ಸುಂಟಿಕೊಪ್ಪ ಸೆ.9 NEWS DESK : ಟೇಬಲ್ ಟೆನ್ನಿಸ್ ಪಂದ್ಯಾವಳಿಯ ಸಿಂಗಲ್ಸ್ ವಿಭಾಗದಲ್ಲಿ ಕೆ.ಹೆಚ್.ಫಿದಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕೊಡಗು ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಹಾಗೂ ಇನ್ನರ್ವಿಲ್ ಕ್ಲಬ್ ಆಫ್ ಮಡಿಕೇರಿ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಮ್ಯಾನ್ಸ್ಕಾಂಪೌಡ್ನಲ್ಲಿ 17 ರ ವಯೋಮನದವರಿಗೆ ಆಯೋಜಿಸಲಾದ ಟೇಬಲ್ ಟೆನ್ನಿಸ್ ಪಂದ್ಯಾವಳಿಯ ಸಿಂಗಲ್ಸ್ ವಿಭಾಗದಲ್ಲಿ ಫಿದಾ ಪ್ರಥಮ ಬಹುಮಾನವನ್ನು ಗೆದ್ದುಕೊಂಡಿದ್ದಾಳೆ. ಕಳೆದ ಬಾರಿ ಶಾಲಾ ಮಟ್ಟದ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟಕ್ಕೆ ತೆರಳಿ ಸೆಮಿಪೈನಲ್ ಹಂತದವರೆಗೂ ಸಾಧನೆಯನ್ನು ಮಾಡಿದ್ದಾಳೆ. ಕೆ.ಹೆಚ್.ಫಿದಾ ಸುಂಟಿಕೊಪ್ಪ ಸಮಾಜ ಸೇವಕ ಕೆ.ಎಂ.ಹನೀಫ್ ಹಾಗೂ ಎಂ.ಹೆಚ್.ಸಾಹಿರ ದಂಪತಿಗಳ ಪುತ್ರಿ.
ಲೇಖಕ: admin
ಸುಂಟಿಕೊಪ್ಪ ಸೆ.9 NEWS DESK : ಮಾತೆ ಮರಿಯಮ್ಮ ನವರ ಜನ್ಮದಿನ (ಮೊಂತಿಪೆಸ್ತ್) ಅಂಗವಾಗಿ ಸಂತ ಅಂತೋಣಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ, ಅಡಂಬರ ದಿವ್ಯ ಬಲಿಪೂಜೆ, ಮೊಂಬತ್ತಿ ಹಿಡಿದು ಮಾತೆ ಮರಿಯಮ್ಮನವರ ಸ್ವರೂಪದೊಂದಿಗೆ ಮೆರವಣಿಗೆಯ ಮೂಲಕ ಸಂತ ಮೇರಿ ಶಾಲಾ ಆವರಣದಲ್ಲಿ ಇರಿಸಿ ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಪುಷ್ಪನಮನ ಸಲ್ಲಿಸಿ, ನೂತನ ಭತ್ತದ ತೆನೆಯನ್ನು ವಿತರಿಸುವ ಮೂಲಕ ಮಾತೆ ಮರಿಯಮ್ಮನವರ ಜಯಂತಿ ಸಂಭ್ರಮದಿಂದ ಆಚರಿಸಿದರು. ಮುಂಜಾನೆ ವಿಶೇಷ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಮಡಿಕೇರಿ ಸಂತ ಮೈಕಲರ ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ಸಂಜಯ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ಅಡಂಬರ ದಿವ್ಯ ಬಲಿಪೂಜೆ, ಪ್ರಭೋದನೆಯನ್ನು ಸಮರ್ಪಿಸಿದರು. ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯವರ ಜನ್ಮ ಜಯಂತಿ ಮತ್ತು ತೆನೆಹಬ್ಬ (ಮೊಂತಿಪೆಸ್ತ್) ಜಗತ್ತಿನಾದದ್ಯಾಂತ ಆಚರಿಸುತ್ತಾರೆ. ಇದಕ್ಕೆ ಪೂರ್ವಭಾವಿಯಾಗಿ ದೇವಾಲಯದಲ್ಲಿ 9 ದಿನಗಳ ಕಾಲ ವಿವಿಧ ಧರ್ಮ ಕೇಂದ್ರಗಳ ಧರ್ಮಗುರುಗಳಿಂದ ದಿವ್ಯಬಲಿಪೂಜೆ, ಪ್ರಭೋದನೆ ಹಾಗೂ ನೊವೇನಾ ಪ್ರಾರ್ಥನೆ ಪುಷ್ಪಾನಮನಗಳನ್ನು ಸಲ್ಲಿಸಲಾಯಿತು. ಹೊಸ ತೆನೆಗಳ…
ವಿರಾಜಪೇಟೆ ಸೆ.9 NEWS DESK : ಕಲ್ಲುಬಾಣೆಯ ಬದ್ರಿಯ ಜುಮಾ ಮಸೀದಿ ಹಾಗೂ ದಾರುಲ್ ಇಸ್ಲಾಂ ಮದ್ರಾಸದ ವತಿಯಿಂದ ಕಲ್ಲುಬಾಣೆಯಲ್ಲಿ ಪ್ರವಾದಿ ಹಜರತ್ ಮುಹಮ್ಮದ್ (ಸ.ಅ.ವ) ಅವರ 1500ನೇ ವರ್ಷದ ಜನ್ಮದಿನವಾದ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಕಲ್ಲುಬಾಣೆಯ ಬದ್ರಿಯಾ ಮಸೀದಿಯಿಂದ ಪಂಜರಪೇಟೆವರೆಗೆ ಅದ್ದೂರಿ ಸಂದೇಶ ಜಾಥಾ ನಡೆಯಿತು. ಹಸಿರು ಧ್ವಜಗಳೊಂದಿಗೆ ಮಕ್ಕಳು, ಯುವಕರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಬಿಯವರ ಪ್ರೀತಿಯ ಘೋಷಣೆಗಳನ್ನು ಮೊಳಗಿಸಿದರು. ಊರಿನ ಬೀದಿಗಳಲ್ಲಿ ಮೆರವಣಿಗೆ ಸಾಗಿದಾಗ, ಧಾರ್ಮಿಕ ಉತ್ಸಾಹದ ಜೊತೆಗೆ ಸೌಹಾರ್ದತೆಯ ಸಂದೇಶ ಹರಡಿತು. ನಂತರ ಬದ್ರಿಯಾ ಶಾಲಾ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನ ಸೆಳೆಯುವಂತಾಗಿತ್ತು. ವಿಶೇಷ ಆಕರ್ಷಣೆಯಾಗಿ ದಫ್ ತಂಡಗಳು ತಮ್ಮ ಮನೋಹರವಾದ ಪ್ರದರ್ಶನದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು. ಮಕ್ಕಳ ನಾತ್ ಪಠಣ, ಭಾಷಣ ಹಾಗೂ ಕಾವ್ಯ ವಾಚನಗಳು ಪ್ರವಾದಿಯವರ ಜೀವನೋಪದೇಶಗಳನ್ನು ನೆನಪಿಗೆ ತಂದುಕೊಟ್ಟವು. ಕಾರ್ಯಕ್ರಮದ ಅಂತ್ಯದಲ್ಲಿ ನಡೆದ ಬಹುಮಾನ ವಿತರಣೆ ಸಮಾರಂಭದಲ್ಲಿ ಸ್ಪರ್ಧೆಗಳಲ್ಲಿ ಜಯಗೊಂಡ…
ಮಡಿಕೇರಿ NEWS DESK ಸೆ.8 : ರಾಜ್ಯ ಸರಕಾರದ ವತಿಯಿಂದ ಸೆ.9 ರಿಂದ ಪುನರರಾಂಭಗೊಳ್ಳುವ ಜಾತಿವಾರು ಜನಗಣತಿಯಲ್ಲಿ ಕೊಡಗಿನಲ್ಲಿ ಅಕ್ರಮವಾಗಿ ಆಶ್ರಯ ಪಡೆದಿರುವ ರೋಹಿಂಗ್ಯ ಹಾಗೂ ಬಾಂಗ್ಲಾ ದೇಶಿಗರನ್ನು ಸ್ಥಳೀಯ ನಾಗರೀಕರು ಮತ್ತು ಮತದಾರರೆಂದು ದಾಖಲಿಸುವ ಸಾಧ್ಯತೆಗಳಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕೆಂದು ಒತ್ತಾಯಿಸಿ ಗೋಣಿಕೊಪ್ಪದಲ್ಲಿ ಸಿಎನ್ಸಿ ವತಿಯಿಂದ ನಡೆದ 12ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೋಹಿಂಗ್ಯ ಹಾಗೂ ಬಾಂಗ್ಲಾ ದೇಶಿಗರನ್ನು ಸ್ಥಳೀಯರೆಂದು ಅಧಿಕೃತಗೊಳಿಸುವ ಒಳ ಸಂಚು ನಡೆದಿದ್ದು, ಕೊಡವರು ಈ ಕುರಿತು ಜಾಗೃತರಾಗಿ ಕೊಡವ ಲ್ಯಾಂಡ್ ನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದರು. ಟರ್ಕಿ ದೇಶದ ಕಾರ್ಮಿಕರಿಗೆ ಪ್ಯಾರಿಸ್ನಲ್ಲಿ ಗೆಸ್ಟ್ ವರ್ಕರ್ ಪರ್ಮಿಟ್ ನೀಡಿದಂತೆ ಕೊಡಗಿನಲ್ಲೂ ಕಾರ್ಮಿಕ ಸಮಸ್ಯೆಯನ್ನು ನೀಗಿಸಲು ವಲಸಿಗ ಕಾರ್ಮಿಕರಿಗೆ ಗೆಸ್ಟ್ ವರ್ಕರ್ ಪರ್ಮಿಟ್ ನೀಡಬೇಕು. ವಾರ್ಷಿಕ ಕೆಲಸ ಮುಗಿದ ನಂತರ…
ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ಚರ್ಚ್ ನಲ್ಲಿ ಯೇಸುವಿನ ತಾಯಿ ಮೇರಿ ಮಾತೆಯ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮೇರಿ ಹಬ್ಬದ ಹಿಂದಿನ 9 ದಿವಸಗಳ ಕಾಲ ಚರ್ಚ್ ನಲ್ಲಿ ನವೇನ ಪ್ರಾರ್ಥನೆ ಜರುಗಿತು. ಈ ಸಂದರ್ಭ ವಿಶೇಷವಾದ ಬಲಿ ಪೂಜೆ, ಪ್ರಸಂಗ, ಪ್ರಬೋಧನೆಗಳು ಜರುಗಿದವು. ಮಾತೆ ಮರಿಯಮ್ಮನವರ ಗೌರವಾರ್ಥವಾಗಿ ಚರ್ಚ್ ಒಳ ಆವರಣದಲ್ಲಿರುವ ಮಾತೆ ಮರಿಯಮ್ಮ ಪ್ರತಿಮೆಗೆ ಪುಷ್ಪಾರ್ಚನೆಯನ್ನು ಧರ್ಮ ಗುರುಗಳು ಹಾಗೂ ನೆರೆದಿದ್ದ ಭಕ್ತಾದಿಗಳು ಸಲ್ಲಿಸಿದರು. ಈ ಒಂಬತ್ತು ದಿವಸಗಳ ವಿಶೇಷ ಪ್ರಾರ್ಥನೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಂತ ಅನ್ನಮ್ಮ ದೇವಾಲಯ ವ್ಯಾಪ್ತಿಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಾತೆ ಮರಿಯಮ್ಮ ಹಬ್ಬದ ಪ್ರಯುಕ್ತ ಮುಂಜಾನೆಯಿಂದಲೇ ಚರ್ಚ್ ನಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಜೇಮ್ಸ್ ಡೊಮಿನಿಕ್ ಹಾಗೂ ಸಹಾಯಕ ಗುರುಗಳಾದ ರೆ. ಫಾ. ಅಭಿಲಾಶ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು…
ಮಡಿಕೇರಿ ಸೆ.8 NEWS DESK : ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಲೀಲಾ ರಾಘವನ್, ಗುರುದತ್ತ್, ಕೆ.ಎನ್.ಪ್ರವೀಣ್ ಶೇಟ್, ಇತರರು ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ಸೋಮವಾರಪೇಟೆಯ ಅನಂತರಾಜ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಬಹುಮಾನ ವಿತರಿಸಿದರು. ಕೆ.ಎನ್.ಪ್ರವೀಣ್ ಶೇಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಲೀಲಾ ರಾಘವನ್, ಹರಿಶಂಕರ್, ಅಜರ್ ವಾಸಿನ್, ಕುಮಾರೇಷ್ ವಿ.ಎಸ್.ಮೊಹಮ್ಮದ್ ಆಸಿಪ್, ಟೇಬಲ್ ಟೆನ್ನಿಸ್ ಆಟಗಾರರಾದ ಪಿ.ಎನ್.ಮಂಜುನಾಥ್ ಇತರರು ಇದ್ದರು. ರಶ್ಮಿ ಪ್ರವೀಣ್ ಮತ್ತು ಪೃಥ್ವಿ ಅವರು ಸ್ವಾಗತಿಸಿದರು. :: ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿಜೇತರಾದವರ ವಿವರ :: 13 ವರ್ಷದೊಳಗಿನ ಸಿಂಗಲ್ಸ್ ಬಾಲಕರ ವಿಭಾಗದಲ್ಲಿ ಸುದೀಪ್ ಎನ್.(ಪ್ರಥಮ), ಡಿವಿನ್ ಗೌಡ(ದ್ವಿತೀಯ), 13 ವರ್ಷದೊಳಗಿನ ಸಿಂಗಲ್ಸ್ ಬಾಲಕಿಯರ ವಿಭಾಗದಲ್ಲಿ ಲಿಪಿಕ (ಪ್ರಥಮ), ನಿಮ್ರಾ(ದ್ವಿತೀಯ), 17 ವರ್ಷದೊಳಗಿನ ಸಿಂಗಲ್ಸ್ ಬಾಲಕರ ವಿಭಾಗದಲ್ಲಿ ಲಿತೇಶ್ (ಪ್ರಥಮ), ಅಯಿಜನ್ವಾಷಿಮ್(ದ್ವಿತೀಯ), ಬಾಲಕಿಯರ ವಿಭಾಗದಲ್ಲಿ ಫಿದಾ(ಪ್ರಥಮ), ಬೃಂದಾ(ದ್ವಿತೀಯ), 17…
ಮಡಿಕೇರಿ ಸೆ.8 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12 ರಾಜಾಸೀಟ್ ಫೀಡರ್ನಲ್ಲಿ ಸೆಪ್ಟೆಂಬರ್, 10 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯವರೆಗೆ ದಸರಾ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಡಿ.ಸಿ.ಕಚೇರಿ, ರಾಜಸೀಟ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿನಗರ, ನ್ಯೂ ಎಕ್ಸಟೆಂಕ್ಷನ್, ಎಲ್.ಐ.ಸಿ ರಸ್ತೆ, ಸ್ಟುವರ್ಟ್ ಹಿಲ್, ಗೌಳಿ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಸೆ.8 NEWS DESK : ಮೂರ್ನಾಡು 33/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು, ಎಫ್2 ನಾಪೋಕ್ಲು ಹಾಗೂ ಹೊದ್ದೂರು ಫೀಡರ್ನಲ್ಲಿ ಸೆ.9 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು ಟೌನ್ ಮುತ್ತಾರ್ಮುಡಿ, ಕಿಗ್ಗಾಲು, ಕುಂಬಳದಾಳು, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೇರೂರು, ನಾಪೋಕ್ಲು ಟೌನ್ ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲ್ಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಸೆ.8 NEWS DESK : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅತಿದೊಡ್ಡ ಜಾಗತಿಕ ವೇದಿಕೆಯಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಸುವರ್ಣಾವಕಾಶ ಒದಗಿಸಿದೆ. ಹಾಗೆಯೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಪದಕಗಳನ್ನು ಗೆಲ್ಲುವುದರ ಮೂಲಕ ಭಾರತವನ್ನು ಪ್ರತಿನಿಧಿಸಲು ಅವಕಾಶ ನೀಡುತ್ತಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025 (ವಲ್ರ್ಡ್ ಸ್ಕಿಲ್ಸ್) ಸ್ಪರ್ಧೆಯಲ್ಲಿ ಜಗತ್ತಿನಾದ್ಯಂತ 75 ಕ್ಕಿಂತಲೂ ಹೆಚ್ಚು ದೇಶಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿವೆ. 16 ರಿಂದ 25 ವರ್ಷದೊಳಗಿನ ಯುವಜನತೆ 63 ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಟತೆಯ ಕಾರ್ಯಕ್ರಮವಾಗಿದೆ. 2026 ನೇ ಸಾಲಿಗೆ ವಿಶ್ವ ಕೌಶಲ್ಯ ಸ್ಪರ್ಧೆಯು ಚೀನಾದ ಶಾಂಘೈನಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯದ ಯುವ ಜನತೆಯ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಲು ಹಾಗೂ ಮಾದರಿ ಕೌಶಲ್ಯಾಭರಿತ ರಾಜ್ಯವನ್ನಾಗಿಸಲು 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ (ಇಂಡಿಯಾ ಸ್ಕಿಲ್ಸ್…
ಸುಂಟಿಕೊಪ್ಪ ಸೆ.8 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ರಾಮ ಮಂದಿರದಲ್ಲಿ ಹನ್ನೊಂದು ದಿನಗಳ ಕಾಲ ಪ್ರತಿಷ್ಠಾಪಿಸಿದ್ದ 61ನೇ ವರ್ಷದ ಗೌರಿ ಗಣೇಶ ಮೂರ್ತಿಯನ್ನು ಶ್ರದ್ಧಾಭಕ್ತಿಯಿಂದ ವಿಸರ್ಜಿಸಲಾಯಿತು. ಬೆಳಿಗ್ಗೆಯಿಂದ ಗಣಹೋಮ, ಹೂವಿನ ಪೂಜೆಯ ಜೊತೆಯಲ್ಲಿ ಸುತ್ತಮುತ್ತಲಿನ ನೂರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ನಂತರ ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ದೇವಾಲಯದಲ್ಲಿ ಪ್ರಧಾನ ಅರ್ಚಕ ಹಾ.ಮಾ.ಗಣೇಶ್ ಶರ್ಮಾ, ಮಂಜುನಾಥ್ ಶರ್ಮಾ, ಗಣೇಶ್ ಉಪಾಧ್ಯಯ ಅವರ ನೇತೃತ್ವದಲ್ಲಿ ವಿಶೇಷ ಪೂಜೆ, ಮಹಾಪೂಜೆ ಹಾಗೂ ದೇವಾಲಯದಲ್ಲಿ ಗೌರಿ ಗಣೇಶನ ಉತ್ಸವ ಮೂರ್ತಿಗೆ ಕೊನೆಯ ಮಹಾ ಆರತಿಯನ್ನು ಮಾಡುವುದರ ಮೂಲಕ ಜೈ ಘೋಷಣೆಯೊಂದಿಗೆ ವಿದ್ಯುತ್ ದೀಪ ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಯುವಕ- ಯುವತಿಯರು ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕುತ್ತಾ ಶೋಭಯಾತ್ರೆಯೊಂದಿಗೆ ಸಾಗಿದರು. ರಾಮ ಮಂದಿರದಿಂದ ಆರಂಭಗೊಂಡ ಮೆರವಣಿಗೆ ಮಾದಾಪುರ ರಸ್ತೆಯಲ್ಲಿಯಲ್ಲಿರುವ ವೃಕ್ಷೋದ್ಭವ ಮಹಾಗಣಪತಿ ದೇವಾಲಯದತ್ತ ತೆರಳಿ ಅಲ್ಲಿ ಪೂಜೆ…






