ಮಡಿಕೇರಿ ಆ.18 NEWS DESK : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ ವತಿಯಿಂದ ಮೂರ್ನಾಡಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೈಕೊರೆಯುವ ಚಳಿ, ಮಳೆಯ ನಡುವೆ ನೂರಾರು ಪುಟಾಣಿಗಳು ಬಾಲಕೃಷ್ಣರಾಗಿ ಮಿಂಚಿದರು. ಮೂರ್ನಾಡಿನ ಪ್ರಕೃತಿ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ 3 ತಿಂಗಳಿನಿಂದ 6 ವರ್ಷದವರೆಗಿನ 93 ಮಕ್ಕಳು ಶ್ರೀಕೃಷ್ಣ ವೇಷಧಾರಿಗಳಾಗಿ ಗಮನ ಸೆಳೆದರು. ಕುಶಾಲನಗರ, ಪೊನ್ನಂಪೇಟೆ, ನಾಪೋಕ್ಲು ಮತ್ತಿತರ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಪುಟಾಣಿ ಸ್ಪರ್ಧಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು. ವಿಶ್ವ ಹಿಂದೂ ಪರಿಷತ್ ನ ಮೂರ್ನಾಡು ಘಟಕದ ಅಧ್ಯಕ್ಷ ಚಾರಿಮಂಡ ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲವಾಗ್ಮಿ ಸುಂಟಿಕೊಪ್ಪದ ಶ್ರೀಷ ದಿಕ್ಸೂಚಿ ಭಾಷಣ ಮಾಡಿದರು. ಮಡಿಕೇರಿ ಸಂತ ಜೋಸೆಫರ ಶಾಲೆಯ ಉಪನ್ಯಾಸಕರಾದ ಜಯಲಕ್ಷ್ಮಿ ಕೆ. ಮುಖ್ಯ ಭಾಷಣ ಮಾಡಿದರು. ಮೂರ್ನಾಡು ಪದವಿ ಕಾಲೇಜ್ ನ ಕಲ್ಪನಾ ಸಾಮ್ರಾಟ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಕಾರ್ಯಾಧ್ಯಕ್ಷ…
ಲೇಖಕ: admin
ಮಡಿಕೇರಿ ಆ.18 NEWS DESK : ಅನಾಮಧೇಯ ಕರೆಗಳು, ಲಿಂಕ್ಗಳಿಗೆ ಸ್ಪಂದನೆ ನೀಡಿದೆ ಸೈಬರ್ ವಂಚಕರ ಬಲೆಯಿಂದ ಎಚ್ಚರ ವಹಿಸಬೇಕು. ಕಣ್ಣು ತಪ್ಪಿನಿಂದ ಮೋಸ ಜರುಗಿದರೆ ಕೂಡಲೆ 1930 ಗೆ ಕರೆಮಾಡುವ ಮುಖಾಂತರ ಸೈಬರ್ ವಂಚಕರಿಗೆ ಕಡಿವಾಣ ಹಾಕಬೇಕೆಂದು ಅವಾರ್ಡ್ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಕೆ.ಎ.ಆಸೀಫ್ ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರ್ನಾಡು ಶಾಖೆ ಇವರ ಸಹಯೋಗದೊಂದಿಗೆ ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮದಲ್ಲಿ, ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣ ಮಾಹಿತಿ ಮತ್ತು ಉಪಯೋಗ ತಿಳಿದುಕೊಂಡು ಇದುವರೆಗೂ ಯೋಜನೆ ಮಾಡಿಸಿಕೊಳ್ಳದೆ ಇರುವವರು ಶೀಘ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಿದರು. ವಿಶೇಷವಾಗಿ ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಅತೀ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು ಇಂತಹ ಸಂದರ್ಭದಲ್ಲಿ ಇದು ಅತೀ ಉಪಯೋಗಕರ ಎಂದು ತಿಳಿಸಿದರು. ಮೊಬೈಲ್…
ಮಡಿಕೇರಿ ಆ.18 NEWS DESK : ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿಗಳು, ಜಿ.ಪಂ.ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ವಿರಾಜಪೇಟೆ ತಾ.ಪಂ.ಸಾಮಾನ್ಯ ಸಭೆ ನಡೆಯಿತು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಒಟ್ಟು 3 ಬ್ಯಾಚ್ಗಳಿಂದ 120 ಕಾಮಗಾರಿಗಳಿದ್ದು 44 ಕಾಮಗಾರಿಗಳು ಮಾತ್ರ ಮುಕ್ತಾಯಗೊಂಡಿದೆ. ಇನ್ನುಳಿದ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಕ್ರಮವಹಿಸಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಉಚಿತ ಪಠ್ಯ-ಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಊಟದ ನೀಡುತ್ತಿದ್ದರೂ ಕೂಡ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಮಾತ್ರ ಇಳಿಕೆಯಾಗುತ್ತಿದೆ. ಎಸ್ಎಸ್ಎಲ್ಸಿ ಓದುತ್ತಿರುವ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನಹರಿಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಕ್ಷೇತ್ರ…
ಮಡಿಕೇರಿ ಆ.18 NEWS DESK : ಜಾತ್ಯಾತೀತ ಪಕ್ಷವೆಂದು ಘೋಷಿಸಿಕೊಂಡು ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವ ಜೆಡಿಎಸ್ ನ ಅಲ್ಪಸಂಖ್ಯಾತರ ಘಟಕಕ್ಕೆ ಅಲ್ಪಸಂಖ್ಯಾತರ ಅಭಿವೃದ್ಧಿಯ ಬಗ್ಗೆ ಮತ್ತು ಜನಪರ ಕಾಳಜಿಯ ಕಾಂಗ್ರೆಸ್ ವಿರುದ್ಧ ಮಾತನಾಡುವ ನೈತಿಕತೆ ಇಲ್ಲವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಅವರು, ನೆಲಕಚ್ಚಿರುವ ಜೆಡಿಎಸ್ ಪಕ್ಷದಲ್ಲಿ ತಮ್ಮ ಸ್ಥಾನವನ್ನು ಭದ್ರ ಮಾಡಿಕೊಳ್ಳುವ ಉದ್ದೇಶದಿಂದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಶಾಸಕರ ವಿರುದ್ಧ ಬಾಲಿಶ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು. ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ವಿದ್ಯಾವಂತ ಯುವ ಶಾಸಕರಿದ್ದಾರೆ, ಎಲ್ಲಾ ವರ್ಗದ ಜನರನ್ನು ಸಮಾನವಾಗಿ ವಿಶ್ವಾಸದಿಂದ ಕಾಣುತ್ತಿದ್ದಾರೆ. ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಅನುದಾನವನ್ನು ತಂದು ಎರಡೂ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆ. ಇದನ್ನು ಸಹಿಸದ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದರು. ಶಾಸಕ ಡಾ.ಮಂತರ್ ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ…
ನಾಪೋಕ್ಲು ಆ.18 NEWS DESK : ಪಂಜಾಬ್ ನ ಜಲಂಧರ್ನಲ್ಲಿ ಆ.23ರವರೆಗೆ ಹಾಕಿ ಇಂಡಿಯಾ ವತಿಯಿಂದ ಆಯೋಜಿತಗೊಂಡಿರುವ 15ನೇ ಹಾಕಿ ಇಂಡಿಯಾ ಜೂನಿಯರ್ ಮೆನ್ ನ್ಯಾಷನಲ್ ಚಾಂಪಿಯಶಿಪ್-2025ಕ್ಕೆ ಹಾಕಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಹಾಕಿ ಕರ್ನಾಟಕ ತಂಡದಲ್ಲಿ ಕೊಡಗು ಜಿಲ್ಲೆಯ ಮೂಲದ 11 ಆಟಗಾರರು ಸ್ಥಾನ ಪಡೆದಿದ್ದಾರೆ. ತಂಡದ ಕೋಚ್ ಹಾಗೂ ವ್ಯವಸ್ಥಾಪಕರಾಗಿಯೂ ಜಿಲ್ಲೆಯ ಇಬ್ಬರು ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷವಾಗಿದೆ. ತಂಡದ ನಾಯಕನಾಗಿ ಕೊಡಗಿನವರಾದ ಧ್ರುಮ ಬಿ.ಎಸ್. ಕಾರ್ಯನಿರ್ವಹಿಸಲಿದ್ದು, ಆಟಗಾರರಾಗಿ ನಾಪೋಕ್ಲು ಗ್ರಾಮದ ಬಿದ್ದಾಟಂಡ ಬೋಪಣ್ಣ, ಕುಲ್ಲೇಟಿರ ವಚನ್ ಕಾಳಪ್ಪ, ಮಕ್ಕಂದೂರು ಗ್ರಾಮದ ವಿಶ್ವಜಿತ್ ಕುಂಬಗೌಡನ ವಿ., ಹರ್ಷಿತ್ ಕುಮಾರ್, ಮಂಡೇಡ ಅಚ್ಚಯ್ಯ, ಬಲ್ಯಂಡ ಸಂಪನ್ ಗಣಪತಿ, ಚೋಯಮಾಡಂಡ ಆಕರ್ಷ್ ಬಿದ್ದಪ್ಪ, ಪೂಜಿತ್ ಕೆ.ಆರ್, ಕೋಳೆರ ಹೃತಿಕ್ ಅಯ್ಯಪ್ಪ, ಚೋಕಿರ ಕುಶಾಲ್ ಬೋಪಯ್ಯ ತಂಡದಲ್ಲಿದ್ದಾರೆ. ತಂಡದ ಕೋಚ್ ಆಗಿ ಮೇಚಂಡ ತನು ನಂಜಪ್ಪ ಹಾಗೂ ವ್ಯವಸ್ಥಾಪಕರಾಗಿ ಬಲ್ಲಮಾವಟ್ಟಿ ಗ್ರಾಮದ ಅಪ್ಪಚೆಟ್ಟೋಳಂಡ ಅಯ್ಯಪ್ಪ ಭಾಗವಹಿಸದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಆ.18 NEWS DESK : ಈಶ ಫೌಂಡೇಷನ್ ವತಿಯಿಂದ 17ನೇ ಆವೃತ್ತಿಯ ‘ಈಶ ಗ್ರಾಮೋತ್ಸವ’ದ ಭಾಗವಾಗಿ ಕೊಡಗು ಕ್ಲಸ್ಟರ್ನ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಗಳನ್ನು ಒಳಗೊಂಡ ‘ರೂರಲ್ ಪ್ರೀಮಿಯರ್ ಲೀಗ್’ ಪಂದ್ಯಾವಳಿ ಆ.24 ರಂದು ಕುಶಾಲನಗರದ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಈಶ ಸಂಸ್ಥೆಯ ಸ್ವಯಂ ಸೇವಕರಾದ ಎಂ.ಎನ್.ಅಖಿಲ್, ಈಶ ಗ್ರಾಮೋತ್ಸವ ಕಳೆದ ಹದಿನಾರು ವರ್ಷಗಳಿಂದ ನಡೆಯುತ್ತಿದ್ದು, ಈ ಬಾರಿಯದ್ದು 17ನೇ ಆವೃತ್ತಿಯದ್ದಾಗಿದೆ. ಪ್ರಮುಖವಾಗಿ ಗ್ರಾಮಿಣ ಸುಪ್ತ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಗ್ರಾಮೋತ್ಸವದ ಪ್ರಮುಖ ಉದ್ದೇಶವಾಗಿದೆಯೆಂದು ತಿಳಿಸಿದರು. ಕೊಡಗು ಕ್ಲಸ್ಟರ್ ಮಟ್ಟದಲ್ಲಿ ಪುರುಷರಿಗೆ ವಾಲಿಬಾಲ್ ಮತ್ತು ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾವಳಿ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಗ್ರಾಮ ಪಂಚಾಯ್ತಿಗಳಲ್ಲಿನ ತಂಡಗಳಿಗೆ ಮಾತ್ರ ಅವಕಾಶವನ್ನು ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಆಟಗಾರರಿಗೆ ಇದರಲ್ಲಿ ಅವಕಾಶವಿಲ್ಲವೆಂದು ಸ್ಪಷ್ಟಪಡಿಸಿದರು.ಪಂದ್ಯಾವಳಿ ಆ.24 ರಂದು ಬೆಳಗ್ಗೆ 8 ಗಂಟೆಗೆ ಕುಶಾಲನಗರದಲ್ಲಿ ಪ್ರಾರಂಭಗೊಳ್ಳಲಿದೆಯೆಂದರು. ಗ್ರಾಮೋತ್ಸವದಲ್ಲಿ…
ಮಡಿಕೇರಿ ಆ.18 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆಯು ಆ.24 ರಂದು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ರೋಟರಿ ಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಸಭೆಗೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ರಂಜಿತ್ ಪುದಿಯತಂಡ ಮನವಿ ಮಾಡಿದ್ದಾರೆ. ಸೆ.19 ರಂದು ಗೋಣಿಕೊಪ್ಪಲಿನ ಕೆಎಎಲ್ಎಸ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘದ ವತಿಯಿಂದ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಅನುದಾನದ ಅಗತ್ಯ ಇದ್ದು, ದಾನಿಗಳು ಸಹಕರಿಸುವಂತೆ ಸಂಘದ ಉಪಾಧ್ಯಕ್ಷ ಕೆ.ಕೆ.ಶಂಕರ ನಾರಾಯಣ ಕೋರಿದ್ದಾರೆ. ಆಸಕ್ತರು ಸಂಘದ ಖಾತೆ ಸಂಖ್ಯೆ AAGAK2464F, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಖಾತೆ ಸಂಖ್ಯೆ : 520101254608758, ಐಎಫ್ಎಸ್ಸಿ : UBIN0900087 ಹಣ ಪಾವತಿಸಬಹುದಾಗಿದೆ.
ನಾಪೋಕ್ಲು ಆ.8 NEWS DESK : ಕೊಡವ ಸಮಾಜ ರಸ್ತೆಯ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಅತ್ಯಂತ ಜನಸಂಚಾರ ಹಾಗೂ ವಾಹನ ದಟ್ಟಣೆ ಇರುವ ಈ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಶಾಸಕರು 20 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆಯ ಉನ್ನತೀಕರಣ ಮಾಡಲು ಅನುದಾನ ನೀಡಿದ್ದರು. ಕಾಮಗಾರಿ ಆರಂಭಿಸಲು ಭೂಮಿ ಪೂಜೆ ನೆರವೇರಿಸಿದ ಶಾಸಕರು ಅತ್ಯಂತ ಶೀಘ್ರದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು. ಇದೇ ಸಂದರ್ಭ ನಾಪೋಕ್ಲು ಗ್ರಾಮ ಪಂಚಾಯಿತಿ ನೀಡಲಾದ ಮಲ ತ್ಯಾಜ್ಯ ನಿರ್ವಹಣಾ ಸಂಚಾರಿ ಘಟಕವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಗೆ ವಾಹನದ ಕೀಯನ್ನು ಶಾಸಕರು ಹಸ್ತಾಂತರ ಮಾಡಿ ಸೂಕ್ತವಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಾಚೇಟಿರ ಕುಸು ಕುಶಾಲಪ್ಪ, ಅರುಣ್ ಬೇಬ, ಹೇಮಾವತಿ ಅರುಣ್, ಬಿ.ಎಂ.ಪ್ರತೀಪ, ಟಿ.ಎ.ಅಹಮದ್, ಸಾಬಾ ತಿಮ್ಮಯ್ಯ, ಕೆ.ಎ.ಇಸ್ಮಾಯಿಲ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚೊಂದಕ್ಕಿ, ಸಿಬ್ಬಂದಿಗಳು, ಕೊಡವ…
ನಾಪೋಕ್ಲು ಆ.18 NEWS DESK : ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಕರ್ನಲ್ ನಾಯಡ ಬಿ.ಚಿನ್ನಪ್ಪ ವಿದ್ಯಾರ್ಥಿಗಳು ನಾಯಕತ್ವ ಮತ್ತು ಸಂಘ ಆಯೋಜಿಸುವ ವಿವಿಧ ಚಟುವಟಿಕೆಯಲ್ಲಿ ಭಾಗಿಯಾಗುವ ಮೂಲಕ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿ, ಶುಭ ಹಾರೈಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚೌರಿರ ಡಾ.ಜಗತ್ ತಿಮ್ಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ವೇಣು ಅಪ್ಪಣ್ಣ, ನಿರ್ದೇಶಕರಾದ ಹರೀಶ್ ದೇವಯ್ಯ, ಪ್ರಾಂಶುಪಾಲರಾದ ದೇವಕಿ, ಬೋಧಕರು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಆ.18 NEWS DESK : ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢ ಶಾಲೆಯ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮಡಿಕೇರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಲ್ಲಮಾವಟಿ ಮತ್ತು ನೇತಾಜಿ ಪ್ರೌಢ ಶಾಲೆ ಸಂಯುಕ್ತ ಆಶ್ರಯದಲ್ಲಿ ಸಮೀಪದ ನೇತಾಜಿ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ “ದುಶ್ಚಟಗಳಿಂದ ದೂರವಿರಿ” ವಿಷಯ ಕುರಿತ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾರ್ಜನೆ ಮಾಡಬೇಕು. ಬಾಹ್ಯ ಪರಿಸರದ ಒತ್ತಡಕ್ಕೆ ಒಳಗಾಗಿ ದುಶ್ಚಟಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳುಮಾಡಬಾರದು ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿಯ ಶಿಬಿರಾಧಿಕಾರಿ ಪಿ.ಪಿ.ನಂದಕುಮಾರ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದ ಮಹನೀಯರನ್ನು…






