ನಾಪೋಕ್ಲು ಆ.4 NEWS DESK : ನಾಪೋಕ್ಲು ಬಿಲ್ಲವ ಸಮಾಜದ ವತಿಯಿಂದ ಆ.10 ರಂದು ಸ್ಥಳೀಯ ಕೊಡವ ಸಮಾಜದಲ್ಲಿ ಆಟಿಡೊಂಜಿ ದಿನ-2025 ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ ಶಿಬಿರ, ಬಿಲ್ಲವ ಸಮಾಜದ ಮಹಾಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು ತೀರ್ಮಾನಿಸಲಾಗಿದೆ ಎಂದು ನಾಪೋಕ್ಲು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ.ಪ್ರತೀಪ ಹೇಳಿದರು. ಪಟ್ಟಣದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ,ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿದಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಮಂಥರ್ ಗೌಡ, ರಾಮನಗರ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ, ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸೂರತ್ಕಲ್ ಪಾಲ್ಗೊಳ್ಳಲಿರುವರು ಎಂದರು. ಅಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಲಾಗುವುದು. ಬಳಿಕ ಆಟಿಡೊಂಜಿ ದಿನ -2025 ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಸಾಧಕರನ್ನು ಸನ್ಮಾನಿಸಲಾಗುವುದು. ಬಳಿಕ ಆಟಿ ಮಾಸದ ಸಾಂಪ್ರದಾಯಿಕ…
ಲೇಖಕ: admin
ನಾಪೋಕ್ಲು ಆ.4 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಹಾಗೂ ನಾಪೋಕ್ಲು ಕೊಡವ ಸಮಾಜದ ಕ್ರೀಡಾ ಮತ್ತು ಸಾಂಸ್ಕೃತಿಕ, ಮನೋರಂಜನಾ ಕೂಟ ಹಾಗೂ ಬಿದ್ದಾಟಂಡ ಕುಟುಂಬಸ್ಥರ ಸಹಯೋಗದೊಂದಿಗೆ ಆ.7 ರಂದು ಬೇಲ್ ನಮ್ಮೆಯನ್ನು ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಹೇಳಿದರು. ಬಿದ್ದಾಟಂಡ ಕುಟುಂಬಸ್ಥರ (ಬುಟ್ಟಿಆಕ್) ಗದ್ದೆಯಲ್ಲಿ ಜರುಗಲಿರುವ ಬೇಲ್ ನಮ್ಮೆ ಪೂರ್ವಸಿದ್ಧತೆಯ ಬಗ್ಗೆ ಪ್ರಮುಖರೊಂದಿಗೆ ಪರಿಶೀಲಿಸಿ ಅವರು ಮಾತನಾಡಿ, ಕೊಡಗಿನಲ್ಲಿ ಕೃಷಿ ಚಟುವಟಿಕೆಗಳು ಪೂರ್ಣಗೊಂಡ ಬಳಿಕ ಕೈಲ್ ಮುಹೂರ್ತ ಹಬ್ಬವನ್ನು ಆಚರಿಸಲಾಗುವುದು. ಕೃಷಿ ಚಟುವಟಿಕೆಗಳಿಗೆ ಇನ್ನಷ್ಟು ಸಡಗರ ಸಂಭ್ರಮ ತುಂಬಿಕೊಳ್ಳಲು ಕಕ್ಕಡ-18 ಕ್ಕೆ ಪೂರಕವಾಗಿ ಬೇಲ್ ನಮ್ಮೆಯನ್ನು ಆಯೋಜಿಸಲಾಗಿದೆ. ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಬೇಲ್ ನಮ್ಮೆಯಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲಾಗುವುದು. ಕೂಡು ನಾಟಿ, ನಾಟಿ ಓಟದಂತಹ ಚಟುವಟಿಕೆಗಳು ಜೊತೆಯಲ್ಲಿ ಕೃಷಿಗೆ ಪೂರಕವಾದ ಆಟೋಟಗಳನ್ನು ಹಮ್ಮಿಕೊಳ್ಳಲಾಗುವುದು. ಕೊಡಗಿನಲ್ಲಿ ಬದುಕಿನ ಆಧಾರ ಕೃಷಿ ಆಗಿದ್ದು ಅದನ್ನು ಉತ್ತೇಜಿಸಬೇಕು. ಕೃಷಿಯಾಧಾರಿತ ಬದುಕಿನಲ್ಲಿ ಯುವಜನರನ್ನು ತೊಡಗಿಸಿಕೊಳ್ಳುವಂತೆ ಮಾಡುವುದು…
ಸುಂಟಿಕೊಪ್ಪ ಆ.4 NEWS DESK : ಸುಂಟಿಕೊಪ್ಪ ಹೋಬಳಿಯ ಗದ್ದೆಹಳ್ಳದಲ್ಲಿ ‘ಗದ್ದೆ ಆಟ’ ಎಂಬ ವಿನೂತನ ಕಾರ್ಯಕ್ರಮ ಗಮನ ಸೆಳೆಯಿತು. ಹಿರಿಯ ರಾಜಕಾರಣಿ ಸಮಾಜ ಸೇವಕರಾದ ಯಂಕನ ವೈ. ಕರುಂಬಯ್ಯ ಅವರ ಗದ್ದೆಯಲ್ಲಿ 3 ವರ್ಷದಿಂದ 60 ವರ್ಷ ಮೇಲ್ಪಟ್ಟವರಿಗೂ ಮುಕ್ತ ಕೆಸರು ಗದ್ದೆ ಓಟ, ರಿಲೆ, ಹಗ್ಗ ಜಗ್ಗಾಟ,ಮಹಿಳೆಯರು ಪುರುಷರಿಗೆ ಕಾಲ್ನಡಿಗೆ ಸ್ಪರ್ಧೆಗಳು ನಡೆಯಿತು. ಮಕ್ಕಳು, ಹಿರಿಯರು, ಕಿರಿಯರು ಸ್ಪರ್ಧೆಯಲ್ಲಿ ಪಾಲ್ಗೊಂಡು ಸಂಭ್ರಮಸಿದರು. ಫನ್ಗೆಮ್ಸ್ ಎಂಬ ಸ್ಪರ್ಧೆಯಲ್ಲಿ ದಂಪತಿಗಳು ಪಾಲ್ಗೊಂಡಿದ್ದರು. ಒಂದೇ ಕುಟುಂಬದ ತಾಯಿ, ತಂದೆ, ಮಗ, ಮಗಳು ಒಗ್ಗೂಡಿ ಸೇರಿ ತಿರುಗಿ ಓಟ ಎಂಬ ಸ್ಪರ್ಧೆ ಕುತೂಲಹ ಮೂಡಿಸಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಸೇವಕ ವೈ.ಎಂ.ಕರುಂಬಯ್ಯ, ರೈತರೇ ದೇಶದ ಬೆನ್ನಲುಬು. ರೈತಾಪಿ ವರ್ಗದಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಭತ್ತದ ಗದ್ದೆಯನ್ನು ಪಾಳು ಬಿಡದಂತೆ ಅವರು ಕರೆ ನೀಡಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಮಾತನಾಡಿ, ರೈತರಿಗೆ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸಿದ್ದು ಶ್ಲಾಘನೀಯವಾದದ್ದು, ಇದರಿಂದ ಕೃಷಿಕರಿಗೆ…
ಸೋಮವಾರಪೇಟೆ ಆ.4 NEWS DESK : ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಾಣಂತಿಯರಿಗೆ ಸ್ತನ್ಯಪಾನ ಮಹತ್ವ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಕಾರ್ಯಕ್ರಮ ಉದ್ಘಾಟಿಸಿದರು. ತಾಯಿಗೆ ತಾಯ್ತನದ ಸಂಭ್ರಮ ಅತ್ಯಮೂಲ್ಯವಾದದ್ದು, ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವಿಸಬೇಕು. ಆರೋಗ್ಯವಂತ ಮಗುವನ್ನು ಈ ಸಮಾಜಕ್ಕೆ ನೀಡುವುದು ತಾಯಿಯ ಜವಾಬ್ದಾರಿಯೂ ಆಗಿದೆ ಎಂದು ಕಿವಿಮಾತು ಹೇಳಿದರು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಪರ್ಣ ಕೃಷ್ಣನಂದ ಮಾತನಾಡಿ, ನವಜಾತ ಶಿಶುಗಳಿಗೆ ತಾಯಿಯ ಎದೆಹಾಲೇ ಆಹಾರ ಮತ್ತು ಅಮೃತವಾಗಿದೆ. ದೈಹಿಕ ಮತ್ತು ಸರ್ವತೋಮುಖ ಬೆಳವಣಿಗೆಗೆ ಬೇಕಾದ ಎಲ್ಲಾ ಪೌಷ್ಠಿಕಾಂಶಗಳು ಎದೆ ಹಾನಿನಿಂದಲೇ ಸಿಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಾಣಂತಿಯರಿಗೆ ಬೆಡ್ಶಿಟ್ಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಕಾರ್ಯದರ್ಶಿ ಸುವಿನಾ ಕೃಪಾಲ್, ಉಪಾಧ್ಯಕ್ಷೆ ಲತಾಮಂಜು, ಮಾಜಿ ಅಧ್ಯಕ್ಷೆ ಸಂಗೀತ ದಿನೇಶ್, ಖಜಾಂಚಿ ಆಶಾ ಮೋಹನ್ ಪದಾಧಿಕಾರಿಗಳಾದ ನಂದಿನಿ ಗೋಪಾಲ್, ಸ್ಮಿತಾ ನವೀನ್,…
ಮಡಿಕೇರಿ ಆ.4 NEWS DESK : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ನೀಡಲಾಗುವ 2025ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಗ್ರಂಥಪಾಲಕಿ ಡಾ.ವಿಜಯಲತಾ ಸಿ ಅವರು ಭಾಜನರಾಗಿದ್ದಾರೆ. ಗ್ರಂಥಾಲಯದ ಡಿಜೀಟಲೀಕರಣ, ಇ-ಬುಕ್ ವ್ಯವಸ್ಥೆ, ಆನ್ಲೈನ್ ಕಾಟ್ ಲಾಗ್ , ಇ-ಲರ್ನಿಂಗ್ ಹಾಗೂ ವಿದ್ಯಾರ್ಥಿಗಳಿಗೆ ದೈನಂದಿನ ಬಳಕೆಗೆ ಸುಲಭವಾದ ವ್ಯವಸ್ಥೆಗಳನ್ನು ಹಾಗೂ ವಿದ್ಯಾರ್ಥಿಗಳಲ್ಲಿ ಓದಿನ ಮಹತ್ವವವನ್ನು ಅರ್ಥ ಮಾಡಿಸಲು ಕಾರ್ಯಗಾರ ಹೀಗೆ ಶಿಕ್ಷಣಕ್ಕೆ ಬೇಕಾದ ಸಾಕಷ್ಟು ಸಂಪನ್ಮೂಲಗಳನ್ನು ವಿದ್ಯಾರ್ಥಿ ಓದುಗರಿಗೆ ಒದಗಿಸುವ ಕೆಲಸ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪ್ರೇರಣಾ ದಿವಸ್ -2025 ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಡಾ.ವಿಜಯಲತಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಮಡಿಕೇರಿ ಆ.4 NEWS DESK : ಮಡಿಕೇರಿ ಕೊಡವ ಸಮಾಜ, ಪೊಮ್ಮಕ್ಕಡ ಒಕ್ಕೂಟ, ಮಡಿಕೇರಿ ಕೊಡವ ಕೇರಿಗಳ ಸಹಯೋಗದಲ್ಲಿ ಕೊಡವ ಸಮಾಜದ ಸಭಾಂಗಣದಲ್ಲಿ ಕಕ್ಕಡ ನಮ್ಮೆಯ ಒತ್ತೋರ್ಮೆ ಕೂಟ ನಡೆಯಿತು. ಕೊಡಗಿನ ಎಲ್ಲೆಡೆ ಆ.3ರಂದು ಸಾಂಪ್ರದಾಯಿಕವಾಗಿ ಆಚರಿಸಲಾಗುವ ಕಕ್ಕಡ ಸಂಪ್ರದಾಯವನ್ನು ಪುರುಷರು, ಮಹಿಳೆಯರು ಮಕ್ಕಳು ಸಂಭ್ರಮದಿಂದ ಆಚರಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ರೀಡೆಯನ್ನು ಆಯೋಜಿಸಲಾಗಿತ್ತು. ಅತಿಥಿಗಳಿಂದ ಪೊಮ್ಮಡ ಕೂಟದ ಬ್ಯಾಡ್ಜ್ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಕ್ಕಡ ನಮ್ಮೆ ಒಂದು ಸಂಭ್ರಮಾಚರಣೆಯಾಗಿದೆ. ಮಡಿಕೇರಿ ಪೊಮ್ಮಕ್ಕಡ ಕೂಟದ ಕಟ್ಟಡ ನಿರ್ಮಾಣಕ್ಕೆ 20 ಲಕ್ಕ ಅನುದಾನ ಹಾಗೂ ತಡೆಗೋಡೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು. ಹಿಂದೆ ಪ್ರಾಯೋಗಿಕ ಆರೋಗ್ಯಕರ ಆಹಾರವನ್ನು ಸೇವಿಸುವ ಮೂಲಕ ಆರೋಗ್ಯಯುತರಾಗಿದ್ದರು. ಈಗಿನ ಆಹಾರ ಪದ್ದತಿ ಬದಲಾವಣೆಗೊಂಡಿದೆ ಆದ್ದರಿಂದ ಎಲ್ಲರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಮಾತನಾಡಿ, ಕೊಡಗಿನ ಮೂಲ ಸಂಸ್ಕೃತಿಯಂತೆ ಮಳೆಗಾಲಪ್ರಾರಂಭವಾದೊಡನೆ ಗದ್ದೆಯಲ್ಲಿ ಉಳುಮೆ…
ಸುಂಟಿಕೊಪ್ಪ NEWS DESK ಜು.3 : ಭಾರೀ ಗಾಳಿ ಮಳೆಯಿಂದ ಮನೆಯ ಮೇಲೆ ಮರ ಬಿದ್ದು ನಷ್ಟವುಂಟಾಗಿದ್ದ ಕೆಂಚೆಟ್ಟಿ ನಿವಾಸಿ ಎನ್.ಆರ್.ನಂಜಪ್ಪ ಅವರ ನಿವಾಸಕ್ಕೆ ಶಾಸಕ ಡಾ.ಮಂತರ್ಗೌಡ ಅವರು ಭೇಟಿ ನೀಡಿ ಪರಿಶೀಲಿಸಿ ಧೈರ್ಯ ತುಂಬಿದರು. ಮರವೊAದು ಮನೆಯ ಮೇಲೆ ಬಿದ್ದ ಪರಿಣಾಮ ಮನೆಯ ಮೇಲ್ಚಾವಣಿ ಹಾಗೂ ಮನೆಯ ಗೋಡೆ ಸೇರಿದಂತೆ ಸಿಂಟೆಕ್ಸ್ ನೀರಿನ ಟ್ಯಾಂಕ್ ಹಾನಿಗೀಡಾಗಿತ್ತು. ನಷ್ಟದ ಕುರಿತು ಮಾಹಿತಿ ಪಡೆದ ಶಾಸಕರು ಪರಿಹಾರದ ಮೊತ್ತವನ್ನು ಆದಷ್ಟು ಶೀಘ್ರ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಹಶೀಲ್ದಾರ್ ಕಿರಣ್ ಗೌರಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾ.ಪಂ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯ ರಫೀಕ್ಖಾನ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಉಪತಹಶೀಲ್ದಾರ್ ಪ್ರಶಾಂತ್, ಸುಂಟಿಕೊಪ್ಪ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಉಷಾ ಮತ್ತಿತರರು ಹಾಜರಿದ್ದರು.
ಮಡಿಕೇರಿ NEWS DESK ಆ.3 : “ಬಾಲಗೋಕುಲ ಮಡಿಕೇರಿ” ಇವರ ವತಿಯಿಂದ ದಿನಾಂಕ: 17-08-2025 ಭಾನುವಾರ ಮಕ್ಕಳಿಗೆ *“ಶ್ರೀ ಕೃಷ್ಣ ಜನ್ಮಾಷ್ಟಮಿ”ಯ ಪ್ರಯುಕ್ತ “ಶ್ರೀ ಕೃಷ್ಣ, ಬಲರಾಮ, ರುಕ್ಮಣಿ, ರಾಧೆ, ದೇವಕಿ, ಯಶೋದೆ, ವಸುದೇವ ಹಾಗೂ ಕುಚೇಲರ ಛದ್ಮವೇಷ”* ಸಮಾಗಮವನ್ನು ಆಯೋಜಿಸಲಾಗುತ್ತಿದೆ. ಈ “ಶ್ರೀ ಕೃಷ್ಣ ಜನ್ಮಾಷ್ಟಮಿ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲಾ ಛದ್ಮವೇಷದಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ ಉಡುಗೊರೆಗಳನ್ನು ನೀಡಲಾಗುವುದು, ಭಾಗವಹಿಸಲು ಇಚ್ಚಿಸುವವರು: ದಿನಾಂಕ: 09-08-2025 ರೊಳಗೆ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಕೊಳ್ಳಬೇಕಾಗಿ ಕೋರಿಕೆ. ಮೊಬೈಲ್ ಸಂಖ್ಯೆ: 9448541328, 9740131805
ಮಡಿಕೇರಿ NEWS DESK ಆ.3 : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಮೊದಲ ತಂಡದ ನಾಲ್ಕು ಆನೆಗಳನ್ನು ದುಬಾರೆ ಸಾಕಾನೆ ಶಿಬಿರದಿಂದ ಭಾನುವಾರ ಹುಣಸೂರು ಬಳಿಯ ವೀರನ ಹೊಸಹಳ್ಳಿ ಶಿಬಿರಕ್ಕೆ ಕಳುಹಿಸಲಾಯಿತು. ದುಬಾರೆ ಶಿಬಿರದ ಧನಂಜಯ, ಕಂಜನ್, ಪ್ರಶಾಂತ ಹಾಗೂ ಕಾವೇರಿ ಆನೆಗಳನ್ನು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲಾರಿಗಳಲ್ಲಿ ಕಳುಹಿಸಿಕೊಡಲಾಯಿತು. ಮಡಿಕೇರಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ.ಗೋಪಾಲ್, ಕುಶಾಲನಗರ ಅರಣ್ಯ ವಲಯ ಅಧಿಕಾರಿ ರತನ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿಗಳಾದ ಕನ್ನಂಡ ರಂಜನ್, ಧರ್ಮೇಂದ್ರ ಹಾಗೂ ಪಶು ತಜ್ಞ ವೈದ್ಯ ಡಾ.ಚಿಟ್ಟಿಯಪ್ಪ ಈ ಸಂದರ್ಭ ಹಾಜರಿದ್ದರು. ಸೋಮವಾರ ಬೆಳಗ್ಗೆ ವೀರನಹೊಸಹಳ್ಳಿಯಿಂದ ಮೈಸೂರು ಕಡೆಗೆ ಮೊದಲ ಹಂತದ ಆನೆಗಳ ದಸರಾ ಗಜಪಯಣ ಆರಂಭಗೊಳ್ಳಲಿದೆ. ಎರಡನೇ ತಂಡದಲ್ಲಿ ದುಬಾರೆ ಶಿಬಿರದ ಸಾಕಾನೆಗಳಾದ ಸುಗ್ರೀವ, ಗೋಪಿ, ಹರ್ಷ ಹಾಗೂ ಹೇಮಾವತಿ ತೆರಳಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ NEWS DESK ಆ.3 : ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನೂತನ ದಂತ ಚಿಕಿತ್ಸಾ ವಿಭಾಗ ಹಾಗೂ ಓಪಿಜಿ ಎಕ್ಸ್ ರೇ ಮೆಷಿನ್ ಅನ್ನು ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಕೊಡಗು ಮೆಡಿಕಲ್ ಕಾಲೇಜು ಆಸ್ಪತ್ರೆಯನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸಲಾಗುವುದು. ಕೊಡಗಿನ ಜನರ ಬಹುಕಾಲದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರಕಾರದಿಂದ ಅಗತ್ಯ ಅನುದಾನ ತರಲಾಗುವುದು ಎಂದು ಭರವಸೆ ನೀಡಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಸೇವೆಯನ್ನು ಕರ್ತವ್ಯ ಎಂದು ಪರಿಗಣಿಸಿ ರೋಗಿಗಳನ್ನು ಗಮನಿಸಬೇಕು. ಬಹುತೇಕ ಎಲ್ಲಾ ರೀತಿಯ ಉನ್ನತ ಚಿಕಿತ್ಸೆಗಳು ಕೊಡಗು ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಲಭ್ಯವಿದ್ದು, ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ದಂತ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥ ಡಾ.ಕೇದಾರನಾಥ್ ಎನ್.ಎಸ್ ಅವರು ಮಾತನಾಡಿ ವಿಸ್ತಾರವಾದ ನವೀನ ದಂತ ಚಿಕಿತ್ಸೆ ವಿಭಾಗ ಮತ್ತು ಓಪಿಜಿ ಎಕ್ಸರೇ ಮೆಷಿನ್ ಸೌಲಭ್ಯ ಸಾರ್ವಜನಿಕರಿಗೆ ಉತ್ತಮ…






