ಮಡಿಕೇರಿ ಆ.21 NEWS DESK : ಸಿ ಮತ್ತು ಡಿ ಜಾಗದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಮತ್ತು ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಗೃಹ ಕಛೇರಿ ಕಾವೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ನಿಯೋಗದ ಅಹವಾಲುಗಳನ್ನು ಆಲಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಒಂದು ವಾರದೊಳಗೆ ಅಧ್ಯಯನ ಕಮಿಟಿ ರಚನೆ ಮಾಡಲಾಗುವುದು ಹಾಗೂ ಈ ಕಮಿಟಿ ಜಿಲ್ಲೆಗೆ ಭೇಟಿ ನೀಡಿ ರೈತರು ಹಾಗೂ ಅಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ನೀಡಲಿದ್ದು, ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ನಿಯೋಗಕ್ಕೆ ಮುಖ್ಯಮಂತ್ರಿಗಳು ಅಭಯ ನೀಡಿದರು. ನಿಯೋಗದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಉಪಾಧ್ಯಕ್ಷ ಕೆ.ಎಂ.ಲೋಕೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಸದಸ್ಯೆ ಕೆ.ಪಿ.ಚಂದ್ರಕಲಾ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ…
ಲೇಖಕ: admin
ಮಡಿಕೇರಿ ಆ.21 NEWS DESK : ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಎಸ್ಎಫ್ಸಿ ಮುಕ್ತ ನಿಧಿ ಅನುದಾನದಡಿ ವಿವಿಧ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಹ ಫಲಾನುಭವಿಗಳು ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಸಂಬಂಧಿಸಿದ ದೃಢೀಕೃತ ದಾಖಲಾತಿಗಳೊಡನೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 10 ರಂದು ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ಪಡೆಯಬಹುದು ಎಂದು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಆ.21 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ನಿಗದಿಯಾಗಿರುವ ಕಾರ್ಯಕ್ರಮವನ್ನು ಕಾಲ ಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ವಿವಿಧ ಇಲಾಖೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಇಂತಿಷ್ಟು ಹಣ ಹಾಗೂ ಸೌಲಭ್ಯ ನಿಗದಿಮಾಡಿದ್ದು, ಪ್ರಗತಿ ಸಾಧಿಸಿ ವರದಿ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೃಷಿ ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಯುವ ಸಬಲೀಕರಣ ಮತ್ತು ಕ್ರೀಡೆ, ಕೈಮಗ್ಗ ಮತ್ತು ಜವಳಿ, ಕಾರ್ಮಿಕ, ಲೋಕೋಪಯೋಗಿ, ಸ್ಥಳೀಯ…
ಸುಂಟಿಕೊಪ್ಪ,ಆ.14 NEWS DESK : ಮಾದಾಪುರ ರಸ್ತೆಯ ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದಲ್ಲಿ ಆ.26 ರಂದು ಗೌರಿ ಪ್ರತಿಷ್ಠಾಪನೆ ನಡೆಯಲಿದೆ. ಪೂರ್ವಾಹ್ನ 9.45 ರಿಂದ 10.40 ರವರೆಗೆ ಸಲ್ಲುವ ತುಲ ಲಗ್ನದಲ್ಲಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪನೆ ಪೂಜಾ ನಡೆಯಲಿದೆ. ಆ.27 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಶಕ್ತಿ ಗಣಪತಿಗೆ ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ವಿವಿಧ ಪೂಜಾ ವಿಧಿವಿಧಾನಗಳ ನಂತರ ಹರದೂರು ಹೊಳೆಯಲ್ಲಿ ಗೌರಿಯನ್ನು ವಿಸರ್ಜಿಸಲಾಗುವುದೆಂದು ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಎ.ಲೋಕೇಶ್ಕುಮಾರ್ ತಿಳಿಸಿದ್ದಾರೆ. ಕೊಡಗರಹಳ್ಳಿಯ ಶ್ರೀ ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ 7ನೇ ವರ್ಷದ ಉತ್ಸವ ಗೌರಿ ಗಣೇಶೋತ್ಸವದ ಮೂರ್ತಿಯನ್ನು ಪ್ರತಿಷ್ಠಾಪಿಸಿ 3 ದಿನಗಳ ಕಾಲ ವಿಶೇಷಪೂಜಾ ಕೈಂಕರ್ಯಗಳು ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಪ್ರತಿ ವರ್ಷವೂ ಅಯೋಜಿಸಿಕೊಂಡು ಬರಲಾಗುತ್ತಿರುವ ಕೊಡಗರಹಳ್ಳಿಯ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎನ್.ಡಿ.ದೇವಯ್ಯ ಅವರು ದಾನವಾಗಿ ನೀಡಿರುವ…
ಗೋಣಿಕೊಪ್ಪ ಆ.21 NEWS DESK : ಶ್ರೀ ಕಾವೇರಿ ದಸರಾ ಸಮಿತಿಯ 47ನೇ ದಸರಾ ಜನೋತ್ಸವದ ಅಧ್ಯಕ್ಷರಾಗಿ ಗ್ರಾ.ಪಂ ಸದಸ್ಯ ಕೆ.ಜಿ.ರಾಮಕೃಷ್ಣ ಆಯ್ಕೆಯಾಗಿದ್ದಾರೆ. ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರ ಒಮ್ಮತ ಈ ಆಯ್ಕೆ ನಡೆದಿದೆ. ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷರು ಜನೋತ್ಸವವನ್ನು ವಿಭಿನ್ನವಾಗಿ ಆಚರಿಸಲು ಸರ್ವರ ಸಹಕಾರದೊಂದಿಗೆ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಆಯ್ಕೆಯ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಪ್ರಮೊದ್ ಗಣಪತಿ, ಉಪಾಧ್ಯಕ್ಷೆ ಮಂಜುಳ, ಪಿ.ಡಿ.ಓ ತಿಮ್ಮಯ್ಯ ಹಾಗೂ ಸದಸ್ಯರುಗಳು ಹಾಜರಿದ್ದರು.
ಮಡಿಕೇರಿ ಆ.21 NEWS DESK : ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾಫಿ ಬೆಲೆ ಏರಿಕೆಯಾಗಿದ್ದರೂ ಕೊಡಗಿನ ಕಾಫಿ ಬೆಳೆಗಾರರಿಗೆ ಸೂಕ್ತ ಬೆಲೆ ಸಿಗದೆ ಅನ್ಯಾಯವಾಗುತ್ತಿದೆ. ಅಂತರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಸೂಕ್ತ ಬೆಲೆಯನ್ನು ನೀಡದ ಕಾಫಿ ಖರೀದಿದಾರರ ಪರವಾನಗಿಯನ್ನು ಜಿಲ್ಲೆಯ ಗ್ರಾ.ಪಂ ಗಳ ಮಟ್ಟದಲ್ಲಿ ರದ್ದುಗೊಳಿಸುವ ಅನಿವಾರ್ಯತೆ ಇದೆ ಎಂದು ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾಫಿ ಖರೀದಿ ಮಾಡುವ ರಫ್ತುದಾರರು ಹಾಗೂ ಮಧ್ಯವರ್ತಿಗಳಿಂದ ಬೆಳೆಗಾರರಿಗೆ ಅನ್ಯಾಯವಾಗುತ್ತಿದೆ. ಅಂತರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಬೆಲೆ ನಿಗದಿ ಮಾಡದವರ ಪರವಾನಗಿಯನ್ನು ರದ್ದು ಮಾಡುವ ಕುರಿತು ಆಯಾ ಗ್ರಾ.ಪಂ ಗಳು ಚಿಂತನೆ ನಡೆಸಬೇಕಾಗಿದೆ ಮತ್ತು ಬೆಳೆಗಾರರ ಹಿತ ಕಾಯಬೇಕಾಗಿದೆ ಎಂದು ಹೇಳಿದ್ದಾರೆ. ಹಲವು ಸಂಕಷ್ಟಗಳ ನಡುವೆಯೂ ಕಾಫಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಣ್ಣ ಮತ್ತು ಮಧ್ಯಮ ಬೆಳೆಗಾರರು ಕಾಫಿ ಧಾರಣೆಯಲ್ಲಿ ಚೇತರಿಕೆ ಕಾಣುವುದನ್ನೇ ಎದುರು ನೋಡುತ್ತಿದ್ದರು. ಆದರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಯಾದರೂ ಅದಕ್ಕೆ ಸರಿಯಾಗಿ ಇಲ್ಲಿ ಕಾಫಿಗೆ…
ಬೆಂಗಳೂರು ಆ.21 NEWS DESK : ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತರಾದ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆಯಾದ ಪೂರ್ವಿ ಮಠೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು. ವಿಧಾನ ಪರಿಷತ್ ಸದಸ್ಯರೂ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಅವರು ಉಪಸ್ಥಿತರಿದ್ದರು.
ಮಡಿಕೇರಿ ಆ.21 NEWS DESK : ಮಡಿಕೇರಿ ನಗರದ ಸರಕಾರಿ ಪದವಿಪೂರ್ವ ಕಾಲೇಜ್ ನ ಸೇವಾದಳದ ಸದಸ್ಯರಿಗೆ ಮಡಿಕೇರಿ ರೋಟರಿ ವತಿಯಿಂದ ಉಚಿತ ಬಿಳಿ ಸಾಕ್ಸ್ ಮತ್ತು ಬಿಳಿ ಕ್ಯಾನ್ವಾಸ್ ಪಾದರಕ್ಷೆಗಳನ್ನು ನೀಡಲಾಯಿತು. ಸೇವಾದಳದ ಸಮವಸ್ತ್ರದ ಭಾಗವಾದ ಬಿಳಿ ಸಾಕ್ಸ್ ಮತ್ತು ಪಾದರಕ್ಷೆಗಳೊಂದಿಗೆ ಸ್ವಾತಂತ್ರ್ಯೋತ್ಸವದ ಕವಾಯತುವಿನಲ್ಲಿ ಭಾಗವಹಿದ ಸೇವಾದಳ ತಂಡ ದ್ವಿತೀಯ ಬಹುಮಾನ ಪಡೆದಿರುವುದಾಗಿ ಕಾಲೇಜ್ ನ ಪ್ರಾಂಶುಪಾಲರಾದ ಶಶಿಕಲಾ ರೋಟರಿ ಮಡಿಕೇರಿಗೆ ಧನ್ಯವಾದ ಅರ್ಪಿಸಿದರು. ರೋಟರಿ ಅಧ್ಯಕ್ಷೆ ರೋ.ಲಲಿತಾ ರಾಘವನ್, ಕಾರ್ಯದರ್ಶಿ ರೋ.ಬಿ.ಎಂ.ಸೋಮಣ್ಣ ರೋ.ಅನಂತ ಸುಬ್ಬರಾವ್ ಹಾಗೂ ರೋ.ಸುದಯ್ ನಾಣಯ್ಯ ಅವರು ಪಾದರಕ್ಷೆಯ ಪ್ರಾಯೋಜಕರಾಗಿದ್ದಾರೆ.
ವಿರಾಜಪೇಟೆ ಆ.21 NEWS DESK : ಶ್ರೀ ಕಾವೇರಿ ಗಣೇಶೋತ್ಸವ ಸಮಿತಿ ಮೂರ್ನಾಡು ರಸ್ತೆ ವಿರಾಜಪೇಟೆ ಮತ್ತು ದಕ್ಷಿಣ ಕೊಡಗು ಲೇಖಕಿಯರು ಮತ್ತು ಕಲಾವಿದರ ವೇದಿಕೆ ವಿರಾಜಪೇಟೆ ತಾಲ್ಲೂಕು ವತಿಯಿಂದ ಸೆ.4 ರಂದು ಜಿಲ್ಲಾಮಟ್ಟದ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಾವೇರಿ ಗಣೇಶೊತ್ಸವ ವೇದಿಕೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಸಬ್ ಜೂನಿಯರ್ ವಿಭಾಗ 6 ರಿಂದ 11 ವರ್ಷ, ಜೂನಿಯರ್ ವಿಭಾಗ 12ರಿಂದ 16 ವರ್ಷ, ಸೀನಿಯರ್ ವಿಭಾಗ 17 ರಿಂದ 22 ವರ್ಷ ಸಾರ್ವಜನಿಕ ವಿಭಾಗ 23 ವರ್ಷ ಮೇಲ್ಪಟ್ಟವರು ಭಾಗವಹಿಸಬಹುದು. ಸ್ಪರ್ಧಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆ.31 ಹೆಸರು ನೊಂದಾಯಿಸಲು ಕಡೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಮತ್ತು ನೋಂದಾವಣೆಗಾಗಿ ಮೊಬೈಲ್ ಸಂಖ್ಯೆ ವಿಮಲ ದಶರಥ-9008613729, ರಜಿತಾ, ಕಾರ್ಯಪ್ಪ-9481771851 ಸಂಪರ್ಕಿಸಬಹುದಾಗಿದೆ.
ಸುಂಟಿಕೊಪ್ಪ ಆ.21 NEWS DESK : ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಕಬ್ ಮತ್ತು ಬುಲ್ ಬುಲ್ ಸೇವಾದಳದ ಇಬ್ಬರು ವಿದ್ಯಾರ್ಥಿಗಳಿಗೆ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್.ಎಸ್.ಬೋಸ್ರಾಜು ಅವರಿಂದ ರಾಜ್ಯ ಪುರಸ್ಕಾರ ನೀಡಲಾಯಿತು. ಕಬ್ ವಿಭಾಗದಲ್ಲಿ ವಿದ್ಯಾರ್ಥಿ ಎಸ್.ಜೆನೀಶ್ ಮತ್ತು ಬುಲ್ಬುಲ್ ವಿದ್ಯಾರ್ಥಿನಿ ನುಹಾ ಫಾತೀಮಾ ಅವರುಗಳು ರಾಜ್ಯ ಪುರಸ್ಕಾರಕ್ಕೆ ಆಯ್ಕೆಗೊಂಡಿದ್ದು, ಮಡಿಕೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ರಾಜು ಅವರು ರಾಜ್ಯ ಪುರಸ್ಕಾರ ಪ್ರಶಸ್ತಿ ನೀಡಿ ಅಬಿನಂಧಿಸಿದರು. ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಜೊವಿಟಾ ವಾಸ್ ಅವರು ಶಿಕ್ಷಕಿ ಹಾಗೂ ತರಬೇತುದಾರೆ ಯಿವಾಬೆನ್ಸಿಸ್ ಮತ್ತು ಸಾಧನೆಗೈದ ವಿದ್ಯಾರ್ಥಿಗಳನ್ನು ಪ್ರಶಂಸಿಸಿ ಶುಭ ಹಾರೈಸಿದರು.






