*ಹಠಾತ್ ಮೇಘಸ್ಫೋಟದಿಂದ ಗ್ರಾಮಕ್ಕೆ ಗ್ರಾಮವೇ ನಾಶವಾದ ಘಟನೆ ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಖೀರ್ ಗಂಗಾ ನದಿ ಭಾಗದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ನಡೆದ ಈ ಘಟನೆಯಿಂದ 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ನೈಸರ್ಗಿಕ ಮೇಘಸ್ಫೋಟ ಧರಾಲಿ ಮಾರುಕಟ್ಟೆಗೆ ಭಾರಿ ಹಾನಿಯನ್ನುಂಟು ಮಾಡಿದೆ. ಬಲವಾದ ಪ್ರವಾಹದಿಂದಾಗಿ, ಅಂಗಡಿಗಳು, ವಾಹನಗಳು ಮತ್ತು ಮನೆಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರವಾಹದ ಸ್ಥಳವು ತುಂಬಾ ಭಯಾನಕವಾಗಿದ್ದು, ನೀರಿನ ಹರಿವು ಎಷ್ಟು ವೇಗವಾಗಿತ್ತೆಂದರೆ ದೊಡ್ಡ ಕಲ್ಲುಗಳು ಮತ್ತು ಅವಶೇಷಗಳು ಸಹ ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿವೆ. ಈ ಪ್ರವಾಹದಲ್ಲಿ ಅನೇಕರು ಕೊಚ್ಚಿ ಹೋಗಿದ್ದಾರೆ. ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ಭಾರೀ ಹಾನಿ ದುಃಖಕರ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಜನರ ರಕ್ಷಣಾ ಕಾರ್ಯ ಮುಂದುವರೆದಿದೆ.
ಲೇಖಕ: admin
*ರಸ್ತೆಯ ಮಧ್ಯ ಭಾಗ ಕುಸಿದು ಬಿದ್ದು ಸುಮಾರು 10 ಸಾವಿರ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕರ್ ಸಿಲುಕಿಕೊಂಡ ಘಟನೆ ಹೈದರಾಬಾದ್ನ ಬಂಜಾರ ಹಿಲ್ಸ್ ಪ್ರದೇಶದ ಮಹೇಶ್ವರಿ ಚೇಂಬರ್ಸ್ ಬಳಿ ನಡೆದಿದೆ.*
ಸೋಮವಾರಪೇಟೆ NEWS DESK ಆ.5 : ಇಂದು ಸಂಜೆ ಸುರಿದ ದಿಢೀರ್ ಮಳೆಗೆ ಸೋಮವಾರಪೇಟೆಯ ಅಲೆಕಟ್ಟೆ ರಸ್ತೆ ವ್ಯಾಪ್ತಿಯ ಮನೆಗಳು ಜಲಾವೃತಗೊಂಡು ನಷ್ಟ ಸಂಭವಿಸಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡ ಮನೆಯವರ ನೆರವಿಗೆ ಧಾವಿಸಿ ನೀರು ತೆರವುಗೊಳಿಸಿತು. ಪಟ್ಟಣದ ಅಲೆಕಟ್ಟೆ ರಸ್ತೆಯ ಕೊಲ್ಲಿ ಮೂಲಕ ನೀರು ನುಗ್ಗಿ ನಿಂಗರಾಜು ಎಂಬುವವರ ಮನೆ ಜಲಾವೃತಗೊಂಡು ಹಲವು ವಸ್ತುಗಳು ಹಾನಿಗೊಂಡವು. ವಿಷಯ ಅರಿತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ 10ಕ್ಕೂ ಹೆಚ್ಚು ಮಂದಿಯ ತಂಡ ಸ್ಥಳಕ್ಕಾಗಮಿಸಿ ನೀರು ಹೊರ ಹಾಕಿ ಮನೆ ಶುಚಿಗೊಳಿಸಲು ಶ್ರಮಿಸಿತು. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ NEWS DESK ಆ.5 : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೆಎಸ್ಆರ್ಟಿಸಿ ನೌಕರರು ರಾಜ್ಯವ್ಯಾಪಿ ನಡೆಸುತ್ತಿರುವ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲೂ ಬೆಂಬಲ ವ್ಯಕ್ತವಾಯಿತು. ಇಂದು ಬೆಳಿಗ್ಗೆ 8 ಗಂಟೆಯ ನಂತರ ಸಂಚಾರವನ್ನು ಸ್ಥಗಿತಗೊಳಿಸಿದ ಬಸ್ ಗಳು ಬಸ್ ನಿಲ್ದಾಣಗಳಲ್ಲೇ ಸಾಲುಗಟ್ಟಿ ನಿಂತವು. ಬಸ್ ಮುಷ್ಕರದ ಕುರಿತು ಮೊದಲೇ ಮಾಹಿತಿ ಇದ್ದ ಕಾರಣ ಬಸ್ ನಿಲ್ದಾಣಗಳಲ್ಲಿ ವಿರಳ ಸಂಖ್ಯೆಯ ಪ್ರಯಾಣಿಕರಿದ್ದರು. ಮಾಹಿತಿ ಇಲ್ಲದ ಪ್ರಯಾಣಿಕರು ವಿವಿಧ ಊರಿಗಳಿಗೆ ತೆರಳಲು ಕಾದು ಕುಳಿತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪುತ್ತೂರು ಡಿಪೋದ ಮಡಿಕೇರಿ ಘಟಕದ ಮೂಲಕ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಗೆ ಒಟ್ಟು 130 ಬಸ್ ಮಾರ್ಗಗಳಿದ್ದು, ಈ ಪೈಕಿ 64 ಮಾರ್ಗಗಳು ಮಡಿಕೇರಿ ಘಟಕದಿಂದ ನಿರ್ವಹಿಸಲಾಗುತ್ತಿದೆ. ಬಸ್ ಸೇವೆ ಬಂದ್ ಹಿನ್ನೆಲೆಯಲ್ಲಿ ಬಹುತೇಕ ಬಸ್ಗಳ ಸಂಚಾರ ಸ್ಥಗಿತವಾಗಿತ್ತು. ಹೊರ ಭಾಗಗಳಿಂದ ನಿಲ್ದಾಣಕ್ಕೆ ಆಗಮಿಸಿದ ಬಸ್ಗಳು ಸಂಚಾರಿ ನಿಯಂತ್ರಕರಲ್ಲಿ ನೋಂದಾಯಿಸಿಕೊಂಡ ನಂತರ ಇಲ್ಲಿಯೇ ಉಳಿದುಕೊಂಡವು. ಮುಷ್ಕರಕ್ಕೆ ಚಾಲಕರು ಹಾಗೂ ನಿರ್ವಾಹಕರು ಕೈ ಜೋಡಿಸಿದರು. ಖಾಸಗಿ ಮತ್ತು…
ಮಡಿಕೇರಿ ಆ.5 NEWS DESK : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೊಡಗಿನ ಏಳು ಕಡೆಗಳಲ್ಲಿ ಆ.8 ರಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ರಂಜನ್ ಗೌಡ (ಬೋಜೇಗೌಡ) ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಏಳು ಕಡೆಗಳಲ್ಲಿ ಅಖಂಡ ಭಾರತದ ಸಂಕಲ್ಪ ದಿನ ಕಾರ್ಯಕ್ರಮ, ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ ನಡೆಯಲಿದೆ ಎಂದರು. ಆ.8 ರಂದು ಸಂಜೆ 6 ಗಂಟೆಗೆ ಮಡಿಕೇರಿ ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಪ್ರಜೆ ಸಲ್ಲಿಸುವುದರ ಮೂಲಕ ಪಂಜಿನ ಮೆರವಣಿಗೆ ಆರಂಭಗೊಂಡು ಇಂದಿರಾ ಗಾಂಧಿ ವೃತ್ತ, ಅಂಚೆ ಕಚೇರಿ, ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಹಾದು ಹೋಗಿ ಕೊಡವ ಸಮಾಜ ಸಭಾಂಗಣದಲ್ಲಿ ಸಂಜೆ 7.30 ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿದೆ. ರಾತ್ರಿ 9.30 ಗಂಟೆಗೆ 2 ಕಿ.ಮೀ. ಮುಕ್ತಾಯ…
ಸುಂಟಿಕೊಪ್ಪ ಆ.5 NEWS DESK : ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಆರಂಭಿಸಿರುವ ಮುಷ್ಕರ ಜನಜೀವನದ ಮೇಲೆ ಭಾರಿ ಪರಿಣಾಮ ಬೀರಿದ್ದು, ಸೂಕ್ತ ಸಂಚಾರ ವ್ಯವಸ್ಥೆ ಇಲ್ಲದೇ ಸಾರ್ವಜನಿಕರೂ ಪರದಾಡುವಂತಾಯಿತು. ಸುಂಟಿಕೊಪ್ಪದಲ್ಲಿ ಸರ್ಕಾರಿ ಬಸ್ಸನ್ನೇ ಅವಲಂಭಿತರಾಗಿದ್ದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಕಛೇರಿಗೆ ತೆರಳುವ ಸಿಬ್ಬಂದಿಗಳು ಹಾಗೂ ಜನಸಾಮಾನ್ಯರು ಸರ್ಕಾರಿ ಬಸ್ ಪ್ರಯಾಣಿಕರು ಬಸ್ ಸಿಗದೆ ಸಮಸ್ಯೆ ಎದುರಿಸಿದ್ದರು. ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡ ಹಿನ್ನಲೆಯಲ್ಲಿ ಮಡಿಕೇರಿ-ಕುಶಾಲನಗರ ಭಾಗಗಳಿಗೆ ತೆರಳುವ ಪ್ರಯಾಣಿಕರು ಖಾಸಗಿ ವಾಹನಗಳಲ್ಲಿ ತೆರಳುವಂತಾಯಿತು. ಮುಷ್ಕರವು ಮುಂದುವರಿದಲ್ಲಿ ಸರ್ಕಾರಿ ಬಸ್ಸನ್ನೇ ಅವಲಂಭಿತರಾಗಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಕಛೇರಿ ಸಿಬ್ಬಂದಿಗಳು ಹಾಗೂ ಜನಸಾಮಾನ್ಯರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.
ಮಡಿಕೇರಿ ಆ.5 NEWS DESK : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಗೌ.ಮುಖ್ಯ ನ್ಯಾಯಮೂರ್ತಿಗಳು ಗೌ. ಸರ್ವೋಚ್ಛ ನ್ಯಾಯಾಲಯ ಅವರು ದೇಶಾದಾದ್ಯಂತ ಅ.7 ರವರೆಗೆ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅದರಂತೆ ಜಿಲ್ಲೆಯ ನ್ಯಾಯಾಲಯದಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು, ಕಕ್ಷಿದಾರರು ಈ 90 ದಿನಗಳ ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ. ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 90 ದಿನಗಳ ಡ್ರೈವ್ನ್ನು ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟಾರು ಅಪಘಾತ ನ್ಯಾಯಾಧೀಕರಣ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ, ಸೇವಾ…
ಕುಶಾಲನಗರ, ಆ.5 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ 2002-03, 2005-06 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಶಾಲೆಯ ಹಳೆಯ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಅಂದಿನಿಂದ ಸೇವೆ ಸಲ್ಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ವಿದ್ಯಾರ್ಥಿ ಜೀವನದ ನೂರಾರು ನೆನಪುಗಳು ಕಣ್ಣು ಮುಂದೆ ಬರುವಂತೆ ಮಾಡಿದೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ತಮ್ಮ ಶಾಲೆಯನ್ನು ಮರೆಯದೆ, ತಮ್ಮಿಂದಾಗುವ ಸಹಕಾರವನ್ನು ಶಾಲೆಗಳ ಅಭಿವೃದ್ಧಿಗೆ ನೀಡುವುದು ಉತ್ತಮ ಬೆಳವಣಿಗೆ ಎಂದರು. ಗುರುವಿನ ಶ್ರೇಷ್ಠತೆ ವಿದ್ಯಾರ್ಥಿ ಜೀವನದಲ್ಲಿ ತಿಳಿಯುವುದಕ್ಕಿಂತ ವೃತ್ತಿ ಜೀವನದ ಪಯಣದಲ್ಲಿ ತಿಳಿಯುವುದು ಹೆಚ್ಚು. ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಶಾಲೆಯ ಹಳೆಯ ನೆನಪುಗಳು, ಕಲಿಕೆಯ ಪರಿಶ್ರಮ, ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ’ ಎಂದರು. ಕಲಿಸಿದ ಶಾಲೆ ಮತ್ತು ಕಲಿಸಿದ ಗುರುವಿಗೆ ನಮಿಸುವ ಹಳೇ ವಿದ್ಯಾರ್ಥಿಗಳ…
ಮಡಿಕೇರಿ ಆ.5 NEWS DESK : ನಗರದ ವಿದ್ಯುತ್ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್ನಲ್ಲಿ ಹಾಗೂ ಎಫ್5 ಜಿ.ಟಿ ರಸ್ತೆ ಫೀಡರ್ನಲ್ಲಿ ಆ.6 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳಬೇಕಿದ್ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿಬೀದಿ, ಪೆನ್ಸನ್ ಲೈನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆಎಸ್ಆರ್ಟಿಸಿ ಬಸ್ ಸ್ಟಾಂಡ್, ಹಳೆ ಖಾಸಗಿ ಬಸ್ ಸ್ಟಾಂಡ್, ಜಯನಗರ, ಅಶೋಕಪುರ, ಜಲಾಶ್ರಯ ಬಡಾವಣೆ, ಸರಕಾರಿ ಆಸ್ಪತ್ರೆ, ಮಂಗಳದೇವಿನಗರ, ಅರಣ್ಯಭವನ, ಚೈನ್ಗೇಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಕೋರಿದ್ದಾರೆ.
ಮಡಿಕೇರಿ ಆ.5 NEWS DESK : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ (ಕೇರ್ಟೇಕರ್) ಹುದ್ದೆಗೆ (ಹೊರಗುತ್ತಿಗೆ ಆಧಾರದ ಮೇಲೆ) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಅಥವಾ 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.






