ಲೇಖಕ: admin

ಮಡಿಕೇರಿ ಮೇ 12 NEWS DESK : ಕೊಡವ ಭಾಷಿಕ ಸಮುದಾಯಗಳ ಕೂಟದಿಂದ ಇದೇ ಪ್ರಥಮ ಬಾರಿಗೆ ಕೊಡವ ಭಾಷಿಕ 21 ಸಮುದಾಯಗಳನ್ನು ಒಳಗೊಂಡ ಕ್ರೀಡಾಕೂಟ ಮೇ15 ರಿಂದ 17ರವರೆಗೆ ಮೂರ್ನಾಡು ಪಿಯು ಕಾಲೇಜಿನ ಬಾಚೆಟ್ಟೀರ ದಿ.ಬಾಲು ಮುದ್ದಯ್ಯ ಆಟದ ಮೈದಾನದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ವಿವರಗಳನ್ನು ನೀಡಿದ ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷರಾದ ಡಾ.ಮೇಚೀರ ಸುಭಾಷ್ ನಾಣಯ್ಯ, ಮೇ15 ರಂದು ಬೆಳಿಗ್ಗೆ 10 ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಕ್ರೀಡಾಕೂಟವನ್ನು 21 ಕೊಡವ ಭಾಷಿಕ ಜನಾಂಗದ ಸಮಾಜಗಳ ಅಧ್ಯಕ್ಷರು ಉದ್ಘಾಟಿಸಲಿದ್ದಾರೆಂದು ತಿಳಿಸಿದರು. :: 21 ತಂಡಗಳ ನಡುವೆ ಕ್ರಿಕೆಟ್ :: ಕ್ರೀಡಾಕೂಟದಲ್ಲಿ ಪ್ರಮುಖವಾಗಿ ಕೊಡವ ಭಾಷಿಕ ಸಮುದಾಯಗಳ ತಲಾ ಒಂದು ತಂಡದಂತೆ ಒಟ್ಟು 21 ತಂಡಗಳ ನಡುವೆ 6 ಓವರ್‍ಗಳಿಗೆ ಸೀಮಿತವಾದ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಆರಂಭಿಕ ದಿನದಂದು ಪ್ರದರ್ಶನ ಪಂದ್ಯದ ಬಳಿಕ ಪಂದ್ಯಾವಳಿ ಆರಂಭಗೊಳ್ಳಲಿದೆಯೆಂದು ಮಾಹಿತಿಯನ್ನಿತ್ತರು. ಮೇ 16 ರಂದು ಕ್ರಿಕೆಟ್‍ನೊಂದಿಗೆ ಹಗ್ಗಜಗ್ಗಾಟ…

Read More

ಮಡಿಕೇರಿ ಮೇ 12 NEWS DESK : ನಿರ್ಗತಿಕ ಬಡ ವಿದ್ಯಾರ್ಥಿಗಳಿಗೆ ಧಾರ್ಮಿಕ ಮತ್ತು ಭೌತಿಕ ಶಿಕ್ಷಣವನ್ನು ನೀಡುತ್ತಾ ಸಾರ್ಥಕ ಐವತ್ತು ವರ್ಷಗಳನ್ನು ಪೂರೈಸಿರುವ ಸಿದ್ದಾಪುರ ಮುಸ್ಲಿಂ ಆರ್ಫನೇಜ್(ಎಸ್‍ಎಂಓ) ಸಂಸ್ಥೆಯ ಸುವರ್ಣ ಮಹೋತ್ಸವದ ಮಹಾ ಸಮ್ಮೇಳನ ಮೇ 13 ಮತ್ತು 14ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಿದ್ದಾಪುರದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಎಸ್‍ಎಂಓ ಕಾರ್ಯಕ್ರಮ ಸಂಯೋಜಕರಾದ ವಿ.ಕೆ.ಬಷೀರ್ ಮಾತನಾಡಿ, ಬಡ ಅನಾಥ ಮಕ್ಕಳಿಗೆ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಎಸ್‍ಎಂಓ ಸಂಘಟನೆ 1975 ರಲ್ಲಿ 6 ಮಕ್ಕಳೊಂದಿಗೆ ಆರಂಭಗೊಂಡು, 1979ರಲ್ಲಿ ಅನಾಥಾಲಯಕ್ಕಾಗಿ ಕಟ್ಟಡವನ್ನು ನಿರ್ಮಿಸಲಾಯಿತು. ಈ ಅನಾಥಾಲಯದ ಪ್ರಯೋಜನವನ್ನು ಇಲ್ಲಿಯವರೆಗೆ 1800 ಕ್ಕೂ ಹೆಚ್ಚಿನ ಮಕ್ಕಳು ಪಡೆದುಕೊಂಡಿರುವುದಾಗಿ ತಿಳಿಸಿದರು. ಮೇ 13 ರಂದು ಮಧ್ಯಾಹ್ನ ಮಖಾಂ ಝಿಯಾರತ್ ನಡೆಯಲಿದ್ದು, ಸಂಜೆ 4 ಗಂಟೆಗೆ ಸಮಾರಂಭ ಮತ್ತು ಸಮ್ಮೇಳನವನ್ನು ಎಸ್‍ಕೆಜೆಎಂಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ. ರಾತ್ರಿ 7 ಗಂಟೆಗೆ ಆಯೋಜಿತ ಸಾರ್ವಜನಿಕ ಸಮ್ಮೇಳನವನ್ನು ಸಿದ್ದಾಪುರ ಮಹಲ್ ಖತೀಬರಾದ ನೌಫಲ್ ಹುದವಿ…

Read More

ಮಡಿಕೇರಿ ಮೇ 12 NEWS DESK : ಜೀಪೊಂದು ಪ್ರಪಾತಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಣ್ಣನೂರು ನಿವಾಸಿ ಬಾಲಕೃಷ್ಣನ್ (50) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಸೋಮವಾರ ರಾತ್ರಿ ವಿರಾಜಪೇಟೆಯಿಂದ ಕೇರಳ ರಾಜ್ಯದ ಕಣ್ಣನೂರಿಗೆ ತೆರಳುತ್ತಿದ್ದಾಗ ಜೀಪು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಮಗುಚಿ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಬಾಲಕೃಷ್ಣನ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪೆರಂಬಾಡಿ ಚೆಕ್ ಪೋಸ್ಟ್‌ನಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ಪ್ರಪಾತದಲ್ಲಿ ಜೀಪು ಸಹಿತ ಬಾಲಕೃಷ್ಣನ್ ಅವರ ಮೃತ ದೇಹ ಪತ್ತೆಯಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Read More

ಮಡಿಕೇರಿ ಮೇ 12 NEWS DESK : ಶ್ರೇಷ್ಠ ಅಂಕಗಳಿಂದ ಮಾತ್ರವೇ ಜೀವನವನ್ನು ನಿರ್ಧರಿಸಲು ಸಾಧ್ಯವಿಲ್ಲ, ಇದರ ಹೊರತಾಗಿಯೂ ಒಂದು ಬದುಕಿದೆ ಎಂಬುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿ ಅರಿತುಕೊಳ್ಳಬೇಕು. ಜೀವನ ಕೇವಲ ಅಂಕಗಳಿಗೆ ಸೀಮಿತವಾಗಬಾರದು ಎಂದು ಲೇಖಕ ಹಾಗೂ ಪ್ರಾಧ್ಯಾಪಕ ಅರ್ಜುನ್ ಮೌರ್ಯ ಅವರು ಸಲಹೆ ನೀಡಿದ್ದಾರೆ. ಉಮ್ಮತ್‍ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಶಿಕ್ಷಣ ಮೇಳ, ಪ್ರತಿಭಾ ಪುರಸ್ಕಾರ, 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.100ರಷ್ಟು ಸಾಧನೆ ಮಾಡಿದ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು, ಸಾಧಕರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಅವಕಾಶಗಳ ಜೊತೆಯಲ್ಲಿಯೇ ಸವಾಲುಗಳಿವೆ. ಅವುಗಳ ಬಗ್ಗೆಯೂ ಜವಾಬ್ದಾರಿ ವಹಿಸಬೇಕು. ಶಿಕ್ಷಣ ಮಾತ್ರವೇ ವ್ಯಕ್ತಿಯ ಧರ್ಮವನ್ನು ನಿರ್ಧರಿಸುತ್ತದೆಯೇ ಹೊರತು, ಚೌಕಟ್ಟಿನ ಧರ್ಮ ಶಿಕ್ಷಣವನ್ನು ನಿರ್ಧರಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪೋಷಕರ ನಿರೀಕ್ಷೆಗಳ ಮೇಲೆ ಕಲ್ಲು ಎತ್ತಿ ಹಾಕುವ ಕೆಲಸ ಮಾಡಬಾರದು. ಇಂದು ಶಿಕ್ಷಣ…

Read More

ಮಡಿಕೇರಿ ಮೇ 12 NEWS DESK : ಶ್ರೇಷ್ಠ ಅಂಕಗಳಿಂದ ಮಾತ್ರವೇ ಜೀವನವನ್ನು ನಿರ್ಧರಿಸಲು ಸಾಧ್ಯವಿಲ್ಲ, ಇದರ ಹೊರತಾಗಿಯೂ ಒಂದು ಬದುಕಿದೆ ಎಂಬುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿ ಅರಿತುಕೊಳ್ಳಬೇಕು. ಜೀವನ ಕೇವಲ ಅಂಕಗಳಿಗೆ ಸೀಮಿತವಾಗಬಾರದು ಎಂದು ಲೇಖಕ ಹಾಗೂ ಪ್ರಾಧ್ಯಾಪಕ ಅರ್ಜುನ್ ಮೌರ್ಯ ಅವರು ಸಲಹೆ ನೀಡಿದ್ದಾರೆ. ಉಮ್ಮತ್‍ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಶಿಕ್ಷಣ ಮೇಳ, ಪ್ರತಿಭಾ ಪುರಸ್ಕಾರ, 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.100ರಷ್ಟು ಸಾಧನೆ ಮಾಡಿದ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು, ಸಾಧಕರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಅವಕಾಶಗಳ ಜೊತೆಯಲ್ಲಿಯೇ ಸವಾಲುಗಳಿವೆ. ಅವುಗಳ ಬಗ್ಗೆಯೂ ಜವಾಬ್ದಾರಿ ವಹಿಸಬೇಕು. ಶಿಕ್ಷಣ ಮಾತ್ರವೇ ವ್ಯಕ್ತಿಯ ಧರ್ಮವನ್ನು ನಿರ್ಧರಿಸುತ್ತದೆಯೇ ಹೊರತು, ಚೌಕಟ್ಟಿನ ಧರ್ಮ ಶಿಕ್ಷಣವನ್ನು ನಿರ್ಧರಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪೋಷಕರ ನಿರೀಕ್ಷೆಗಳ ಮೇಲೆ ಕಲ್ಲು ಎತ್ತಿ ಹಾಕುವ ಕೆಲಸ ಮಾಡಬಾರದು. ಇಂದು ಶಿಕ್ಷಣ…

Read More

ಮಡಿಕೇರಿ NEWS DESK ಮೇ 12 : ಕ್ಷೇತ್ರ ಪುನರ್ ವಿಂಗಡಣೆಯ ಸಂದರ್ಭ ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹವನ್ನು ಇಂದು ಮಡಿಕೇರಿ ನಗರದ “ಕೊಡವ ಮಂದ್” ನಲ್ಲಿ ಆರಂಭಿಸಿತು. ಕೊಡವ ಮಂದ್ ನಲ್ಲಿ ಸಾಂಪ್ರದಾಯಿಕ ಪ್ರಾರ್ಥನೆಯನ್ನು ಸಲ್ಲಿಸಿ ಮೂರು ಬಾರಿ ಕುಶಲತೋಪು ಹಾರಿಸುವ ಮೂಲಕ ಶಾಂತಿಯುತ ಸತ್ಯಾಗ್ರಹ ಆರಂಭಿಸಲಾಯಿತು. ಸತ್ಯಾಗ್ರಹದಲ್ಲಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ, ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರ ನೀಡಬೇಕೆಂದು ಆಗ್ರಹಿಸಿರುವ ಮನವಿ ಪತ್ರವನ್ನು ಭಾರತದ ರಾಷ್ಟಪತಿಗಳು, ಪ್ರಧಾನಮಂತ್ರಿಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಲಾಗುವುದು. “ಕೊಡವ ಮಂದ್” ನಲ್ಲಿ ಮೇ 14 ರಂದು ಬೆಳಿಗ್ಗೆ 10.30 ರವರೆಗೆ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು. ಕೊಡವರ ಸಾಂಪ್ರದಾಯಿಕ ಆವಾಸಸ್ಥಾನದ ಗಡಿಗಳನ್ನು ಬದಲಾಯಿಸದೆ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು. ಸಿಕ್ಕಿಂನ…

Read More

ಮಡಿಕೇರಿ NEWS DESK ಮೇ 12 : ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಶೇ.50 ಕ್ಕಿಂತಲೂ ಕಡಿಮೆ ಮಳೆ ಆಗಿದೆ. ಆದರೂ ಮಳೆಗಾಲದ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಪ್ರವಾಹ ಪೀಡಿತ ಹಾಗೂ ಭೂಕುಸಿತ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು. ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್ ಅಧಿಕಾರಿಗಳು, ತಹಶೀಲ್ದಾರರು, ತಾ.ಪಂ.ಇಒಗಳು, ಸ್ಥಳೀಯ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಸ್ಥಳೀಯ ಎಂಜಿನಿಯರ್‌ಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ತಾಲ್ಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಕಾರ್ಯಪಡೆ…

Read More

ಮಡಿಕೇರಿ NEWS DESK ಮೇ 12 : ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೋಳಿಬೈಲು ವೆಂಕಟೇಶ್ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣ ನೀಡಿರುವ ಅವರು ರಾಜೀನಾಮೆ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರಿಗೆ ಸಲ್ಲಿಸಿದ್ದಾರೆ.

Read More

ಸುಂಟಿಕೊಪ್ಪ ಮೇ 11 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಆವರಣದಲ್ಲಿ ಧ್ವಜಾರೋಹಣ ಹಾಗೂ ಅಡಂಬರ ದಿವ್ಯ ಬಲಿಪೂಜೆ ನೆರವೇರಿಸುವ ಮೂಲಕ ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಯಾದ ರೇ.ಫಾ. ಎಡ್ವರ್ಡ್ ವಿಲಿಯಂ ಸಲ್ಡಾನಾ ಹಾಗೂ ಮಡಿಕೇರಿ ವಲಯ ದರ್ಮಗುರುಗಳು ಮತ್ತು ಸಂತ ಮೈಕಲರ ದೇವಾಲಯದ ಧರ್ಮಗುರುಗಳಾದ ಜಾರ್ಜ್ ದೀಪಕ್, ಬೆಂಗಳೂರಿನ ಧರ್ಮಗುರುಗಳು ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್ ಚಾಲನೆ ನೀಡಿದರು. ಬಲಿಪೂಜೆ ಹಾಗೂ ಆರಾಧನೆಯನ್ನು ಕೆ.ಆರ್.ಪೇಟೆಯ ಬಾಲ ಯೇಸುವಿನ ದೇವಾಲಯದ ಧರ್ಮಗುರುಗಾಳದ ಟಿ.ಪೌಲೂಸ್ ಅವರುಗಳು ನೆರವೇರಿಸಿದರು. ಮಕ್ಕಳಿಗೆ ನೂತನ ಪರಮ ಪ್ರಸಾದ ಸಂಸ್ಕಾರ ಮತ್ತು ಅಡಂಬರ ದಿವ್ಯ ಬಲಿಪೂಜೆಯನ್ನು ಏಕಾರ್ಡ್ ಎಸ್ಟೇಟ್ ಸಹಾಯಕ ಧರ್ಮಗುರುಗಾಳದ ಚಾಲ್ರ್ಸ್ ಪೆರಿಯನಾಗಮ್ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್ ಆಡಂಬರ ದಿವ್ಯ ಬಲಿಪೂಜೆ ಪ್ರಭೋದನೆ ಮತ್ತು ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ಸಂಸ್ಕಾರ ವಿತರಿಸಿದರು. ಸಂತ ಅಂತೋಣಿ ದೇವಾಲಯದ ಧರ್ಮಗುರುಗಳು…

Read More

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಕೊಡಗು ಬ್ಲಡ್ ಡೋನರ್ಸ್ ಪದಾಧಿಕಾರಿಗಳು ಟಿ.ಕೆ.ರಾಜು ಅವರನ್ನು ಭೇಟಿಯಾಗಿ ತುರ್ತು ಸಂದರ್ಭದಲ್ಲಿ ರಕ್ತದ ಬೇಡಿಕೆ ಇದ್ದಾಗ ತಮ್ಮ ಇಲಾಖಾ ಸಿಬ್ಬಂದಿಗಳನ್ನು ರಕ್ತದಾನ ಮಾಡಲು ಕಳುಹಿಸುತ್ತಿದ್ದನ್ನು ಸ್ಮರಿಸಿ, ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

Read More