ಸೋಮವಾರಪೇಟೆ ಸೆ.20 NEWS DESK : ಮಾದಾಪುರ ಬಿ.ಚನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪಿಯು ಕಾಲೇಜಿನ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯ ಬಾಲಕಿಯರ ವಿಭಾಗದಲ್ಲಿ ಸೋಮವಾರಪೇಟೆ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪಿಯು ಕಾಲೇಜು ತಂಡ ಮತ್ತು ಬಾಲಕರ ವಿಭಾಗದಲ್ಲಿ ಕುಶಾಲನಗರ ವಿವೇಕಾನಂದ ಪಿಯು ಕಾಲೇಜು ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಿಟಿಸಿಜಿ ಬಾಲಕಿಯರ ತಂಡ ಫೈನಲ್ನಲ್ಲಿ ಕೊಡ್ಲಿಪೇಟೆ ಪಿಯು ಕಾಲೇಜು ತಂಡದ ವಿರುದ್ಧ ಜಯಗಳಿಸಿತು. ವಿಜೇತ ತಂಡದ ಪರವಾಗಿ ಹೆಚ್.ಆರ್.ಜೀವಿತ, ಹೆಚ್.ಆರ್.ದಿಶಿತಾ, ಧನಲಕ್ಷ್ಮಿ, ವೈಭವಿ ಹಾಗೂ ಕೊಡ್ಲಿಪೇಟೆ ತಂಡದ ಪರವಾಗಿ ಯಮುನಾ, ಪುಷ್ಪಲತ ಆದಿಡದರು. ಬಾಲಕರ ವಿಭಾಗದಲ್ಲಿ ವಿವೇಕಾನಂದ ಕಾಲೇಜು ತಂಡ, ಕುಶಾಲನಗರ ಜ್ಞಾನಭಾರತಿ ಪಿಯು ಕಾಲೇಜು ತಂಡವನ್ನು ಮಣಿಸಿತು. ವಿಜೇತ ತಂಡದ ಪರವಾಗಿ ಹೇಮಂತ್, ಅರುನ್ ಇಬ್ರಾಹಿಂ, ಧಿರೇಂದ್ರಮೋದಿ, ಹರ್ಷ, ಉಮರ್ಸಾದ್, ಜ್ಞಾನಭಾರತಿ ತಂಡದ ಪರವಾಗಿ ಮಹಮ್ಮದ್ ಅನ್ವರ್, ರಾಕೇಶ್, ಅಕ್ಷಯ್, ಮೋಹಿತ್ ಆಟವಾಡಿದರು. ಮಾದಪುರ ಪ್ಲಾಂಟರ್ಸ್ ಕ್ಲಬ್ ಹಾಗೂ ಚನ್ನಮ್ಮ ಕಾಲೇಜಿನ ಒಳಂಗಣ ಕ್ರೀಡಾಂಗಣದಲ್ಲಿ ಪಂದ್ಯಾಟಗಳು…
ಲೇಖಕ: admin
ಮಡಿಕೇರಿ ಸೆ.20 NEWS DESK : ಉತ್ತರ ಪ್ರದೇಶದ ಲಕ್ನೋದ ಬಿಬಿಡಿ ಯು.ಪಿ. ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ನಡೆದ ಯೋನೆಕ್ಸ್ ಸನ್ ರೈಸ್ ಡಾ.ಅಕಿಲೇಶ್ ದಾಸ್ ಗುಪ್ತ ಮೆಮೋರಿಯಲ್ ಆಲ್ ಇಂಡಿಯಾ ಸೀನಿಯರ್ ರಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗಿನ ದಿಯಾ ಭೀಮಯ್ಯ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ದಿಯಾ ಭೀಮಯ್ಯ ಕೇರಳದ ಜೊರ್ನ್ ಜೇಸನ್ ಜೊತೆಯಾಟ (ಮಿಶ್ರ ಡಬಲ್ಸ್ ) ನಲ್ಲಿ ಪ್ರಥಮ ಹಾಗೂ ಮಹಿಳೆಯರ ಡಬಲ್ಸ್ ನಲ್ಲಿ ಹರಿಯಾಣದ ಬಾರುನಿ ಪರುಸ್ವಾಲ್ ಜೊತೆಗೂಡಿ ತೃತೀಯ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಕೊಡಗಿಗೆ ಕೀರ್ತಿ ತಂದಿದ್ದಾರೆ.
ಮಡಿಕೇರಿ ಸೆ.20 NEWS DESK : ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ನಗರದ ದಸರಾ ಸಮಿತಿ ಕಚೇರಿಯಲ್ಲಿ ಅಲಂಕಾರ ಸಮಿತಿಯ ಅಧ್ಯಕ್ಷರಾದ ಎಂ.ಎ.ಮುನೀರ್ ಮಾಚರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಸಲಹೆಗಾರರಾಗಿ ಪಿ.ಜಿ.ಮಂಜುನಾಥ್, ಉಪಾಧ್ಯಕ್ಷರಾಗಿ ರವಿಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಎಂ.ಚೇತನ್, ಕಾರ್ಯದರ್ಶಿಯಾಗಿ ಜಿ.ಎನ್.ಭಾರತ್, ಸಹ ಕಾರ್ಯದರ್ಶಿಯಾಗಿ ಜಿ.ಎನ್.ಪುನೀತ್, ಖಜಾಂಚಿಯಾಗಿ ರಫೀಕ್ (ದಾದಾ), ಸಹ ಖಜಾಂಚಿಯಾಗಿ ಲಿಲ್ಲಿ ಗೌಡ, ಸಂಘಟನಾ ಕಾರ್ಯದರ್ಶಿ ಹರ್ಷಿತ್ ಕುಮಾರ್, ಸಂಚಾಲಕರುಗಳಾಗಿ ಬಿ.ಕೆ.ನವೀನ್ ಹಾಗೂ ಕಲಿಲ್ ಭಾಷಾ ಆಯ್ಕೆಯಾಗಿದ್ದಾರೆ.
ಮಡಿಕೇರಿ ಸೆ.19 NEWS DESK : ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಗರದ ಜನರಲ್ ಜಿಲ್ಲಾ ತಿಮ್ಮಯ್ಯ ಕ್ರೀಡಾಂಗಣದ ಬಳಿ ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡೆಯಲ್ಲಿ 60 ರಿಂದ 69 ವಯೋಮಿತಿಯ ಪುರುಷ ಹಾಗೂ ಮಹಿಳೆಯರಿಗೆ ಬಿರುಸಿನ ನಡಿಗೆ, ಮ್ಯೂಸಿಕಲ್ ಚೇರ್ ಹಾಗೆಯೇ ಬಕೆಟಿಗೆ ಬಾಲ್ ಎಸೆಯುವ 70 ರಿಂದ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಪುರುಷ ಹಾಗೂ ಮಹಿಳೆಯರಿಗೆ ಮ್ಯೂಸಿಕಲ್ ಚೇರ್ ಬಕೇಟಿಗೆ ಬಾಲ್ ಹಾಕುವ ಕ್ರೀಡೆ ನಡೆಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಏಕಪಾತ್ರ ಅಭಿನಯ ಗಾಯನ ಸ್ಪರ್ಧೆ ನಡೆಯಿತು. 60 ರಿಂದ 69 ವಯಸ್ಸು ಮತ್ತು 70 ರ ಮೇಲ್ಪಟ್ಟ ವಯಸ್ಸಿನ ವಿಭಾಗವಾರು ಪುರುಷ ಹಾಗೂ ಮಹಿಳೆಯರಿಗೆ…
ಮಡಿಕೇರಿ ಸೆ.20 NEWS DESK : ಪೋಷಣ್ ಮಾಸಾಚರಣೆ ಮತ್ತು ಸ್ವಾಸ್ಥನಾರಿ ಸಶಕ್ತ ಕುಟುಂಬ ಅಭಿಯಾನದಡಿ ಸ್ಟೋನ್ ಹಿಲ್ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಬಾಣಂತಿ, ಮಕ್ಕಳು, ಅಂಗನವಾಡಿ ಕಾರ್ಯಕತೆಯರು ಮತ್ತು ಸಹಾಯಕರಿಗೆ ಆರೋಗ್ಯ ತಪಾಸಣೆ ನಡೆಸಿ ಅನೀಮಿಯ, ಹೆಚ್ಬಿ, ಬಿಪಿ, ಶುಗರ್ ತಪಾಸಣೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಮಾತನಾಡಿ, ಶಿಶು ಮತ್ತು ಬಾಲ್ಯ ಪೋಷಣ್ ಅಭ್ಯಾಸಗಳ ಬಗ್ಗೆ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣದ ಬಗ್ಗೆ, ಪೋಷಣ್ ಬಿ ಪಡಾಯಿ ಬಿ ಕುರಿತು ಮಾಹಿತಿ ನೀಡಿದರು. ಅಪೌಷ್ಟಿಕತೆ ಹೋಗಲಾಡಿಸುವಲ್ಲಿ ಕಾರ್ಯಕರ್ತೆಯರು ಹೆಚ್ಚಿನ ಜಾಗೃತಿ ಮೂಡಿಸಬೇಕು. ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು. ಇಲಾಖೆಯ ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಅವರು ನೆರೆದಿದ್ದ ಮಹಿಳೆಯರಿಗೆ ಆರೋಗ್ಯಕರ ಜೀವನ ಶೈಲಿ ಅಭ್ಯಾಸಗಳ ಕುರಿತು ಮಾರ್ಗದರ್ಶನ ನೀಡಿದರು. ಪ್ರಸವ ಪೂರ್ವ ಆರೈಕೆ,…
ಬೆಂಗಳೂರು NEWS DESK ಸೆ.19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು >>> ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ. ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ “ದೀಪಿಕಾ ವಿದ್ಯಾರ್ಥಿ ವೇತನ” ನೀಡುವ ಈ ಯೋಜನೆಯಿಂದ ಬಡಹೆಣ್ಣುಮಕ್ಕಳಿಗೆ ಹೆಚ್ಚಿನ ಲಾಭವಾಗಲಿದೆ. ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಶ್ರೀ ಅಜೀಂ ಪ್ರೇಂಜಿ ಅವರು ಅಜೀಂ ಪ್ರೇಂಜಿ ಫೌಂಡೇಶನ್ ನ ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ‘’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ರೂ.30,000/- ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್…
ಮಡಿಕೇರಿ NEWS DESK ಸೆ.19 : ಮಡಿಕೇರಿ ನಗರದ ಅಶೋಕಪುರ ಬಡಾವಣೆ ನಿವಾಸಿ ಅರ್ಜುನ್ (35) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.
ಮಡಿಕೇರಿ ಸೆ.19 NEWS DESK : 66/11ಕೆ.ವಿ ಪೊನ್ನಂಪೇಟೆ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಗೋಣಿಕೊಪ್ಪ ನಗರ ವ್ಯಾಪ್ತಿಯಲ್ಲಿ ಸೆಪ್ಟೆಂಬರ್, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಸರಾ ಹಬ್ಬದ ಪ್ರಯುಕ್ತ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಶಾಂತಿನಗರ, ಗಣಪತಿನಗರ, ಜೋಡುಬೀಟೆ, ಕಾಫಿ ಬೋರ್ಡ್, ಅರುವತೋಕ್ಲು, ಗೋಣಿಕೊಪ್ಪಲು ನಗರ, ಕೊಪ್ಪ, ಪಟೇಲನಗರ, ನೇತಾಜಿ ಲೇಔಟ್, ಉಮಾ ಮಹೇಶ್ವರಿ ಲೇಔಟ್, ಗೋಣಿಕೊಪ್ಪಲು ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
ಮಡಿಕೇರಿ ಸೆ.19 NEWS DESK : ಮಡಿಕೇರಿ ನಗರ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ 8 ನೇ ವರ್ಷದ ಮಹಿಳಾ ದಸರಾ ಆಯೋಜಿಸಲಾಗಿದ್ದು, ಸೆಪ್ಟೆಂಬರ್, 28 ರಂದು ನಡೆಯಲಿದೆ. ಈ ಸಂಬಂಧ ವೈವಿಧ್ಯಮಯ ಸ್ಪರ್ಧೆಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ಮಹಿಳಾ ದಸರಾ ಅಂಗವಾಗಿ ಜಿಲ್ಲೆಯ ಮಹಿಳೆಯರಿಗಾಗಿಯೇ ವೈವಿಧ್ಯಮಯ ಸ್ಪರ್ಧೆಗಳು, ಕಾರ್ಯಕ್ರಮಗಳು ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಮಡಿಕೇರಿ ದಸರಾ ಸಮಿತಿ, ಮಡಿಕೇರಿ ನಗರಸಭೆ ಅಧ್ಯಕ್ಷರು, ಸದಸ್ಯೆಯರು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದೆ. :: ವಿವಿಧ ಸ್ಪರ್ಧೆಗಳು : : ಮೆಹಂದಿ ಹಾಕುವುದು, ಭಾರತೀಯ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ, ಕೇಶವಿನ್ಯಾಸ, ಸೀರೆಗೆ ನಿಖರ ಬೆಲೆ ಹೇಳುವುದು, ಕಣ್ಣಿಗೆ ಬಟ್ಟೆ ಕಟ್ಟಿ ಮೇಕಪ್ ಮಾಡುವುದು, ಬಲೂನ್ ಗ್ಲಾಸ್ ಸ್ಪರ್ಧೆ, ಬಾಂಬ್ ಇನ್ ದಿ ಸಿಟಿ, ಕೆರೆ ದಡ ಆಟ, ಹಣೆಯಲ್ಲಿ ಬಿಸ್ಕೆಟ್ ಇಟ್ಟು ತಿನ್ನುವುದು, ಬಲೂನ್ ಕಾಲಲ್ಲಿ ಹಿಡಿದು…
ಮಡಿಕೇರಿ ಸೆ.19 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಹಾಗೂ ಎಫ್11 ಗಾಳಿಬೀಡು ಫೀಡರ್ನಲ್ಲಿ ಸೆಪ್ಟೆಂಬರ್, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಸರಾ ಹಬ್ಬದ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್ ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್, ಮಹದೇವಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್ ನ್ಯಾಷನಲ್, ಐ.ಟಿಐ ಹಿಂಭಾಗ, ಕಾವೇರಿ ಬಡಾವಣೆ, ಟಿಜಾನ್ ಬಡಾವಣೆ, ಅಬ್ದುಲ್ ಕಲಾಂ ಬಡಾವಣೆ, ಹೆಬ್ಬೆಟ್ಟಗೇರಿ, ದೇವಸ್ತೂರು, ಕೆ.ಬಾಡಗ, ಗಾಳಿಬೀಡು, ಕಾಲೂರು, ಸಿದ್ದಿಕಾಡು, ವಣಚಲು, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕುಡಿಯುವ ನೀರು, ಕೂಟುಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.






