ಮಡಿಕೇರಿ NEWS DESK ಆ.19 : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ ವತಿಯಿಂದ ಮೂರ್ನಾಡಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್.ಭಾರದ್ವಾಜ್ ಪ್ರಥಮ ಬಹುಮಾನ ಗೆದ್ದಿದ್ದಾಳೆ. 5 ರಿಂದ 6 ವರ್ಷದೊಳಗಿನ ಮಕ್ಕಳ ವಿಭಾಗದ ಸ್ಪರ್ಧೆಯಲ್ಲಿ ಅರ್ಜುನನಿಗೆ ಗೀತೋಪದೇಶ ಮಾಡುವ ಶ್ರೀಕೃಷ್ಣನಾಗಿ ಮಿಂಚಿದ ಸ್ಮೃತಿ ನೆರೆದಿದ್ದವರ ಮೆಚ್ಚುಗೆಗೆ ಪಾತ್ರಳಾಗಿ ಪ್ರಥಮ ಬಹುಮಾನ ಪಡೆದಳು. 5 ವರ್ಷದ ಸ್ಮೃತಿ ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಭಾರದ್ವಾಜ್ ಹಾಗೂ ಆಶಿಕಾ ದಂಪತಿಯ ಪುತ್ರಿ.
ಲೇಖಕ: admin
ನಾಪೋಕ್ಲು ಆ.19 NEWS DESK : ಗ್ರಾಮೀಣ ಮಟ್ಟದಲ್ಲಿ ಹಲವು ಪ್ರತಿಭೆಗಳಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲು ಹಿಂದೂ ಮಲಯಾಳಿ ಸಂಘದ ವತಿಯಿಂದ ಸಮಸ್ತ ಹಿಂದೂ ಬಾಂಧವರಿಗಾಗಿ ಹಳೆ ತಾಲೂಕಿನ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದೆ. ಎಲ್ಲಾ ಸಮಾಜದವರನ್ನು, ಜನಾಂಗದವರನ್ನು ಉಗ್ಗೂಡಿಸುವ ಶಕ್ತಿ ಕ್ರೀಡೆಗಿದೆ. ದೇಶಕ್ಕೆ ದೊಡ್ಡ ಕೊಡುಗೆಯನ್ನು ಜಿಲ್ಲೆಯ ಕ್ರೀಡಾಪಟುಗಳು ನೀಡಿದ್ದಾರೆ ಮತ್ತಷ್ಟು ಕ್ರೀಡಾ ಪ್ರತಿಭೆಗಳನ್ನು ಹೊರ ತರುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾದದ್ದು ಎಂದರು. ನಾಡಿನ ಸಮಸ್ತ ದೇವಾನುದೇವತೆಗಳು ಯುವಕರಿಗೆ,ಮಕ್ಕಳಿಗೆ ಉತ್ತಮ ಭವಿಷ್ಯ ನೀಡಲಿ.ಉತ್ತಮಮಳೆ-ಬೆಳೆಯಾಗಿ ನಾಡು ನಾಡುಸಮೃದ್ದಿಯಿಂದ ಕೂಡಿರಲಿ ಎಂದರು. ಸ್ಥಳೀಯ ಗ್ರಾಮೀಣ ನಿವಾಸಿಗಳು ಶತಮಾನಗಳಿಂದ ಹಗ್ಗಜಗ್ಗಾಟದಂತಹ ಹಲವು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿದ್ದಾರೆ ಇಂತಹ ಕ್ರೀಡೆಗಳು ಗ್ರಾಮೀಣ ಸೊಬಗನ್ನು ಎತ್ತಿ…
ವಿರಾಜಪೇಟೆ ಆ.19 NEWS DESK : ರಾಜ್ಯದಾದ್ಯಂತ ಪ್ರಖ್ಯಾತವಾಗಿರುವ ವಿರಾಜಪೇಟೆಯ ಐತಿಹಾಸಿಕ ಗೌರಿ ಗಣೇಶ ಉತ್ಸವ ಕಾನೂನು ಕಟ್ಟಳೆಗಳನ್ನು ಪಾಲನೆ ಮಾಡುವುದರೊಂದಿಗೆ ಅಹಿತಕರ ಘಟನೆಗಳಿಗೆ ಅನುವು ಮಾಡಿಕೊಡದೆ ಸಾಮರಸ್ಯದ ಹಬ್ಬವಾಗಿ ಆಚರಣೆ ಆಗಲಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದರು. ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ, ವಿರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ಸಮಿತಿ ಸಭೆಯಲ್ಲಿ ಈ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಪೊನ್ನಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ವರ್ಷ ಅದ್ದೂರಿಯಿಂದ ಆಚರಿಸಲ್ಪಡುವ ಶ್ರೀ ಗಣೇಶೋತ್ಸವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಅತೀ ಮುಖ್ಯವಾಗಿ ಪರಿಸರ ಕಾಳಜಿಯೊಂದಿಗೆ ಈ ಗಣೇಶೋತ್ಸವವನ್ನು ಆಚರಿಸುವಂತೆ ಸಲಹೆ ನೀಡಿದ ಶಾಸಕರು, ಪ್ರಕೃತಿಗೆ ಹಾನಿಕಾರವಾದ, ಪ್ರಾಣಿ-ಪಕ್ಷಿಗಳಿಗೆ ಹಾಗೂ ಪರಿಸರಕ್ಕೆ ಮಾರಕವಾಗಬಹುದಾದಂತಹ ಯಾವುದೇ ಬಣ್ಣವಾಗಲಿ, ಪೇಪರ್ ವಸ್ತುಗಳನ್ನಾಗಲಿ ಬಳಸದೇ ಗಣೇಶೋತ್ಸವವನ್ನು ಆಚರಿಸೋಣ ಎಂದರು. ನಾಡಿನ ಪರಂಪರೆ, ಸಂಸ್ಕೃತಿ ಹಾಗೂ ಕಲೆಯನ್ನು ಪೆÇ್ರೀತ್ಸಾಹಿಸುವಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವ…
ಮಡಿಕೇರಿ NEWS DESK ಆ.19 : ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಕೇವಲ ಪ್ರಚಾರಕ್ಕಾಗಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಘಟಕದ ರಾಜ್ಯ ಕಾರ್ಯದರ್ಶಿ ಎಂ.ಈ.ಅಶ್ರಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಿಂದ ಹತಾಶಗೊಂಡಿರುವ ಜೆಡಿಎಸ್ ಪಕ್ಷದ ಮುಖಂಡರೆನಿಸಿಕೊಂಡಿರುವ ಕೆಲವರು ರಾಜಕೀಯ ನಿರುದ್ಯೋಗದಿಂದ ಹೊರ ಬರಲು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರ ಕಾರ್ಯವೈಖರಿಯನ್ನು ಮೆಚ್ಚಿ ಜೆಡಿಎಸ್ ನ ಅನೇಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಮತ್ತು ಶಾಸಕರುಗಳಿಗೆ ಬೆಂಬಲ ಸೂಚಿಸುತ್ತಿದ್ದಾರೆ. ಮತ್ತಷ್ಟು ಮಂದಿ ಕಾಂಗ್ರೆಸ್ ಗೆ ಬರಲು ಕಾಯುತ್ತಿದ್ದಾರೆ. ಇದನ್ನು ಸಹಿಸದ ಜೆಡಿಎಸ್ ನ ಅಲ್ಪಸಂಖ್ಯಾತರ ಘಟಕ ಜನರ ಹಾದಿ ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದೆ. ಅಲ್ಪಸಂಖ್ಯಾತರ ಹಿತ ಕಾಯುವಲ್ಲಿ ಕಾಂಗ್ರೆಸ್ ಪಕ್ಷ ಮುಂಚೂಣಿಯಲ್ಲಿದೆ. ಜಿಲ್ಲೆಯ…
ಮಡಿಕೇರಿ ಆ.19 NEWS DESK : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಒಳಚರಂಡಿ ಅಭಿವೃದ್ಧಿ ನಿಗಮ ಹಾಗೂ ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಉದ್ಘಾಟಿಸಿ ಮಾತನಾಡಿ, ಸ್ಪರ್ಧಾತ್ಮಕ ಪ್ರಪಂಚದಲ್ಲಿ ದಿನನಿತ್ಯ ಹಲವರು ಪ್ರತಿಭೆಗಳು ಹೊರ ಹೊಮ್ಮುತ್ತಿದ್ದಾರೆ, ಈ ಕಲೆಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ಡಾ.ಹೆಚ್.ಎಂ.ರಘು ಕೋಟಿ ವಹಿಸಿ ಮಾತನಾಡಿ, ತಮ್ಮ ಪ್ರತಿಭೆ ಹೊರ ಹೊಮ್ಮಲು ಯಾವುದೇ ಪದವಿಗಳ ಅವಶ್ಯಕತೆ ಇಲ್ಲ ಅದು ಸುಪ್ತ ಮನಸ್ಸಿನಿಂದ ಹೊರ ಹೊಮ್ಮಿ ಜಗತ್ತಿಗೆ ಅನಾವರಣಗೊಳ್ಳುತ್ತದೆ. ತಮಗೊಲಿದ ಕಲೆಯನ್ನು ನಿಷ್ಠೆಯಿಂದ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಘು ಕೋಟಿ ಹೇಳಿದರು. ಹಿರಿಯ ಸಾಹಿತಿ ಭಾರದ್ವಾಜ್.ಕೆ. ಅನಂತ ತೀರ್ಥ ಅವರು ಸಾಹಿತ್ಯದ ನುಡಿಗಳನ್ನು ನುಡಿದರು, ಕಾವ್ಯ ಕವಿತೆಯಲ್ಲಿ ಆಸಕ್ತಿ ಇರುವವರು…
ವಿರಾಜಪೇಟೆ ಆ.19 NEWS DESK : ಶ್ರೀ ಕೃಷ್ಣ ಜನ್ಮಾಷ್ಠಮಿಯು ನಮ್ಮ ಇತಿಹಾಸ ಮತ್ತು ಸಂಸ್ಕøತಿಯಲ್ಲಿ ಬಹಳ ಮಹತ್ವತೆಯನ್ನು ಪಡೆದಿದೆ ಎಂದು ಶಿಕ್ಷಕರಾದ ವಿ.ಟಿ. ವೆಂಕಟೇಶ್ ಹೇಳಿದರು. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬಾಲಾಂಜನೇಯ ದೇವಾಸ್ಥಾನದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿ ವರ್ಷ ಇಡೀ ಜಗತ್ತು ಕೃಷ್ಟ ಜನ್ಮಾಷ್ಟಮಿ ಆಚರಿಸುತ್ತದೆ. ಮನೆ ಹಿರಿಯರನ್ನೂ ಮಕ್ಕಳೊಂದಿಗೆ ಮಕ್ಕಳಂತೆ ಸಂತೋಷ ಪಟ್ಟುಕ್ಕೊಳ್ಳಲು ಉತ್ತಮ ಅವಕಾಶವಾಗಿದೆ. ಮಕ್ಕಳಿಗೆ ಶಾಲೆಯ ವಿಷಯಗಳಿಂದ ಭಿನ್ನವಾಗಿ ತಮ್ಮನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವ ಕಾರ್ಯಕ್ರಮ ಎಂದರು. ಸಾಹಿತಿಗಳು, ವಿರಾಜಪೇಟೆ ತಾಲೂಕು ಕದಳಿ ವೇದಿಕೆ ಅಧ್ಯಕ್ಷೆ ರಜಿತ ಕಾರ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ರಾಮಾಯಣ ಮಹಾಭಾರತದಂತಹ ಕಾವ್ಯಗಳನ್ನು ಹೆಚ್ಚು ಹೆಚ್ಚಾಗಿ ಓದಿ ಅದರಲ್ಲಿರುವ ತತ್ವಸಾರವನ್ನು ತಿಳಿದು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ವಿಚಾರಗಳು ಪ್ರಸ್ತುತ ಕೃಷ್ಣನ ಬದುಕಿನ ಕಥೆಗಳು ನಮ್ಮ ಜೀವನಕ್ಕೂ ಪ್ರೇರಣೆಯಾಗಲಿದೆ. ಇದರ ಸಾರವನ್ನು…
ನಾಪೋಕ್ಲು ಆ.19 NEWS DESK : ಗ್ರಾಮೀಣ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಿಗುವ ಶಿಕ್ಷಣ ಪ್ರಮುಖವಾದದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭಗೊಂಡ ಎಲ್. ಕೆ. ಜಿ ಹಾಗೂ ಯು. ಕೆ. ಜಿ. ತರಗತಿ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಣದ ಭಧ್ರ ಅಡಿಪಾಯವನ್ನು ಹಾಕಬೇಕಿದೆ.ಅದು ಅಂಗನವಾಡಿ ಕೇಂದ್ರಗಳ ಮುಖಾಂತರ ಆಗಬೇಕಿದ್ದು, ಎಳೆಯ ವಯಸ್ಸಿನಿಂದಲೇ ಮಕ್ಕಳು ಶಿಸ್ತನ್ನು ಕಲಿಯಬೇಕು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ತರಬೇತಿ ನೀಡಬೇಕು. ಆ ಮೂಲಕ ಶಿಸ್ತುಬದ್ಧ ಬದುಕನ್ನು ರೂಪಿಸುವಂತಾಗಬೇಕು ಎಂದರು. ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವುದು, ಸರ್ಕಾರದ ಆಶಯ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ,ಯುಕೆಜಿ ಅನ್ನು ಪ್ರಾರಂಭಿಸಲಾಗುವುದು .ವಿರಾಜಪೇಟೆ ತಾಲೂಕಿನ ಕೆಲವೆಡೆ ಎಲ್ ಕೆಜಿ,ಯುಕೆಜಿ ಅನ್ನು ಈಗಾಗಲೇ ಆರಂಭಿಸಲಾಗಿದೆ ಮಡಿಕೇರಿ ತಾಲೂಕಿನ ನಾಪೋಕ್ಲುವಿನಲ್ಲಿ ಇದೀಗ…
ಮಡಿಕೇರಿ NEWS DESK ಆ.18 : ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ, ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆ.19 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಮಡಿಕೇರಿ ತಾಲ್ಲೂಕು ಮತ್ತು ದಕ್ಷಿಣ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲಾ ವ್ಯಾಪಿ ಮೈಕೊರೆಯುವ ಚಳಿ ಇದೆ. ಮಂಜು ಕವಿದ ವಾತಾವರಣದಿಂದ ತಿರುವಿನ ರಸ್ತೆಗಳಲ್ಲಿ ವಾಹನ ಚಾಲನೆ ಕಷ್ಟವಾಗುತ್ತಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಕೆಎಸ್ಆರ್ಟಿಸಿ ಬಸ್ ವೊಂದು ಬರೆಗೆ ಗುದ್ದಿದ ಘಟನೆ ಮುಟ್ಲು ಗ್ರಾಮದಲ್ಲಿ ನಡೆದಿದೆ. ಮರಳು ತುಂಬಿದ ಲಾರಿಯೊಂದು ಮಗುಚಿದ ಘಟನೆ ಮಡಿಕೇರಿ ಸಮೀಪ ಕೂಟುಹೊಳೆ ರಸ್ತೆಯಲ್ಲಿ ನಡೆದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಕತ್ತಲೆಕಾಡು ಗ್ರಾಮದಲ್ಲಿ ಮತ್ತು ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ತ್ಯಾಗತ್ತೂರು ಚೆಟ್ಟಳ್ಳಿ ರಸ್ತೆಯಲ್ಲಿ ಬೃಹತ್ ಮರಗಳು ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.…
ಮಡಿಕೇರಿ NEWS DESK ಆ.18 : ನಗರದ ತಾಳತ್ತಮನೆ ನಿವಾಸಿಯಾದ ರಾಬಿನ್ ಕೆ. ಜೆ ಅವರು ಸಂತ ಫಿಲೋಮಿನಾ ಕಾಲೇಜು (ಸ್ವಾಯುತ್ತ) ಮೈಸೂರಿನ ಸಹ ಪ್ರಾಧ್ಯಾಪಕರಾದ ಡಾ. ನೂರ್ ಮುಬಾಶಿರ್ ಅವರ ಮಾರ್ಗದರ್ಶನದಲ್ಲಿ “A Study on Suicide Ideation Among Adolescent Students of Kodagu District” (ಕೊಡಗು ಜಿಲ್ಲೆಯ ಹದಿಹರೆಯದ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆಯ ಆಲೋಚನೆಗಳ ಕುರಿತು ಅಧ್ಯಯನ) ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಆಂಗ್ಲ ಭಾಷೆಯಲ್ಲಿ ಮಹಾಪ್ರಬಂಧವನ್ನು ಸಮಾಜ ಕಾರ್ಯ ವಿಷಯದಲ್ಲಿ ಪಿಹೆಚ್.ಡಿ ಪದವಿಗಾಗಿ ಮೈಸೂರು ವಿಶ್ವವಿದ್ಯಾನಿಲಯದ ಪಿಹೆಚ್.ಡಿ ನಿಯಮಾವಳಿಯಡಿಯಲ್ಲಿ ಅಂಗಿಕರಿಸಲಾಗಿದೆ. ಇವರು ಸಂತ ಫಿಲೋಮಿನಾ ಕಾಲೇಜು (ಸ್ವಾಯುತ್ತ), ಮೈಸೂರು ಇಲ್ಲಿ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ, ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ದಿವಂಗತ. ಕೆ. ಎಂ. ಜೇಮ್ಸ್ (ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ) ಮತ್ತು ದಿವಂಗತ ಫಿಲೋಮಿನಾ ಜೇಮ್ಸ್ ಅವರ ಪುತ್ರ. ಇವರ ಅಣ್ಣ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಪತ್ನಿ…
ಬೆಂಗಳೂರು NEWS DESK ಆ.18 : ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ಪ್ರಶಸ್ತಿಗೆ ಪಾತ್ರರಾದ ಹಿರಿಯ ಪತ್ರಕರ್ತರು ಮತ್ತು ಪ್ರಗತಿಪರ ಚಿಂತಕರಾದ ಕಲ್ಲೆ ಶಿವೋತ್ತಮ ರಾವ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಮುಖ್ಯಮಂತ್ರಿಗಳಾಗಿದ್ದ ದೇವರಾಜ್ ಅರಸ್ ಅವರ ಚಿಂತಕರ ಚಾವಡಿಯಲ್ಲಿದ್ದ ಕಲ್ಲೆ ಅವರು ಅರಸು ಅವರ ಅನೇಕ ಕ್ರಾಂತಿಕಾರಿ ಕಾರ್ಯಕ್ರಮಗಳ ಹಿಂದಿನ ಪ್ರೇರಕಶಕ್ತಿಯಾಗಿದ್ದರು. ಕಲ್ಲೆ ಅವರು ಸಂಪಾದಕರಾಗಿದ್ದ ಆಗಿನ ಜನಪ್ರಿಯ ವಾರಪತ್ರಿಕೆ ‘ಜನಪ್ರಗತಿ’ ನಾಡಿನ ರಾಜಕೀಯ, ಸಾಹಿತ್ಯ ಮತ್ತು ಸಾಂಸ್ಕೃತಿಕ ವಿದ್ಯಮಾನಗಳ ಮುಖವಾಣಿಯಾಗಿತ್ತು. ನಾಡಿನ ಅನೇಕ ಪ್ರಮುಖ ಸಾಹಿತಿಗಳ ಪ್ರಾರಂಭದ ದಿನಗಳ ಕತೆ-ಕವನ-ಲೇಖನಗಳು ಈ ಪತ್ರಿಕೆಯಲ್ಲಿಯೇ ಪ್ರಕಟವಾಗಿತ್ತಿತ್ತು. ಪ್ರಜಾವಾಣಿ ಪತ್ರಿಕೆಯಲ್ಲಿಯೂ ಕಲ್ಲೆ ಅವರು ಸ್ವಲ್ಪಕಾಲ ಕೆಲಸ ಮಾಡಿದ್ದರು. ಹಿಂದುಳಿದ ಸಮುದಾಯಕ್ಕೆ ಸೇರಿರುವ ಕಲ್ಲೆ ಶಿವೋತ್ತಮ್ ರಾವ್ ಅವರು ನನ್ನ ರಾಜಕೀಯ ಜೀವನದ ಪ್ರಾರಂಭದ ದಿನಗಳಲ್ಲಿ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದರು. ಪ್ರಶಸ್ತಿ ಪುರಸ್ಕೃತರಾದ ಕಲ್ಲೆ ಅವರಿಗೆ ಆರೋಗ್ಯ ಮತ್ತು ಆಯುಷ್ಯ ಸದಾ ಒದಗಿ ಬರಲಿ ಎಂದು ಹಾರೈಸುತ್ತೇನೆ. (ಮುಖ್ಯಮಂತ್ರಿ ಸಿದ್ದರಾಮಯ್ಯ)






