ಮಡಿಕೇರಿ ಸೆ.6 NEWS DESK : ಮಡಿಕೇರಿ ಕೊಡಗು ಸೌಹಾರ್ದ ಪತ್ತಿನ ಸಹಕಾರ ಸಂಘದ ಮಾಹಾಸಭೆಯು ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಮಂಡುವಂಡ ಪಿ.ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, 2005 ರಲ್ಲಿ ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ ನವರ ಮಾರ್ಗದರ್ಶ ಹಾಗೂ ಅಂದಿನ ಕೊಡವ ಸಮಾಜದ ನೇತೃತ್ವದಲ್ಲಿ 472 ಸದಸ್ಯರಿಂದ ಸಂಘವು ಪ್ರಾರಂಭಗೊಂಡಿದೆ. ಇದೀಗ 20 ವರ್ಷಗಳು ಕಳೆದಿದ್ದು, ಪ್ರಸ್ತುತ 2143 ಸದಸ್ಯರಿದ್ದಾರೆ. ಪಾಲುಹಣ ಒಂದು ಕೋಟಿ ಮೇಲ್ಪಟ್ಟಿದ್ದು, ಈ ಬಾರಿ 28.29 ಲಕ್ಷ ಲಾಭಾಂಶ ಪಡೆದಿದೆ. ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲಾಗುವುದೆಂದರು. ಸಂಘದ ಸದಸ್ಯತ್ವವನ್ನು ಪಡೆಯುವುದರ ಮೂಲಕ ಸಂಘದ ಸೌಲಭ್ಯವನ್ನು ಪಡೆಯುವುದು ಹಾಗೂ ಸಂಘದಿಂದ ಪಡೆದ ಸಾಲವನ್ನು ಸಮಯಕ್ಕೆ ಸರಿಯಾಗಿ ಪಾವತಿಸುವ ಮೂಲಕ ಅಭಿವೃದ್ಧಿಗೆ ಸಹಕಾರಿಸಬೇಕೆಂದರು. ವೇದಿಕೆಯುಲ್ಲಿ ನಿರ್ದೇಶಕರಾದ ಚೋವಂಡ ಡಿ.ಕಾಳಪ್ಪ, ಅಂಜಪರವಂಡ ಉಷಾ, ಕೊಂಗಾಂಡ ಎ.ತಿಮ್ಮಯ್ಯ, ನಂದೇಟಿರ ರಾಜ ಮಾದಪ್ಪ,ಕೇಕಡ ಎಮ್.ಸುಗುಣ, ಡಾ.ಸಣ್ಣುವಂಡ ಕಾವೇರಪ್ಪ, ಮೇದುರ…
ಲೇಖಕ: admin
ಮಡಿಕೇರಿ ಸೆ.6 NEWS DESK : ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ವಿವಿಧ ಶಾಲಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಒಂಭತ್ತು ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ವಿವಿಧ ಶಾಲೆಯ ಶಿಕ್ಷಕರಾದ ರಾಖಿ ಪೂವಣ್ಣ, ಸವಿತಾ ಪ್ರಶಾಂತ್, ವೀಣಾ ದಿವಾಕರ್, ಉಷಾ ಪ್ರದೀಪ್, ಶಶಿಕಲಾ ರವೀಂದ್ರ, ಕಾವೇರಿ, ವಿದ್ಯಾ ಬಿ.ಸಿ, ಶೋಭಿತಾ ರವೀಂದ್ರ ಮತ್ತು ಡೀನಾ ಹೆಚ್.ಡಿ ಕ್ಲಬ್ ನ ಸನ್ಮಾನಕ್ಕೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ವಲಯ 6ರ ಎ.ಜಿ. ರೊ.ಧಿಲನ್ ಚಂಗಪ್ಪ, ವುಡ್ಸ್ ಸಂಸ್ಥೆ ಆರಂಭದಿಂದಲೂ ಉತ್ತಮ ಕೆಲಸಗಳನ್ನು ಮಾಡುತ್ತಾ ಬಂದಿದೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ವೇಗವಾಗಿ ಅತ್ಯುತ್ತಮ ಕ್ಲಬ್ ಆಗುವತ್ತ ಹೆಜ್ಜೆ ಹಾಕುತ್ತಿದೆ. ಭವಿಷ್ಯದ ದಿನಗಳಲ್ಲೂ ಈ ರೀತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ರೋಟರಿ ಜಿಲ್ಲೆಯಲ್ಲಿ ಬೆಳಗುವಂತಾಗಲಿ ಎಂದು ಹಾರೈಸಿದರು. ಝೋನಲ್ ಲೆಫ್ಟಿನೆಂಟ್ ರೊ.ಕೆ.ಸಿ ಕಾರ್ಯಪ್ಪ ಮಾತನಾಡಿ, ಶಿಕ್ಷಕರು ಭವಿಷ್ಯವನ್ನು ರೂಪಿಸುತ್ತಾರೆ. ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವುದು ರಾಷ್ಟ್ರಕ್ಕೆ ಕೊಡುಗೆ ನೀಡಿದಂತೆ ಎಂದು ಬಣ್ಣಿಸಿದರು. ಕ್ಲಬ್ ಸದಸ್ಯ ರೊ.ಪ್ರಶಾಂತ್…
ಸೋಮವಾರಪೇಟೆ ಸೆ.9 NEWS DESK : ಸೋಮವಾರಪೇಟೆ ತಾಲ್ಲೂಕಿನ ಕಲ್ಕಂದೂರು ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯಿಂದ ಪ್ರವಾದಿಯವರ ಸಂದೇಶ ಜಾಥ ನಡೆಯಿತು. ಮಸೀದಿ ಖತೀಬರಾದ ಅಬ್ದುಲ್ ರೆಹಮಾನ್ ಸಖಾಫಿ, ಜಮಾತ್ ಅಧ್ಯಕ್ಷ ಕೆ.ಈ.ಶರೀಪ್, ಸದರ್ ಉಸ್ತಾದರಾದ ಬದುರುಲ್ ಮುನೀರ್ ಫಾಲಿಳಿ, ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಮತ್ತಿತರರು ಇದ್ದರು. ಮಕ್ಕಳಿಂದ ದಫ್ ನಡೆಯಿತು.
ಮಡಿಕೇರಿ ಆ.6 NEWS DESK : ಬ್ರಹ್ಮಶ್ರೀ ನಾರಾಯಣಗುರು ಚಾರಿಟೇಬಲ್ ಟ್ರಸ್ಟ್, ಎಸ್ಎನ್ಡಿಪಿ ಯೋಗಂ ಶಾಖೆ, ಯೂತ್ ಕಮಿಟಿ ಮತ್ತು ಮಹಿಳಾ ಕಮಿಟಿಯ ಸಂಯುಕ್ತಾಶ್ರಯದಲ್ಲಿ ಸೆ.7 ರಂದು ಏಳನೇ ಹೊಸಕೋಟೆಯಲ್ಲಿ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಟಿ.ಕೆ.ಸಾಯಿ ಕುಮಾರ್ ಕಾರ್ಯಕ್ರಮದ ಕುರಿತು ಮಾಹಿತಿ ನಿಡಿ, 7ನೇ ಹೊಸಕೋಟೆಯ ಬ್ರಹ್ಮಶ್ರೀ ನಾರಾಯಣಗುರು ಚಾರಿಟೆಬಲ್ ಟ್ರಸ್ಟ್ ಸಭಾಂಗಣದಲ್ಲಿ ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ ಗುರುಗಳ ಜಯಂತಿಯನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ 8 ಗಂಟೆಯವರೆಗೆ ಪೂಕಳಂ ಸ್ಪರ್ಧೆ ನಡೆಯಲಿದ್ದು, ಏಳನೇ ಹೊಸಕೋಟೆ ಗ್ರಾ.ಪಂ ಉಪಾಧ್ಯಕ್ಷರಾದ ಸೌಮ್ಯ ಸ್ಪರ್ಧೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಬೆ.8.30 ಗಂಟೆಗೆ ಎಸ್ಎನ್ಡಿಪಿ 7ನೇ ಹೊಸಕೋಟೆ ಶಾಖೆಯ ಅಧ್ಯಕ್ಷ ಟಿ.ಬಿ.ರಾಜೇಶ್ ಧ್ವಜಾರೋಹಣ ನೆರವೇರಿಸಲಿದ್ದು, 9 ಗಂಟೆಯಿಂದ 9.30ರ ವರೆಗೆ ಬ್ರಹ್ಮಶ್ರೀ ನಾರಾಯಣಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಟಿ.ಕೆ.ಸಾಯಿಕುಮಾರ್ ನೇತೃತ್ವದಲ್ಲಿ ಗುರು ಪೂಜೆ ನೆರವೇರಲಿದೆ. 9.30 ಗಂಟೆಗೆ…
ಮಡಿಕೇರಿ ಸೆ.6 NEWS DESK : ಪ್ರವಾದಿ ಮುಹಮ್ಮದ್ ಪೈಗಂಬರರ ಸಂದೇಶ ಮತ್ತು ತತ್ತ್ವಾದರ್ಶಗಳನ್ನು ತಿಳಿಸಿಕೊಡುವ, ಪ್ರವಾದಿಗಳ ಕುರಿತಾದ ತಪ್ಪು ಕಲ್ಪನೆಗಳನ್ನು ದೂರಮಾಡುವ ಮೂಲಕ ಸಮಾಜದ ಸೌಹಾರ್ದತೆಯನ್ನು ಬಲಪಡಿಸುವ ಪ್ರಮುಖ ಚಿಂತನೆಗಳಡಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯಿದ ರಾಜ್ಯಾದ್ಯಂತ ‘ಮುಹಮ್ಮದ್ ಪೈಗಂಬರರ ಜೀವನ ಸಂದೇಶ ಅಭಿಯಾನ’ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಮೈಸೂರು ವಲಯ ಸಂಚಾಲಕರಾದ ಯು.ಅಬ್ದುಸ್ಸಲಾಂ ಅವರು ಈ ಕುರಿತು ಮಾಹಿತಿ ನೀಡಿ, ಯಾವುದೇ ಧರ್ಮಗಳಲ್ಲಿನ ಸಂತರು, ಪ್ರವಾದಿಗಳು ಒಂದು ಧರ್ಮಕ್ಕೆ ಸೀಮಿತರಾದವರಲ್ಲ, ಇಡೀ ಮನುಕುಲಕ್ಕೆ ಸೇರಿದವರಾಗಿದ್ದಾರೆ. ಈ ಹಿನ್ನೆಲೆ ಪ್ರವಾದಿ ಮುಹಮ್ಮದ್ ಪೈಗಂಬರರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅದನ್ನು ಜನಮಾನಸಕ್ಕೆ ತಲುಪಿಸುವ ಚಿಂತನೆಗಳಡಿ ಅಭಿಯಾನವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆಯೆಂದು ತಿಳಿಸಿದರು. ಪ್ರವಾದಿ ಮುಹಮ್ಮದ್ ಪೈಗಂಬರ ಅವರು ಪ್ರವಾದಿಗಳಾವುದಕ್ಕೂ ಮುನ್ನ ಮತ್ತು ನಂತರವು ‘ನ್ಯಾಯ’ಕ್ಕಾಗಿ ಹೋರಾಟಗಳನ್ನು ನಡೆಸಿಕೊಂಡು ಬಂದಂತಹವರು. ಎಲ್ಲಾ ವ್ಯವಸ್ಥೆಗಳ ಬುನಾದಿಯೇ ನ್ಯಾಯವಾಗಿದೆ. ಎಲ್ಲಿ ನ್ಯಾಯ ಪರಿಪಾಲನೆ ಸಾಧ್ಯವಾಗುವುದಿಲ್ಲವೋ ಅಲ್ಲಿ ಗೊಂದಲ, ಅಶಾಂತಿ ಮೂಡುತ್ತದೆಂದು ತಿಳಿಸಿ, ಇಂದಿನ ಸಮಾಜದಲ್ಲಿ ಸಾಮರಸ್ಯದ ಬದುಕು…
ಮಡಿಕೇರಿ NEWS DESK ಸೆ.5 : ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ ಮತ್ತು ಡೈಮಂಡ್ಸ್ ವತಿಯಿಂದ ಗೋಣಿಕೊಪ್ಪಲುವಿನಲ್ಲಿ ನಡೆದ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್. ಭಾರದ್ವಾಜ್ ಪ್ರಥಮ ಬಹುಮಾನ ಗೆದ್ದಿದ್ದಾಳೆ. 4 ರಿಂದ 7 ವರ್ಷದೊಳಗಿನ ಮಕ್ಕಳ ವಿಭಾಗದ ಸ್ಪರ್ಧೆಯಲ್ಲಿ ಶ್ರೀಕೃಷ್ಣನ ಬಾಲಲೀಲೆಯ ಕೃಷ್ಣನಾಗಿ ಮಿಂಚಿದ ಸ್ಮೃತಿ ನೆರೆದಿದ್ದವರ ಮೆಚ್ಚುಗೆಗೆ ಪಾತ್ರಳಾಗಿ ಪ್ರಥಮ ಬಹುಮಾನ ಪಡೆದಳು. 5 ವರ್ಷದ ಸ್ಮೃತಿ ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಭಾರದ್ವಾಜ್ ಹಾಗೂ ಆಶಿಕಾ ದಂಪತಿಯ ಪುತ್ರಿ.
ಮಡಿಕೇರಿ NEWS DESK ಸೆ.5 : ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸುವ ಕರ್ನಾಟಕ ರಾಜ್ಯ ಸರಕಾರದ ಪ್ರಸ್ತಾಪ ಸ್ವಾಗತಾರ್ಹವೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾರ್ವತ್ರಿಕ ಚುನಾವಣೆಗಳಲ್ಲಿ ಮತಗಳ್ಳತನವಾಗುತ್ತಿರುವ ಕುರಿತು ಸಾಕ್ಷಿ ಸಹಿತ ಇಂಡಿಯಾ ಒಕ್ಕೂಟದ ನಾಯಕರುಗಳು ಗುರುತರ ಆರೋಪ ಮಾಡಿದ್ದರೂ ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳುವ ಭರವಸೆ ನೀಡದೆ ಆರೋಪ ಮಾಡಿದವರ ವಿರುದ್ಧವೇ ರಾಜಕೀಯ ಪ್ರತಿಕ್ರಿಯೆಗಳನ್ನು ನೀಡುತ್ತಿವೆ ಎಂದು ಆರೋಪಿಸಿದ್ದಾರೆ. ಮತದಾನ ಪ್ರಕ್ರಿಯೆಯಲ್ಲಿ ಆಮೂಲಾಗ್ರ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಇಚ್ಛೆ ಇಲ್ಲದಿರುವುದು ಸ್ಪಷ್ಟವಾಗುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಬ್ಯಾಲೆಟ್ ಪೇಪರ್ ಬಳಕೆಯ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಕಳೆದ ದೆಹಲಿ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಾವಿರಾರು ಮತದಾರರನ್ನು ಕೈ ಬಿಟ್ಟಿದ್ದ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಅನೇಕ ಹಂತಗಳಲ್ಲಿ…
ಮಡಿಕೇರಿ ಸೆ.5 NEWS DESK : ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅಪಾರ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಹೇಳಿದ್ದಾರೆ. ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗುರುಗಳಿಲ್ಲದಿದ್ದರೆ ಸಮಾಜದ ಸ್ಥಿತಿಗತಿಗಳು ಬೆರಡೆಯೇ ಸಾಗುತ್ತಿತ್ತು, ಗುರುವಿಂದಲೆ ಕೆಡಕುಗಳು ಮರೆಯಾಗಿ ಒಳಿತಾಗುತ್ತಿರುವುದು. ಆದುದರಿಂದಲೇ ಪ್ರತಿಯೊಬ್ಬರ ಜೀವನದಲ್ಲಿಯೂ ಗುರು ಮಹತ್ವ ಪೂರ್ಣವಾಗಿದ್ದಾರೆ ಎಂದು ಗುರುವಿನ ಮಹತ್ವ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿರುವುದು ಬೇಸರದ ಸಂಗತಿಯಾಗಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳು ದಾಖಲಾಗಲು ಶಾಲೆಗಳಲ್ಲಿ ಅನೇಕ ಬದಲಾವಣೆ ಹಾಗೂ ನೂತನ ಕಾರ್ಯಕ್ರಮಗಳನ್ನು ತರಲಾಗುತ್ತಿದೆ ಎಂದರು. ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ ಅದನ್ನು ಸರಿಪಡಿಸಿ ಕೊಡುವುದರ ಭರವಸೆಯನ್ನು ನೀಡಿದರು.…
ಮಡಿಕೇರಿ ಸೆ.5 NEWS DESK : ದಸರಾ ಆಚರಣೆಯ ಸಂದರ್ಭ ಮಳೆಗೆ ವಿರಾಮ ನೀಡಬೇಕು ಮತ್ತು ದಸರಾ ಜನೋತ್ಸವ ನಿರ್ವಿಘ್ನವಾಗಿ ನಡೆಯಬೇಕೆಂದು ಪಾಡಿ ಶ್ರೀಇಗ್ಗುತ್ತಪ್ಪ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ಮಡಿಕೇರಿ ದಸರಾ ದಶಮಂಟಪ ಸಮಿತಿ ವತಿಯಿಂದ ಸೆ.7 ರಂದು ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಅವರು ತಿಳಿಸಿದ್ದಾರೆ. ನಗರದಲ್ಲಿ ದಶಮಂಟಪ ಸಮಿತಿ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಸರಾ ಸಂದರ್ಭ ಮಳೆ ಇಲ್ಲದೆ ಸಂಭ್ರಮದಿಂದ ಹಬ್ಬ ಆಚರಣೆಯಾಗಬೇಕೆಂದು ಪಾಡಿ ಶ್ರೀಇಗ್ಗುತ್ತಪ್ಪ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ಭಾನುವಾರ ಬೆಳಿಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ಎಲ್ಲಾ ಸಮಿತಿ, ಉಪ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ದಶಮಂಟಪಗಳ ಅದ್ದೂರಿಯ ಶೋಭಾಯಾತ್ರೆಗೆ ಸರ್ವರು ಸಹಕರಿಸುವಂತೆ ಕೋರಿದರು. *ಸನ್ಮಾನ* ಇದೇ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ದಶಮಂಟಪ ಸಮಿತಿಗಳ ಹಿರಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ನಾಲ್ಕು ಶಕ್ತಿ…
ಮಡಿಕೇರಿ ಸೆ.5 NEWS DESK : ಮಾನವ ಹಾಗೂ ವನ್ಯ ಜೀವಿ ಸಂಘರ್ಷ ನಿವಾರಣೆ ಕುರಿತು ಸೇವೆ ಸಲ್ಲಿಸುತ್ತಿರುವ ಹುಣಸೂರಿನ ರತ್ನ ಪುರಿಯ ಲಯಾನ ಟ್ರಸ್ಟ್ ವತಿಯಿಂದ ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ಹಾವುಗಳ ಸಂರಕ್ಷಣಾ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಲಯಾನ ಟ್ರಸ್ಟ್ ನ ಶರಣ್ಯ ಭಟ್ ಹಾಗೂ ಸಮುದಾಯ ಕಲ್ಯಾಣ ಸಹಾಯಕ ಪ್ರಾಧ್ಯಾಪಕರಾದ ಶ್ರೇಯಸ್ ಜೈನ್ ಹಾವುಗಳ ದೇಹದ ರಚನೆ, ಹಾವುಗಳ ಬಗ್ಗೆ ಇರುವ ತಪ್ಪು ಭಾವನೆ, ಹಾವು ಕಡಿತಕ್ಕೆ ಒಳಗಾದವರಿಗೆ ಹೇಗೆ ನೆರವಾಗಬೇಕು ಸೇರಿದಂತೆ ಆಸಕ್ತಿದಾಯಕ ವಿಚಾರಗಳನ್ನು ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೇ ವಿದ್ಯಾರ್ಥಿಗಳಿಗೆ ಹಾವುಗಳ ಬಗ್ಗೆ ಇದ್ದ ಸಂದೇಹಗಳಿಗೆ ಉತ್ತರಗಳನ್ನು ನೀಡಿದರು. ಈ ಸಂದರ್ಭ ಕಾವೇರಿ ಶಾಲೆಯ ಅಧ್ಯಕ್ಷರಾದ ಬಿ.ಎಸ್.ಸುದೇಶ್ ವಂದನೆಗಳನ್ನು ಸಲ್ಲಿಸಿದರು.






