ಲೇಖಕ: admin

ಮಡಿಕೇರಿ ಸೆ.5 NEWS DESK : ಮಡಿಕೇರಿಯ ಎಎಲ್‌ಜಿ ಕ್ರೆಸೆಂಟ್ ಶಾಲೆಯು ನಾಗರಿಕ ಸೇವೆಗಳ  ಕೋರ್ಸ್ ಅನ್ನು ಪ್ರಾರಂಭಿಸುವ ಮೂಲಕ ಹಾಗೂ ನಾಗರಿಕ ಸೇವೆಗಳ ಕೋರ್ಸ್‌ಗಳ ಪಾತ್‌ವೇ ಮತ್ತು ನಾವಿಗೆಟರ್ ಪುಸ್ತಕ  ಬಿಡುಗಡೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ  ಚಂದ್ರಶೇಖರ್ ಅವರು ನಾಗರಿಕ ಸೇವೆಗಳ ಪಾತ್‌ವೇ ಪುಸ್ತಕಗಳನ್ನು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, “ವಿದ್ಯಾರ್ಥಿಗಳು ಪ್ರತಿಷ್ಠಿತ ನಾಗರಿಕ ಸೇವೆಗಳ ಆಕಾಂಕ್ಷೆಯನ್ನು ಹೊಂದುವಂತೆ ಪ್ರೇರೇಪಿಸಿದರು. ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ, ಶಿಸ್ತು ಮತ್ತು ಸಾರ್ವಜನಿಕ ಸೇವೆಗೆ ಬದ್ಧತೆಯ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಸಮಿತಿ ಅಧ್ಯಕ್ಷ ಜನಾಬ್ ಮೂಸಬ್ಬ ಪಿ.ಬ್ಯಾರಿ, “ನಾಗರಿಕ ಸೇವೆಗಳ ತರಬೇತಿಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಇದು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವುದಲ್ಲದೆ, ವೃತ್ತಿ ಮಾರ್ಗದರ್ಶನವನ್ನೂ ನೀಡುತ್ತದೆ ಎಂದು  ಹೇಳಿದರು. ಮೀಫ್ ಮೂಲಕ, ಅನೇಕ ಹಿಂದುಳಿದ ವಿದ್ಯಾರ್ಥಿಗಳು ಪ್ರಯೋಜನ ಪಡೆದಿದ್ದಾರೆ…

Read More

ಮಡಿಕೇರಿ ಸೆ.5 NEWS DESK : ಕೇಂದ್ರ ಸರಕಾರ ಇತ್ತೀಚೆಗೆ ಘೋಷಿಸಿರುವ ಹೊಸ ಜಿಎಸ್‍ಟಿ ನೀತಿ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಶೇ.12 ಮತ್ತು ಶೇ.28 ರ ತೆರಿಗೆ ಸ್ಲ್ಯಾಬ್ ಗಳನ್ನು ತೆಗೆದು ಹಾಕಿ ಶೇ.5 ಮತ್ತು ಶೇ.18 ರ ಸ್ಲ್ಯಾಬ್ ನ್ನು ಮಾತ್ರ ಉಳಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ನಾಲ್ಕು ಹಂತದ ಜಿಎಸ್‍ಟಿ ನೀತಿಯನ್ನು ಕಡಿತಗೊಳಿಸಿ ಎರಡಕ್ಕೆ ಸೀಮಿತಗೊಳಿಸುವ ಮೂಲಕ ಜನಪರ ಕಾಳಜಿ ತೋರಿದೆ. ಈ ಕ್ರಮದಿಂದ ಅನೇಕ ವಸ್ತುಗಳ ಬೆಲೆ ಕಡಿಮೆಯಾಗಲಿದ್ದು, ಬಡವರ ಹಾಗೂ ಜನಸಾಮಾನ್ಯರ ಆರ್ಥಿಕ ಬಲ ಸುಧಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆರೋಗ್ಯಕ್ಕೆ ಪೂರಕವಾದ ಅನೇಕ ಜೀವನಾವಶ್ಯಕ ಮತ್ತು ಜೀವರಕ್ಷಕ ಸಂಬಂಧಿತ 33 ಔಷಧಿಗಳು, ವೈಯುಕ್ತಿಕ ವಿಮೆ, ಕ್ಯಾನ್ಸರ್ ಚಿಕಿತ್ಸೆ ಹಾಗೂ ಸ್ಟೇಷನರಿಗಳು ಶೂನ್ಯ ತೆರಿಗೆ ವ್ಯಾಪ್ತಿಗೆ ಬರಲಿದೆ. ರಸಗೊಬ್ಬರ, ಕೃಷಿ…

Read More

ಸುಂಟಿಕೊಪ್ಪ ಸೆ.5 NEWS DESK : ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಗಳನ್ನು ರಚಿಸಲಾಗಿದ್ದು, ಸಂಘಟನೆಯು ಕಾರ್ಯನ್ಮೋಖವಾಗುವುದರಿಂದ ವಿದ್ಯಾರ್ಥಿಗಳ ಪ್ರತಿಭೆಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಸ್ವಾಗತ 2025-26ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಮತ್ತು ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿರುವ ಸುಪ್ತಪ್ರತಿಭೆಯನ್ನು ಹೊರತರಲು ಮತ್ತು ಅನಾವರಣಗೊಳಿಸಲು ಸೂಕ್ತ ವೇದಿಕೆಯನ್ನು ಕಾರ್ಯಕ್ರಮಗಳು ಒದಗಿಸುತ್ತವೆ ಎಂದು ಅವರು ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಸೈಮನ್ ಡಿಕುನ್ಹ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಏಕಾಗ್ರಚಿತ್ತದಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡು ನಿರ್ದಿಷ್ಠ ಗುರಿಯೊಂದಿಗೆ ಮುನ್ನಡೆಯುತ್ತಾ ಸಾಧಕರಾಗಿ ಹೊರಹೊಮ್ಮಬೇಕೆಂದು ಹೇಳಿದರು. 2025-26ನೇ ಸಾಲಿನ ವಿದ್ಯಾರ್ಥಿಗಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಪದಾಧಿಕಾರಿಗಳಿಗೆ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸುನೀತಾ…

Read More

ಮಡಿಕೇರಿ ಸೆ.5 NEWS DESK : ಕೊಡಗು ಪತ್ರಕರ್ತರ ಸಂಘ, ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಸೆ.12 ರಂದು ಪತ್ರಕರ್ತರು, ಪತ್ರಿಕಾ ವಿತರಕರು ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ನಗರದ ಕಾವೇರಿ ಹಾಲ್ ನಲ್ಲಿ ಬೆಳಗ್ಗೆ 9 ಗಂಟೆಯಿಂದ ನಡೆಯಲಿರುವ ಶಿಬಿರವನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ. ಶಿಬಿರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೇತ್ರ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು, ಇ ಎನ್ ಟಿ ತಜ್ಞರು, ಶ್ವಾಸಕೋಶ ತಜ್ಞರು, ದಂತ ವೈದ್ಯಕೀಯ, ಶಸ್ತ್ರ ಚಿಕಿತ್ಸಕರು, ಮಕ್ಕಳ ತಜ್ಞರು, ಸ್ತ್ರೀ ರೋಗ ತಜ್ಞರು, ಶ್ರವಣ ಆರೋಗ್ಯ ತಜ್ಞರು, ಮಾನಸಿಕ ಆರೋಗ್ಯ ತಜ್ಞರು ಸೇರಿದಂತೆ 15 ವಿಭಾಗಗಳ ನುರಿತ ತಜ್ಞರು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಸರ್ಕಾರದ ಯೋಜನೆಗಳ ಬಗ್ಗೆ ಆಯುಷ್ಮಾನ್ ಭಾರತ್ ಯೋಜನಾಧಿಕಾರಿ ಪಾಲ್ಗೊಂಡು ಮಾಹಿತಿ ನೀಡಲಿದ್ದಾರೆ. ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗದವರು, ಪತ್ರಿಕಾ ವಿತರಕರು ಹಾಗೂ ಕುಟುಂಬಸ್ಥರು ಶಿಬಿರದ ಸದುಪಯೋಗ…

Read More

ಮಡಿಕೇರಿ ಸೆ.5 NEWS DESK : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಸೆ.30 ರೊಳಗೆ ಅರ್ಜಿ ಸಲ್ಲಿಸುವಂತೆ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯಕುಮಾರ್ ತಿಳಿಸಿದ್ದಾರೆ. 10ನೇ ತರಗತಿ ಕನ್ನಡ ಮಾಧ್ಯಮದಲ್ಲಿ ಶೇ.85 ಕ್ಕಿಂತ ಮೇಲ್ಪಟ್ಟು ಹಾಗೂ ಆಂಗ್ಲ ಮಾಧ್ಯಮದಲ್ಲಿ ಶೇ.90 ಕ್ಕಿಂತ ಮೇಲ್ಪಟ್ಟು ಅಂಕ ಪಡೆದಿರಬೇಕು. ಪಿಯುಸಿ ಗ್ರಾಮೀಣ ವಿಭಾಗದಲ್ಲಿ ಶೇ.90 ಕ್ಕಿಂತ ಮೇಲ್ಪಟ್ಟು ಮತ್ತು ನಗರ ವಿಭಾಗದಲ್ಲಿ ಶೇ.95ಕ್ಕಿಂತ ಮೇಲ್ಪಟ್ಟು ಅಂಕ ಪಡೆದಿರಬೇಕು. ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಮತ್ತು ಸಿ.ಇ.ಟಿ ಯಲ್ಲಿ 1000 ರ್ಯಾಂಕ್ ಒಳಗೆ ಹಾಗೂ ಎನ್.ಇ.ಇ.ಟಿ (ನೀಟ್) ಯಲ್ಲಿ ರಾಷ್ಟ್ರಮಟ್ಟದಲ್ಲಿ 5000 ದೊಳಗೆ ರ್ಯಾಂಕ್ ಪಡೆದುಕೊಂಡಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುವುದು ಎಂದು ಅವರು ಪತ್ರಿಕಾ ಪ್ರಟಕಣೆ ನೀಡಿದ್ದಾರೆ. ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು…

Read More

ಮಡಿಕೇರಿ ಸೆ.5 NEWS DESK : ವಿದ್ಯಾರ್ಥಿಗಳು ಭವಿಷ್ಯದ ಸೇನಾ ಆಧಿಕಾರಿಗಳಾಗಿ ಕೇವಲ ಶಸ್ತ್ರಾಸ್ತ್ರಗಳನ್ನು ಮಾತ್ರವಲ್ಲ, ಮೌಲ್ಯ, ದೃಷ್ಟಿಕೋನವನ್ನು ಹಾಗೂ ಅಂತರಂಗದಲ್ಲಿ ನೈತಿಕತೆಯನ್ನು ಕೂಡ ಹೊತ್ತು ಸಾಗಬೇಕು ಎಂದು ಸ್ಥಳೀಯ ಆಡಳಿತ ಮಂಡಳಿಯ ಅಧ್ಯಕ್ಷ ಏರ್ ವೈಸ್ ಮಾರ್ಷಲ್ ಬಿಜೊ ಜಾನ್ ಮೆಮನ್ ಕಿವಿ ಮಾತು ಹೇಳಿದರು. ಕೊಡಗು ಸೈನಿಕ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ 29ನೇ ಸ್ಥಳೀಯ ಆಡಳಿತ ಮಂಡಳಿ (ಎಲ್.ಬಿ.ಎ) ಸಭೆಗೆ ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಾಲೆಯ ಯುದ್ಧವೀರರ ಸ್ಮಾರಕದ ಆವರಣದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಧ್ವಜ ಸ್ತಂಭವನ್ನು ಉದ್ಘಾಟಿಸಿ ಮಾತನಾಡಿದರು. ಸೈನಿಕ ಶಾಲೆ ಕೊಡಗು ಹದಿನೇಳು ವರ್ಷಗಳ ಹಿಂದೆ ಭವಿಷ್ಯದ ಸೈನಿಕ ಅಧಿಕಾರಿಗಳನ್ನು ನಿರ್ಮಿಸುವ ಮಹೋನ್ನತ ದೃಷ್ಟಿಕೋನದೊಂದಿಗೆ ಸ್ಥಾಪಿತವಾಗಿದೆ. ಇಂದು ತನ್ನ ಸಾಮಥ್ರ್ಯ ಮತ್ತು ಗೌರವವನ್ನು ವೃದ್ಧಿಸಿಕೊಂಡು ಗಣನೀಯ ಬೆಳವಣಿಗೆಯನ್ನು ಕಂಡಿದೆ. ಕಾಲದ ಪರೀಕ್ಷೆಗೆ ತಕ್ಕಂತೆ ದೃಢವಾಗಿ ನಿಂತು, ಕಾಲಾನುಕ್ರಮವಾಗಿ ಆಧುನಿಕ ಶಿಕ್ಷಣ ಹಾಗೂ ತರಬೇತಿಯ ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ, ದೈಹಿಕ,…

Read More

ಮಡಿಕೇರಿ ಸೆ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕಿನ ಮೊಣಕಾಲ್ಮುರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ಆರ್.ಶಾಲಿನಿ, ಅರೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಡಿ.ಮೀನಾಕ್ಷಿ, ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಎಂ.ವನಜ, ಸೋಮವಾರಪೇಟೆ ತಾಲ್ಲೂಕಿನ ಬಡುಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ವಿ.ಜಾನ್ಸಿ, ಕೂಡಿಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಎಸ್.ಎ.ಯೋಗೇಶ್, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ) ಮುಖ್ಯ ಶಿಕ್ಷಕರಾದ ಅಬ್ದುಲ್ ರಬ್ ಎಂ.ಎಸ್., ವಿರಾಜಪೇಟೆ ತಾಲ್ಲೂಕಿನ ಎಮ್ಮೆಗುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಕೆ.ಮಾಚಮ್ಮ, ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಸುಷಾ…

Read More

ಮಡಿಕೇರಿ ಸೆ.5 NEWS DESK : ಅಮ್ಮತಿಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ತಂಡ ರನ್ನರ್ಸ್ ಟ್ರೋಫಿ ತಮ್ಮದಾಗಿಸಿಕೊಂಡಿದೆ. ತಂಡದ ವಿದ್ಯಾರ್ಥಿಗಳು ಅಮ್ಮಂಡ ಗಿಯಾನ ಎ, ಮೇವಂಡ ಯಾನಿ ಬೆಳ್ಳಿಯಪ್ಪ, ಕಂಜಿತಂಡ ಲಿವ್ಯ, ಪಾಲೇಯಂಡ ಶಾನ್ವಿ ಪೊನ್ನಮ್ಮ ಎಸ್, ನಡುಮನೆ ಮೋಕ್ಷಿತ ಎಸ್, ಮಾಲೇಟ್ಟಿರ ಚಾಲ್ಸಿ, ಹರ್ಷಿನಿ ವಿ.ಯಾದವ್, ದಿಯಾ ಫಾತಿಮಾ, ಫಾತಿಮತ್ ಶಿಫಾ, ನಮ್ಮೆರ ವನ್ಸಿಕ ಮುತ್ತಮ್ಮ ಕಾಲೆಂಗಡ ದೃಶ್ಯ ಕಾವೇರಮ್ಮ, ನಿಯತಿ ರಾಜ್ ಪುರೋಹಿತ್ ಭಾಗವಹಿಸಿದ್ದರು. ತಂಡಕ್ಕೆ ದೈಹಿಕ ಶಿಕ್ಷಕರುಗಳಾದ ಮೋನಿಕ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಗೋಣಿಕೊಪ್ಪ ಸೆ.5 NEWS DESK : ಅಮ್ಮಕೊಡವ ಸಮಾಜದ ತುರ್ತು ಸಭೆಯು ಸೆ.12 ರಂದು ನಡೆಯಲಿದೆ ಎಂದು ಅಧ್ಯಕ್ಷ ಬಾನಂಡ ಪ್ರಥ್ಯು ತಿಳಿಸಿದ್ದರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಪೂರ್ವಾಹ್ನ 11 ಗಂಟೆಗೆ ಕಾವೇರಿ ಹಿಲ್ಸ್ ಬಡಾವಣೆಯ ಅಮ್ಮಕೊಡವ ಸಭಾಂಗಣದಲ್ಲಿ ತುರ್ತು ಮಹಾಸಭೆಯನ್ನು ಕರೆಯಲಾಗಿದ್ದು, ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ.

Read More

ಪುತ್ತೂರು ಸೆ.5 NEWS DESK : ಇತಿಹಾಸ ಎನ್ನುವುದು ಸತ್ತವರ ಮೇಲೆ ಕಟ್ಟಿದ ಗೋರಿಯಲ್ಲ ಬದಲಾಗಿ ಅದೊಂದು ತತ್ವಜ್ಞಾನ. ನಾವು ಇತಿಹಾಸ ಕಲಿಯುವ ಮಾದರಿಯೇ ಸರಿಯಾಗಿಲ್ಲ. ಮೊದಲಿಗೆ ನಾನು, ನನ್ನ ಮನೆ, ನನ್ನ ಪರಿಸರ, ರಾಜ್ಯ, ದೇಶ ಹೀಗೆ ನಮ್ಮ ಸ್ಥಳೀಯ ಇತಿಹಾಸವನ್ನು ಕಲಿಯಬೇಕೇ ಹೊರತು ನಮಗೆ ಅಗತ್ಯವಿಲ್ಲದ ವಿಶ್ವದ ಇತಿಹಾಸವನ್ನು ಕಲಿಯುವುದಲ್ಲ ಎಂದು ಮಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಕನ್ನಡ ವಿಭಾಗ ಮುಖ್ಯಸ್ಥ ಡಾ.ಅರುಣ್ ಉಳ್ಳಾಲ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ವಿದ್ಯಾಭಾರತಿ ಉಚ್ಛಶಿಕ್ಷಾ ಸಂಸ್ಥಾನ ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ ನಡೆದ ರಾಣಿ ಅಬ್ಬಕ್ಕ-500 ವರ್ಷಗಳ ವೀರಸ್ಮರಣೆ ಕಾರ್ಯಕ್ರಮದಲ್ಲಿ ಮಾತಾಡಿದರು. ಅಬ್ಬಕ್ಕ ರಾಣಿ ಹೌದು, ಆದರೆ ನಾವಂದುಕೊಂಡಂತೆ ಆಕೆ ಪಟ್ಟದಲ್ಲಿ ಕುಳಿತು ರಾಜ್ಯಭಾರವನ್ನು ಮಾಡುತ್ತಾ ಅದರ ಸವಿಯುಂಡವಳಲ್ಲ ಬದಲಾಗಿ ಆಕೆ ಅತ್ಯಂತ ಸರಳ ವ್ಯಕ್ತಿತ್ವದ ಜೀವನಕ್ರಮವನ್ನು ಹೊಂದಿದ್ದಳು. ಅವಳು ದೇಶದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾತಿ. ಇವಳ ಕಾಲದಲ್ಲಿ ಹೆಚ್ಚಿನ ಕ್ರಾಂತಿಕಾರೀ ಬೆಳವಣಿಗೆಗಳಾದವು. ಇದರಿಂದಾಗಿ…

Read More