ಲೇಖಕ: admin

ಮಡಿಕೇರಿ ಆ.22 NEWS DESK : ತಾರ್ಬ್ಸ್ ನ ಸಂತ ಜೋಸೆಫರ ಸಂಸ್ಥೆಗಳ ಸಂಸ್ಥಾಪನಾ ದಿನಾಚರಣೆಯನ್ನು ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್ ವಿದ್ಯಾ ಸಂಸ್ಥೆಯಲ್ಲಿ ಆಚರಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ವಿದ್ಯಾಸಂಸ್ಥೆಯ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ವಿಭಾಗಗಳ ಎಲ್ಲ ವಿದ್ಯಾರ್ಥಿಗಳು ಮತ್ತು ಶಿಕ್ಷಕ ಸಮುದಾಯ ಸಂಸ್ಥೆಗೆ ಅಡಿಪಾಯ ಹಾಕಿದ ದಿನವನ್ನು ಅರ್ಥಪೂರ್ಣ ಆಚರಣೆಯ ಮೂಲಕ ಸ್ಮರಿಸಿದರು. ಮಡಿಕೇರಿಯ ಜೋಸೆಫ್ಸ್ ಸಂಸ್ಥೆಯ ಸುಪೀರಿಯರ್ ಆಗಿರುವ ಸಿಸ್ಟರ್ ಮರ್ಸಿ ಜೇಕಬ್ ಮಾತನಾಡಿ 1843 ರ ಆ.14ರಂದು ಫ್ರಾನ್ಸ್ ದೇಶದ ಕಾಂತಾವ್ಸ್ ನ ಟಾರ್ಬ್ಸ್ ಎಂಬಲ್ಲಿ ಆರು ಮಂದಿ ಕನ್ಯೆಯರಿಂದ ಆರಂಭಗೊಂಡ ಸಂತ ಜೋಸೆಫರ ಸಂಸ್ಥೆಯು ಆರೋಗ್ಯ, ಶಿಕ್ಷಣ, ಸಮಾಜ ಸೇವೆ ಮೊದಲಾದ ಸಮಾಜಮುಖಿ ಸೇವೆಗಳಲ್ಲಿ ನಿರತವಾಗಿದ್ದು, ತನ್ನ ಸೇವಾ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುತ್ತ, ಇಂದು ಬೇರೆ ಬೇರೆ ದೇಶಗಳಲ್ಲಿ ತನ್ನ ಶಾಖೆಗಳನ್ನು ತೆರೆದು ಕಾರ್ಯನಿರತವಾಗಿವೆ. ಶಿಕ್ಷಣ, ಆರೋಗ್ಯವನ್ನೂ ಒಳಗೊಂಡಂತೆ ಹತ್ತು ಹಲವು ಸಮಾಜಮುಖಿ ಕಾರ್ಯಗಳಲ್ಲಿ ಸಂಸ್ಥೆಗಳ ಸಿಸ್ಟರ್ಸ್ ಗಳು ತೊಡಗಿಕೊಂಡಿದ್ದಾರೆ ಎಂದರು.…

Read More

ಮಡಿಕೇರಿ ಆ.22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಸಂಯುಕ್ತ ಆಶ್ರಯದಲ್ಲಿ ಕುಶಾಲನಗರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ದೊರೆಯಿತು. ಕೂಡಿಗೆ ಕ್ರೀಡಾ ಶಾಲಾ ಮೈದಾನದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳ ಪ್ರತಿಭೆಯನ್ನು ಗುರುತಿಸಲು ಕ್ರೀಡಾಕೂಟ ಸಹಕಾರಿಯಾಗಿದೆ. ದಸರಾ ಕ್ರೀಡಾಕೂಟದ ಮೂಲಕ ವಿವಿಧ ರಾಜ್ಯ, ರಾಷ್ಟ್ರೀಯ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತದೆ. ದಸರಾ ಕ್ರೀಡೆಯು ರಾಜಮನೆತನದ ದಸರಾ ಹಬ್ಬ ಆಚರಣೆ ಸಂದರ್ಭದಿಂದಲೇ ನಡೆದುಕೊಂಡು ಬಂದ ಹಿನ್ನೆಲೆಯಲ್ಲಿ ಇಂದಿನ ಯುವಕರಿಗೆ ಮಾರ್ಗದರ್ಶನವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.  ಈ ಸಂದರ್ಭ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಚಕ್ರವರ್ತಿ, ಕ್ರೀಡಾ ಶಾಲೆ ಮುಖ್ಯೋಪಾಧ್ಯಾಯ ಮುರುಳಿ, ಕ್ರೀಡಾ ತರಬೇತಿದಾರರಾದ ವೆಂಕಟೇಶ, ದೀನಾಮಣಿ, ಬಿಂದಿಯಾ, ಸುಬ್ಬಯ್ಯ, ಗಣೇಶ್, ಮಂಜುನಾಥ, ಮಹಾಬಲ, ನಿವೃತ್ತ ಅರ್ಥೆಟಿಕ್ಸ್ ತರಬೇತಿದಾರ ಅಂತೋಣಿ ಡಿಸೋಜ, ಸಹಾಯಕ ಠಾಣಾಧಿಕಾರಿ ವಿಜಯ, ರಾಜ್ಯ ಮಟ್ಟದ…

Read More

ಕುಶಾಲನಗರ ಆ.22 NEWS DESK  : ಭಾರತೀಯ ಸಂಸ್ಕೃತಿಯಲ್ಲಿ ಹಸಿರು ಗಾಜಿನ ಬಳೆಗೆ ಬಹಳಷ್ಟು ಮೌಲ್ಯವಿದೆ. ಬಳೆಗೆ ತನ್ನದೇ ಆದ ವಿಶೇಷ ಮಹತ್ವವಿದೆ. ಯಾವುದೇ ಮಹಿಳೆ ಎಷ್ಟೇ ಅಲಂಕಾರ ಮಾಡಿಕೊಂಡರು ಬಳೆ ಇಲ್ಲದೆ ಸಂಪೂರ್ಣವಾಗುವುದಿಲ್ಲ ಎನ್ನುವ ಭಾವನೆ ಇರುತ್ತೆ ಎಂದು ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಅನುಷಾ ಅರ್ಜುನ್ ಹೇಳಿದರು. ವಾಸವಿ ಯುವತಿಯರ ಸಂಘದ ನೇತೃತ್ವದಲ್ಲಿ ಶ್ರೀಮದ್ ಕನ್ನಿಕಾಪರಮೇಶ್ವರಿ ದೇವಸ್ಥಾದಲ್ಲಿ ಮುತ್ತೈದೆಯರಿಗೆ ಹಸಿರು ಬಳೆ ತೊಡಿಸುವ ಮೂಲಕ ಗೌರಿ ಹಬ್ಬವನ್ನು ಆಚರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂದೂ ಸನಾತನ ಧರ್ಮದ ಪ್ರಕಾರ ಬಳೆ ಮುತ್ತೈದೆಯರಿಗೆ ಭೂಷಣ. ಮನೆಯಲ್ಲಿ ಇರುವ ಪುಟ್ಟ ಮಕ್ಕಳಿಂದ ಹಿಡಿದು ವಯಸ್ಕರರು ಗಾಜಿನ ಬಳೆ ತೊಟ್ಟು ಸಂಭ್ರಮಿಸುವುದನ್ನು ಕಾಣುತ್ತೇವೆ. ಬಳೆಯ ನಾದವನ್ನು ಗಂಡಸರು, ಮಕ್ಕಳು ಕೂಡ ಆನಂದಿಸುತ್ತಾರೆ. ಅಂತಹ ಶ್ರೇಷ್ಠ ಆಚರಣೆಯನ್ನು ಇಂದಿನ ಯುವಪೀಳಿಗೆಯ ಯುವತಿಯರಲ್ಲಿ ಅರಿವು ಮೂಡಿಸುವುದು ಕೂಡ ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು. ಆರ್ಯವೈಶ್ಯ ಮಹಿಳೆಯರು ಹಸಿರು ಬಣ್ಣದ ಸೀರೆಯಲ್ಲಿ ಕಂಗೊಳಿಸಿದರು. ಬಳೆಗಾರ ರಮೇಶ್ ದಂಪತಿ ಎಲ್ಲಾ…

Read More

ಮಡಿಕೇರಿ ಆ.22 NEWS DESK : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.23 ರಂದು ಭಾಗಮಂಡಲದಲ್ಲಿ 33ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದ್ದು, ಅಂತಿಮ ಹಂತದ ತಯಾರಿ ನಡೆಯುತ್ತಿದೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ಅಯ್ಯಂಗೇರಿ ಶ್ರೀ ಕೃಷ್ಣ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅವರ ಗದ್ದೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಕ್ರೀಡಾಕೂಟಗಳು ಆರಂಭಗೊಳ್ಳಲಿವೆ.

Read More

ಮಡಿಕೇರಿ ಆ.22 NEWS DESK : ಜಮ್ಮಾಮಲೆ, ಸಿ ಮತ್ತು ಡಿ ಜಮೀನು ಹಾಗೂ ವನ್ಯ ಜೀವಿ ಸಂಘರ್ಷಗಳ ಕುರಿತು ಅರಣ್ಯ ಸಚಿವರಾದ  ಈಶ್ವರ ಖಂಡ್ರೆ ಅವರ ಕಛೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರುಗಳ ನೇತೃತ್ವದಲ್ಲಿ ಅಧಿಕಾರಿಗಳ ಸಭೆ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಮಾತನಾಡಿ, ಜಮ್ಮಾಮಲೆ ಹಿಡುವಳಿದಾರ ಆಸ್ತಿ ಹಕ್ಕು ರಕ್ಷಣೆ ಮತ್ತು ಅವರಿಗೆ ನ್ಯಾಯ ದೊರಕಬೇಕು. ನ್ಯಾಯಾಲಗಳಲ್ಲಿ ಆದೇಶವಾಗಿದೆ. ಈ ಬಗ್ಗೆ ಶ್ರೀಘ್ರವಾಗಿ ಕ್ರಮವಹಿಸಬೇಕೆಂದು ವಿವರಿಸಿದರು.  ಸಚಿವರು ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಸಿ ಮತ್ತು ಡಿ ಲ್ಯಾಂಡ್ ಬಗ್ಗೆ ಜಂಟಿ ಸರ್ವೆ ಮಾಡಿ ಹಿಡುವಳಿದಾರರಿಗೆ ನ್ಯಾಯ ಒದಗಿಸಬೇಕು. ಕೊಡಗು ಜಿಲ್ಲೆಯಲ್ಲಿ ಆನೆಗಳ ಹಾವಳಿಯಿಂದ ಮಾನವನ ಪ್ರಾಣ ಹಾನಿ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟ ಬೇಕು, ಆನೆ ಮತ್ತು ಹುಲಿಯ…

Read More

ನಾಪೋಕ್ಲು ಆ.22 NEWS DESK : ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಬಿ.ಯು.ಪೂವಣ್ಣ ಮೂರು ವರ್ಷದ ಅವಧಿಗೆ ಆಯ್ಕೆಯಾಗಿದ್ದಾರೆ. ಕಕ್ಕಬೆಯ ಪಾಣಿ ಕುತಪ್ಪ ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಸದಸ್ಯರು ಒಮ್ಮತದಿಂದ ಆಯ್ಕೆ ಮಾಡಿದರು.  ಸಮಿತಿಯ ಸದಸ್ಯರುಗಳಾದ ಕುಶ ಭಟ್, ಕೆ.ಸಿ.ರಮೇಶ್, ಸಿ.ಡಿ.ಉಷಾ, ಕೆ.ಸಿ.ನೈಲ್, ಪಿ.ಎಂ.ನರೇಂದ್ರ, ಎ. ಜಗದೀಶ್, ಭೀಮಯ್ಯ, ಉಲ್ಲಾಸ್ ಆರ್. ರವಿಕುಮಾರ್ ಕಾರ್ಯನಿರ್ವಾಹಕ ಅಧಿಕಾರಿ, ಪಿ.ಟಿ.ತಮ್ಮಯ್ಯ ಹಾಗೂ ಶ್ರೀಕಾಂತ್ ಸಭೆಯಲ್ಲಿ ಹಾಜರಿದ್ದರು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಆ.22 NEWS DESK : ಮಡಿಕೇರಿ ತಾಲ್ಲೂಕಿನ ಮುಕ್ಕೋಡ್ಲು ಗ್ರಾಮದಲ್ಲಿ ವೃದ್ಧ ದಂಪತಿಯ ತೋಟವನ್ನು ನಾಶ ಮಾಡಿದ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿರುವ ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಅವರು, ಅರಣ್ಯ ಇಲಾಖೆಯ ವಿರುದ್ಧ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾನೂನು ಉಲ್ಲಂಘಿಸಿ ವೃದ್ಧ ದಂಪತಿಯ ತೋಟವನ್ನು ನಾಶ ಮಾಡುವ ಮೂಲಕ ಅರಣ್ಯ ಇಲಾಖೆ ಅಮಾನುಷವಾಗಿ ನಡೆದುಕೊಂಡಿದೆ. ತೋಟದಲ್ಲಿ ಬೆಳೆಯಲಾಗಿದ್ದ ಕಾಫಿ, ಏಲಕ್ಕಿ ಮತ್ತಿತರ ಗಿಡಗಳನ್ನು ಯಾವುದೇ ನೋಟಿಸ್ ನೀಡದೆ ಕಡಿದು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ. ಕಾಳಚಂಡ ನಾಣಿಯಪ್ಪ ಅವರು ಕಳೆದ 50 ವರ್ಷಗಳಿಂದ ಪೈಸಾರಿ ಭೂಮಿಯಲ್ಲಿ ಕೃಷಿ ಕಾರ್ಯ ಮಾಡಿಕೊಂಡು ಬಂದಿದ್ದಾರೆ. ಆದರೆ ಅರಣ್ಯ ಇಲಾಖೆ ತನಗೆ ಸೇರಿದ ಭೂಮಿ ಎಂದು ಕಾರ್ಯಾಚರಣೆ ನಡೆಸಿದೆ. ಜಾಗದ ಒಡೆತನದ ಕುರಿತು ಗೊಂದಲಗಳಿದ್ದರೆ ನೋಟಿಸ್ ನೀಡಲು ಮತ್ತು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಲು ಅವಕಾಶವಿತ್ತು.…

Read More

ಯೂನಿಯನ್ ಬ್ಯಾಂಕ್‍ನಲ್ಲಿ ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ (ಯುಬಿಐ) ದೇಶಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಖಾಲಿಯಿರುವ 250 ‘ವೆಲ್ತ್ ಮ್ಯಾನೇಜರ್’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. :: ವರ್ಗವಾರು ಹುದ್ದೆಗಳ ವಿವರ ಹೀಗಿದೆ :: ಸಾಮಾನ್ಯ-103, ಎಸ್ಸಿ-37, ಎಸ್ಟಿ-18, ಓಬಿಸಿ-67,  ಇಡಬ್ಲ್ಯುಎಸ್-25, ಒಟ್ಟು – 250 ಹುದ್ದೆಗಳಿವೆ. :: ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :: ಆಸಕ್ತ ಅಭ್ಯರ್ಥಿಗಳು ಆಗಸ್ಟ್ 25ರೊಳಗಾಗಿ ಅರ್ಜಿ ಸಲ್ಲಿಸಬೇಕು. :: ವಿದ್ಯಾರ್ಹತೆಗಳೇನು? :: ಮಾನ್ಯತೆ ಪಡೆದ ವಿವಿಯಿಂದ ಎಂಬಿಎ/ ಎಂಎಂಎಸ್/ಪಿಜಿಡಿಬಿಎ/ಪಿಜಿಡಿಬಿಎಂ/ಪಿಜಿಎ/ಪಿಜಿಡಿಎಂ ಕೋರ್ಸ್‍ಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಕಾರ್ಯನಿರ್ವಹಿಸಿದ ಅನುಭವವಿರಬೇಕು. ವಯೋಮಿತಿ ಎಷ್ಟು ? : : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2025ರ ಆ.1 ಕ್ಕೆ ಅನ್ವಯವಾಗುವಂತೆ ಕನಿಷ್ಠ 25 ಹಾಗೂ ಗರಿಷ್ಠ 35 ವರ್ಷಗಳೊಳಗಿರಬೇಕು. ಅರ್ಜಿ ಸಲ್ಲಿಕೆ ವಿಧಾನ ಹೀಗೆ ? : :…

Read More

ನಾಪೋಕ್ಲು ಆ.22 NEWS DESK : ನಾಪೋಕ್ಲು ಲಯನ್ಸ್ ಕ್ಲಬ್, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವನಮೋಹತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವುದರ ಮೂಲಕ ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್ ನ ಅಧ್ಯಕ್ಷರು ಮಾದೆಯಂಡ ಕುಟ್ಟಪ್ಪ, ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಪಿ.ಎಸ್.ಸುಬ್ಬಯ್ಯ, ಪ್ರಾಂಶುಪಾಲರಾದ ಕೆ.ಆರ್.ರಮೇಶ್ ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಈ ಸಂದರ್ಭ ಮುಖ್ಯ ಶಿಕ್ಷಕ ಲೋಕೇಶ್ ಸಿ.ಆರ್. ಲಯನ್ಸ್ ಕ್ಲಬ್‍ನ ಪದಾಧಿಕಾರಿಗಳು, ಸದಸ್ಯರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ

Read More

ನಾಪೋಕ್ಲು ಆ.22 NEWS DESK : ನಾಪೋಕ್ಲುವಿನ ಇಂದಿರಾ ನಗರದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಹಿಂದೆ ಈ ಭಾಗಕ್ಕೆ ಶಾಸಕರು ಭೇಟಿ ನೀಡಿದ ಸಂದರ್ಭ ಸಾರ್ವಜನಿಕರು ರಸ್ತೆಯ ಅಭಿವೃದ್ಧಿಗಾಗಿ ಮನವಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಶಾಸಕರು ಅದಕ್ಕಾಗಿ 25 ಲಕ್ಷ ಅನುದಾನ ಒದಗಿಸಿದ್ದರು. ಇದನ್ನು ಶಾಸಕರು ಸಾರ್ವಜನಿಕರಿಗೆ ಬಳಕೆಗೆ ಉದ್ಘಾಟಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಅಧ್ಯಕ್ಷ ಕುಶಾಲಪ್ಪ, ಅರುಣ್ ಬೇಬ ಹೇಮಾವತಿ ಅರುಣ್ ಮತ್ತಿತರರು ಉಪಸಿತರಿದ್ದರು. ವರದಿ : ದುಗ್ಗಳ ಸದಾನಂದ 

Read More