ಲೇಖಕ: admin

ಮಡಿಕೇರಿ ಜ.29 NEWS DESK : ಗೌಡ ಈವ್ನಿಂಗ್ ಸ್ಟಾರ್ ಸಂಘದ ವತಿಯಿಂದ ಏ.13 ರಿಂದ ಹದಿನೈದು ದಿನಗಳ ಕಾಲ ಮರಗೋಡಿನ ಭಾರತೀ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ರಿಕೆಟ್, ಹಗ್ಗಜಗ್ಗಾಟ ಮತ್ತು ಮನೋರಂಜನಾ ಕಾರ್ಯಕ್ರಮಗಳ “ಗೌಡ ಕುಟುಂಬ ಕಲರವ-2026” ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕಟ್ಟೆಮನೆ ರೋಷನ್ ಅವರು ಗೌಡ ಕುಟುಂಬ ಕಲರವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೌಡ ಕುಟುಂಬಗಳ ಸುಮಾರು 100 ರಿಂದ 150 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಬಾರಿ ಯಾವುದೇ ಕುಟುಂಬ ತಂಡದಲ್ಲಿ ಆಟಗಾರರ ಕೊರತೆ ಇದ್ದಲ್ಲಿ ಮಹಿಳಾ ಆಟಗಾರರನ್ನು ಸೇರಿಸಿಕೊಳ್ಳಲು ಅವಕಾಶವನ್ನು ನೀಡಿರುವುದಲ್ಲದೆ, ಅವರಿಗೆ ಥ್ರೋ ಬೌಲಿಂಗ್‍ಗೂ ಅವಕಾಶ ನೀಡಲಾಗಿದೆ ಎಂದರು. ಆಸಕ್ತ ತಂಡಗಳು ಮಾ.31ರ ಒಳಗಾಗಿ ನೋಂದಣಿ ಶುಲ್ಕ 3 ಸಾವಿರ ರೂ.ಗಳೊಂದಿಗೆ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಆಸಕ್ತರು ಮಗೇರನ ರಂಜು ಮೊ.8762249317, ಬಿದ್ರುಪಣೆ ದೀಪು ಮೊ.9482395358, ಬೊಳ್ಳೂರು ಮುನ್ನ ಮೊ.9483678377 ನ್ನು ಸಂಪರ್ಕಿಸಬಹುದು. ಗೌಡ ಸಮೂಹದ ಕುಟುಂಬವಾರು ಹಗ್ಗ ಜಗ್ಗಾಟ…

Read More

ಮಡಿಕೇರಿ ಜ.29 NEWS DESK : ಮೈಸೂರಿನಿಂದ ಕೊಡಗು ಜಿಲ್ಲೆಯ ಕುಶಾಲನಗರದವರೆಗಿನ ಉದ್ದೇಶಿತ ರೈಲು ಸಂಪರ್ಕ ಯೋಜನೆ ಸ್ಥಗಿತವಾಗಿಲ್ಲ, ಬದಲಾಗಿ ಹಿನ್ನಡೆಯಾಗಿದೆ. ಭೂ ಸ್ವಾಧೀನ ಪ್ರಕ್ರಿಯೆಯಲ್ಲಿನ ರಾಜ್ಯ ಸರಕಾರದ ವಿಳಂಬವೇ ಇದಕ್ಕೆ ಪ್ರಮುಖ ಕಾರಣವೆಂದು ಮೈಸೂರು- ಕೊಡಗು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲು ಮಾರ್ಗದ ಈ ಯೋಜನೆ ಜಾರಿಯಾಗುವ ಪ್ರದೇಶಗಳಲ್ಲಿ ರಾಜ್ಯ ಸರಕಾರ ಭೂ ಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕಾಗಿತ್ತು. ಆದರೆ ಸಾಕಷ್ಟು ಮನವಿ ಬಳಿಕವೂ ಭೂಸ್ವಾಧೀನ ನಡೆಸದೆ ವಿಳಂಬ ನೀತಿ ಅನುಸರಿಸಿದೆ ಎಂದು ಟೀಕಿಸಿದರು. ಮತ್ತೊಮ್ಮೆ ರಾಜ್ಯ ಸರಕಾರಕ್ಕೆ ಯೋಜನೆ ಬಗ್ಗೆ ಮನವರಿಕೆ ಮಾಡಿ, ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಕೋರಲಾಗುತ್ತದೆ. ಉದ್ದೇಶಿತ ರೈಲು ಸಂಪರ್ಕ ಯೋಜನೆ ಆರ್ಥಿಕವಾಗಿ ಲಾಭದಾಯಕವಲ್ಲ ಎನ್ನುವುದು ಯೋಜನೆ ವಿಳಂಬಕ್ಕೆ ಕಾರಣವಲ್ಲ. ಕೆಲವೊಮ್ಮೆ ಆರ್ಥಿಕ ಲಾಭ ನೋಡುವುದಕ್ಕಿಂತ ಉದ್ದೇಶಿತ ಸ್ಥಳಗಳಿಗೆ ರೈಲು ಸಂಪರ್ಕ ಕಲ್ಪಿಸುವ ಸಾಧ್ಯತೆ ಬಗ್ಗೆ ಗಮನ ನೀಡುವುದು ಮುಖ್ಯ ಎಂದು ಯದುವೀರ್ ಅಭಿಪ್ರಾಯಪಟ್ಟರು.

Read More

ಮಡಿಕೇರಿ ಜ.29 NEWS DESK : ಮಹಾತ್ಮ ಗಾಂಧಿ ಪರಿಕಲ್ಪನೆಯ ಗ್ರಾಮ ಸ್ವರಾಜ್ಯದ ಚಿಂತನೆಗಳಡಿ ರೂಪಿಸಿರುವ ವಿಬಿ ರಾಮ್ ಜಿ ಯೋಜನೆಯನ್ನು ಕಾಂಗ್ರೆಸ್ ಪಕ್ಷ  ಉದ್ದೇಶಪೂರ್ವಕವಾಗಿ ವಿರೋಧಿಸುತ್ತಿದೆ ಮತ್ತು ಅಪಪ್ರಚಾರದಲ್ಲಿ ತೊಡಗಿದೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದ ಪರಿಕಲ್ಪನೆಯಡಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಮೂರು ಬಾರಿ ಪ್ರಧಾನಮಂತ್ರಿಗಳಾಗಿರುವ ನರೇಂದ್ರ ಮೋದಿಯವರನ್ನು ವಿರೋಧಿಸುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ವಿಬಿ ರಾಮ್ ಜಿ ಯೋಜನೆಯ ವಿರುದ್ಧ ಮಾತನಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಹಳ ಹಿಂದಿನಿಂದಲು ನರೇಂದ್ರ ಮೋದಿಯವರನ್ನು ವಿರೋಧಿಸಿಕೊಂಡು ಬರುತ್ತಿರುವ ಕಾಂಗ್ರೆಸ್ ಇದೀಗ ವಿಬಿ ರಾಮ್ ಜಿ ಯೋಜನೆಯನ್ನು ವಿರೋಧಿಸುತ್ತಿದೆ. ಇಂತಹ ಮನಸ್ಥಿತಿಯಿಂದ ಕೇಂದ್ರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಸೇರಿದಂತೆ ವಿವಿಧ ಯೋಜನೆಗಳಿಗೆ ರಾಜ್ಯದಲ್ಲಿ ಹಿನ್ನಡೆಯಾಗುವಂತಾಗಿದೆ ಎಂದು ಯೆಂದು ಬೇಸರ ವ್ಯಕ್ತಪಡಿಸಿದರು.  ಮಹಾತ್ಮಾ ಗಾಂಧೀಜಿ ಮನ್‍ರೇಗಾ ಯೋಜನೆ 2005ರಲ್ಲಿ ಆರಂಭಗೊಂಡಿತು, ಇದೀಗ ನಾವು 2026ನೇ ಸಾಲಿನಲ್ಲಿದ್ದೇವೆ. ಈ ನಡುವಿನ…

Read More

ಕುಶಾಲನಗರ ಜ.29 NEWS DESK : ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ (ಐಸಿಟಿ: ಇನಫರ್ಮೇಶನ್ ಅಂಡ್ ಕಮ್ಮೂನಿಕೇಶನ್ : Information and communication technology ) ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಹಾಗೂ ಸೋಮವಾರಪೇಟೆ ತಾಲ್ಲೂಕು ಹಂಡ್ಲಿ ಸರ್ಕಾರಿ ಪ್ರೌಢಶಾಲೆಯ  ಇಂಗ್ಲೀಷ್ ಭಾಷಾ ಶಿಕ್ಷಕ ವಿಕ್ರಾಂತ್ ಕೇಳ್ಕರ್ ಅವರು ಎಸ್‌ಎಸ್‌ಎಲ್‌ಸಿ ಇಂಗ್ಲೀಷ್ ಪರೀಕ್ಷೆಯ ಫಲಿತಾಂಶ ಅಭಿವೃದ್ಧಿಗಾಗಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಸರಳ ವಿಧಾನದಲ್ಲಿ ಸಿದ್ಧಪಡಿಸಿರುವ ಇ- ಮೇಜಿನೇಟೆಡ್ ಲೆಸನ್ಸ್ ( I-mage-nated lessons – ಎಸ್‌ಎಸ್‌ಎಲ್‌ಸಿ ಇಂಗ್ಲೀಷ್ ಪಾಠಗಳು ನನ್ನ ಕಲ್ಪನೆಯಂತೆ) ಎಂಬ ಆಂಗ್ಲಭಾಷಾ ಕಲಿಕಾ ಪುಸ್ತಕವನ್ನು ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ( ಡಯಟ್ ) ಯಲ್ಲಿ  ಡಯಟ್ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರಾಮಚಂದ್ರರಾಜೇ ಅರಸ್ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶ ಹಾಗೂ ಕನ್ನಡ ಮಾಧ್ಯಮದ ಕೆಲವು ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ ಎನಿಸಿರುವ…

Read More

ಸುಂಟಿಕೊಪ್ಪ ಜ.29 NEWS DESK : ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ಆಲ್ ಇಂಡಿಯಾ ಫುಟ್ಬಾಲ್ ಹಬ್ಬಕ್ಕೆ ಸಾಕ್ಷಿಯಾಗಲು ಸಜ್ಜಾಗಿದೆ. ‘ಮಿಡ್‌ಸಿಟಿ ಎಸ್‌ಎಂ ವತಿಯಿಂದ 3ನೇ ವರ್ಷ ಆಲ್ ಇಂಡಿಯಾ 5ಸ್ ಫುಟ್ಬಾಲ್ ಪಂದ್ಯಾವಳಿ’ ಜ.30, 31 ಹಾಗೂ ಫೆ.1 ರಂದು ಸುಂಟಿಕೊಪ್ಪದ ಜಿಎಂಪಿ ಶಾಲಾ ಮೈದಾನದಲ್ಲಿ ನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ ತಂಡಗಳು ಭಾಗವಹಿಸುತ್ತಿದ್ದು, ಈ ಪ್ರತಿಷ್ಠಿತ ಟೂರ್ನಿಯಲ್ಲಿ ಒಟ್ಟು 32 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಈಗಾಗಲೇ ಫುಟ್ಬಾಲ್ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಯುವ ಕ್ರೀಡಾಳುಗಳ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆಯಾಗಲಿರುವ ಈ ಪಂದ್ಯಾವಳಿ ಕೊಡಗು ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆಯಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪಂದ್ಯಾವಳಿಯ ವಿಜೇತ ತಂಡಕ್ಕೆ ರೂ. 2,05,000 ನಗದು ಬಹುಮಾನ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ. 1,05,000 ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿಗಳನ್ನು ನೀಡಲಾಗುವುದು. ಇಷ್ಟು ದೊಡ್ಡ ಮೊತ್ತದ ಬಹುಮಾನ ಘೋಷಣೆಯೇ ದೇಶದಾದ್ಯಂತ ತಂಡಗಳನ್ನು ಆಕರ್ಷಿಸುತ್ತಿದೆ.  ಟೂರ್ನಿಗೆ ಪ್ರವೇಶ…

Read More

ಬೆಂಗಳೂರು ಜ.29 NEWS DESK :  ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಗಣರಾಜ್ಯೋತ್ಸವ ಶಿಬಿರ -2026 (ಆರ್ ಡಿಸಿ -2026) ನಲ್ಲಿ ಕರ್ನಾಟಕ ಮತ್ತು ಗೋವಾದ ಎನ್ ಸಿಸಿ ನಿರ್ದೇಶನಾಲಯ ಸತತ 2ನೇ ಬಾರಿಗೆ ಪ್ರತಿಷ್ಠಿತ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ದೇಶಾದ್ಯಂತ 17 ನಿರ್ದೇಶನಾಲಯಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಒಟ್ಟಾರೆ, ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆರ್ ಡಿಸಿ -2026ನಲ್ಲಿ ಭಾಗವಹಿಸಿದ್ದ ಎಲ್ಲ 16 ನಿರ್ದೇಶನಾಲಯಗಳನ್ನು ಹಿಂದಿಕ್ಕಿ ಕರ್ನಾಟಕ ಮತ್ತು ಗೋವಾದ ಕೆಡೆಟ್ ಗಳು ಅತ್ಯುತ್ತಮ ಪಥಸಂಚಲನ , ಫೈರಿಂಗ್ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಸಾಧಾರಣ ಪ್ರದರ್ಶನಗಳನ್ನು ನೀಡಿದ್ದಾರೆ. ಈ ಗಮನಾರ್ಹ ಸಾಧನೆಯು ನಿರ್ದೇಶನಾಲಯದ ಸ್ಥಿರ ಶ್ರೇಷ್ಠತೆ, ಶಿಸ್ತು ಹಾಗೂ ಉನ್ನತ ತರಬೇತಿ ಮಾನದಂಡಗಳ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ರಕ್ಷಣಾ ಸಚಿವಾಲಯದ ಪ್ರಕಾರ, ವರ್ಷವಿಡೀ ವ್ಯಾಪಕ ಶ್ರೇಣಿಯ ಎನ್ ಸಿಸಿ ಚಟುವಟಿಕೆಗಳಲ್ಲಿ ಸ್ಥಿರವಾದ ಬಹುವಿಧದ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ನಿರ್ದೇಶನಾಲಯಕ್ಕೆ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿಯನ್ನು ನೀಡಲಾಗುವುದು. ಮೌಲ್ಯಮಾಪನ ಮಾನದಂಡಗಳಲ್ಲಿ ಪ್ರಮುಖವಾಗಿ…

Read More

ಕುಶಾಲನಗರ ಜ.29 NEWS DESK : ಗೊಂದಿಬಸವನಹಳ್ಳಿ ರಸ್ತೆಯಲ್ಲಿ ಇರುವ  ಬಲಮರಿ ಗಣಪತಿ ದೇವಾಲಯದ 28ನೇ ವಾರ್ಷಿಕೋತ್ಸವ  ಹಾಗೂ ಪೂಜಾ ಕಾರ್ಯಕ್ರಮ ಕಳೆದ ಎರಡು ದಿನಗಳಿಂದ ಶ್ರದ್ಧಾಭಕ್ತಿಯಿಂದ ನೆರವೇರಿತು.  ಬುಧವಾರ ಕಳಸ ಸ್ಥಾಪನೆ, ಶುದ್ದಿ ಪುಣ್ಯಾಹ, ಗಣಪತಿ ಹೋಮ, ನವಗ್ರಹ ಪೂಜೆ ಸೇರಿದಂತೆ ಇತರೇ ಧಾರ್ಮಿಕ ಕಾರ್ಯಗಳು ಜರುಗಿದವು. ಗುರುವಾರ ಬೆಳಗ್ಗೆ ಗಣಪತಿ ಹೋಮ, ಸ್ವಾಮಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ಗಣಪತಿ ದೇವರನ್ನು ಬಗೆ ಬಗೆಯ ಪುಷ್ಪಗಳಿಂದ ಅಲಂಕಾರ ಮಾಡಿ ಮಹಾ ಮಹಾ ಮಂಗಳಾರತಿ ನೆರವೇರಿಸಲಾಯಿತು. ಬಳಿಕ ನೆರೆದ ಭಕ್ತರಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನೆರವೇರಿತು. ದೇವಾಲಯದ ಅರ್ಚಕ ಪ್ರಕಾಶ್ ಭಟ್  ನೇತೃತ್ವದ ಅರ್ಚಕರ ತಂಡದಿಂದ ಪೂಜಾ ವಿಧಿಗಳು ನಡೆದವು. ದೇವಾಲಯ ಸಮಿತಿ ಗೌರವಾಧ್ಯಕ್ಷ  ಎಂ.ಕೆ.ದಿನೇಶ್, ನಿಕಟಪೂರ್ವ ಅಧ್ಯಕ್ಷ ರೇಣುಕುಮಾರ್, ಪ್ರಭಾರ ಅಧ್ಯಕ್ಷ ಕೆ.ವಿ.ಅರುಣ್, ಉಪಾಧ್ಯಕ್ಷ  ಶಿವರಾಂ, ಖಜಾಂಚಿ ಬಿ.ಸಿ.ಆನಂದ್, ನಿರ್ದೇಶಕ ರಾದ ಗೋವಿಂದರಾಜ್, ರಾಮಕೃಷ್ಣಾಚಾರ್, ಪೂವಯ್ಯ, ಮುತ್ತಣ್ಣ, ಲಿಂಗಂ, ಜಿ.ಬಿ.ಜಗದೀಶ್, ಲವಕುಮಾರ್,ಭೀಮಯ್ಯ, ಎಸ್.ನಾಗರಾಜು,ಹನುಮರಾಜ್ ಸೇರಿದಂತೆ ಭಕ್ತ ಸಂಕುಲ ನೆರೆದಿತ್ತು.

Read More

ಕುಶಾಲನಗರ ಜ.29 NEWS DESK : ಪ್ರತಿಭೆಗಳಿಗೆ ಸೂಕ್ತ ವೇದಿಕೆ‌ ಒದಗಿಸಿ ಅವರಲ್ಲಿನ ಕಲೆಯನ್ನು ಪ್ರೋತ್ಸಾಹಿಸುವ ಮೂಲಕ‌ ಕಲಾವಿದರ ಬೆನ್ನು ತಟ್ಟುವ ಕೆಲಸ‌ ಮಾಡಬೇಕಿದೆ ಎಂದು ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷೆ ಡಾ.ನಯನ ಹರಿಶ್ಚಂದ್ರ ಹೇಳಿದರು. ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಗುಮ್ಮನಕೊಲ್ಲಿಯ ವಾಲ್ಮೀಕಿ ಭವನದಲ್ಲಿ ನಡೆದ‌ ಸ್ವರ ಸಂಭ್ರಮ ಕರೋಕೆ ಗಾಯನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಸ್ವರ ಸಂಭ್ರಮ ಸ್ಪರ್ಧಾ ಕಾರ್ಯಕ್ರಮವಲ್ಲ. ಬದಲಿಗೆ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ. ಸಂಗೀತ ನಮ್ಮ‌ ಜೀವನದ ಅವಿಭಾಜ್ಯ ಅಂಗ. ಸುಮಧುರ ಗೀತೆಗಳು ಮನಸ್ಸಿನ ದಣಿವಾರಿಸುತ್ತದೆ. ಈ ನಿಟ್ಟಿನಲ್ಲಿ ಗಾಯನ ಕಲಾವಿದರನ್ನು ಪ್ರೋತ್ಸಾಹಿಸಲು, ಕಲೆಯನ್ನು ಪರಿಚಯಿಸಲು ಇಂತಹ ಕಾರ್ಯಕ್ರಮಗಳು ಅತ್ಯವಶ್ಯಕ ಎಂದರು. ಕೊಡಗು, ಮೈಸೂರು, ಹಾಸನ ಜಿಲ್ಲೆಗಳ ವಿವಿಧೆಡೆಗಳಿಂದ ಆಗಮಿಸಿದ್ದ 30ಕ್ಕೂ ಅಧಿಕ ಗಾಯಕರು ಸುಮಧುರ ಗೀತೆಗಳ ಮೂಲಕ ಮನರಂಜಿಸಿದರು. ಪಾಲ್ಗೊಂಡ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಿನಿಮಾ ಕಲಾವಿದರು ಸೇರಿದಂತೆ ಸ್ಥಳೀಯ ಪ್ರತಿಭೆಗಳಿಂದ ನೃತ್ಯ…

Read More

ಕುಶಾಲನಗರ ಜ.29 NEWS DESK :  ರೋಟರಿ ಕುಶಾಲನಗರ ಮೂಲಕ ಹಸಿ ಕಸದ ನಿರ್ವಹಣೆ ಯೋಜನೆಯೊಂದಿಗೆ ಸ್ವಚ್ಛ ಕುಶಾಲನಗರ ಅಭಿಯಾನ ಫೆ.1 ರಿಂದ ಹಮ್ಮಿಕೊಳ್ಳಲಾಗುತ್ತದೆ ಎಂದು ರೋಟರಿ ಅಧ್ಯಕ್ಷರಾದ ಮನು ಪೆಮ್ಮಯ್ಯ ತಿಳಿಸಿದ್ದಾರೆ.  ಕುಶಾಲನಗರ ರೋಟರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕುಶಾಲನಗರ ರೋಟರಿಯ ಸುವರ್ಣ ಮಹೋತ್ಸವ ಅಂಗವಾಗಿ ಈಗಾಗಲೇ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ ತಿಂಗಳ ಅಂತ್ಯ ತನಕ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ವಿವಿಧ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.  ಸಾರ್ವಜನಿಕರ ಸಹಕಾರದೊಂದಿಗೆ ಸ್ವಚ್ಛ ಕುಶಾಲನಗರ ನಿರ್ಮಿಸುವುದು ಸುವರ್ಣ ಮಹೋತ್ಸವದ ಧ್ಯೇಯವಾಗಿದೆ ಎಂದು ಹೇಳಿದ ಅವರು ಈ ಸಂಬಂಧ ಕುಶಾಲನಗರ ಪಟ್ಟಣದಲ್ಲಿ ಒಂದು ತಿಂಗಳ ಕಾಲ ವಾಹನಗಳ ಮೂಲಕ ನಾಗರಿಕರಿಗೆ ಕಸ ವಿಲೇವಾರಿ ಬಗ್ಗೆ ಮಾಹಿತಿ ಅರಿವು ನೀಡುವ ಕೆಲಸ ನಡೆಯಲಿದೆ ಇದರೊಂದಿಗೆ ನಮ್ಮ ತಂಡ ಪ್ರತಿ ಮನೆಮನೆಗೆ ತೆರಳಿ ಸ್ವಚ್ಛತಾ ಬಗ್ಗೆ ಮಾಹಿತಿ ನೀಡಿ ಸಹಿ ಸಂಗ್ರಹ ಯೋಜನೆ…

Read More

ನಾಪೋಕ್ಲು ಜ.29 NEWS DESK : ಕಕ್ಕಬ್ಬೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವು ಕಕ್ಕಬ್ಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಜರುಗಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ.ಎ.ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು ಉದ್ಘಾಟಿಸಿ, ಕಲಿಕಾ ಹಬ್ಬಕ್ಕೆ ಶುಭ ಹಾರೈಸಿದರು. ನಂತರ ಮಕ್ಕಳಿಂದ ವಿವಿಧ ಕಲಿಕಾ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯ ವಿಜೇತರರಿಗೆ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭ ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪೊಂಗೆರ ಶಿಲ್ಪಾ, ಕಕ್ಕಬೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ವೈ.ಅಶೋಕ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಸಫಿಯ, ಇಂದಿರಾ, ಕಕ್ಕಬೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಯವರಾದ ಕಲ್ಪನಾ ಪಿ.ಆರ್., ಯವಕಪಾಡಿ ಶಾಲೆಯ ಎಸ್‍ಡಿಎಂಸಿ ಸದಸ್ಯರಾದ ಗಿರಿಜಾ, ಕಕ್ಕಬೆ ಶಾಲೆಯ ಮುಖ್ಯೋಪಾಧ್ಯಾಯರಾದ ಮಾಲತಿ ಕ್ಲಸ್ಟರ್ ನ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದಾನಿಗಳಾದ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿನ್ನಪ್ಪ ವಿದ್ಯಾರ್ಥಿಗಳಿಗೆ ಸೇರಿದಂತೆ ಆಗಮಿಸಿದ ಸರ್ವರಿಗೂ…

Read More