ಲೇಖಕ: admin

ಮಡಿಕೇರಿ ಆ.15 NEWS DESK : ಪಾಲಿಬೆಟ್ಟ ಉಪ ಅಂಚೆ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಂಚೆ ಕಚೇರಿಯ ಉಪ ಪೋಸ್ಟ್ ಮಾಸ್ಟರ್ ಹೆಚ್.ಬಿ.ಗಣೇಶ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಯಂಗ್ ಇಂಡಿಯಾ ಕ್ಲಬ್‍ನ ಸಿ.ಎಂ.ಹ್ಯಾರಿಸ್, ಸಬ್ ಇನ್ಸ್‍ಪೆಕ್ಟರ್ ಮಂಜುನಾಥ್, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಯಂಗ್ ಇಂಡಿಯಾ ಕ್ಲಬ್‍ನ ಸದಸ್ಯರು, ಅಂಚೆ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.

Read More

ವಿರಾಜಪೇಟೆ ಆ.15 NEWS DESK : ವಿರಾಜಪೇಟೆ ಪುರಸಭೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿ ಭಾರತೀಯರ ಪಾಲಿಗೆ ಇಂದು ಅತ್ಯಂತ ಶುಭದಿನ. ಪರಕೀಯರ ಆಳ್ವಿಕೆಯನ್ನು ಹೊಡೆದೋಡಿಸಿ ಭಾರತೀಯರೇ ನಮ್ಮ ದೇಶವನ್ನು ಆಳಲು ಆರಂಭಿಸಿದ ಐತಿಹಾಸಿಕ ದಿನ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರೆಲ್ಲ ನೀಡಿದ ತ್ಯಾಗ, ಬಲಿದಾನವನ್ನು ನಾವೆಲ್ಲರೂ ಸ್ಮರಿಸಲೇಬೇಕು. ಅವರೆಲ್ಲರಿಗೂ ವಂದಿಸುತ್ತಾ, ಸ್ಮರಿಸುತ್ತಾ, ಅವರ ಕೆಚ್ಚೆದೆಯ ಹೋರಾಟವನ್ನು ನೆನೆದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರೆ, ಅದಕ್ಕೆ ನಿಜವಾದ ಅರ್ಥ ದೊರೆತಂತಾಗುತ್ತದೆ ಎಂದು ಬಣ್ಣಿಸಿದರು.  ಈ ಸಂದರ್ಭ ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ತಾಲೂಕು ದಂಡಾಧಿಕಾರಿಗಳು ಹಾಗೂ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಕ ಅಧ್ಯಕ್ಷರು ಹಾಗೂ ಸದಸ್ಯರುಗಳು, ಆಹ್ವಾನಿತ ಗಣ್ಯರು, ಪುರಸಭೆಯ ಪ್ರಮುಖರು ಹಾಗೂ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಆ.15 : ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡರಾಮ ದೇವಾಲಯದ ಆವರಣದಲ್ಲಿ ನಗರಸಭಾ ಸದಸ್ಯ ಮುಸ್ತಫ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಪ್ರತಿಯೊಬ್ಬರು ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ನಂತರ ಸಿಹಿ ಹಂಚಿದರು. ದೇವಾಲಯ ಟ್ರಸ್ಟ್ ನ ಪದಾಧಿಕಾರಿಗಳು, ಶ್ರೀರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಜ್ಯೋತಿ ಯುವಕ ಸಂಘದ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ಆ.15 : ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಲಯದ ಸಹಾಯಕ ಅಭಿಯಂತರರು ಹಾಗೂ ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಪಿ.ಆನಂದನ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಿಲಯದ ಪ್ರಸರಣ ಕಾರ್ಯ ನಿರ್ವಾಹಕರಾದ ಎಂ.ಶಕುಂತಲಾ, ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ಕೆ.ಪಿ.ಶಿವಾನಂದನ್, ಕೆ.ಟಿ.ನಾಗರಾಜ್, ಕೆ.ಎಸ್.ಉದಯಕುಮಾರ್, ಬಿ.ಕೆ. ಲೋಕೇಶ್, ಹೆಚ್.ಆರ್.ಜೀವನ್ ಕುಮಾರ್, ಗ್ರಂಥಪಾಲಕ ಪಂಕಜ್ ಕುಡ್ತರ್ಕರ್ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಅರ್ಪಿಸಿದರು.

Read More

ಮಡಿಕೇರಿ ಆ.15 NEWS DESK : ನಗರದ ಹಿಂದುಸ್ಥಾನ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರಸಭಾ ಸದಸ್ಯರಾದ ಮಸ್ತಾಫಾ ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಕಿ ಕೆ.ಬಿ.ವಿಮಲಾ, ಅಂಗನವಾಡಿ ಶಿಕ್ಷಕಿ ಕೆ.ಬಿ.ಸುಮತಿ, ಸಹಾಯಕಿ ಕೆ.ಎಂ.ಅಂಬಿಕಾ, ಹಳೆ ವಿದ್ಯಾರ್ಥಿಗಳಾದ ಕೆ.ಸಿ.ಜನಾರ್ಧನ, ಹಿರಿಯ ನಾಗರಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು. ಬಳಿಕ ಎಲ್ಲರಿಗೂ ಸಿಹಿ ಹಂಚಲಾಯಿತು.

Read More

ಮಡಿಕೇರಿ ಆ.15 NEWS DESK : ಇಂದಿರಾನಗರದ ಜ್ಯೋತಿ ಯುವಕ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಹಿರಿಯರಾದ ರಜ಼ಾಕ್ ಧ್ವಜಾರೋಹಣ ನೇರವೇರಿಸಿದರು. ಈ‌ ಸಂದರ್ಭ ಯುವಕ‌ ಸಂಘದ ಜಯಕುಮಾರ್, ಮನೋಜ್, ಜಾವೀದ್, ಶ್ರೀಕಾಂತ್, ಮಕ್ಕಳು ಗ್ರಾಮಸ್ಥರು ಉಪಸ್ಥಿತಿ ಇದ್ದರು. ಕಾರ್ಯಕ್ರಮದಲ್ಲಿ ನೆರೆದಿದ್ದವರಿಗೆ ಸಿಹಿ ಹಂಚಲಾಯಿತು.

Read More

ಮಡಿಕೇರಿ ಆ.15 NEWS DESK : ಮೂಡ ಕಚೇರಿಯಲ್ಲಿ  79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.  ಮೂಡ ಅಧ್ಯಕ್ಷರಾದ ರಾಜೇಶ್  ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸದಸ್ಯರಾದ ಚಂದ್ರಶೇಖರ್, ಕಾನೆಹಿತ್ಲು ಮೊಣ್ಣಪ್ಪ, ಸುದಯ್ ನಾಣಯ್ಯ, ಮೀನಾಜ್ ಪ್ರವೀಣ್, ಆಯುಕ್ತರಾದ ಹೇಮಾಮಾಲಿನಿ ಹಾಗೂ ಕಚೇರಿ ಸಿಬ್ಬಂದಿಗಳಾದ ಚೈತ್ರಾ, ಅನಿತಾ ಹಾಜರಿದ್ದರು.

Read More

ಮಡಿಕೇರಿ ಆ.15 NEWS DESK : ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಾಡಿನ ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಪೋಷಕರು ವಹಿಸಬೇಕಾದ ಎಚ್ಚರಿಕೆಗಳ ಕುರಿತು ವಿಶೇಷ ಸಂದೇಶ ನೀಡಲಾಯಿತು. ಜೊತೆಗೆ, ಸ್ವಚ್ಛ ಮತ್ತು ನಿರ್ಮಲ ಸಮಾಜ ನಿರ್ಮಾಣದ ಬಗ್ಗೆಯೂ ಸಭಿಕರಿಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಕೆ.ಬಿ.ಸೂರ್ಯ ಕುಮಾರ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ವೇದಿಕೆಯ ಅಧ್ಯಕ್ಷರಾದ ಮಹೇಶ್ ಆರ್ (ಅಪ್ಪು) ವಹಿಸಿದ್ದರು. ಗೌರವ ಅತಿಥಿಗಳಾಗಿ ನಿವೃತ್ತ ಸೇನಾನಿ ನಂದಿರ ಅಯ್ಯಪ್ಪ, ಪ್ರದೀಪ್ ಪಾಯಸ್, ಸಾಧಿಕ್ ಪಾಷಾ ಹಾಗೂ ನಗರಸಭಾ ಸದಸ್ಯರಾದ ಕೆ. ಎಸ್. ರಮೇಶ್ ಅವರು ಉಪಸ್ಥಿತರಿದ್ದರು. ವೇದಿಕೆಯ ಮಹಿಳಾ ಘಟಕದ ಸದಸ್ಯರು ದೇಶಭಕ್ತಿ ಗೀತೆಗಳನ್ನು ಹಾಡಿ ಎಲ್ಲರ ಗಮನ ಸೆಳೆದರು. ಅಲ್ಲದೆ, ದೇಶಕ್ಕಾಗಿ ವೀರ ಮರಣ ಹೊಂದಿದ ಯೋಧರಿಗೆ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ನಾಗರಿಕರು, ವಿವಿಧ ಸಂಘ…

Read More

ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ವಿಧಾನಪರಿಷತ್ ಮಾಜಿ  ಸದಸ್ಯೆ ವೀಣಾ ಅಚ್ಚಯ್ಯ, ಮುಖಂಡರಾದ ಚಂದ್ರಕಲಾ, ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಉಪಾಧ್ಯಕ್ಷರಾದ ಸುಜು ತಿಮ್ಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಆ.15 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್‌ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಂಸ್ಥೆಯ ಬೋಧಕ ಆಸ್ಪತ್ರೆಯ ನೂತನ ಕಟ್ಟಡದ ಎರಡನೇ ಹಂತದ ಕಾಮಗಾರಿಗೆ ಶಿಲಾನ್ಯಾಸ ನಡೆಯುತ್ತಿರುವುದು ಸಂತಸದ ವಿಚಾರ ಎಂದರು. ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಆರ್ಥಿಕ ಸಲಹೆಗಾರರಾದ  ಸೈಯದ್ ಸಮೀಉಲ್ಲಾ, ಡಾ.ಕಾರ್ಯಪ್ಪ ಕೆ.ಬಿ.‌ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ವೈದ್ಯರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಎಂಬಿಬಿಎಸ್, ಸ್ನಾತಕೋತ್ತರ, ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಂದ ಪಥಸಂಚಲನ ಹಾಗೂ ದೇಶಭಕ್ತಿ ಗಾಯನ ನಡೆಯಿತು.

Read More