ಮಡಿಕೇರಿ ಆ.21 NEWS DESK : ಕೇಶವ ಸ್ಮೃತಿ ಸಂವರ್ಧನ ಸಮಿತಿ ಮತ್ತು ಮಡಿಕೇರಿ ಬಾಲ ಗೋಕುಲ ವತಿಯಿಂದ ನಗರದ ಮಹದೇವಪೇಟೆಯಲ್ಲಿರುವ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ “ಶ್ರೀ ಕೃಷ್ಣ, ರುಕ್ಮಣಿ, ರಾಧೆ, ದೇವಕಿ, ಯಶೋದೆ ಹಾಗೂ ವಸುದೇವರ” ಛದ್ಮವೇಷ ಸಮಾಗಮ ಕಾರ್ಯಕ್ರಮ ನಡೆಯಿತು. ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಬಾಲಗೋಕುಲ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಪ್ರಮುಖರಾದ ಉಮೇಶ್, “ನೈತಿಕ ವೌಲ್ಯ ಕುಸಿಯುತ್ತಿರುವ ಈ ಕಾಲಘಟ್ಟದಲ್ಲಿ ಸಾಮಾಜಿಕ ಅಧ:ಪತನ ಉಂಟಾಗುತ್ತಿದ್ದು, ಮಾನವೀಯ ವೌಲ್ಯ ಬೆಳೆಸುವ ಸಾಂಸ್ಕೃತಿಕ ಶಿಕ್ಷಣ, ಇದನ್ನು ಬೋಧಿಸುವ ವ್ಯವಸ್ಥೆಯೇ ಬಾಲಗೋಕುಲಗಳಾಗಿವೆ ಎಂದರು. ಹೆಜ್ಜೆ ಹೆಜ್ಜೆಗೂ ದೈವಿಕ ಚೈತನ್ಯದಿಂದ ಜೀವನವನ್ನು ನಡೆಸುವವರು. ಹಿರಿಯರು ಕೊಟ್ಟಿರುವ ಉತ್ತಮ ಸಂಪ್ರದಾಯ, ಜೀವನ ಪದ್ಧತಿಗಳು ಸ್ವಂತಕ್ಕೆ ಅಲ್ಲ. ಬದಲು ಲೋಕದ ಸಮಸ್ತ ಚರಾಚರಕ್ಕೆ ಸಮರ್ಪಿತ ಎಂದು ಅರಿತು, ಸಶಕ್ತ ಸಮಾಜದ ಮೂಲಾಧಾರವು ಪ್ರೀತಿ ಮತ್ತು ಸೇವೆಯಾಗಿದೆ ಎಂದರು. ಇಂದಿನ ಮಕ್ಕಳು ಮುಂದಿನ ಸಮಾಜಕ್ಕೆ ಸತ್ಕಾರ್ಯಕ್ಕಾಗಿ ಸಿಗಬೇಕಾದರೆ ಬಾಲಗೋಕುಲ ಶಿಕ್ಷಣ…
ಲೇಖಕ: admin
ಸಿದ್ದಾಪುರ ಆ.21 NEWS DESK : ವೈದ್ಯ ಸ್ನಾತಕೋತ್ತರ ನೀಟ್ ಪಿಜಿ 2025 ಪರೀಕ್ಷೆಯಲ್ಲಿ ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿಯ Dr. ವಹೀದ ಮುಹಮ್ಮದ್ ಆಲ್ ಇಂಡಿಯಾ ರ್ಯಾಂಕ್ (AIR) 1505 ಪಡೆದು ಉತ್ತೀರ್ಣರಾಗಿದ್ದಾರೆ. ಇವರು ಮಾಲ್ದಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ Dr.ಶಾರುಖ್ ಫಹಾದ್ ಅವರ ಪತ್ನಿ. ಆ.3 ರಂದು ನಡೆದ ಪರೀಕ್ಷೆಯಲ್ಲಿ ದೇಶಾದ್ಯಂತ ಸುಮಾರು 2.42 ಲಕ್ಷ ವ್ಯದ್ಯರು ಹಾಜರಾಗಿದ್ದರು.
ವಿರಾಜಪೇಟೆ ಆ.20 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನಪರ್ವ ರಕ್ಷಾ ಬಂಧನ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಡಿಕೇರಿ ಶಾಖೆಯ ಸಹ ಸಂಚಾಲಕಿ ಬಿ.ಕೆ.ಧನಲಕ್ಷ್ಮಿ ಅವರು ರಕ್ಷಾಬಂಧನದ ಆಧ್ಯಾತ್ಮಿಕ ರಹಸ್ಯವನ್ನು ತಿಳಿಸಿ ಮಾತನಾಡಿ, ಯಾರು ಪರಮಾತ್ಮನ ನೆನಪು ಎಂಬ ಶ್ರೀರಕ್ಷೆಯಲ್ಲಿ ಬಂಧಿತ ಆಗುತ್ತಾರೋ ಅವರಿಗೆ ಉಳಿದೆಲ್ಲ ಬಂಧನಗಳು ದೂರ ಆಗುವುದು. ನಮ್ಮ ಜೀವನದಲ್ಲಿ ಪವಿತ್ರ ಧಾರಣೆ ಮಾಡುವ ಪ್ರತಿಜ್ಞೆ ಮಾಡಿಕೊಂಡು ಪಾವನರಾಗುವುದೇ ನಿಜವಾದ ರಾಕಿ ಕಟ್ಟಿಕೊಳ್ಳುವುದು ಆಗಿದೆ. ಆಧ್ಯಾತ್ಮಿಕ ದೃಷ್ಟಿಯ ತಿಲಕ ಇಟ್ಟು, ಸಿಹಿ ತಿಂದು ಬಾಯಿ ಎಷ್ಟು ಮಧುರ, ಹಾಗೆ ನಮ್ಮ ಮಾತು ಮಧುರವಾಗಿರಬೇಕು. ಮಾತಿನಿಂದ ಯಾರಿಗೂ ದುಃಖ ಕೊಡಬಾರದು, ಶ್ರೀ ಕೃಷ್ಣ ಸತ್ಯಯುಗದ ಪ್ರಥಮ ರಾಜಕುಮಾರ ಕೃಷ್ಣ ದೇವತಾ ಪುರುಷನಾಗಿದ್ದಾನೆ. ಮರ್ಯಾದ ಪುರುಷೋತ್ತಮನೆಂದು ಹೇಳಲಾಗುತ್ತದೆ. ರಕ್ಷಾ ಬಂಧನವೆಂದರೆ ಕೇವಲ ದಾರ ಕಟ್ಟಿಕೊಳ್ಳುವುದಲ್ಲ, ಇದು ಮನಸನ್ನು ಸಕಾರಾತ್ಮಕ ಮಾಡಿಕೊಳ್ಳುವುದು ಆಗಿದೆ. ಮನಸ್ಸನ್ನು ಬಲಶಾಲಿ ಮಾಡಿಕೊಳ್ಳಲು ರಾಜಯೋಗ (ಮೆಡಿಟೇಶನ್)…
ಪುತ್ತೂರು ಆ.20 NEWS DESK : ಆಧುನಿಕ ಸಮಾಜದಲ್ಲಿ ಸೈಬರ್ ಅಪರಾಧ ಹಾಗೂ ಮಾದಕ ದ್ರವ್ಯಗಳ ಬಳಕೆ ವ್ಯಾಪಕವಾಗಿ ಹೆಚ್ಚಳವನ್ನು ಕಂಡಿದ್ದು, ಇದು ವ್ಯಕ್ತಿಯೊಬ್ಬನ ಚಾರಿತ್ರ್ಯ ಹಾಗೂ ಹಣಕಾಸಿನ ಮೂಲವನ್ನು ನಾಶಮಾಡುತ್ತವೆ. ಅದಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವ ಪ್ರತಿಯೊಬ್ಬರೂ ಸೈಬರ್ ಕ್ರೈಂ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ ಎಂದು ಪುತ್ತೂರು ಟ್ರಾಫಿಕ್ ಪೊಲೀಸರು ಠಾಣೆಯ ಪಿಎಸ್ಐ ಉದಯ ರವಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿಯ ಆಶ್ರಯದಲ್ಲಿ ನಡೆದ ಆನ್ಲೈನ್ನಲ್ಲಿ ಸುರಕ್ಷಿತವಾಗಿರಿ ಎನ್ನುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಯಾವಾಗ ಮಾಹಿತಿ ತಂತ್ರಜ್ಞಾನದ ಕ್ರಾಂತಿಯಾಯಿತೋ ಅದರ ಜತೆಯಲ್ಲಿ ಈ ಅಪರಾಧ ಪ್ರಕರಣಗಳೂ ಹೆಚ್ಚಾಯ್ತು. ಆನ್ಲೈನ್ ಮೂಲಕ ಮಕ್ಕಳ ದೌರ್ಜನ್ಯ, ಇಚ್ಚೆಗೆ ವಿರುದ್ದವಾಗಿ ಮಾನಸಿಕ ಹಿಂಸೆಯನ್ನು ನೀಡುವುದು, ಡೇಟಿಂಗ್ ಆಪ್ ಮೂಲಕ ತೊಂದರೆಯನ್ನು ನೀಡುವುದು, ಉದ್ಯೋಗದ ಆಮಿಷವೊಡ್ಡಿ ಹಣ ಸಂಗ್ರಹಿಸುವುದು, ಅಧಿಕ ಲಾಭಾಂಶದ ನೆಪದಿಂದ ಹೂಡಿಕೆ ಮಾಡಿಸುವುದು ಡಿಜಿಟಲ್ ಅರೆಸ್ಟ್, ಫೋನ್ ಮೂಲಕ ಒಟಿಪಿಗಳನ್ನು…
ಮಡಿಕೇರಿ ಆ.18 NEWS DESK : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿಯ ಮೃತ ದೇಹ ಪತ್ತೆಯಾಗಿದೆ. ಹುಲಿ ವಯೋ ಸಹಜ ರೀತಿಯಲ್ಲಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಆಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಆ.20 NEWS DESK : ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಳುವವನೆ ಭೂಮಿಯ ಒಡೆಯ, ಜೀತ ಪದ್ಧತಿ ನಿರ್ಮೂಲನೆ, ವಿದ್ಯಾರ್ಥಿ ನಿಲಯ ಸ್ಥಾಪನೆ, ಹಿಂದುಳಿದ ವರ್ಗಗಳಿಗೆ ನ್ಯಾಯ, ಎಲೆಕ್ಟ್ರಾನಿಕ್ ಸಿಟಿ ಆರಂಭ ಹೀಗೆ ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ತುಂಬಾ ದೂರದೃಷ್ಟಿಯಿಂದ ಆಡಳಿತವನ್ನು ನಡೆಸಿ, ಇಂದಿಗೂ ಸಹ ಜನಮನ್ನಣೆ ಉಳಿಸಿಕೊಂಡಿರುವುದು ಸಾಕ್ಷಿ ಪ್ರಜ್ಞೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಪ್ರತಿಯೊಂದು ಸಮಾಜಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಲು ಸಾಕಷ್ಟು ಶ್ರಮಿಸಿದ್ದಾರೆ. ಇಂತಹ ಮಹನೀಯರ ಆದರ್ಶ ಮತ್ತು ಸಾಧನೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಸಮ ಸಮಾಜ ನಿರ್ಮಾಣ ಹಾಗೂ ಸುಧಾರಣೆಗೆ ಶ್ರಮಿಸಿದ್ದಾರೆ. ಆ…
ಮಡಿಕೇರಿ ಆ.20 NEWS DESK : ‘ಶೋಷಣೆ ಮತ್ತು ಬಡತನ’ ಮುಕ್ತವಾದ ಸಮಾಜ ನಿರ್ಮಾಣಕ್ಕಾಗಿ ಬದುಕಿನುದ್ದಕ್ಕೂ ಹೋರಾಟಗಳನ್ನು ನಡೆಸಿಕೊಂಡು ಬಂದ ದಿ.ದೇವರಾಜ ಅರಸು, ಅಂತಃಕರಣದ ರಾಜ್ಯಭಾರದ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದ ಮಹಾನ್ ನೇತಾರರಾಗಿದ್ದಾರೆ ಎಂದು ಮೈಸೂರು ವಿಶ್ವ ವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಅರಗು ಮತ್ತು ಬಣ್ಣದ ಕಾರ್ಖಾನೆ ನಿಗಮದ ಮಾಜಿ ಅಧ್ಯಕ್ಷರಾದ ಹೆಚ್.ಎ.ವೆಂಕಟೇಶ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಲಯನ್ಸ್ ಸಭಾಂಗಣದಲ್ಲಿ ನಡೆದ ದಿ.ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇವರಾಜ ಅರಸು ಅವರನ್ನು ಮುಖ್ಯಮಂತ್ರಿಗಳಾಗಿದ್ದವರು ಎನ್ನುವ ಕಾರಣದಿಂದ ಜನತೆ ನೆನಪಿಸಿಕೊಳ್ಳುತ್ತಿಲ್ಲ. ಬದಲಾಗಿ ಅವವರು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಲು ಶ್ರಮಿಸಿದ ಮಹಾನ್ ನೇತಾರರಾಗಿದ್ದರೆಂದು ಸ್ಮರಿಸುತ್ತಾರೆ. ಇವರು ತಮ್ಮ ಆಡಳಿತದ ಅವಧಿಯಲ್ಲಿ ತಂದ ದೂರದೃಷ್ಟಿಯ ಜನಪರವಾದ ಯೋಜನೆಗಳು, ಆಡಳಿತ ವೈಖರಿಗಳು ರಾಜ್ಯದಲ್ಲಿ ಹೊಸ ರಾಜಕೀಯ ವಾತಾವರಣವನ್ನೆ ಸೃಷ್ಟಿಸಿತ್ತು.…
ಮಡಿಕೇರಿ ಆ.20 NEWS DESK : ಕರ್ನಾಟಕ ರಾಜ್ಯ ಔಷಧಿ ಮಾರಾಟಗಾರರ ಸಂಘದ ವತಿಯಿಂದ ನೀಡಲಾಗುವ ” ಕರ್ನಾಟಕ ಕೆಮಿಸ್ಟ್ ರತ್ನ ” ಪ್ರಶಸ್ತಿಯನ್ನು ಸೋಮವಾರಪೇಟೆಯ ಮವಿ೯ನ್ ಫನಾ೯ಂಡೆಸ್ ಅವರಿಗೆ ಪ್ರಧಾನ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಸರ್ವ ಸದಸ್ಯರ 67 ನೇ ವಾಷಿ೯ಕ ಮಹಾಸಭೆಯಲ್ಲಿ ಸೋಮವಾರಪೇಟೆಯ ಮೆಡಿಕಲ್ ಎಂಪೋರಿಯಂ ಮಾಲೀಕ ಮರ್ವಿನ್ ಫರ್ನಾಂಡೆಸ್ ಅವರಿಗೆ ಕನಾ೯ಟಕ ಕೆಮಿಸ್ಟ್ ರತ್ನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೆವಿ೯ನ್ ಫೆನಾ೯ಂಡೀಸ್ 40 ವರ್ಷಗಳಿಂದ ಸೋಮವಾರಪೇಟೆಯಲ್ಲಿ ಆರೋಗ್ಯ ಸೇವೆಯನ್ನು ನೀಡುತ್ತಿದ್ದಾರೆ.
ಮಡಿಕೇರಿ ಆ.20 NEWS DESK : ಜುಲೈ 2026 ನೇ ಅಧಿವೇಶನಕ್ಕಾಗಿ ಉತ್ತರಖಂಡ ರಾಜ್ಯದ ಡೆಹಾರಡೂನ್ ರಾಷ್ಟ್ರೀಯ ಇಂಡಿಯಾನ್ ಮಿಲಿಟರಿ ಕಾಲೇಜಿಗೆ 8 ನೇ ತರಗತಿಗಾಗಿ ಪ್ರವೇಶ ಪಡೆಯಲು ಬಯಸುವ ಕರ್ನಾಟಕದ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025 ರ ಡಿಸೆಂಬರ್, 07 ರಂದು ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ಜುಲೈ 01 2026 ರಂತೆ ಹನ್ನೊಂದುವರೆ ವರ್ಷದಿಂದ ಹದಿಮೂರು ವರ್ಷದೊಳಗೆ ಇರುವ (ಅಂದರೆ ದಿನಾಂಕ 02 ಜುಲೈ 2013 ರಿಂದ 01-01-2015 ರೊಳಗೆ ಜನಿಸಿರುವ) ಬಾಲಕ ಮತ್ತು ಬಾಲಕಿಯರು ಮಾತ್ರ ಈ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯ ಗುರಿ ಯುವಕ ಮತ್ತು ಯುವತಿಯರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ದಗೊಳಿಸುವುದು ಕಾಲೇಜಿನ ವರ್ಷವೊಂದಕ್ಕೆ ಪುಸ್ತಕ ವಿದ್ಯಾಭ್ಯಾಸದ ಶುಲ್ಕ ರೂ. 98,650 ಗಳು ಹಾಗೂ ರೂ.81,850 (ಎಸ್ಸಿ/ಎಸ್ಟಿ)…
ಮಡಿಕೇರಿ ಆ.20 NEWS DESK : ಕೊಡಗು ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯಲ್ಲಿ ಸೆ.5 ರಿಂದ 7ರ ವರೆಗೆ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ನಡೆಯಲಿದೆ ಎಂದು ಅಸೋಸಿಯೇಷನ್ನ ಗೌರವಾಧ್ಯಕ್ಷ ಮಹಮ್ಮದ್ ಅಸಿಫ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ಸೆ.5 ರಂದು ಬೆಳಿಗ್ಗೆ 9 ಗಂಟೆಗೆ ಪಂದ್ಯಾವಳಿಗೆ ಚಾಲನೆ ದೊರೆಯಲಿದೆ ಎಂದು ಹೇಳಿದರು. 13 ವರ್ಷದ ಬಾಲಕ ಬಾಲಕಿಯರಿಗೆ ಹಾಗೂ 17 ವಯೋಮಿತಿಯ ಯುವಕ-ಯುವತಿಯರಿಗೆ ಪಂದ್ಯಾವಳಿಗಳು ನಡೆಯಲಿದ್ದು, 17 ವರ್ಷ ಮೇಲ್ಪಟ್ಟವರ ಮುಕ್ತ ಹಾಗೂ 50 ವರ್ಷದ ಮೇಲಿನ ವೆಟರನ್ ವಿಭಾಗದಲ್ಲಿ ಸ್ಪರ್ಧಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಅಸೋಸಿಯೇಷನ್ನ ನಿರ್ದೇಶಕ ಪೃಥ್ವಿ 9880073440, ಖಜಾಂಚಿ ಹರಿಶಂಕರ್ 8618369238 ಸಂಪರ್ಕಿಸಬಹುದಾಗಿದೆ. ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಅಧ್ಯಕ್ಷ ಪ್ರವೀಣ್ ಶೇಟ್, ಖಜಾಂಚಿ ಹರಿಶಂಕರ್, ನಿರ್ದೇಶಕ ಪೃಥ್ವಿ ಉಪಸ್ಥಿತರಿದ್ದರು.






