ಮಡಿಕೇರಿ ಆ.14 NEWS DESK : ರಾಷ್ಟ್ರೀಯ ಹೆದ್ದಾರಿ ಜೋಡುಪಾಲ ಬಳಿ ರಸ್ತೆ ಬದಿ ಮಣ್ಣು ಜರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭೇಟಿ ನೀಡಿ ಪರಿಶೀಲಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿಗಳಾದ ಎಂ.ಎಸ್.ರಾಹುಲ್, ರೋಜಾ, ಲಾಯಲ್ ಮೀರಾಂಡ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ್ ಇತರರು ಇದ್ದರು.
ಲೇಖಕ: admin
ಮಡಿಕೇರಿ ಆ.14 NEWS DESK : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವಂತೆ ಗೌರಿ- ಗಣೇಶೋತ್ಸವ ಸಂದರ್ಭ ‘ಡಿಜೆ’ ಬಳಸಕೂಡದು. ಸಮುದಾಯದ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಗಣೇಶೋತ್ಸವ ಸಮಿತಿಗಳು ಶಬ್ದ ಮಿತಿಯ ಮೇಲೆ ನಿಗಾ ಇರಿಸಬೇಕು. ಇಲ್ಲವಾದಲ್ಲಿ ಅಗತ್ಯ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳಲಾಗುತ್ತದೆಂದು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದರು. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ‘ಗೌರಿ-ಗಣೇಶೋತ್ಸವ ಆಯೋಜಕರ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿಜೆಯ ಅತೀ ಹೆಚ್ಚಿನ ಶಬ್ದ ಮಟ್ಟದಿಂದ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಜವಾಬ್ದಾರಿ. ಇದನ್ನು ಉತ್ಸವ ಆಯೋಜಕರು ಗಮನದಲ್ಲಿರಿಸಿಕೊಳ್ಳಬೇಕು ಮತ್ತು ಶಬ್ದ ಮಿತಿಯ ಮೇಲೆ ನಿಗಾ ಇರಿಸಬೇಕು. ಇಲ್ಲವಾದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲೆ ಬೇಕಾಗುವುದರಿಂದ ನಮ್ಮ ನಿಮ್ಮಗಳ ಸಂಬಂಧ ಹಾಳಾಗಬಹುದೆಂದು ಸೂಕ್ಷ್ಮವಾಗಿ ನುಡಿದರು. ಪ್ರೆಶರ್ ಮಿಡ್ ಬಳಕೆ ಅಪಾಯಕಾರಿ- ಉತ್ಸವಗಳ ಸಂದರ್ಭ ಬಳಸುವ ಸ್ಪೀಕರ್ಗಳಲ್ಲಿ ‘ಪ್ರ್ರೆಶರ್ ಮಿಡ್’ಗಳನ್ನು ಬಳಸುವುದು ಅತ್ಯಂತ ಅಪಾಯಕಾರಿ. ಒಂದು ಪ್ರ್ರೆಶರ್ ಮಿಡ್ನಿಂದ 110 ಡೆಸಿಬಲ್ ಪ್ರಮಾಣದ…
ವಿರಾಜಪೇಟೆ ಆ.14 NEWS DESK : ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ತಿತಿಮತಿ (ಪಂಜರ ಪೇಟೆ)ವಿರಾಜಪೇಟೆ ತಾಲೂಕು ಕೊಡಗು ಜಿಲ್ಲೆ ಇಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ (PCMB)ಕ್ಕೆ ಸೇರ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಪ್ರಾಂಶುಪಾಲರು 9448874562 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಆ.14 NEWS DESK : ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ಉಚಿತವಾಗಿ ತ್ರಿವರ್ಣ ಧ್ವಜ ವಿತರಣೆ ಮಾಡಲಾಗುತ್ತಿದ್ದು, ಆಸಕ್ತರು ಸಂಪರ್ಕಿಸುವಂತೆ ಸಂಸ್ಥೆಯ ಪ್ರಮುಖರು ತಿಳಿಸಿದ್ದಾರೆ. ಹರ್ ಘರ್ ತಿರಂಗ ಎನ್ನುವ ಭಾರತೀಯ ಅಂಚೆ ಕಚೇರಿಯ ಪರಿಕಲ್ಪನೆಯಡಿಯಲ್ಲಿ ಸಮರ್ಥ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಲಿಂಗೇಶ್ ಹುಣಸೂರು ಅವರು ಅಂಚೆ ಕಛೇರಿಯಿಂದ 100 ( ನೂರು )ತ್ರಿವರ್ಣ ಧ್ವಜಗಳನ್ನು ಖರೀದಿಸಿ ಅದನ್ನು ಉಚಿತವಾಗಿ ನೀಡುತ್ತಿದ್ದು, ಆಸಕ್ತರು ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕದ ಪ್ರಧಾನ ಸಂಚಾಲಕರಾದ ಜಯಲಕ್ಷ್ಮಿ ಕೆ ಇವರಿಂದ ಪಡೆದುಕೊಳ್ಳಬೇಕಾಗಿ ಸಮರ್ಥ ಕನ್ನಡಿಗರು ಸಂಸ್ಥೆ ವಿನಂತಿಸಿಕೊಂಡಿದೆ.
ಮಡಿಕೇರಿ ಆ.14 NEWS DESK : 41 ಕೋಟಿ ರೂಪಾಯಿ ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯದ ಮಡಿಕೇರಿಯ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಆ.15 ರಂದು ಕಾಮಗಾರಿಯ ಶಿಲಾನ್ಯಾಸ ನಡೆಯಲಿದೆ. ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಿ ಅನುದಾನ ಒದಗಿಸಿದ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಧನ್ಯವಾದ ಸಲ್ಲಿಸಿದರು.
ನಾಪೋಕ್ಲು ಆ.14 NEWS DESK : ವಿದ್ಯಾರ್ಥಿ ಜೀವನದಲ್ಲಿ, ಚಂಚಲ ಮನಸ್ಸನ್ನು ನಿಯಂತ್ರಿಸಲು ಏಕಾಗ್ರತೆ ಮತ್ತು ಶಿಸ್ತು ಬಹಳ ಮುಖ್ಯ ಎಂದು ಬೆಟ್ಟಗೇರಿ ಉದಯ ಪ್ರೌಢ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಭಾರತ ಸರ್ಕಾರ ಕಾಫೀ ಮಂಡಳಿ ನಿರ್ದೇಶಕರಾದ ತಳೂರು ಕಿಶೋರ್ ಕುಮಾರ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮಡಿಕೇರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ, ವಲಯ ಮತ್ತು ಬೆಟ್ಟಗೇರಿ ಉದಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಬೆಟ್ಟಗೇರಿ ಉದಯ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯ ಕುರಿತಂತೆ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳೇ ಉತ್ತಮ…
ನಾಪೋಕ್ಲು ಆ.14 NEWS DESK : ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂಭ್ರಮದ ಪ್ರಯುಕ್ತವಾಗಿ ಸಂಘಟನೆ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಸಂಘಟನೆಯ ಸ್ವಯಂಸೇವಕರಾದ ಧನಂಜಯ ಅಗೋಳಿಕಜೆ ಮಾತನಾಡಿ, ರಕ್ಷಾ ಬಂಧನದ ಮಹತ್ವವನ್ನು ವಿವರಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಹಾಗೂ ವಿಶ್ವದ ಅತಿ ದೊಡ್ದ ಸ್ವಯಂಸೇವ ಸಂಘಟನೆಯಾಗಿದ್ದು, 27 ಸೆಪ್ಟೆಂಬರ್ 1925ರ ವಿಜಯ ದಶಮಿಯ ದಿನ ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿ ಡಾ. ಕೇಶವ ಬಲಿರಾಂ ಹೆಡಗೆವಾರ್ ಈ ಸಂಘಟನೆಯನ್ನು ಹುಟ್ಟುಹಾಕಿದರು. ಹಿಂದೂ ರಾಷ್ಟ್ರೀಯವಾದ ಬಲಪಂಥೀಯ ಸಂಘಟನೆಯೆಂದು ಸಾಮಾನ್ಯವಾಗಿ ಪರಿಗಣಿಸಲ್ಪಡುವ ಈ ಸಂಸ್ಥೆ ಭಾರತದ ನಾಗಪುರದಲ್ಲಿ ತನ್ನ ಮುಖ್ಯ ಕಾರ್ಯಾಲಯ ಹೊಂದಿದೆ. ಹಿಂದೂ ಸಂಘಟನೆ ಮತ್ತು ಐಕ್ಯತೆಯನ್ನು ತನ್ನ ಗುರಿಯನ್ನಾಗಿ ಹೊಂದಿರುವ ಈ ಸಂಸ್ಥೆಗೆ ಹೊಂದಿಕೊಂಡಿರುವ ಇತರ ಸಂಸ್ಥೆಗಳನ್ನು ಒಟ್ಟಾಗಿ ಸೇರಿಸಿ ಸಾಮಾನ್ಯವಾಗಿ “ಸಂಘ ಪರಿವಾರ” ಎಂದು ಕರೆಯಲಾಗುತ್ತದೆ. ರಾಷ್ಟ್ರೀಯ ಸ್ವಯಂಸೇವಕ…
ನಾಪೋಕ್ಲು ಆ.14 NEWS DESK : ಕೊಟ್ಟಮುಡಿ ಕೆ.ಎಂ.ಜೆ, ಎಸ್.ವೈ.ಎಸ್, ಎಸ್.ಎಸ್.ಎಫ್ ಕೊಟ್ಟಮುಡಿ ಶಾಖೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ನಾಪೋಕ್ಲು, ಬೆಟ್ಟಗೇರಿ, ಮಡಿಕೇರಿ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಕೊಟ್ಟಮುಡಿ ಮರ್ಕಝ್ ಸಂಸ್ಥೆಯಿಂದ ಕೊಟ್ಟಮುಡಿ, ಮೂರ್ನಾಡು ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಗಳಲ್ಲಿ ತುಂಬಿಕೊಂಡಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸ್ವಚ್ಚತಾ ಕಾರ್ಯದಲ್ಲಿ ಎಸ್ವೈಎಸ್ ಕೊಟ್ಟಮುಡಿ ಶಾಖೆ ಅಧ್ಯಕ್ಷ ಹುಸೈನ್ ಝುಹ್ರಿ, ಉಪಾಧ್ಯಕ್ಷ ಮೈಸಿ ಕತ್ತಣೀರ, ಕಾರ್ಯದರ್ಶಿ ರಫೀಕ್ ಅಝ್ಹರಿ, ಕೊಡಗು ಜಿಲ್ಲಾ ಇಸಾಬ ಕಾರ್ಯದರ್ಶಿ ಬಷೀರ್, ಮಡಿಕೇರಿ ಡಿವಿಷನ್ ಇಸಾಬ ಕಾರ್ಯದರ್ಶಿ ಅಶ್ಕರ್ ಸಖಾಫಿ, ಕೆ.ಎಂ.ಜೆ ಉಪಾಧ್ಯಕ್ಷ ಶಾದುಲಿ ಹಾಜಿ, ಆರ್.ಎಂ.ಹಸೈನಾರ್, ಸದಸ್ಯರುಗಳಾದ ಖಲೀಲ್ ಹಿಮಮಿ, ಹಮೀದ್ ಮಮ್ಮು, ಮೂಸಾನ್, ಅಬೂಬಕರ್, ಹಂಸ ಬೀಟಿಬಾಣೆ, ಬಸೀಪ, ಝಕರಿಯ್ಯ, ಹಮೀದ್ ಬಲಿಪುರ, ಬಷೀರ್, ಹಸೈನಾರ್ ಬಲಿಪುರ, ಸಿ.ಎ.ಹಸೈನಾರ್, ಆಬಿದ್ ಮತ್ತು ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಆ.14 NEWS DESK : ತುಮಕೂರಿನಲ್ಲಿ ಇನ್ಫನೈಟ್ ಡಾನ್ಸ್ ಸ್ಟುಡಿಯೋ ವತಿಯಿಂದ 6ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ತಂಡ ಪ್ರಥಮ ಸ್ಥಾನ ಪಡೆದುಕೊಳ್ಳುವ ಮೂಲಕ 50,000/- ನಗದು ಹಾಗೂ ಟ್ರೋಫಿ ಯನ್ನು ತನ್ನದಾಗಿಸಿಕೊಂಡಿದೆ. ಸ್ಪರ್ಧೆಯ ತೀರ್ಪುಗಾರರಾಗಿ ಡಾನ್ಸ್ ಕರ್ನಾಟಕ ಡಾನ್ಸ್ ನಾ ಶಶಿ ಮಾಸ್ಟರ್, ಜಗ್ಗ ಮಾಸ್ಟರ್, ರಾಹುಲ್ ರಾವ್, ಶೋಭಿತ ಕಾರ್ಯನಿರ್ವಹಿಸಿದರು. ಮೈಸೂರಿನ ಜಗನ್ ಮೋಹನ್ ಪ್ಯಾಲೇಸ್ ನಲ್ಲಿ ವಿ ಪಿ ನ್ ಹಾಗೂ ಯು ಸ್ ಏ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದುಕೊಂಡಿದೆ, ಇದರ ತೀರ್ಪುಗರರಾಗಿ ಡಿ ಕೆ ಡಿ ಯ ಅರುಣ್ ಮಾಸ್ಟರ್ ಕಾರ್ಯನಿರ್ವಹಿಸಿದರು. ಸತತ ಮೂರು ಪ್ರಥಮ ಸ್ಥಾನ ಪಡೆಯುವ ಮೂಲಕ ಕಿಂಗ್ಸ್ ವಿದ್ಯಾರ್ಥಿಗಳು ಹ್ಯಾಟ್ರಿಕ್ ವಿಜಯ ಪಡೆದಿದ್ದಾರೆ. ತಂಡದ ಕೊರಿಯೋಗ್ರಾಫರ್ ಮಹೇಶ್ ಹಾಗೂ ಕಿರಣ್ ನೇತೃತ್ವದಲ್ಲಿ ವರುಣವಿ, ಪ್ರಜ್ಞಾ, ಯಶ್ವಿತ, ದೀಪಿಕ್ಷಾ, ಹುಂಶಿಕ, ವರ್ಷಿಣಿ ಶೆಟ್ಟಿ, ತ್ರಿಶ, ಸೋನಾಕ್ಷಿ,…
ನಾಪೋಕ್ಲು ಆ.14 NEWS DESK : ಶಿಕ್ಷಣ ಇಲಾಖೆಯಲ್ಲಿ 31ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸ.ಹಿ.ಪ್ರಾ.ಶಾಲೆ ಪಡಿಯಾಣಿಯಲ್ಲಿ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕರಾದ ಕೆ.ಸಿ.ದಮೇಂದ್ರ ಅವರನ್ನು ಬೀಳ್ಕೊಡಲಾಯಿತು. ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ., ವಿದ್ಯಾರ್ಥಿಗಳು, ಮಡಿಕೇರಿ ತಾಲೂಕಿನ ಶಿಕ್ಷಕರ ಸಂಘ, ಬಿ.ಆರ್.ಸಿ. ವತಿಯಿಂದ ಕೆ.ಸಿ.ದಮೇಂದ್ರ ದಂಪತಿಗಳಿಗೆ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ನಿವೃತ್ತಿ ಹೊಂದಿದ ಕೆ.ಸಿ.ದಮೇಂದ್ರ ಶಾಲೆಗೆ ಮರದ ಕಪಾಟನ್ನು ಕೊಡುಗೆಯಾಗಿ ನೀಡಿದರು. ಸಮಾರಂಭದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾದ ಬೋಜಮ್ಮ, ಸಹ ಶಿಕ್ಷಕಿಯರಾದ ಕೆ.ಎ.ಹೇಮಮಾಲಿನಿ, ಕೆ.ಜೆ.ರಾಧಾ, ಕೆ.ಎಂ.ಬುಶೀರ, ನಿವೃತ್ತ ದೈಹಿಕ ಶಿಕ್ಷಕಿ ಎಂ.ಬಿ.ಭಾರತಿ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ ಮತ್ತು ಸದಸ್ಯರು, ಬಿ.ಆರ್.ಸಿ ಮಂಜುಳಾ ಚಿತ್ರಾಪುರ, ಪ್ರಸಾದ್, ಎಸ್.ಡಿ.ಎಂ.ಸಿ ಪದಾಧಿಕಾರಿ ಸದಸ್ಯರು, ಶಿಕ್ಷಕರು, ಪೋಷಕರು ಹಾಜರಿದ್ದರುರು. ವರದಿ : ದುಗ್ಗಳ ಸದಾನಂದ.






