ಸೋಮವಾರಪೇಟೆ ಸೆ.10 NEWS DESK : ದುಷ್ಟರ ಸಂಹಾರಕ್ಕಾಗಿ ಅವತರಿಸಿದ ವೀರಭದ್ರ ಸ್ವಾಮಿಯಿಂದ ಲೋಕ ಕಲ್ಯಾಣವಾಯಿತೆಂದು ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಮಹಾಂತಶಿವಲಿಂಗ ಸ್ವಾಮೀಜಿ ಹೇಳಿದರು. ತಾಲೂಕಿನ ತಪೋಕ್ಷೇತ್ರ ಮನೆಹಳ್ಳಿ ಮಠ ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವತಿಯಿಂದ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ವೀರಭದ್ರ ಸ್ವಾಮಿ ವರ್ಧಂತಿ ಮಹೋತ್ಸವದ ಅಂಗವಾಗಿ ನಡೆದ ಲಕ್ಷ ಬಿಲ್ವ ಹಾಗೂ ಪುಷ್ಪಾರ್ಚನೆ ಧಾರ್ಮಿಕ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ವರ್ಷದ ಮೊದಲಹಬ್ಬವಾದ ಗೌರಿ, ಗಣೇಶ ಚತುರ್ಥಿಗೂ ಮುನ್ನ ಶ್ರಾವಣ ಮಾಸದ ಬಳಿಕ ಬರುವ ಭಾದ್ರಪದ ಮಾಸದ ಮೊದಲ ಮಂಗಳವಾರ ವೀರಭದ್ರಸ್ವಾಮಿ ಅವತರಿಸಿದರೆದು ಪ್ರತೀತಿ ಇದೆ. ತನ್ನ ಸತಿಗೆ ಆದ ನೋವಿಗೆ ಪ್ರತಿಕಾರವಾಗಿ ಶಿವನು ವೀರಭದ್ರನ ಅವತರಿಸಲು ಕಾರಣೀಕರ್ತನಾದನು, ಉಗ್ರ ಸ್ವರೂಪಿಯಾದ ವೀರಭದ್ರನು ಅಂದಿನಿಂದ ಶಿಷ್ಟರ ರಕ್ಷಣೆ ಮಾಡುತ್ತಿದ್ದಾರೆ ಎಂದರು. ಕಳೆದ 7 ವರ್ಷಗಳಿಂದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯೊಂದಿಗೆ ಕ್ಷೇತ್ರದಲ್ಲಿ ಸ್ವಾಮಿಯ ವರ್ಧಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದ ಅವರು ಈ ಭಾರಿ ವಿಶೇಷವಾಗಿ ಲಕ್ಷ…
ಲೇಖಕ: admin
ಬೆಂಗಳೂರು ಸೆ.10 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. :: ಸಭೆಯ ಮುಖ್ಯಾಂಶಗಳು :: • ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ. • ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ. • ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ…
ವಿರಾಜಪೇಟೆ ಸೆ.10 NEWS DESK : ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ನ ಸಹಯೋಗದಲ್ಲಿ ಗೋಣಿಕೊಪ್ಪದ ಲಯನ್ಸ್ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಅಮ್ಮತ್ತಿಯ ನೇತಾಜಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ವಿ.ಆರ್.ಆಯುಷ್ 40 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾನೆ. ಸೆನ್ಸಾಯಿ ಕಿಶೋರ್ ಅವರ ಬಳಿ ತರಬೇತಿ ಪಡೆಯುತ್ತಿರುವ ಆಯುಷ್, ಹೊಸಕೋಟೆಯ ವಿ.ಬಿ.ರವಿ ಹಾಗೂ ಸುಮಾ ದಂಪತಿಗಳ ಪುತ್ರ.
ವಿರಾಜಪೇಟೆ ಸೆ.10 NEWS DESK : ಆದಿವಾಸಿಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಬೇಕೆಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಕರೆ ನೀಡಿದರು. ಮಾಲ್ದಾರೆ ಸಮೀಪದ ಚೆನ್ನಂಗಿ ಗ್ರಾಮದ ಚೊಟ್ಟೆಪಾರೆ ಹಾಡಿಯಲ್ಲಿ ಶ್ರೀ ವರಸಿದ್ಧಿ ವಿನಾಯಕ ಉತ್ಸವ ಸಮಿತಿ ವತಿಯಿಂದ ನಡೆಸಲಾದ ಗೌರಿ ಗಣೇಶ ವಿಸರ್ಜನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಹಾಡಿಗಳಲ್ಲಿ ಪ್ರತಿಭಾವಂತ ಮಕ್ಕಳು ಇದ್ದು ಅವರಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಅವರನ್ನು ರಾಜ್ಯಮಟ್ಟಕ್ಕೆ ಹಾಗೂ ರಾಷ್ಟ್ರಮಟ್ಟಕ್ಕೆ ಎಲ್ಲ ಕ್ಷೇತ್ರದಲ್ಲಿ ಮುಂದೆ ತರಲು ಪ್ರೋತ್ಸಾಹ ನೀಡಬೇಕೆಂದು ಸಲಹೆ ನೀಡಿದರು. ಹಾಡಿಯ ಮಕ್ಕಳಲ್ಲಿ ಪ್ರತಿಭಾ ಸಾಮಥ್ರ್ಯಗಳಿದ್ದು, ಜಿಲ್ಲೆಗೆ ಹಾಗೂ ರಾಜ್ಯ ರಾಷ್ಟ್ರಕ್ಕೆ ಕೀರ್ತಿ ತರುವಂತಹ ಆಗಬೇಕೆಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜೆ.ಕೆ.ರಾಮು, ಶ್ರೀ ವರಸಿದ್ಧಿ ವಿನಾಯಕ ಉತ್ಸವ ಸಮಿತಿ ಪದಾಧಿಕಾರಿಗಳಾದ ಜೆ.ಬಿ.ರಾಜ, ಅಶೋಕ, ಎಂ.ಡಿ.ರಾಜ, ಜೆ.ಬಿ.ರಾಜು, ಪಾಪಣ್ಣ ಇನ್ನಿತರರು ಹಾಜರಿದ್ದರು.…
ಮಡಿಕೇರಿ ಸೆ.10 NEWS DESK : ವಿದ್ಯಾಥಿ೯ಗಳಲ್ಲಿ ಸೃಜನಶೀಲತೆ ಸೖಷ್ಟಿಸುವ ಮೂಲಕ ಕ್ರಿಯಾಶೀಲ ಪೀಳಿಗೆಯ ನಿಮಾ೯ಣಕ್ಕೆ ಶಿಕ್ಷಕ ವೃಂದ ಕಾರಣವಾಗಬೇಕೆಂದು ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್. ಗಂಗಾಧರ ಗೌಡ ಕರೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಗಂಗಾಧರ ಗೌಡ, ಜೀವನದ ಸೌಂದಯ೯ವೇ ಅದ್ಬುತವಾಗಿರುತ್ತದೆ. ನಾಳೆ ಎಂಬುದೇ ಜೀವನದ ಭರವಸೆಯಾಗಿರುವಾಗ ಮಕ್ಕಳ ಪಾಲಿಗೆ ಇಂಥ ನಾಳೆಗಳನ್ನು ಅತ್ಯಂತ ಸುಂದರವಾಗಿಸುವ ನಿಟ್ಟಿನಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ ಎಂದೂ ಅವರು ಅಭಿಪ್ರಾಯಪಟ್ಟರು. ಓವ೯ ಗುರು, ಬ್ರಹ್ಮ, ವಿಷ್ಮು, ಮಹೇಶ್ವರರು ನಿವ೯ಹಿಸಿದಂಥ ಸೖಜನಶೀಲತೆ, ತಂತ್ರಗಾರಿಕಾ ನಿಪುಣ, ಲಯಕತ೯,ನ ಪಾತ್ರ ವಹಿಸುತ್ತಾರೆ. ಹೀಗಾಗಿಯೇ ಇಂದಿಗೂ ಸಮಾಜದಲ್ಲಿ ಗುರುವಿನ ಸ್ಥಾನಕ್ಕೆ ಪಯಾ೯ಯ ಎಂಬುದೇ ಇಲ್ಲ ಎಂದು ಹೆಮ್ಮೆಯಿಂದ ನುಡಿದ ಗಂಗಾಧರ ಗೌಡ, ಉತ್ತಮ ವಿದ್ಯಾಥಿ೯ಗಳನ್ನು ರೂಪಿಸಿದರೆ ಅದಕ್ಕಿಂತ ಸಾಥ೯ಕತೆ ಶಿಕ್ಷಕನೋವ೯ನಿಗೆ ಬೇಕಾಗಿಲ್ಲಿ ಎಂದೂ ಅನಿಸಿಕೆ ವ್ಯಕ್ತಪಡಿಸಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್…
ಮಡಿಕೇರಿ ಸೆ.10 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗವು “ಕ್ವಾಲಿಟೇಟಿವ್ ಮೆಥೇಡ್ಸ್ ಇನ್ ಹೆಲ್ತ್ ರಿರ್ಚ್” ಎಂಬ ವಿಷಯದ ಮೇಲೆ ಎರಡು ದಿನಗಳ ಕಾರ್ಯಾಗಾರ ನಡೆಸಿತು. ಮಂಗಲಗಿರಿ ಆಲ್ ಇಂಡಿಯಾ ಇನ್ಸಟಿಟ್ಯುಟ್ ಆಫ್ ಮೆಡಿಕಲ್ ಸೈನ್ಸ್ ನ ಡಾ. ಜಿ.ಕಲೈಸೇಲ್ವನ್ ಹಾಗೂ ಪಾಂಡಿಚೇರಿ ಮನಕುಲ ವಿನಯಗರ್ ವೈದ್ಯಕೀಯ ಕಾಲೇಜಿನ ಡಾ. ರೀನಾಮೋಹನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿ ಪ್ರಾಯೋಗಿಕ ಅಧಿವೇಶನಗಳನ್ನು ನಡೆಸಿ, ಕಾರ್ಯಾಗಾರದಿಂದ ಆರೋಗ್ಯ ಕ್ಷೇತ್ರದಲ್ಲಿ ಸಮಸ್ಯೆಗಳನ್ನು ಅನ್ವೇಷಣೆ ಮಾಡಿ ರೋಗಿಗಳ ಕೇಂದ್ರಿತ ಆರೈಕೆ ಅಭಿವೃದ್ಧಿ ಪಡಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ. ಎ.ಜೆ.ಲೋಕೇಶ್, ಸಮುದಾಯ ವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಮತ್ತು ಕಾರ್ಯಕ್ರಮದ ಕಾರ್ಯದರ್ಶಿ ಡಾ.ಎಸ್.ಹೆಚ್.ಮಹೇಶ್ ಹಾಜರಿದ್ದರು. ವಿವಿಧ ವೈದ್ಯಕೀಯ ಕಾಲೇಜುಗಳ ಬೋಧಕ ಸಿಬ್ಬಂದಿಗಳು ಹಾಗೂ ಸ್ನಾತ್ತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡು ಚಟುವಟಿಕೆಯುತ ಹಾಗೂ ಅನುಭವಾತ್ಮಕ ಅಧಿವೇಶನಗಳನ್ನು ಮೆಚ್ಚಿದರು.
ಮಡಿಕೇರಿ NEWS DESK ಸೆ.10 : ಅಹಿಂದ ಒಕ್ಕೂಟದ ಸ್ಥಾಪಕರು ಹಾಗೂ ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ‘ಅಹಿಂದ ಭೂಷಣ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತು. ದಲಿತ ಸಂಘರ್ಷ ಸಮಿತಿಯ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ಸಾಮಾಜಿಕ ಕಳಕಳಿಯೊಂದಿಗೆ ಸಾಮರಸ್ಯ ಮತ್ತು ಒಗ್ಗಟ್ಟಿನ ಜೀವನಕ್ಕಾಗಿ ಅಹಿಂದ ಒಕ್ಕೂಟವನ್ನು ಸ್ಥಾಪಿಸಿದ ಟಿ.ಪಿ.ರಮೇಶ್ ಅವರು ನಂತರದ ದಿನಗಳಲ್ಲಿ ರೂಪಿಸಿದ ಹೋರಾಟ ಶ್ಲಾಘನೀಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಪ್ರಮುಖರಾದ ಮೋಹನ್ ಮೌರ್ಯ…
ಮಡಿಕೇರಿ ಸೆ.10 NEWS DESK : ಸೋಮವಾರಪೇಟೆ ಮನೆಹಳ್ಳಿ ಮಠದ ಶ್ರೀ ತಪೋಕ್ಷೇತ್ರದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಲಕ್ಷ ಬಿಲ್ವಾರ್ಚನೆ ಪೂಜೆ ನಡೆಯಿತು. ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನಡೆಸಿ, ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಪುತ್ತೂರು ಸೆ.10 NEWS DESK : ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ಧಾಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು, ಇದು ಎಲ್ಲರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ಅರ್ಮಾಧಂ-2025 ಓಣಂ ಆಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ. ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದ್ದಾಗಿದೆ. ಎಲ್ಲೇ ಹೋದರು ನಮ್ಮ ಮಾತೃಭೂಮಿಯ ಸಾಂಪ್ರದಾಯಗಳನ್ನು ಮತ್ತು ಆಚರಣೆಗಳನ್ನು ಮರೆಯಬಾರದು. ನಮ್ಮ ನೆಲ, ಜಲದ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು. ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಉಪಸ್ಥಿತರಿದ್ದು ಶುಭ ಹಾರೈಸಿದರು. ಓಣಂ ಹಬ್ಬದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಬೃಹತ್ ಪೂಕಳಂನ್ನು ನಿರ್ಮಿಸಲಾಗಿತ್ತು. ಈ…
ಮಡಿಕೇರಿ ಸೆ.10 NEWS DESK : ತಮಿಳುನಾಡಿನಲ್ಲಿ ನಡೆದ ಆನ್ ಲೈನ್ ವರ್ಲ್ಡ್ ರೆಕಾರ್ಡ್ ಡ್ಯಾನ್ಸ್ ಇವೆಂಟ್ 2025 ರಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ವಿದ್ಯಾರ್ಥಿನಿ ಹೆಚ್.ಬಿ.ವರ್ಷ ಪಾಲ್ಗೊಂಡು ಪದಕ ಮತ್ತು ಪ್ರಮಾಣ ಪತ್ರ ಪಡೆದಿದ್ದಾಳೆ. ಈ ಕಾರ್ಯಕ್ರಮ ಆರೋಗ್ಯಕರ ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ಉತ್ತೇಜಿಸುವ ಭಾಗವಾಗಿ ನಡೆಯಿತು. ಹೆಚ್.ಬಿ.ವರ್ಷ ಗೆ ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ಸಂಸ್ಥಾಪಕರು ಹಾಗೂ ನೃತ್ಯ ಸಂಯೋಜಕಿ ಪ್ರೀತ ಕೃಷ್ಣ ಅವರು ಮಾರ್ಗದರ್ಶನ ನೀಡಿದರು.






