ಮಡಿಕೇರಿ ಆ.26 NEWS DESK : ಮಡಿಕೇರಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆಗಳ ಕುರಿತು ಚರ್ಚಿಸಲಾಯಿತು. ಗೃಹಲಕ್ಷ್ಮಿ ಯೋಜನೆ: ಶಿಶು ಅಭಿವೃದ್ದಿ ಅಧಿಕಾರಿ ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 31,811 ಪಡಿತರ ಚೀಟಿ ಇದ್ದು, ಗೃಹಲಕ್ಷ್ಮಿ ಯೋಜನೆಯಡಿ 31,489 ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದರು. 322 ಪಡಿತರ ಚೀಟಿ ನೋಂದಣಿಗೆ ಬಾಕಿ ಇದ್ದು, ಜೂನ್ ಮಾಹೆಗೆ 30,539 ಪಡಿತರ ಚೀಟಿ ಫಲಾನುಭವಿಗಳಿಗೆ ಶಿಶು ಅಭಿವೃದ್ದಿ ಅಧಿಕಾರಿ ಮಡಿಕೇರಿಯವರಿಂದ ನೇರವಾಗಿ ಡಿಬಿಟಿ ಮುಖಾಂತರ ಹಣ ಮಂಜೂರಾಗಿದೆ ಎಂದು ತಿಳಿಸಿದರು. ಒಟ್ಟು ಹಣ ಪಾವತಿಯಾಗಲು ಬಾಕಿ ಇರುವ ಫಲಾನುಭವಿಗಳ ಸಂಖ್ಯೆ 13764, ಐ.ಟಿ/ಜಿ.ಎಸ್.ಟಿ ಪಾವತಿದಾರರೆಂದು 784 ಅರ್ಜಿಗಳು ತಿರಸ್ಕೃತಗೊಂಡಿದ್ದು, NPCI, e-KYC ಮಾಡಿಸಲು ಬಾಕಿ ಉಳಿದಿರುವ ಫಲಾನುಭವಿಗಳ ಸಂಖ್ಯೆ 166, ಮರಣ ನೋಂದಣಿ ಮಾಡಿಸಿದ ಫಲಾನುಭವಿಗಳ ಸಂಖ್ಯೆ 231 ಹಾಗೂ ತಿಂಗಳ ಅಂತ್ಯಕ್ಕೆ ಸಿಡಿಪಿಒ…
ಲೇಖಕ: admin
ಮಡಿಕೇರಿ ಆ.26 NEWS DESK : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಗೌರಿ ಹಬ್ಬದ ಪ್ರಯುಕ್ತ ಬಾಗಿನ ಅರ್ಪಿಸಿದರು. ಶ್ರೀ ಸಿದ್ದೇಶ್ವರ, ಬಸವೇಶ್ವರ ಹಾಗೂ ತಾಯಿ ಹೊನ್ನಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರು, ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಲು ಹಾಗೂ ತಾಯಿ ಹೊನ್ನಮ್ಮ ಕೆರೆಗೆ ಬಾಗಿನ ಸಮರ್ಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿ ವರ್ಷ ಭಕ್ತಾಧಿಗಳು ಆಗಮಿಸುವುದು ವಿಶೇಷ ಎಂದರು. ತಾಯಿ ಹೊನ್ನಮ್ಮನ ಕೆರೆಗೆ ನವ ದಂಪತಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿಕೊಂಡು ಬರುತ್ತಾರೆ. ಗೌರಿ ಹಬ್ಬ ಆಚರಣೆಯಿಂದ ಕುಟುಂಬದವರೆಲ್ಲರೂ ಒಂದೆಡೆ ಸೇರುವುದು ವಿಶೇಷವಾಗಿದೆ ಎಂದರು. ಈ ಬಾರಿ ಒಳ್ಳೆಯ ಮಳೆಯಾಗಿದ್ದು, ಉತ್ತಮ ಬೆಳೆಯಾಗಲಿದೆ. ಹೆಚ್ಚಿನ ಮಳೆಯಿಂದಾಗಿ ಕೆಲವು ಕಡೆ ತೊಂದರೆಯೂ ಸಹ ಆಗಿದೆ ಎಂದು ಶಾಸಕರು ನುಡಿದರು. ಪ್ರಮುಖರಾದ ಕೆ.ಪಿ.ಚಂದ್ರಕಲಾ, ಲೋಕೇಶ್, ದೇವಾಲಯದ ಆಡಳಿತ ಮಂಡಳಿ…
ಮಡಿಕೇರಿ ಆ.26 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವ ಸಲುವಾಗಿ ರಾಜ್ಯದಲ್ಲಿರುವ ಜಾತಿ ಮತ್ತು ಉಪಜಾತಿಗಳ ಹೆಸರಿನ ಪಟ್ಟಿಯನ್ನು ದಿನಾಂಕ 22-08-2025 ರಂದು ರಾಜ್ಯಮಟ್ಟದ ಪತ್ರಿಕೆಯಲ್ಲಿ ಪ್ರಕಟಿಸಿದೆ. ಕೊಡಗು ಜಿಲ್ಲೆಯಲ್ಲಿರುವ ಜಾತಿ-ಉಪಜಾತಿಗಳ ಹೆಸರು ಪ್ರಕಟಿತ ಪಟ್ಟಿಯಲ್ಲಿದ್ದು ಅದರಲ್ಲಿ ಏನಾದರು ತಪ್ಪಾಗಿ ನಮೂದಾಗಿದ್ದಲ್ಲಿ ಜಾತಿಗಳು ಬಿಟ್ಟು ಹೋಗಿದ್ದಲ್ಲಿ ಪ್ರಕಟನೆಗೊಂಡ 7 ದಿನಗೊಳಗಾಗಿ ಸಾರ್ವಜನಿಕರು/ ಸಂಘ ಸಂಸ್ಥೆಗಳು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಂ 16, 2ನೇ ಮಹಡಿ ಮಿಲ್ಲರ್ಸ್ ಟ್ಯಾಂಕ್ ಬೆಡ್ ಏರಿಯ, ವಸಂತ ನಗರ ಬೆಂಗಳೂರು, 5660052 ಇಲ್ಲಿಗೆ ಪತ್ರ ಮುಖೇನ ಅಥವಾ kscbcb@gmail.com ಇಲ್ಲಿಗೆ ಇಮೇಲ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಪತ್ರಿಕೆಯಲ್ಲಿ ಪ್ರಕಟಣೆಗೊಂಡ ಜಾತಿಗಳ ಪಟ್ಟಿಯಲ್ಲಿ ಜಿಲ್ಲೆಯ ಜಾತಿ-ಉಪಜಾತಿಗಳ ಹೆಸರು ಬಿಟ್ಟುಹೋಗಿದ್ದಲ್ಲಿ ಕೂಡಲೇ ಲಿಖಿತ ಮನವಿಯನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳುಹಿಸಲು ಅವಕಾಶವಿದೆ ಎಂದು ಅಹಿಂದ ಒಕ್ಕೂಟ ತಿಳಿಸಿದೆ.
ಗೋಣಿಕೊಪ್ಪ ಆ.26 NEWS DESK : ಶ್ರೀ ಕಾವೇರಿ ದಸರಾ ಸಮಿತಿಯ 47ನೇ ವರ್ಷದ ದಸರಾ ಜನೋತ್ಸವದ ಆಚರಣೆಗೆ ಆ.30ರಂದು ನೂತನ ಸಮಿತಿ ರಚಿಸಲಾಗುವುದು ಎಂದು ಅಧ್ಯಕ್ಷ ರಾಮಕೃಷ್ಣ ಮಾಹಿತಿ ನೀಡಿದ್ದಾರೆ. ಗೋಣಿಕೊಪ್ಪದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕರಲ್ಲಿಗೆ ನಿಯೋಗ ತೆರಳಿ ಶಾಸಕರ ಸಲಹೆ ಸೂಚನೆಯಂತೆ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕಳೆದ 21ರಂದು ನಡೆದ ಗ್ರಾಮ ಪಂಚಾಯಿತಿಯ ಸಾಮಾನ್ಯ ನಡುವಳಿಯಲ್ಲಿ ಈಗಾಗಲೇ ಸಮಿತಿಯ ಬೈಲಾ ನಿಯಮದಂತೆ ಪಂಚಾಯಿತಿ ಸದಸ್ಯರ ಒಮ್ಮತದ ನಿರ್ಧಾರದಂತೆ ದಸರಾ ಆಚರಣೆಯ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರು, ಪಂಚಾಯಿತಿ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿಗಳ ಸಮ್ಮುಖದಲ್ಲಿ ಈ ಆಯ್ಕೆ ನಡೆದಿದೆ. ಇದು ದೇವರ ಸೇವೆಗೆ ಸಿಕ್ಕಿದ ಪುಣ್ಯವಾಗಿದೆ. ಈ ಕಾರ್ಯವನ್ನು ಧಾರ್ಮಿಕ ವಿಚಾರಕ್ಕೆ ಒಳಪಟ್ಟಂತೆ, ಶಾಸಕರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ರಾಮಕೃಷ್ಣ ಮಾಹಿತಿ ಹಂಚಿಕೊಂಡಿದ್ದಾರೆ.
ನಾಪೋಕ್ಲು ಆ.26 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ನಾಪೋಕ್ಲು ಸರಕಾರಿ ಪದವಿ ಕಾಲೇಜಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಕಾಲೇಜಿನ ಆವರಣದಲ್ಲಿ ಬೆಳೆದಿದ್ದ ಕಾಡು ಗಿಡಗಂಟಿಗಳನ್ನು ಕಡಿದು, ಪೇಪರ್, ಪ್ಲಾಸ್ಟಿಕ್ಗಳನ್ನು ಘಟಕದ ಪದಾಧಿಕಾರಿಗಳು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ನಾಪೋಕ್ಲು ಮಡಿಕೇರಿ ತಾಲ್ಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ದಿವ್ಯ ಮಂದಪ್ಪ, ಸದಸ್ಯರಾದ ಉಮಾಲಕ್ಷ್ಮಿ, ಚಂದ್ರಕಲಾ, ಶಂಕರ, ದಿಲಿಶ್,,ರಮ್ಯಾ, ಪೊನ್ನಮ್ಮ, ಸುನಿತಾ, ಶರವಣ, ಮಾಯಿಲಪ್ಪ, ನಾರಾಯಣ, ಆಶಾಲತಾ ಉಪಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಗ್ರಾಮ ಪಂಚಾಯತ್ ಸದಸ್ಯರಾದ ಅರುಣ್ ಬೇಬ, ಸಬಾ, ಕಾಲೇಜು ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು, ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಆ.26 NEWS DESK : ವಿ.ಬಾಡಗ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿವಿಧ ಕ್ರೀಡೆಗಳ ತರಬೇತಿ ಕೇಂದ್ರದ ಕಾಮಗಾರಿ ಸ್ಥಳವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿ, ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ಸ್ಥಳೀಯ ಕ್ರೀಡಾ ಪ್ರತಿಭೆಗಳ ಅನುಕೂಲಕ್ಕೆಂದು ಕಾಮಗಾರಿಯನ್ನು ಕೈಗೊಂಡಿದ್ದು, ಗುಣಮಟ್ಟದ ಕ್ರೀಡಾಂಗಣ ಅತಿ ಶೀಘ್ರದಲ್ಲಿ ಲಭ್ಯವಾಗುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜ್, ವಿರಾಜಪೇಟೆ ಹಾಗೂ ಪೊನಂಪೇಟೆ ತಹಶೀಲ್ದಾರ್ ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಪಕ್ಷದ ಪ್ರಮುಖರಾದ ಕಂಜಿತಂಡ ಪೂವಣ್ಣ, ಗಿಣಿ ಮೊಣ್ಣಪ್ಪ, ಕೊಂಗಂಡ ಕಾಶಿ ಕಾರ್ಯಪ್ಪ, ಗಿರೀಶ್ ಮುದ್ದಯ್ಯ, ದವನ್ ದೇವಯ್ಯ, ಪ್ರಕಾಶ್ ಪೂವಯ್ಯ,ಕುಂದಚೀರ ಮಂಜು ದೇವಯ್ಯ, ಅಯೂಬ್, ಮೊದಲಾದವರು ಉಪಸ್ಥಿತರಿದ್ದರು.
ಮಡಿಕೇರಿ ಆ.26 NEWS DESK : ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪ ವಿದ್ಯಾನಗರದ ನೂತನ ಬಸ್ ತಂಗುದಾಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು 6.50 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣಗೊಂಡ ಬಸ್ ತಂಗುದಾಣವು, ಸ್ಥಳೀಯ ಪ್ರಯಾಣಿಕರಿಗೆ ಅನುಕೂಲ ಮಾಡುವುದರೊಂದಿಗೆ, ಮಳೆ ಹಾಗೂ ಬಿಸಿಲಿನ ತಾಪಕ್ಕೆ ರಕ್ಷಣೆ ಒದಗಿಸುವಲ್ಲಿ ಸಹಕಾರಿಯಾಗಲಿದೆ. ಈ ಭಾಗದ ಅನೇಕ ಜನರು ಹಾಗೂ ಕಾರ್ಮಿಕರು ತಮ್ಮ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ಬಸ್ ಪ್ರಯಾಣವನ್ನೇ ಅವಲಂಬಿಸುತ್ತಿದ್ದು, ಇಂತಹ ಪ್ರಯಾಣಿಕರಿಗೆ ಇದು ಅತ್ಯಂತ ಅನುಕೂಲ ಒದಗಿಸಲಿದೆ ಎಂದು ಹೇಳಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ ಕುಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ, ಕೋಲಿರ ಜಯ, ವಾಸು, ನಾಯಂದಿರ ಶಿವಾಜಿ ನಗರ ಉಪಾಧ್ಯಕ್ಷರು, ಧ್ಯಾನ್ ಸುಬ್ಬಯ್ಯ, ಕುಸುಮ, ಧನ್ಯ, ಗಣೇಶ್ ಕೆ ಎಂ, ಗ್ಯಾರಂಟಿ ಅನುಷ್ಠಾನ ಸದಸ್ಯರು ಕಲೀದ್,…
ಮಡಿಕೇರಿ ಆ.26 NEWS DESK : ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಗೆ ಅಗತ್ಯ ವಿದ್ದ ಲ್ಯಾಪ್ಟಾಪ್ ಅವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿತರಿಸಿದರು. ವಿರಾಜಪೇಟೆ ನಿವಾಸಿ ಸಂಜಯ್ ಎಂಬ ವಿದ್ಯಾರ್ಥಿಗೆ ತಮ್ಮ ಸ್ವಂತ ವೆಚ್ಚದಲ್ಲಿ ಲ್ಯಾಪ್ಟಾಪ್ ವಿತರಿಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ತಾಲ್ಲೂಕು ಕೆಡಿಪಿ ಸದಸ್ಯರಾದ ಮಾಳೆಟೀರ ಪ್ರಶಾಂತ್ ಉಪಸ್ಥಿತರಿದ್ದರು.
ಭಾಗಮಂಡಲ ಆ.26 NEWS DESK : ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪ್ರಥಮ, ಥ್ರೋಬಾಲ್ ಪ್ರಥಮ, ಕಬಡ್ಡಿ ಪ್ರಥಮ. ಬಾಲಕಿಯರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ಥ್ರೋಬಾಲ್ ಪ್ರಥಮ, ಪ್ರಾಥಮಿಕ ವಿಭಾಗದ ಬಾಲಕರ ವಿಭಾಗದಲ್ಲಿ ವಾಲಿಬಾಲ್ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ಥ್ರೋಬಾಲ್ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರೌಢಶಾಲಾ ಅಥೇಟಿಕ್ಸ್ ವಿಭಾಗದಲ್ಲಿ ಧನ್ಯ 3000 ಮೀಟರ್, ಹೈಜಂಪ್, ಲಾಂಗ್ ಜಂಪ್ನಲ್ಲಿ ಪ್ರಥಮ. ವರ್ಷಿಣಿ 100 ಮೀ ಪ್ರಥಮ, 200ಮೀ ಪ್ರಥಮ, ತ್ರಿಪಲ್ ಜಂಪ್ ದ್ವಿತೀಯ. ವರ್ಷ 400 ಮೀ ಪ್ರಥಮ, ಡಯಾನಾ ಶಾಟ್ ಪುಟ್ ತೃತಿಯ, ತಟ್ಟೆ ಎಸೆತ ಪ್ರಥಮ, ಸನಿತಾ ಜಾವೇಲಿನ ಥ್ರೋ ಪ್ರಥಮ, ಸುಕನ್ಯಾ 1,500 ಪ್ರಥಮ, ತ್ರಿಪಲ್ ಜಂಪ್ ತೃತಿಯ, ರಿಲೇ 4*400 ಪ್ರಥಮ,…
ಮಡಿಕೇರಿ ಆ.26 NEWS DESK : ಚೇನಂಡ ಕುಟುಂಬದ ಸಾರಥ್ಯದಲ್ಲಿ 2026ರ ಕೊಡವ ಕೌಟುಂಬಿಕ ಹಾಕಿ ಉತ್ಸವದ ಕರಪತ್ರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಶಾಸಕರು, ಕೌಟುಂಬಿಕ ಹಾಕಿ ಪಂದ್ಯಾವಳಿಗಳು ಕೇವಲ ಕ್ರೀಡೆ ಮಾತ್ರವಲ್ಲದೆ ಪ್ರತಿಷ್ಠೆಯ ಸಂಕೇತ ಕೂಡ ಆಗಿದೆ. ಕೊಡಗು ಜಿಲ್ಲೆಯು ಅಂತರಾಷ್ಟ್ರೀಯ ಮಟ್ಟದ ಹಾಕಿ ಪಟುಗಳ ತವರೂರಾಗಿದ್ದು, ಈ ಹಾಕಿ ಪಂದ್ಯಾವಳಿ ಕೂಡ ಯಶಸ್ಸಿನ ಹಾದಿ ತುಳಿಯಲಿ ಹಾಗೂ ಅನೇಕ ಯುವ ಪ್ರತಿಭೆಗಳ ಅನಾವರಣಕ್ಕೆ ಸಾಕ್ಷಿಯಾಗುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜ್, ಚೇನಂಡ ಕುಟುಂಬದ ಅಧ್ಯಕ್ಷರಾದ ಕಂಬನಿ ಕರುಂಬಯ್ಯ, ಕುಟುಂಬದ ಸದಸ್ಯರು, ಸಂಪನ್ ಅಯ್ಯಪ್ಪ, ವಿನೋದ್, ಪೊನಂಪೇಟೆ ತಹಸೀಲ್ದಾರ್ ಮೋಹನ್, ವಿರಾಜಪೇಟೆ ತಹಸೀಲ್ದಾರ್ ಪ್ರವೀಣ್ ಹಾಗೂ ಚೇನಂಡ ಕುಟುಂಬದ ಪಟ್ಟಿದಾರರು ಹಾಗೂ ಪ್ರಮುಖರು, ಹಾಕಿ ಪಂದ್ಯಾವಳಿಯ ಸಮಿತಿಯವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.






