ಸೋಮವಾರಪೇಟೆ NEWS DESK ಆ.9 : ರಕ್ಷಾ ಬಂಧನದ ಹಿನ್ನೆಲೆ ಸೋಮವಾರಪೇಟೆ ಬಿಜೆಪಿ ಮಹಿಳಾ ಮೋರ್ಚಾದ ಪ್ರಮುಖರು ಪತ್ರಕರ್ತರಿಗೆ ರಕ್ಷೆ ಕಟ್ಟಿ ಶುಭ ಹಾರೈಸಿದರು. ಸಹೋದರತ್ವ ಮತ್ತು ಬಾಂಧವ್ಯದ ಕೊಂಡಿ ರಕ್ಷಾ ಬಂಧನ ಎಂದು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರುಪಾಕ್ಷ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಪತ್ರಕರ್ತರಿಗೆ ರಕ್ಷೆ ಕಟ್ಟಿ ಶುಭ ಹಾರೈಸಿದ ಅವರು ಹೆಣ್ಣು ಮಕ್ಕಳು ಸಹೋದರ ಭಾವನೆಯಿಂದ ರಕ್ಷೆ ಕಟ್ಟಿ ಸಹೋದರರಿಂದ ಆಶೀರ್ವಾದ ಮತ್ತು ರಕ್ಷಣೆ ಕೋರುವ ಸಂಪ್ರದಾಯ ನಮ್ಮ ದೇಶದಲ್ಲಿ ಆಚರಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದರು. ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷೆ ಮೋಹಿನಿ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ತಂಗಮ್ಮ, ಹಾನಗಲ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೇಣುಕಾ, ಮಂಡಲ ಬಿಜೆಪಿ ಕಾರ್ಯದರ್ಶಿ ಇಂದಿರಾ ಸಾಲಿಯಾನ, ಪ್ರಮುಖರಾದ ವರಲಕ್ಷ್ಮಿ ಸಿದ್ದೇಶ್ವರ, ಸುಮತಿ ಉಪಸ್ತಿತರಿದ್ದರು. ನಂತರ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೂ ರಕ್ಷೆ ಕಟ್ಟಿ ಶುಭ ಹಾರೈಸಿದರು.
ಲೇಖಕ: admin
ಮಡಿಕೇರಿ NEWS DESK ಆ.9 : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ನೀಮಾ )ನ ಕೊಡಗು ಜಿಲ್ಲಾ ಘಟಕದ ವತಿಯಿಂದ ಬೆಳ್ಳಿ ಹಬ್ಬ ಆಚರಣೆಯ ಅಂಗವಾಗಿ “ತರು-ಯಜ್ಞ” ಎಂಬ ವಿಶೇಷ ಕಾರ್ಯಕ್ರಮಕ್ಕೆ ಕೊಡಗಿನ ವಿವಿಧ ತಾಲೂಕುಗಳಲ್ಲಿ ಚಾಲನೆ ನೀಡಲಾಯಿತು. ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಔಷಧೀಯ ಗಿಡಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಕೊಡಗಿನಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಡಿಯಲ್ಲಿ ಒಂದು ವರ್ಷದಲ್ಲಿ ಕೊಡಗಿನ ಶಾಲಾ ಕಾಲೇಜುಗಳಲ್ಲಿ ಕನಿಷ್ಠ 2,500 ಔಷಧೀಯ ಗಿಡಗಳನ್ನು ಮಕ್ಕಳ ಮೂಲಕ ಬೆಳೆಸುವ ಗುರಿ ಹೊಂದಲಾಗಿದೆ. ಒಂದು ವರ್ಷದ ನಂತರ ಅತ್ಯುನ್ನತವಾಗಿ ಬೆಳೆದ ಮದ್ದಿನ ಗಿಡಗಳನ್ನು ಪೋಷಿಸುತ್ತಿರುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು ಎಂದು ನೀಮಾ ಪ್ರಮುಖರು ತಿಳಿಸಿದರು. ಮಡಿಕೇರಿಯ ಕೊಡಗು ವಿದ್ಯಾಲಯದ ಎನ್ ಸಿ ಸಿ ವಿದ್ಯಾರ್ಥಿಗಳು, ನಾಪೋಕ್ಲುವಿನ ಪಾರಾಣೆ ಪ್ರೌಢಶಾಲೆಯ ವಿದ್ಯಾರ್ಥಿಗಳು, ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಹಾಗೂ ಕುಶಾಲನಗರದಲ್ಲಿ ಪೋಷಕರು ಈ ವಿಶೇಷ ಯೋಜನೆಗೆ ಚಾಲನೆ ನೀಡಿದರು. ಕೊಡಗು ನೀಮಾ ಸದಸ್ಯ…
ಮಡಿಕೇರಿ NEWS DESK ಆ.9 : ಮಡಿಕೇರಿ ನಗರದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಟ್ರಸ್ಟಿಗಳು, ದಸರಾ ಉತ್ಸವ ಸಮಿತಿಯ ಮಾಜಿ ಗೌರವ ಅಧ್ಯಕ್ಷರು ಹಾಗೂ ಅಂಬಿಕಾ ವೀಡಿಯೋಸ್ ನ ಮಾಲೀಕರೂ ಆದ ಅಜ್ಜಿನಂಡ ಗಣೇಶ್ ಅಯ್ಯಣ್ಣ (68) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಸಮಾಜ ಸೇವಕಿ ಮೊಹಂತಿ ಗಣೇಶ್ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮೃತ ಗಣೇಶ್ ಅವರ ಅಂತ್ಯಕ್ರಿಯೆ ಆ.10 ರಂದು ಮಡಿಕೇರಿಯ ಕೊಡವ ಸಮಾಜದ ರುದ್ರಭೂಮಿಯಲ್ಲಿ ನಡೆಯಲಿದೆ.
ಸೋಮವಾರಪೇಟೆ NEWS DESK ಆ.8 : ರೈತರ ಕೃಷಿ ಭೂಮಿಯನ್ನು ಸಿ ಆ್ಯಂಡ್ ಡಿ ಹೆಸರಿನಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಳಿಸುವುದಕ್ಕೆ ಸರ್ಕಾರ ಸೆಕ್ಷನ್-4 ಸರ್ವೆಗೆ ಮುಂದಾಗಿರುವುದನ್ನು ಖಂಡಿಸಿ ಆ.12 ರ ಮಂಗಳವಾರ ಸೋಮವಾರಪೇಟೆ ತಾಲ್ಲೂಕು ಬಂದ್ ನಡೆಸಲಾಗುವುದು ಎಂದು ರೈತ ಹೋರಾಟ ಸಮಿತಿಯ ತಾಲ್ಲೂಕು ಅಧ್ಯಕ್ಷ ಕೆ.ಬಿ.ಸುರೇಶ್ ಹೇಳಿದರು. ಆ.11ರಂದು ನಡೆಸಬೇಕಿದ್ದ ತಾಲ್ಲೂಕು ಬಂದ್ ಅನ್ನು ಆ.12ಕ್ಕೆ ಮುಂದೂಡಲಾಗಿದ್ದು, ವರ್ತಕರು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ರೈತರು ಕೃಷಿ ಭೂಮಿಯನ್ನು ಕಳೆದುಕೊಂಡು ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಕೊಡಗು ಜಿಲ್ಲೆಯಲ್ಲಿ 25 ಸಾವಿರ ಎಕರೆಯಷ್ಟು ಭೂಮಿಯನ್ನು ಸಿ ಆ್ಯಂಡ್ ಡಿ ಹೆಸರಿನಲ್ಲಿ ರೈತರು ಕಳೆದುಕೊಳ್ಳಬೇಕಾಗಿದ್ದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದರು. ರೈತರು ಅನೇಕ ದಶಕಗಳ ಹಿಂದೆಯೇ ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಬಂದಿದ್ದಾರೆ. ಅನೇಕ ವರ್ಷಗಳಿಂದ ಕಂದಾಯ ಇಲಾಖೆಗೆ ನಮೂನೆ 50,53, 57 ಅರ್ಜಿ ಸಲ್ಲಿಸಿಕೊಂಡು ಹಕ್ಕುಪತ್ರಕ್ಕಾಗಿ ಪರದಾಡುತ್ತಿದ್ದಾರೆ. ಇದ್ದಕ್ಕಿದ್ದಂತೆ ಕೃಷಿ ಭೂಮಿಯನ್ನೇ ಸಿ ಆ್ಯಂಡ್ ಡಿ ಭೂಮಿಯೆಂದು ಸರ್ವೆಗೆ ಮುಂದಾಗಿರುವುದು ಖಂಡನೀಯ…
ಮಡಿಕೇರಿ NEWS DESK ಆ.8 : ಕೊಡಗು ಜಿಲ್ಲಾ ಹಿಂದು ಜಾಗರಣ ವೇದಿಕೆಯ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಸಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಅಖಂಡ ಭಾರತದ ಸಂಕಲ್ಪ ತೊಟ್ಟರು. ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಂಜಿನ ಮೆರವಣಿಗೆ ಆರಂಭಗೊಂಡಿತು. ಇಂದಿರಾ ಗಾಂಧಿ ವೃತ್ತ, ಅಂಚೆ ಕಚೇರಿ, ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಕೊಡವ ಸಮಾಜದ ವರೆಗೆ ಮೆರವಣಿಗೆ ಸಾಗಿತು. ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರಸ್ತುತ ಭಾರತ ದೇಶ ಎದುರಿಸುತ್ತಿರುವ ಸವಾಲುಗಳ ಕುರಿತು ಪ್ರಮುಖರು ವಿವರಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಏಳು ಕಡೆಗಳಲ್ಲಿ ಅಖಂಡ ಭಾರತದ ಸಂಕಲ್ಪ ದಿನ ಕಾರ್ಯಕ್ರಮ, ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥಾ ನಡೆಯಲಿದೆ ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ರಂಜನ್…
ವಿರಾಜಪೇಟೆ NEWS DESK ಆ.8 : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜ್ ನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ಅವರು ನೇಮಕಗೊಂಡಿದ್ದಾರೆ. ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯ ಆದೇಶಿಸಿದೆ. ತೃಪ್ತಿ ಬೋಪಣ್ಣ ಅವರು 22 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದು, ಕಳೆದ 16 ವರ್ಷಗಳಿಂದ ಸೆಂಟ್ ಆನ್ಸ್ ಪದವಿ ಕಾಲೇಜ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಾಣಿಜ್ಯ ಶಾಸ್ತ್ರ ವಿಷಯದ ಪ್ರಾಧ್ಯಾಪಕಿಯೂ ಆಗಿರುವ ಅವರು ಈ ಹಿಂದೆ ಕಾಲೇಜ್ ನ ಐಕ್ಯೂಎ ಸಿ ಸಂಚಾಲಕಿಯಾಗಿಯೂ ಕಾರ್ಯನಿರ್ವಹಿಸಿರುತ್ತಾರೆ. ಸಿಂಡಿಕೇಟ್ ಸದಸ್ಯರಾಗಿ ನಾಮ ನಿರ್ದೇಶನಗೊಂಡ ತೃಪ್ತಿ ಬೋಪಣ್ಣ ಅವರನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಅವರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.
ಮಡಿಕೇರಿ NEWS DESK ಆ.8 : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.23 ರಂದು ಭಾಗಮಂಡಲದಲ್ಲಿ 33ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟ ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸುವ ಕುರಿತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ವಿ.ಟಿ ಅವರ ಅಧ್ಯಕ್ಷತೆಯಲ್ಲಿ ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ಅಯ್ಯಂಗೇರಿ ಶ್ರೀ ಕೃಷ್ಣ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅವರ ಗದ್ದೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಕ್ರೀಡಾಕೂಟಗಳು ಆರಂಭಗೊಳ್ಳಲಿವೆ. ಸಾರ್ವಜನಿಕ ಪುರುಷರು ಹಾಗೂ ಮಹಿಳೆಯರ (7 ಮಂದಿಯ ತಂಡ) ವಿಭಾಗಕ್ಕೆ ಹಗ್ಗಜಗ್ಗಾಟ, ಪುರುಷರಿಗೆ ವಾಲಿಬಾಲ್ (4 ಮಂದಿಯ ತಂಡ) ಮತ್ತು…
ಮಡಿಕೇರಿ ಆ.8 NEWS DESK : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ‘ವೀರ್ ಪರಿವಾರ್ ಸಹಾಯತಾ ಯೋಜನೆ 2025’ ಎಂಬ ಯೋಜನೆಯು ಈಗಾಗಲೇ ಆರಂಭಿಸಲಾಗಿದೆ. ಈ ಯೋಜನೆಯು ಕೇಂದ್ರೀಯ ಸೈನಿಕ ಮಂಡಳಿಯ ಸಹಯೋಗದೊಂದಿಗೆ ಮೀಸಲಾದ ಕಾನೂನು ಸೇವಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ರಕ್ಷಣಾ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಉಚಿತ ಮತ್ತು ಸಮರ್ಥ ಕಾನೂನು ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದು, ಈ ಯೋಜನೆಯನ್ವಯ ಇಲಾಖಾ ಕಚೇರಿಯಲ್ಲಿ ನಿಗದಿತ ವಕೀಲರು ವಾರದಲ್ಲಿ ಒಂದು ದಿನ ಲಭ್ಯವಿದ್ದು, ಕಾನೂನು ಸಹಾಯ ಬೇಕಿರುವ ಕೊಡಗು ಜಿಲ್ಲೆಯ ಮಾಜಿ ಸೈನಿಕರು ಮತ್ತು ಅವಲಂಬಿತರು ಕಚೇರಿ ದಿನಗಳಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಕಾರ್ಯಾಲಯವನ್ನು ಸಂಪರ್ಕಿಸಿ ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.
ಮಡಿಕೇರಿ ಆ.8 NEWS DESK : ಪಂಚಾಯತಿ ವ್ಯಾಪ್ತಿಗೆ ಬರುವ ಕಂದಾಯ ಗ್ರಾಮಗಳಾದ ಕಾಲೂರು ಹಾಗೂ ಹಮಿಯಾಲ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳಾಗಿ ಘೋಷಿಸುವ ಕುರಿತು ಗಾಳಿಬೀಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವ ಭಾವಿ ಸಭೆ ನಡೆಯಿತು. ಅದ್ಯಕ್ಷರಾದ ಪುಪ್ಷವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ತಂಬಾಕು ಮುಕ್ತ ಗ್ರಾಮ ಘೋಷಣೆ, ಗೃಹ ಆರೋಗ್ಯ ಯೋಜನೆ, ಕುಷ್ಠರೋಗ ಪತ್ತೆ ಅಭಿಯಾನ, ಕ್ಷಯರೋಗ ಮುಕ್ತ, ಮತ್ತು ಡೆಂಗ್ಯೂ ನಿಯಂತ್ರಣ ಕುರಿತು ಮಾಹಿತಿ ನೀಡಿ ಪಂಚಾಯತಿ ಸಹಕಾರ ನೀಡುವಂತೆ ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಾಲಾಕ್ಷ ಮಾತನಾಡಿ, ಸ್ತನ್ಯಪಾನ ಸಪ್ತಾಹ ಕುರಿತು ತಾಯಂದಿರು ಶಿಶುವಿಗೆ ಎದೆ ಹಾಲು ನೀಡುವುದರಿಂದ ಆಗುವ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ತಂಬಾಕು ಕೋಶದ ಪುನೀತ, ಮಂಜುನಾಥ್ ಅವರು ತಂಬಾಕು ಮುಕ್ತ ಗ್ರಾಮದ ಮಾರ್ಗಸೂಚಿ ಕುರಿತು ವಿವರಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ರಾಜಶೇಖರ ಮತ್ತು ಸದಸ್ಯರು, ಹಾಗೂ ಪಂಚಾಯತಿ…
ಮಡಿಕೇರಿ ಆ.8 NEWS DESK : 2025-26 ನೇ ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಜಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ದೆಯನ್ನು ಇಲಾಖಾ ವತಿಯಿಂದ ಈ ದಿನಾಂಕ ಮತ್ತು ಸ್ಥಳಗಳಲ್ಲಿ ಏರ್ಪಡಿಸಲಾಗಿದ್ದು. ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಆಯಾಯ ತಾಲ್ಲೂಕು ಕ್ರೀಡಾಪಟುಗಳು ಭಾಗವಹಿಸಬಹುದು. ಮಡಿಕೇರಿ ತಾಲ್ಲೂಕಿಗೆ ಆಗಸ್ಟ್, 18 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ, ಸಾಯಿ ಹಾಕಿ ಟರ್ಫ್, ಮಡಿಕೇರಿ. ಪೊನ್ನಂಪೇಟೆ ತಾಲ್ಲೂಕಿಗೆ ಆಗಸ್ಟ್, 19 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯ ಹಾಗೂ ಪೊನ್ನಂಪೇಟೆ ಜೂನಿಯರ್ ಕಾಲೇಜು ಆಟದ ಮೈದಾನ ವಿರಾಜಪೇಟೆ ತಾಲ್ಲೂಕಿಗೆ ಆಗಸ್ಟ್ 20 ರಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಪೊನ್ನಂಪೇಟೆ ಜೂನಿಯರ್ ಕಾಲೇಜು ಆಟದ ಮೈದಾನ. ಕುಶಾಲನಗರ ತಾಲ್ಲೂಕಿಗೆ ಆಗಸ್ಟ್, 21 ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನ ಹಾಗೂ ಸೈನಿಕ ಶಾಲೆ, ಕೂಡಿಗೆ ಹಾಗೂ ಸೋಮವಾರಪೇಟೆ ತಾಲ್ಲೂಕಿಗೆ ಆಗಸ್ಟ್, 22 ರಂದು ಕೂಡಿಗೆ ಕ್ರೀಡಾ …






