ಲೇಖಕ: admin

ಮಡಿಕೇರಿ NEWS DESK ಜು.8 : ಕಾವೇರಿ ನಾಡು ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿ ನೀರಿನ ಮಟ್ಟ ಏರಿಕೆಯಾಗುತ್ತಲೇ ಇದೆ. ಭಾಗಮಂಡಲ ಮತ್ತು ಪೊನ್ನಂಪೇಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ತಲಾ 7 ಇಂಚು ಮಳೆ ದಾಖಲಾಗಿದೆ. ವಿರಾಜಪೇಟೆ ತಾಲ್ಲೂಕು ಅಮ್ಮತಿ ಹೋಬಳಿ ಕರಡಿಗೋಡು ಕಾವೇರಿ ನದಿ ಪಾತ್ರದಲ್ಲಿರುವ ಹೊಳೆಕೆರೆಯಲ್ಲಿ ಕರಡಿಗೋಡು ಚಿಕ್ಕನಳ್ಳಿ ಸಂಪರ್ಕ ರಸ್ತೆ ಪ್ರವಾಹದಿಂದ ಕಡಿತ ಗೊಂಡಿದೆ. ಅಧಿಕಾರಿಗಳು, ಕಂದಾಯ ಪರಿವೀಕ್ಷಕರು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ರಸ್ತೆಯಲ್ಲಿ ಬ್ಯಾರಿಕೆಡ್ ಅಳವಡಿಸಿ ಸಂಚಾರ ನಿಷೇಧಿಸಿದ್ದಾರೆ. ವಿರಾಜಪೇಟೆ ಹೋಬಳಿ ಅರಮೇರಿ-ಚಾಮಿಯಾಲ ಸಂಪರ್ಕ ಸೇತುವೆಯು ಸಂಪೂರ್ಣ ಜಲಾವೃತವಾಗಿದ್ದು, ಇಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಹಾಕಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮೈಕೊರೆಯುವ ಚಳಿಯ ವಾತಾವರಣವಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 60.45 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 19.29 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 631.54 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ…

Read More

ಮಡಿಕೇರಿ ಜು.8 NEWS DESK : ಪ್ರಸಕ್ತ (2026-27) ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ರೈತ, ರೈತ ಮಹಿಳೆಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ “ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2026-27ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಭಾಗವಹಿಸಲು ಇಚ್ಚಿಸುವ ಜಿಲ್ಲೆಯ ರೈತರುಗಳು ಅರ್ಜಿ ಸಲ್ಲಿಸಬಹುದಾಗಿದೆ. ಭಾಗವಹಿಸುವ ರೈತರ ಸಂಶೋಧನೆ, ಸಾಧನೆಗಳು ಮೂಲ ಸ್ವರೂಪದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಈ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಬಯಸುವ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್‍ಐಡಿ (ಫ್ರೂಟ್ಸ್ ಐಡಿ) ಸಂಖ್ಯೆಯನ್ನು ಬಳಸಿಕೊಂಡು ಕೆ-ಕಿಸಾನ್ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ…

Read More

ಕುಶಾಲನಗರ NEWS DESK ಜು.8 : ಕುಶಾಲನಗರದ ಪುರಸಭೆ ವತಿಯಿಂದ ಯುಜಿಡಿ ಸಂಪರ್ಕಕ್ಕೆ ದರ ನಿಗದಿ ಮಾಡಿರುವುದು ಅವೈಜ್ಞಾನಿಕವಾಗಿದೆ. ತಕ್ಷಣ ಅದನ್ನ ವಾಪಸ್ ಪಡೆಯಲು ಕುಶಾಲನಗರ ನಿವಾಸಿಗಳ ಒತ್ತಾಯ. ಕುಶಾಲನಗರದ ಕನ್ನಿಕಾ ಕನ್ವೇಷನ್ ಸೆಂಟರ್ ನಲ್ಲಿ ಬುಧವಾರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೇಲಿನ ತೀರ್ಮಾನವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ. ಸರ್ಕಾರದಿಂದ ಯುಜಿಡಿ ಕಾಮಗಾರಿಗಾಗಿ ಕೋಟ್ಯಾಂತರ ರೂಪಾಯಿ ಹಣ ಬಂದಿದೆ. ಸರ್ಕಾರಕ್ಕೆ ಜನರು ಈಗಾಗಲೇ ಹಲವು ರೀತಿಯ ತೆರಿಗೆ ಕಟ್ಟಿ ಸಾಕಾಗಿರುವ ಈ ಸಂದರ್ಭದಲ್ಲಿ ಹೊಸ ತರಹದ ತೆರಿಗೆ ಕಟ್ಟಬೇಕೆನ್ನುವುದು ಗಾಯದ ಮೇಲೆ ಬರೆ ಎಳೆದಂತೆ ಎಂಬಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಈಗ ನಡೆದಿರುವ ಯುಜಿಡಿ ಕಾಮಗಾರಿ ಕಳಪೆಯಾಗಿದೆ. ಹಲವು ಬಡಾವಣೆಗಳಲ್ಲಿ ನಿರ್ಮಾಣವಾಗಿರುವ ಮ್ಯಾನ್ ಹೋಲ್ ಗಳು ಈಗಾಗಲೇ ಹಾಳಾಗಿದೆ. ಅದಕ್ಕೆ ಅಳವಡಿಸಿರುವ ಪೈಪ್ ಕೂಡ ಚಿಕ್ಕದಾಗಿದೆ, ಅದರಲ್ಲಿ ಸರಾಗವಾಗಿ ನೀರು ಹರಿಯಲು ಸಾಧ್ಯವಿಲ್ಲವೆಂದು ಹಲವರು ಆತಂಕ ವ್ಯಕ್ತಪಡಿಸಿದರು. ಚೇಂಬರ್ ಆಫ್ ಕಾಮರ್ಸ್ ನ ಜಿಲ್ಲಾಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಅವರು…

Read More

ಮಡಿಕೇರಿ ಜು.8 NEWS DESK : ಮಡಿಕೇರಿ ನಗರದಲ್ಲಿ ಸುಗಮ ವಾಹನ ಸಂಚಾರ ಮತ್ತು ಸಾರ್ವಜನಿಕರ ಹಾಗೂ ಸಾರ್ವಜನಿಕ ಆಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಜು.9 ರಿಂದ ಜುಲೈ, 12 ರವರೆಗೆ ಮುಂಜಾಗ್ರತಾ ಕ್ರಮವಾಗಿ ರಾಜಾಸೀಟು ಬಳಿ ವಾಹನ ನಿಲುಗಡೆ ಮತ್ತು ರಾಜಾಸೀಟ್‍ಗೆ ಸಾರ್ವಜನಿಕರ/ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.  ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮಡಿಕೇರಿ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಬಳಿ ಭೂ ಕುಸಿತ ಉಂಟಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಹಾಲಿ ಖಾಸಗಿ ಮತ್ತು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಡೆಯಿಂದ ಹೊರಹೋಗುವ ಎಲ್ಲಾ ವಾಹನಗಳು ರಾಜಾಸೀಟು ರಸ್ತೆಯನ್ನು ಬಳಸಿ ಸಂಚರಿಸುತ್ತಿರುವುದಾಗಿದೆ. ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಕಾರಣ ಮತ್ತು ರಾಜಾಸೀಟು ಬಳಿ ಸಾರ್ವಜನಿಕರು ಮತ್ತು ಪ್ರವಾಸಿಗರ ವಾಹನ ನಿಲುಗಡೆಗೊಳಿಸುತ್ತಿರುವ ಕಾರಣ…

Read More

ಮಡಿಕೇರಿ ಜು.8 NEWS DESK : ನೆಲ್ಲಿಹುದಿಕೇರಿ ಕೆಪಿಎಸ್ ಶಾಲೆಗೆ ಉದ್ಯಮಿ ಸೆಬಾಸ್ಟಿನ್ (ದೇವಸಿ) ಅವರು ಬಿಸಿನೀರಿನ ಬಾಯ್ಲರನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಎಸ್‍ಡಿಎಂಸಿ ಉಪಾಧ್ಯಕ್ಷರಾದ ಮುಸ್ತಫಾ, ಕೆಪಿಎಸ್ ನ ಉಪ ಪ್ರಾಂಶುಪಾಲರಾದ ಅನಿಲ್ ಕುಮಾರ್, ಪ್ರಾಥಮಿಕ ವಿಭಾಗದ ಶಿಕ್ಷಕ ವೃಂದದವರು ಹಾಜರಿದ್ದರು.

Read More

ಮಡಿಕೇರಿ ಜು.7 NEWS DESK : ಗೊಣಿಕೊಪ್ಪಲು ಕಾಫಿ ಮಂಡಳಿಯ ವತಿಯಿಂದ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಉತ್ತಮ ಕೃಷಿ ಪದ್ಧತಿಗಳ ಕುರಿತು ಮಾಹಿತಿ ನೀಡಿದರು.  ನಿಟ್ಟೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮ ಮಟ್ಟದ ಕಾಫಿ ಬೆಳೆಗಾರರ ಸಭೆಯನ್ನು ಹಿರಿಯ ಕಾಫಿ ಬೆಳೆಗಾರರಾದ ಮಾಚಂಗಡ ಡಿಕ್ಕಿ ಅಯ್ಯಣ್ಣ ಅವರು ಉದ್ಘಾಟಿಸಿದರು. ಬಾಳೆಲೆ ವಲಯ ಕಾಫಿ ಮಂಡಳಿಯ ಸಹಾಯಕ ವಿಸ್ತರಣಾಧಿಕಾರಿ ಗಳಾದ ಮಹಿಜಾ ಪ್ರಸ್ತುತ ಕಾಫಿ ಬೆಳೆಗಾರರಿಗೆ ಕಾಫಿ ಮಂಡಳಿಯ ವತಿಯಿಂದ ಲಭ್ಯವಿರುವ ವಿವಿಧ ಯೋಜನೆಗಳು, ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ, ಕೊಳೆ ರೋಗ, ಬೆರ್ರಿ ಬೋರ್ , ಸಾರ್ಟ್ ಹೋಲ್ ಬೋರ್ ರೋಗಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಕೃಷಿ ಪದ್ಧತಿಗಳು, ಕಾಫಿ ಬೆಳೆ ಅಭಿವೃದ್ಧಿಗೆ ಪೂರಕವಾದ ತೋಟ ನಿರ್ವಹಣಾ ವಿಧಾನಗಳ ಬಗ್ಗೆ ಬೆಳೆಗಾರರಿಗೆ ಮಾಹಿತಿ ನೀಡಿ ವೈಜ್ಞಾನಿಕ ಕಾಫಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಕಾಫಿ ಕೃಷಿಯಲ್ಲಿ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಬಹುದೆಂದು ತಿಳಿಸಿದರು.  ಕಾಫಿ ಮಂಡಳಿಯ ಮಣ್ಣು ವಿಜ್ಞಾನಿಗಳಾದ ಪ್ರಪೂಲ ಕುಮಾರಿ ಕಾಫಿ…

Read More

ಮಡಿಕೇರಿ ಜು.7 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮ್ ಕುಮಾರ್  ಆಯ್ಕೆಯಾಗಿದ್ದಾರೆ. ನಗರದ ಕೊಡಗು ಪತ್ರಿಕೆ ಭವನದ ಸಭಾಂಗಣದಲ್ಲಿ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎಂ. ಮೊಯ್ದಿನ್, ರೇವತಿ ರಮೇಶ್, ಗೌರವ ಕಾರ್ಯದರ್ಶಿಯಾಗಿ ಭಾರತಿ ರಮೇಶ್, ಕೋಶಾಧಿಕಾರಿಯಾಗಿ ಕಡ್ಲೇರ ತುಳಸಿ ಮೋಹನ್, ಸಹಕಾರ್ಯದರ್ಶಿಯಾಗಿ ಕೆ.ವಿ ಉಮೇಶ್ ಅವರನ್ನು ನೇಮಕ ಮಾಡಲಾಯಿತು. ನಿರ್ದೇಶಕರುಗಳಾಗಿ ಎಂ.ಪಿ.ಕೇಶವ ಕಾಮತ್, ಟಿ.ಪಿ.ರಮೇಶ್, ಅಂಬೇಕಲ್ ನವೀನ್, ಕೆ.ಟಿ.ಬೇಬಿ ಮ್ಯಾಥ್ಯು, ನೆರವಂಡ ಉಮೇಶ್, ಲೋಕನಾಥ್ ಅಮೆಚೂರ್, ಶ್ವೇತಾ ರವೀಂದ್ರ, ಬಿ.ಆರ್.ಜೋಯಪ್ಪ, ಸುನಿತಾ ಪಿ.ಪಿ ರವರನ್ನು ಆರಿಸಲಾಯಿತು. ಗೌರವ ಸಲಹೆಗಾರರಾಗಿ ಬಿ.ಎ ಶಂಷುದ್ದೀನ್, ಎಸ್.ಐ. ಮುನೀರ್ ಅಹ್ಮದ್, ಜಯಪ್ಪ ಹಾನಗಲ್ ಅವರನ್ನು ಆಯ್ಕೆ ಮಾಡಲಾಯಿತು. ಮಹಾಸಭೆಯಲ್ಲಿ ಕಳೆದ ವಾರ್ಷಿಕ ವರದಿಯನ್ನು ಗೌರವ ಕಾರ್ಯದರ್ಶಿ ಭಾರತಿ ರಮೇಶ್ ಮಂಡಿಸಿದರು. ವಾರ್ಷಿಕ ಲೆಕ್ಕಪತ್ರವನ್ನು ಕೋಶಾಧಿಕಾರಿ ಕಡ್ಲೇರ…

Read More

ವಿರಾಜಪೇಟೆ ಜು.7 NEWS DESK : ಹುಲಿ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಟೈಗರ್ ಔಟ್‍ಸೈಡ್ ಟೈಗರ್ ರಿಸವ್ರ್ಸ್ -ಟಿಒಟಿಆರ್ ಪೈಲಟ್ ಸ್ಕೀಮ್” ಅಡಿಯಲ್ಲಿ ವಿರಾಜಪೇಟೆ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಪ್ರವಾಸ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ 2025-26 ಯೋಜನೆಯಡಿ ಅರಣ್ಯ ಇಲಾಖೆಯ ವಿರಾಜಪೇಟೆ ವಲಯದ ಪ್ರಾದೇಶೀಕ ವಿಭಾಗದ ವತಿಯಿಂದ ಆಯೋಜನೆಗೊಂಡ ಅರಣ್ಯದಲ್ಲಿ ಅಧ್ಯಯನ ಪ್ರವಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ವಿವಿಧ ಮಹಿಳಾ ಸಂಘಗಳ ಸದಸ್ಯರು, ಮಹಿಳಾ ಸಮಾಜದ ಸದಸ್ಯರು, ಮತ್ತು ಮಕ್ಕಳು ಭಾಗವಹಿಸಿ, ವನ್ಯ ಜೀವಿಗಳ ಬಗ್ಗೆ ಮಾಹಿತಿ ತಿಳಿದುಕೊಂಡರು. ಕಾಕನಕೋಟೆ ಸಫಾರಿ ಕೇಂದ್ರ, ಬಂಡೀಪುರ, ನಾಗರಹೋಳೆ ವನ್ಯ ಜೀವಿಧಾಮಗಳಿಗೆ ಭೇಟಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಹುಲಿ ಹಾಗೂ ಇತರೆ ವನ್ಯಜೀವಿಗಳ ಸಂರಕ್ಷಣೆ, ಮಾನವ-ವನ್ಯಜೀವಿ ಸಂಘರ್ಷ ತಡೆ, ಅರಣ್ಯದ ಮಹತ್ವದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ವಿರಾಜಪೇಟೆ ತಾಲೂಕು ಅರಣ್ಯ ಇಲಾಖೆಯ ಉಪ…

Read More

ಮಡಿಕೇರಿ ಜು.7 NEWS DESK : ಭಾರತ ಸರಕಾರದ ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಎನಿಸಿಕೊಂಡಿರುವ ಡಾ.ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ( ಸಚಿವ ದರ್ಜೆ ) ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಅವರು ಸಂತಾಪ  ವ್ಯಕ್ತಪಡಿಸಿದ್ದಾರೆ. ತಮ್ಮ ಸಂಸ್ಥೆಯಾದ ತೆಕ್ಕಿಲ್ ಸಮುದಾಯ ಭವನ ಮತ್ತು ತೆಕ್ಕಿಲ್ ಶಿಕ್ಷಣ ಸಂಸ್ಥೆಯ ಕಟ್ಟಡ ಕೆಲಸ ಕಾರ್ಯಗಳಿಗೆ ಮಾರ್ಗದರ್ಶಕರಾಗಿ, ಪೇರಡ್ಕದಲ್ಲಿರುವ ನಮ್ಮ ಕುಟುಂಬದವರು, ಊರಿನವರು, ಮಳೆಗಾಲದಲ್ಲಿ ದೋಣಿಯಲ್ಲಿ ಸಂಚರಿಸುವ ಸಂಧರ್ಭದಲ್ಲಿ ಸಂಪಾಜೆ ಗ್ರಾಮದ ಗೂನಡ್ಕ ಪೆರಡ್ಕಕ್ಕೆ ಜನಾರ್ಧನ ಪೂಜಾರಿಯವರ ಅನುದಾನದಲ್ಲಿ ತೂಗು ಸೇತುವೆಯನ್ನು ನಿರ್ಮಿಸಿ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಟ್ಟ ಒಬ್ಬ ಮುಸ್ಸದ್ಧಿಯಾಗಿದ್ದರು. ಅಲ್ಲದೆ ದೇಶದ ನಾನಾ ಭಾಗದಲ್ಲಿ ತೂಗುಸೇತುವೆ ನಿರ್ಮಿಸಿ ತೂಗುಸೇತುವೆಯ ಸರದಾರರಾಗಿದ್ದಾರೆ ಅವರ ನಿಧನವು ಸಮಾಜಕ್ಕೆ, ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದರು.  ಶಿಕ್ಷಣ ಮತ್ತು ಸಮಾಜ ಸೇವೆಗೆ ಅವರು ನೀಡಿದ ಕೊಡುಗೆ ಅಪಾರವಾದದ್ದು, ಭಗವಂತನು ಅವರ…

Read More

ಸುಂಟಿಕೊಪ್ಪ ಜು.8 NEWS DESK : ಸಹಕಾರ ಕ್ಷೇತ್ರವು ಪ್ರಜಾಪ್ರಭುತ್ವದ ಮಾದರಿಯಲ್ಲಿ ಪ್ರಶ್ನಿಸುವ ಗುಣಗಳನ್ನು ಪ್ರತಿಯೊಬ್ಬ ಸದಸ್ಯರು ಬೆಳೆಸಿಕೊಂಡಾಗ ಮಾತ್ರ ಸಹಕಾರ ಕ್ಷೇತ್ರವು ಬಲಿಷ್ಠವಾಗಿ ಬೆರೂರಲು ಸಾಧ್ಯವೆಂದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಭಿಪ್ರಾಯಪಟ್ಟರು. ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘ, ರಂಗಸಮುದ್ರ ಸಹಕಾರ ಧವಸ ಭಂಡಾರ ಸಂಘ ಹಾಗೂ ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಭಿನಂದನಾ ಸಮಾರಂಭ ಹಾಗೂ ಮೂರು ಸಂಘಗಳ ಜಾಗದ ದಾಖಲೆ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಪ್ರಶ್ನೆ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದು ಸಹಕಾರಿ ಕ್ಷೇತ್ರದಲ್ಲಿ ಅತ್ಯಂತ ಆರೋಗ್ಯಕರ ಬೆಳವಣಿಗೆಯಾಗಿದೆ ಎಂದರು. ಗ್ರಾಮೀಣ ಭಾಗದ ಜನತೆ ಹೈನುಗಾರಿಕೆಗೆ ಪ್ರಥಮ ಆದ್ಯತೆ ನೀಡುವ ಮೂಲಕ ಆರ್ಥಿಕವಾಗಿ ಸದೃಢರಾಗಿ ಉತ್ತಮ ಜೀವನ ಕಂಡುಕೊಳ್ಳಬೇಕು ಎಂದು ಕರೆ ನೀಡಿದರು. ಇಲ್ಲಿನ ಸಹಕಾರ ಕ್ಷೇತ್ರದ…

Read More