ಲೇಖಕ: admin

ಸುಂಟಿಕೊಪ್ಪ ಆ.23 NEWS DESK : ಸುಂಟಿಕೊಪ್ಪ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡನೇ ಅವಧಿಗೆ ಅಧ್ಯಕ್ಷರಾಗಿ ಜರ್ಮಿ ಡಿಸೋಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಸಂಘದ ಉಪಾಧ್ಯಕ್ಷೆ ರಮ್ಯಾ ಮೋಹನ್, ಕುಶಾಲನಗರದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎಂ.ಎನ್.ಕುಮಾರಪ್ಪ, ನಿರ್ದೇಶಕರಾದ ಕ್ಲೈವ ಪೊನ್ನಪ್ಪ, ಡಿ.ಬಿ.ಚೆಂಗಪ್ಪ, ಲೀಲಾವತಿ, ಗಂಗಾಧರ್, ಡಾ.ಶಶಿಕಾಂತ ರೈ, ದಯಾನಂದ, ಕೆ.ಆರ್.ಮಂಜುನಾಥ್, ಕೆ.ಪಿ.ಜಗನ್ನಾತ್, ದಯಾನಂದ, ಪಿ.ಪಿ.ಉದಯಕುಮಾರ್, ಮಾಜಿ ಅಧ್ಯಕ್ಷರಾದ ಕೆ.ಎಸ್.ಮಂಜುನಾಥ್, ಸಂಘದ ಮುಖ್ಯ ನಿರ್ವಹಣಾಧಿಕಾರಿ ಸುಮಿತ್ರಾ ಇದ್ದರು. ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಸಹಕಾರ ಇಲಾಖೆಯ ಪಟ್ಟಡ ಮೋಹನ್ ಕಾರ್ಯನಿರ್ವಹಿಸಿದರು.

Read More

ಮಡಿಕೇರಿ ಆ.23 NEWS DESK :  ಕೊಡವ ಕೂಟಾಳಿಯಡ ಕೂಟ ಸಂಘಟನೆಯ ನೂತನ ಅಧ್ಯಕ್ಷರಾಗಿ  ಚೊಟ್ಟಂಡ ಪ್ರಭು ಸೋಮಯ್ಯ, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ನೇಮಗೊಂಡಿದ್ದಾರೆ. ಪೊನ್ನಂಪೇಟೆಯ  ಗೋಲ್ಡನ್ ಗೇಟ್ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾಗಿದ್ದ ಚೆಟ್ಟೋಳಿರ  ಶರತ್ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ  ನಡೆದ ಸಂಘಟನೆಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನೂತನ ಯನ್ನು ರಚಿಸಲಾಯಿತು.  ಉಪಾಧ್ಯಕ್ಷರಾಗಿ ಚೆಕ್ಕೆರ ರಾಜೇಶ್, ಖಜಾಂಚಿಯಾಗಿ ಮಾಚಿಮಡ ಡಿಂಪಲ್, ಸಂಘಟನೆಯ ನಿರ್ದೇಶಕರುಗಳಾಗಿ ಕಾಂಗೀರ ಸಂತೋಷ್ ದೇವಯ್ಯ, ಅಮ್ಮಾಟಂಡ ಚೇತನ್,  ಚೇಂದಿರ ಪ್ರಿಯಾ ಲೋಹಿತ್, ನೂರೆರ ಸರಿತ ಉತ್ತಯ್ಯ, ಕೊಟ್ಟಂಗಡ ಕವಿತ ವಾಸುದೇವ, ಅಜ್ಜಮಾಡ ಸಾವಿತ್ರಿ, ಬೊಜ್ಜಂಗಡ ಭವ್ಯ ದೇವಯ್ಯ, ಇಟ್ಟಿರ ಭವ್ಯ ಈಶ್ವರ್, ಪಾಂಡಿರ ದಿವ್ಯ ಉತ್ತಪ್ಪ, ಚಕ್ಕೆರ ಹೇಮಾ ಆಯ್ಕೆಗೊಂಡರು. ನಂತರ ಮಾತನಾಡಿದ ನೂತನ ಅಧ್ಯಕ್ಷರು, ಕಳೆದ ಐದು ವರ್ಷಗಳಿಂದ ಈ ಸಂಘಟನೆಯು ಕೊಡವ ಜನಾಂಗದವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಇನ್ನು ಮುಂದೆಯೂ ಸಂಘಟನೆಯಲ್ಲಿ ಎಲ್ಲರ ಸಲಹೆ ಸಾಕಾರವನ್ನು ಪಡೆದುಕೊಂಡು ವಿನೂತನ ಕಾರ್ಯಕ್ರಮಗಳು ನಡೆಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ…

Read More

ಮಡಿಕೇರಿ ಆ.23 NEWS DESK : ಪ್ರವಾಸೋದ್ಯಮ ಇಲಾಖೆಯಿಂದ 2024-25 ಹಾಗೂ 2025-26 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್‍ಟ್ಯೂಟ್(ಎಫ್‍ಸಿಐ), ಮೈಸೂರು ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ (ಐಎಚ್‍ಎಂ) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. :: ಕಾರ್ಯಕ್ರಮಗಳ ವಿವರ :: ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ, ಕನಿಷ್ಟ ವಿದ್ಯಾರ್ಹತೆ- ಎಸ್‍ಎಸ್‍ಎಲ್‍ಸಿ ಪಾಸ್, ತರಬೇತಿ ಕಾಲಾವಧಿ 540 ಗಂಟೆಗಳು (300 ಗಂಟೆಗಳು +240 ಗಂಟೆಗಳು ಒಜೆಟಿ) 15 ವಾರಗಳು (4 ತಿಂಗಳುಗಳು), ವಯಸ್ಸು 20 ರಿಂದ 45 ವರ್ಷ ಮೇಲ್ಪಟ್ಟವರು, ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -2 ಕೊಡಗು ಜಿಲ್ಲೆಯ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ-1 ಅರ್ಜಿದಾರರು ಇತ್ತೀಚಿನ ಭಾವಚಿತ್ರ, ಆದಾರ್ ಕಾರ್ಡ್, ರೇಷನ್ ಕಾರ್ಡ್,…

Read More

ಮಡಿಕೇರಿ ಆ.23 NEWS DESK : ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ದೊಡ್ಡಮಳ್ತೆ ಗ್ರಾಮ, ಇವರ ಸಹಯೋಗದೊಂದಿಗೆ ಶ್ರೀ ಸ್ವರ್ಣಗೌರಿ ಮಹೋತ್ಸವನ ಅಂಗವಾಗಿ ಬಾಗಿನ ಅರ್ಪಣೆ ಕಾರ್ಯಕ್ರಮವು ಆಗಸ್ಟ್, 26 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಹೊನ್ನಮ್ಮನ ಕೆರೆಯಲ್ಲಿ ನಡೆಯಲಿದೆ. ಮೈಸೂರು ಕೊಡಗು ಲೋಕಾಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಕರ್ನಾಟಕ ಸರ್ಕಾರ ಮಾಜಿ ಸಚಿವರಾದ ಬಿ.ಎ.ಜೀವಿಜಯ, ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್, ಅರಕಲಗೂಡು ವಿಧಾನಸಭಾ ಕ್ಷೇತ್ರ ಶಾಸಕರಾದ ಎ.ಮಂಜು, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ಜಿ.ಪಂ.ಮಾಜಿ ಅಧ್ಯಕ್ಷರಾದ ಚಂದ್ರಕಲಾ, ಗ್ರಾ.ಪಂ. ಅಧ್ಯಕ್ಷರಾದ ಹೆಚ್.ಎಂ.ಗೋಪಾಲಕೃಷ್ಣ, ಪ್ರಾ.ಕೃ.ಪ ಸ.ಸಂ ಗೌಡಳ್ಳಿ ಅಧ್ಯಕ್ಷರಾದ ಹೆಚ್.ಆರ್ ಸುರೇಶ್, ಬೆಂಗಳೂರು ರಾಜ್ಯ ವಕ್ಕಲಿಗರ ಸಂಘ ನಿರ್ದೇಶಕರಾದ…

Read More

ಮಡಿಕೇರಿ ಆ.23 NEWS DESK : ಪ್ರಸಕ್ತ (2025-26) ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಯುಪಿಎಸ್‍ಸಿ/ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್‍ಸಿ ಗ್ರೂಪ್-“ಸಿ”, ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. https://sevasindhu.karnataka.gov.in/Sevasindhu/DepartmentServices ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ ವಿಧಾನಗಳು https://dom.karnataka.gov.in ನಲ್ಲಿ ಲಭ್ಯವಿದೆ.ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು, (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ), ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ: ಯುಪಿಎಸ್‍ಸಿ/ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್, ಕೆಪಿಎಸ್‍ಸಿ ಗ್ರೂಪ್-“ಸಿ” ತರಬೇತಿಗೆ ಕನಿಷ್ಠ 21 ಹಾಗೂ ಗರಿಷ್ಟ 35 ವರ್ಷಗಳು ಮತ್ತು ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ತರಬೇತಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಟ…

Read More

ಮಡಿಕೇರಿ ಆ.23 NEWS DESK : ಅರಣ್ಯ ಬಗರ್ ಹುಕುಂ ಸಾಗುವಾಳಿದಾರ ಬಡ ಕುಟುಂಬಗಳಿಗೆ ಸರಕಾರ ಒನ್ ಟೈಮ್ ಸೆಟಲ್‍ಮೆಂಟ್ ಮೂಲಕ ಭೂಮಿ, ವಸತಿ ಹಕ್ಕು ಮಾನ್ಯ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ರಾಜ್ಯ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಪ್ರಮುಖ ಅಮೀನ್ ಮೊಹಿಸಿನ್ ಅವರು ಸಿ ಮತ್ತು ಡಿ ಭೂಮಿಯ ಸಮಸ್ಯೆಗೆ ದೊರೆಯುವ ಪರಿಹಾರ ಬಡವರ ಪರವಾಗಿ ಇರಬೇಕೇ ಹೊರತು ಉಳ್ಳವರ ಪರವಾಗಿ ಇರಬಾರದು. ಬಡವರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಒತ್ತಾಯಿಸಿದರು. ಅಕ್ರಮ ಸಕ್ರಮ ಸಮಿತಿ ಕೇವಲ ನಾಮಕಾವಸ್ಥೆಗಷ್ಟೇ ಇದ್ದು, ಇದೊಂದು ರಾಜಕೀಯ ಸಮಿತಿಯಾಗಿದೆ. ಈ ಸಮಿತಿಯಡಿ ಎಷ್ಟು ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಲೆಕ್ಕವನ್ನು ಮೊದಲು ನೀಡಬೇಕು. ತಹಶೀಲ್ದಾರರು ಸಮಿತಿಯ ಸಭೆ ನಡೆಸಿ ನಿವೇಶನ ರಹಿತರ ಅರ್ಜಿಯನ್ನು ವಿಲೇವಾರಿ ಮಾಡಬೇಕು ಎಂದರು. ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು…

Read More

ಮಡಿಕೇರಿ ಆ.23 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 13 ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ಸೇವಾ ಸಿಂಧು, ಆನ್‍ಲೈನ್ ತಂತ್ರಾಂಶದಡಿ ಆಳವಡಿಸಲಾಗಿದೆ. ಆದ್ದರಿಂದ ವಿವಿಧ ಯೋಜನೆಗಳಿಗೆ 2025-26 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ (https://sevasindhu.karnataka.gov.in/Sevasindhu/Kannada)  ಪೋರ್ಟ್‍ಲ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ಸಾಧನ ಸಲಕರಣೆ ಯೋಜನೆ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‍ಡಬ್ಲ್ಯು ಹಾಗೂ…

Read More

ಮಡಿಕೇರಿ ಆ.23 NEWS DESK : ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ 18ನೇ ಪುಣ್ಯಸ್ಮರಣೆಯ ಅಂಗವಾಗಿ ಆ.25 ರಂದು ಮಡಿಕೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಮಡಿಕೇರಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಸಮಾಜ ಸೇವಾ ವಿಭಾಗ, ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬ್ರಹ್ಮಾಕುಮಾರಿ ಲೈಟ್‍ಹೌಸ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ರಿಂದ 1.30ರ ವರೆಗೆ ಶಿಬಿರ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬ್ರಹ್ಮಾಕುಮಾರಿ ಲೈಟ್‍ಹೌಸ್‍ನ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯಿತ್ರಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

Read More

ಸುಂಟಿಕೊಪ್ಪ ಆ.23 NEWS DESK : ಧರ್ಮದ ತಳಹದಿಯ ಮೇಲೆ ಆರ್ಥಿಕ ಸಬಲತೆಯನ್ನು ಹೊಂದುವ ವ್ಯವಸ್ಥೆಯನ್ನು ಮಹಿಳಾ ಸಬಲೀಕರಣದ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಸಾಧಿಸಿದೆ ಎಂದು ಶ್ರೀ ಕ್ಷೇತ್ರ ಕಿರಿಕೊಡ್ಲಿ ಮಠದ ಕೊಡ್ಲಿಪೇಟೆಯ ಶ್ರೀ ಸದಾಶಿವ ಸ್ವಾಮಿಗಳು ಹೇಳಿದ್ದಾರೆ. ಕೊಡಗರಹಳ್ಳಿಯ ನೇತಾಜಿ ಯುವಕ ಸಂಘದ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಗಳ ಒಕ್ಕೂಟ ಗುಡ್ಡೆಹೊಸೂರು ವಲಯ ಸಂಯುಕ್ತಾಶ್ರಯದಲ್ಲಿ ಕೌಟುಂಬಿಕ ಸೌಹಾರ್ದತೆ ಹಾಗೂ ಗ್ರಾಮಸುಭಿಕ್ಷೆಗಾಗಿ ವಲಯ ಮಟ್ಟದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಧಾರ್ಮಿಕ ಉಪನ್ಯಾಸ ನೀಡಿದರು. ಜನರಿಂದ ಜನರಿಗಾಗಿ ಜನರಿಗೋಸ್ಕರ ಗ್ರಾಮಾಭಿವೃದ್ಧಿ ಯೋಜನೆ ರೂಪುಗೊಂಡಿದ್ದು, ಮಾನಸಿಕವಾಗಿ ಸಾಮಾಜಿಕವಾಗಿ ಧಾರ್ಮಿಕವಾಗಿ ಜನರನ್ನು ಎಚ್ಚರಗೊಳಿಸಿ ಧರ್ಮದ ತಳಹದಿಯ ಮೇರೆ ಆರ್ಥಿಕ ಸಬಲೀಕರಣದ ಮೂಲಕ ಬದುಕನ್ನು ಕಟ್ಟಿಕೊಳ್ಳುವುದು ಶ್ರೇಷ್ಠ ಸಾಧನೆಯೆಂದು ಸ್ವಾಮೀಜಿ ಬಣ್ಣಿಸಿದರು. ಭಾರತ ಎಲ್ಲಾ ರೀತಿಯಲ್ಲೂ…

Read More

ಸುಂಟಿಕೊಪ್ಪ ಆ.23 NEWS DESK : ಸುಂಟಿಕೊಪ್ಪ ಶ್ರೀ ರಾಮ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷರು ಹಾಗೂ ಕೆಳಗಿನ ಪನ್ಯ ತೋಟದ ಮಾಲೀಕರಾದ ಎಸ್.ಬಿ.ಶಂಕರ್ ಅವರ ಪುತ್ರ ಎಸ್.ಎಸ್.ಸಂದೇಶ್ (58) ಅವರು ಮೈಸೂರಿನಲ್ಲಿ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಸ್ವಗೃಹ ಪನ್ಯದಲ್ಲಿ ನಡೆಯಿತು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Read More