ಲೇಖಕ: admin

ಸೋಮವಾರಪೇಟೆ NEWS DESK ಆ.19 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕೃಷ್ಣಪ್ರಸಾದ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ ಸತೀಶರವರ ವರ್ಗಾವಣೆಯಿಂದ ಒಂದು ತಿಂಗಳು ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಪ್ರಸಾದ್ ರವರನ್ನ ನೇಮಿಸಲಾಗಿದೆ.ಈ ಹಿಂದೆ ಇವರು ವಿರಾಜಪೇಟೆ ಹಾಗೂ ಕುಶಾಲನರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Read More

ಮಡಿಕೇರಿ NEWS DESK ಆ.19 : ಸೋಮವಾರಪೇಟೆ ತಾಲ್ಲೂಕಿನ ಪುಷ್ಪಗಿರಿ ಹೈಡೆಲ್ ವಿದ್ಯುತ್ ಉತ್ಪಾದನಾ ಘಟಕದ ನೀರಿಗೆ ಬಿದ್ದಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಹಣಕೋಡು ಗ್ರಾಮದ ಚಿದಾನಂದ (27) ಎಂಬುವವರೇ ಮೃತ ವ್ಯಕ್ತಿ. ಭಾನುವಾರ ರಾತ್ರಿ ಚಿದಾನಂದ ತಾನು ಕೆಲಸ ಮಾಡುತ್ತಿದ್ದ ವಿದ್ಯುತ್ ಉತ್ಪಾದನಾ ಘಟಕದಲ್ಲಿಯೇ ನೀರಿಗೆ ಬಿದ್ದಿದ್ದರು ಎಂದು ಹೇಳಲಾಗಿದೆ. ಸೋಮವಾರ ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಜಲಾಶಯದಲ್ಲಿ ಹುಡುಕಾಟ ನಡೆಸಿದರೂ ಸುಳಿವು ದೊರೆತ್ತಿರಲಿಲ್ಲ. ಮಂಗಳವಾರ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ಮರದ ಬುಡಕ್ಕೆ ಮೃತದೇಹ ಸಿಲುಕಿಕೊಂಡಿರುವುದು ಗೋಚರಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

*ಪೊಲೀಸರ ಮನೆಯಲ್ಲೇ ಕಳ್ಳತನ : ದೇಶದ ವಿವಿಧೆಡೆ ಅಪರಾಧ ಕೃತ್ಯವೆಸಗಿದ್ದ ಆರೋಪಿಗಳ ಬಂಧನ : 500 ಸಿಸಿ ಕ್ಯಾಮರಾ ಪರಿಶೀಲನೆ* ಮಡಿಕೇರಿ NEWS DESK ಆ.19 : ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಅಪರಾಧ ಕೃತ್ಯಗಳನ್ನು ನಡೆಸಿ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗು ಜಿಲ್ಲೆಯ ಕೇಂದ್ರ‍್ರ ಸ್ಥಾನ ಮಡಿಕೇರಿಯಲ್ಲಿ ಪೊಲೀಸ್ ವಸತಿ ಗೃಹದಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣದ ತನಿಖೆೆ ಕೈಗೊಂಡ ಪೊಲೀಸರಿಗೆ ಇಬ್ಬರು ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಕಳೆದ ಎರಡು ತಿಂಗಳಿನಿಂದ ನೂರಕ್ಕೂ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಮ್ಮ ಕಛೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶದ ಧಾರ್ ಜಿಲ್ಲೆಯ ನಾರ್ವಲ್ಲಿ ಗ್ರಾಮದ ಸುರೇಶ್ ಸೆಂಗಾರ್(23) ಹಾಗೂ ಮಾಲ್‌ಪುರ ಗ್ರಾಮದ ಮನೀಶ್ ಭಗೇಲ್ (27) ಎಂದು ಗುರುತಿಸಲಾಗಿದೆ. ಸುರೇಶ್ ವಿರುದ್ಧ…

Read More

ಮಡಿಕೇರಿ ಆ.19 NEWS DESK : ಕಾಡಾನೆ ದಾಳಿಯಿಂದ ಮಹಿಳೆ ಪಾರಾದ ಘಟನೆ ಬಾಣವಾರ ಸಮೀಪದ ಭುವಂಗಾಲ ಗ್ರಾಮದಲ್ಲಿ ನಡೆದಿದೆ. ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಲು ಮುಂದಾಗಿದ್ದು, ಮಹಿಳೆ ಕಿರುಚುತ ಸಮೀಪದ ಮನೆಗೆ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭುವಂಗಾಲ ಗ್ರಾಮದಲ್ಲಿ ಕಳೆದ 15ದಿನಗಳಿಂದ ಬಾಣವಾರ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಬರುವ ಕಾಡಾನೆಗಳು ಸಿದ್ದಲಿಂಗಪುರ, ಬಾಣವಾರ, ಭುವಂಗಾಲ ವ್ಯಾಪ್ತಿಯ ಪೋಲಿಸ್ ಪೆದೆ ವಿವೇಕ್  ಸೇರಿದಂತೆ ರೈತರ ಜಮೀನಿಗೆ ದಾಳಿ ಮಾಡಿ ತೆಂಗು, ಸಿಹಿ ಗೆಣಸು, ಮರ ಗೆಣಸು ಸೇರಿದಂತೆ ಇತರೆ ಬೆಳೆಗಳನ್ನು ತಿಂದು ತುಳಿದು ಅಪಾರ ಪ್ರಮಾಣದಲ್ಲಿ ಬೆಳೆಗಳನ್ನು ನಷ್ಟ ಪಡಿಸಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಕಾಡಾನೆ ಹಗಲು ವೇಳೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಸಾರ್ವಜನಿಕರು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಕಾಡಾನೆಯನ್ನು ತಕ್ಷಣವೆ ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

Read More

ಮಡಿಕೇರಿ ಆ.19 NEWS DESK : ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುಂಚಿತವಾಗಿ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮೊದಲು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸುವಂತೆ ನಗರಸಭೆ ಪೌರಾಯುಕ್ತರಾದ ಹೆಚ್.ಆರ್.ರಮೇಶ್ ಅವರು ಕೋರಿದ್ದಾರೆ. ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ಹಾಗೂ ಬಣ್ಣ ಲೇಪಿತವಲ್ಲದ ವಿಗ್ರಹಗಳನ್ನು ಬಳಸುವುದು. ಗಣಪತಿ ವಿಗ್ರಹಗಳ ವಿಸರ್ಜನೆಗೆ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಗೌರಿ ಕೆರೆಯನ್ನು ಗುರುತಿಸಿ, ಅವಶ್ಯ ವ್ಯವಸ್ಥೆಗಳನ್ನು ಮಾಡಿದ್ದು, ಈ ಸ್ಥಳದಲ್ಲೆ ವಿಗ್ರಹಗಳನ್ನು ಹೂವು ಹಣ್ಣುಗಳನ್ನು ಪ್ರತ್ಯೇಕಿಸಿ ವಿಸರ್ಜಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ವಿಗ್ರಹ ಪ್ರ್ರತಿಷ್ಠಾಪಿಸಿ ಪೂಜೆ ನಡೆಸಲು ಇಚ್ಚಿಸುವವರು…

Read More

ಮಡಿಕೇರಿ ಆ.19 NEWS DESK : ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಅರಿವು ಕಾರ್ಯಕ್ರಮವು ನೆರವೇರಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಮಾತನಾಡಿ, ಇಲಾಖೆಯ ಯೋಜನೆಗಳ ಬಗ್ಗೆ, ಬಾಲ್ಯ ವಿವಾಹದ ಕುರಿತು, ಸ್ತನ್ಯಪಾನ ಸಪ್ತಾಹ, ಪೋಷಣ್ ಟ್ರ್ಯಾಕರ್, ಪೋಷಣ್ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯವರೊಂದಿಗೆ ಸೇರಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಲಹೆ ಮಾರ್ಗದರ್ಶನ ನೀಡುವುದಲ್ಲದೆ, ಕಾಲಕಾಲಕ್ಕೆ ನೀಡಿದ ಸಲಹೆಗಳನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದರು. ಭಾಗ್ಯಲಕ್ಷ್ಮಿ ಮತ್ತು ಮಾತೃವಂದನ ಫಲಾನುಭವಿಗಳನ್ನು ಭೇಟಿ ಮಾಡಿ ಹಣ ಪಾವತಿ ಯಾಗಿರುವ ಬಗ್ಗೆ ಮಾಹಿತಿ ಪಡೆದರು. ಸಮುದಾಯ ಆರೋಗ್ಯ ಅಧಿಕಾರಿ ಕಲ್ಮೇಶ್ ಅವರು ಮಾತನಾಡಿ, ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. “ಹೊಸ ಹೆಜ್ಜೆ “ಕಾರ್ಯಕ್ರಮದಡಿ ವಿವಾಹಿತರು ತಾವು ಯಾವಾಗ ಪೋಷಕರಾಗಬೇಕು ಎಂಬುದನ್ನು ಅರಿತು ಮಾನಸಿಕವಾಗಿ ಸದೃಢರಾದಾಗ…

Read More

ಮೈಸೂರು ಆ.19 NEWS DESK : ದಶಕಗಳ ಕಾಲದಿಂದಲೂ ಕಾರ್ಯ ನಿರ್ವಹಿಸುತ್ತಿರುವ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ನಿಯಮಿತದ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಕಲ್ಪ ತೊಟ್ಟಿದ್ದಾರೆ. ಕೊಡಗು ಕಾಫಿ ಸಹಕಾರ ಸಂಘ ಈಗ ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಮಧ್ಯ ಪ್ರವೇಶಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಯದುವೀರ್‌ ಒಡೆಯರ್‌ ಮನವಿ ಮಾಡಿದ್ದಾರೆ. ಈ ಸಂಬಂಧ ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿದ ಸಂಸದ ಯದುವೀರ್‌, ಮನವಿ ಸಲ್ಲಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ. ಈ ಕುರಿತು ಸಂಸದರು ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ದಶಕಗಳ ಹಿಂದೆ ಸ್ಥಾಪನೆಯಾದ ಸಂಸ್ಥೆ 1956 ರಲ್ಲಿ ಸ್ಥಾಪನೆಯಾದ ಕಾಫಿ ಸಹಕಾರ ಸಂಘವು, ಕೊಡಗು, ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 10,000–12,000 ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕಾಫಿ…

Read More

ಮಡಿಕೇರಿ ಆ.19 NEWS DESK : ಅಂಗನವಾಡಿ, ಶಾಲೆ ಹಾಗೂ ಕಾಲೇಜು ವ್ಯಾಪ್ತಿಯಲ್ಲಿ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ವಿಡಿಯೊ ಸಂವಾದ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ಇನ್ನೂ 10-12 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬಿರುಗಾಳಿ ಸಹ ಇರಲಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ನಿರ್ದೇಶನ ನೀಡಿದರು. ಹಳೆ ಮರಗಳನ್ನು ತೆರವುಗೊಳಿಸಲು ಜಿ.ಪಂ.ಸಿಇಒ ಅವರ ಮೂಲಕ ಅರಣ್ಯ ಇಲಾಖೆಗೆ ಪತ್ರ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಗುಂಡಿಮಯವಾಗಿದ್ದು, ಮಳೆ ಮುಗಿದ ನಂತರ ರಾಜ್ಯ, ಜಿಲ್ಲಾ ಹಾಗೂ ಗ್ರಾಮೀಣ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯವಾಗಬೇಕಿದೆ. ಆ ನಿಟ್ಟಿನಲ್ಲಿ ಎಂಜಿನಿಯರ್‍ಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ನಗರ, ಪಟ್ಟಣ ಪ್ರದೇಶದಲ್ಲಿಯೂ ರಸ್ತೆಗಳು…

Read More

ಕುಶಾಲನಗರ ಆ.19 NEWS DESK : ಮೊಬೈಲ್ ಫೋಟೋಗ್ರ್ರಾಫಿ ಪರಿಣಾಮ ವೃತ್ತಿ ಪರ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಗಳ ಜೀವನ ದುಸ್ತರವಾಗಿದ್ದು, ಭವಿಷ್ಯದ ದಿನಗಳ ಚಿಂತೆ ಇವರನ್ನು ಕಾಡುತ್ತಿದೆ ಎಂದು ಕೊಡಗು ಜಿಲ್ಲಾ ಛಾಯಾಗ್ರಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕುಶಾಲನಗರದ ಗೌಡ ಸಮಾಜದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಛಾಯಾಗ್ರಾಹಕರು ಒಂದೇ ನಾಣ್ಯದ ಎರಡು ಮುಖ ವೆಂದು ಬಣ್ಣಿಸಿದ ಅವರು, ಈ ಇಬ್ಬರ ಸಂಬಂಧ ಬಿಡಿಸಲಾಗದ ಅನುಬಂಧ ಎಂದು ಆವರು ಬಣ್ಣಿಸಿದರು. ತಮ್ಮ ಛಾಯಾಗ್ರಾಹಕ ವೃತ್ತಿ ಜೀವನದ ಅನುಭವವನ್ನು ವಿವರಿಸಿದ ಅವರು ನಮ್ಮ ಜೀವನದಲ್ಲಿ ಮಾನವೀಯತೆ ಗುಣಗಳನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಿಕೊಡಬೇಕೆಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ ಪತ್ರಕರ್ತರಷ್ಟೇ ಜವಾಬ್ದಾರಿ ಛಾಯಾಚಿತ್ರ ಗಾಹಕರಿಗಿದೆ.…

Read More

ಮಡಿಕೇರಿ ಆ.19 NEWS DESK :  “ವಾಯ್ಸ್ ಆಫ್ ಕೊಡವ- (ವಿಒಕೆ)” ಮತ್ತು ಯುನೈಟೆಡ್ ಕೊಡವ ಆರ್ಗನೈಜೇಷನ್ (ಯುಕೊ) ಸಹಯೋಗದಲ್ಲಿ ” ನೆಪ್ಪುರ ನಳತ್ ಮಾಂಜತ ಮೊಟ್ಟ್”  ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ದಕ್ಷಿಣ ಕೊಡಗಿನ ಪೊನ್ನಂಪೇಟೆ ಸಮೀಪದ ಕೇವ್ ಇನ್ ಸಭಾಂಗಣದಲ್ಲಿ ಆಯೋಜಿತ ಕಾರ್ಯಕ್ರಮವನ್ನು ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ ಹಾಗೂ ಸ್ವಾತಂತ್ರ್ಯ ಹೋರಾಟಗಾರ್ತಿ ಪಂದ್ಯಂಡ ಸೀತಮ್ಮ ಬೆಳ್ಯಪ್ಪ ಅವರ ಪುತ್ರಿ ಬುಟ್ಟಿಯಂಡ ಕುಸುಮ್ ಅಯ್ಯಪ್ಪ ಉದ್ಘಾಟಿಸಿದರು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ನಾಡಿನ ಹಿರಿಯರ ತ್ಯಾಗ ಬಲಿದಾನಗಳನ್ನು ನೆನಪಿಸುವ, ಇತಿಹಾಸದ ಮಹತ್ವವನ್ನು ಸಾರುವ ಅದ್ಭುತ ಕಾರ್ಯಕ್ರಮ ಇದಾಗಿದೆ. ‘ಇತಿಹಾಸವನ್ನು ಅರಿಯದವರು ಇತಿಹಾಸವನ್ನು ಸೃಷ್ಟಿಸಲಾರ’ ಈ ನಿಟ್ಟಿನಲ್ಲಿ ಇಂತಹಾ ಅರ್ಥಪೂರ್ಣ ಹಾಗೂ ಭಾವನಾತ್ಮಕ ಕಾರ್ಯಕ್ರಮ ಆಯೋಜಿಸಿದ ‘ಯುಕೊ’ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದರು, ಯುಕೊ ತನ್ನ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಹೇಳಿದರು.ಅಖಿಲ…

Read More