ಲೇಖಕ: admin

ಮಡಿಕೇರಿ ಜ.30 NEWS DESK : ಕೊಡಗು ಜಿಲ್ಲೆಯ ವೈದ್ಯಕೀಯ ಶಿಕ್ಷಣ ಅಭಿವೃದ್ಧಿಪಡಿಸುವಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಂಧಿವಾತ ಶಾಸ್ತ್ರದ ಬಗ್ಗೆ ಉನ್ನತ ಮಟ್ಟದ ಸಿ.ಎಂ.ಇ ಕಾರ್ಯಾಗಾರ ನಡೆಯಿತು. ಕರ್ನಾಟಕ ರುಮಟಾಲಜಿ ಅಸೋಸಿಯೇಷನ್ ಮತು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿಯ ಸಂಯುಕ್ತಾಶ್ರಯದಲ್ಲಿ ಸಂಸ್ಥೆ ನಿರ್ದೇಶಕರು ಹಾಗೂ ಡೀನ್ ಲೋಕೇಶ್ ಎ.ಜೆ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. 2018ರ ನಂತರ ಈ ವಿಷಯದ ಬಗ್ಗೆ ಜಿಲ್ಲೆಯಲ್ಲಿ ನಡೆದ ಮೊದಲ ದೊಡ್ಡ ಕಾರ್ಯಕ್ರಮ ಇದಾಗಿದ್ದು, ಸ್ಥಳೀಯ ವೈದ್ಯಕೀಯ ಸಮುದಾಯದಲ್ಲಿ ಈ ವಿಷಯದ ಬಗ್ಗೆ ಸುಧೀರ್ಘವಾದ ಚರ್ಚೆ ನಡೆಯಿತು. ಈ ವಿಚಾರ ಸಂಕಿರಣದಲ್ಲಿ 300ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಸೇರಿದಂತೆ ಇತರೆ ರಾಜ್ಯದ ವೈದ್ಯರುಗಳು, ವಿವಿಧ ಕಾಲೇಜುಗಳ ಪ್ರತಿನಿಧಿಗಳು ಇದರಲ್ಲಿ ನೋಂದಾಯಿಸಿಕೊಂಡಿದ್ದರು. ಡಾ.ಶಿವಪ್ರಸಾದ್ ಬಿ.ಎನ್. ಅವರು ಸಂವಾದಾತ್ಮಕ ಸೆಷನ್ ಮೂಲಕ ಚರ್ಚೆ ಆರಂಭಿಸಿದರು. ಡಾ.ಮಂಜುನಾಥ್, ಡಾ.ಪುರುಷೋತ್ತಮ್, ಡಾ.ಸಿಡ್ನಿ ಡಿಸೋಜಾ, ಡಾ.ಸುಧೇಂದ್ರ ರಾವ್ ಮತ್ತು ಡಾ.ಮುಖ್ಯಪ್ರಾಣ ಪ್ರಭು ಅವರ ನೇತೃತ್ವದಲ್ಲಿ ಶೈಕ್ಷಣಿಕ…

Read More

ವಿರಾಜಪೇಟೆ ಜ.30 NEWS DESK : ಕಂಡಂಗಾಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಕೆಂಜೇಂಗಡ ಗಣಪತಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಹಾಗೂ ಸಾಮೂಹಿಕ ಕವಾಯತು ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೊಡಗು ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ನಾಸಿರ್ ಮಾತನಾಡಿ, ಕಂಡಂಗಾಲ ಶಾಲೆಯ ಶೈಕ್ಷಣಿಕ ವಾತಾವರಣವು ಮಾದರಿಯಾಗಿದ್ದು, ಇಲ್ಲಿನ ವಿದ್ಯಾರ್ಥಿಗಳ ಶಿಸ್ತು ಹಾಗೂ ಶಿಕ್ಷಕರ ಕಾರ್ಯದಕ್ಷತೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ಅವರು ಗಣರಾಜ್ಯೋತ್ಸವದ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಾಜಿ ಸೈನಿಕ ಹಾಗೂ ಕ್ರೀಡಾ ಸಮಿತಿಯ ಮಾಜಿ ಅಧ್ಯಕ್ಷ ಕೊಂಗಂಡ ಡಬ್ಲ್ಯೂ ಭೀಮಯ್ಯ ಅವರು ಮಾತನಾಡಿ, ಸ್ಥಳೀಯ ಶಿಕ್ಷಣ ಸಂಸ್ಥೆಗಳು ನಮ್ಮನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು.…

Read More

ಮಡಿಕೇರಿ ಜ.30 NEWS DESK  : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ ಮಡಿಕೇರಿಯಲ್ಲಿ ನಡೆಯಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮೈದಾನದಲ್ಲಿರಿಸಿ ಗಾಂಧೀ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು. ನಂತರ ಸರ್ವಧರ್ಮ ಪ್ರಾರ್ಥನೆ ನಡೆಯಿತು, ಸರ್ವಧರ್ಮ ಗುರುಗಳು ಸಂದೇಶಗಳನ್ನು ಬೋಧಿಸಿದರು. ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸಲಾಯಿತು.…

Read More

ಮಡಿಕೇರಿ ಜ.30 NEWS DESK  : ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಡಗದಾಳು ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಎನ್. ಪುಷ್ಪಾವತಿ‌ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಿತು. ಎಸ್‌ಡಿಎಂಸಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ದಿನದ ಮಹತ್ವದ ಕುರಿತಾಗಿ ಮಾತನಾಡಿದರು. ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಅಂಗನವಾಡಿ ಪುಟಾಣಿಗಳು, ಸಾರ್ವಜನಿಕರು, ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜೆಸ್ಸಿ ಕೆ.ಎಫ್. ಸ್ವಾಗತಿಸಿದರು. ಪಿ.ಸಿ. ಉಷಾ ನಿರೂಪಿಸಿದರು. ಪ್ರಜ್ಞಾ ವಂದಿಸಿದರು. ಗ್ರಾಪಂ ಸದಸ್ಯೆ ಪ್ರಭಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಜಯಶ್ರೀ, ಪೋಷಕರು, ಹಳೆ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಜ.29 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವಿಶ್ವಸಂಸ್ಥೆಯ ಅಂತರಾಷ್ಟಿçÃಯ ಹತ್ಯಾಕಾಂಡದ ಸ್ಮರಣಾರ್ಥ ದಿನವನ್ನು ಆಚರಿಸಿತು. 12 ಡಿಸೆಂಬರ್ 1785 ರಲ್ಲಿ ದೇವಟ್‌ಪರಂಬ್ ಕೊಡವ ನರಮೇಧದ ದುರಂತದಲ್ಲಿ ಬಲಿಯಾದವರಿಗೆ ಪುಷ್ಪ ನಮನ ಸಲ್ಲಿಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಮಂದಪಂಡ ಮನೋಜ್ ಮಂದಣ್ಣ ಹಾಗೂ ಮಂದಪಂಡ ಸೂರಜ್ ಅವರು ಹತ್ಯಾಕಾಂಡದಲ್ಲಿ ಕಗ್ಗೊಲೆಯಾದ ನತದೃಷ್ಟ ಹಿರಿಯರಿಗೆ ಗೌರವ ನಮನ ಸಲ್ಲಿಸಿದರು. ಅವರಿಗಾಗಿ ಪ್ರಾರ್ಥಿಸಿದರು ಮತ್ತು ಸಿಎನ್‌ಸಿಯ ಗುರಿಗಳನ್ನು ಸಾಧಿಸಲು ಆಶೀರ್ವಾದವನ್ನು ಪಡೆದರು. ಆದಿಮಸಂಜಾತ ಏಕ-ಜನಾಂಗೀಯ ಅನಿಮಿಸ್ಟಿಕ್ ಕೊಡವರಿಗೆ ಸ್ವ-ಆಡಳಿತ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು. ಆದಿಮಸಂಜಾತ ಜನರಾಗಿ ಗುರುತಿಸಲು ವಿಶ್ವಸಂಸ್ಥೆಯ ಮಾನ್ಯತೆ ಕಲ್ಪಿಸಬೇಕು. ಕೊಡವ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಒದಗಿಸಬೇಕು. ಆಂತರಿಕ ರಾಜಕೀಯ ಸ್ವ-ನಿರ್ಣಯ ಮತ್ತು ಸ್ವ-ಆಡಳಿತ ನೀಡಬೇಕು, ಭೂಮಿ, ಭಾಷೆ ಮತ್ತು ಸಾಂಸ್ಕöÈತಿಕ ಪರಂಪರೆಯ ರಕ್ಷಣೆ ಮಾಡಬೇಕು. ಶೋಷಣೆಯಿಂದ ಮುಕ್ತಗೊಳಿಸಬೇಕು, ದೇವಟ್‌ಪರಂಬ್ ಹತ್ಯಾಕಾಂಡ ಮತ್ತು ಅರಮನೆ ಪಿತೂರಿಯಲ್ಲಿ ಕೊಡವ ರಾಜಕೀಯ ಹತ್ಯೆಗಳನ್ನು…

Read More

ಮಡಿಕೇರಿ NEWS DESK ಜ.29 : ಕೊಡಗು ಜಿಲ್ಲೆಯನ್ನು ನಿರಂತರವಾಗಿ ಕಾಡುತ್ತಿರುವ ವನ್ಯಜೀವಿ ಉಪಟಳದ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಘೋಷಿಸಿ ತಕ್ಷಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಜಿಲ್ಲಾಧ್ಯಕ್ಷ ಅಣ್ಣ ಷರೀಪ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ. ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಿದ್ದಾಪುರ ಸಮೀಪದ ಗೌರಿಬೆಟ್ಟ ವ್ಯಾಪ್ತಿಯಲ್ಲಿ ಅಮಾಯಕ ಕಾರ್ಮಿಕನನ್ನು ಕಾಡಾನೆ ಬಲಿ ಪಡೆದಿದೆ. ಮೃತ ಲತೀಫ್ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಇದಕ್ಕೆ ಸರಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷö್ಯವೇ ಕಾರಣವೆಂದು ಆರೋಪಿಸಿದ್ದಾರೆ. ಕಳೆದ 10 ವರ್ಷಗಳಿಂದ ಜಿಲ್ಲೆಯಲ್ಲಿ ವನ್ಯಜೀವಿ ಉಪಟಳ ತೀವ್ರಗೊಂಡಿದೆ. ಆದರೆ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಇಲ್ಲಿಯವರೆಗೆ ಸಾಧ್ಯವಾಗಿಲ್ಲ. ಇದರ ಪರಿಣಾಮ ಅಮಾಯಕ ಮಾನವ ಜೀವಗಳು, ಜಾನುವಾರುಗಳು ಬಲಿಯಾಗುತ್ತಿವೆ, ಅಲ್ಲದೆ ಕೃಷಿ ಫಸಲು ನಾಶವಾಗುತ್ತಿದೆ. ವನ್ಯಜೀವಿ ದಾಳಿ ಸಮಸ್ಯೆ ಗಂಭೀರ ಸ್ವರೂಪವನ್ನು ಪಡೆದುಕೊಂಡಿದ್ದರೂ ಅರಣ್ಯ ಇಲಾಖೆ ಇಲ್ಲಿಯವರೆಗೆ ನವೀನ…

Read More

ಮಡಿಕೇರಿ ಜ.29 NEWS DESK : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಗೌರಿಬೆಟ್ಟ ವ್ಯಾಪ್ತಿಯಲ್ಲಿ ನಡೆದಿದೆ. ಹುಂಡಿ ನಿವಾಸಿ ಲತೀಫ್ (65) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಬಜೆಗೊಲ್ಲಿ ಬಳಿಯ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ತೀವ್ರವಾಗಿ ಗಾಯಗೊಂಡ ಲತೀಫ್ ಅಸುನೀಗಿದರು. ಮೃತರು ಪತ್ನಿ ನಬೀಸ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. *ಗ್ರಾಮಸ್ಥರ ಅಸಮಾಧಾನ* ಕಾಡಾನೆ ಉಪಟಳದಿಂದ ಆತಂಕಗೊಂಡಿರುವ ಗ್ರಾಮಸ್ಥರು ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣವೆಂದು ಆರೋಪಿಸಿದರು. ಇತ್ತೀಚೆಗೆ ಒಂಟಿ ಸಲಗವೊಂದು ನಡು ರಸ್ತೆಯಲ್ಲೇ ಶಾಲಾ ವಾಹನದ ಮೇಲೆ ದಾಳಿ ಮಾಡಲು ಪ್ರಯತ್ನಸಿದೆ. ತಕ್ಷಣ ಅರಣ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿದ್ದರೆ ಈ ಅನಾಹುತ ಸಂಭವಿಸುತ್ತಿರಲಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಡಾನೆಗಳ ಉಪಟಳ ತಡೆಗೆ ಶಾಶ್ವತ ಪರಿಹಾರ ಘೋಷಿಸಬೇಕೆಂದು ಒತ್ತಾಯಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ…

Read More

ಮಡಿಕೇರಿ ಜ.29 NEWS DESK :  66/11 ಕೆ.ವಿ ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನೂತನ ಬ್ರೇಕರ್‍ಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಲ್ಲೂರು, ಎಫ್2-ಬಾಳೆಲೆ, ಎಫ್4-ತಿತಿಮತಿ, ಎಫ್5-ಪಾಲಿಬೆಟ್ಟ, ಎಫ್6-ಬೇಗೂರು, ಎಫ್7-ಗೋಣಿಕೊಪ್ಪ, ಎಫ್8-ಪೊನ್ನಂಪೇಟೆ, ಎಫ್9-ಹಾತೂರು, ಎಫ್10-ಹೈಸೊಡ್ಲೂರು, ಎಫ್11 ಕೈಕೇರಿ, ಎಫ್12-ಬೆಕ್ಕಸೊಡ್ಲೂರು, ಎಫ್13 ದೇವನೂರು ಫೀಡರ್‍ನಲ್ಲಿ ಜನವರಿ, 30 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅತ್ತೂರು, ಕಾನೂರು, ಬಾಳೆಲೆ, ರಾಜಪುರ, ದೇವನೂರು, ಮಲ್ಲೂರು, ಕಿರುಗೂರು, ವಡ್ಡರಮಾಡು, ಮಾಯಮುಡಿ, ಸುಳುಗೋಡು, ಧನುಗಾಲ, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

Read More

ಮಡಿಕೇರಿ ಜ.29 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ 2025-26ನೇ ಸಾಲಿನ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪೌಢಶಾಲಾ ವಿಭಾಗದಲ್ಲಿ ನಡೆಯಿತು. ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜ.24 ರಂದು ಹೆಣ್ಣು ಮಕ್ಕಳ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಸಿಗಬೇಕಾದಂತಹ ಗೌರವ, ಪ್ರಾಮುಖ್ಯತೆ ಕೊಡುತ್ತಿರಲಿಲ್ಲ. ಹಾಗಾಗಿ ಇಂತಹ ದಿನಾಚರಣೆ ಮಾಡುವುದರ ಮೂಲಕ ಜನರಿಗೆ ಹೆಣ್ಣು ಮಕ್ಕಳ ಮಹತ್ವ ಮತ್ತು ಪ್ರಾಮುಖ್ಯತೆ ತಿಳಿಯಲಿ ಎಂಬುದಕ್ಕಾಗಿ ಮಹಿಳೆಯರಿಗೆ, ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ದಿನಾಚರಣೆಗಳು ಆಚರಣೆಗೆ ಬಂದಿತು ಎಂದರು. ಹೆಣ್ಣು ಎಂದರೆ ಜವಾಬ್ದಾರಿ, ಹೊರೆ ಎಂಬ ಮನೋಭಾವ ಹಿಂದಿನ ಕಾಲದಿಂದಲೂ…

Read More

ಮಡಿಕೇರಿ ಜ.29 NEWS DESK : ಪೊನ್ನಂಪೇಟೆ ತಾಲ್ಲೂಕಿನ ಮರೂರು, ತಿತಿಮತಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಣ್ಣಿನಪೊರೆ ಹಾಗೂ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಬೆಂಗಳೂರಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಹಾಗೂ ಫಾರೂಕ್ ಅಕಾಡೆಮಿ ಆಫ್ ಮೆಡಿಕಲ್ ಎಜುಕೇಷನ್ ಆಸ್ಪತ್ರೆಯಿಂದ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಪರಿಶಿಷ್ಟ ಪಂಗಡಗಳ ಜಿಲ್ಲಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿ ಅವರು ಕೊಡಗಿನಲ್ಲಿ 218 ಬುಡಕಟ್ಟು ಕಾಲೋನಿಗಳಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಶ್ರಮ ಶಾಲೆಗಳ ಸುತ್ತಮುತ್ತಲಿನ ಕಾಲೋನಿಗಳ ಜನರು ಹಾಗೂ ವಿದ್ಯಾರ್ಥಿಗಳಿಗೆ ಫೆ.15 ರೊಳಗೆ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಮರೂರು ತಿತಿಮತಿ ಹಾಗೂ ಕುಶಾಲನಗರ ಆಶ್ರಮ ಶಾಲೆಗಳನ್ನು 1ನೇ ತರಗತಿಯಿಂದ ಪಿಯುಸಿ ವರೆಗೆ ಮೇಲ್ದರ್ಜೆಗೇರಿಸಿ 16 ಕೋಟಿ ರೂ. ಮಂಜೂರು ಮಾಡಿದೆ ಎಂದು ತಿಳಿಸಿದರು. ತಾಲ್ಲೂಕು ಅಧಿಕಾರಿ ತೇಜರಾಜ…

Read More