ಮಡಿಕೇರಿ ಜು.9 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5824 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5792 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2026-27ನೇ ಆರ್ಥಿಕ ಸಾಲಿನಲ್ಲಿ 69 ಪ್ರಕರಣಗಳು ದಾಖಲಾಗಿ, 51 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 18 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಬಿ.ಕೆ.ರವೀಂದ್ರ ರೈ ಹಾಗೂ ಪ್ರಧಾನ ಕಾರ್ಯದರ್ಶಿಯವರಾದ ನಮಿತ ಆರ್.ರೈ ಅವರು ಕೋರಿದ್ದಾರೆ.
ಲೇಖಕ: admin
ಸುಂಟಿಕೊಪ್ಪ ಜು.9 NEWS DESK : ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ವಿರೋಧಿ ದಿನ ಮಾಹಿತಿ ಕಾರ್ಯಾಗಾರ ನಡೆಯಿತು. ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಯಾದ ವಿಶ್ವಜ್ಞ ಮಾತನಾಡಿ, ಡೆಂಗ್ಯೂ ಜ್ವರವು ಈಡೀಸ್ ಈಜಿಪ್ಟೈ ಎಂಬ ಹೆಣ್ಣು ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಇದು ವೈರಸ್ ನಿಂದ ಉಂಟಾಗುವ ಕಾಯಿಲೆ ಎಂದು ತಿಳಿಸಿದರು. ನಿಂತ ನೀರು ಸೊಳ್ಳೆಗಳ ತವರೂರು ಸೊಳ್ಳೆಗಳು ಸಾಮಾನ್ಯವಾಗಿ ನಿಂತ ನೀರಲ್ಲಿ ಮೊಟ್ಟೆ ಇಟ್ಟು ಸಂತಾನೋತ್ಪತ್ತಿಯನ್ನು ಮಾಡುತ್ತವೆ ಸೋಂಕಿತ ಸೊಳ್ಳೆಯು ಆರೋಗ್ಯವಂತ ವ್ಯಕ್ತಿಗೆ ಕಚ್ಚಿದಾಗ ಡೆಂಗ್ಯೂ ಮತ್ತು ಚಿಕೂನ್ ಗುನ್ಯಾ ರೋಗಗಳು ಹರಡುತ್ತವೆ. ಈ ರೋಗದ ಲಕ್ಷಣವೆಂದರೆ ವಿಪರೀತ ಜ್ವರ ಮೈ ಕೈ ನೋವು, ತಲೆನೋವು ಕಣ್ಣುಗುಡ್ಡೆಗಳ ಹಿಂಭಾಗ ನೋವು, ಮೈಮೇಲೆ ಕೆಂಪು ಗುಳ್ಳೆಗಳಾಗುವುದು ಉಂಟಾಗುತ್ತದೆ ಡೆಂಗ್ಯೂ ಜ್ವರವು ಮಾರಣಾಂತಿಕ ಖಾಯಿಲೆಯಾಗಿದ್ದು, ಇದಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ ರೋಗದ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುವುದು ಎಂದು ತಿಳಿಸಿದರು.…
ಮಡಿಕೇರಿ ಜು.9 NEWS DESK : ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಆಶ್ರಯದಲ್ಲಿ ತುಮಕೂರಿನ ಎಂ.ಜಿ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ತಂಡವು ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪ್ರಶಸ್ತಿಯತ್ತ ಆತ್ಮವಿಶ್ವಾಸದಿಂದ ಮುನ್ನಡೆಯುತ್ತಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಆತಿಥೇಯ ತುಮಕೂರು ತಂಡವನ್ನು ಎದುರಿಸಿದ ಕೊಡಗು ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ 8-0 ಗೋಲುಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿತು. ತಂಡದ ಪರ ಸಬಿತ್ ಎರಡು ಗೋಲು, ಸವಾದ್ ಎರಡು ಗೋಲು, ಫಾರೂಕ್ ಒಂದು ಗೋಲು, ಅಜಿತ್ ಒಂದು ಗೋಲು ಹಾಗೂ ದಿವಾಕರ್ ಒಂದು ಗೋಲು ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕೊಡಗು ತಂಡದ ಸಮನ್ವಯದ ಆಟ, ವೇಗದ ಪಾಸ್ಗಳು ಮತ್ತು ಪರಿಣಾಮಕಾರಿ ದಾಳಿ ಎದುರಾಳಿ ತಂಡವನ್ನು ಸಂಪೂರ್ಣವಾಗಿ ಕಟ್ಟಿಹಾಕಿತು. ಎರಡನೇ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವನ್ನು ಎದುರಿಸಿದ ಕೊಡಗು ತಂಡವು ಮತ್ತೊಮ್ಮೆ ತನ್ನ ಪ್ರಾಬಲ್ಯ ಮೆರೆದಿತು. ಪಂದ್ಯದುದ್ದಕ್ಕೂ ಎದುರಾಳಿಗೆ…
ಮಡಿಕೇರಿ ಜು.9 NEWS DESK : ವಿರಾಜಪೇಟೆಯ ಆರ್ಜಿ ಗ್ರಾಮದ ‘ಶಕ್ತಿ ವೃದ್ಧಾಶ್ರಮ’ದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಹಾಕತ್ತೂರು ಗ್ರಾಮ ಪಂಚಾಯತಿ ಮಾಜಿ ಸದಸ್ಯರು ಹಾಗೂ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಪಿಯೂಷ್ ಪೆರೇರಾ ಮತ್ತು ಕುಟುಂಬಸ್ಥರು ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ನಿರಾಶ್ರಿತರೊಂದಿಗೆ ಶಾಸಕರ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಇದೇ ಸಂದರ್ಭ ವೃದ್ಧಾಶ್ರಮದ ನಿರಾಶ್ರಿತರ ಅನುಕೂಲಕ್ಕಾಗಿ ಪಿಯೂಷ್ ಪೆರೇರಾ ಕುಟುಂಬದ ವತಿಯಿಂದ 25 ಕಂಬಳಿಗಳನ್ನು ವಿತರಿಸಿ, ಮಾನವೀಯತೆ ಮೆರೆದರು.
ಮಡಿಕೇರಿ ಜು.9 NEWS DESK : ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಪೂರಕವಾಗಿ ಇದೇ ಜು.11 ಮತ್ತು 12ರಂದು ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಎಸ್ಎಸ್ಎಫ್ ಮಡಿಕೇರಿ ಡಿವಿಷನ್ನಿಂದ 14ನೇ ಆವೃತ್ತಿಯ “ಸಾಹಿತ್ಯೋತ್ಸವ-2026” ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಎಸ್ಎಸ್ಎಫ್ ಪದಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, ಸಾಹಿತ್ಯೋತ್ಸವದಲ್ಲಿ ಮೂರು ಸೆಕ್ಟರ್ಗಳು ಪಾಲ್ಗೊಳ್ಳಲಿವೆ. ಎಮ್ಮೆಮಾಡು ಸೆಕ್ಟರ್ ವ್ಯಾಪ್ತಿಯ ಎಮ್ಮೆಮಾಡು ಸೆಂಟರ್, ಎಮ್ಮೆಮಾಡು ಈಸ್ಟ್, ಎಮ್ಮೆಮಾಡು ವೆಸ್ಟ್, ಪಡಿಯಾಣಿ, ಸಾದತ್ ನಗರ, ಅಯ್ಯಂಗೇರಿ, ತಾವೂರು, ಚೆಟ್ಟಿಮಾನಿ ಹಾಗೂ ಪಳ್ಳಿರಾಣೆ ಘಟಕಗಳು, ನಾಪೋಕ್ಲು ಸೆಕ್ಟರ್ ವ್ಯಾಪ್ತಿಯ ಕುಂಜಿಲ, ಕೊಳಕೇರಿ, ಹಳೇ ತಾಲ್ಲೂಕು, ನಾಪೋಕ್ಲು, ಚೆರಿಯಪರಂಬು, ಕೊಟ್ಟಮುಡಿ, ಹೊದವಾಡ, ಬೆಟ್ಟಗೇರಿ ಹಾಗೂ ಚರಂಬಾಣೆ ಘಟಕಗಳು ಹಾಗೂ ಮಡಿಕೇರಿ ಸೆಕ್ಟರ್ ವ್ಯಾಪ್ತಿಯ ಬೇತ್ರಿ, ಬಲಮುರಿ, ಮೂರ್ನಾಡು, ಕೊಂಡಂಗೇರಿ ಈಸ್ಟ್, ಕೊಂಡಂಗೇರಿ ವೆಸ್ಟ್, ಕೊಂಡಂಗೇರಿ ನಾರ್ತ್, ಐಕೊಳ, ಹಾಕತ್ತೂರು, ಕಬ್ಬಡಕೇರಿ ಹಾಗೂ ಮಡಿಕೇರಿ ಘಟಕಗಳು ಸೇರಿಂದತೆ ಒಟ್ಟಾಗಿ 28 ಘಟಕಗಳು ಭಾಗವಹಿಸಲಿರುವುದಾಗಿ ಮಾಹಿತಿ ನೀಡಿದರು. ಸಾಹಿತ್ಯೋತ್ಸವದಲ್ಲಿ ಪ್ರಮುಖವಾಗಿ ಭಾಷಣ, ಪ್ರಬಂಧ, ಕವನ, ಕಥೆ,…
ಮಡಿಕೇರಿ NEWS DESK ಜು.9 : ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಅವರು ಮನವಿ ಮಾಡಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯ ಜಲ ನೀತಿ ಅನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಿರುವ ಕಾರಣ ಜಲಾಶಯದಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಮುಂಬರುವ ದಿನಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಕಾಯ್ದಿರಿಸಿಕೊಂಡು ಬಳಸಲು ಸೂಚಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರು ದುರ್ಬಲವಾಗಿರುವುದರಿಂದ ಜಲಾಶಯಗಳಲ್ಲಿ ಪ್ರಸ್ತುತ ಲಭ್ಯವಿರುವ ನೀರಿನ ಪ್ರಮಾಣವು ಕಡಿಮೆ ಇರುವುದರಿಂದ ಕೇವಲ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಮಾತ್ರ ಸಾಕಾಗುವಂತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಪರಿಸ್ಥಿತಿಯಲ್ಲಿ ಕೃಷಿ ಬೆಳೆಗಳಿಗೆ ನೀರು ಹರಿಸುವುದು ಕಷ್ಟಸಾಧ್ಯವಾಗುತ್ತದೆ. ಕುಡಿಯುವ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡುವುದು ಸರ್ಕಾರದ ಆಶಯವಾಗಿರುವುದರಿಂದ, ಲಭ್ಯವಿರುವ ನೀರಿನ ಸಂಗ್ರಹವನ್ನು ಅತ್ಯಂತ ಮಿತವ್ಯಯದಿಂದ ಬಳಕೆ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ರೈತರು ಜಲಾಶಯದ ನೀರನ್ನು ಅವಲಂಬಿಸಿ…
ಮಡಿಕೇರಿ NEWS DESK ಜು.9 : ಬಾಡಗರಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಮೃತ್ಯುಂಜಯ ಕ್ಷೇತ್ರದ ನೂತನ ಗರ್ಭಗುಡಿಯಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿದ್ದ ದೇವರ ಬಿಂಬ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಇಂದು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಗಣಪತಿ ಹೋಮ, ತತ್ವಹೋಮ, ತತ್ವ ಕಲಶ ಪೂಜೆ, ಸಿಂಹಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಮೃತ್ಯುಂಜಯ ದೇವರ ಬಿಂಬ ಪ್ರತಿಷ್ಠೆ, ಅಷ್ಟಬಂಧ ಲೇಪನ, ಜೀವಕಲಶಾಭಿಷೇಕ, ಶಿಖರ ಪ್ರತಿಷ್ಠೆ ಮುಂದುವರಿದು ತತ್ವ ಕಲಶಾಭಿಷೇಕ ನಡೆಯಿತು. ಮಹಾಪೂಜೆ, ಮಂತ್ರಾಕ್ಷತೆಯ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ ಗ್ರಾಮದಲ್ಲಿರುವ ಶ್ರೀ ಮೃತ್ಯುಂಜಯ ದೇವಸ್ಥಾನ ಐತಿಹಾಸಿಕವಾಗಿದ್ದು, ನೂರಾರು ವರ್ಷಗಳ ಹಿನ್ನೆಲೆ ಹೊಂದಿದೆ. ಸುಮಾರು 1.20 ಕೋಟಿ ರೂ. ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, ಗರ್ಭಗುಡಿ, ತೀರ್ಥಮಂಟಪ ಹಾಗೂ ಗಣಪತಿ ಗುಡಿಯ ಜೀರ್ಣೋದ್ಧಾರವಾಗಿದೆ.
ಮಡಿಕೇರಿ NEWS DESK ಜು.9 : ಕುಂದಚೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು 1.25 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹಾಗೂ ಡಿಸಿಸಿ ಸದಸ್ಯ ಕೆ.ಯು.ಹ್ಯಾರೀಶ್ ಅವರು ಮಾತನಾಡಿ ಕಳೆದ 25 ವರ್ಷಗಳಿಂದ ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಹೊಂಡ ಗುಂಡಿಗಳಿಂದ ಕೂಡಿತ್ತು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಪೊನ್ನಣ್ಣ ಅವರು 6 ತಿಂಗಳ ಹಿಂದೆ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ್ದರು. ಇದೀಗ ಡಾಂಬರೀಕರಣಗೊಂಡ ರಸ್ತೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಂಡಿದ್ದು, ಶಾಸಕರ ಕಾರ್ಯ ಶ್ಲಾಘನೀಯವೆಂದರು. ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಕಾರ್ಯಪಾಲಕ ಅಭಿಯಂತರ ಗಿರೀಶ್ ಹಾಗೂ ಗುಣಮಟ್ಟದ ರಸ್ತೆಯನ್ನು ನೀಡಿದ ಗುತ್ತಿಗೆದಾರ ಕೆ.ಟಿ.ಸತೀಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.…
ವಿರಾಜಪೇಟೆ ಜು.8 NEWS DESK : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ ವಿರಾಜಪೇಟೆಯ ವಿದ್ಯಾರ್ಥಿ ಬಿ.ಆರ್.ಭವಿಷ್ ಅನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ, ಕೊಡಗು ಜಿಲ್ಲಾ ಈಡಿಗ ಮತ್ತು ಬಿಲ್ಲವ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಮಡಿಕೇರಿಯ ಹೋಟೆಲ್ ರಾಜ್ ದರ್ಶನ್ ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಎಂ. ಶ್ರೀನಿವಾಸ್ ಹಾಗೂ ಕೊಡಗು ಈಡಿಗ ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ. ಕುಮಾರ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಹಾಜರಿದ್ದರು ಬಿ.ಆರ್ ಭವಿಷ್ ವಿರಾಜಪೇಟೆಯ ಪಂಜರಪೇಟೆ ನಿವಾಸಿಗಳಾದ ಬಿ.ಎನ್.ರಮೇಶ್ (ರಘು) ಹಾಗೂ ಆಶಾ ದಂಪತಿಗಳ ಪುತ್ರ. ಇವನು ಪ್ರಸ್ತುತ ಗೋಣಿಕೊಪ್ಪದ ಲಯನ್ಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾನೆ.
ಮಡಿಕೇರಿ ಜು.8 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.,ಮಡಿಕೇರಿ ಹಾಗೂ ಸಹಕಾರ ಇಲಾಖೆ, ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಪರಿಕರಗಳನ್ನು ವಿತರಣೆ ಮಾಡಲಾಯಿತು. ನಗರದ ಬಾಲಭವನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಪಿ.ಯು.ರಾಬಿನ್ ದೇವಯ್ಯ, ಕೃಷಿ ಪ್ರಧಾನ ದೇಶದಲ್ಲಿ ಗ್ರಾಮೀಣ ಆರ್ಥಿಕತೆಯನ್ನು ಸದೃಡಗೊಳಿಸಲು ಹಾಗೂ ಸಹಕಾರ ಕ್ಷೇತ್ರವನ್ನು ಬಲವರ್ಧನೆಗೊಳಿಸಬೇಕೆಂಬ ಉದ್ದೇಶದಿಂದ ಸಹಕಾರ ಸಚಿವಾಲಯವನ್ನು ಪ್ರಾರಂಭಿಸಿ ಇಂದಿಗೆ 5 ವರ್ಷ ಪೂರೈಸಿದೆ. ಒಂದು ವಾರಗಳ ಕಾಲ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಮಾರ್ಗಸೂಚಿ ನೀಡಿದ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಸಹ ‘ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು. ರೈತರ ಸಮಾವೇಶ, ಪರಿಸರ ಸಂರಕ್ಷಣೆಗಾಗಿ ಸಸಿ ನೆಡುವ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಸಹಕಾರ ಅರಿವು, ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಶಿಬಿರ,…






