ಲೇಖಕ: admin

ಮಡಿಕೇರಿ ಸೆ.9 NEWS DESK : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಸೆಪ್ಟೆಂಬರ್, 11 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಫೀಡರ್ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಸುಣ್ಣದ ಬೀದಿ, ಖಾಸಗಿ ಬಸ್ ನಿಲ್ದಾಣ, ಪೋಲಿಸ್ ಸ್ಠೇಷನ್ ಹಿಂಬಾಗ, ಆರ್ಜಿ, ಪೆರಂಬಾಡಿ, ಹೆಗ್ಗಳ, ತೋರ, ರಾಮನಗರ, ಬಟ್ಟಮಕ್ಕಿ, ಎಡಮಕ್ಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಸೆ.9 NEWS DESK : ಬಿಟಿಕಟ್ಟೆಯ ನಿವಾಸಿ ಪ್ರಾಸಿಸ್ ಡಿಸೋಜ ಅವರ ತಾಯಿ ರೋಜಿನಾ ಸಿಕ್ವೇರ (75) ಇಂದು (ಸೆ.9) ನಿಧನರಾದರು. ಮೃತರ ಅಂತ್ಯಕ್ರಿಯೆಯು ಸೆ.10 ರಂದು 3 ಗಂಟೆಗೆ ದಿವ್ಯ ಬಲಿಪೂಜೆಯ ನಂತರ ಚರ್ಚ್‍ನ ಹಿಂಭಾಗ ನಡೆಯಲಿದೆ ಎಂದು ಪ್ರಾಸಿಸ್ ಡಿಸೋಜ ತಿಳಿಸಿದ್ದಾರೆ.  

Read More

ಮಡಿಕೇರಿ ಸೆ.9 NEWS DESK : ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪಂಚಾಯತಿಗೆ ಮುಳ್ಳುಸೋಗೆ ಗ್ರಾಮ ಪಂಚಾಯತಿ ಪೂರ್ಣ ಕಂದಾಯ ಗ್ರಾಮ ಹಾಗೂ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಮಾದಾಪಟ್ಟಣ ಗ್ರಾಮದ ಭಾಗಶಃ ಪ್ರದೇಶಗಳನ್ನು ಸೇರಿಸಿಕೊಂಡು ಕುಶಾಲನಗರ ಪುರಸಭೆಯನ್ನಾಗಿ ಮೇಲ್ದರ್ಜೆಗೆರಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಸಂಬಂಧ ಸರ್ಕಾರದ ಆದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ ಪುನರ್ ವಿಂಗಡಣೆ ಮಾಡುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಯನ್ನು ಅನುಸರಿಸಿ ಯೋಜನಾ ನಿರ್ದೇಶಕರು. ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಡಗು ಜಿಲ್ಲೆ. ಮಡಿಕೇರಿ ಇವರು ಕುಶಾಲನಗರ ಪುರಸಭೆಯ ವಾರ್ಡ್ ಗಳನ್ನು 2011 ರ ಜನಗತಿಯ ಆಧಾರದ ಮೇರೆ ಪುನರ್ ವಿಂಗಡಣೆ ಮಾಡಲು ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಆದ್ದರಿಂದ ಕರ್ನಾಟಕ ಪೌರಸಭೆಗೆ ಅಧಿನಿಯಮ -1964 ರ ಪ್ರಕರಣ 13 ರ ಮೇರಗೆ ಕುಶಾಲಗರ ಪುರಸಭೆಯ ವಾರ್ಡ್‍ಗಳನ್ನು 2011 ರ ಜನಗಣತಿಯನ್ನು ಆಧಾರಿಸಿ ಪುನರ್ ವಿಂಗಡಣೆ ಮಾಡಿ ವಾರ್ಡಿನ ಹೆಸರು ಹಾಗೂ ವಾರ್ಡಿನ ವ್ಯಾಪ್ತಿಗೆ ಒಳಪಡುವ ಪ್ರದೇಶದ ವಿವರ ಮತ್ತು ಚೆಕ್ಕುಬಂದಿಗಳನ್ನು ವಿವರವಾಗಿ…

Read More

ಮಡಿಕೇರಿ ಸೆ.9 NEWS DESK : ಮಡಿಕೇರಿ ನಗರದಲ್ಲಿ ಅಭಿವೃದ್ಧಿ ಕಾರ್ಯಗಳೆಂದರೆ ಅದು ಭೂಮಿಪೂಜೆಗಷ್ಟೇ ಸೀಮಿತ ಎನ್ನುವುದಕ್ಕೆ ನಗರದ ದಾಸವಾಳ ಕೆರೆಯ ಉದ್ಯಾನವನದ ಯೋಜನೆಯೇ ಅತ್ಯುತ್ತಮ ಸಾಕ್ಷಿಯಾಗಿದೆ. ಉದ್ಯಾನವನದ ಭಾಗ್ಯ ಕಾಣದ ಕೆರೆ ಜಾಗ ಇಂದು ಮತ್ತೆ ಕಸದ ಕೊಂಪೆಯಾಗಿ ಮಾರ್ಪಟ್ಟಿದೆ. ಸುಮಾರು 4 ವರ್ಷಗಳ ಹಿಂದೆ ನಗರದ ಹೃದಯ ಭಾಗದ 12ನೇ ವಾರ್ಡ್‍ನ ದಾಸವಾಳ ಕೆರೆ ಜಾಗದಲ್ಲಿ ಸುಂದರವಾದ ಉದ್ಯಾನವನ ನಿರ್ಮಿಸಲೆಂದು ಅಂದಿನ ಬಿಜೆಪಿ ಸರಕಾರ ಭೂಮಿಪೂಜೆಯನ್ನು ನೆರವೇರಿಸಿತು. ಕಳೆದ ಹಲವು ದಶಕಗಳಿಂದ ಕೆರೆಯಾಗಿದ್ದ ಈ ಜಾಗ ನೀರು ಬತ್ತಿ ಹೋದ ಮೇಲೆ ವಾಹನಗಳ ನಿಲ್ದಾಣವಾಗಿ ಮಾರ್ಪಟ್ಟಿತ್ತು. ಕ್ರಮೇಣ ತ್ಯಾಜ್ಯ ವಿಲೇವಾರಿಯ ಪ್ರದೇಶವಾಗಿಯೂ ಅನಧಿಕೃತವಾಗಿ ಗುರುತಿಸಿಕೊಂಡಿತು. ನಗರದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲು ಜನವಸತಿ ಇಲ್ಲದ ಸೂಕ್ತ ಜಾಗ ಗುರುತು ಮಾಡಲು ವಿಫಲವಾಗಿದ್ದ ಅಂದಿನ ಆಡಳಿತ ವ್ಯವಸ್ಥೆ ನಗರದ ಮಧ್ಯಭಾಗದ ದಾಸವಾಳ ಕೆರೆ ಪ್ರದೇಶದಲ್ಲೇ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಮುಂದಾಗಿತ್ತು. ಆದರೆ ಈ ಪ್ರದೇಶದ ಸುತ್ತಮುತ್ತ ನೂರಾರು ಮನೆಗಳು, ಶಿಶು…

Read More

ಮಡಿಕೇರಿ NEWS DESK ಸೆ.9 : ತಮಿಳುನಾಡಿನಲ್ಲಿ ನಡೆದ ಆನ್ ಲೈನ್ ವರ್ಲ್ಡ್ ರೆಕಾರ್ಡ್ ಡ್ಯಾನ್ಸ್ ಇವೆಂಟ್ 2025 ರಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಶೆರ್ಲಿನ್ ಪಾಲ್ಗೊಂಡು ಪದಕ ಮತ್ತು ಪ್ರಮಾಣ ಪತ್ರ ಪಡೆದಿದ್ದಾಳೆ. ಈ ಕಾರ್ಯಕ್ರಮ ಆರೋಗ್ಯಕರ ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ಉತ್ತೇಜಿಸುವ ಭಾಗವಾಗಿ ನಡೆಯಿತು. ಪ್ರೀತಿ ಶೆರ್ಲಿನ್ ಗೆ ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ಸಂಸ್ಥಾಪಕರು ಹಾಗೂ ನೃತ್ಯ ಸಂಯೋಜಕಿ ಪ್ರೀತ ಕೃಷ್ಣ ಅವರು ಮಾರ್ಗದರ್ಶನ ನೀಡಿದರು.

Read More

ಮಡಿಕೇರಿ ಸೆ.9 NEWS DESK : ಪೊನ್ನಂಪೇಟೆ ಸಿಐಟಿ ಕಾಲೇಜಿನ ಎಐ ಎಮ್ ಎಲ್ ವಿಭಾಗದ ಅವಿನ್ಯಂ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಪರಮ ವೀರ ಚಕ್ರ ಪುರಸ್ಕೃತ ದಿ.ಕ್ಯಾಪ್ಟನ್ ವಿಕ್ರಮ್ ಭಾತ್ರಾ ಅವರ ಹುಟ್ಟುಹಬ್ಬದ ಅಂಗವಾಗಿ ಶೌರ್ಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ ರಕ್ಷಣಾ ವಲಯದಲ್ಲಿ ತಂತ್ರಜ್ಞಾನವು ವಹಿಸುತ್ತಿರುವ ಪಾತ್ರ, ಶಿಸ್ತು ಮತ್ತು ನಾಯಕತ್ವದ ಅಗತ್ಯತೆ ಬಗ್ಗೆ ವಿವರಿಸಿದರು. ಅಲ್ಲದೆ ಎಂಜಿನಿಯರಿಂಗ್ ಬಳಿಕ ಸೇನೆ ಸೇರುವ ಅವಕಾಶಗಳು ಹಾಗೂ ಸೇನೆ ಸೇರುವುದರಿಂದ ದೊರೆಯುವ ಪ್ರಯೋಜನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಪ್ರೊ. ಎ.ಜಿ.ತಿಮ್ಮಯ್ಯ (ಮೆಕ್ಯಾನಿಕಲ್ ವಿಭಾಗ) ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿವೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಡಾ. ಎಂ.ಸಿ.ಕಾರ್ಯಪ್ಪ,…

Read More

ಮಡಿಕೇರಿ ಸೆ.9 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಕೊಡಗು ಜಾನಪದ ಪರಿಷತ್ ಸಹಯೋಗದಲ್ಲಿ 4ನೇ ವಷ೯ದ ಜಾನಪದ ದಸರಾವನ್ನು ಸೆಪ್ಟೆಂಬರ್ 29 ರಂದು ಸೋಮವಾರ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.  ಸೆ.29 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ಕಲಾ ಪ್ರದಶ೯ನಗಳು ಆಯೋಜಿಸಲ್ಪಟ್ಟಿವೆ. ಇದೇ ಸಂದಭ೯ ಜಾನಪದ ವಸ್ತು ಪ್ರದಶ೯ನ, ಕಲಾಜಾಥಾ ಕೂಡ ಜರುಗಲಿದೆ ಎಂದು ಜಾನಪದ ಪರಿಷತ್ ಪ್ರಕಟಣೆ ತಿಳಿಸಿದೆ. ಜಾನಪದ ದಸರಾ ಸಂದಭ೯ ಕೊಡಗಿನ ಜಾನಪದ ಕಲಾವಿದರಿಗೆ ವೈವಿಧ್ಯಮಯ ಕಲಾ ಪ್ರದಶ೯ನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊಡಗಿನ ಜಾನಪದ ಕಲಾತಂಡಗಳು, ಕಲಾವಿದರು ಜಾನಪದ ದಸರಾ ಸಂದಭ೯ ನೀಡಲು ಇಚ್ಚಿಸುವ ಪ್ರದಶ೯ನದ ಬಗ್ಗೆ ತಮ್ಮ ಹೆಸರನ್ನು ಸೆಪ್ಟೆಂಬರ್ 20 ರ ಒಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಜಾನಪದ ದಸರಾದಲ್ಲಿ ಕಲಾ ಪ್ರದಶ೯ನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು…

Read More

ಮಡಿಕೇರಿ ಸೆ.9 NEWS DESK : ಗೋಣಿಕೊಪ್ಪ ಲಯನ್ಸ್ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಸಣ್ಣುವಂಡ ರಶ್ಮಿ, ಕರ್ನಂಡ ಕೃತಿಕಾ ಅಕ್ಕಮ್ಮ, ಕರ್ನಂಡ ಶತಕ ಕಾವೇರಮ್ಮ ಭಾಗವಹಿಸಿ ಚಿನ್ನದ ಪದಕ ಪಡೆದು ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಇವರಿಗೆ ಕರಾಟೆ ಬೋಧಕರಾದ ಸೋಮಣ್ಣ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ  ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ವಿರಾಜಪೇಟೆ ಸೆ.9 NEWS DESK : ಶ್ರೀ ಕೃಷ್ಣನ ಉಪದೇಶಾಮೃತವಾದ ಭಗವದ್ಗೀತೆ ಸರ್ವಕಾಲಿಕ ಸತ್ಯ. ಸನಾತನ ಧರ್ಮದಲ್ಲಿ ಭಗವದ್ಗೀತೆಯನ್ನು ಪವಿತ್ರ ಗ್ರಂಥವೆಂದು ಪರಿಗಣಿಸಲಾಗಿದೆ ಎಂದು ಪೊನ್ನಂಪೇಟೆ ಸಾಯಿಶಂಕರ್ ಬಿ.ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಪಿ.ಎ.ನಾರಾಯಣ ಅಭಿಪ್ರಾಯಪಟ್ಟರು. ಕಾವೇರಿ ಗಣೇಶೊತ್ಸವ ಸಮಿತಿ ಮೂರ್ನಾಡು ರಸ್ತೆ ಹಾಗೂ ದಕ್ಷಿಣ ಕೊಡಗು ಮಹಿಳಾ ಲೇಖಕಿಯರ ಹಾಗೂ ಕಲಾವಿದರ ವೇದಿಕೆ ವತಿಯಿಂದ ಗಣೇಶೋತ್ಸವ ಸಮಿತಿ ವೇದಿಕೆಯಲ್ಲಿ ನಡೆದ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿದಿನ ನಾವು ಭಗವಧ್ಗೀತೆಯ ಶ್ಲೋಕವನ್ನು ಪಠಿಸಿದರೆ ಮನಸ್ಸಿನಲ್ಲಿ ಸುಖ ಶಾಂತಿ, ಆತ್ಮಸ್ಥೇರ್ಯ ಮೂಡಲು ಸಾಧ್ಯ. ಮಕ್ಕಳಿಗೂ ಇದನ್ನು ಕಲಿಸುವಂತಾಗಬೇಕು. ಶ್ರೀಕೃಷ್ಣ ಬೋಧಿಸಿದ ಭಗವದ್ಗೀತೆಯ ಸಂದೇಶಗಳನ್ನು ವಿಶ್ವದ ಬಹುತೇಕರು ಅನುಸರಿಸುತ್ತಿದ್ದು, ಅವು ಸಾರ್ವಕಾಲಿಕ ಸತ್ಯದಿಂದ ಕೂಡಿವೆ, ಕೃಷ್ಣನ ನಾಮ ಜಪಿಸಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು. ಸಾಹಿತಿಗಳಾದ ಕಿಗ್ಗಾಲು ಗಿರೀಶ್ ಮಾತನಾಡಿ, ಶ್ರೀಕೃಷ್ಣನು ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಗೀತೆಯನ್ನು ಉಪದೇಶಿಸಿದನೆಂಬ ನಂಬಿಕೆಯಿದೆ. ಮತ್ತು ಈ ಮೂಲಕ ಅವರು ಜೀವನದ ಸಾರವನ್ನು ಜನರಿಗೆ…

Read More

ಮಡಿಕೇರಿ ಸೆ.9 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಕೊಡವ ಸಮಾಜದ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಆಯುಧ ಪೂಜೆ ಸಲ್ಲಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ವೀರ ಪರಂಪರೆಯ ನಾಡಿಯಲ್ಲಿ ಆಯುಧ ಪೂಜೆಯ ಸಂಪ್ರದಾಯಕ್ಕೆ ವಿಶೇಷ ಆದ್ಯತೆ ಇದ್ದು, ಸೆಪ್ಟಂಬರ್ ಮೂರರಂದು ಕೊಡಗಿನ ಹೆಚ್ಚಿನೆಡೆ ಕೈಲ್ ಪೊಳ್ದ್ ನಮ್ಮೆಯನ್ನು ಆಚರಿಸಲಾಗುತ್ತಿದೆ. ಸಮಾಜದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ನಮ್ಮೆಯನ್ನು ಎಂದು ಹೇಳಿದರು. ಕೋವಿ ಒಡಿಕತ್ತಿಯನ್ನು ನೀಡುವ ಮೂಲಕ ಎಲ್ಲರಿಗೂ ಒಳಿತನ್ನು ಮಾಡಲೆಂದು ಬೇಡಿಕೊಂಡರು. ಸಮಾಜದ‌ ಉಪಾದ್ಯಕ್ಷರಾದ ಕೇಕಡ ವಿಜು ದೇವಯ್ಯ, ಗೌರವ ಕಾರ್ಯದರ್ಶಿ ಕನ್ನಂಡ ಸಂಪತ್‌ಕುಮಾರ್, ಜಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಮಂಡೀರ‌ ಸದಾಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಪುತ್ತರಿರ ಕರುಣ್ ಕಾಳಯ್ಯ, ನಂದಿನೆವಂಡ ರವಿ ಬಸಪ್ಪ, ಕನ್ನಂಡ‌ ಕವಿತ ಕಾವೇರಮ್ಮ, ಬೊಪ್ಪಂಡ ಸರಳ ಕರುಂಬಯ್ಯ,…

Read More