ಲೇಖಕ: admin

ಮಡಿಕೇರಿ ಜ.28 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಭಾರತೀಯ ಸೇನೆಯಲ್ಲಿನ ಮಹತ್ವದ ಕಾರ್ಯಗಳು ಇಡೀ ವಿಶ್ವಕ್ಕೆ ಮಾದರಿ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯು ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ನಗರದ ಕೊಡಗು ವಿದ್ಯಾಲಯ ಶಾಲೆಯ ಸಭಾಂಗಣದಲ್ಲಿ ನಡೆದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನಾಚರಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಪ್ರಥಮ ಮಹಾ ದಂಡನಾಯಕರಾಗಿ ಭಾರತೀಯ ಸೇನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಸೇನಾ ಸಾಧನೆಯನ್ನು ಸ್ಮರಿಸುವಂತಾಗಬೇಕು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಕೊಡಗಿನ ಕಣ್ಮಣಿಗಳು ಎಂದು ಅವರು ಹೇಳಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಸಮಯಪ್ರಜ್ಞೆ, ಶಿಸ್ತಿಗೆ ಹೆಸರುವಾಸಿಯಾಗಿದ್ದರು. ಅವರಂತೆ ಏರ್ ಮಾರ್ಷಲ್(ನಿವೃತ್ತ) ಕಾರ್ಯಪ್ಪ ಅವರು ಕೂಡ ಭಾರತೀಯ ಸೇನೆಗೆ ತಮ್ಮದೇಯಾದ ಕೊಡುಗೆ…

Read More

ಮಡಿಕೇರಿ ಜ.28 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆ ಕುಶಾಲನಗರದಲ್ಲಿ ನಡೆದ ‘ಹಿಂದೂ ಸಂಗಮ’ ಶೋಭಾಯಾತ್ರೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರು ಪಾಲ್ಗೊಳ್ಳುವ ಮೂಲಕ ಕಾಂಗ್ರೆಸ್ ನ ದ್ವಿಮುಖ ಸಿದ್ಧಾಂತವನ್ನು ಬಯಲು ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಅವರು ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರ್‍ಎಸ್‍ಎಸ್ ಸಿದ್ಧಾಂತವನ್ನು ತೀವ್ರವಾಗಿ ವಿರೋಧಿಸುವುದಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರ ಮತ್ತು ರಾಜ್ಯ ಮಟ್ಟದ ನಾಯಕರು ಘೋಷಿಸುತ್ತಲೇ ಬಂದಿದ್ದಾರೆ. ಆದರೆ ಮಡಿಕೇರಿ ಕ್ಷೇತ್ರದ ಶಾಸಕರು ಕಾಂಗ್ರೆಸ್ ನಾಯಕರ ಪ್ರತಿಪಾದನೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಶಾಸಕರ ಈ ನಡೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಮುಖರು ಒಪ್ಪಿಕೊಳ್ಳುತ್ತಾರೆಯೇ ಅಥವಾ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಾದಲ್ಲಿ ಮೌನಕ್ಕೆ ಶರಣಾಗಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಜಾತ್ಯತೀತ ಜನತಾದಳ ಯಾವುದೇ ಜಾತಿ, ಧರ್ಮ, ಜನಾಂಗ ಮತ್ತು ಸಂಘ ಸಂಸ್ಥೆಗಳ ವಿರೋಧಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗಾಗಿ ಆರ್‍ಎಸ್‍ಎಸ್ ನ್ನು ಮುಂದೆಯಿಂದ…

Read More

ಮಡಿಕೇರಿ ಜ.28 NEWS DESK : ಗಣರಾಜ್ಯೋತ್ಸವದ ಪ್ರಯುಕ್ತ ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಆಯೋಜಿಸಲಾಗಿದ್ದ ಸ್ಕೇಟಿಂಗ್ ನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಡಿಕೇರಿಯ ಮಂಗಳಾದೇವಿ ನಗರದ ತೋರೆರ ಯುವಾನ್ ಬೋಪಣ್ಣ ಟಿ. (5) ಗೆ ಏಷ್ಯನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಮತ್ತು ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್, ಯುಎಸ್‍ಎ ಅಧಿಕೃತ ಮಾನ್ಯತೆ ನೀಡಿವೆ. ಯುವಾನ್ ಬೋಪಣ್ಣ 1 ಗಂಟೆ 26 ನಿಮಿಷ 26 ಸೆಕೆಂಡುಗಳ ಕಾಲ ನಿರಂತರವಾಗಿ ಸ್ಕೇಟಿಂಗ್ ಮಾಡಿ ಅಸಾಧಾರಣ ಸಹನಾ ಶಕ್ತಿ, ಶಿಸ್ತು ಮತ್ತು ದೃಢಸಂಕಲ್ಪವನ್ನು ಪ್ರದರ್ಶಿಸಿದ್ದಾನೆ. ಆ ಮೂಲಕ ಎರಡು ವಿಶ್ವ ದಾಖಲೆ ಪ್ರಯತ್ನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾನೆ. ಕೊಡಗು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೋಶಾಧಿಕಾರಿ ತೋರೆರ ಎಂ.ಮುದ್ದಯ್ಯ ಅವರ ಮೊಮ್ಮಗ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ತೋರೆರ ಎಂ.ಮುತ್ತಣ್ಣ ಮತ್ತು ರಂಜಿತಾ ಎಂ. ದಂಪತಿಯ ಪುತ್ರ ಯುವಾನ್ ಬೋಪಣ್ಣ ಟಿ. ಕಿಡ್‍ಝೀ ಪ್ರೀಸ್ಕೂಲ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

Read More

ಮಡಿಕೇರಿ ಜ.28 NEWS DESK : ಭಾರತೀಯ ಸೇನಾ ಪಡೆಗಳ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಅವರ 127 ನೇ ಜನ್ಮಜಯಂತಿಯನ್ನು ಮಡಿಕೇರಿಯ ರೋಶನಾರದಲ್ಲಿ ಪುಪ್ಪನಮನದ ಮೂಲಕ ಬಾವಪೂಣ೯ವಾಗಿ ಆಚರಿಸಲಾಯಿತು. ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ನೆಚ್ಚಿನ ಮನೆಯಾಗಿದ್ದ ನಗರದ ಹೊರವಲಯದಲ್ಲಿನ ರೋಶನಾರ ಬಳಿಯಲ್ಲಿರುವ ಕಾಯ೯ಪ್ಪ ಅವರ ಸಮಾಧಿ ಸ್ಥಳಕ್ಕೆ ಗಣ್ಯರು ಪುಪ್ಪನಮನ ಸಲ್ಲಿಸಿದರು. ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರಿಗೆ ಪ್ರಿಯವಾಗಿದ್ದ ಭಜನೆ, ದೇಶಭಕ್ತಿಗೀತ ಗಾಯನ ಜರುಗಿತು. ಈ ಸಂದಭ೯ ಮಾತನಾಡಿದ ಕಾಯ೯ಪ್ಪ ಅವರ ಪುತ್ರ ನಿವೖತ್ತ ಏರ್ ಮಾಷ೯ಲ್ ನಂದಾಕಾಯ೯ಪ್ಪ, ಪ್ರತೀಯೋವ೯ ಭಾರತೀಯನಿಗೂ ತನ್ನ ದೇಶ ಮೊದಲಾಗಬೇಕು. ಭಾರತೀಯತೆ ಆದ್ಯತೆಯಾಗಿರಬೇಕು. ಕೃತಕ ಬುದ್ದಿಮತ್ತೆಯ ಪ್ರಬಾವ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಮಾಧ್ಯಮಗಳಲ್ಲಿ ಬಂದದ್ದೆಲ್ಲಾ ನಿಜವಾಗಿರುವುದಿಲ್ಲ. ಯಾವುದೇ ವಿಚಾರಗಳನ್ನು ಪರಾಮಶಿ೯ಸಿ ಎಂದು ಕಿವಿಮಾತು ಹೇಳಿದರು. ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಮುನ್ನ ಎಲ್ಲಾ ಸೌಲಭ್ಯಗಳೊಂದಿಗೆ ದೇಶಸೇವೆಗೆ ಪ್ರಾಮುಖ್ಯತೆ ನೀಡುವ ಭಾರತೀಯ ಸೇನಾ ಪಡೆಯಲ್ಲಿ ಕಾಯ೯ನಿವ೯ಹಿಸಲು ಆದ್ಯತೆ ನೀಡಿ…

Read More

ಸೋಮವಾರಪೇಟೆ ಜ.28 NEWS DESK : ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಮಾನವೀಯ ದೃಷ್ಟಿಯಿಂದ ಮೊಗೇರ ಸಮಾಜದ ವತಿಯಿಂದ ರಕ್ಷಿಸಿ ಚಿಕಿತ್ಸೆ ಒದಗಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಸೋಮವಾರಪೇಟೆ ಪಟ್ಟಣದಲ್ಲಿ ಅಲೆದಾಡುತ್ತಾ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದ ಮಹಿಳೆಯನ್ನು ಕೆಲವರು ಸಾಮಾಜಿಕ ಜಾಲತಾಣದ ಗುಂಪುಗಳಲ್ಲಿ ಅವರ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸೋಮವಾರಪೇಟೆ ಮೊಗೇರ ಸಮಾಜದ ಸದಸ್ಯರು ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ತೀರ್ಮಾನಿಸಿದರು. ಸಭೆಯ ತೀರ್ಮಾನದಂತೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಮೊಗೇರ ಸಮಾಜದ ಉಪಾಧ್ಯಕ್ಷರಾದ ಪಿ.ಕೆ.ಚಂದ್ರು, ಜಿಲ್ಲಾ ಮೊಗೇರ ಸಮಾಜದ ಸದಸ್ಯರಾದ ಕೆ.ಬಿ.ನಂದ, ಹರೀಶ್ ತಣ್ಣೀರುಹಳ್ಳ, ವಿಜಯ್ ಕಾಗಡಿಕಟ್ಟೆ, ಹರೀಶ್ ಬಿಲ್ಕಿಕೊಪ್ಪ ಹಾಗೂ ರವಿ ಕರ್ಕಲಿ ಅವರುಗಳು ಸುನಂದ ಅವರ ಕುಟುಂಬದವರೊಂದಿಗೆ ಹರೀಶ್ ಅವರ ಕಾರಿನಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆತಂದರು. ಈ ಸಂದರ್ಭದಲ್ಲಿ ಜಿಲ್ಲಾ ಮೊಗೇರ ಸಮಾಜದ ಅಧ್ಯಕ್ಷರಾದ ಜನಾರ್ದನ್ ಮರಗೋಡು ಹಾಗೂ ರವಿ ಪಿ.ಎಂ.…

Read More

ಮಡಿಕೇರಿ ಜ.28 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು. ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂಧುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ತಹಶೀಲ್ದಾರ್ ಶ್ರೀಧರ, ಡಿವೈಎಸ್‍ಪಿಗಳಾದ ಸೂರಜ್, ಮೇದಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಎಂ.ಪಿ.ಮುತ್ತಪ್ಪ, ಓಂಕಾರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ರಾಣಿ ಮಾಚಯ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ…

Read More

ವಿರಾಜಪೇಟೆ ಜ.28 NEWS DESK : ದೇಶದ ಐಕ್ಯತೆಗೆ ಕುಟುಂಬ ಜೀವನ ಕಾರಣ. ಮೂರು ಅಕ್ಷರಗಳಲ್ಲಿಯೇ ಸಮರ್ಥ ಸತ್ವ ಹೊಂದಿರುವ ಸದೃಢ ದೇಶ ಭಾರತ. ಎಲ್ಲಾ ಜನರನ್ನು, ಮನಸ್ಸನ್ನು ಬೆಸೆಯುವ ಮೂಲಕ ಹಿಂದೂ ಧರ್ಮದ ಅಭಿಮಾನವನ್ನು ಜನರಿಗೆ ತಲುಪಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕದ ದಕ್ಷಿಣ ಕರ್ನಾಟಕ ಪ್ರಾಂತ ಸಹ ಕಾರ್ಯವಾಹಕ ಪಿ.ಎಸ್.ಪ್ರಕಾಶ್ ಕರೆ ನೀಡಿದರು. ಅಮ್ಮತ್ತಿಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಆಶ್ರಯದಲ್ಲಿ ಕೊಡವ ಸಮಾಜದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಶತಮಾನೋತ್ಸವ ಆಚರಿಸುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ತನ್ನ ಕಾರ್ಯ ಯೋಜನೆಯಲ್ಲಿ ಹಿಂದೂ ಸಮಾಜೋತ್ಸವ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಖಂಡ ಹಿಂದೂ ಸಮಾಜ ದೇಶದಲ್ಲಿ ಹರಿದು ಹಂಚಿ ಹೋಗಿರುವುದನ್ನು ಒಗ್ಗೂಡಿಸುವ ಸಲುವಾಗಿ ಶೋಭಾಯಾತ್ರೆ ನಡೆಸಲಾಗುತ್ತಿದೆ. ಹಿಂದೂ ಸಮಾಜದವರು ಜಾತಿ ಬೇಧ ಮರೆತು ಸಂಘಟಿತರಾಗಿ ನಾವೆಲ್ಲ ಒಂದು, ನಾವೆಲ್ಲ ಮುಂದು ಎನ್ನುವ ಮೂಲಕ, ಯುವಕರ ಪ್ರಜ್ಞೆ ಧರ್ಮದೆಡೆಗೆ ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು…

Read More

ಮುಂಬೈ NEWS DESK ಜ.28 : ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಬಾರಾಮತಿ ಬಳಿ ನಡೆದಿದೆ. ಇಂದು ಬೆಳಗ್ಗೆ ಮುಂಬೈನಿಂದ ಟೇಕಾಫ್ ಆಗಿದ್ದ ವಿಮಾನವು ಸುಮಾರು ಒಂದು ಗಂಟೆಯ ಪ್ರಯಾಣದ ನಂತರ 9 ಗಂಟೆಯ ಸುಮಾರಿಗೆ ಬಾರಾಮತಿಯಲ್ಲಿ ಲ್ಯಾಂಡಿಂಗ್ ಗೆ ಸಿದ್ಧವಾಗಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ವಿಮಾನ ಪತನಗೊಂಡಿತು. ಅಪಘಾತದಲ್ಲಿ ಅಜಿತ್ ಪವಾರ್, ಅವರ ಇಬ್ಬರು ಸಿಬ್ಬಂದಿ ಹಾಗೂ ಇಬ್ಬರು ವಿಮಾನ ಸಿಬ್ಬಂದಿ ಸದಸ್ಯರು (ಪೈಲಟ್ ಸಿಬ್ಬಂದಿ) ಸೇರಿದಂತೆ ವಿಮಾನದಲ್ಲಿದ್ದ ಐವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಡಿಕೇರಿ ಜ.28 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್,  ಪೊನ್ನಂಪೇಟೆ ತಾಲ್ಲೂಕು ಘಟಕದ ವತಿಯಿಂದ ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.   ಸ್ಪರ್ಧೆಯು ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಎಂಟರಿಂದ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ  ವಿದ್ಯಾರ್ಥಿಗಳು ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಯಾವುದೇ ಮ್ಯೂಸಿಕ್ ಬಳಸದೆ 4ನಿಮಿಷದ ಒಳಗಾಗಿ ಹಾಡಿ, ರೆಕಾರ್ಡ್ ಮಾಡಿದ ವಿಡಿಯೋವನ್ನು  ಚೇಂದಿರ ರಮ್ಯಾ ಜಗನ್  ಅವರ ವಾಟ್ಸಾಪ್ ಸಂಖ್ಯೆ 8550833420 ಗೆ ದಿನಾಂಕ 05/02/2026ರ ಒಳಗಾಗಿ ತಲುಪುವಂತೆ ಕಳುಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಎಲ್ಲರಿಗೂ, ಡಿಜಿಟಲ್ ಅಭಿನಂದನಾಪತ್ರ  ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಪೊನ್ನಂಪೇಟೆ ತಾಲೂಕು ಕಾರ್ಯದರ್ಶಿಯಾದ ನಳಿನಿ ಹೆಚ್ ಆರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನಾಪೋಕ್ಲು ಜ.28 NEWS DESK :  ಚೀಯಕ ಪೂವಂಡ ಕುಟುಂಬದ ವತಿಯಿಂದ ಏಪ್ರಿಲ್‍ನಲ್ಲಿ ಆಯೋಜಿಸಲಾಗಿರುವ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅಧಿಕ ಸಂಖ್ಯೆಯ ಕೊಡವ ಕುಟುಂಬಗಳು ಪಾಲ್ಗೊಳ್ಳುವುದರ ಮೂಲಕ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್ ನಲ್ಲಿ ಕ್ರೀಡೆ ದಾಖಲಾಗಲು ಪ್ರಯತ್ನಿಸಬೇಕು ಎಂದು ಚೀಯಕ ಪೂವಂಡ ಕುಟುಂಬದ ಅಧ್ಯಕ್ಷ ಸಿ.ಎಂ.ಅಪ್ಪಚ್ಚು ಹೇಳಿದರು. ನಾಲ್ನಾಡು ಪ್ಲಾಂಟಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನ ಕೆಪಿಎಸ್ ಶಾಲಾ ಆಟದ ಮೈದಾನದಲ್ಲಿ ಏ.23 ರಿಂದ 26ರ ವರೆಗೆ 4 ದಿನಗಳ ಕಾಲ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟದ ಯಶಸ್ವಿಗಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕ್ರೀಡಾಕೂಟಕ್ಕೆ ಅಂದಾಜು 60 ಲಕ್ಷ ವೆಚ್ಚವಾಗಲಿದ್ದು, ಕುಟುಂಬವಾರು 20,000 ರೂ.ಧನಸಹಾಯವನ್ನು ಸಂಗ್ರಹಿಸಲಾಗುತ್ತಿದೆ ಎಂದರು. ಹಗ್ಗ ಜಗ್ಗಾಟ ಕ್ರೀಡಾ ಕೂಟದ ಅಧ್ಯಕ್ಷ ಸಿ.ಕೆ.ಬೋಪಣ್ಣ ಮಾತನಾಡಿ, ಹಗ್ಗ ಜಗ್ಗಾಟ ಕ್ರೀಡಾಕೂಟದ ಯಶಸ್ಸಿಗೆ ಪರಸ್ಪರ ಸರ್ವರ ಸಹಕಾರ ಅಗತ್ಯ. ಜನಾಂಗದ ಕ್ರೀಡಾ ಅಭಿಮಾನಿ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ನಲ್ಲಿ…

Read More