ಮಡಿಕೇರಿ ಆ.11 NEWS DESK : ಕರಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ ನಡೆಯಿತು. ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಾಲಚಂದ್ರ ನಾಯರ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಸನ್ನ ಕುಮಾರಿ, ಮಹಾಲಕ್ಷ್ಮಿ, ಸಹ ಶಿಕ್ಷಕಿಯರಾದ ಅಹಲ್ಯ, ಲತಾ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಯಮುನಾ ಮತ್ತು ಸದಸ್ಯರು ಪೋಷಕರು ಹಾಗೂ ಪಂಚಾಯತಿ ಸದಸ್ಯರಾದ ಜಯಶ್ರೀ ಕೆ.ಸಿ.ಕೃಷ್ಣ ವಿದ್ಯಾರ್ಥಿಗಳು ಪಾಲ್ಗೊಂಡರು.
ಲೇಖಕ: admin
ಮಡಿಕೇರಿ ಆ.11 NEWS DESK : ಭಾಗಮಂಡಲದ ಶ್ರೀ ಕಾವೇರಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ರಕ್ಷಾಬಂಧನ ಆಚರಿಸಲಾಯಿತು. ಶ್ರೀ ಕಾವೇರಿ ಆಟೋ ಚಾಲಕ ಮತ್ತು ಮಾಲೀಕರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಾದ ಶ್ರೀನಾಥ್ ಮಾತನಾಡಿ, ರಕ್ಷಾಬಂಧನ ಕಾರ್ಯಕ್ರಮದ ಹಿನ್ನೆಲೆ ಮತ್ತು ರಾಷ್ಟೀಯ ಸ್ವಯಂ ಸೇವಕ ಸಂಘ ದ ಪಾತ್ರ ದ ಬಗ್ಗೆ ತಿಳಿಸಿದರು. ರಾಷ್ಟೀಯ ಸ್ವಯಂ ಸೇವಕ ಸಂಘದ ನಿಕಟಪೂರ್ವ ಕಾರ್ಯಕರ್ತ ಪ್ರಸನ್ನ ಸಂಘದ ಪ್ರಾರ್ಥನೆ ಮತ್ತು ರಕ್ಷಾಬಂಧನದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ನಂತರ ಪರಸ್ಪರ ರಕ್ಷೆ ಕಟ್ಟಿ ಸಿಹಿ ಹಂಚಿ ಸಂಭ್ರಮಿಸಿದರು.
ಕಾರ್ಕಳ ಆ.11 NEWS DESK : ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು “ಕ್ರಿಯೇಟಿವ್ ಪುಸ್ತಕ ಧಾರೆ – 2025” ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರು ಆಗಮಿಸಲಿದ್ದಾರೆ. ಜೊತೆಗೆ ಶ್ರೀ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಸಾಹಿತಿಗಳು ಮತ್ತು ಅಧ್ಯಕ್ಷರು, ಕ.ಸಾ.ಪ ಕಾರ್ಕಳ ತಾಲೂಕು, ಡಾ. ಪ್ರದೀಪಕುಮಾರ ಹೆಬ್ರಿ, ಮಹಾಕಾವ್ಯಗಳ ಲೇಖಕರು, ಮಂಡ್ಯ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಘನ ಉಪಸ್ಥಿತಿ ವಹಿಸಲಿದ್ದಾರೆ. :: ಅನಾವರಣಗೊಳ್ಳಲಿರುವ ಕೃತಿಗಳು :: ಯಾತ್ರೆ – ಚಂದ್ರಕಾಂತ ಪೋಕಳೆ, ವಿಜ್ಞಾನ ಕೌತುಕಗಳ ಮಹಾಯಾನ – ಎಲ್.ಪಿ ಕುಲಕರ್ಣಿ, ಹರ್ಷ ರಾಗ – ಪೌಝಿಯಾ ಸಲೀಂ, ಹಿತಶತ್ರು – ಪದ್ಮಲತಾ ಮೋಹನ್, …
ಸೋಮವಾರಪೇಟೆ ಆ.10 : ಸಿ ಮತ್ತು ಡಿ ಕೃಷಿ ಭೂಮಿಯ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ರೈತ ಹೋರಾಟ ಸಮಿತಿ ವತಿಯಿಂದ ಆ.12ರಂದು ಕರೆ ನೀಡಿರುವ ಸೋಮವಾರಪೇಟೆ ತಾಲ್ಲೂಕು ಬಂದ್ ಗೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು. ರೈತ ಹೋರಾಟ ಸಮಿತಿಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಸೇರಿದ್ದ ಸದಸ್ಯರುಗಳೂ ಇದ್ದು, ಇದು ರೈತಪರವಾದ ಹೋರಾಟವಾಗಿದೆ. ಸಮಿತಿಯೂ ರಾಜಕೀಯ ರಹಿತವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಶಾಸಕ ಡಾ.ಮಂತರ್ಗೌಡ ನೇತೃತ್ವದಲ್ಲಿ ರೈತ ಹೋರಾಟ ಸಮಿತಿ ಪದಾಧಿಕಾರಿಗಳು ಕಂದಾಯ ಸಚಿವರು, ಅರಣ್ಯ ಸಚಿವರು ಸೇರಿದಂತೆ ಸಂಬಂಧಪಟ್ಟ ಮೇಲಾಧಿಕಾರಿಗಳನ್ನು ಅನೇಕ ಬಾರಿ ಭೇಟಿ ಮಾಡಿ, ಸಿ ಆಂ್ಯಡ್ ಡಿ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಉನ್ನತ ಮಟ್ಟದ ಸಮಿತಿ ರಚಿಸಿ ಸಮಸ್ಯೆ ಬಗೆಹರಿಸುವ ಬಗ್ಗೆ ಸಂಬಂಧಪಟ್ಟ ಸಚಿವರು ಭರವಸೆ ನೀಡಿದ್ದಾರೆ. ಹೋರಾಟ ನಿರಂತರವಾಗಿ ನಡೆಯುತ್ತಿರುತ್ತದೆ. ರೈತರಿಗೆ ಅನ್ಯಾಯವಾಗುವುದಕ್ಕೆ ಕಾಂಗ್ರೆಸ್ ಸರ್ಕಾರ ಅವಕಾಶ…
ಸೋಮವಾರಪೇಟೆ NEWS DESK ಆ.10 : ಸಿ ಮತ್ತು ಡಿ ಕೃಷಿ ಭೂಮಿ ಹಕ್ಕಿಗಾಗಿ ರೈತ ಹೋರಾಟ ಸಮಿತಿ ಆ.12ರಂದು ಕರೆ ನೀಡಿರುವ ಸೋಮವಾರಪೇಟೆ ತಾಲ್ಲೂಕು ಬಂದ್ಗೆ ಬಿಜೆಪಿ ಕೃಷಿಮೋರ್ಚಾ ಹಾಗೂ ಮಂಡಲ ಬಿಜೆಪಿ ಸಂಪೂರ್ಣ ಬೆಂಬಲ ಸೂಚಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಶರತ್ಚಂದ್ರ ಅವರು ಬಿಜೆಪಿ ಶಕ್ತಿ ಕೇಂದ್ರ, ಕೃಷಿ ಮೋರ್ಚಾದ ಸದಸ್ಯರುಗಳು ಬಂದ್ ಹಾಗೂ ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕಳೆದ ಎರಡೂವರೆ ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ತರುವ ಮೂಲಕ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು. ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿ ಎಸ್.ಆರ್.ಸೋಮೇಶ್, ಪ್ರಮುಖರಾದ ಭಾನುಪ್ರಕಾಶ್, ರವಿ, ಕಿಬ್ಬೆಟ್ಟ ಮಧು ಇದ್ದರು.
ಮಡಿಕೇರಿ NEWS DESK ಆ.10 : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ ವತಿಯಿಂದ ಆ.17 ರಂದು ಮೂರ್ನಾಡಿನಲ್ಲಿ 6 ವರ್ಷದೊಳಗಿನ ಮಕ್ಕಳಿಗಾಗಿ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆ ಹಾಗೂ 25 ವರ್ಷ ಮೇಲ್ಪಟ್ಟ ದಂಪತಿಗಳಿಗಾಗಿ ರಾಧಾಕೃಷ್ಣ ಛದ್ಮವೇಷ ಸ್ಪರ್ಧೆ ನಡೆಯಲಿದೆ. ಮೂರ್ನಾಡಿನ ಪ್ರಕೃತಿ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಿರುವ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಸಂದರ್ಭ ಛದ್ಮವೇಷ ಸ್ಪರ್ಧೆಗಳು ನಡೆಯಲಿವೆ. 6 ವರ್ಷದೊಳಗಿನ ಮಕ್ಕಳು ಶ್ರೀಕೃಷ್ಣನ ಛದ್ಮವೇಷವನ್ನು ಮಾತ್ರ ಧರಿಸಬೇಕು. 25 ವರ್ಷ ಮೇಲ್ಪಟ್ಟ ದಂಪತಿಗಳು ಹಾವಾಭಾವದೊಂದಿಗೆ ರಾಧಾಕೃಷ್ಣ ಛದ್ಮವೇಷ ಪ್ರದರ್ಶಿಸಬೇಕು. ಈ ಸ್ಪರ್ಧಾ ವಿಭಾಗದಲ್ಲಿ ವಯಸ್ಸಿನ ಮಿತಿ ಇರುವುದಿಲ್ಲ. ಆಸಕ್ತರು ಆ.12 ರೊಳಗೆ ಹೆಸರನ್ನು ನೋದಾಯಿಸಿಕೊಳ್ಳಬೇಕು. ವಿಜೇತರಿಗೆ ಆಕರ್ಷಕ ನಗದು ಬಹುಮಾನ ನೀಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ನ ಮೂರ್ನಾಡು ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಿ.ಪಿ.ಚಂಗಪ್ಪ 9449073036, ಎಂ.ಕೆ.ಪ್ರವೀಣ 7019095524, ಮಮತ ಶ್ರೀಹರಿ 9686960327 ನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ NEWS DESK ಆ.10 : ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸುವುದರಿಂದ ಕೊಡವರ ಸಾಂವಿಧಾನಿಕ ಹಕ್ಕುಗಳಿಗೆ ಮತ್ತಷ್ಟು ಬಲ ಸಿಗಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಸುಂಟಿಕೊಪ್ಪದಲ್ಲಿ 9ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 2026ರ ರಾಷ್ಟ್ರೀಯ ಜನಗಣತಿ ಮತ್ತು ಜನಾಂಗವಾರು ಮಾಹಿತಿ ಸಂಗ್ರಹಿಸುವ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಸರ್ವ ಕೊಡವರು ಅರಿತುಕೊಳ್ಳಬೇಕು. ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಸಿಎನ್ಸಿ ನಡೆಸುವ ಶಾಂತಿಯುತ ಹೋರಾಟಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು. 2018ರಲ್ಲಿ ಕೊಡವಲ್ಯಾಂಡ್ ನಲ್ಲಿ ವ್ಯಾಪಕ ಜಲಸ್ಫೋಟ ಮತ್ತು ಭೂಸ್ಫೋಟ ಸಂಭವಿಸಿ ಸಾವುನೋವು,…
ಮಡಿಕೇರಿ NEWS DESK ಆ.9 : ನಗರದ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಗೆ ಪ್ರಕಾಶ್ ಆಚಾರ್ಯ ಅವರನ್ನು ನಿಯಮ ಬಾಹಿರವಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಮಡಿಕೇರಿ ನಗರಾಧ್ಯಕ್ಷ ಗಜೇಂದ್ರ ಕುಶ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಕಾಯ್ದೆಯನ್ವಯ ನಾಮ ನಿರ್ದೇಶಿತ ಸದಸ್ಯರು ಯಾವುದೇ ರಾಜಕೀಯ ಪಕ್ಷದ ಪದಾಧಿಕಾರಿಯಾಗಿರಬಾರದು. ಆದರೆ ಪ್ರಕಾಶ್ ಆಚಾರ್ಯ ಅವರು ಶ್ರೀ ಓಂಕಾರೇಶ್ವರ ದೇವಾಲಯ ಸಮಿತಿಗೆ ನಾಮ ನಿರ್ದೇಶನವಾಗುವಾಗ ನಗರ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿದ್ದರು, ಅಲ್ಲದೆ ಪ್ರಸ್ತುತ ನಗರಾಧ್ಯಕ್ಷರಾಗಿದ್ದಾರೆ ಎಂದು ಗಮನ ಸೆಳೆದಿದ್ದಾರೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ತಿದ್ದುಪಡಿ ಅದಿನಿಯಮ 2011 ರ ಸೆಕ್ಷನ್ 25(3) ಮತ್ತು (4)ರ ಅನಹರ್ತೆಗಳೊಂದಿಗೆ ಹಾಗೂ ಕಾಯ್ದೆಯ (2)ನೇ ಯ ತಿದ್ದುಪಡಿ ಕಲಂ 25(2)(ಡಿ) ಅನ್ವಯ ಯಾವುದೇ ರಾಜಕೀಯ ಪಕ್ಷದ ಪದಾಧಿಕಾರಿಯಾಗಿರುವುದು ಕಂಡು ಬಂದಲ್ಲಿ ಅಂತಹವರ ಸದಸ್ಯತ್ವ…
ಮಡಿಕೇರಿ NEWS DESK ಆ.9 : ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕರೊಬ್ಬರು ಗಾಯಗೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕು ಅಮ್ಮತಿ ಗ್ರಾ.ಪಂ ವ್ಯಾಪ್ತಿಯ ಇಂಜಿಲಗೆರೆ ಬಳಿ ನಡೆದಿದೆ. ಕಾಫಿ ತೋಟದ ಕೆಲಸಕ್ಕೆಂದು ಆಟೋರಿಕ್ಷಾದಲ್ಲಿ ತೆರಳುತ್ತಿದ್ದ ಪ್ರದೀಪ್ ಎಂಬುವವರೇ ಗಾಯಗೊಂಡಿರುವ ಕಾರ್ಮಿಕ. ಇಂದು ಬೆಳಿಗ್ಗೆ ಮೂವರು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾದ ಮೇಲೆ ಮುಖ್ಯರಸ್ತೆಯ ತಿರುವಿನಲ್ಲಿ ತೋಟದೊಳಗಿನಿಂದ ದಿಢೀರ್ ಆಗಿ ಧಾವಿಸಿದ ಆನೆ ದಾಳಿ ಮಾಡಿದೆ. ಈ ಸಂದರ್ಭ ಆನೆಯ ದಂತ ತಗುಲಿ ಪ್ರದೀಪ್ ಗಾಯಗೊಂಡರು ಎಂದು ತಿಳಿದು ಬಂದಿದೆ. ಆಟೋದಲ್ಲಿದ್ದವರು ಕಿರುಚಿಕೊಂಡಾಗ ಮತ್ತೊಮ್ಮೆ ದಾಳಿ ಮಾಡಲು ಕಾಡಾನೆ ಮುಂದಾಗಿದೆ. ಸಮಯ ಪ್ರಜ್ಞೆ ಮೆರೆದ ಆಟೋ ಚಾಲಕ ಫಿರೋಜ್ ಅವರು ವೇಗವಾಗಿ ಆಟೋವನ್ನು ಚಲಾಯಿಸಿದ್ದಾರೆ. ಆಟೋದ ಹಿಂಭಾಗದಲ್ಲಿ ಕಾಡಾನೆ ಓಡಿ ಬಂದಿತ್ತಾದರೂ ಬೇರೊಂದು ವಾಹನ ಬಂದ ತಕ್ಷಣ ಪಕ್ಕದ ತೋಟದೊಳಗೆ ನುಸುಳಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಲಯ ಅರಣ್ಯ ಅಧಿಕಾರಿ ಶಿವರಾಮ ಅವರ ನಿರ್ದೇಶನದ ಮೇರೆಗೆ ಉಪ ವಲಯ…
ಮಡಿಕೇರಿ NEWS DESK ಆ.9 : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಕೊಡವರ ಪರವಾದ ವಿವಿಧ ಹಕ್ಕುಗಳನ್ನು ಮಂಡಿಸಿತು. ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮಸಂಜಾತ ಕೊಡವ ಬುಡಕಟ್ಟು ಜನರ ಬೇಡಿಕೆಗಳ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯವ ಸಲುವಾಗಿ ನಿರಂತರವಾಗಿ ಶಾಂತಿಯುತ ಧರಣಿ ಸತ್ಯಾಗ್ರಹಗಳನ್ನು ನಡೆಸಲಾಗುತ್ತಿದೆ ಎಂದರು. ಕೊಡವರು ಈ ಪವಿತ್ರ ಕೊಡವ ನೆಲದ ಮೂಲನಿವಾಸಿ ಆದಿಮಸಂಜಾತ ಬುಡಕಟ್ಟು ಸಮುದಾಯದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್ ಕೊಡವರ ಸಾಂಪ್ರದಾಯಿಕ ಹಾಗೂ ಅವಿಭಾಜ್ಯ ಮಾತೃಭೂಮಿಯಾಗಿದೆ. ಕೊಡವರ ಜನ್ಮಭೂಮಿ ಈ ಭೂಮಂಡಲದಷ್ಟೇ ಪ್ರಾಚೀನವಾಗಿದೆ. ಕೊಡವ ಬುಡಕಟ್ಟು ಜನಾಂಗವು ಮಾನವ ಜನಾಂಗದಷ್ಟೇ ಹಳೆಯದಾಗಿದೆ. ಈ ಕೊಡವ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಯನ್ನು…






