ಲೇಖಕ: admin

ಮಡಿಕೇರಿ ಆ.11 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಮತಗಳ್ಳತನದ ಕುರಿತು ಆಧಾರ ರಹಿತ ಸುಳ್ಳು ಆರೋಪಗಳನ್ನು ಮಾಡುತ್ತಿರುವುದರಿಂದ ಇವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕೆಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕೂಡ ಮತಗಳ್ಳತನದ ಮೂಲಕ ಬಿಜೆಪಿ ಗೆಲುವು ಸಾಧಿಸಿದೆ ಎಂದು ಎಂ.ಲಕ್ಷ್ಮಣ್ ಅವರು ಮಾಡಿರುವ ಆರೋಪವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಸೋಲಿನ ಹತಾಶೆಯಿಂದ ಹೊರ ಬರಲಾಗದೆ ಪರಿತಪಿಸುತ್ತಿರುವ ಲಕ್ಷ್ಮಣ್ ಅವರು ತಮ್ಮ ನಾಯಕ ರಾಹುಲ್ ಗಾಂಧಿ ಅವರಂತೆ ಯಾವುದೇ ದಾಖಲೆ ಇಲ್ಲದ ಆಧಾರ ರಹಿತ ಆರೋಪಗಳನ್ನು ಮಾಡುತ್ತಾ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಸುಳ್ಳು ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುವವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವ ಕಾನೂನನ್ನು ಕಾಂಗ್ರೆಸ್ ಸರಕಾರವೇ ಜಾರಿಗೆ ತಂದಿದೆ. ಈ ಕಾನೂನಿನನ್ವಯ ಲಕ್ಷ್ಮಣ್ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು…

Read More

ಮಡಿಕೇರಿ ಆ.11 NEWS DESK : ಸೋಮವಾರಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸೇವೆ ಸಲ್ಲಿಸಿ ನಿರ್ಗಮಿತಗೊಂಡ  ಬಿಇಓ ಎಸ್ ಭಾಗ್ಯಮ್ಮ  ಅವರು ಸುಳ್ಯ ತಾಲ್ಲೂಕಿನಿಂದ ಆಗಮಿಸಿದ ನೂತನ‌ ಬಿಇಓ ಎಂ.ಕೃಷ್ಣಪ್ಪ  ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ  ನೂತನ ಬಿಇಓ ಎಂ.ಕೃಷ್ಣಪ್ಪ ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶಾಲೆಗಳಿ ಅಭಿವೃದ್ಧಿಗೆ‌ ವಿಶೇಷ ಗಮನ ಹರಿಸಲಾಗುವುದು. ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಈ ಹಿಂದೆ ತಾಲ್ಲೂಕಿನಲ್ಲಿ ‌ಕೈಗೊಂಡ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಯೋಜನೆಯಂತೆ‌ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ವಿಶೇಷ ಗಮನಹರಿಸಲಾಗುವುದು ಎಂದರು. ಬಿಇಓ ಭಾಗ್ಯಮ್ಮ ಅವರು ತಾಲ್ಲೂಕಿನಲ್ಲಿ ಈ ಹಿಂದೆ  ಕೈಗೊಂಡ ಶೈಕ್ಷಣಿಕ ಕಾರ್ಯಕ್ರಮಗಳಂತೆ ಮುಂದೆ ಕೂಡ ಎಲ್ಲರ ಸಹಕಾರದಿಂದ ಉತ್ತಮ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಶಾಲೆಗಳ ಅಭಿವೃದ್ಧಿಗೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಇನ್ನಷ್ಟು ಸುಧಾರಿಸಲು ‌ಪ್ರಯತ್ನಿಸಲಾಗುವುದು ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಗಮಿತ ಬಿಇಓ ಭಾಗ್ಯಮ್ಮ, ಸೋಮವಾರಪೇಟೆ ತಾಲೂಕಿನಲ್ಲಿ ಉತ್ತಮ‌ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಪ್ರಗತಿ ಸಾಧಿಸಲಾಗಿದೆ.…

Read More

ಮಡಿಕೇರಿ NEWS DESK ಆ.11 : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶಭಕ್ತಿ ಮತ್ತು ದೇಶಾಭಿಮಾನದ ಕುರಿತು ಯುವಸಮೂಹ ಹಾಗೂ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲು ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಮಡಿಕೇರಿಯಲ್ಲಿ ಬೈಕ್ ಜಾಥಾ ನಡೆಸಿತು. ತ್ರಿವರ್ಣಧ್ವಜ ಹಿಡಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ನಗರದ ಮುಖ್ಯ ರಸ್ತೆಗಳಲ್ಲಿ ಸಾಗಿ ಗಮನ ಸೆಳೆದರು.

Read More

ಮಡಿಕೇರಿ ಆ.11 NEWS DESK : ಪಠ್ಯದಲ್ಲಿನ ಅಂಕಗಳಿಕೆಯೇ ವಿದ್ಯಾಥಿ೯ಗಳ ಸಾಧನೆಗೆ ಪ್ರಮುಖ ಮಾನದಂಡವಾಗದೇ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ರೂಡಿಸಿಕೊಳ್ಳುವುದೂ ವಿದ್ಯಾಥಿ೯ಗಳ ಜೀವನದಲ್ಲಿ ಪ್ರಮುಖವಾಗಿರಲಿ ಎಂದು ಹಿರಿಯ ವಕೀಲ, ಮಡಿಕೇರಿ ವಕೀಲರ ಸಂಘದ ನಿಕಟಪೂವ೯ ಅಧ್ಯಕ್ಷ ಎಂ.ಎ.ನಿರಂಜನ್ ಕರೆ ನೀಡಿದ್ದಾರೆ.  ನಗರದ ಕೊಡಗು ಪತ್ರಿಕಾಭವನ ಟ್ರಸ್ಟ್ ವತಿಯಿಂದ ಜಿಲ್ಲೆಯ ಪತ್ರಕತ೯ರ 48 ವಿದ್ಯಾಥಿ೯ಗಳಿಗೆ 2.19ಲಕ್ಷ ರು. ವೆಚ್ಚದಲ್ಲಿ ವಿದ್ಯಾನಿಧಿ ವಿತರಣಾ ಕಾಯ೯ಕ್ರಮಕ್ಕೆ ಚಾಲನೆ ನೀಡಿ ನಿರಂಜನ್ ಮಾತನಾಡಿದರು. ಪತ್ರಕತ೯ರ ಮಕ್ಕಳಲ್ಲಿನ ಶೈಕ್ಷಣಿಕ ಪ್ರತಿಭೆಗೆ ಪ್ರೋತ್ಸಾಹ ನೀಡಲು ಪತ್ರಿಕಾಭವನ ಟ್ರಸ್ಟ್ ನೀಡುತ್ತಿರುವ ವಿದ್ಯಾನಿಧಿ ಕಾರಣವಾಗಲಿ ಎಂದು ಹಾರೈಸಿದರಲ್ಲದೇ, ಜಿಲ್ಲೆಯಾದ್ಯಂತಲಿನ ಪತ್ರಕತ೯ರ ಮಕ್ಕಳಿಗೆ ವಿದ್ಯಾನಿಧಿಯನ್ನು ವಿತರಿಸಿರುವುದು ಶ್ಲಾಘನೀಯ ಎಂದು ನಿರಂಜನ್ ಹೇಳಿದರು. ಹಿಂದಿನ ಕಾಲದಲ್ಲಿ ಮನೆಯೊಳಕ್ಕೆ ಆಟದ ಮೈದಾನದಿಂದ ಮಕ್ಕಳನ್ನು ಕರೆತರುವುದೇ ಪೋಷಕರಿಗೆ ಸಮಸ್ಯೆಯಾಗಿತ್ತು. ಬದಲಾದ ಕಾಲಘಟ್ಟದಲ್ಲಿ ಮೊಬೈಲ್ ದಾಸರಾಗಿರುವ ಮಕ್ಕಳನ್ನು ಮನೆಯಿಂದ ಹೊರಕ್ಕೆ ಕರೆತರುವುದೇ ಪೋಷಕರ ಪಾಲಿಗೆ ಸವಾಲಾಗಿದೆ ಎಂದು ವಿಷಾಧಿಸಿದ ನಿರಂಜನ್, ಪೋಷಕರಾಗಿ ನಾವೇನು ಮಾಡುತ್ತೇವೆಯೋ ಅದನ್ನೇ ಮಕ್ಕಳೂ ಅನುಸರಿಸುತ್ತಾರೆ ಎಂಬುದನ್ನು…

Read More

ಮಡಿಕೇರಿ NEWS DESK ಆ.11 : ಆದಿವಾಸಿಗಳ ಮೇಲಿನ ದೌರ್ಜನ್ಯವನ್ನು ತಕ್ಷಣ ನಿಲ್ಲಿಸಬೇಕು ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಆದಿವಾಸಿಗಳ ಸಮನ್ವಯ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಘೋಷಣೆಗಳನ್ನು ಕೂಗಿದ ಸಮಿತಿಯ ಪ್ರಮುಖರು ಹಾಗೂ ಆದಿವಾಸಿಗಳು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಿದರು. ರಾಷ್ಟ್ರೀಯ ಉದ್ಯಾನವನಗಳು, ಮೀಸಲು ಅರಣ್ಯಗಳು ಮತ್ತು ಹುಲಿ ಮೀಸಲು ಪ್ರದೇಶದಿಂದ ಆದಿವಾಸಿಗಳನ್ನು ಹೊರ ಹಾಕಬಾರದು. ಆದಿವಾಸಿ ಅರಣ್ಯ ಹಕ್ಕು ಕಾಯ್ದೆ 2006 ರ ಅನುಷ್ಠಾನದ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಭೂಮಿ ಮತ್ತು ಅರಣ್ಯದ ಮೇಲೆ ಆದಿವಾಸಿಗಳ ಹಕ್ಕುಗಳನ್ನು ಗುರುತಿಸುವ ಮೂಲಕ ಕಿರುಕುಳವನ್ನು ನಿಲ್ಲಿಸಬೇಕು. ಆದಿವಾಸಿಗಳ ಆಚರಣೆ, ನಂಬಿಕೆಗೆ ವಿರುದ್ಧವಾಗಿ ಕೋಮು ದ್ವೇಷ ಹರಡುವುದನ್ನು ನಿಲ್ಲಿಸಬೇಕು. ಆದಿವಾಸಿಗಳ ಅಭಿವೃದ್ಧಿಗಾಗಿ ಕಾಲಮಿತಿಯ ಯೋಜನೆಗಳನ್ನು ರೂಪಿಸಿ ಮೂಲಭೂತ ಸೌಲಭ್ಯಗಳಾದ ಶಾಲೆಗಳು, ಕುಡಿಯುವ ನೀರು, ವಿದ್ಯುತ್, ರಸ್ತೆ, ವೈದ್ಯಕೀಯ ವ್ಯವಸ್ಥೆ ಮತ್ತು ನಿವೇಶನವನ್ನು ನೀಡಬೇಕು. ಆದಿವಾಸಿಗಳ ಕಲ್ಯಾಣಕ್ಕಾಗಿ ಬಜೆಟ್ ನಲ್ಲಿ ಅಗತ್ಯ…

Read More

ಮಡಿಕೇರಿ ಆ.11 NEWS DESK : ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಪೋಕ್ಸೋ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಹಳೆಯ ವಿದ್ಯಾರ್ಥಿನಿ, ಮಕ್ಕಳಾ ರಕ್ಷಣಾ ಇಲಾಖೆಯಲ್ಲಿ ಪೋಲೀಸ್ ಸಿಬ್ಬಂದಿಯಾಗಿರುವ ರಾಷ್ಟ್ರ ಪ್ರಶಸ್ತಿ ವಿಜೇತೆ ಸುಮತಿ ಶೆಟ್ಟಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳು ಹಾಗೂ ಯುವ ಜನತೆ ಮಾದಕ ವ್ಯಸನಿಗಳಾಗುತ್ತಿರುವುದಕ್ಕೆ ಕಾರಣ ಹಾಗೂ ಲೈಂಗಿಕ ದೌರ್ಜನ್ಯ ವಿರುದ್ಧ ಕಾನೂನು ಅರಿವು, ಪೋಕ್ಸೋ ಕಾಯಿದೆಯ ಕುರಿತು ಸಮಗ್ರವಾಗಿ ಮಾಹಿತಿಯನ್ನು ಸುಮತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಸಿ.ಜಿ.ಮಂದಪ್ಪ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಪಡೆಯುವುದರೊಂದಿಗೆ ಸನ್ನಡತೆಯನ್ನು, ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಸಂಸ್ಥೆಯ ಹಿಂದಿ ಉಪನ್ಯಾಸಕ ರಾಜ ಸುಂದರಂ ಸ್ವಾಗತಿಸಿದರು. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸ್ನೇಹಾ ನಿರೂಪಿಸಿ ತ್ರಿಷಾ ವಂದಿಸಿದಳು. ಮುಖ್ಯ ಶಿಕ್ಷಕಿ ಕೆ.ಯು.ರೀಟಾ ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Read More

ಪುತ್ತೂರು ಆ.11 NEWS DESK : ಒಳ್ಳೆಯ ಗುಣ ಮನುಷ್ಯನನ್ನು ಎತ್ತರಕ್ಕೆ ಏರಿಸುತ್ತದೆ. ಗುಣ ಇದ್ದಾಗ ಹಣ ಬರುತ್ತದೆ. ಆದರೆ ಹಣ ಇದ್ದಾಗ ಗುಣ ಇರುವುದಿಲ್ಲ. ಆದುದರಿಂದ ಎಲ್ಲರೂ ಸದ್ಗುಣವಂತರಾಗಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2024-25ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭದಲ್ಲಿ ಅವರು ಮಾತಾಡಿದರು. ಕಾಲೇಜಿನಲ್ಲಿ ಇದುವರೆಗಿನ ಬೇರೆ ಬೇರೆ ವಿಭಾಗಗಳಲ್ಲಿ ವಿದ್ಯಾರ್ಜನೆಯನ್ನು ಮಾಡಿದ್ದೀರಿ. ಆದರೆ ಮುಂದೆ ಇರುವ ಸಮಾಜ ಎನ್ನುವುದು ಬೇರೆಯದೇ ವಿಭಾಗ ಇದರಿಂದ ಕಲಿಯುವುದು ಸಾಕಷ್ಟಿದೆ. ಅದರಲ್ಲಿ ಸಫಲರಾದರೆ ಜೀವನವನ್ನು ಸಾರ್ಥಕಪಡಿಸಿದಂತೆ ಎಂದು ಹೇಳಿದರು. ವಿವಿಧ ವಿಷಯಗಳಲ್ಲಿ ಸಂಶೋಧನೆಗಳನ್ನು ಮಾಡುವತ್ತ ಗಮನಹರಿಸಬೇಕು. ಹಣದ ಹಿಂದೆ ಓಡುವುದಲ್ಲ ಕೊಡುವುದರಲ್ಲಿಯೂ ಮುಂದಾಗಬೇಕು. ಸಮಾಜಕ್ಕೋಸ್ಕರ ಬದುಕುವುದರಿಂದ ಮಾನಸಿಕ ನೆಮ್ಮೆದಿ ಸಿಗುತ್ತದೆ ಎಂದರು.…

Read More

ಕಾರ್ಕಳ ಆ.11 NEWS DESK : ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ಮಾದಕ ವ್ಯಸನವನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಹೇಳಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅವರು, ದೇಶದ ಕಾನೂನಿಗೆ ನಾವೆಲ್ಲರೂ ತಲೆಬಾಗಿ ಅದನ್ನು ಪರಿಪಾಲಿಸಿದಾಗ…

Read More

ಪುತ್ತೂರು ಆ.11 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ವಿದ್ಯಾರ್ಥಿ ವಿಭಾಗ, ಗ್ಲೋಬಲ್ ಡಿಗ್ರೀಸ್ ಮಣಿಪಾಲ್, ಇನ್ಸ್ಟಿಟ್ಯೂಶನ್ಸ್ ಇನ್ನೋವೇಶನ್ ಸೆಲ್ ಮತ್ತು ಕೆನರಾ ಬ್ಯಾಂಕ್ ಇದರ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಎನ್ನುವ ಕುರಿತು 3ನೇ ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2025 ಕಾರ್ಯಕ್ರಮವು ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವು ಜಗತ್ತಿನಾದ್ಯಂತದ ಖ್ಯಾತ ಶಿಕ್ಷಣ ತಜ್ಞರು, ಸಂಶೋಧಕರು, ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟು ಸೇರಿಸಿ ಜ್ಞಾನ ಹಂಚಿಕೆ ಮತ್ತು ಸಹಯೋಗದ ಹೊಸ ಅವಕಾಶಗಳನ್ನು ಸೃಷ್ಟಿಸಿತು. ಇಲ್ಲಿ 267 ಸಂಶೋಧನಾ ಪ್ರಬಂಧಗಳ ಪ್ರಸ್ತುತಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೆನರಾ ಬ್ಯಾಂಕಿನ ಪುತ್ತೂರು ಪ್ರಾದೇಶಿಕ ಕಛೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಂಜನ್ ಕುಮಾರ್, ತಂತ್ರಜ್ಞಾನ ಮತ್ತು ನಿರ್ವಹಣೆ ಜಗತ್ತಿನ ಆರ್ಥಿಕತೆಯ ಆಧಾರ ಸ್ತಂಭಗಳಾಗಿವೆ. ಇದರ ಹೊಸತನದ ಕಲಿಕೆ ಮತ್ತು ಬಳಕೆಗೆ ಅಗತ್ಯವಾದ ತಿಳುವಳಿಕೆಯನ್ನು ನೀಡಲು…

Read More

ಮಡಿಕೇರಿ ಆ.11 NEWS DESK : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್‍ಬಿಐ ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಬ್ಯಾಂಕ್ ಗ್ರಾಹಕರ ಸಹಾಯ ಮತ್ತು ಮಾರಾಟ ವಿಭಾಗದಲ್ಲಿ ಒಟ್ಟು 6,589 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ ಕರ್ನಾಟಕದಲ್ಲಿ 198 ಬ್ಯಾಕ್ಲ್ಯಾಗ್ ಹುದ್ದೆಗಳೂ ಸೇರಿದಂತೆ ಒಟ್ಟು 270 ಹುದ್ದೆಗಳಿಗೆ ನೇಮಕ ಮಾಡಿ ಕೊಳ್ಳಲಾಗುತ್ತದೆ. ಕಳೆದ ವರ್ಷ 13,735 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಎಸ್‍ಬಿಐ ನೇಮಕಾತಿ ನಡೆಸಿತ್ತು. ಈ ವರ್ಷ ಅದರ ಅರ್ಥಕ್ಕೂ ಹೆಚ್ಚು ಹುದ್ದೆಗಳನ್ನು ಕಡಿತಗೊಳಿಸಲಾಗಿದೆ ಎಂಬುದನ್ನ ಮರೆಯದಿರಿ. ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಬರೆಯುವ ಅವಕಾಶ ಇದೆ. :: ರಾಜ್ಯದಲ್ಲಿ ಹುದ್ದೆಗಳ ಸಂಖ್ಯೆ ::  ಕರ್ನಾಟಕ-270 ಹುದ್ದೆಗಳು ( ಬ್ಯಾಕ ಲಾಗ್ ಹುದ್ದೆಗಳು 198) :: ಒಂದಿಷ್ಟು ಗಮನಿಸಿ ::  ಅಧಿಸೂಚನೆಯ ಪ್ರಕಾರ, ಒಬ್ಬ ಅಭ್ಯರ್ಥಿಯು ಒಂದು ರಾಜ್ಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು. ನೇಮಕಗೊಂಡ ಅಭ್ಯರ್ಥಿಗಳಿಗೆ ಆರು ತಿಂಗಳ ಪ್ರೋಬೇಷನರಿ ಅವಧಿ ಇರುತ್ತದೆ. ಈ…

Read More