ಮಡಿಕೇರಿ ಅ.29 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ಯುವ ಘಟಕದ ವತಿಯಿಂದ ನ.1 ಮತ್ತು 2 ರಂದು ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಕ್ರಿಕೆಟ್ ಚಾಂಪಿಯನ್ಸ್ ಟ್ರೋಫಿ-2025 ಸೀಸನ್-1 ನಡೆಯಲಿದೆ. ಮೂರ್ನಾಡುವಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಗೆ ನ.1 ರಂದು ಬೆಳಿಗ್ಗೆ 9 ಗಂಟೆಗೆ ಚಾಲನೆ ದೊರೆಯಲಿದೆ. ವಿಜೇತ ತಂಡಕ್ಕೆ 20,000 ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ 15,000 ನಗದು ಮತ್ತು ಟ್ರೋಫಿ, ತೃತೀಯ ಬಹುಮಾನ 5,000 ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ ಹಲವಾರು ವೈಯಕ್ತಿಕ ಬಹುಮಾನವನ್ನು ನೀಡಲಾಗುವುದು. ಪಂದ್ಯಾವಳಿಯು ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಕುಲಬಾಂಧವರಿಗೆ ಮಾತ್ರ ಸೀಮಿತವಾಗಿದ್ದು, 4 ಓವರ್ಗಳಿಗೆ ಸೀಮಿತವಾಗಿದೆ ಎಂದು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ಯುವ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 8105358468, 7022466621, 8277133291 ಸಂಪರ್ಕಿಸಬಹುದಾಗಿದೆ.
ಲೇಖಕ: admin
ಮಡಿಕೇರಿ ಅ.29 NEWS DESK : ಚಾಮುಂಡೇಶ್ವರಿ ನಗರದ ಅಂಗನವಾಡಿಯಲ್ಲಿ ಸುಮಾರು 30 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವಿಜಯ ಅವರಿಗೆ ಚಾಮುಂಡೇಶ್ವರಿ ನಗರದ ನಿವಾಸಿಗಳು ಬೀಳ್ಕೊಡುಗೆ ನೀಡಿದರು. ಚಾಮುಂಡೇಶ್ವರಿ ನಗರದ ಅಂಗನವಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ ವಿಜಯ ಅವರನ್ನು ಸನ್ಮಾನಿಸಿ, ಬೀಳ್ಕೊಟ್ಟರು. ಮುಂದಿನ ನಿವೃತ್ತಿ ಜೀವನ ಸುಖಕರವಾಗಿರಲೆಂದು ಹಾರೈಸಿದರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕಾರ್ಕಳ ಅ.29 NEWS DESK : ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಕನ್ನಡ ಸಂಸ್ಕೃತಿಯ ಪ್ರಚಾರ ಹಾಗೂ ಓದುಗರಲ್ಲಿ ಪುಸ್ತಕಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಕಳ ಹಾಗೂ ಮೂಡುಬಿದಿರೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ವಿಶೇಷ ರಿಯಾಯಿತಿಯಲ್ಲಿ ಪುಸ್ತಕಗಳ ಮಾರಾಟ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ಸಾಹಿತ್ಯ, ಕಾದಂಬರಿ, ಪ್ರಬಂಧ, ಜೀವನ ಚರಿತ್ರೆ, ಮಕ್ಕಳ ಸಾಹಿತ್ಯ ಸೇರಿದಂತೆ ವಿವಿಧ ವಿಷಯಗಳ ನೂರಾರು ಪುಸ್ತಕಗಳು ವಿಶೇಷ ರಿಯಾಯಿತಿ ದರದಲ್ಲಿ ಲಭ್ಯವಿರಲಿವೆ. ಕನ್ನಡ ಸಾಹಿತ್ಯ ಕ್ಷೇತ್ರದ ಮಹನೀಯರ ಕೃತಿಗಳ ಜೊತೆಗೆ ಯುವ ಲೇಖಕರ ಹೊಸ ಕೃತಿಗಳು, ಹೊಸ ಪ್ರಕಾಶನಗಳು ಹಾಗೂ ಜನಪ್ರಿಯ ಪುಸ್ತಕಗಳು ಈ ಮೇಳದ ಆಕರ್ಷಣೆಯಾಗಿದೆ. ಶೇ.10 ರಿಂದ ಶೇ.50ರ ವರೆಗೆರಿಯಾಯಿತಿಸಿಗಲಿದೆ. ಈ ವಿಶೇಷ ಮೇಳವು ನ.1 ರಿಂದ ನ.9 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ ಸಮಯ 9 ರಿಂದ ಸಂಜೆ ಸಮಯ 9ರ ವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಎಲ್ಲಾ ಪುಸ್ತಕ ಪ್ರೇಮಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಾಶಕರು ಕೋರಿದ್ದಾರೆ. ಕನ್ನಡದ ನಾಡು…
ವಿರಾಜಪೇಟೆ ಅ.29 NEWS DESK : ವಿದ್ಯಾ ಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಮೂಡಿದಾಗ ಮಾತ್ರ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಎಕೋಸ್ ಆಫ್ ದಿ ಅರ್ಥ್ ದ್ಯೇಯದಡಿಯಲ್ಲಿ ಆನ್ಸ್ ಫೆಸ್ಟ್ 2k25 ನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾ ಸಂಸ್ಥೆಗಳು ಕಾರ್ಯಕ್ರಮವನ್ನು ಆಯೋಜಿಸಿ ಮತ್ತೊಂದು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳನ್ನು ಪರಸ್ಪರ ಆಹ್ವಾನಿಸಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಸಂಸ್ಥೆಗಳ ನಡುವೆ ಪರಸ್ಪರ ಸಹಕಾರ, ಬಾಂಧವ್ಯ ಬೆಳೆಯುತ್ತದೆ ಎಂದರು. ಇಂದಿನ ಶಿಕ್ಷಣವು ವಿದ್ಯಾರ್ಥಿ ಕೇಂದ್ರೀತವಾಗಿದ್ದು, ನಮ್ಮ ವಿದ್ಯಾ ಸಂಸ್ಥೆಯು ಮೌಲ್ಯಧಾರಿತ ಶಿಕ್ಷಣಕ್ಕೆ ಮನ್ನಣೆಯನ್ನು ನೀಡುತ್ತಿದೆ ಎಂದರು. ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ …
ಪೊನ್ನಂಪೇಟೆ ಅ.29 NEWS DESK : ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಮಾತ್ರ ಸೀಮಿತವಾಗಿ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯನ್ನು (ಕೆ.ಎಂ.ಎಸ್. ಎ.) ನೂತನವಾಗಿ ಅಸ್ತಿತ್ವಕ್ಕೆ ತರಲಾಗಿದೆ. ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷರಾಗಿರುವ ಆಲೀರ ರಶೀದ್ ಅವರು ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಸ್ಥಾಪನೆ ಕುರಿತು ವಿರಾಜಪೇಟೆಯಲ್ಲಿ ನಡೆದ ರಚನಾ ಸಭೆಯಲ್ಲಿ ಈ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಗಳಾಗಿ ಹಿರಿಯ ಕ್ರೀಡಾಪಟು ಕೊಟ್ಟೋಳಿ ಗ್ರಾಮದ ಮೀತಲತಂಡ ಎಂ.ಇಸ್ಮಾಯಿಲ್ ಮತ್ತು ಕೋಶಾಧಿಕಾರಿಗಳಾಗಿ ಕಾಟ್ರಕೊಲ್ಲಿಯ ಆಲೀರ ಎ.ಅಬ್ದುಲ್ ಅಜ್ಹೀಜ್ಹ್ ಅವರನ್ನು ಸಭೆ ಅವಿರೋಧವಾಗಿ ಆಯ್ಕೆಗೊಳಿಸಿತು. ಉಳಿದಂತೆ ಅಕಾಡೆಮಿಯ ಉಪಾಧ್ಯಕ್ಷರುಗಳಾಗಿ ವಿರಾಜಪೇಟೆಯ ಕೇಂಗೋಟಂಡ ಎಸ್. ಸೂಫಿ, ಕುಂಜಿಲದ ಕುಂಡಂಡ ಎ. ರಜ್ಹಾಕ್, ಜಂಟಿ ಕಾರ್ಯದರ್ಶಿಗಳಾಗಿ ಕೊಳಕೇರಿಯ ಕಣ್ಣಪ್ಪಣೆ ವೈ.ಅಶ್ರಫ್ ಹಾಗೂ ಕ್ರೀಡಾ ಸಂಚಾಲಕರಾಗಿ ಕೊಂಡಂಗೇರಿಯ ಕತ್ತಣಿರ ಹೆಚ್. ಅಬ್ದುಲ್ ರಹಿಮಾನ್ (ಅಂದಾಯಿ) ಅವರು ಅವಿರೋಧವಾಗಿ ನೇಮಕಗೊಂಡಿದ್ದಾರೆ. ಅಕಾಡೆಮಿಯ ನಿರ್ದೇಶಕರುಗಳಾಗಿ ಎಡಪಾಲದ…
ವಿರಾಜಪೇಟೆ ಅ.29 NEWS DESK : ವಿದ್ಯಾ ಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಮೂಡಿದಾಗ ಮಾತ್ರ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಎಕೋಸ್ ಆಫ್ ದಿ ಅರ್ಥ್ ದ್ಯೇಯದಡಿಯಲ್ಲಿ ಆನ್ಸ್ ಫೆಸ್ಟ್ 2k25 ನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾ ಸಂಸ್ಥೆಗಳು ಕಾರ್ಯಕ್ರಮವನ್ನು ಆಯೋಜಿಸಿ ಮತ್ತೊಂದು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳನ್ನು ಪರಸ್ಪರ ಆಹ್ವಾನಿಸಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಸಂಸ್ಥೆಗಳ ನಡುವೆ ಪರಸ್ಪರ ಸಹಕಾರ, ಬಾಂಧವ್ಯ ಬೆಳೆಯುತ್ತದೆ ಎಂದರು. ಇಂದಿನ ಶಿಕ್ಷಣವು ವಿದ್ಯಾರ್ಥಿ ಕೇಂದ್ರೀತವಾಗಿದ್ದು, ನಮ್ಮ ವಿದ್ಯಾ ಸಂಸ್ಥೆಯು ಮೌಲ್ಯಧಾರಿತ ಶಿಕ್ಷಣಕ್ಕೆ ಮನ್ನಣೆಯನ್ನು ನೀಡುತ್ತಿದೆ ಎಂದರು. ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ …
ಮಡಿಕೇರಿ ಅ.29 NEWS DESK : ಪೊನ್ನಂಪೇಟೆ ತಾಲ್ಲೂಕಿನಲ್ಲಿ ಆಯೋಜಿಸಿದ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿದರು. ತಾಲ್ಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು, ಸಮಿತಿಯ ಸದಸ್ಯರೊಂದಿಗೆ ಹಲವು ವಿಷಯಗಳ ಕುರಿತು ಚರ್ಚಿಸಿದರು. ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜವಾಬ್ದಾರಿಗಳನ್ನು ಹಾಗೂ ನಿಭಾಯಿಸಬೇಕಾದ ಕಾರ್ಯಕ್ರಮಗಳನ್ನು ಮತ್ತು ರೂಪಿಸಬೇಕಾದ ವಿಷಯಗಳ ಬಗ್ಗೆ ವಿಶೇಷ ಮಾಹಿತಿಯನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವೈಸ್ ಚೇರ್ ಪರ್ಸನ್ ಬಾಲಚಂದ್ರ ನಾಯರ್ ಹಾಗೂ ಸಮಿತಿಯ ಪದಾಧಿಕಾರಿಗಳದ ಕೊಲ್ಲಿರ ಬೋಪಣ್ಣ, ಅಣ್ಣೀರ ಹರೀಶ್, ಪಂದಿಕಂಡ ದಿನೇಶ್ ಕುಶ, ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿವಿಧ ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳು, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಅಂಬಾಲಾ ಅ.29 NEWS DESK : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು. 2023 ರಲ್ಲಿ, ರಾಷ್ಟ್ರಪತಿ ಮುರ್ಮು ಅವರು ಅಸ್ಸಾಂನ ತೇಜ್ಪುರ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30MKI ಫೈಟರ್ ಜೆಟ್ನಲ್ಲಿ ಹಾರಾಟ ನಡೆಸಿದ್ದರು. ಬ್ರಹ್ಮಪುತ್ರ ನದಿ ಮತ್ತು ತೇಜ್ಪುರ ಕಣಿವೆಯ ಮೇಲೆ ಹಾರಾಟ ನಡೆಸಿದ್ದರು, ನಂತರ ಸುರಕ್ಷಿತವಾಗಿ ನೆಲೆಗೆ ಮರಳಿದ್ದರು. ಈ ಬಾರಿ ಅಂಬಾಲಾ ವಾಯುನೆಲೆಯ ಸುತ್ತಲೂ ಅವರು ಹಾರಾಟ ನಡೆಸಲಿದ್ದಾರೆ. ಅವರು ಫೈಟರ್ ಪ್ಲೇಟ್ ಸೂಟ್ ಧರಿಸಿ ವಿಮಾನದಲ್ಲಿ ಕುಳಿತಿದ್ದು ಎಲ್ಲರ ಗಮನ ಸೆಳೆದಿತ್ತು.
ಮಡಿಕೇರಿ ಅ.29 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ವಿವಿಧ ಮಾಧ್ಯಮ ಸಂಸ್ಥೆಗಳು ದತ್ತಿನಿದಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದು, ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಅಭಿಮಾನಿ ಪ್ರಶಸ್ತಿʼ, ಮೈಸೂರಿನ ʼಮೈಸೂರು ದಿಗಂತʼ ಪತ್ರಿಕಾ ಸಂಸ್ಥೆಯು ʼ‘ಮಾನವೀಯ ಸಮಸ್ಯೆʼಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಮೈಸೂರು ದಿಗಂತ ಪ್ರಶಸ್ತಿʼ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ʼಅಭಿಮನ್ಯು ಪ್ರಶಸ್ತಿʼ, ಬೆಂಗಳೂರಿನ ʼಪ್ರಜಾ ಸಂದೇಶʼ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ʼಪ್ರಜಾ ಸಂದೇಶ ದತ್ತಿ ಪ್ರಶಸ್ತಿʼಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ 10,000/- (ಹತ್ತು ಸಾವಿರ) ರೂ .ನಗದು ಬಹುಮಾನ ಒಳಗೊಂಡಿವೆ. ಆಸಕ್ತ ಪತ್ರಕರ್ತರು 2025ರ ಜನವರಿ 1 ರಿಂದ 2025ರ ಅಕ್ಟೋಬರ್…
ಬೆಂಗಳೂರು ಅ.29 NEWS DESK : ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸುವ, “ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ, 2003 ಅಡಿಯಲ್ಲಿ ಏಪ್ರಿಲ್ ನಿಂದ ಸೆಪ್ಟೆಂಬರ್-2025 ತಿಂಗಳವರೆಗೆ ಸುಮಾರು 1,82,000 ಜನರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ದಂಡ ವಿಧಿಸಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ. ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಶಾಲಾ/ಕಾಲೇಜುಗಳಲ್ಲಿ 100 ಮೀ. ವ್ಯಾಪ್ತಿಯಲ್ಲಿ 2470 ಜನರು ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿದವರಿಗೆÉ ದಂಡ ವಿಧಿಸಲಾಗಿದೆ. ಇದರಿಂದಾಗಿ ರೂ. 45 ಲಕ್ಷ ಪ್ರತಿ ವರ್ಷ ದಂಡ ಸಂಗ್ರಹವಾಗುತ್ತಿದೆ. ಈ ಪೈಕಿ, 21 ವರ್ಷದೊಳಗಿನ ಯುವಜನರ ದತ್ತಾಂಶವನ್ನು ನೀಡಲು ಆರೋಗ್ಯ ಇಲಾಖೆಗೆ ಸೂಚಿಸಿದರು.…






