ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಕಚೇರಿ ಸಿಬ್ಬಂದಿಗಳು ಮತ್ತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಆ.15 NEWS DESK : ಕಾಟಕೇರಿಯ ಕೂರನಬಾಣೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ನಳಿನಿ ಧ್ವಜಾರೋಹಣ ನೆರವೇರಿ ದಿನದ ಮಹತ್ವ ತಿಳಿಸಿದರು. ಮದೆ ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಪಿ.ಎ.ಚಂದ್ರಾವತಿ, ಶ್ರೀದೇವಿ, ಶ್ರೀ ಲಕ್ಷ್ಮಿ ಸ್ವಸಾಹ ಸಂಘದ ಪದಾಧಿಕಾರಿಗಳು, ಸ್ವಯಂ ಸೇವಾ ಸಂಘ ಮತ್ತು ಗ್ರಾಮಸ್ಥರು, ಪುಟಾಣಿ ಮಕ್ಕಳು ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ಹಂಚಲಾಯಿತು.
ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿ ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿತು. ಸಿ ಮತ್ತು ಡಿ ಜಾಗದ ಸಮಸ್ಯೆಯಿಂದ ರೈತರಿಗೆ ಉಂಟಾಗಿರುವ ಅನಾನುಕೂಲಗಳ ಬಗ್ಗೆ ಸಭೆಯಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ.ಲೋಕೇಶ್, ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಹೋರಾಟಗಳು ನಡೆಯುತ್ತಿದ್ದು, ಈ ವಿಚಾರದ ಬಗ್ಗೆ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಆತಂಕವನ್ನು ದೂರ ಮಾಡುವಂತೆ ಉಸ್ತುವಾರಿ ಸಚಿವರು ಹಾಗೂ ಶಾಸಕದ್ವಯರಿಗೆ ರೈತರ ಪರವಾಗಿ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವರು…
ಮಡಿಕೇರಿ ಆ.15 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮಡಿಕೇರಿಯ ಕೊಡವ ಮಂದ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸ್ವತಂತ್ರ್ಯ ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಂವಿಧಾನದ ಆಶಯದಂತೆ ಕೊಡವರು ಪ್ರತಿಪಾದಿಸಬಹುದಾದ ಹಕ್ಕೊತ್ತಾಯಗಳನ್ನು ವಿವರಿಸಿದರು. ಆದಿಮಸಂಜಾತ ಅನಿಮಿಸ್ಟಿಕ್ ಏಕ ಜನಾಂಗೀಯ ಕೊಡವ ಸಮುದಾಯ ನಿಜಅರ್ಥದಲ್ಲಿ ಸ್ವಾತಂತ್ರ್ಯವನ್ನು ಅನುಭವಿಸಬೇಕಾದರೆ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಸ್ವಆಡಳಿತ ಮತ್ತು ಸ್ವಯಂ ನಿರ್ಣಯದ ಹಕ್ಕುಗಳು ಸಾಕಾರಗೊಳ್ಳಬೇಕಾಗುತ್ತದೆ. ಭಾರತ ದೇಶ ಸ್ವಾತಂತ್ರ್ಯವನ್ನು ಸಾಧಿಸಿ 79 ವರ್ಷಗಳಾಗಿದೆ. ಆದರೆ ಸಂವಿಧಾನದ ವಿಧಿಗಳನ್ನು ಸಂಪೂರ್ಣವಾಗಿ ಜಾರಿಗೆ ತಂದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಲಭಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಆದಿಮಸಂಜಾತ ಅನಿಮಿಸ್ಟಿಕ್ ಏಕ ಜನಾಂಗೀಯ ಕೊಡವರು ಅತ್ಯಂತ ಸೂಕ್ಷ್ಮ ಸಮುದಾಯಕ್ಕೆ ಸೇರಿದವರಾಗಿದ್ದು, ಕೊಡವ ಭಾಷೆ, ಸಂಸ್ಕೃತಿ, ಸಂಪ್ರದಾಯ, ಪರಂಪರೆ, ಜಲ, ಪರಿಸರ ಮತ್ತು ಕೊಡವ ಭೂಮಿಯ ರಕ್ಷಣೆಗಾಗಿ ಸಿಎನ್ಸಿ ಸಂಘಟನೆ ಕಳೆದ 35 ವರ್ಷಗಳಿಂದ ಶಾಂತಿಯುತ ಹೋರಾಟಗಳನ್ನು ನಡೆಸಿಕೊಂಡು…
ಕುಶಾಲನಗರ ಆ.15 NEWS DESK : ಕೊಡಗು ಸೈನಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸೈನಿಕ ಶಾಲೆಯ ಜನರಲ್ ತಿಮಯ್ಯ ಪರೇಡ್ ಮೈದಾನದಲ್ಲಿ ಶಾಲೆಯ ಪ್ರಾಂಶುಪಾರಾದ ಕರ್ನಲ್ ಅಮರ್ ಜೀತ್ ಸಿಂಗ್ ಧ್ವಜಾರೋಹಣ ನೆರವೇರಿ, ಗೌರವ ವಂದನೆ ಸ್ವೀಕರಿಸಿದರು. ನಂತರ ಶಾಲೆಯಲ್ಲಿನ ವೀರಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕರ್ನಲ್ ಅಮರ್ ಜೀತ್ ಸಿಂಗ್, ಶಿಸ್ತು, ನಿಷ್ಠೆ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಮೈಗೂಡಿಸಿಕೊಂಡು ಸುಭದ್ರ ಹಾಗೂ ಭವ್ಯ ಭಾರತದ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ತಮ್ಮ ಜೀವಿತದ ಪ್ರತಿ ಕ್ಷಣದಲ್ಲಿಯೂ ದೇಶಪ್ರೇಮವನ್ನು ಮೈಗೂಡಿಸಿಕೊಂಡು ರಾಷ್ಟ್ರದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕೆಂದು ತಿಳಿಸಿದರು. ಶಾಲೆಯಲ್ಲಿನ ಸರ್ವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಿಕೊಂಡು ಆದರ್ಶ ನಾಗರೀಕರಾಗಬೇಕೆಂದು ತಿಳಿ ಹೇಳಿದರು. ಶಾಲೆ ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್ ಹಾಗೂ ಉಪಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಶಾಲೆಯ ಪ್ರಥಮ ಮಹಿಳೆ ದಿವ್ಯಾಸಿಂಗ್, ಬೋಧಕ, ಬೋಧಕೇತರ…
ಸೋಮವಾರಪೇಟೆ ಆ.15 NEWS DESK : ಸುರಿಯುವ ಮಳೆಯ ನಡುವೆಯೂ ತಾಲ್ಲೂಕು ಆಡಳಿತದಿಂದ 79ನೆ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಾಲ್ಲೂಕು ದಂಡಾಧಿಕಾರಿ ಕೃಷ್ಣಮೂರ್ತಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮಹಾನಾಯಕರ ತ್ಯಾಗ ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆ ಏಕತೆಗೆ ಭಂಗ ಬರಬಾರದು, ಸಾಮರಸ್ಯ ಒಡೆಯಬಾರದು, ಭಾತೃತ್ವ ಹಾಗೂ ಸಹೋದರತೆಯಿಂದ ಇರಬೇಕೆಂದರು. ಮೂಲಭೂತ ರಾಜಕೀಯ ಸಂಹಿತೆಗಳು, ಪ್ರಜೆಗಳ ಹಕ್ಕುಗಳು, ಅಧಿಕಾರ ಹಾಗೂ ಕರ್ತವ್ಯಗಳನ್ನು ನಿಗದಿಪಡಿಸಲು ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲಕ ನಡೆಯುತ್ತಿರುವುದು ಗಮನಾರ್ಹವೆಂದರು. ತಾಲ್ಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜು ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆದಂ, ಚೌಡ್ಲು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೀತಾ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷೆ ಮೋಹಿನಿ, ಚೌಡ್ಲು ಗ್ರಾಮ ಪಂಚಾಯತಿ ಸದಸ್ಯ…
ಮಡಿಕೇರಿ ಆ.15 NEWS DESK : ಮೊದಲ ಸ್ವಾತಂತ್ರ್ಯ ಹೋರಾಟಕ್ಕೂ ಮೊದಲು ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಆರಂಭವಾಗಿತ್ತು. ಅಂದು ಗುಡ್ಡೆಮನೆ ಅಪ್ಪಯ್ಯ ಗೌಡರು ಹಾಗೂ ಕೆದಂಬಾಡಿ ರಾಮಯ್ಯ ಗೌಡರ ನೇತೃತ್ವದ ಅಮರ ಸುಳ್ಯ ದಂಗೆ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿತು ಎಂದು ನಿವೃತ್ತ ಸೇನಾಧಿಕಾರಿ ಮೇಜರ್ ಡಾ.ಕುಶ್ವಂತ್ ಕೋಳಿಬೈಲು ತಿಳಿಸಿದ್ದಾರೆ. ನಗರದ ಸುದರ್ಶನ ವೃತ್ತದ ಬಳಿ ಇರುವ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಯ ಆವರಣದಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಅಂಗಸಂಸ್ಥೆಗಳ ವತಿಯಿಂದ ನಡೆದ 79ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹಿರಿಯರ ತ್ಯಾಗ ಬಲಿದಾನವನ್ನು ನಮ್ಮ ಇಂದಿನ ಪೀಳಿಗೆ ನೆನಪಿಸಿಕೊಳ್ಳಬೇಕು. ಅವರು ಹಾಕಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್, ಹಿರಿಯರ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನು ಅನುಭವಿಸುತ್ತಿರುವ ಇಂದಿನ ಯುವ ಜನತೆ ಜವಾಬ್ದಾರಿಯಿಂದ ನಾಡು ಮತ್ತು ದೇಶ ಕಟ್ಟುವ…
ಭಾಗಮಂಡಲ NEWS DESK ಆ.15 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಭಗಂಡೇಶ್ವರ – ತಲಕಾವೇರಿ ದೇವಾಲಯದ ಪ್ರಬಾರ ಕಾರ್ಯನಿರ್ವಹಣಾ ಅಧಿಕಾರಿಗಳು ಹಾಗೂ ಮಡಿಕೇರಿ ತಾಲ್ಲೂಕು ಕಛೇರಿ ಚುನಾವಣಾ ಶಿರಸ್ತೇದಾರರಾದ ಎನ್.ಜಿ.ಚಂದ್ರಶೇಖರ್ ಅವರು ಧ್ವಜಾರೋಹಣ ನೆರವೇರಿಸಿದರು, ದೇವಾಲಯದ ಸಿಬ್ಬಂದಿವರ್ಗ, ಅರ್ಚಕರು, ತಕ್ಕಮುಖ್ಯಸ್ಥರು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಸ್ಥಳೀಯ ಮುಖಂಡರು ಹಾಗೂ ಭಕ್ತರು ಪಾಲ್ಗೊಂಡಿದ್ದರು. ನೆರೆದಿದ್ದವರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಮಡಿಕೇರಿ ಆ.15 NEWS DESK : ಮಡಿಕೇರಿ ನಗರ ಚೇಂಬರ್ ಘಟಕದಿಂದ ನಗರದ ಚೌಕಿ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪದ್ಮಶ್ರೀ ಪುರಸ್ಕೃತರಾದ ರಾಣಿ ಮಾಚಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಏಕ ಬಳಕೆ ಮುಕ್ತ ಪ್ಲಾಸ್ಟಿಕ್ ನಗರ ಎಂಬ ಘೋಷಣೆಯ ಬಿತ್ತಿ ಪತ್ರವನ್ನು ಬಿಡುಗಡೆಗೊಳಿಸಿ 2ಲೀಟರ್ ವರೆಗಿನ ಕುಡಿಯುವ ನೀರಿನ ಬಾಟಲಿಯನ್ನು ಬಳಸದಂತೆ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಗರ ಚೇಂಬರ್ ನ ನಿರ್ದೇಶಕರು ಮತ್ತು ವರ್ತಕರು ಉಪಸ್ಥಿತರಿದ್ದರು. ನಗರ ಘಟಕ ಅಧ್ಯಕ್ಷರಾದ ಸಂತೋಷ್ ಅನ್ವೇಕರ್ ಸ್ವಾಗತಿಸಿ ವಂದಿಸಿದರು.
ಮಡಿಕೇರಿ ಆ.15 NEWS DESK : ರಾಣಿಪೇಟೆಯ ಪೌರಕಾರ್ಮಿಕರ ವಸತಿ ಗೃಹದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರಸಭಾ ಸದಸ್ಯರಾದ ಮುಸ್ತಫ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನೆರೆದಿದ್ದ ನಿವಾಸಿಗಳಿಗೆ ಸಿಹಿ ವಿತರಿಸಲಾಯಿತು.






