ಲೇಖಕ: admin

ಮಡಿಕೇರಿ ಆ.18 NEWS DESK : ಕೆಎಸ್‌ಆರ್‌ಟಿಸಿ ಬಸ್ಸೊಂದು ಬರೆಗೆ ಡಿಕ್ಕಿಹೊಡೆದ ಘಟನೆ ಮುಟ್ಲು ಗ್ರಾಮದ ಸುಬ್ರಮಣ್ಯ ದೇವಸ್ಥಾನದ ಸಮೀಪ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ಚಲಿಸುವ ಕೆಎಸ್‌ಆರ್‌ಟಿಸಿ ಬಸ್ ಮುಟ್ಲು ಗ್ರಾಮದ ಸುಬ್ರಮಣ್ಯ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು  ಬರಗೆ ಡಿಕ್ಕಿ ಹೊಡೆದಿದೆ.

Read More

ಕುಶಾಲನಗರ ಆ.18 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್, ಎನ್.ಎಸ್.ಎಸ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಜಿಲ್ಲಾ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆ ಶಾಲಾ ಘಟಕ, ಎಸ್. ಡಿ.ಎಂ.ಸಿ.‌ ವಿದ್ಯಾರ್ಥಿ ಸಂಘ, ಕೂಡ್ಲೂರು ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆ,‌ಕುಶಾಲನಗರ ಕಾವೇರಿ ಜೆಸಿಐ ಸಂಸ್ಥೆ ಹಾಗೂ ಲಯನ್ಸ್ ಕ್ಲಬ್ ನ ಸಹಯೋಗದೊಂದಿಗೆ 79ನೇ ಸ್ವಾತಂತ್ರ್ಯೋತ್ಸವ ಹಾಗೂ ಗೋ ಗ್ರೀನ್ ಅಭಿಯಾನ:2025 ದ ಅಂಗವಾಗಿ “ವಿದ್ಯಾರ್ಥಿಗಳ ನಡಿಗೆ ಕೃಷಿಯೆಡೆಗೆ”ಎಂಬ ಘೋಷ ವಾಕ್ಯದೊಂದಿಗೆ ಕೂಡ್ಲೂರು ಗ್ರಾಮದಲ್ಲಿ ಕಾವೇರಿ ನದಿದಂಡೆಯ ಮೇಲಿನ ಹಸಿರು ಪರಿಸರದ ಮಧ್ಯೆ ಗ್ರಾಮದ ಪ್ರಗತಿಪರ ಕೃಷಿಕರಾದ ಕೆ.ಎಸ್.ರಾಜಾಚಾರಿ ಅವರ ಗದ್ದೆಯಲ್ಲಿ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಜನಪದ ಸಂಸ್ಕೃತಿಯ ಪ್ರತೀಕವಾದ 4ನೇ ವರ್ಷದ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟ ಗಮನ ಸೆಳೆಯಿತು. ಮಳೆಯ ಸಿಂಚನದೊಂದಿಗೆ‌‌ ಆಗಾಗ್ಗೆ ಬಿಸಿಲಿನ ವಾತಾವರಣದಲ್ಲಿ ವಿದ್ಯಾರ್ಥಿಗಳು ಗದ್ದೆಯ ಕೆಸರಿನಲ್ಲಿ ಮಿಂದು ಎದ್ದು ಕೆಸರು…

Read More

ಸುಂಟಿಕೊಪ್ಪ ಆ.18 NEWS DESK : 7ನೇ ಹೊಸಕೋಟೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ದೇವಾಲಯದ ಆವರಣದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಮತ್ತು 5 ವರ್ಷ ಮೇಲ್ಪಟ್ಟ ಮಕ್ಕಳಿಗೆ  2ನೇ ವರ್ಷದ ಕೃಷ್ಣ ರಾಧೆ ಛದ್ಮವೇಷ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಮಹಾಗಣಪತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ದಾಸಂಡ ರಮೇಶ್ ಚಂಗಪ್ಪ ಉದ್ಘಾಟಿಸಿ, ಮಕ್ಕಳಲ್ಲಿ ಆಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ವೇದಿಕೆ ಕಲ್ಪಿಸಿದ ಸಮಿತಿ ಸದಸ್ಯರನ್ನು ಅಭಿನಂಧಿಸಿದರಲ್ಲದೆ, ಇಂದಿನ ಮಕ್ಕಳು ಮೊಬೈಲ್, ಅಂತರ್ಜಾಲಗಳಲ್ಲಿ ತೊಡಗಿಕೊಳ್ಳುತ್ತಿದ್ದು, ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ರೀತಿಯ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಿರುವುದು, ಜೊತೆಗೆ ಮಕ್ಕಳು ಪ್ರತಿಭೆಗಳನ್ನು ಅನಾವರಣಗೊಳಿಸಲು ಪೋಷಕರೊಂದಿಗೆ ಪಾಲ್ಗೊಂಡಿರುವುದು ಆಶಾದಾಯಕ ವಿಚಾರವಾಗಿದೆ ಎಂದು ಹೇಳಿದರು. ಪೋಷಕರು ಮತ್ತು ಮಕ್ಕಳಲ್ಲಿ ಓದುವ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಸಮಿತಿಯ ಸದಸ್ಯರು ಬಹುಮಾನವಾಗಿ ಪುಸ್ತಕಗಳನ್ನು ನೀಡುತ್ತಿರುವುದು ಅತ್ಯಂತ…

Read More

ವಿರಾಜಪೇಟೆ ಆ.18 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಕಾನೂರು ವಲಯದ ಬ್ರಹ್ಮಗಿರಿ ಕಾರ್ಯಕ್ಷೇತ್ರದ ಕೋತೂರು-ಬೊಮ್ಮಾಡು ಸರಕಾರಿ ವಾಲ್ಮೀಕಿ ಆಶ್ರಮ ಶಾಲೆ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ನಾಲ್ಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೋಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ ನೀರು ಸಿಗುತ್ತದೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು ಎಂದರು. ಶಾಲಾ ಮುಖ್ಯ ಶಿಕ್ಷಕರಾದ ವಿ.ಎಸ್.ಪ್ರಶಾಂತ ಕುಮಾರ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ನಮ್ಮ ಕರ್ತವ್ಯದ ಬಗ್ಗೆ ಮತ್ತು ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕ ವಸಂತ್, ಶಾಲಾ ಶಿಕ್ಷಕರಾದ ದಿವ್ಯ ಪಿ.ಎಂ, ಲಕ್ಷ್ಮಿ ಪಿ.ಕೆ ಪ್ರವೀಣ್, ಎಚ್.ಎನ್, ಲಕ್ಷ್ಮಿ ಪಿ.ಎಸ್, ತೀರ್ಥಂಜಲಿ…

Read More

ಮಡಿಕೇರಿ NEWS DESK ಆ.17 : ವಿಶ್ವಛಾಯಾಗ್ರಾಹಣ ದಿನಾಚರಣೆ ಅಂಗವಾಗಿ ಕೊಡಗು ಪತ್ರಕತ೯ರ ಸಂಘದ ವತಿಯಿಂದ  ಆಯೋಜಿಸಲಾಗಿದ್ದ ವಿವಿಧ ಸ್ಪಧೆ೯ಗಳಲ್ಲಿ ವಿಜೇತರ ವಿವರ ಹೀಗಿದೆ >>> ಅತ್ಯುತ್ತಮ ಮಾನವೀಯ ಛಾಯಾಚಿತ್ರಕ್ಕಾಗಿ ಸಂಘದ ಗೌರವ ಸಲಹಗಾರ ಬಿ.ಜಿ.ಅನಂತಶಯನ ಅವರು ನೀಡಿರುವ ದತ್ತಿ ಪ್ರಶಸ್ತಿಗೆ ಪತ್ರಕರ್ತ ವಿಘ್ನೇಶ್ ಭೂತನಕಾಡು ಅವರು ತೆಗೆದ ಛಾಯಾಚಿತ್ರ ಆಯ್ಕೆಯಾಗಿದೆ. ಅತ್ಯುತ್ತಮ ಸುದ್ದಿ ಚಿತ್ರಕ್ಕಾಗಿ ಸುಂಟಿಕೊಪ್ಪದ ಪತ್ರಕತ೯ ಕೆ.ಎಸ್.ಅನಿಲ್ ಕುಮಾರ್ (ಪ್ರಥಮ) ಹಾಗೂ ವಿಶ್ವಕುಮಾರ್ ಗುಡ್ಡೆಹೊಸೂರು ದ್ವಿತೀಯ ಬಹುಮಾನ ಗಳಿಸಿದ್ದಾರೆ. ಜಲಜಲಜಲಧಾರೆ ವಿಷಯದ ಅತ್ಯುತ್ತಮ ವಿಡಿಯೋ ಸ್ಪಧೆ೯ಯಲ್ಲಿ ಮಡಿಕೇರಿಯ ಮಹಮ್ಮದ್ ಹನೀಫ್ (ಪ್ರಥಮ), ವಿರಾಜಪೇಟೆಯ ಉಷಾಪ್ರೀತಂ (ದ್ವಿತೀಯ) ಆಯ್ಕೆಯಾಗಿದ್ದಾರೆ. ಮಳೆಗಾಲದ ಸಂಕಷ್ಟಗಳು ವಿಷಯದ ಕುರಿತ ಸಾವ೯ಜನಿಕರಿಗಾಗಿನ ರೀಲ್ಸ್ ಸ್ಪಧೆ೯ಯಲ್ಲಿ ಭಾಗೀರಥಿ ಹುಲಿತಾಳ (ಪ್ರಥಮ) ಹಾಗೂ ಕುಶಾಲನಗರದ ರಮ್ಯ ಮಾಚಯ್ಯ (ದ್ವಿತೀಯ) ಆಯ್ಕೆಯಾಗಿದ್ದಾರೆ. ವಿಜೇತರಿಗೆ ಇದೇ ಮಂಗಳವಾರ ವಿಶ್ವಛಾಯಾಗ್ರಹಣ ದಿನದಂದು ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಬಹುಮಾನ ವಿತರಿಸಲಾಗುತ್ತದೆ. ವಿಶ್ವಛಾಯಾಗ್ರಹಣ ದಿನದ ಸಂದಭ೯ ಕೊಡಗಿನ ಹಿರಿಯ ಛಾಯಾಗ್ರಾಹಕರಾದ ಮಹಮ್ಮದ್ ಹನೀಫ್…

Read More

ಮಡಿಕೇರಿ NEWS DESK ಆ.17 : ಕೊಡಗು ಜಿಲ್ಲೆಯಲ್ಲಿ ಮತ್ತೆ ಗಾಳಿ ಸಹಿತ ಮಳೆ ಬಿರುಸುಗೊಂಡಿದ್ದು, ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜ್ ಗೆ ಆ.18 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಕಳೆದ ಎರಡು ತಿಂಗಳುಗಳ ವ್ಯಾಪಕ ಮಳೆಯಿಂದ ತೀವ್ರ ಹಾನಿ ಅನುಭವಿಸಿದ್ದ ಕೊಡಗಿನಲ್ಲಿ ಒಂದೆರಡು ದಿನ ಮಳೆ ಬಿಡುವು ನೀಡಿತ್ತು. ಆದರೆ ಭಾನುವಾರದಿಂದ ಮತ್ತೆ ಗಾಳಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗುತ್ತಿದೆ. ಗಾಳಿ ಸಹಿತ ಮಳೆ ಸುರಿಯುತ್ತಿರುವುದರಿಂದ ಕೆಲವು ಭಾಗಗಳಲ್ಲಿ ಮರ, ಬರೆ, ವಿದ್ಯುತ್ ಕಂಬ ಬಿದ್ದ ಘಟನೆಗಳು ನಡೆದಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಲೇ ಇದ್ದು, ಎತ್ತರ ಮತ್ತು ತಗ್ಗು ಪ್ರದೇಶ ಹಾಗೂ ನದಿ ಭಾಗದ ಜನರಲ್ಲಿ ಆತಂಕ ಮನೆ ಮಾಡಿದೆ. ರಜೆಯ ಕಾರಣ ಜಿಲ್ಲೆಗೆ ಆಗಮಿಸಿದ್ದ ಸಾವಿರಾರು ಪ್ರವಾಸಿಗರು ನಿರಂತರ ಮಳೆಯಿಂದ…

Read More

ಸುಂಟಿಕೊಪ್ಪ NEWS DESK ಆ.17: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ ಬಾಳೆಕಾಡು ರಸ್ತೆ ತಿರುವಿನಲ್ಲಿ ನಡೆದಿದೆ. ಕುಶಾಲನಗರದಿಂದ ಮಡಿಕೇರಿಗೆ ಬರುತ್ತಿದ್ದ ಬಸ್ ಮತ್ತು ಕುಶಾಲನಗರ ಕಡೆಗೆ ಸಾಗುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಕಾರು ಚಾಲಕ ರಂಜಿತ್ ಹಾಗೂ ಪ್ರಯಾಣಿಕ ಕುಮಾರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಸಂಪಾಜೆ NEWS DESK ಆ.17 : ಯುವ ಜನಾಂಗ ಸ್ವಾತಂತ್ರ್ಯದ ಮಹತ್ವವನ್ನು ಅರಿತುಕೊಳ್ಳಬೇಕು, ದೇಶಪ್ರೇಮ ಬೆಳೆಸಿಕೊಳ್ಳಬೇಕು ಮತ್ತು ಹೋರಾಟಗಾರರನ್ನು ಸ್ಮರಿಸಿಕೊಳ್ಳಬೇಕು ಎಂದು ನಿವೃತ್ತ ಯೋಧ ಕೀಲಾರು ಸಚಿನ್ ವಿಶ್ವನಾಥ್ ಅವರು ಕರೆ ನೀಡಿದ್ದಾರೆ. ಸಂಪಾಜೆ ಸಯುಕ್ತ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕಾಲೇಜ್ ನ ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ಯೋಧ ಕೀಲಾರು ಸಚಿನ್ ಅವರು ಯುವ ಜನಾಂಗ ಸ್ವಾತಂತ್ರ್ಯದ ಮಹತ್ವವನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ದೇಶಪ್ರೇಮ ಮೆರೆಯಬೇಕು, ಸ್ವಾತಂತ್ರ್ಯಕ್ಕೋಸ್ಕರ ಹೋರಾಟ ಮಾಡಿ ಬಲಿದಾನಗೈದ ಮಹಾನ್ ವ್ಯಕ್ತಿಗಳನ್ನು ಸ್ಮರಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕ ಎಂ.ಶಂಕರನಾರಾಯಣ ಭಟ್ ಅವರು ವಿದ್ಯಾರ್ಥಿಗಳು ನಮ್ಮ ದೇಶದ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಅರಿತುಕೊಳ್ಳಬೇಕು. ಉತ್ತಮ ಮೌಲ್ಯಗಳಿಂದ ಜೀವನ ನಡೆಸಬೇಕು ಎಂದು ಹೇಳಿದರು. ನಬಾರ್ಡ್ ನ ನಿವೃತ್ತ ಸಹಾಯಕ ಮಹಾ ಪ್ರಬಂಧಕ ಎಂ.ಸಿ.ನಾಣಯ್ಯ ಅವರು ಮಾತನಾಡಿ ವಿದ್ಯಾರ್ಥಿಗಳು ತಂದೆ, ತಾಯಿಗಳಿಗೆ ಹಾಗೂ ಹಿರಿಯರಿಗೆ ಗೌರವ ನೀಡಬೇಕು.…

Read More

ಮಡಿಕೇರಿ NEWS DESK ಆ.17 : ಇತ್ತೀಚಿನ ವರ್ಷಗಳಲ್ಲಿ ಆನೆ ಮಾನವ ಸಂಘರ್ಷ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಜನ್ಮದಿನದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ಕೂಟದ 117ನೇ ಪುಸ್ತಕ, ಬರಹಗಾರ್ತಿ ಚೀಯಕಪೂವಂಡ ಶ್ವೇತನ್ ಚಂಗಪ್ಪ ಅವರು ರಚಿಸಿರುವ “ಕೊಡಗ್‌ಲ್ ಆನೆ-ಮಾಲವ ಪಣಂಗಲ್” ನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಆನೆ ಮಾನವ ಸಂಘರ್ಷದಿAದ ಕೇವಲ ಮಾನವನಿಗೆ ಮಾತ್ರ ಹಾನಿಯಾಗುತ್ತಿಲ್ಲ, ಆನೆಗಳಿಗೂ ಹಾನಿಯಾಗುತ್ತಿದೆ. ಸಮಸ್ಯೆಯ ಗಂಭೀರತೆ ಮತ್ತು ಕಾರಣಗಳ ಕುರಿತು ಯುವ ಸಮೂಹದಲ್ಲಿ ಜಾಗೃತಿ ಮೂಡಿಸಬೇಕು. ಅರಣ್ಯ ನಾಶ, ಟಿಂಬರ್ ಲಾಬಿ, ಆಹಾರದ ಕೊರತೆ, ಮಾನವನ ಅತಿಕ್ರಮಣ, ಮಿತಿ ಮೀರುತ್ತಿರುವ ಪ್ರವಾಸಿಗರ ಸಂಖ್ಯೆ, ಅತಿಯಾದ ತ್ಯಾಜ್ಯ ಎಂಬಿತ್ಯಾದಿ ವಿಚಾರಗಳು ಕಾಡಾನೆಗಳ ದಾಳಿಗೆ ಕಾರಣವಾಗುತ್ತಿದೆಯೇ ಎನ್ನುವ ಕುರಿತು ಚಿಂತನೆ ನಡೆಯಬೇಕು.…

Read More

NEWS DESK ಕೊಡವ ಮಕ್ಕಡ ಕೂಟ ಸಂಘಟನೆಯನ್ನು ಹುಟ್ಟು ಹಾಕಿ ಕೊಡಗಿನ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ಬೆಳವಣಿಗೆಗಾಗಿ ಶ್ರಮ ಪಡುತ್ತಿರುವ ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಆಗಸ್ಟ್ 17 ರಂದು ತಮ್ಮ 43ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೊಡವ ಮಕ್ಕಡ ಕೂಟ ರಚನೆಯಾಗಿ 12 ವರ್ಷಗಳಾಗಿದ್ದು, ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಅಯ್ಯಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ದಾಖಲೆಯ 117 ಪುಸ್ತಕಗಳನ್ನು ಪ್ರಕಟಿಸಿದ ಹೆಗ್ಗಳಿಕೆ ಇವರದ್ದಾಗಿದ್ದು, ಯುವ ಬರಹಗಾರರಿಗೆ ಸ್ಫೂರ್ತಿಯಾಗಿದ್ದಾರೆ. ಸರಕಾರದ ಅನುದಾನವಿಲ್ಲದಿದ್ದರೂ ಸಾಹಿತ್ಯದ ಬೆಳವಣಿಗೆಗೆ ಒತ್ತು ನೀಡುತ್ತಿದ್ದಾರೆ. ದಾನಿಗಳ ನೆರವಿನಿಂದ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್ ಮತ್ತು ಹಿಂದಿ ಭಾಷೆಯ ಸುಮಾರು 117 ಪುಸ್ತಕಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ಸಮರ್ಪಿಸಿದ್ದಾರೆ. ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಬೊಳ್ಳಜಿರ ಬಿ.ಅಯ್ಯಪ್ಪ ಅವರು, 2024ನೇ ಇಸವಿಯ ಒಂದು ವರ್ಷದಲ್ಲಿ ಒಟ್ಟು 27 ಪುಸ್ತಕಗಳನ್ನು…

Read More