ಲೇಖಕ: admin

ಮಡಿಕೇರಿ ಮೇ 13 NEWS DESK :  ಕ್ಷೇತ್ರದ ಜನತೆಯನ್ನು ದಶಕಗಳಿಂದ ಕಾಡುತ್ತಿರುವ ಆನೆ-ಮಾನವ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ, ಈಗಾಗಲೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಹಲವಾರು ಪ್ರಮುಖ ನಿರ್ಣಯಗಳನ್ನು ಕೈಗೊಂಡು, ಕ್ಷೇತ್ರಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಅದರ ಭಾಗವಾಗಿ ವಿರಾಜಪೇಟೆ ತಾಲೂಕು ಪಾಲಂಗಾಲ ಗ್ರಾಮಕ್ಕೆ ಆಗಮಿಸಿದ ಶಾಸಕರು, ಈ ಭಾಗದಲ್ಲಿ ಅರಣ್ಯ ಇಲಾಖೆ ವತಿಯಿಂದ ಆನೆ ಹಾವಳಿ ತಡೆಗಟ್ಟಲು ರೂ.28 ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಹ್ಯಾಂಗಿಂಗ್ ಸೋಲಾರ್ ಪೆನ್ಸಿಂಗ್ ಕಾಮಗಾರಿಗೆ ಚಾಲನೆ ನೀಡಿದರಲ್ಲದೆ, ಈಗಾಗಲೇ ಈ ಸಂಬಂಧ ನಡೆಯುತ್ತಿರುವ ಕಾಮಗಾರಿಯ ವೀಕ್ಷಣೆ ಹಾಗೂ ಅಧಿಕಾರಿಗಳಿಂದ ಇದರ ಬಗ್ಗೆ ಸಂಪೂರ್ಣ ವಿವರಣೆಗಳನ್ನು ಪಡೆದರು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಗಂಚಿನಲ್ಲಿ ವಾಸಿಸುತ್ತಿರುವ ಮಹಿಳೆಯರು ಸ್ವಾವಲಂಬಿ ಆಗಲು ನೀಡುವ ಹೊಲಿಗೆ ಯಂತ್ರ ಹಾಗೂ ಇತರ ಸೌಲತ್ತುಗಳನ್ನು ಶಾಸಕರು ವಿತರಿಸಿದರು.  ಬಳಿಕ ಮಾತನಾಡಿದ ಶಾಸಕರು, ತನ್ನ ಕೋರಿಕೆ ಹಾಗೂ ಪ್ರಯತ್ನದ ಮೇರೆಗೆ, ಕರ್ನಾಟಕ…

Read More

ಮಡಿಕೇರಿ ಮೇ 13 NEWS DESK : ಮೈಸೂರಿನ ನಾರಾಯಣ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ  ಕೊಡಗು ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

Read More

ಮಡಿಕೇರಿ ಮೇ 13 NEWS DESK : ಮಂಗಳೂರಿನ ಎಂಪೀರಿಯಾ ಎಂಟರ್‍ಟೈನ್‍ಮೆಂಟ್ ವತಿಯಿಂದ ನಿರ್ಮಾಣವಾಗಲಿರುವ “ಕೋವಿ ಮತ್ತು ಕೊಳಲು” ಸಿನಿಮಾದ ಮುಹೂರ್ತ ಇದೇ ಮೇ 15 ರಂದು ನಗರದ ರಾಜಾಸೀಟಿನಲ್ಲಿ ನಡೆಯಲಿದೆಯೆಂದು ಚಿತ್ರ ನಿರ್ದೇಶಕ ಬಾಸುಮ ಕೊಡಗು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಗುರುರಾಜ ಮಾರ್ಪಳ್ಳಿಯವರ “ಗರ್ಭ” ಕಾದಂಬರಿ ಆಧಾರಿತ ಕೋವಿ ಮತ್ತು ಕೊಳಲು ಸಿನೆಮಾವು ಕಲಾತ್ಮಕ ಹಾಗೂ ವಾಣಿಜ್ಯಕ ಚಲನಚಿತ್ರವಾಗಿದೆ. ಇದರ ಚಿತ್ರೀಕರಣ ಮಡಿಕೇರಿ, ಸಂಪಾಜೆ ಮತ್ತು ಸುಳ್ಯ ವಿಭಾಗಗಳಲ್ಲಿ ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ಕಲೆ ಮತ್ತು ಹಣದ ನಡುವಿನ ಸಂಘರ್ಷಗಳ ಕುರಿತ ಕಥೆಯನ್ನು ಇಲ್ಲಿ ಚಲನಚಿತ್ರವಾಗಿ ನಿರ್ಮಿಸಲಾಗುತ್ತಿದೆ. ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶೌರ್ಯತೇಜ ಅವರು ಬರೆದಿದ್ದಾರೆ. ಛಾಯಾಗ್ರಾಹಕರಾಗಿ ದೃಶಾ ಕೊಡಗು, ಕಲಾ ನಿರ್ದೇಶನವನ್ನು ಲೋಕೇಶ್ ಊರುಬೈಲು ನಿರ್ವಹಿಸಲಿದ್ದಾರೆ. ಚಿತ್ರವನ್ನು ಪ್ರಸಕ್ತ ಸಾಲಿನ ಸೆಪ್ಟಂಬರ್‍ನಲ್ಲಿ ತೆರೆಗೆ ತರಲು ಉದ್ದೇಶಿಸಲಾಗಿದೆಯೆಂದು ತಿಳಿಸಿದರು. ಚಿತ್ರದಲ್ಲಿ ಅಕ್ಷತಾ ಪಾಂಡವಪುರ, ನವೀನ್ ಡಿ.ಪಡೀಲ್, ಮೋಹನ್ ಶೇಣಿ, ಮುರಳಿ ಶೃಂಗೇರಿ, ಆನಂದ…

Read More

ಮಡಿಕೇರಿ ಮೇ 13 NEWS DESK : ಮಾದಾಪುರದ ಕುಂಬೂರಿನಲ್ಲಿ ಕಳೆದ ಹನ್ನೆರಡು ದಿನಗಳಿಂದ ನಡೆಯುತ್ತಿರುವ ಬಡ ನಿವೇಶನ ರಹಿತರ ಹೋರಾಟವನ್ನು ದಾರಿ ತಪ್ಪಿಸುವ ಕೆಲಸವನ್ನು ಯಾರೂ ಮಾಡಬಾರದೆಂದು ಕರ್ನಾಟಕ ರಾಜ್ಯ ಬಹುಜನ ಕಾರ್ಮಿಕರ ಸಂಘ ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಜೆ.ಶಿವಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಬೂರು ಲಕ್ಕೇರಿಯಲ್ಲಿ ಆರು ನೂರು ಕುಟುಬಗಳು ನಿವೇಶನಕ್ಕಾಗಿ ಹೋರಾಟ ನಡೆಸುತ್ತಿವೆ. ಈ ಹಂತದಲ್ಲಿ ಎಐಟಿಯುಸಿ ಸಂಘ0ಟನೆಯ ಹೆಚ್.ಎಂ. ಸೋಮಪ್ಪ ಅವರು, ನಿವೇಶನ ರಹಿತರ ಹೋರಾಟ ಅರ್ಥಹೀನವೆಂದು ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರದ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸಿರುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ಹೇಳಿದರು. ಇಂದಿಗೂ ಬಡ ನಿವೇಶನ ರಹಿತ ಕಟುಂಬಗಳು ತೋಟಗಳ ಲೈನ್ ಮನೆಗಳಲ್ಲಿ ಸಂಕಷ್ಟದ ಬದುಕನ್ನು ನಡೆಸಿಕೊಂಡು ಬರುತ್ತಿವೆ. ಇಂತಹ ಕುಟುಂಬಗಳಿಗೆ ಗುಲಾಮಗಿರಿಯಿಂದ ಮುಕ್ತಿ ಕೊಡಿಸುವಂತೆ ಆಗ್ರಹಿಸಿದ ಶಿವಪ್ಪ ಅವರು, ಪ್ರತಿಭಟನೆಯಲ್ಲಿ ಇತರೆ ಪಂಚಾಯ್ತಿಗಳ ನಿವೇಶನ ರಹಿತರು ಪಾಲ್ಗೊಂಡಿರುವುದನ್ನು ಸೋಮಪ್ಪ…

Read More

ಮಡಿಕೇರಿ ಮೇ 13 NEWS DESK : ನವೀನ್ ಆಚಾರಿ ಬಿಳಿಗೇರಿ ಸ್ಮರಣಾರ್ಥ ನಡೆದ ಹಾಕತ್ತೂರು ಪ್ರೀಮಿಯರ್ ಲೀಗ್ ಕ್ರಿಕೆಟ್ ಸೀಜನ್ 12 ರಲ್ಲಿ ಪ್ರಸಾದ್ ಪೂಜಾರಿ ಮಾಲೀಕತ್ವದ ತುಶಾಂತ್ ಫ್ರೆಂಡ್ಸ್ ಬಿಳಿಗೇರಿ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ವಿಜಯ ಮಾಲೀಕತ್ವದ ರಾಯಲ್ ಸ್ಟಾರ್ ಹಾಕತ್ತೂರು ತಂಡ ದ್ವಿತೀಯ, ರಫ ಫೈಟರ್ಸ್ ತೃತೀಯ ಹಾಗೂ ಟೀಮ್ 77 ಹಾಕತ್ತೂರು ತಂಡ 4ನೇ ಸ್ಥಾನ ಪಡೆದುಕೊಂಡಿತು. ಐಪಿಎಲ್ ಮಾದರಿಯಲ್ಲಿ ಮೂರು ದಿನ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಿದ್ದವು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರವೀಣ್ ಆಚಾರಿ, ಬಿಳಿಗೇರಿ. ಪ್ರಸಾದ್ ಪೂಜಾರಿ ಬಿಳಿಗೇರಿ, ಬಿ.ಸಿ.ನಾಣಯ್ಯ, ಪ್ರಶಾಂತ್ ಪೂಜಾರಿ ಹೊದ್ದೂರು, ಮಹಮ್ಮದ್ ಅಲಿ ಹಾಕತ್ತೂರು ಮತ್ತಿತರ ಪ್ರಮುಖರು ಹಾಜರಿದ್ದರು.

Read More

ಮಡಿಕೇರಿ ಮೇ 13 NEWS DESK : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಜಾಗತಿಕ ತೈಲ ಮಾರುಕಟ್ಟೆಯ ಅಸ್ಥಿರತೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಉಳಿತಾಯ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ದೇಶದ ಜನತೆಗೆ ನೀಡಿರುವ ಸಲಹೆಯನ್ನು ಕಾಂಗ್ರೆಸ್ ಪಕ್ಷ ಕ್ಷುಲ್ಲಕ ರಾಜಕಾರಣಕ್ಕಾಗಿ ಬಳಸುತ್ತಿರುವುದು ಖಂಡನೀಯವೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಸಂದಿಗ್ಧತೆ ಇಡೀ ವಿಶ್ವದ ಮೇಲೆ ಪರಿಣಾಮ ಬೀರಿದೆ. ಮುಂದಿನ ದಿನಗಳಲ್ಲಿ ದೇಶದ ಜನರಿಗೆ ಸಮಸ್ಯೆಯಾಗಬಾರದು ಎನ್ನುವ ದೂರದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಆರ್ಥಿಕ ಶಿಸ್ತಿನ ಕುರಿತು ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಇದನ್ನು ಅರ್ಥ ಮಾಡಿಕೊಳ್ಳದ ಕಾಂಗ್ರೆಸ್ಸಿಗರು ದೇಶದ ಆಂತರಿಕ ಸಮಸ್ಯೆ ಎಂಬಂತೆ ಪ್ರತಿಬಿಂಬಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಗಳಾಗಿದ್ದಾಗ ಚಿನ್ನದ ಮೇಲಿನ ಅವಲಂಬನೆ ಕಡಿಮೆ ಮಾಡಲು ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು…

Read More

ಗೋಣಿಕೊಪ್ಪ NEWS DESK ಮೇ 13 : ಸಿಡಿಲಬ್ಬರಕ್ಕೆ ಲಾರಿ ಮೇಲೆ ಮರ ಬಿದ್ದ ಪರಿಣಾಮ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡು, 7 ಕಾರ್ಮಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ. ಕಾರ್ಮಿಕ ರಾಘವೇಂದ್ರ ಎಂಬುವವರಿಗೆ ಮರದ ಕೊಂಬೆ ಮತ್ತು ಲಾರಿಯ ಒಡೆದ ಗಾಜು ತಗುಲಿ ಗಾಯಗಳಾಗಿವೆ. ಉಳಿದಂತೆ ರಮೇಶ, ಮಹೇಶ, ವಿಜಿ, ಜಾಹಿರ್, ರಂಗ, ಕರಿಗೌಡ ಹಾಗೂ ಶಂಕರ ಇವರುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಲಾರಿಯಲ್ಲಿದ್ದ ಗೊಬ್ಬರವನ್ನು ನಾಲ್ಕೇರಿ ಕೃಷಿ ಪತ್ತಿನ ಸಹಕಾರ ಸಂಘದ ಗೋದಾಮಿನಲ್ಲಿ ಸಂಗ್ರಹಿಸಿಟ್ಟು ಹಿಂದಿರುಗುತ್ತಿದ್ದಾಗ ನಾಲ್ಕೇರಿ- ಗೋಣಿಕೊಪ್ಪ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗೋಣಿಕೊಪ್ಪ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ ಮೇ 12 NEWS DESK : ಅಕ್ಕಪಡೆ ಸಿಬ್ಬಂದಿಗಳು 2ನೇ ಮೊಣ್ಣಂಗೇರಿಯ ವಿವಿಧ ರೆಸಾರ್ಟ್ ಗಳಿಗೆ ಭೇಟಿ ನೀಡಿ ಅಲ್ಲಿನ‌ ಸಿಬ್ಬಂದಿಗಳಿಗೆ ವಿವಿಧ ತುರ್ತು ಸಹಾಯವಾಣಿಗಳ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ, ಮಾದಕ ದ್ರವ್ಯಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು.

Read More

ಪುತ್ತೂರು ಮೇ 12 NEWS DESK : ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ ‘ಪವರ್ ಆಫ್ ಯಂಗ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್ (HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ ಮಾರ್ಕೆಟ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಭರಣ ಕ್ಷೇತ್ರದಲ್ಲಿ ತೋರಿದ ಸಮರ್ಪಣೆ, ಆಭರಣ ವಿನ್ಯಾಸ, ತಯಾರಿಕೆ, ಮಾರುಕಟ್ಟೆ ಹಾಗೂ ನಾವೀನ್ಯತೆಯಲ್ಲಿ ಅಸಾಧಾರಣ ಸಾಧನೆ ಮಾಡಿರುವ ಯುವ ಉದ್ಯಮಿಗಳನ್ನು ಗುರುತಿಸಿ ಗೌರವಿಸುವ ಉದ್ದೇಶದ ಈ ಪ್ರಶಸ್ತಿಗೆ ದೇಶದ ವಿವಿಧ ಭಾಗಗಳಿಂದ 8 ಯುವ ಸಾಧಕರನ್ನು ಆಯ್ಕೆ ಮಾಡಲಾಗಿತ್ತು. ಆ ಎಂಟು ಸಾಧಕರಲ್ಲಿ ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಕೂಡ ಸ್ಥಾನ ಪಡೆದಿದ್ದಾರೆ. “ತಲೆಮಾರಿನ ನಂಬಿಕೆ, ಯುವ ತಲೆಮಾರಿನ ಸಾಧನೆ” ನಾವೀನ್ಯತೆಯ ವಿನ್ಯಾಸ, ಶುದ್ಧತೆಯ…

Read More

ಕುಶಾಲನಗರ ಮೇ 12 NEWS DESK : ಬಸವನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವರ 53 ನೇ ವಾರ್ಷಿಕ ಪೂಜೋತ್ಸವ ಶ್ರದ್ದಾಭಕ್ತಿಯಿಂದ ನೆರವೇರಿತು. ಬೆಳಗ್ಗೆ ಶ್ರೀ ಗಣಪತಿ ಹಾಗೂ ಬಸವೇಶ್ವರ ದೇವರ ಕಳಸ ಪ್ರತಿಷ್ಠಾಪನೆ ಹಾಗೂ ಪೂಜೋತ್ಸವ ಜರುಗಿತು. ಮರುದಿನ ಮಂಗಳವಾರ ಗುಳಿಗಪ್ಪ ಮತ್ತು ಚಾಮುಂಡೇಶ್ವರಿ ದೇವರ ಪೂಜೆ ವಿಗ್ರಹ ಪ್ರತಿಷ್ಠಾಪನೆ ಬಳಿಕ ಬಗೆ ಬಗೆಯ ಪುಷ್ಪಗಳಿಂದ ಅಲಂಕರಿಸಿ ಮಹಾಮಂಗಳಾರತಿ ನೆರವೇರಿಸಲಾಯಿತು. ಪುರೋಹಿತ ಪ್ರಕಾಶ್ ಭಟ್ ನೇತೃತ್ವದಲ್ಲಿ ಪೂಜಾ ವಿಧಿ ನೆರವೇರಿತು. ದೇವಸ್ಥಾನದ ಸಮಿತಿ ಅಧ್ಯಕ್ಷರೂ ಆದ ಸ್ಣಳ ದಾನಿ ಬಿ.ಸಿ. ಕಾಳಯ್ಯ, ಉಪಾಧ್ಯಕ್ಷ ಪಟ್ಟು ಮಾದಪ್ಪ, ಕಾರ್ಯದರ್ಶಿ ಮಧು ಸೇರಿದಂತೆ ಗ್ರಾಮಸ್ಥರು, ದೇವಾಲಯ ಸಮಿತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಿಶೇಷವಾಗಿ ಪೂಜಾ ಮಹೋತ್ಸವದಲ್ಲಿ ಭಾಗಿಯಾದ ಆದಿವಾಸಿ ಸಮುದಾಯದ ಮಹಿಳೆಯರು ಹಾಗೂ ಮಕ್ಕಳು ಕುಣಿದು ಕುಪ್ಪಳಿಸಿ ರಂಜಿಸಿದರು. ದೇವತಾ ಮಹೋತ್ಸವದ ಅಂಗವಾಗಿ ದೇವಾಲಯದ ಆವರಣದಲ್ಲಿ ಜಾತ್ರೆ ಏರ್ಪಟ್ಟಿತ್ತು. ಗ್ರಾಮದ ಬೀದಿಗಳನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.

Read More