ಮಡಿಕೇರಿ NEWS DESK ಜು.10 : ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಐಜಿಪಿ ವಿಕಾಸ್ ಕುಮಾರ್ ಅವರು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಈ ಸಂದರ್ಭ ಹಾಜರಿದ್ದ ಪೊಲೀಸ್ ಅಧಿಕಾರಿಗಳೊಂದಿಗೆ ಕಾನೂನು ಸುವ್ಯವಸ್ಥೆ ವಿಚಾರವಾಗಿ ಚರ್ಚಿಸಿದರು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
ಲೇಖಕ: admin
ಬೆಂಗಳೂರು, ಜು.10 NEWS DESK : ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು (Sub-Registrar Offices) 2026 ನೇ ಜುಲೈ 12 ರ ಭಾನುವಾರದಂದು ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಮಡಿಕೇರಿ NEWS DESK ಜು.10 : ಕೊಡಗಿನ ಪರಿಸರದ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತಿರುವ ಮತ್ತು ಕೊಡವ ಭೂಪ್ರದೇಶದ ಮೇಲೆ ಮಿತಿ ಮೀರಿದ ಒತ್ತಡ ಹೇರುತ್ತಿರುವ ಹೊರಗಿನ ಬಂಡವಾಳಶಾಹಿಗಳ ಮೆಗಾ ಟೌನ್ಶಿಪ್ ಗಳು ಮತ್ತು ರೆಸಾರ್ಟ್ ಗಳನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ಮೆಗಾ ಟೌನ್ಶಿಪ್ ಗಳು ಮತ್ತು ರೆಸಾರ್ಟ್ಗಳಿಂದ ಕೊಡಗಿನ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ವಿವರಿಸಲಾಯಿತು. ಆದಿಮಸಂಜಾತ, ಏಕ-ಸಂಸ್ಕೃತಿಯ, ಪ್ರಕೃತಿ ಆರಾಧಕರಾದ ಕೊಡವ ಜನರ ಜೀವನ, ಪರಂಪರೆ ಮತ್ತು ಪರಿಸರದ ಮೇಲಾಗುವ ಭವಿಷ್ಯದ ವಿನಾಶಕಾರಿ ಪರಿಣಾಮಗಳನ್ನು ತಡೆಗಟ್ಟಲು ಕೊಡವ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಅಥವಾ ನಿರ್ಮಾಣ ಹಂತದಲ್ಲಿರುವ ಹೊರಗಿನವರ ಎಲ್ಲಾ ಮೆಗಾ ಟೌನ್ಶಿಪ್ಗಳು ಹಾಗೂ ರೆಸಾರ್ಟ್ ಗಳನ್ನು ತಕ್ಷಣ ಧ್ವಂಸಗೊಳಿಸಬೇಕು. ಕಾಫಿ ಭೂಮಿ ಪರಿವರ್ತನೆಯ ಕುರಿತು ಕರ್ನಾಟಕ ಹೈಕೋರ್ಟ್ ತೋರಿದ ಕಳಕಳಿಯಂತೆ ಕೊಡವ ಪ್ರದೇಶ ಮತ್ತು ರಾಷ್ಟ್ರೀಯ ಕಾಫಿ…
ಮಡಿಕೇರಿ ಜು.10 NEWS DESK : ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಮಿತಿ ನಾಮ ನಿರ್ದೇಶಿತ ಸದಸ್ಯರಾದ ಜೆ.ಎಲ್.ಜನಾರ್ಧನ ಅವರು ಅಂಬೇಡ್ಕರ್ ಭವನ ನಿರ್ಮಾಣ ಜಾಗ ಕಾಯ್ದಿರಿಸುವಂತೆ ಹಲವು ಬಾರಿ ಹೇಳಿಕೊಂಡು ಬರಲಾಗಿದೆ. ಆದರೆ ಇದುವರೆಗೆ ಉತ್ತಮ ಜಾಗ ಕಾಯ್ದಿರಿಸಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೂಡಲೇ ಜಾಗ ಕಾಯ್ದರಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ನಿವೇಶನ ರಹಿತ ಪರಿಷ್ಟರಿಗೆ ಆಯಾಯ ಗ್ರಾ.ಪಂ.ವ್ಯಾಪ್ತಿಯಲ್ಲಿ ನಿವೇಶನ ಒದಗಿಸಬೇಕು. ಅರ್ಹ ಬಡಕುಟುಂಬಗಳಿಗೆ ನ್ಯಾಯ ಒದಗಿಸುವುದು ಆದ್ಯತೆಯಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪರಿಶಿಷ್ಟರಲ್ಲಿ ಹಲವು ಕುಟುಂಬಗಳು ಕೃಷಿ ಸಾಲ ಪಡೆದಿದ್ದು ಎಫ್ಐಡಿ ಆಗಬೇಕು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಗಮನಹರಿಸಬೇಕಿದೆ ಎಂದು ಜನಾರ್ದನ ಅವರು ಕೋರಿದರು. ಸರ್ಕಾರಿ ಅಭಿಯೋಜಕರಾದ ದೇವೇಂದ್ರ…
ಮಡಿಕೇರಿ ಜು.10 NEWS DESK : ಗೃಹಜ್ಯೋತಿ ಯೋಜನೆ ಸಂಬಂಧಿಸಿದಂತೆ ದಾಖಲೆ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಫಲಾನುಭವಿಗಳು ಕೇಳಿರುವ ಮಾಹಿತಿ ಒದಗಿಸುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಅರ್ಹರಿಗೆ ಗ್ಯಾರಂಟಿ ಯೋಜನೆ ಸೌಲಭ್ಯ ತಲುಪಿಸಬೇಕು ಎಂಬುದು ಉದ್ದೇಶವಾಗಿದೆ. ಆದ್ದರಿಂದ ಮಾಹಿತಿ ಕೇಳುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಭಾವಚಿತ್ರ ಮತ್ತಿತರ ಮಾಹಿತಿ ಒದಗಿಸುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಅವರು ಕೋರಿದರು. ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಈಗಾಗಲೇ ಹೆಸರು ನೋಂದಾಯಿಸಿಕೊಂಡಿರುವ ಫಲಾನುಭವಿಗಳು ಜೀವಂತ ಪ್ರಮಾಣ ಪತ್ರ ನೀಡಬೇಕೆಂದು ಸೈಬರ್ ಕೇಂದ್ರಗಳಿಗೆ ಓಡಾಡುತ್ತಿದ್ದು, ಇಂತಹ ಮಾಹಿತಿಗೆ ಕಿವಿಗೊಡಬಾರದು, ಯಾರೂ ಸಹ ಗಾಬರಿಗೆ ಒಳಗಾಗುವುದು ಬೇಡ ಎಂದು ಧರ್ಮಜ ಉತ್ತಪ್ಪ…
ಸುಂಟಿಕೊಪ್ಪ ಜು.10 NEWS DESK : ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕಾಡಾನೆಯೊಂದು ರಾತ್ರಿ ವೇಳೆ ತೋಟಗಳಿಗೆ ಲಗ್ಗೆಯಿಟ್ಟು ಕೃಷಿ ಫಸಲನ್ನು ನಾಶಗೊಳಿಸುತ್ತಿರುವುದು ಮಾತ್ರವಲ್ಲದೆ ರಾಜಾರೋಷವಾಗಿ ಜನ ವಸತಿ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಸಂಚಾರ ನಡೆಸಿ, ಗ್ರಾಮದ ಬೊಸಂಡ ಮುತ್ತಪ್ಪ ಅವರ ತೋಟ, ಕಂಬಿಬಾಣೆಯ ಪಂಚಾಯಿತಿ ನೌಕರ ಧನಂಜಯ ಎಂಬವರ ಮನೆ ಸಮೀಪದ ತೋಟದ ಒಳಗೆ ಲಗ್ಗೆ ಇಟ್ಟಿದೆ. ಅದೃಷ್ಟವಶತ್ ಮುಖ್ಯ ರಸ್ತೆ ಬದಿಯಲ್ಲಿ ವಾಹನಗಳು ನಿಂತಿದ್ದು, ಜನತೆಯ ಓಡಾಟ ವಿರಳವಾಗಿತ್ತು. ಕಾಡಾನೆ ಹೊರಗೆ ಬರುತ್ತಿದ್ದಂತೆ ಘೀಳು ಇಟ್ಟ ಹಿನ್ನಲೆಯಲ್ಲಿ ಸುತ್ತ ಮುತ್ತಲಿನ ನಿವಾಸಿಗಳು ಎಚ್ಚೆತ್ತುಕೊಂಡಿದ್ದಾರೆ. ಸಂಬಂಧಿಸಿದ ಇಲಾಖೆ ಕಾಡಾನೆಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸೋಮವಾರಪೇಟೆ ಜು.10 NEWS DESK : ಎಸ್ಐಆರ್ ಮಾಹಿತಿ ಸಭೆ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗು ಜೆಡಿಎಸ್ ಪದಾಧಿಕಾರಿಗಳು ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವಂತಹ ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ಮತದಾರರ ಎನ್ಯುಮರೇಶನ್ ಫಾರಂಗಳನ್ನು ಕೊಟ್ಟು ಅದನ್ನು ಭರ್ತಿ ಮಾಡಲು ಸಹಕಾರ ನೀಡಬೇಕು. ಪಕ್ಷದ ಪದಾಧಿಕಾರಿಗಳು ಬಿಎಲ್ಒಗಳಿಗೆ ಸಹಕಾರ ನೀಡಬೇಕು. ಮನೆಗಳ ಮಾಹಿತಿ ನೀಡಬೇಕು. ಕೆಲವೊಂದು ಮನೆಗಳಿಗೆ ತಲುಪಲಾಗದ ಸ್ಥಿತಿ ಇದ್ದರೆ, ಪಿಡಿಒಗಳೊಂದಿಗೆ ಸಹಕಾರ ನೀಡಬೇಕು ಎಂದು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮನವಿ ಮಾಡಿದರು. ಪ್ರತಿಯೊಬ್ಬರಿಗೂ ಮತದಾನ ಹಕ್ಕು ಸಿಗಲೇಬೇಕು. ಇದ್ದಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿದೆ. ತಾವುಗಳು ಕೈಜೋಡಿಸಬೇಕು. ಬಿಎಲ್ಒಗಳು ಶ್ರಮವಹಿಸಿ ಉತ್ತಮ ಕರ್ತವ್ಯ ನಿರ್ವಹಿಸಿದರೆ ಅಂತಹವರನ್ನು ಗೌರವಿಸಲಾಗುವುದು ಎಂದು ಹೇಳಿದರು. ಹರದೂರು ಪಂಚಾಯಿತಿ ವ್ಯಾಪ್ತಿಯಲ್ಲಿ 100 ಫಾರಂಗಳನ್ನು ಮನೆ ಮನೆಗೆ ವಿತರಿಸಲಾಗಿದೆ. ಅದರಲ್ಲಿ 30ರಷ್ಟು ಫಾರಂಗಳಲ್ಲಿ ಮಾಹಿತಿ ಕೊರತೆಯಿಂದ ತಪ್ಪಾಗಿ ಭರ್ತಿ ಮಾಡಲಾಗಿದೆ.…
ಸೋಮವಾರಪೇಟೆ ಜು.10 NEWS DESK : ರೋಟರಿ ಸಂಸ್ಥೆ ಸೇವೆ, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳಿಗೆ ಬದ್ಧವಾಗಿರುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯಾಗಿದೆ ಎಂದು ರೋಟರಿ ಸಂಸ್ಥೆಯ ಮಾಜಿ ಜಿಲ್ಲಾ ಪ್ರಾಂತಪಾಲ ಅಭಿನಂದನ್ ಶೆಟ್ಟಿ ಹೇಳಿದರು. ಪಟ್ಟಣದ ಜಾನಕಿ ಕನ್ವೆನ್ಷನ್ ಹಾಲ್ನಲ್ಲಿ ನಡೆದ ರೋಟರಿ ಹಿಲ್ಸ್ ಸೋಮವಾರಪೇಟೆ 2026–27ನೇ ಸಾಲಿನ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿಯ ವಿಶ್ವವ್ಯಾಪಿ ಸಾಧನೆಗಳಲ್ಲಿ ಪೋಲಿಯೋ ನಿರ್ಮೂಲನಾ ಅಭಿಯಾನ ಪ್ರಮುಖವಾಗಿದ್ದು, ಸಮಾಜಸೇವಾ ಮನೋಭಾವ ಹಾಗೂ ಉತ್ತಮ ವ್ಯಕ್ತಿತ್ವ ಹೊಂದಿರುವ ಯುವಕರು ರೋಟರಿ ಸದಸ್ಯರಾಗಿ ಸೇರ್ಪಡೆಗೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ನಂತರ ಅಭಿನಂದನ್ ಶೆಟ್ಟಿ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ರೋಟರಿ ಸದಸ್ಯತ್ವ ವಿಸ್ತರಣಾ ಸಮಿತಿ ಅಧ್ಯಕ್ಷ ಎಚ್.ಟಿ. ಅನಿಲ್ ಮಾತನಾಡಿ, ದಾಖಲೆಯ ಸದಸ್ಯತ್ವ ನೋಂದಣಿ ಮಾಡಿದ ಕೀರ್ತಿ ಸೋಮವಾರಪೇಟೆ ರೋಟರಿ ಹಿಲ್ಸ್ಗೆ ಸಲ್ಲುತ್ತದೆ. ರೋಟರಿ ಜಿಲ್ಲೆ 3181ರಲ್ಲಿ ಕೇವಲ ಎಂಟು ದಿನಗಳಲ್ಲಿ…
ಮಡಿಕೇರಿ NEWS DESK ಜು.10 : ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮತ್ತು ಬಿಸಿಯೂಟ ನೌಕರರ ಸಂಘ ಇಂದು “ಕರಾಳ ದಿನ”ವನ್ನಾಗಿ ಘೋಷಿಸಿಕೊಂಡು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿತು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ಅಂಗನವಾಡಿ ನೌಕರರ ಸಂಘ ಮತ್ತು ಬಿಸಿಯೂಟ ನೌಕರರ ಸಂಘದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರಿಗೆ ಮನವಿ ಸಲ್ಲಿಸಿದರು. *ಬೇಡಿಕೆಗಳು* ರಾಜ್ಯ ಸರ್ಕಾರ ಈ ಹಿಂದೆ ಚುನಾವಣೆ ಸಂದರ್ಭ ನಿಡಿದ್ದ ಭರವಸೆಯಂತೆ ಅಂಗನವಾಡಿ ಕಾಯ್ಕತೆರ್ಯರಿಗೆ 15 ಸಾವಿರ ರೂ. ಮತ್ತು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಕನಿಷ್ಟ ಗೌರವ ಧನವನ್ನು ಜಾರಿ ಮಾಡಬೇಕು, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಎಲ್ಕೆಜಿ ಮತ್ತು ಯುಕೆಜಿ ವಿಸ್ತರಣೆ ಆಗಬೇಕು ಮತ್ತು ರಾಜ್ಯದ 10ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ -ಯುಕೆಜಿ ಆರಂಭಕ್ಕೆ ಅನುದಾನ…
ಮಡಿಕೇರಿ ಜು.9 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ತಮ್ಮ ಜನ್ಮದಿನದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ, ಕ್ಷೇತ್ರದಾದ್ಯಂತ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು. :: ದೇವಾಲಯಕ್ಕೆ ಭೇಟಿ :: ಶಾಸಕರು ಮೊದಲಿಗೆ ಪ್ರಸಿದ್ಧ ಭಗಂಡೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಲಕಾವೇರಿಗೆ ತೆರಳಿ ತಾಯಿ ಕಾವೇರಿಗೆ ಪ್ರಾರ್ಥನೆ ಸಲ್ಲಿಸಿ, ಕ್ಷೇತ್ರದ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. :: ಮಕ್ಕಳೊಂದಿಗೆ ಜನ್ಮದಿನದ ಸಂಭ್ರಮ :: ಧಾರ್ಮಿಕ ಕಾರ್ಯಕ್ರಮಗಳ ನಂತರ ಭಾಗಮಂಡಲದ ಅಟಲ್ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕರು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದೇ ಸಂದರ್ಭ ಮಕ್ಕಳಿಗೆ ಜೀವನದಲ್ಲಿ ಶಿಸ್ತು ಮತ್ತು ವಿದ್ಯಾಭ್ಯಾಸದ ಮಹತ್ವದ ಕುರಿತು ಸಲಹೆ ನೀಡಿದರು. :: ರಸ್ತೆ ಹಾಗೂ ಬಸ್ ತಂಗುದಾಣ ಲೋಕಾರ್ಪಣೆ :: ಭಾಗಮಂಡಲ ಹಾಗೂ ಕುಂದಚೇರಿಯಲ್ಲಿ ನೂತನವಾಗಿ ನಿರ್ಮಾಣವಾದ ರಸ್ತೆಗಳನ್ನು…






