿದೆ ಎಂದರು. ಅಂದು ಸಂಜೆ 6 ರಿಂದ ಚೌಕಿ ಪೂಜೆ ನಡೆದು ಸರಿಯಾಗಿ 6.30ಗೆ ಯಕ್ಷಗಾನ ಪ್ರಾರಂಭವಾಗಿ ರಾತ್ರಿ 12 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹರೀಶ್…
ಮಡಿಕೇರಿ ಜ.30 NEWS DESK : ಇತಿಹಾಸ ಪ್ರಸಿದ್ಧ ಚೆರಿಯಪರಂಬು ಮಖಾಂ ಉರೂಸ್ ಸಮಾರಂಭವು ಫೆ.6 ರಿಂದ 10ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಚೆರಿಯಪರಂಬು ಜಮಾಅತ್ ಪ್ರಧಾನ ಕಾರ್ಯದರ್ಶಿ ಪರವಂಡ.ಎ.ಸಿರಾಜ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೆರಿಯಪರಂಬು ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶಹೀದ್ ಅಬ್ದುಲ್ ರಹ್ಮಾನ್ ವಲಿಯುಲ್ಲಾಹಿ (ನ.ಮ)ಹಾಗೂ ಹೌಲಿಯಾಗಳ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ಫೆ.6 ರಂದು ಜುಮಾ ನಮಾಜ್ ನಂತರ ಉರೂಸ್ಗೆ ಚಾಲನೆ ದೊರೆಯಲಿದೆ. ಇದೇ ಸಂದರ್ಭ ಗ್ರಾಮಸ್ಥರೆಲ್ಲರೂ ಮಸೀದಿಯಿಂದ ನೇರವಾಗಿ ದರ್ಗಾಶರೀಫ್ ಆಗಮಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದರ ನೇತೃತ್ವವನ್ನು ಚೆರಿಯಪರಂಬು ಜಮಾಅತ್ ಖತೀಬರಾದ ಮುಹಮ್ಮದ್ ಶಫೀಕ್ ಅಲಿ ಸಿರಾಜಿ ಉಸ್ತಾದ್ ಅವರು ವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಜಮಾಅತ್ತಿನ ಅಧ್ಯಕ್ಷರಾದ ಪಿ.ಎ.ಅಹಮದ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು. ಮಗ್ರಿಬ್ ನಮಾಝಿನ ಬಳಿಕ ಮಖಾಂ ಅಲಂಕಾರ ಹಾಗೂ ಖತಂ ದುಆ ಮಜ್ಲಿಸ್ ನಡೆಯಲಿದ್ದು, ನಿಝಾರ್ ಅಹ್ಸನಿ ಕಕ್ಕಡಿಪುರಂ…
ಮಡಿಕೇರಿ NEWS DESK ಜ.30 : ಕರ್ನಾಟಕ ಸರ್ಕಾರವು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಕಾಗದರಹಿತ ನೋಂದಣಿ ಪದ್ಧತಿಯನ್ನು ಹೊಸದಾಗಿ ಪರಿಚಯಿಸಲಿದೆ. ಕಾಗದರಹಿತ ನೋಂದಣಿಯನ್ನು ಯಶಸ್ವಿಯಾಗಿ ಕೈಗೊಳ್ಳಲು ಸುಧಾರಿತ ಕಾವೇರಿ-2 ತಂತ್ರಾಂಶದ ಬಳಕೆ ಕುರಿತು ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜನವರಿ, 31 ರಂದು ಮಧ್ಯಾಹ್ನ 12.30 ಗಂಟೆಯಿಂದ 1.30 ಗಂಟೆವರೆಗೆ ಪೊನ್ನಂಪೇಟೆ ಉಪ ನೋಂದಣಾಧಿಕಾರಿ ಕಚೇರಿ ಮತ್ತು ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ವಿರಾಜಪೇಟೆ ತಾಲ್ಲೂಕು ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ, ಫೆಬ್ರವರಿ, 02 ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಕುಶಾಲನಗರ ಉಪ ನೋಂದಣಾಧಿಕಾರಿ ಕಚೇರಿ ಮತ್ತು ಸಂಜೆ 4.30 ರಿಂದ 5.30 ರವರೆಗೆ ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಫೆಬ್ರವರಿ, 03 ರಂದು ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ಮಡಿಕೇರಿ ಉಪ ನೋಂದಣಿ ಅಧಿಕಾರಿ ಅವರು ತಿಳಿಸಿದ್ದಾರೆ.
ಸೋಮವಾರಪೇಟೆ NEWS DESK ಜ.30 : ಹಿಂದುತ್ವದ ಉಳಿವಿಗಾಗಿ, ಈ ರಾಷ್ಟ್ರದ ರಕ್ಷಣೆಗಾಗಿ, ಹಿಂದೂ ರಕ್ಷಣೆಯ ಸಂಕಲ್ಪದೊಂದಿದೆ ಹಿಂದೂ ಸಂಗಮ ಕಾರ್ಯಕ್ರಮ ಫೆ.1 ರಂದು ಸೋಮವಾರಪೇಟೆಯಲ್ಲಿ ಆಯೋಜನೆ ಮಾಡಲಾಗಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ತಾಲ್ಲೂಕು ಅಧ್ಯಕ್ಷ ಕೆ.ಟಿ.ಸನತ್ ತಿಳಿಸಿದ್ದಾರೆ. ನಗರದ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದ ಪೂರ್ವ ಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಹಿಂದೂ ಸಮಾಜದಲ್ಲಿ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಹಾಗೂ ದೇಶಭಕ್ತಿಯನ್ನು ಇನ್ನಷ್ಟು ಬಲಪಡಿಸುವ ಗುರಿ ನಮ್ಮದಾಗಿದೆ ಎಂದರು. ಕಾರ್ಯಕ್ರಮದ ತಾಲ್ಲೂಕು ಆಯೋಜಕ ಬಿ. ಎ.ಭಾಸ್ಕರ್ ಮಾತನಾಡಿ ಸಮಾಜದಲ್ಲಿನ ಎಲ್ಲಾ ಜನಾಂಗ ಬಾಂಧವರನ್ನು ಒಗ್ಗೂಡಿಸಿಕೊಂಡು ಆಚರಿಸುವ ಆಚರಣೆಯ ಮೂಲಕ ಹಿಂದೂ ಸಂಘಟನೆಗಳಿಗೆ ಬಲ ತುಂಬುವುದು. ಶಿಸ್ತು, ದೇಶಾಭಿಮಾನ, ಧೈರ್ಯ, ಪ್ರಾಮಾಣಿಕತೆಯಿಂದ ಕೂಡಿದ ಸಂಪನ್ಮೂಲ ವ್ಯಕ್ತಿಗಳ ನಿರ್ಮಾಣ ಮಾಡುವ ಮೂಲಕ ಸಮಾಜವನ್ನು ಸದೃಢಗೊಳಿಸುವ ಪ್ರಯತ್ನ ಇದಾಗಲಿದೆ. ಸಮಾಜದಲ್ಲಿ ಸಮರಸತೆಯ ಬದುಕನ್ನು ರೂಪಿಸುವುದು, ಕುಟುಂಬ ಪ್ರಬೋಧನ್, ಪರಿಸರ ಸಂರಕ್ಷಣೆ, ಸ್ವದೇಶಿ ಜೀವನ ಶೈಲಿ, ಸಮಾಜದಲ್ಲಿ…
ಮಡಿಕೇರಿ NEWS DESK ಜ.30 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳನ್ನು ಫೆಬ್ರವರಿ ಅಂತ್ಯದೊಳಗೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಕಾರ್ಯಕ್ರಮ ಅನುಷ್ಠಾನದಲ್ಲಿ ವಿಳಂಬ ಮಾಡಿದ್ದಲ್ಲಿ ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು. ವಿವಿಧ ಇಲಾಖೆಗಳ ಕಾಮಗಾರಿ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಸೋಮಶೇಖರ್ ಅವರು ಹೇಳಿದರು. ಪೌರಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜೊತೆಗೆ ಖಾಸಗಿ ಆಸ್ಪತ್ರೆಗೆ ಮನವಿ ಮಾಡಿದ್ದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಆ ನಿಟ್ಟಿನಲ್ಲಿ ಮನವಿ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ…
ಮಡಿಕೇರಿ NEWS DESK ಜ.30 : ಜಿಲ್ಲಾಡಳಿತ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ಯು ನಗರದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ಜರುಗಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಿಸಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪ ಬಳಿ ಇರಿಸಿ ಪೊಲೀಸ್ ಗೌರವದೊಂದಿಗೆ ನಮನ ಸಲ್ಲಿಸಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಗಣ್ಯರು ನೆರವೇರಿಸಿದರು. ಇದೇ ವೇಳೆ ಪೊಲೀಸ್ ಮೀಸಲು ಪಡೆಯ ಸಬ್ ಇನ್ಸ್ಪೆಕ್ಟರ್ ಎಚ್.ಬಿ.ಗಣೇಶ್ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟçಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಿದರು. ನಂತರ ಮೌನಾಚರಣೆ ನಡೆಯಿತು. ಪೊಲೀಸ್ ವಾದ್ಯ ತಂಡದವರು ರಾಷ್ಟçಗೀತೆ ಹಾಡಿ ಗಮನ ಸೆಳೆದರು.…
ಮಡಿಕೇರಿ ಜ.30 NEWS DESK : ಹಾಕತ್ತೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ನೂತನ ವಲಯಾಧ್ಯಕ್ಷ ಬಿ.ಕೆ.ನಾರಾಯಣ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಾಜಿ ಅಧ್ಯಕ್ಷ ಪಿಯೂಷ್ ಪೆರೇರ ಅವರ ಉಪಸ್ಥಿತಿಯಲ್ಲಿ ನಡೆಯಿತು. ಕಗ್ಗೋಡ್ಲುವಿನ ನೆಲ್ಲಿಪೂಣಿ ಭುವನ್ ಅವರ ಮನೆಯಲ್ಲಿ ಮೂರು ಬೂತ್ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಬೂತ್ ಗಳ ನೂತನ ಅಧ್ಯಕ್ಷರು, ಬಿಎಲ್ಓಗಳ ನೇಮಕ, ಪಕ್ಷ ಸಂಘಟನೆ ಮತ್ತಿತರ ವಿಚಾರಗಳ ಕುರಿತು ಚರ್ಚಿಸಲಾಯಿತು. ವಲಯ ಉಪಾಧ್ಯಕ್ಷರಾಗಿ ಕೆ.ವೈ.ಜಲೀಲ್ ಹಾಗೂ ಕಾರ್ಯದರ್ಶಿಯಾಗಿ ಭುವನ್ ನೆಲ್ಲಿಪೂಣಿ ನೇಮಕಗೊಂಡರು. ಹುಲಿತಾಳ ಬೂತ್ ಅಧ್ಯಕ್ಷರಾಗಿ ದಯಾನಂದ (ಅಣ್ಣು), ಬಿಎಲ್ಒಗಳಾಗಿ ಅಶ್ವಥ್ ಕುಮಾರ್ ಹಾಗೂ ಶಶಿಕುಮಾರ್, ಕಗ್ಗೋಡ್ಲು ಬೂತ್ ಅಧ್ಯಕ್ಷರಾಗಿ ಎಂ.ಬಿ.ಪ್ರವೀಣ್, ಬಿಎಲ್ಓಗಳಾಗಿ ಕೊರಗಪ್ಪ ಪೂಜಾರಿ ಹಾಗೂ ಕಿಶೋರ್, ತೊಂಭತ್ತುಮನೆ ಬೂತ್ ಅಧ್ಯಕ್ಷರಾಗಿ ಹೆಚ್.ಬಿ.ಸುರೇಶ್, ಬಿ.ಎಲ್.ಓಗಳಾಗಿ ಕೆ.ವೈ.ಜಲೀಲ್ ಹಾಗೂ ಬಿ.ಎ.ಷರೀಫ್ ಆಯ್ಕೆಯಾದರು. ಸಭೆಯಲ್ಲಿ ಪ್ರಮುಖರಾದ ದಂಬೆಕೋಡಿ ಕವನ ಭೀಷ್ಮ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಡಿಕೇರಿ ಜ.30 NEWS DESK : ಪ್ರಸವಪೂರ್ವ ಹಂತದಲ್ಲಿ ಅಂಗವೈಕಲ್ಯವನ್ನು ತಡೆಗಟ್ಟುವ ಸವಾಲುಗಳು ಮತ್ತು ಅಪಾಯಗಳನ್ನು ಗುರುತಿಸಲು ಪ್ರಸವಪೂರ್ವ ಆರೈಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸುಂಟಿಕೊಪ್ಪದ ಸ್ವಸ್ಥ ಕೇಂದ್ರದಲ್ಲಿ ಅಂಗನವಾಡಿ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಮತ್ತು ವಿಶೇಷಚೇತನರ ಆರೈಕೆದಾರರಿಗಾಗಿ ಆಯೋಜಿಸಲಾಗಿತ್ತು. ಮೈಸೂರಿನ ಪ್ರಸಿದ್ಧ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಸೋನಿಯಾ ಮಂದಪ್ಪ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಗರ್ಭಧಾರಣೆ, ಸುರಕ್ಷಿತ ಹೆರಿಗೆ ಮತ್ತು ಆರೈಕೆಯಲ್ಲಿ ಅರೋಗ್ಯ ಕಾರ್ಯಕರ್ತರ ಪಾತ್ರದ ಕುರಿತು ಮಾತನಾಡಿದ ಡಾ. ಸೋನಿಯಾ, ಕಾರ್ಯಕರ್ತರ ವೃತ್ತಿಕೌಶಲ್ಯವನ್ನು ಶ್ಲಾಘಿಸಿದರು. ಪ್ರಸವಪೂರ್ವ ಆರೈಕೆಯಲ್ಲಿನ ವಿವಿಧ ಅಂಶಗಳ ಬಗ್ಗೆ, ಬೆಳೆಯುತ್ತಿರುವ ಮಗುವಿನ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಗಭಿ೯ಣಿಯರು ವಹಿಸಬೇಕಾದ ಪೋಷಣೆ, ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ದೈಹಿಕ ಯೋಗಕ್ಷೇಮದ ಕಾಳಜಿಯ ಬಗ್ಗೆ ಸಲಹೆ ನೀಡಿದರು. ಶಿಶುಗಳಿಗೆ ಅಗತ್ಯವಿರುವ ವಿವಿಧ ರೋಗಗಳನ್ನು ತಡೆಗಟ್ಟುವ ಲಸಿಕೆಗಳ ಬಗ್ಗೆ ಮತ್ತು ಬಾಣಂತಿಯರ ಕಾಳಜಿಯ ಬಗ್ಗೆಯೂ ಸೋನಿಯಾ ಮಾಹಿತಿ ನೀಡಿದರು. ಶಿಕ್ಷಕರು ಮತ್ತು ಕಾರ್ಯಕರ್ತೆಯರು ವೈದ್ಯರೊಂದಿಗೆ ಅವರು ಸಂವಾದ ನಡೆಸಿದರು. ಸ್ವಸ್ಥ ಸಂಸ್ಥೆಯ…
ಮಡಿಕೇರಿ ಜ.30 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಸರ್ವೋದಯ ದಿನವನ್ನು ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.






