ಮಡಿಕೇರಿ ಜು.11 NEWS DESK : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ನಡೆಯುತ್ತಿರುವ ಹಂತದಲ್ಲೆ ರಾಜ್ಯ ಕಾಂಗ್ರೆಸ್ ಸರಕಾರ “ಶಾಶ್ವತ ವಾಸ ದೃಢೀಕರಣ ಪತ್ರ”(ಪಿಆರ್ಸಿ) ಆದೇಶ ಹೊರಡಿಸಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು, ಈ ಕುರಿತು ಬಿಜೆಪಿ ಪಕ್ಷ ಜಿಲ್ಲೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ. ಎಸ್ಐಆರ್ಗೆ ಪೂರಕ ದಾಖಲೆಯಾಗಿ ಶಾಶ್ವತ ವಾಸ ದೃಢೀಕರಣ ಪತ್ರವನ್ನು ತಹಸೀಲ್ದಾರರ ಮೂಲಕ ನೀಡಲು ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ. ಇದನ್ನು ಕೇಂದ್ರ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಮತ್ತು ರಾಜ್ಯ ಸರಕಾರ ಈ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು. ಸರಕಾರ ಪಿಆರ್ಸಿ ಮೂಲಕ ಅಸ್ಸಾಮಿಗರ ಹೆಸರಿನಲ್ಲಿ ನೆಲೆಸಿ ನಕಲಿ ಆಧಾರ್ ಕಾರ್ಡ್ಗಳನ್ನು ಹೊಂದಿಕೊಂಡಿರುವ ಬಾಂಗ್ಲಾ ದೇಶಿಗರು ಸೇರಿದಂತೆ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನವನ್ನು…
ಲೇಖಕ: admin
ಮಡಿಕೇರಿ ಜು.11 NEWS DESK : ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಮಡಿಕೇರಿಯ ಸಂಚಾರಿ ಪೊಲೀಸ್ ಸಿಬ್ಬಂದಿಗಳಿಗೆ ರೇನ್ ಕೋಟ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಆಡಳಿತ ಮಂಡಳಿ ಪದಗ್ರಹಣ ಕಾಯ೯ಕ್ರಮದಲ್ಲಿ ಬೆಂಗಳೂರಿನ 3191 ರೋಟರಿ ಜಿಲ್ಲೆಯ ಸಹಾಯಕ ಗವನ೯ರ್ ಪ್ರಕಾಶ್ ಬೆಳವಡಿ ಮಿಸ್ಟಿ ಹಿಲ್ಸ್ ವತಿಯಿಂದ ನೀಡಲಾದ 10 ರೇನ್ ಕೋಟ್ ಗಳನ್ನು ಸಂಚಾರಿ ಪೊಲೀಸರಿಗೆ ವಿತರಿಸಿದರು. ಮಳೆಯಲ್ಲಿ ರೇನ್ ಕೋಟ್ ಗಳ ಭದ್ರತೆ ಪೊಲೀಸರಿಗೆ ನೆರವಾಗಲಿದ್ದು, ಸದಾ ಮಳೆ, ಗಾಳಿ, ಛಳಿಯಲ್ಲಿ ಕತ೯ವ್ಯ ನಿವ೯ಹಿಸುತ್ತಿರುವ ಸಂಚಾರಿ ಪೊಲೀಸರಿಗೆ ರೋಟರಿ ಜಿಲ್ಲೆ 3181 ನ ಪ್ರಮುಖ ಯೋಜನೆಯಾಗಿ ರೇನ್ ಕೋಟ್ ಗಳನ್ನು ವಿತರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಂಚಾರಿ ಜಾಗ್ರತಿ ಕಾಯ೯ಕ್ರಮಗಳನ್ನು ವಿವಿಧೆಡೆ ಆಯೋಜಿಸಲಾಗುತ್ತದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್. ರಾಜೇಶ್ ಮಾಹಿತಿ ನೀಡಿದರು. ರೋಟರಿ ಸಹಾಯಕ ಗವನ೯ರ್ ಹೆಚ್.ಎಸ್. ವಸಂತ್ ಕುಮಾರ್, ವಲಯ ಸೇನಾನಿ ಪೊನ್ನಚ್ಚನ ಮಧುಸೂದನ್ , ಕಾಯ೯ದಶಿ೯ ಡಾ.ಜಿ.ಡಿ.ಚೇತನ್…
ಮಡಿಕೇರಿ NEWS DESK ಜು.11 : ಗ್ರಾಮೀಣ ಭಾಗದ ಬಡವರು, ಕಾರ್ಮಿಕ ವರ್ಗ ಹಾಗೂ ದುರ್ಬಲ ವರ್ಗದ ಮಂದಿ ಮತದಾರರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಹೋಬಳಿ ಮಟ್ಟದಲ್ಲೆ “ಮತದಾರರ ಅಧಿಕೃತ” ದಾಖಲೆ ಒದಗಿಸಲು ಚುನಾವಣಾ ಆಯೋಗ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯಡಿ ಭಾರತದ ಯಾವೊಬ್ಬ ಪ್ರಜೆಯೂ ಮತದಾನದಿಂದ ವಂಚಿತರಾಗಬಾರದು. ಪ್ರಸ್ತುತ ಎಸ್ಐಆರ್ಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಮನೆ ಮನೆಗೆಗಳಿಗೆ ತಲುಪಿಸಲಾಗಿದ್ದರು, ಅದನ್ನು ಸಮರ್ಪಕವಾಗಿ ತುಂಬುವ ಬಗ್ಗೆ ಸ್ಪಷ್ಟ ಮಾಹಿತಿಗಳು ಇಲ್ಲದೆ ಗೊಂದಲ ಸೃಷ್ಟಿಯಾಗಿದೆ. ಎಸ್ಐಆರ್ ಹಿನ್ನೆಲೆಯಲ್ಲಿ ಅರ್ಜಿಗಳನ್ನು ವ್ಯವಸ್ಥಿತವಾಗಿ ಮತ್ತು ಕ್ರಮಬದ್ಧವಾಗಿ ತುಂಬುವ ಸಲುವಾಗಿ ಮತದಾರರು, ಈ ಬಗ್ಗೆ ಮಾಹಿತಿ ತಿಳಿದವರ ಬಳಿಗೆ ತೆರಳಿ ಅರ್ಜಿ ಭರ್ತಿ ಮಾಡಿಸಿಕೊಳ್ಳುತ್ತಾರೆ. ಇದನ್ನೆ ಪ್ರಮುಖವಾಗಿರಿಸಿಕೊಂಡು ವಿಪಕ್ಷಗಳು ಗೊಂದಲ ಸೃಷ್ಟಿಸಿರುವುದಾಗಿ ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ ಟಿ.ಪಿ.ರಮೇಶ್ ಅವರು ಮಾತನಾಡಿ,…
ಮಡಿಕೇರಿ NEWS DESK ಜು.11 : ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಚಂದ್ರಶೇಖರ್ ಹಾಗೂ ಜಾಜಿ ದಂಪತಿ ಪುತ್ರ ಕವನ್(24) ಮೃತ ಯುವಕ. ಶನಿವಾರ ಬೆಳಗ್ಗೆ ಕವನ್ ಮನೆಯಲ್ಲಿದ್ದ ಬಂದೂಕಿನಿAದ ಗುಂಡು ಹಾರಿಸಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸುಂಟಿಕೊಪ್ಪ ಜು.11 NEWS DESK : ಮಳೆಗೆ ಹಾನಿಯಾದ ಮನೆಯ ಸಂತ್ರಸ್ತರನ್ನು ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು. ಸುಂಟಿಕೊಪ್ಪದ ಜನತಾ ಕಾಲೋನಿಯ ಎಲಿಜಬೆತ್ ಎಂಬವರ ಮನೆಯು ಗಾಳಿ ಮಳೆಗೆ ಹಾನಿಗೊಂಡಿದ್ದು, ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ಗೌಡ ಭೇಟಿ ನೀಡಿ ಸಾಂತ್ವನ ಹೇಳಿ ಸರಕಾರ ಹಾಗೂ ವೈಯಕ್ತಿಕ ಸಹಾಯಹಸ್ತ ನೀಡುವ ಭರವಸೆಯನ್ನು ವ್ಯಕ್ತಪಡಿಸಿದರು. ಅಧಿಕಾರಿಗಳಿಗೆ ಸರಕಾರದಿಂದ ದೊರೆಯುವ ಸಲವತ್ತುಗಳನ್ನು ಅದಷ್ಟು ಬೇಗನೆ ಒದಗಿಸಿಕೊಡಬೇಕು ಅಲ್ಲದೆ ನನ್ನ ವೈಯಕ್ತಿಕ ಸಹಾಯಹಸ್ತವನ್ನು ನೀಡುವ ಮೂಲಕ ಪುನರ್ ಮನೆ ನಿರ್ಮಾಣಕ್ಕೆ ಮುಂದಾಗುವುದಾಗಿ ಅವರು ಹೇಳಿದರು. ಕುಟುಂಬವು ತುಂಬಾ ಅಪಾಯದಲ್ಲಿರುವ ಮನೆಯಲ್ಲಿಯೇ ವಾಸಿಸುತ್ತಿರುವುದನ್ನು ಮನಗಂಡ ಶಾಸಕರು ಮನೆಯನ್ನು ತೆರವುಗೊಳಿಸಿ ಬಾಡಿಗೆ ಮನೆಯಲ್ಲಿ ನೆಲೆಸುವಂತೆ ಸೂಚಿಸಿದರಲ್ಲದೆ. ಅವರಿಗೆ ಬೇಕಾದ ಅಗತ್ಯ ನೇರವನ್ನು ಒದಗಿಸುವುದಾಗಿ ಭರವಸೆಯನ್ನು ನೀಡಿದರು. ಕಂದಾಯ ಇಲಾಖೆಯ ಕಂದಾಯ ಪರೀವಿಕ್ಷಕರಾದ ಪ್ರಶಾಂತ್ ಅವರಿಗೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲಿಸಿ ಕ್ರಮಕ್ಕೆ ಮುಂದಾಗಬೇಕೆಂದು ಅವರು ಸೂಚಿಸಿದರು. ಪಂಚಾಯಿತಿ ವತಿಯಿಂದ ಸಂತ್ರಸ್ತರಿಗೆ ಬೇಕಾದ ಸೂಕ್ತ ಸೌಲಭ್ಯವನ್ನು ಒದಗಿಸುವಂತೆ…
ಮಡಿಕೇರಿ NEWS DESK ಜು.11 : ಹೇಮಾವತಿ ನದಿಯ ಹಿನ್ನೀರಿನಲ್ಲಿ ಗುರುವಾರ ರಾತ್ರಿ ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿದ್ದ ಕೊಡ್ಲಿಪೇಟೆ ಸಮೀಪದ ಜನಾರ್ಧನ ಹಳ್ಳಿಯ ನೀರುಗುಂದ ಗ್ರಾಮದ ನಿವಾಸಿಗಳಾದ ನಾಗರಾಜ್(45) ಮತ್ತು ಶಿವರಾಜ್(50) ಅವರ ಪತ್ತೆ ಕಾರ್ಯ ಚುರುಕುಗೊಂಡಿದೆ. ಶುಕ್ರವಾರ ಸಂಜೆಯವರೆಗೆ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರಿಗೆ ಯಾವುದೇ ಕುರುಹುಗಳು ಕಂಡು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶನಿವಾರ ಗ್ರಾಮಸ್ಥರು ತೆಪ್ಪದ ಸಹಾಯದಿಂದ ಹಿನ್ನೀರಿನ 30 ಎಕರೆ ಪ್ರದೇಶದಲ್ಲಿ ಶೋಧ ನಡೆಸಿದರೂ ಪ್ರಯೋಜನವಾಗಿಲ್ಲ. ಶನಿವಾರವೂ ಶನಿವಾರಸಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಮ್ಮ ಗ್ರಾಮದ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿರುವ ಕಾರಣ ಗ್ರಾಮಸ್ಥರು ಕೂಡ ನದಿ ದಡದಲ್ಲಿ ಕಾದು ಕುಳಿತ್ತಿದ್ದ ದೃಶ್ಯಗಳು ಕಂಡು ಬಂತು. ಈ ಕುರಿತು ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಯರಾಜ್, ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿರುವ ಇಬ್ಬರು ವ್ಯಕ್ತಿಗಳ ಕುಟುಂಬಗಳು ತೀರಾ ಬಡತನದಲ್ಲಿದ್ದು, ಅವರಿಗೆ ದಿಕ್ಕೇ ತೋಚದಂತಾಗಿದೆ. ಜಿಲ್ಲಾಡಳಿತ ನುರಿತ ಈಜುಗಾರರು…
ಮಡಿಕೇರಿ NEWS DESK ಜು.11 : 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಭಾರತೀಯರ ಹೃದಯ ಗೆದ್ದಿದ್ದ ಗಾನ ಕೋಗಿಲೆ ಎಸ್.ಜಾನಕಿ ಅವರು ಇಂದು ನಿಧನರಾಗಿದ್ದಾರೆ. ಕನ್ನಡ, ಮಲೆಯಾಳ, ಹಿಂದಿ, ತೆಲುಗು, ತಮಿಳು ಸೇರಿದಂತೆ ಸುಮಾರು 17ಕ್ಕೂ ಹೆಚ್ಚು ಭಾಷೆಗಳಲ್ಲಿ ಎಸ್.ಜಾನಕಿ ಅವರು ಹಾಡಿದ್ದಾರೆ. ತಮ್ಮ 88 ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಎಸ್.ಜಾನಕಿ ನಿಧನ ಹೊಂದಿದ್ದಾರೆ. ಜಾನಕಿ ಅಮ್ಮನವರ ನಿಧನಕ್ಕೆ ಭಾರತೀಯ ಸಂಗೀತ ಲೋಕ ಕಂಬನಿ ಮಿಡಿದಿದೆ.
ಮಡಿಕೇರಿ NEWS DESK ಜು.10 : ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ವಿಕಾಸ್ ಕುಮಾರ್ ಅವರು ಜಿಲ್ಲಾ ಪೊಲೀಸ್ ಕಚೇರಿಯ ಪರಿವೀಕ್ಷಣೆ ನಡೆಸಿ ವಾಹನ ವಿಭಾಗ, ಸಿಬ್ಬಂದಿಗಳ ಸಮಸ್ಯೆ, ವಸತಿ ಗೃಹ ಸಮಸ್ಯೆಗಳನ್ನು ಪರಿಶೀಲಿಸಿದರು. ನಂತರ ಕೊಡಗು ಜಿಲ್ಲೆಯಲ್ಲಿ ಮುಂಗಾರು ಸಮಯ ಪ್ರಕೃತಿ ವಿಕೋಪವನ್ನೆದುರಿಸುವ ಬಗ್ಗೆ ಎನ್ಡಿಆರ್ಎಫ್ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಜು.10 NEWS DESK : ಅಂತರ ಜಿಲ್ಲಾ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ತಂಡವು ಉತ್ತರ ಕನ್ನಡ ತಂಡವನ್ನು 6-1 ಗೋಲುಗಳ ಅಂತರದಿಂದ ಮಣಿಸಿ ಭರ್ಜರಿ ಜಯ ದಾಖಲಿಸಿದೆ. ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕೊಡಗು ತಂಡ ಪಂದ್ಯದ ಸಂಪೂರ್ಣ ಅವಧಿಯಲ್ಲಿ ಮೇಲುಗೈ ಸಾಧಿಸಿ ಎದುರಾಳಿ ತಂಡಕ್ಕೆ ತಿರುಗೇಟು ನೀಡುವ ಅವಕಾಶವನ್ನೇ ನೀಡಲಿಲ್ಲ. ಪಂದ್ಯದ ಮೊದಲಾರ್ಧದಲ್ಲೇ ಕೊಡಗು ತಂಡ ಹಲವು ಅವಕಾಶಗಳನ್ನು ಸೃಷ್ಟಿಸಿ ಗೋಲು ಗಳಿಸುವ ಮೂಲಕ ಮುನ್ನಡೆ ಸಾಧಿಸಿತು. ದ್ವಿತೀಯಾರ್ಧದಲ್ಲಿಯೂ ಅದೇ ಲಯ ಮುಂದುವರಿಸಿದ ಕೊಡಗು ತಂಡ ಇನ್ನಷ್ಟು ಗೋಲುಗಳನ್ನು ದಾಖಲಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ಕೊಡಗು ತಂಡದ ಪರ ದಿವಾಕರ್ ಎರಡು ಗೋಲುಗಳನ್ನು ಬಾರಿಸಿ ಮಿಂಚಿದರೆ, ಆಶಿರ್ ಕೂಡ ಎರಡು ಗೋಲುಗಳನ್ನು ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸಬಿತ್ ಮತ್ತು ಮುಸ್ತಾಕ್ ತಲಾ ಒಂದು ಗೋಲು ಗಳಿಸಿ ತಂಡದ ಗೆಲುವಿನ ಅಂತರವನ್ನು ಹೆಚ್ಚಿಸಿದರು. ತಂಡದ ನಾಯಕ ವಿಜು ಸಮರ್ಥ ನಾಯಕತ್ವ ಪ್ರದರ್ಶಿಸಿ ಆಟಗಾರರನ್ನು ಮುನ್ನಡೆಸಿದರು.…
ಮಡಿಕೇರಿ ಜು.10 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೊನ್ನಂಪೇಟೆ, ವಿರಾಜಪೇಟೆ ಹಾಗೂ ಮಡಿಕೇರಿ ತಾಲೂಕುಗಳ ಅಂಗನವಾಡಿಗಳಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಆದೇಶ ಪತ್ರ ವಿತರಿಸಿದರು. ಕ್ಷೇತ್ರದ ಒಟ್ಟು 25 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 34 ಅಂಗನವಾಡಿ ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿ, ಮಾತನಾಡಿದ ಶಾಸಕರು, “ಮಕ್ಕಳ ಮತ್ತು ಮಹಿಳೆಯರ ಕಲ್ಯಾಣದಲ್ಲಿ ಅಂಗನವಾಡಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ನಿಮಗೆ ದೊರಕಿರುವ ಈ ಸೇವೆಯ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಅತ್ಯಂತ ಜವಾಬ್ದಾರಿಯಿಂದ ಮತ್ತು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು” ಎಂದು ನೂತನ ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (CDPO), ಪ್ರಮುಖ ಮುಖಂಡರುಗಳಾದ ವಿನೋದ್ ನಾಣಯ್ಯ, ಸುಬೀರ್, ತುಳಸಿ ಗಾಂಧಿ ಪ್ರಸಾದ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.






