ಲೇಖಕ: admin

ನವದೆಹಲಿ ಸೆ.12 NEWS DESK : 15ನೇ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿ.ಪಿ.ರಾಧಾಕೃಷ್ಣನ್ ಅವರಿಗೆ ಇಂದು ಪ್ರಮಾಣವಚನ ಬೋಧಿಸಿದರು. ಸಿ.ಪಿ.ರಾಧಾಕೃಷ್ಣನ್ ಅವರು ಕೆಂಪು ಕುರ್ತಾ ಧರಿಸಿ, ದೇವರ ಹೆಸರಿನಲ್ಲಿ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Read More

ಮಡಿಕೇರಿ ಸೆ.12 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ, ತಾಲೂಕು ಮತ್ತು ಹೋಬಳಿ ಪದಾಧಿಕಾರಿಗಳು ಹಾಗೂ ವಿಶೇಷ ಆಹ್ವಾನಿತರನ್ನೊಳಗೊಂಡ ಪೂರ್ಣ ಪ್ರಮಾಣದ ಕಾರ್ಯಕಾರಿ ಮಂಡಳಿಯ ಸಭೆಯು ಸೆ.14 ರಂದು ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಭಾಂಗಣದಲ್ಲಿ ನಡೆಯಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ವಹಿಸಿಕೊಳ್ಳಲಿದ್ದಾರೆ. ಸಭೆಯಲ್ಲಿ ಮುಂದಿನ ಸಾಲಿನ ಕನ್ನಡ ಕಾರ್ಯಕ್ರಮಗಳು, ನವೆಂಬರ್ ನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ, ತಾಲ್ಲೂಕು ಮತ್ತು ಜಿಲ್ಲಾ ಸಮ್ಮೇಳನಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣ,  ಮುಂದೆ ನಡೆಸುವ ದತ್ತಿ ಕಾರ್ಯಕ್ರಮ ಮತ್ತು ಕನ್ನಡಪರ ಕಾರ್ಯಕ್ರಮ ಸೇರಿದಂತೆ ಹಲವಾರು ವಿಚಾರಗಳ ಚರ್ಚೆ ನಡೆಯಲಿದೆ. ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳೆಲ್ಲರೂ ಈ ಸಭೆಯಲ್ಲಿ ಪಾಲ್ಗೊಂಡು ಕನ್ನಡ ಕಾರ್ಯಕ್ರಮಗಳಿಗೆ ಸಹಕರಿಸಬೇಕಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ ಮುನೀರ್ ಅಹ್ಮದ್, ರೇವತಿ…

Read More

ಮಡಿಕೇರಿ ಸೆ.12 NEWS DESK : ಬೆಂಗಳೂರು ಸಂಜಯ ನಗರ ಕೊಡವ ಸಂಘದ ಮಹಾಸಭೆ ಹಾಗೂ ಒತ್ತೊರ್ಮೆ ಕೂಟ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ, ಶುಭಕೋರಿದರು. ಈ ಸಂದರ್ಭ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.12 NEWS DESK : ನಗರದ ಕೆಎಸ್‌ಆರ್‌ಟಿಸಿ ಡಿಪೋ ಬಳಿಯ ಶಾಂತಿನಿಕೇತನ ಬಡಾವಣೆಯಲ್ಲಿ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 47ನೇ ವರ್ಷದ ಗಣೇಶ ಮೂರ್ತಿಯ ವಿಸರ್ಜನೋತ್ಸವು ಇಂದು (ಸೆ.12) ರಂದು ಭವ್ಯ ಶೋಭಾಯಾತ್ರೆಯೊಂದಿಗೆ ನಡೆಯಲಿದೆ. ಸಂಜೆ 6 ಗಂಟೆಗೆ ಶಾಂತಿನಿಕೇತನ ಬಡಾವಣೆಯಿಂದ ಶೋಭಾಯಾತ್ರೆ ಆರಂಭವಾಗಲಿದ್ದು, ಚಲನ ವಲನಗಳನ್ನೊಳಗೊಂಡ ಭವ್ಯ ಮಂಟಪದಲ್ಲಿ ಲೋಕ ಕಲ್ಯಾಣಕ್ಕಾಗಿ ಮಹಾಗಣಪತಿಯಿಂದ ದೈತ್ಯ ಶತಮಹಿಷಿಯ ಸಂಹಾರ ಮಾಡುವ ಪೌರಾಣಿಕ ಕಥಾಹಂದರವನ್ನು ಪ್ರಸ್ತುತ ಪಡಿಸಲಾಗುತ್ತದೆ. :: ಪ್ರದರ್ಶನ ಸ್ಥಳ :: ಶೋಭಾಯಾತ್ರೆಯ ಮಂಟಪದ ಪ್ರಥಮ ಪ್ರದರ್ಶನ ಶಾಂತಿಕೇತನ ಬಡಾವಣೆಯಲ್ಲಿ ನಡೆಯಲಿದೆ. ನಂತರ ಡಿಪೋ ಬಳಿ, ಜನರಲ್ ತಿಮ್ಮಯ್ಯ ವೃತ್ತ, ನಗರ ಪೊಲೀಸ್ ಠಾಣೆ ಮುಂಭಾಗ, ಹಳೆ ಖಾಸಗಿ ಬಸ್ ನಿಲ್ದಾಣ, ಚೌಕಿ, ಚೌಡೇಶ್ವರಿ ದೇವಾಲಯದ ಬಳಿ ಪ್ರದರ್ಶನ ಇರಲಿದೆ ಎಂದು ಶಾಂತಿನಿಕೇತನ ಯುವಕ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.12 NEWS DESK : ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವಿರಾಜಪೇಟೆ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.  ಥ್ರೋಬಾಲ್‌ನಲ್ಲಿ ಬಾಲಕ ಮತ್ತು ಬಾಲಕಿಯರ ತಂಡ, ಟೇಬಲ್ ಟೆನಿಸ್‌ನಲ್ಲಿ ಬಾಲಕ ಮತ್ತು ಬಾಲಕಿಯರ ತಂಡ ಹಾಗೂ ವಾಲಿಬಾಲ್‌ನಲ್ಲಿ ಬಾಲಕಿಯರ ತಂಡ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಚೆಸ್ ಸ್ಪರ್ಧೆಯಲ್ಲಿ ಅಶ್ವಿ ಮತ್ತು ವಂದನಾ ಆಯ್ಕೆಯಾಗಿದ್ದು, ಕರಾಟೆಯಲ್ಲಿ ಐಶ್ವರ್ಯಾ ಮತ್ತು ರಕ್ಷನ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ ಪ್ರಾಂಶುಪಾಲರು ಭೋದಕ ವರ್ಗ ಅಭಿನಂದನೆ ಸಲ್ಲಿಸಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್ ಗೌಡ ತರಬೇತಿ ನೀಡಿರುತ್ತಾರೆ.

Read More

ಮಡಿಕೇರಿ ಸೆ.12 NEWS DESK : ಸೋಮವಾರಪೇಟೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್, 17 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಇಒ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.12 NEWS DESK : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15 ರಂದು ಶಾಲಾ-ಕಾಲೇಜುಗಳಲ್ಲಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಹಾಗೂ ಬೈಕ್ ಮತ್ತು ಸೈಕಲ್ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ. ಚಿತ್ರ ಕಲಾ ಸ್ಪರ್ಧೆ (ಪೇಯಿಟಿಂಗ್), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಛಾಯಾಚಿತ್ರ ಸ್ಪರ್ಧೆ(ಪೊಟೋಗ್ರಫಿ), ಉನ್ನತ ಶಿಕ್ಷಣ ಇಲಾಖೆ ಮತ್ತು ಭಾಷಣ ಸ್ಪರ್ಧೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಅವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು. ಸೆ.15 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಬೆಂಗಳೂರಿಗೆ ಬೈಕ್ ರ್ಯಾಲಿ ಕಾರ್ಯಕ್ರಮ ಹಾಗೂ ಬೆಳಗ್ಗೆ 7.30 ಗಂಟೆಗೆ ಗಾಂಧಿ ಮೈದಾನದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ವರೆಗೆ ಸೈಕಲ್ ಜಾಥಾ ನಡೆಯಲಿದೆ. ಈ ಜಾಥಾದಲ್ಲಿ ಪಾಲ್ಗೊಳ್ಳುವವರು ಸ್ವಂತ ಬೈಕ್ ಹಾಗೂ ಸೈಕಲ್ ಹೊಂದಿದ್ದು,…

Read More

ಮಡಿಕೇರಿ ಸೆ.12 NEWS DESK : ಪ್ರಸಕ್ತ (2025-26) ಸಾಲಿನ ಯುವಜನೋತ್ಸವ ಹೆಚ್‍ಐ.ವಿ/ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯಲ್ಲಿ ಬೈಕ್ ರ‍್ಯಾಲಿ  ನಡೆಯಿತು.  ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಎಚ್.ಐ.ವಿ/ಏಡ್ಸ್ ಅರಿವು ಆಂದೋಲನ 2025-26ರ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ  ಬೈಕ್  ರ‍್ಯಾಲಿ  ಮೂಲಕ ಜಾಗೃತಿ ಮೂಡಿಸಿದರು. ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಚಕ್ರವರ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ದೀಪಕ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶ್ರೀನಿವಾಸ್ ಅವರು ಹಸಿರು ನಿಶಾನೆ ಮುಖಾಂತರ ಉದ್ಘಾಟಿಸಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅರುಣ್…

Read More

ಮಡಿಕೇರಿ ಸೆ.12 NEWS DESK :  ಕೊಡಗು ಪತ್ರಕರ್ತರ ಸಂಘ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯಿಂದ 2025 ರ ಸೆ.19 ರಂದು  ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗದವರು, ಪತ್ರಿಕಾ ಕ್ಷೇತ್ರದ ಸಿಬ್ಬಂದಿಗಳು, ಪತ್ರಿಕಾ ವಿತರಕರು ಹಾಗೂ ಕುಟುಂಬದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯ 15 ವಿಭಾಗಗಳ ನುರಿತ ತಜ್ಞರುಗಳು ಹಾಗೂ ವೈದ್ಯರುಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ನೇತ್ರ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು, ಇ.ಎನ್.ಟಿ. ತಜ್ಞರು, ಶ್ವಾಸಕೋಶ ತಜ್ಞರು, ದಂತ ವೈದ್ಯಕೀಯ, ಶಸ್ತ್ರ ಚಿಕಿತ್ಸಕರು, ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಶ್ರವಣ ಆರೋಗ್ಯ ತಜ್ಞರು, ಮಾನಸಿಕ ಆರೋಗ್ಯ ತಜ್ಞರು ಮುಂತಾದ 15 ವಿಭಾಗಗಳ ನುರಿತ ತಜ್ಞರು ಈ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಆರೋಗ್ಯಕ್ಕೆ ಸಂಬಂಧಿಸಿದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಆಯುಷ್ಮಾನ್ ಭಾರತ್…

Read More

ಸೋಮವಾರಪೇಟೆ ಸೆ.12 NEWS DESK : ಸೋಮವಾರಪೇಟೆ ತುಳುನಾಡು ಬಿಲ್ಲವ ಮಹಿಳಾ ಸಂಘದ ಸಂಯುಕ್ತ ಆಶ್ರಯದಲ್ಲಿ  ಸೆ.14 ರಂದು ಹತ್ತನೇ ವರ್ಷದ ಆಟಿ ಸಂಭ್ರಮೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಸೋಮವಾರಪೇಟೆ ಮಾನಸ ಹಾಲ್ ಸಭಾಂಗದಲ್ಲಿ  ಬೆಳಗ್ಗೆ 8 ಗಂಟೆಗೆ ಬಿಲ್ಲವ ಸೇವಾ ಸಮಿತಿ ಕುಟುಂಬದವರಿಗೆ ಆಯೋಜಿಸಲಾದ ವಿವಿಧ ಕ್ರೀಡಾಕೂಟವನ್ನು ಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯರು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಬಿ. ಕೆ ಹರಿಪ್ರಸಾದ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸೋಮವಾರಪೇಟೆ ತಾಲ್ಲೂಕು ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ  ಬಿ.ಆರ್.ಚಂದ್ರಹಾಸ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಸಕ ಮಂತರ್ ಗೌಡ, ಕುದ್ರೋಳಿ ದೇವಾಲಯದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಮಾಜಿ ಸಚಿವ ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ಲಿಂಗಪ್ಪ ಪೂಜಾರಿ, ಪ್ರವಾಸಿ ಹಾಗೂ ಸಾಮಾಜಿಕ ಕಾರ್ಯಕರ್ತ ಪದ್ಮನಾಭ,…

Read More