ಮಡಿಕೇರಿ ಅ.13 NEWS DESK : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಅ.17 ರಂದು ನಡೆಯಲಿದೆ. ಈ ಉದ್ಯೋಗಮೇಳಕ್ಕೆ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ವಲಯಗಳ 200ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು https://udyogamela.ksdckarnataka.com ಗೆ ಭೇಟಿ ನೀಡಿ ನೋಂದಣಿಯಾಗಲು ಕೋರಿದೆ. ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಮೇಳದಲ್ಲಿ ಭಾಗವಹಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಅ.13 NEWSDESK : ಲೋಕಸಭಾ ಚುನಾವಣೆಯ ಸಂದರ್ಭ ನಿರಂತರವಾಗಿ ಕೊಡಗು ಜಿಲ್ಲೆಗೆ ಅನ್ಯಾಯವಾಗುತ್ತಿರುವುದರಿಂದ ಕೊಡಗಿನವರಿಗೆ ರಾಜ್ಯಸಭೆಯಲ್ಲಿ ಸ್ಥಾನ ಕಲ್ಪಿಸಬೇಕೆಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸಿದೆ.ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಕೊಡಗು ಜಿಲ್ಲೆ ಕರ್ನಾಟಕದ ಗರ್ವವಾಗಿದ್ದು, ಶೌರ್ಯ, ಶಿಸ್ತಿನ ಜೀವನಶೈಲಿ ಮತ್ತು ದೇಶಸೇವೆಯ ಪರಂಪರೆಯಿಂದ ಪ್ರಸಿದ್ಧವಾಗಿದೆ. ಭಾರತೀಯ ಸೇನೆ, ಕ್ರೀಡಾರಂಗ ಮತ್ತು ಆಡಳಿತ ಕ್ಷೇತ್ರಗಳಲ್ಲಿ ಕೊಡಗಿನ ಅನೇಕರು ತೊಡಗಿಸಿಕೊಂಡು ರಾಷ್ಟ್ರಕ್ಕೆ ಗೌರವ ತಂದುಕೊಟ್ಟಿದ್ದಾರೆ. ಈ ರೀತಿಯ ಹೆಗ್ಗಳಿಕೆಯನ್ನು ಹೊಂದಿರುವ ಕೊಡಗು ಜಿಲ್ಲೆಗೆ ಪ್ರತಿ ಲೋಕಸಭಾ ಚುನಾವಣೆಯಲ್ಲಿ ಅನ್ಯಾಯವಾಗುತ್ತಿದೆ. ಪ್ರಮುಖ ರಾಷ್ಟ್ರೀಯ ಪಕ್ಷಗಳು ಕೊಡಗಿನ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡದೆ ಕಡೆಗಣಿಸುತ್ತಿವೆ ಎಂದು ಆರೋಪಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಕೊಡಗು ಜಿಲ್ಲೆಯ ಅಭ್ಯರ್ಥಿಗಳು ಚುನಾಯಿತರಾಗಿಲ್ಲ. ಈ ಕಾರಣದಿಂದ ಜಿಲ್ಲೆಯನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಕೇಂದ್ರ ಸರಕಾರದ ಮಟ್ಟದಲ್ಲಿ ಧ್ವನಿ ಇಲ್ಲದಂತಾಗಿದೆ ಮತ್ತು ಸ್ಪಂದನೆ ಮರೀಚಿಕೆಯಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಕೂಡ ಎರಡೂ…
ಮಡಿಕೇರಿ ಅ.13 NEWS DESK : ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನ ದೊರಕಿದ್ದು, ಅ. 15 ರಂದು ಸ್ವಚ್ಚತೆ ಸಂಬಂಧಿತ ಬೃಹತ್ ಅಭಿಯಾನ ನಡೆಯಲಿದೆ ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ತಿಳಿಸಿದ್ದಾರೆ. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ನೇತೃತ್ವದಲ್ಲಿ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಚೇಂಬರ್ ಆಫ್ ಕಾಮಸ್೯, ಕೊಡಗು ಹೋಂಸ್ಟೇ ಅಸೋಸಿಯೇಷನ್, ರೋಟರಿ , ಲಯನ್ಸ್ ಸಂಸ್ಥೆಗಳು, ಪ್ರವಾಸೋದ್ಯಮ ಇಲಾಖೆ, ರೆಡ್ ಕ್ರಾಸ್, ಸ್ಥಳೀಯ ಸಂಘ ಸಂಸ್ಥೆಗಳು, ಹಲವಾರು ಶಿಕ್ಷಣ ಸಂಸ್ಥೆಗಳು, ವಿವಿಧ ಸಂಘಟನೆಗಳು ಈ ಬೖಹತ್ ಅಭಿಯಾನಕ್ಕೆ ಕೈ ಜೋಡಿಸಿದೆ. ಜಿಲ್ಲೆಯಾದ್ಯಂತಲಿನಿಂದ ಅಭಿಯಾನಕ್ಕೆ ಸಹಕಾರ ನೀಡುವುದಾಗಿ ನಿರೀಕ್ಷೆಗೂ ಮೀರಿದ ಸ್ಪಂದನೆ ಸಂಘಟನೆಗಳ ಪ್ರಮುಖರಿಂದ ದೊರಕಿದೆ. ಅ.15 ರಂದು ಬುಧವಾರ ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲಾ ಕೇಂದ್ರವಾದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ಬೆಳಗ್ಗೆ 8 ಗಂಟೆಗೆ ಶಾಸಕ…
ಮಡಿಕೇರಿ ಅ.13 NEWS DESK : ಕಳೆದ ಹಲವಾರು ವರ್ಷಗಳಿಂದ ಪ್ರತಿಭಾವಂತ ಬಡ ವಿದ್ಯಾರ್ಥಿನಿಯರಿಗೆ ಎ.ಕೆ ಸುಬ್ಬಯ್ಯ-ಪೊನ್ನಮ್ಮ ಸುಬ್ಬಯ್ಯ ದತ್ತಿ ನಿಧಿ ಹಾಗೂ ಚಾರಿಟೇಬಲ್ ಟ್ರಸ್ಟ್ ಮೂಲಕ ನೀಡುತ್ತಿರುವ ವಿದ್ಯಾರ್ಥಿ ವೇತನವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿತರಿಸಿದರು. ಪ್ರಸಕ್ತ ಸಾಲಿನಲ್ಲಿ ನೂರಾರು ಅರ್ಜಿಗಳು ಬಂದಿದ್ದು, ಉನ್ನತ ಮಟ್ಟದ ಆಯ್ಕೆ ಸಮಿತಿಯಿಂದ ಪುರಸ್ಕೃತಗೊಂಡ ಅರ್ಹ ವಿದ್ಯಾರ್ಥಿನಿಯರಿಗೆ ವಿರಾಜಪೇಟೆಯ ಶಾಸಕರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು, ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿನಿಯರಿಗೆ ಮುಂದಿನ 3 ವರ್ಷದ ವಿದ್ಯಾಭ್ಯಾಸಕ್ಕೆ ತಲಾ 10,000 ದಂತೆ, ಪ್ರತಿ ವರ್ಷ ಆರ್ಥಿಕ ನೆರವು ಪಡೆಯಲಿದ್ದಾರೆ ಎಂದು ತಿಳಿಸಿದರು. ಕೊಡಗಿನ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಆರ್ಥಿಕ ಸಮಸ್ಯೆಯಿಂದಾಗಿ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದು ಎಂಬ ಕಾರಣದಿಂದ, ತಂದೆ ತಾಯಿಯ ಹೆಸರಿನಲ್ಲಿ ಶೈಕ್ಷಣಿಕ ಕಳಕಳಿಯ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾಗಿ ತಿಳಿಸಿದರು. ಈಗಾಗಲೇ ನೂರಾರು ವಿದ್ಯಾರ್ಥಿಗಳು ಇದರ ಫಲಾನುಭವಿಗಳಾಗಿದ್ದು, ಈ ಕಾರ್ಯಕ್ರಮವು ನಿರಂತರವಾಗಿ…
ಮಡಿಕೇರಿ ಅ.13 NEWS DESK : ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಜಿಲ್ಲಾ ಮೂಕರು ಮತ್ತು ಶ್ರವಣ ಮಾಂಧ್ಯರ ಸಂಘದ ವತಿಯಿಂದ ಕೊಡಗು ಜಿಲ್ಲಾ ಕಿವುಡರ ಸಂಘದ ಉಪಾಧ್ಯಕ್ಷ ಕೆ.ಕೆ.ಶಂಕರ್ ನಾರಾಯಣ ಅವರನ್ನು ಗೌರವಿಸಲಾಯಿತು. ಸಂಘದ ವತಿಯಿಂದ ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆದ ವಿಶ್ವ ಕಿವುಡರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ಸಂದರ್ಭ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಹೆಚ್.ಶಂಕರ್, ಅಧ್ಯಕ್ಷ ಕೆ.ಎಸ್.ಉಮಾಶಂಕರ್, ಪ್ರಧಾನ ಕಾರ್ಯದರ್ಶಿ ಕೆ.ಎಸ್.ದೇವರಾಜ್, ಅರಣು ಇಲಾಖೆ ಸಿಸಿಎಫ್ ಹನುಮಂತಪ್ಪ, ರಾಜ್ಯ ಕಿವುಡರ ಕ್ರೀಡಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ.ಎಸ್.ನವೀನ್ ಕುಮಾರ್, ಶಿವಮೊಗ್ಗ ಮೂಕರ ಮತ್ತು ಶ್ರವಣಮಾಂಧ್ಯ ಸಂಘದ ಗೌರವಾಧ್ಯಕ್ಷ ಎಸ್.ಎಸ್.ಸಂದೇಶ್, ಹೆಲ್ಪಿಂಗ್ ಹ್ಯಾಂಡ್ಸ್ನ ನಂದಿನಿ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಶ್ರವಣ ಮಾಂಧ್ಯರು ಹಾಜರಿದ್ದರು.
ಮಡಿಕೇರಿ ಅ.13 NEWS DESK : ಬಸವನಹಳ್ಳಿ ಪ್ರೌಢ ಶಾಲೆಯ ಮೈದಾನದಲ್ಲಿ ಸ್ಥಳೀಯ ಯುವಕರಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಕುಶಾಲನಗರದ ಬಸವನಹಳ್ಳಿ ಪ್ರೌಢ ಶಾಲೆಯ ಮೈದಾನ ನಿರ್ವಹಣೆ ಇಲ್ಲದೆ ಮೈದಾನದ ತುಂಬಾ ಹುಲ್ಲು ಗಿಡಗಂಟಿಗಳು ಬೆಳೆದು ಶಾಲಾ ಮಕ್ಕಳು ಮೈದಾನದಲ್ಲಿ ಆಟವಾಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಮನಗಂಡ ಗ್ರಾಮದ ಯುವಕರು ಸುಮಾರು 3 ಏಕರೆ ಗಿಂತ ಅಧಿಕವಿರುವ ಮೈದಾನದಲ್ಲಿ ಬೆಳೆದಿದ್ದ ಹುಲ್ಲು ಮತ್ತು ಗಿಡ ಗಂಟಿಗಳನ್ನು ತಮ್ಮ ಸ್ವಂತ ಖರ್ಚಿನಿಂದ ವೀಡ್ ಕಟರ್ ಮೂಲಕ ಸ್ವಚ್ಛಗೊಳಿಸಿದರು. ಸ್ಥಳೀಯ ಯುವಕರ ಉತ್ತಮ ಕಾರ್ಯಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಅ.13 NEWS DESK : ಕೊಡಗು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ್ಲಿ PMAY(U)2.0 ಯೋಜನೆಯಡಿ ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆ ನಡೆಯುತ್ತಿದ್ದು, ನಗರ ಪ್ರದೇಶಗಳಲ್ಲಿ ವಾಸಿಸುವ ನಿವೇಶನ ಹೊಂದಿರುವ ಅಥವಾ ಹಳೆಯ ಕಚ್ಚಾ ಮನೆಯಲ್ಲಿ ವಾಸವಿರುವಂತಹ (ಸ್ವಂತ RCC ಮನೆ ಹೊಂದಿರಬಾರದು) ಇದುವರೆಗೂ ಯಾವುದೇ ವಸತಿ ಯೋಜನೆಗಳ ಸೌಲಭ್ಯ ಪಡೆಯದೇ ಇರುವ ವಾರ್ಷಿಕ ರೂ,3.00 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ವಿವಾಹಿತ ಮಹಿಳೆಯರು, ಗೃಹಿಣಿಯರು, ಮಾಜಿ ಸೈನಿಕರು, ವಿಧುದರು, ಅಂಗವಿಕಲರು, ಹಿರಿಯ ನಾಗರೀಕರು ವಿಷೇಶವಾಗಿ ಸಪಾಯಿ ಕರ್ಮಚಾರಿಗಳು, ಬೀದಿ ಬದಿ ವ್ಯಾಪಾರಿಗಳು, ಅಂಗನವಾಡಿ ಕಾರ್ಯ ಕರ್ತೆಯರು, ಪಿ.ಎಂ.ವಿಶ್ವಕರ್ಮ ಯೋಜನೆಯ ಫಲಾನುಭವಿಗಳು, ಕಟ್ಟಡ ಕಾರ್ಮಿಕರು ಮತ್ತು ಕೊಳಚೆ ಪ್ರದೇಶದ ನಿವಾಸಿಗಳು ಹೊಸ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನ ಪಡೆಯಲು ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ನಿವೇಶನ/ಹಳೆ ಕಚ್ಚಾ ಮನೆಯ ದಾಖಲೆಗಳು ಹಾಗೂ ಜಾತಿ & ಆಧಾಯ ಪ್ರಮಾಣ ಪತ್ರದೊಂದಿಗೆ PMAY(U)2.0…
ವಿರಾಜಪೇಟೆ ಅ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ವಿರಾಜಪೇಟೆ ತಾಲ್ಲೂಕು, ಮೂರ್ನಾಡು ವಲಯದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಪಾರಣೆ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಎ.ಬಿ.ಕಾರ್ಯಕ್ಷೇತ್ರದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಜಿ ಸೈನಿಕರು ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ವಿ.ಎಂ.ಸುಬ್ರಮಣಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯೋಜನೆ ಕಾರ್ಯಕ್ರಮಗಳು ಜನರ ಬೆಳವಣಿಗೆ ಹಾಗೂ ಸಮಾಜಮುಖಿ ಚಿಂತನೆಯಿಂದ ಕೂಡಿರುತ್ತದೆ. ಅಂತೆಯೇ ಹಿಂದಿನ ಕಾಲದಲ್ಲಿ ಊರಿನ ಜನರುಗಳನ್ನು ಒಗ್ಗೂಡಿಸಲು ಈ ಪೂಜಾ ಕಾರ್ಯಕ್ರಮಗಳನ್ನು ನಾವು ಮಾಡುತ್ತಿದ್ದು, ಪೂಜೆಗಳು ನಮ್ಮ ಮುಂದಿನ ಪೀಳಿಗೆಗೆ ಒಂದು ಮಾದರಿ ಎಂದು ತಿಳಿಸಿದರು. ವಿರಾಜಪೇಟೆ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಪಿ.ಹರೀಶ್. ಮಾತನಾಡಿ ಯೋಜನೆಯಲ್ಲಿ ಹತ್ತು ಹಲವು ಜನಮಂಗಳ ಹಾಗೂ ಸಮಾಜಮುಖ ಕಾರ್ಯಗಳು ನಡೆಸಿದ್ದು, ಇವುಗಳಲ್ಲಿ ಜ್ಞಾನದೀಪ ಶಿಕ್ಷಕರ…
ನಾಪೋಕ್ಲು ಅ.13 NEWSDESK : ನಾಪೋಕ್ಲು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ. ಬೇತು ಗ್ರಾಮದ ನಿವಾಸಿ ಪಾರ್ವತಿ ಎಂಬವರ ದನದ ಕೊಟ್ಟಿಗೆ ಕುಸಿದುಬಿದ್ದಿದ್ದು, ಶೀಟುಗಳು ಪುಡಿಪುಡಿಯಾಗಿ ನಷ್ಟ ಸಂಭವಿಸಿದೆ. ದನಗಳನ್ನು ಮೇಯಲು ಬಿಟ್ಟಿದ್ದ ಕಾರಣ ಅಪಾಯದಿಂದ ಪಾರಾಗಿದೆ ಎಂದು ಪಾರ್ವತಿ ಅವರು ಮಾಹಿತಿ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಅ.13 NEWS DESK : ವಿರಾಜಪೇಟೆ ಜನ ಸೇವಾ ಟ್ರಸ್ಟ್, ಕೊಡಗು ಬ್ಲಡ್ ಡೊನರ್ಸ್ ಹಾಗೂ ಮಡಿಕೇರಿ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ವಿರಾಜಪೇಟೆಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಶಿಬಿರದಲ್ಲಿ 56 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೆಲವು ದಿನಗಳಿಂದ ರಕ್ತದ ಅಭಾವ ಇರುವ ಕಾರಣ ಕೊಡಗು ಬ್ಲಡ್ ಡೋನರ್ಸ್ ನಿಂದ ವಿರಾಜಪೇಟೆಯ ಯುವಕರಲ್ಲಿ ಐದು ಯೂನಿಟ್ ರಕ್ತಕ್ಕಾಗಿ ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿದ ವಿರಾಜಪೇಟೆಯ ಯುವಕರ ತಂಡ ನಾವೇ ಶಿಬಿರ ಆಯೋಜಿಸಿ 50ಯೂನಿಟ್ ರಕ್ತವನ್ನು ನೀಡುವುದಾಗಿ ಭರವಸೆ ನೀಡದ್ದರು. ಅದರಂತೆ ಕೇವಲ 24 ಗಂಟೆಗಳಲ್ಲಿ ಶಿಬಿರ ಆಯೋಜಿಸಿ 56 ಯೂನಿಟ್ ರಕ್ತವನ್ನು ಸಂಗ್ರಹಿಸುವುದರ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು. :: ಕರ್ತವ್ಯಕ್ಕೂ ಸೈ ಸಮಾಜ ಸೇವೆಗೂ ಎತ್ತಿದ ಕೈ :: ರಕ್ತದ ಅಭಾವ ಇರುವ ಹಲವು ಸಂದೇಶಗಳನ್ನು ಮನಗಂಡ ವಿರಾಜಪೇಟೆ ಪೊಲೀಸರು ತಮ್ಮ ಕರ್ತವ್ಯದ ನಡುವೆಯೂ ಶಿಬಿರಕ್ಕೆ ಆಗಮಿಸಿ …






