ಮಡಿಕೇರಿ ಸೆ.6 NEWS DESK : ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ 2025-26ನೇ ಸಾಲಿನ ಅಂತರರಾಷ್ಟೀಯ ಸಾಕ್ಷರತಾ ದಿನಾಚರಣೆ ಮತ್ತು ಕೇಂದ್ರ ಪುರಸ್ಕೃತ ಯೋಜನೆಯ “ಉಲ್ಲಾಸ್ ನವ ಭಾರತ ಸಾಕ್ಷರತಾ ಸಪ್ತಾಹ”ವನ್ನು ಸೆ.1 ರಿಂದ 12 ರವರೆಗೆ ಆಚರಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಸಂಪೂರ್ಣ ಸಾಕ್ಷರತಾ ನಾಡನ್ನಾಗಿ ಮಾಡುವ ನಿಟ್ಟಿನಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯವು ಅನಕ್ಷರಸ್ಥರಲ್ಲಿ ಅಕ್ಷರ ಜ್ಞಾನ ಮೂಡಿಸಿ ನವ ಸಾಕ್ಷರರನ್ನಾಗಿ ಮಾಡುವ ಉದ್ದೇಶ ಕರ್ನಾಟಕ ಸರ್ಕಾರದ್ದಾಗಿದೆ. ಮೂಲ ಶಿಕ್ಷಣದಿಂದ ವಂಚಿತರಾಗಿರುವವರನ್ನು ಗುರುತಿಸಿ ಅಂತವರಿಗೆ ಬುನಾದಿ ಶಿಕ್ಷಣ, ಸುಲಭ ಲೆಕ್ಕಚಾರ ಮತ್ತು ಅಕ್ಷರ ಜ್ಞಾನ ನೀಡಲು ಪ್ರಯತ್ತಿಸಲಾಗುತ್ತಿದೆ. ದಿನ ನಿತ್ಯದ ವ್ಯವಹಾರಕ್ಕಾಗಿ ಉಪಯೋಗಿಸಿಕೊಳ್ಳಬಲ್ಲ ಸಾಮಥ್ರ್ಯವನ್ನು ಹೆಚ್ಚಿಸುವುದು ಸಾಕ್ಷರತಾ ಕಾರ್ಯಕ್ರಮದ ಮೂಲ ಗುರಿಯಾಗಿದೆ. ಈ ವರ್ಷದ ಧೈಯ ವಾಕ್ಯ ‘ಬಹು ಭಾಷೆಗಳ ಮೂಲ ಸಾಕ್ಷರತೆ ಉತ್ತೇಜಿಸುವುದಾಗಿದೆ. ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಜನ ಪ್ರತಿನಿಧಿಗಳು ಇಲಾಖಾ ಅಧಿಕಾರಿಗಳು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ…
ಲೇಖಕ: admin
ಮಡಿಕೇರಿ ಸೆ.6 NEWS DESK : ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2025ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್, 22 ರಿಂದ ಅಕ್ಟೋಬರ್, 01 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025”ನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಬಳಿ ಮೈಸೂರು ಇಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1 ಸಾವಿರ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾಯ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ಸೈಟ್ https://kpp.karnataka.gov.inಟಿ ನಲ್ಲಿ ಉಚಿತವಾಗಿ…
ಮಡಿಕೇರಿ ಸೆ.6 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಇಂಡಿಯನ್ ಓವರ್ ಸೀಸ್ ಬ್ಯಾಂಕ್, ಮಡಿಕೇರಿ ಶಾಖೆ ಸಹಯೋಗದೊಂದಿಗೆ, ಚೆಂಬು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದ ಕೆನರಾ ಬ್ಯಾಂಕ್ ನ ಆಪ್ತ ಸಮಾಲೋಚಕಿ ಸುಜಾತ, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಮತ್ತು ಅಟಲ್ ಪಿಂಚಣೆ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ಕೆ.ಎಲ್.ಪ್ರಿಯಾ ಮಾತನಾಡಿ, ಸರಕಾರದ ಯೋಜನೆಗಳಾದ ಪಿ.ಎಂ.ಇ ಜಿ.ಪಿ, ಪಿ.ಎಂ ಮುದ್ರಾ, ಪಿ.ಎಂ.ಎಫ್.ಎಂ.ಇ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್…
ಮಡಿಕೇರಿ ಸೆ.6 NEWS DESK : ಚಂದ್ರಗ್ರಹಣ ಪ್ರಯುಕ್ತ ಸೆ.7 ರಂದು ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ಸಂಜೆ 5 ರಿಂದ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಇರುವುದಿಲ್ಲ. ಆದುದರಿಂದ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಮೂರ್ನಾಡು ಸೆ.6 NEWS DESK : ಮೂರ್ನಾಡಿನ ಪಟ್ಟಣದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಗೌರಿ-ಗಣೇಶೋತ್ಸವದಂದು ಗಣೇಶ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಏಳು ದಿನಗಳವರೆಗೆ ಪೂಜಾ ಕಾರ್ಯಗಳನ್ನು ನಡೆಸಿ ಬಲಮುರಿಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು. ಮೂರ್ನಾಡಿನ ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿಯ ವತಿಯಿಂದ 34ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಉತ್ಸವ ಮೂರ್ತಿ, ಮೂರ್ನಾಡು ಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ವತಿಯಿಂದ 33ನೇ ವರ್ಷದ ಗೌರಿ-ಗಣೇಶೋತ್ಸವದ ಉತ್ಸವ ಗಣೇಶ ಮೂರ್ತಿ, ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ ಮೂರ್ನಾಡು ಪಟ್ಟಣದ ಟಿ.ಜಂಕ್ಷನ್ನಲ್ಲಿ 31ನೇ ವರ್ಷದಗೌರಿ-ಗಣೇಶೋತ್ಸವದ ಗಣೇಶ ಮೂರ್ತಿ, ಗಜೇಂದ್ರ ಯುವ ಶಕ್ತಿ ಸಂಘದ ವತಿಯಿಂದ 6ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಮೂರ್ತಿ, ಅಯ್ಯಪ್ಪ ಗೆಳೆಯರ ಬಳಗ, ಎಂ-ಟೌನ್ ವತಿಯಿಂದ 2ನೇ ವರ್ಷದ ಗೌರಿ-ಗಣೇಶೋತ್ಸವದ ವಿನಾಯಕ ಮೂರ್ತಿ, ಕೋಡಂಬೂರಿನ ವಿಘ್ನೇಶ್ವರ ಗೆಳೆಯರ ಬಳಗದಿಂದ 17ನೇ ವರ್ಷದಗೌರಿ-ಗಣೇಶೋತ್ಸವ ಅಂಗವಾಗಿ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿರಿಸಿ ಮೂರ್ನಾಡಿನ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. 6 ಮಂಟಪಗಳಲ್ಲಿ ಪ್ರತಿ ಮಂಟಪದಲ್ಲೂ ಡಿಜೆ…
ವಿರಾಜಪೇಟೆ ಸೆ.6 NEWS DESK : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿನಲ್ಲಿ ನೀಡುತ್ತಿರುವ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಬಿಳುಗುಂದ ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ಅರುಣ ಆನ್ಸಿ ಡಿಸೋಜ ಅವರು ಭಾಜನರಾಗಿದ್ದಾರೆ. ಬೆಂಗಳೂರಿನ ಭಾರತದ ಜೋಡೋ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರು ಶಿಕ್ಷಣ ಕ್ಷೇತ್ರದಲ್ಲಿ 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ವಿರಾಜಪೇಟೆಯ ಗಾಡ್ವಿನ್ ಡಿಸೋಜ ಅವರ ಪತ್ನಿ. ನಿವೃತ್ತ ಶಿಕ್ಷಕರಾದ ಆಲ್ಬರ್ಟ್ ಡಿಸೋಜಾ ಹಾಗೂ ದಿವಂಗತ ಜುಲಿಯಾನ ಲೋಬೋ ಅವರ ಪುತ್ರಿ.
ಮಡಿಕೇರಿ ಸೆ.6 NEWS DESK : ಮಡಿಕೇರಿ ನಗರದ ಪುಟಾಣಿ ನಗರದಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಒಂಭತ್ತು ದಿನಗಳ ಕಾಲ ಗಣಪತಿ ಹೋಮ, ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಸೇರಿದಂತೆ ರಂಗ ಪೂಜೆ, ವಿಶೇಷ ಪೂಜೆ, ಪ್ರಾರ್ಥನೆ ನೇರವೇರಿಸಿದರು. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮಂಟಪದಲ್ಲಿ ಗಣಪತಿ ಮೂರ್ತಿಯ ಮೆರವಣಿಗೆ ನಡೆಸಿ, ಗೌರಿ ಕೆರೆಯಲ್ಲ ಗಣೇಶ ಮೂರ್ತಿಯನ್ನು ವಿಸರ್ಜಿಸಿದರು. ಮೆರವಣಿಗೆಯ ಉದ್ದಕ್ಕೂ ಮಕ್ಕಳು, ಯುವಕರು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಡಿ.ಜೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಡಿಕೇರಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.
ಮಡಿಕೇರಿ ಸೆ.6 NEWS DESK : ಬೆಂಗಳೂರಿನ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕ ಘಟಕದ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಹೆಸರಿನಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕೊಡಗಿನ ಐವರು ಶಿಕ್ಷಕರು ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೊನ್ನಂಪೇಟೆಯ ಬೆಕ್ಕೆಸೊಡ್ಲೂರಿನ ಶಾರದ ಪ್ರೌಢಶಾಲೆಯ ಸಹಶಿಕ್ಷಕರಾದ ಎನ್.ಡಿ.ತಿಮ್ಮಯ್ಯ, ಸೋಮವಾರಪೇಟೆ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಸಿ.ಕೆ.ರಾಧ, ಕೂಡಿಗೆ ಸರ್ಕಾರಿ ಪದವಿ ಪುರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಹೆಚ್.ಜೆ., ವಿರಾಜಪೇಟೆ ತಾಲ್ಲೂಕಿನ ಬಿಳುಗುಂದ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಅರುಣ್ ಆ್ಯನಿಸ್ ಡಿಸೋಜ ಮತ್ತು ಸೋಮವಾರಪೇಟೆಯ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ ಸಹ ಶಿಕ್ಷಕರಾದ ಭವ್ಯ ಕೆ.ಕೆ. ಪ್ರಶಸ್ತಿಯನ್ನು ಸ್ವೀಕರಿಸಿದರು.
ಮಡಿಕೇರಿ ಸೆ.6 NEWS DESK : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಸೆ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದರಾದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಹಿರಿಯ ರಾಜಕಾರಣಿ ಎಂ.ಸಿ.ನಾಣಯ್ಯ, ಮಾಜಿ ಸಚಿವ…
ಮಡಿಕೇರಿ ಸೆ.6 NEWS DESK : ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್ ವತಿಯಿಂದ ಸೆ.9 ರಂದು ಐವರು ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ನಗರದ ರೋಟರಿ ಸಭಾಂಗಣದಲ್ಲಿ ಸೆ.9 ರಂದು ಸಂಜೆ 7 ಗಂಟೆಗೆ ಆಯೋಜಿತ ಸಮಾರಂಭದಲ್ಲಿ ಮೂನಾ೯ಡು ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಪಳಂಗಂಡ ದೇವಕಿ, ಮದೆನಾಡು ಪ.ಪೂ.ಕಾಲೇಜಿನ ನಿವೃತ್ತ ಉಪನ್ಯಾಸಕ ಬಾರಿಯಂಡ ಜೋಯಪ್ಪ, ಮಡಿಕೇರಿ ಜನರಲ್ ತಿಮ್ಮಯ್ಯ ಶಾಲಾ ಪ್ರಾಂಶುಪಾಲೆ ಬಾಳೆಯಡ ಸವಿತಾ ಕಿಶನ್, ಕೊಡಗು ವಿದ್ಯಾಲಯದ ಶಿಕ್ಷಕಿ ಅಲೆಮಾಡ ಚಿತ್ರಾನಂಜಪ್ಪ, ಮತ್ತು ಸುಂಟಿಕೊಪ್ಪ ಸ್ವಸ್ಥ ವಿಶೇಷ ಚೇತನ ಶಾಲೆಯ ಹಿರಿಯ ಶಿಕ್ಷಕಿ ಕೆ. ಲಲಿತಾ ಅವರನ್ನು ರೋಟರಿ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಟಿತ ವಾಷಿ೯ಕ ಪ್ರಶಸ್ತಿ ನೇಷನ್ ಬಿಲ್ಡರ್ ಅವಾಡ್೯ ಪ್ರಧಾನ ಮಾಡಿ ಸನ್ಮಾನಿಸಲಾಗುತ್ತದೆ ಅತ್ಯುತ್ತಮ ಶಿಕ್ಷಕ ಎಂಬ ರಾಷ್ಟ್ರಪ್ರಶಸ್ತಿ ಪಡೆದಿರುವ ಅರಂತೋಡು ಗ್ರಾಮದ ಕೆ.ಆರ್.ಗಂಗಾಧರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ, ವಲಯ ಸೇನಾನಿ ಕೆ.ಸಿ. ಕಾಯ೯ಪ್ಪ…






