ಮಡಿಕೇರಿ NEWS DESK ಆ.4 : ಮಡಿಕೇರಿಯ ರಾಜಾಸೀಟ್ನಲ್ಲಿ ‘ಗ್ಲಾಸ್ ಬ್ರಿಡ್ಜ್’ ಮತ್ತು ‘ಫುಡ್ ಕೋರ್ಟ್’ ನಿರ್ಮಾಣಕ್ಕೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆಗಳು ನಡೆದಿದ್ದರು, ನಗರಸಭೆಯ ಗಮನಕ್ಕೆ ಬಾರದ ಬಗ್ಗೆ ತುರ್ತು ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಈ ಬಗ್ಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವ ಮೂಲಕ ಮತ್ತೆ ಸಭೆ ನಡೆಸಿ ವಿಸ್ತೃತ ಚರ್ಚೆ ನಡೆಸುವ ನಿರ್ಣಯವನ್ನು ಕೈಗೊಳ್ಳಲಾಯಿತು. ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಆರಂಭದಲ್ಲೆ, ಕಾಂಗ್ರೆಸ್ ಸದಸ್ಯ ಬಿ.ವೈ.ರಾಜೇಶ್ ಸೇರಿದಂತೆ ನಾಮನಿರ್ದೇಶಿತ ಸದಸ್ಯರು, ಗ್ಲಾಸ್ ಬ್ರಿಡ್ಜ್ ಮತ್ತು ಫುಡ್ ಕೋರ್ಟ್ ಯೋಜನೆಯನ್ನು ಸರ್ಕಾರ ರೂಪಿಸಿದೆ. ಇದಕ್ಕೆ ವಿರೋಧ ಮಾಡುವ ಉದ್ದೇಶದಿಂದಲೇ ತುರ್ತು ಸಭೆ ಕರೆಯಲಾಗಿದೆ. ಈ ಸಭೆಯನ್ನು ಯಾವುದೇ ಕಾರಣಕ್ಕೂ ನಡೆಯಲು ಬಿಡುವುದಿಲ್ಲ ಎಂದು ವೇದಿಕೆಯ ಮುಂಭಾಗಕ್ಕೆ ಬಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಕಾಂಗ್ರೆಸ್ ಸದಸ್ಯರ ವಿರೋಧಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರು, ನಗರಸಭೆಯ ಗಮನಕ್ಕೆ ಬಾರದೆ ಬಹುಕೋಟಿ ಯೋಜನೆಯನ್ನು ಜಾರಿ ಗೊಳಿಸಲಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಈ…
ಲೇಖಕ: admin
ಮಡಿಕೇರಿ ಆ.4 NEWS DESK : ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಕುದ್ರೆಪಾಯ ಗ್ರಾಮ ಮಟ್ಟದ ಉಪ ಸಮಿತಿಯನ್ನು ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಕೆ.ಜೆ.ಶಶಿಕಾಂತ್ ಹಾಗೂ ಕಾರ್ಯದರ್ಶಿಯಾಗಿ ಸತೀಶ ಪಿ.ಆರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮರಾಠ, ಮರಾಟಿ ಸಮಾಜ ಸೇವಾ ಸಂಘದ ಕುದ್ರೆಪಾಯ ಗ್ರಾಮ ಮಟ್ಟದ ಸಭೆ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಶ್ರೀ ಮಹಾವಿಷ್ಣು ದೈವಸ್ಥಾನದ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಯಶೋಧ ಪಿ.ಎಂ, ಉಪ ಕಾರ್ಯದರ್ಶಿಯಾಗಿ ಪ್ರವೀಣ ವಿ.ಆರ್, ಕೋಶಾಧಿಕಾರಿಯಾಗಿ ರಂಜಿತ್ ಕೆ.ಎಂ. ಸಂಚಾಲಕರಾಗಿ ವಿಷ್ಣು ನಾಯ್ಕ್ ಟಿ, ಭಾರತಿ, ಸರಸ್ವತಿ ಮಾಪ್ಲೆಕಜೆ, ಸಲಹೆಗಾರರಾಗಿ ವಸಂತ ಕೆ.ಸಿ, ಸಮಿತಿ ಸದಸ್ಯರಾಗಿ ಸತೀಶ್, ರಾಜೇಶ್ವರ ವಿ.ಸಿ, ಕುಶಾಲಪ್ಪ ಬಳ್ಳಿಕೋಡಿ, ವಿಶ್ವನಾಥ ಚಳ್ಳಂಗಾಯ, ಹೂವಯ್ಯ ಕೆರೆಮೂಲೆ ಅವಿರೋಧವಾಗಿ ಆಯ್ಕೆಯಾದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪರಮೇಶ್ವರ ಎಂ.ಎಂ ಅವರು ನೂತನ ಪದಾಧಿಕಾರಿಗಳು ಸಂಘಟಿತರಾಗಿ ಸಮಾಜದ ಅಭ್ಯುದಯಕ್ಕಾಗಿ ಶ್ರಮಿಸಬೇಕು ಮತ್ತು ಸಂಘವನ್ನು ಉತ್ತಮ ರೀತಿಯಲ್ಲಿ…
ಮಡಿಕೇರಿ ಆ.4 NEWS DESK : ನಮ್ಮ ಸ್ನೇಹಿತ, ದಂತಕಥೆ/ಇತಿಹಾಸ ಪುರುಷ ಜಾರ್ಖಂಡ್ ನಾಯಕ ಮತ್ತು ಜಾರ್ಖಂಡ್ ರಾಜ್ಯದ ಪಿತಾಮಹ ಶಿಬು ಸೊರೆನ್ ಅವರ ನಿಧನಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಹೃದಯ ಸ್ಪರ್ಶಿ ಸಂತಾಪ ಮತ್ತು ಗೌರವಾಂಜಲಿ ಸಲ್ಲಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಶಿಬು ಸೊರೆನ್ ಅವರ ನಿಧನದಿಂದ ನಮಗೆ ತೀವ್ರ ದುಃಖವಾಗಿದೆ. ಕೊಡವ ಹೋರಾಟಕ್ಕೆ ಅವರು ನೀಡಿದ ಮಹತ್ವದ ಬೆಂಬಲವನ್ನು ನಾವು ಪ್ರೀತಿಯಿಂದ ಸ್ಮರಿಸುತ್ತೇವೆ. ನವೆಂಬರ್ 1998 ರಲ್ಲಿ ನವದೆಹಲಿಯಲ್ಲಿ ನಡೆದ ಬೃಹತ್ ಕೊಡವ ರ್ಯಾಲಿಯ ಸಂದರ್ಭದಲ್ಲಿ, ಅವರು ನಮ್ಮೊಂದಿಗೆ ರಾಮಲೀಲಾ ಮೈದಾನದಿಂದ ಪಾರ್ಲಿಮೆಂಟ್ ಬೀದಿವರೆಗೆ ಸುಮಾರು 4 ಕಿಲೋಮೀಟರ್ ನಡೆದು ನಮ್ಮ ಹೋರಾಟವನ್ನು ಬೆಂಬಲಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮತ್ತೊಮ್ಮೆ, 2001 ರಲ್ಲಿ, ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ತಮ್ಮ ಅನಾರೋಗ್ಯ ಪೀಡಿತ ಪುತ್ರ ದುರ್ಗಾ ಸೊರೇನ್ ಅವರನ್ನು ನೋಡಿಕೊಳ್ಳುತ್ತಿದ್ದರೂ, ಅವರು ನಮ್ಮ ಆಹ್ವಾನವನ್ನು ಗೌರವಿಸಿ ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆದ ಕೊಡವ ನ್ಯಾಷನಲ್ ಡೇಯಲ್ಲಿ…
ಮಡಿಕೇರಿ ಆ.4 NEWS DESK : ಮಡಿಕೇರಿ ನಗರದ ರಾಣಿಪೇಟೆಯ ಮುನೇಶ್ವರ ಯುವಕ ಸಂಘದ ವತಿಯಿಂದ ಗಾಂಧಿ ಮೈದಾನದಲ್ಲಿ ನಡೆದ 2ನೇ ವರ್ಷದ 4 ಲೈನ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೀಮ್ ಫ್ಲ್ಯಾಶ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಡಿ.ಕೆ.ಬಾಯ್ಸ್ ಬಿ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಸಂತು ಮ್ಯಾಕ್ಸ್ ವೆಲ್ ಬೆಸ್ಟ್ ಬ್ಯಾಟ್ಸ್ಮನ್, ಮ್ಯಾನ್ ಆಫ್ ದಿ ಮ್ಯಾಚ್, ರಕ್ಷಿತ್ ಬೆಸ್ಟ್ ಬೌಲರ್ ಹಾಗೂ ಪುನೀತ್ ಮ್ಯಾನ್ ಆಫ್ ದಿ ಸೀರಿಸ್ ಪ್ರಶಸ್ತಿ ಪಡೆದರು. ಮುನೇಶ್ವರ ಯುವಕ ಸಂಘದ ಅಧ್ಯಕ್ಷ ಅಜಿತ್ ಹೆಚ್.ಹೆಚ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹದ ಮಾತುಗಳನ್ನಾಡಿದರು. ಪ್ರಥಮ ಬಹುಮಾನ ರೂ.15 ಸಾವಿರ ಮತ್ತು ದ್ವಿತೀಯ ಬಹುಮಾನ ರೂ.10 ಸಾವಿರ ನೀಡಲಾಯಿತು. ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಸದಸ್ಯ ಮುದ್ದುರಾಜು ಬಿ.ಎನ್, ಮುನೇಶ್ವರ ಯುವಕ ಸಂಘದ ಕಾರ್ಯದರ್ಶಿ ಶ್ರೇಯಸ್ ಹೆಚ್.ಎಲ್…
ಮಡಿಕೇರಿ ಆ.4 NEWS DESK : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆ ಅರ್ಹತೆಗಳು: ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ.ನಲ್ಲಿ ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷಗಳ ಸಾಲವನ್ನು ಶೇ.2ರ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ಸಾಮಾನ್ಯ…
ಮಡಿಕೇರಿ ಆ.4 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸುತ್ತ 16 ಗ್ರಾಮ ಪಂಚಾಯತ್ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಕರಿಕೆ, ಮಕ್ಕಂದೂರು, ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ, ಬಲ್ಯಮಂಡೂರು, ದೇವರಪುರ, ಕೆ.ಬಾಡಗ, ಕಿರುಗೂರು, ನಾಲ್ಕೇರಿ, ನಿಟ್ಟೂರು, ಪೊನ್ನಂಪೇಟೆ ಮತ್ತು ಟಿ.ಶೆಟ್ಟಿಗೇರಿ, ಸೋಮವಾರಪೇಟೆ ತಾಲ್ಲೂಕಿನ ಬ್ಯಾಡಗೊಟ್ಟ, ದೊಡ್ಡಮಳ್ತೆ ಮತ್ತು ಗೌಡಳ್ಳಿ, ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಮತ್ತು ಕದನೂರು. ಆಸಕ್ತ ಪ್ರಾಂಚೈಸಿಗಳು ಈ ಕೆಳಕೆ ನೀಡಿದ ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಆಗಸ್ಟ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಲಿಂಕ್ https://kal-mys.gramaone.karnataka.gov.in/ ಹೆಚ್ಚಿನ ಮಾಹಿತಿಗೆ care@blsinternationl.net ಈ ಮೇಲ್ ಐಡಿಯನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.
ಮಡಿಕೇರಿ ಆ.4 NEWS DESK : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್ಗಳಲ್ಲಿ ಆ.5 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಈ ಫೀಡರ್ಗಳ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್ನಿಂದ ಹೊರಹೊಮ್ಮುವ ವಿರಾಜಪೇಟೆ ಪಟ್ಟಣದ ದೊಡ್ಡಟ್ಟಿ ಚೌಕಿಯಿಂದ ಪ್ರೈವೇಟ್ ಬಸ್ ನಿಲ್ದಾಣದವರೆಗೆ(ದರ್ಶನ್ ಲಾಡ್ಜ್ ಪರಿವರ್ತಕ, ಅಭಿಲಾಷ್ ಸ್ಟೋರ್, ಬದ್ರಿಯಾಸ್ ಪಳ್ಳಿ, ಮಮತಾ ಲಾಡ್ಜ್, ಮತ್ತು ಪ್ರೈವೇಟ್ ಬಸ್ನಿಲ್ದಾಣದ ಪರಿವರ್ತಕಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಆ.4 NEWS DESK : ಪೊನ್ನಂಪೇಟೆಯ ತಾಲ್ಲೂಕು ಪಂಚಾಯತ್ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್ ಮಾತನಾಡಿ, 2023-24 ಮತ್ತು 2025ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದರು. ಈಗಾಗಲೇ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಈ ಯೋಜನೆಯಡಿ ಭತ್ಯೆ ಪಡೆಯಲು ಮುಂದುವರಿಸಬೇಕಾಗಿದ್ದಲ್ಲಿ ಪ್ರತಿ ತ್ರೈಮಾಸಿಕದಂತೆ, ತಾನು ಸಾರ್ವಜನಿಕ/ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮಾಡುತ್ತಿಲ್ಲವೆಂದು ಮತ್ತು ಸ್ವಯಂ ಉದ್ಯೋಗ ಮಾಡುತ್ತಿಲ್ಲವೆಂದು, ಉನ್ನತ ವ್ಯಾಸಂಗ ಮುಂದುವರಿಸುತ್ತಿಲ್ಲವೆಂದು ಸ್ವಯಂ ಘೋಷಣೆಯನ್ನು ನೀಡಬೇಕಿದೆ ಎಂದು ಹೇಳಿದರು. ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಉಚಿತ ಕೌಶಲ್ಯ ತರಬೇತಿ ಪಡೆಯಬಹುದಾಗಿದ್ದು, ವೆಬ್ಸೈಟ್ ವಿಳಾಸ https://www.kaushalkar.com/app/registration_verify ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ…
ಸುಂಟಿಕೊಪ್ಪ ಆ.5 NEWS DESK : ಯಾವುದೇ ಒಂದು ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮಲು ಕ್ರೀಡಾಕೂಟ ಪ್ರಮುಖ ಸಾಧನ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದ್ದಾರೆ. ಸುಂಟಿಕೊಪ್ಪ ಗದ್ದೆಹಳ್ಳದ ವೈ.ಎಂ.ಕರುಂಬಯ್ಯ ಅವರ ಗದ್ದೆಯಲ್ಲಿ ಪ್ರಪಥಮ ಬಾರಿಗೆ ಆಯೋಜಿತವಾಗಿದ್ದ “ಗದ್ದೆಹಳ್ಳದಲ್ಲಿ ಗದ್ದೆ ಆಟ ಮಳೆಗಾಲದ ಹಬ್ಬ 2025” ರ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಭತ್ತದ ಬೇಸಾಯ ಹಿನ್ನಡೆ ಕಂಡಿರುವ ಈ ದಿನಗಳಲ್ಲಿ ಹಿರಿಯರಾದ ವೈ.ಎಂ.ಕರುಂಬಯ್ಯ ಅವರು ಯುವಜನತೆ ಮಹಿಳೆಯರು, ಪುರುಷರು, ಮತ್ತು ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಏಕತೆ, ಪದ್ಧತಿ, ಪರಂಪರೆ ಮತ್ತು ಸಮಾಜದ ಒಗ್ಗಟ್ಟನ್ನು ಕಾಪಾಡಿಕೊಳ್ಳುವ ಧ್ಯೇಯ ವಾಕ್ಯದೊಂದಿಗೆ ಈ ಹಬ್ಬವನ್ನು ಆಯೋಜಿಸಿದ್ದು, ಅತ್ಯಂತ ಮಹತ್ವ ಪೂರ್ಣವಾಗಿದೆ ಪ್ರಶಂಸಿದರು. ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಸಮಾಜ ಸರ್ವಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮುತ್ತದೆ ಎಂದು ಹೇಳಿದರು. ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಕೆಸರುಗದ್ದೆ…
ಸುಂಟಿಕೊಪ್ಪ ಆ.4 NEWS DESK : ಶ್ರೀ ವಿನಾಯಕ ಸೇವಾ ಸಮಿತಿ ಶ್ರೀ ಅಣ್ಣಪ್ಪಸ್ವಾಮಿ ದೇವಾಲಯ ಶ್ರೀದೇವಿ ನಾರ್ಗಾಣೆ ಗ್ರಾಮದ 12ನೇ ವರ್ಷದ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಂ.ಜೆ.ಆಕಾಶ್ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಾರ್ತಿಕ್, ಸಹಕಾರ್ಯದರ್ಶಿಯಾಗಿ ಸುಧಿ, ಖಜಾಂಚಿಯಾಗಿ ಮೋಹನ್, ಸಹ ಖಜಾಂಚಿಯಾಗಿ ಬಿ.ಕೆ.ರಾಜೇಶ್ ಹಾಗೂ ಸಮಿತಿ ಸದಸ್ಯರುಗಳಾಗಿ 77 ಮಂದಿಯನ್ನು ಆಯ್ಕೆಮಾಡಲಾಯಿತು. ಹಿಂದಿನ ಸಾಲಿನ ಅಧ್ಯಕ್ಷ ಪುನಿತ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.






