ಲೇಖಕ: admin

ಕುಶಾಲನಗರ ಸೆ.8 NEWS DESK : ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲೆಯ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಕುಶಾಲನಗರದ ದೀಪಿಕಾ ಕರುಣ ನೇತೃತ್ವದ ತಂಡ ಸೇವಾದೀಕ್ಷೆ ಸ್ವೀಕರಿಸಿತು. ರಾಜ್ಯ ಮಹಿಳಾ ಘಟಕದ ನಿರ್ದೇಶಕಿ ಸುಮಾ ಸುದೀಪ್ ಪ್ರಮಾಣ ವಚನ ಬೋಧಿಸಿದರು. ಬಳಿಕ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ವೀರಶೈವ ಸಮಾಜದ ಸಂಘಟನೆ ಬಲಗೊಳ್ಳಲು ಮಹಿಳೆಯರು ಸಂಘಟಿತರಾಗಬೇಕು. ಎಲ್ಲೆಡೆ ಸತ್ಸಂಗಗಳ ಮೂಲಕ ಮಕ್ಕಳಲ್ಲಿ ವೀರಶೈವ ಪರಂಪರೆಯ ಸಂಸ್ಕಾರಗಳನ್ನು ಕಲಿಸಿ ಅವರಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಬೇಕೆಂದು ಕರೆ ನೀಡಿದರು. ನೂತನ ಜಿಲ್ಲಾಧ್ಯಕ್ಷೆ ದೀಪಿಕಾ ಕರುಣ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ವೀರಶೈವ ಸಮಾಜದ ಸಂಘಟನೆಯನ್ನು ಸದೃಢಗೊಳಿಸಲು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಮಹಿಳಾ ಘಟಕ ರಚಿಸಲಾಗುವುದು. ಈಗಾಗಲೇ ಜಿಲ್ಲೆಯ ವಿವಿಧೆಡೆಗಳಿಂದ ಆಯ್ಕೆ ಮಾಡಿರುವ 31 ಮಹಿಳಾ ನಿರ್ದೇಶಕರು ಸಕ್ರಿಯರಾಗುವಂತೆ ಕರೆ ನೀಡಿದರು. ಕೊಡ್ಲಿಪೇಟೆಯ ಕಿರಿ ಕೊಡ್ಲಿ ಮಠದ ಪೀಠಾಧಿಪತಿ ಶ್ರೀ ಸದಾಶಿವ ಸ್ವಾಮೀಜಿ ಹಾಗೂ ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಸಾನಿಧ್ಯ…

Read More

ಕುಶಾಲನಗರ ಸೆ.8 NEWS DESK : ಜನಮಾನಸದಲ್ಲಿ ನೈತಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ಶರಣ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸುವ ಮೂಲಕ ಜನರಲ್ಲಿ ಅಂತರಂಗ ಹಾಗೂ ಬಹಿರಂಗ ಶುದ್ದಿಗೆ ಔಷಧಿ ನೀಡಿದ ಕೀರ್ತಿ ಸುತ್ತೂರು ಸಂಸ್ಥಾನದ 23ನೇ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಸ್ವಾಮಿಗಳದ್ದು ಎಂದು ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಚಿಕ್ಕಹೊಸೂರಿನ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಗ್ರಾಮದ ಗಣಪತಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಸುತ್ತೂರು ಮಠದ 23ನೇ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಸಂಸ್ಮರಣೆ ಅಂಗವಾಗಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ವಚನ ಸಾಹಿತ್ಯದ ವಾಸ್ತವಿಕ ಮತ್ತು ವೈಚಾರಿಕ ಚಿಂತನೆಗಳನ್ನು ಸಮಾಜಕ್ಕೆ ನಿರಂತರವಾಗಿ ತಲುಪಿಸುವ ಉದ್ದೇಶದಿಂದ 1986 ರಲ್ಲಿ ಶರಣ ಸಾಹಿತ್ಯ ಪರಿಷತ್ತು ಆರಂಭಿಸಿ ನಾಡಿನಾದ್ಯಂತ ಶರಣರ ವಚನಗಳು ಹಾಗೂ ಚಿಂತನೆಗಳ ಹರಿವಿಗೆ ಮುನ್ನುಡಿ ಬರೆದರು. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ನಾಡಿನಲ್ಲಿದ್ದ ಬಡತನ, ದಾರಿದ್ರ್ಯ,…

Read More

ಮಡಿಕೇರಿ ಸೆ.8 NEWS DESK : ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್ ವತಿಯಿಂದ ಸೆ.9 ರಂದು  ಐವರು ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ನಗರದ ರೋಟರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಆಯೋಜಿತ ಸಮಾರಂಭದಲ್ಲಿ ಮೂನಾ೯ಡು ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಪಳಂಗಂಡ ದೇವಕಿ, ನಾಪೋಕ್ಲು ರಾಮ ಟ್ರಸ್ಟ್ ಶಾಲೆಯ ಶ್ವೇತಾ ಲೀಲಾವತಿ, ಮದೆನಾಡು ಪ.ಪೂ.ಕಾಲೇಜಿನ ನಿವೃತ್ತ ಉಪನ್ಯಾಸಕ ಬಾರಿಯಂಡ ಜೋಯಪ್ಪ, ಮಡಿಕೇರಿ ಜನರಲ್ ತಿಮ್ಮಯ್ಯ ಶಾಲಾ ಪ್ರಾಂಶುಪಾಲೆ ಬಾಳೆಯಡ ಸವಿತಾ ಕಿಶನ್, ಕೊಡಗು ವಿದ್ಯಾಲಯದ ಶಿಕ್ಷಕಿ ಅಲೆಮಾಡ ಚಿತ್ರಾನಂಜಪ್ಪ ಮತ್ತು ಸುಂಟಿಕೊಪ್ಪ ಸ್ವಸ್ಥ ವಿಶೇಷ ಚೇತನ ಶಾಲೆಯ ಹಿರಿಯ ಶಿಕ್ಷಕಿ ಕೆ.ಲಲಿತಾ ಅವರನ್ನು ರೋಟರಿ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಟಿತ ವಾಷಿ೯ಕ ಪ್ರಶಸ್ತಿ ನೇಷನ್ ಬಿಲ್ಡರ್ ಅವಾಡ್೯ ಪ್ರದಾನ ಮಾಡಿ ಸನ್ಮಾನಿಸಲಾಗುತ್ತದೆ. ಅತ್ಯುತ್ತಮ ಶಿಕ್ಷಕ ಎಂಬ ರಾಷ್ಟ್ರಪ್ರಶಸ್ತಿ ಪಡೆದಿರುವ ಅರಂತೋಡು ಗ್ರಾಮದ ಕೆ.ಆರ್. ಗಂಗಾಧರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ , ರೋಟರಿ ವಲಯ 6 ರ ಸಹಾಯಕ…

Read More

ಮಡಿಕೇರಿ ಸೆ.8 NEWS DESK : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಿಂದ ಕಾಫಿ ಸೇರಿದಂತೆ ವಿವಿಧ ಕೃಷಿಗಳಿಗೆ ಅಪಾರ ಹಾನಿಯಾಗಿದ್ದು, ಜಿಲ್ಲಾ ಬಿಜೆಪಿ ಸೆ.9 ರಂದು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆಹಾನಿ ಸಮೀಕ್ಷೆ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಬೆಳೆಹಾನಿ ಬಗ್ಗೆ ಕನಿಷ್ಟ ಕಾಳಜಿಯನ್ನು ತೋರದ ಕಾರಣ ಬಿಜೆಪಿ ಹಾನಿಯನ್ನು ಪರಿಶೀಲಿಸಿ, ವರದಿ ತಯಾರಿಸಿ ಸಂಸದರ ಮೂಲಕ ಕೇಂದ್ರ ಸರ್ಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಿದೆ ಎಂದು ತಿಳಿಸಿದರು. ಅತೀ ಹೆಚ್ಚು ಮಳೆಯಾಗಿರುವ ತೋಳೂರು ಶೆಟ್ಟಳ್ಳಿ, ಶಾಂತಳ್ಳಿ, ಬೆಟ್ಟದಳ್ಳಿ, ಹಮ್ಮಿಯಾಲ, ಮುಟ್ಲು, ಮುಕ್ಕೋಡ್ಲು, ಕಾಲೂರು, ಗಾಳಿಬೀಡು, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ಬಲ್ಲಮಾವಟಿ, ಕಕ್ಕಬ್ಬೆ ವಿಭಾಗಗಳಿಗೆ ಪಕ್ಷದ ಸಮೀಕ್ಷಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಭಾರೀ ಮಳೆಯಿಂದ ಜಿಲ್ಲೆಯ ಪ್ರಮುಖ ಕೃಷಿಯಾದ ಕಾಫಿಗೆ ಅಪಾರ ಹಾನಿಯಾಗಿದೆ. ಅರೇಬಿಕಾ ಕಾಫಿ ಫಸಲು ಅಧಿಕ ಮಳೆಯಿಂದ ಕೊಳೆತು…

Read More

ಮಡಿಕೇರಿ ಸೆ.8 NEWS DESK :  ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸುಪೀರಿಯರ್ ರೆ. ಸಿಸ್ಟರ್ ಮರ್ಸಿ ಜೇಕಬ್  ಮಾತನಾಡಿ, ಮಕ್ಕಳ ಮನ ನೋಯದಂತೆ ತಪ್ಪುಗಳನ್ನು ತಿದ್ದುವ ಕಲೆಗಾರಿಕೆ ಶಿಕ್ಷಕರಿಗೆ ಇರಬೇಕು. ಅಂತಹ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ದಾರಿಗೆ ಬೆಳಕಾಗಬಲ್ಲರು ” ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಸಂಚಾಲಕರಾದ ಸಿಸ್ಟರ್ ಲೂರ್ದ್ ಮೇರಿ ಶಿಕ್ಷಕರ ದಿನಾಚರಣೆಯ ಶುಭಾಷಯಗಳನ್ನು ಕೋರಿದರು. ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ರೋಜಾ ವಿದ್ಯಾಸಂಸ್ಥೆಯ ಎಲ್ಲಾ ಗುರು ವೃಂದದವರು, ಸಮಸ್ತ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಶುಭ ಹಾರೈಸಿದರು. ಮಕ್ಕಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಖ್ಯಾತ ಶಿಕ್ಷಕ ಡಾ.ರಾಧಾಕೃಷ್ಣನ್ ಉಡುಗೆ -ತೊಡುಗೆಯೊಂದಿಗೆ ಗಮನ ಸೆಳೆದ ವಿದ್ಯಾರ್ಥಿ ಕುಲದೀಪ್ ಡಾ. ರಾಧಾಕೃಷ್ಣನ್ ಅವರ ನಿಲುವುಗಳನ್ನು ತಮ್ಮ ಭಾಷಣದಲ್ಲಿ ವ್ಯಕ್ತಪಡಿಸಿದರು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯೋಪಾಧ್ಯಾಯಿನಿಯವರು, ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ಸಿಸ್ಟರ್ಸ್ ಉಪಸ್ಥಿತರಿದ್ದರು.…

Read More

ಮಡಿಕೇರಿ ಸೆ.8  NEWS DESK : ಕೊಡವ ಭಾಷೆಯ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ ಹಾಗೂ ‘ಕಾನೂರು-ಕೋತೂರು ಮಹಿಳಾ ಮಂಡಲ’ದ ಜಂಟಿ ಆಶ್ರಯದಲ್ಲಿ ಸೆ.10 ರಂದು ಕಾನೂರು-ಕೊತೂರು ಮಹಿಳಾ ಮಂಡಲದಲ್ಲಿ ವಿಶೇಷ ಕೊಡವ ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪೂರ್ವಾಹ್ನ 11.30 ಗಂಟೆಗೆ  ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಡವ ತಕ್ಕ್ ಎಳ್ತ್‌ಕಾರಡ ಕೂಟದ ‘ಜನಪ್ರಿಯ ಕೊಡವ ಸಾಹಿತ್ಯ ಮಾಲೆ’ ಯೋಜನೆಯ 193ನೇ , 194ನೇ   ಹಾಗೂ 195ನೇ ಹೆಜ್ಜೆಯ ನೂತನ ಮೂರು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ, ಕೊಡವ ಹಾಡು, ಕೊಡವ ಭಾಷೆಯಲ್ಲಿ ಓದುವುದು ಹಾಗೂ ಕೊಡವ ಹಾಸ್ಯ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಪ್ರಶಂಸನಾಪತ್ರ ನೀಡಲಾಗುವುದು. ಕೊಡವ ತಕ್ಕ್ ಎಳ್ತ್‌ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾನೂರು-ಕೋತೂರು ಮಹಿಳಾ ಮಂಡಲದ ಅಧ್ಯಕ್ಷೆ  ಚೊಟ್ಟೆಕ್’ಮಾಡ ಮಾಯಮ್ಮ ಬೋಪಯ್ಯ, ಪುಸ್ತಕಗಳ ದಾನಿಗಳಾದ ಅಜ್ಜಮಾಡ ಲಾಲಿ…

Read More

ಕುಶಾಲನಗರ ಸೆ.8 NEWS DESK : ಪ್ರವಾದಿ ಪೈಗಂಬರ್ ಮುಹಮ್ಮದ್ ಅವರ 1500 ಜನ್ಮ ದಿನದ ಪ್ರಯುಕ್ತ ಕುಶಾಲನಗರದಲ್ಲಿ ಶಾಂತಿ, ಸಾಹೋದರ್ಯತೆಯನ್ನು ಸಾರುವ ಈದ್ ಮಿಲಾದ್ ಜಾಥಾ ನಡೆಯಿತು. ದಾರುಲ್ ಉಲೂಂ ಮದ್ರಸ, ಹಿಲಾಲ್ ಮಸೀದಿ ಹಾಗೂ ನುಸ್ರತುಲ್ ಇಸ್ಲಾಂ ಯೂತ್ ಅಸೋಸಿಯೇಷನ್ ವತಿಯಿಂದ ಪ್ರವಾದಿಯವರ ಜನ್ಮದಿನ ಹಿನ್ನಲೆ ಪ್ರವಾದಿಯವರ ಸಂದೇಶವನ್ನು ಸಾರುವ ಮೆರವಣಿಗೆ ಸಾಗಿದರು. ಕುಶಾಲನಗರದ ದಾರುಲ್ ಉಲೂಂ ಮದ್ರಸದಿಂದ ಹೊರಟ ಮೆರವಣಿಗೆಯು ಕುಶಾಲನಗರದ ಮುಖ್ಯರಸ್ತೆಯ ಮೂಲಕ ಹಾದುಹೋಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾದುಹೋಯಿತು. ಈದ್ ಮಿಲಾದ್ ಮೆರವಣಿಗೆಯಲ್ಲಿ ದಾರುಲ್ ಉಲೂಂ ಮದ್ರಸ ವಿದ್ಯಾರ್ಥಿಗಳಿಂದ ದಫ್ ಪ್ರದರ್ಶನ ನಡೆಯಿತು. ಮದ್ರಸ ವಿದ್ಯಾರ್ಥಿಗಳು ವಿಶೆಷ ಉಡುಗೆಗಳನ್ನು ತೊಟ್ಟು ಸಾರ್ವಜನಿಕರ ಕಣ್ಮನ ಸೆಳೆದರು. ಮೆರವಣಿಗೆಯಲ್ಲಿ ಪ್ರವಾದಿಯವರು ಜೀವನ ಸಂದೇಶಗಳನ್ನು, ಆದರ್ಶಗಳನ್ನು ಹಾಗೂ  ಅವರು ನಡೆದು ಬಂದ ಹಾದಿಯನ್ನು ಸಾರಲಾಯಿತು. ಎಲ್ಲರೂ ಜಾತಿ, ಧರ್ಮವನ್ನು ಬಿಟ್ಟು ಪರಸ್ಪರ ಸಹೋದರರಂತೆ, ಶಾಂತಿ ಸಮಾನತೆಯಿಂದ ಬಾಳಿ ಬದುಕಬೇಕು ಎಂದು ಧರ್ಮಗುರುಗಳು ಕರೆ ನೀಡಿದರು. ಪ್ರವಾದಿಯವರ ಜನ್ಮ ದಿನ…

Read More

ಮಡಿಕೇರಿ ಸೆ.8 NEWS DESK : ಸಮಾನತೆ ಮತ್ತು ಮೌಲ್ಯವನ್ನು ಬೋಧಿಸಿದ ಮಹಾಸಂತ ನಾರಾಯಣ ಗುರುಗಳು ಎಂದು ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಹೇಳಿದರು. ಜಿಲ್ಲಾಡಳಿತ,  ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು, ಒಂದು ಸಂದೇಶ ಎಂಬುವುದು ಎಂದಿಗೂ ಜೀವಂತ. ತತ್ವಜ್ಞಾನ ಮತ್ತು ಸಮಾಜ ಸುಧಾರಣೆಗಾಗಿ ನಾರಾಯಣ ಗುರು ಅವರು ಶ್ರಮಿಸಿದ್ದಾರೆ ಎಂದು ಉಪ ವಿಭಾಗ ಅಧಿಕಾರಿ ಹೇಳಿದರು. ಕರ್ನಾಟಕ ರೇಷ್ಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ, ನಾರಾಯಣ ಗುರುಗಳು ಕೇರಳದ ತಿರುವನಂತಪುರ ಬಳಿಯ ಚೆಂಬಳಂತಿ ಎಂಬ ಗ್ರಾಮದಲ್ಲಿ ಜನಿಸಿದರು ಎಂದು ತಿಳಿಸಿದರು. ಕೇರಳ ರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು ಅವರು ಒಬ್ಬ ಸಮಾಜದ ಸುಧಾರಕ ಉದಯಿಸಿ, ಸಮಾಜದ ತಾರತಮ್ಯ…

Read More

ಮಡಿಕೇರಿ ಸೆ.8 NEWS DESK : ನಾಪೋಕ್ಲು ಪಟ್ಟಣದ ನಿವಾಸಿ ಎಸ್ ಮತ್ತು ಎಸ್ ಹಾರ್ಡ್ ವೇರ್ ಮಳಿಗೆಯ ಮಾಲೀಕರಾದ ಪಿ.ಪಿ.ಅಹಮದ್ ಹಾಜಿ (72) ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಮೃತರ ಅಂತ್ಯಕ್ರಿಯೆಯು ಇಂದು ( ಸೆ.8 ) ಮಧ್ಯಾಹ್ನದ ನಂತರ ನಾಪೋಕ್ಲುವಿನ ಮೊಹಿಯುದ್ದೀನ್ ಜುಮಾ ಮಸೀದಿಯ ಖಬರ್ ಸ್ಥಾನದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮೈಸೂರು NEWS DESK ಸೆ.7 : ಕೊಡಗು ಗೌಡ ಸಮಾಜ ಮೈಸೂರು ಇವರ ವತಿಯಿಂದ ಕೈಲುಮುಹೂರ್ತ ಆಟೋಟ ಸ್ವರ್ಧೆಗಳು ಮೈಸೂರು ವಿಶ್ವವಿದ್ಯಾಲಯದ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು ನಡೆಯಿತು.

Read More